ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Ayodhya Archives » Dynamic Leader
October 23, 2024
Home Posts tagged Ayodhya
ರಾಜಕೀಯ

ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಪವನ್ ಕಲ್ಯಾಣ್ ವಿರುದ್ಧ ದೂರು ದಾಖಲಾಗಿದೆ!

ಅಮರಾವತಿ,
‘ತಿರುಪತಿ ದೇವಸ್ಥಾನದ ಲಡ್ಡುಗಳಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗಿದ್ದು, ಈ ಲಡ್ಡುಗಳನ್ನು ಅಯೋಧ್ಯೆಗೂ ಕಳುಹಿಸಿಕೊಡಲಾಗಿತ್ತು’ ಎಂದು ಆಂಧ್ರ ಉಪ ಮುಖ್ಯಮಂತ್ರಿ ಹಾಗೂ ತೆಲುಗು ನಟ ಪವನ್ ಕಲ್ಯಾಣ್ ಆರೋಪಿಸಿ ವಿವಾದ ಸೃಷ್ಟಿಸಿದ್ದರು.

ಇದರ ಬೆನ್ನಲ್ಲೇ, ಪ್ರಜಾ ಶಾಂತಿ ಪಕ್ಷದ ನಾಯಕ ಕೆ.ಎ.ಪಾಲ್ (K.A.Paul) ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಪವನ್ ಕಲ್ಯಾಣ್ ವಿರುದ್ಧ ದೂರು ದಾಖಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎ.ಪಾಲ್,

“ಪವನ್ ಕಲ್ಯಾಣ್ ಅವರ ಹೇಳಿಕೆ ಹುಚ್ಚುತನದಿಂದ ಕೂಡಿದೆ. ಪ್ರಾಣಿಗಳ ಕೊಬ್ಬನ್ನು ಬೆರೆಸಿದ ಒಂದು ಲಕ್ಷ ಲಡ್ಡನ್ನು ಅಯೋಧ್ಯೆಯ ರಾಮಮಂದಿರಕ್ಕೆ ಸಿದ್ಧಪಡಿಸಿ ಕಳುಹಿಸಿಕೊಡಲಾಗಿದೆ ಎಂದು ಆರೋಪಿಸಿದ್ದಾರೆ. ಅಯೋಧ್ಯೆ ರಾಮಮಂದಿರ ಕಾರ್ಯಕ್ರಮ ಜನವರಿಯಲ್ಲಿ ನಡೆದಿತ್ತು. ಆದರೆ ಜುಲೈನಲ್ಲೇ ಚಂದ್ರಬಾಬು ನಾಯ್ಡು ಲಡ್ಡುವಿನಲ್ಲಿ ಕಲಬೆರಕೆ ಮಾಡಿರುವ ವಿಷಯವನ್ನು ಬಹಿರಂಗಪಡಿಸಿದ್ದರು. ಹೀಗಿರುವಾಗ, ಜನವರಿಯಲ್ಲಿ ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ನಡೆದಿರುವುದು ಇವರಿಗೆ ಹೇಗೆ ಗೊತ್ತು? ಹಾಗಾಗಿ ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತಿರುವ ಪವನ್ ಕಲ್ಯಾಣ್ ವಿರುದ್ಧ ಕ್ರಮ ಕೈಗೊಂಡು ಬಂಧಿಸಬೇಕು. ಇದನ್ನು ಒತ್ತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೂ ಮನವಿ ಪತ್ರ ಕಳುಹಿಸಿದ್ದೇನೆ” ಎಂದು ಹೇಳಿದ್ದಾರೆ.  

ರಾಜಕೀಯ

ಬುಲ್ಡೋಜರ್‌ಗಳನ್ನು ಎಲ್ಲಿ ಬಳಸಬೇಕು ಮತ್ತು ಎಲ್ಲಿ ಬಳಸಬಾರದು ಎಂಬುದನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕಲಿಯಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

ಲಕ್ನೋ,
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಗೆದ್ದು ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಬುಲ್ಡೋಜರ್‌ ಮೂಲಕ ಕೆಡವುತ್ತಾರೆ. ಬಾಲರಾಮ, ದೇವಸ್ಥಾನದಿಂದ ಗುಡಾರಕ್ಕೆ ಹಿಂತಿರುಗುತ್ತಾರೆ.

ಬುಲ್ಡೋಜರ್‌ಗಳನ್ನು ಎಲ್ಲಿ ಬಳಸಬೇಕು ಮತ್ತು ಎಲ್ಲಿ ಬಳಸಬಾರದು ಎಂಬ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ತರಬೇತಿ ಪಡೆಯಬೇಕು. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ದೇಶದ ಪ್ರಗತಿಗೆ ಶ್ರಮಿಸುತ್ತಿದೆ. ಇನ್ನೊಂದೆಡೆ ಇಂಡಿಯಾ ಮೈತ್ರಿಕೂಟ ಗೊಂದಲಗಳನ್ನು ಸೃಷ್ಟಿಸುತ್ತಿದೆ. ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೋದಿ ಸರ್ಕಾರ ಹ್ಯಾಟ್ರಿಕ್ ಸಾಧನೆ ಮಾಡಲಿದೆ.” ಎಂದು ಹೇಳಿದರು.

ದೇಶ

ಶ್ರೀರಾಮ ನವಮಿ ದಿನವಾದ ಇಂದು (ಏಪ್ರಿಲ್ 17) ಅಯೋಧ್ಯೆಯ ರಾಮ ಮಂದಿರದಲ್ಲಿ ಸೂರ್ಯನ ಕಿರಣಗಳು ನೇರವಾಗಿ ರಾಮನ ಹಣೆಗೆ ತಿಲಕದಂತೆ ಅಪ್ಪಳಿಸಿದ್ದು ಭಕ್ತರನ್ನು ಪುಳಕಿತಗೊಳಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಕುಂಭಾಭಿಷೇಕ ಸಮಾರಂಭ ಕಳೆದ ಜನವರಿ 22 ರಂದು ನಡೆಯಿತು. ಸಮಾರಂಭ ಮುಗಿದ ಮರುದಿನದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ತದನಂತರ, ಹೊರ ರಾಜ್ಯಗಳಲ್ಲದೆ ಹೊರ ಡೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಶ್ರೀರಾಮನವಮಿಯ ಹಬ್ಬವಾದ ಇಂದು (ಏಪ್ರಿಲ್ 17), ಗರ್ಭಗುಡಿಯಲ್ಲಿರುವ ರಾಮನ ಪ್ರತಿಮೆಯ ಹಣೆಯ ಮೇಲೆ ಸೂರ್ಯನ ಬೆಳಕು ಬೀಳುವ ಅಪರೂಪದ ವಿದ್ಯಮಾನವು ಅಯೋಧ್ಯೆ ರಾಮಮಂದಿರದಲ್ಲಿ ಸರಿಯಾಗಿ ಮಧ್ಯಾಹ್ನ 12.16 ಕ್ಕೆ ನಡೆದಿದೆ. ಸೂರ್ಯನ ಕಿರಣಗಳು ನೇರವಾಗಿ ರಾಮನ ಹಣೆಗೆ ತಿಲಕದಂತೆ ಅಪ್ಪಳಿಸಿದ್ದು ಭಕ್ತರನ್ನು ಪುಳಕಿತಗೊಳಿಸಿದೆ.

ಈ ಘಟನೆ ಸುಮಾರು 5 ನಿಮಿಷಗಳ ಕಾಲ ನಡೆಯಿತು. ಈ ಅಪರೂಪದ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ರಾಮಮಂದಿರಕ್ಕೆ ಆಗಮಿಸಿದ್ದರು. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿ ರಾಮನ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದರು. ಸೂರ್ಯನ ಬೆಳಕು ನೇರವಾಗಿ ರಾಮನ ಹಣೆಯ ಮೇಲೆ ಬೀಳುವ ರೀತಿಯಲ್ಲಿ ರಾಮಮಂದಿರವನ್ನು ವಿನ್ಯಾಸ ಮಾಡಿರುವುದು ಗಮನಾರ್ಹ.

ಅಯೋಧ್ಯೆಯಲ್ಲಿ ಶ್ರೀರಾಮನ ಹಣೆಯ ಮೇಲೆ ಸೂರ್ಯನ ಬೆಳಕು ಬೀಳುವ ಈ ವೀಡಿಯೋವನ್ನು ಪ್ರಧಾನಿ ಮೋದಿಯವರು ತಮ್ಮ ಹಾರಾಟದ ಸಮಯದಲ್ಲಿ ‘ಟೇಪ್’ನಲ್ಲಿ ವೀಕ್ಷಿಸಿದರು. ಈ ಫೋಟೋವನ್ನು ಪ್ರಧಾನಿ ಮೋದಿ ಎಕ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ, “ಅಯೋಧ್ಯೆಯಲ್ಲಿ ರಾಮನ ಹಣೆಯ ಮೇಲೆ ಬೀಳುವ ಸೂರ್ಯನ ಬೆಳಕನ್ನು ನೋಡುವ ಭಾಗ್ಯ ನನಗೆ ಸಿಕ್ಕಿದೆ. ಲಕ್ಷಾಂತರ ಭಾರತೀಯರಂತೆ ನನಗೂ ಇದು ಅತ್ಯಂತ ಭಾವನಾತ್ಮಕ ಕ್ಷಣವಾಗಿದೆ. “ಈ ಸೂರ್ಯ ತಿಲಕವು ಅಭಿವೃದ್ಧಿ ಹೊಂದಿದ ಭಾರತದ ಪ್ರತಿಯೊಂದು ಸಂಕಲ್ಪವನ್ನು ತನ್ನ ದೈವಿಕ ಶಕ್ತಿಯಿಂದ ಬೆಳಗಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶ

ಮಧ್ಯಪ್ರದೇಶದ ಭೋಪಾಲ್ ಮೂಲದ ಮಹಿಳೆಯೊಬ್ಬರು ಮದುವೆಯಾದ ಐದೇ ತಿಂಗಳಲ್ಲಿ ಪತಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಈ ದಂಪತಿಗಳಿಗೆ ಮದುವೆಯಾಗಿತ್ತು. ಆ ವ್ಯಕ್ತಿ ಐಟಿ ವಲಯದಲ್ಲಿ ಕೆಲಸ ಮಾಡುತ್ತಿದ್ದು ಉತ್ತಮ ಆದಾಯ ಗಳಿಸುತ್ತಿದ್ದಾರೆ. ಹಾಗೆಯೇ ಮಹಿಳೆಯೂ ಕೆಲಸಕ್ಕೆ ಹೋಗುತ್ತಿದ್ದಾರೆ; ಅವರಿಗೂ  ಒಳ್ಳೆಯ ಸಂಬಳ ಇದೆ. ಮೊದಲು ಅವರು ತಮ್ಮ ಹನಿಮೂನ್‌ಗಾಗಿ ವಿದೇಶಕ್ಕೆ ಹೋಗಲು ಯೋಜಿಸಿದ್ದರು. ಒಳ್ಳೆಯ ಸಂಬಳ ಪಡೆಯುತ್ತಿದ್ದರಿಂದ ಇಬ್ಬರಿಗೂ ಹನಿಮೂನ್‌ಗೆ ವಿದೇಶಕ್ಕೆ ಹೋಗುವುದು ದೊಡ್ದ ಸಮಸ್ಯೆ ಆಗಿರಲಿಲ್ಲ.

ತಮ್ಮ ಹನಿಮೂನ್ ಯೋಜನೆ ಬಗ್ಗೆ ಮಾತನಾಡಿದ ಮಹಿಳೆ, “ನನ್ನ ಪತಿ ತನ್ನ ಹೆತ್ತವರನ್ನು ನೋಡಿಕೊಳ್ಳಬೇಕು ಎಂಬ ಕಾರಣಕ್ಕಾಗಿ ಹನಿಮೂನ್‌ಗೆ ವಿದೇಶಕ್ಕೆ ಹೋಗುವ ಆಲೋಚನೆಯನ್ನು ತಿರಸ್ಕರಿಸಿದರು. ದೇಶೀಯವಾಗಿ ಹನಿಮೂನ್‌ಗೆ ಹೋಗೋಣ” ಎಂದು ಹೇಳಿದರು. ಇದರ ನಂತರ, ದಂಪತಿಗಳು ಅಂತಿಮವಾಗಿ ಗೋವಾ ಮತ್ತು ದಕ್ಷಿಣ ಭಾರತಕ್ಕೆ ಭೇಟಿ ನೀಡಲು ನಿರ್ಧರಿಸಿದರು.

ಆದರೆ ಅವರ ಪತಿ, ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಹೋಗಬೇಕೆಂದು ಅವರ ತಾಯಿ ಬಯಸಿದ್ದರಿಂದ ಅಯೋಧ್ಯೆ ಮತ್ತು ವಾರಣಾಸಿಗೆ ವಿಮಾನ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದಾರೆ. ಆದರೆ ಅವರು ತನ್ನ ಹೆಂಡತಿಗೆ ಇದನ್ನು ಹೇಳದೇ ಪ್ರವಾಸಕ್ಕೆ ಒಂದು ದಿನ ಮೊದಲು ಮಾಹಿತಿ ನೀಡಿದ್ದಾರೆ. ಉದ್ಘಾಟನಾ ಸಮಾರಂಭಕ್ಕೂ ಮುನ್ನ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಬೇಕೆಂದು ತಾಯಿಯ ಇಚ್ಛೆಯಂತೆ ಪ್ರವಾಸವನ್ನು ಯೋಜಿಸಿದ್ದಾಗಿ ಪತಿ ವಿವರಿಸಿದ್ದಾರೆ.

ನಂಬಿ ಮೋಸಗೊಳಿಸಿದ್ದಾರೆ ಎಂದು ಆಘಾತಗೊಂಡ ಮಹಿಳೆ ಅದನ್ನು ಬಹಿರಂಗಪಡಿಸದೆ, ಅಯೋಧ್ಯೆಗೆ ಹೋಗಲು ಯಾವುದೇ ವಿರೋಧ ವ್ಯಕ್ತಪಡಿಸದೇ ಅಯೋಧ್ಯೆ ಮತ್ತು ವಾರಣಾಸಿಗೆ ಭೇಟಿ ನೀಡಿ ಬಂದಿದ್ದಾರೆ. ಹಿಂತಿರುಗಿ ಬಂದು ಸುಮಾರು 10 ದಿನಗಳ ನಂತರ, ಜನವರಿ 19 ರಂದು ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

“ಮದುವೆಗೆ ಮೊದಲಿನಿಂದಲೂ ಪತಿ ತನಗಿಂತ ಅವರ ಕುಟುಂಬ ಸದಸ್ಯರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ದಂಪತಿಗೆ ಈಗ ಭೋಪಾಲ್ ಕೌಟುಂಬಿಕ ನ್ಯಾಯಾಲಯವು ಆಲೋಚನೆ ಪಡೆಯಲು ಸಮಯ ನೀಡಿದೆ.

ಎರಡು ವಿಭಿನ್ನ ಜೀವನ ಪರಿಸರದಲ್ಲಿ ಬದುಕುತ್ತಿರುವ ಇಬ್ಬರು ವ್ಯಕ್ತಿಗಳು ಪತಿ-ಪತ್ನಿಯಾಗಿ ಒಟ್ಟಿಗೆ ಪ್ರಯಾಣಿಸಲು ಪ್ರಾರಂಭಿಸಿದಾಗ, ಅವರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಾರೆ. ಪತಿಯಾದವರು ತಮ್ಮ ಕುಟುಂಬದ ಆದ್ಯತೆ ಹಾಗೂ ಪತ್ನಿಯ ಮನಸ್ಸನ್ನು ಅರಿತು ಜೀವನ ನಡೆಸಬೇಕು. ಅದೇ ರೀತಿ ಪತ್ನಿಯಾದವಳು ತಮ್ಮ ಪ್ರಾಶಸ್ತ್ಯಗಳನ್ನು ಬಿಟ್ಟುಕೊಡದೆ ಅರ್ಥ ಮಾಡಿಕೊಂಡು ನಡೆಯಬೇಕು. ಕೌಟುಂಬಿಕ ಸಂಬಂಧ ಸುಗಮವಾಗಿ ಸಾಗಲು ಇಬ್ಬರ ಸಹಕಾರವೂ ಮುಖ್ಯವಾಗಿದೆ. ತಾನು ಯಾವ ಸ್ಥಳದಲ್ಲಿ ತನ್ನ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ವಿಫಲರಾಗುತ್ತೇವೆ ಎಂಬುದನ್ನು ಇಬ್ಬರೂ ವಾಸ್ತವಿಕ ನೆಲೆಗಟ್ಟಿನಿಂದ ಯೋಚಿಸಿ ಜೀವನವನ್ನು ಸಾಗಿಸಿದರೆ ಸಮಸ್ಯೆಗಳಿದ್ದರೂ ಈ ರೀತಿ ವಿಚ್ಛೇದನಕ್ಕೆ ಕಾರಣವಾಗುವುದಿಲ್ಲ.

ದೇಶ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ಸೂಚಿಸುವಂತಹ 6 ಸ್ಮರಣಾರ್ಥ ಅಂಚೆ ಚೀಟಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಿದರು.

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದ ಕುಂಭಾಭಿಷೇಕ ಇದೇ 22 ರಂದು ನಡೆಯಲಿದೆ. ಅಂದು ಶ್ರೀರಾಮ ಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು.  ಇದೇ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಉದ್ಘಾಟನೆಯನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಮುಖ ನಾಯಕರು ಮತ್ತು ಗಣ್ಯರನ್ನು ಆಹ್ವಾನಿಸಲಾಗುತ್ತಿದೆ.

ಈ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು. ಅವರು ರಾಮಮಂದಿರ, ಸೂರ್ಯ, ಸರಯೂ ನದಿ ಮತ್ತು ದೇವಾಲಯದ ಶಿಲ್ಪಗಳ ಚಿತ್ರಗಳೊಂದಿಗೆ ಅಂಚೆ ಚೀಟಿಗಳನ್ನು ಪರಿಚಯಿಸಿದರು. ಅವರು ಪ್ರಪಂಚದಾದ್ಯಂತದ ಭಗವಾನ್ ರಾಮನ ಅಂಚೆ ಚೀಟಿಗಳ ಆಲ್ಬಂ ಅನ್ನು ಸಹ ಪ್ರಕಟಿಸಿದರು.

ನಂತರ ಈ ಸಂಬಂಧ ಮಾತನಾಡಿದ ಪ್ರಧಾನಿ ಮೋದಿ, ‘ರಾಮ ಮಂದಿರದ ಶಂಕುಸ್ಥಾಪನೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಮತ್ತೊಂದು ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಇಂದು ನನಗೆ ಸಿಕ್ಕಿದೆ. ರಾಮ ಮಂದಿರವನ್ನು ಸೂಚಿಸುವ 6 ಸ್ಮರಣಾರ್ಥ ಅಂಚೆ ಚೀಟಿಗಳು ಮತ್ತು ಪ್ರಪಂಚದಾದ್ಯಂತದ ಭಗವಾನ್ ರಾಮನ ಅಂಚೆ ಚೀಟಿಗಳ ಆಲ್ಬಂ ಅನ್ನು ಬಿಡುಗಡೆ ಮಾಡಲಾಯಿತು. ದೇಶದ ಜನತೆಗೆ ಮತ್ತು ಜಗತ್ತಿನಾದ್ಯಂತ ಇರುವ ರಾಮನ ಭಕ್ತರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.

ದೇಶ

ಕೋಲ್ಕತ್ತಾ: ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ನಡುವೆ ಜನವರಿ 22 ರಂದು ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ ‘ಸಾಮರಸ್ಯಕ್ಕಾಗಿ ರ‍್ಯಾಲಿ’ಯನ್ನು ಮುನ್ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಘೋಷಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ರಾಜ್ಯ ಕಾರ್ಯಾಲಯದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಜನವರಿ 22 ರಂದು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ನಂತರ ಎಲ್ಲ ಧರ್ಮದವರೊಂದಿಗೆ ‘ಸಾಮರಸ್ಯ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತೇನೆ. ಇದಕ್ಕೂ ಬೇರೆ ಯಾವುದೇ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಆಡಳಿತಾರೂಢ ಟಿಎಂಸಿಯ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಾಳಿಘಾಟ್ ದೇವಸ್ಥಾನದಲ್ಲಿ ಕಾಳಿ ದೇವಿಗೆ ಪೂಜೆ ಸಲ್ಲಿಸಿದ ನಂತರ ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್‌ನಿಂದ ಮೆರವಣಿಗೆಯನ್ನು ಪ್ರಾರಂಭಿಸುತ್ತಾರೆ ಎಂದು ತಿಳಿದು ಬಂದಿದೆ. ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭ ನಡೆಯುವ ಅದೇ ದಿನ ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ‍್ಯಾಲಿ’ ಆಯೋಜಿಸಿರುವುದು ಗಮನಾರ್ಹ.

ದೇಶ

“ದಲಿತ ಸಮುದಾಯವನ್ನು ತುಳಿಯುತ್ತಿರುವ ಹಿಂದುತ್ವವಾದಿಗಳು; ಹಿಂದೂಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಶಂಕರಾಚಾರ್ಯರುಗಳು”

ಭಾರತವು ಭಾಷೆ, ಧರ್ಮ ಮತ್ತು ಜಾತಿಯ ಆಧಾರದ ಮೇಲೆ ವಿವಿಧ ವರ್ಗಗಳಿಂದ ಮೈಗೂಡಿಸಿಕೊಂಡಿವೆ. ಆದಾಗ್ಯೂ, ಮನು ಧರ್ಮ ಮತ್ತು ಸನಾತನವು ಒಟ್ಟಾರೆಯಾಗಿ ಸಮಾಜವನ್ನು ಹುಟ್ಟಿನ ಆಧಾರದ ಮೇಲೆ ನಾಲ್ಕು ವರ್ಣಗಳಾಗಿ ವಿಂಗಡಿಸುತ್ತದೆ.

ಬ್ರಾಹ್ಮಣರು (ಬ್ರಾಹ್ಮಣರು, ತನ್ನನ್ನು ತಾನೇ ಶ್ರೇಷ್ಠ ಎಂದು ಹೇಳಿಕೊಳ್ಳುವ ಸ್ವಘೋಷಿತ ಬಲಾಢ್ಯ ಸಮಾಜ), ಕ್ಷತ್ರಿಯರು (ಆಡಳಿತಗಾರರು – ರಾಜರು), ವೈಶ್ಯರು (ವ್ಯಾಪಾರಿಗಳು) ಮತ್ತು ಶೂದ್ರರು (ಕೃಷಿಕರು; ಬ್ರಾಹ್ಮಣರ ಪ್ರಕಾರ ಗುಲಾಮ ಸಮುದಾಯ)! ನಿರ್ದಿಷ್ಟವಾಗಿ ಹೇಳುವುದಾದರೆ, ಉತ್ತರದ ರಾಜ್ಯಗಳಲ್ಲಿ ವಾಸಿಸುವ ಸನಾತನ ಅನುಯಾಯಿಗಳು ದಕ್ಷಿಣದಲ್ಲಿ ವಾಸಿಸುವ ಎಲ್ಲರನ್ನೂ ಶೂದ್ರರು ಎಂದೇ ಪರಿಗಣಿಸುತ್ತಾರೆ.

ಅಂತಹ ಮನಸ್ಥಿತಿಯ, ಆಧುನಿಕ ಕಾಲದ ಪ್ರಕಾರ, ಬಿಜೆಪಿಯ ಹಿಂದುತ್ವ ರಾಜಕಾರಣವು ದಲಿತ (ದಮನಿತ ಸಮುದಾಯ), ಬ್ರಾಹ್ಮಣೇತರ ಮತ್ತು ಬ್ರಾಹ್ಮಣ ಎಂದು ಮೂರು ವರ್ಗಗಳಾಗಿ ವಿಭಜಿಸುವ ಇಂತಹ ಮನಸ್ಥಿತಿಯನ್ನು ಬೆಳಕಿಗೆ ತರುತ್ತದೆ.

ರಾಜಕೀಯ ಲಾಭಕ್ಕಾಗಿ ದ್ರೌಪದಿ ಮುರ್ಮು ಎಂಬ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಿದ ಬಿಜೆಪಿ, ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರನ್ನು ಕಡೆಗಣಿಸಿತು. ಭಾರತದ ಪ್ರತಮ ಮಹಿಳಾ ಪ್ರಜೆಯೆಂಬ ಸ್ಥಾನದಲ್ಲಿರುವ ಒಬ್ಬರನ್ನು, ಪಕ್ಕಕ್ಕೆ ಇರಿಸಿ ನಡೆಸಿದ ಉದ್ಘಾಟನಾ ಸಮಾರಂಭ ಭಾರೀ ವಿವಾದಕ್ಕೀಡಾಗಿತ್ತು.

ಹಿಂದೂ ರಾಜಕಾರಣವು ಪ್ರಥಮ ಪ್ರಜೆಯನ್ನು ಮಾತ್ರವಲ್ಲದೆ ಭಾರತದ ಜನಸಂಖ್ಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಒಂದು ಜನಾಂಗವನ್ನೇ ನಿರ್ಲಕ್ಷಿಸಿ ಅವಮಾನಿಸಿದ ಇತಿಹಾಸವನ್ನು ಹೊಂದಿದೆ!

ಭಾರತ, ಜಾತ್ಯತೀತ ರಾಷ್ಟ್ರ ಎಂಬ ಮುಸಲ್ಮಾನರ ನಂಬಿಕೆಯನ್ನು ಬುಡಮೇಲು ಮಾಡುವ ರಾಮಮಂದಿರ ನಿರ್ಮಾಣದ ಪ್ರಯತ್ನಗಳು ಈಗಾಗಲೇ ದೊಡ್ಡ ವಿವಾದಗಳನ್ನು ಸೃಷ್ಟಿಸಿವೆ. ಆದರೆ, ಅದ್ಯಾವುದನ್ನೂ ಲೆಕ್ಕಿಸದೆ ರಾಮಮಂದಿರದ ಉದ್ಘಾಟನೆಯತ್ತ ತನ್ನ ರಾಜಕೀಯವನ್ನು ವೇಗವಾಗಿ ಚಲಿಸುವ ಮೂಲಕ ಹಿಂದೂ ಧರ್ಮ ಗೆಲುವನ್ನು ಸಾಧಿಸಿದೆ.

ವಿವಾದಗಳಲ್ಲೇ ಹುಟ್ಟಿ ವಿವಾದಗಳಲ್ಲೇ ಬೆಳೆಯುತ್ತಿರುವ ಬಿಜೆಪಿ, ಪ್ರಸ್ತುತ ಘೋಷಣೆ ಮಾಡಿರುವ ರಾಮ ಮಂದಿರದ ಉದ್ಘಾಟನಾ ಸಮಾರಂಭವೂ ವಿವಾದವಿಲ್ಲದೆ ಅಲ್ಲ.

ರಾಮ ಮಂದಿರದ ಉದ್ಘಾಟನೆಯ ದಿನ (ಜನವರಿ 22) ಸಮೀಪಿಸುತ್ತಿದ್ದಂತೆ, ಅನೇಕ ರಾಜಕೀಯ ಮುಖಂಡರುಗಳು ಮತ್ತು ಸಾಮಾನ್ಯ ಜನರು ಇದನ್ನು ಧಾರ್ಮಿಕ ಪ್ರಾಬಲ್ಯ ಮತ್ತು ರಾಜಕೀಯ ಘಟನೆ ಎಂದು ಖಂಡಿಸಿ ಕಾರ್ಯಕ್ರಮಕ್ಕೆ ಹಾಜರಾಗಲು ನಿರಾಕರಿಸುತ್ತಿದ್ದಾರೆ. ಹಿಂದೂ ಧರ್ಮದ ಮೂಲವೆನ್ನಲಾದ ಶಂಕರಾಚಾರ್ಯರುಗಳು ಕೂಡ ಈ ಉತ್ಸವದಲ್ಲಿ ಪಾಲ್ಗೊಳ್ಳಲು ನಿರಾಕರಿಸಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

‘ರಾಮ ಮಂದಿರವನ್ನು ಬ್ರಾಹ್ಮಣೇತರ ಮೋದಿ’ ಉದ್ಘಾಟಿಸಲಿರುವುದೇ ಶಂಕರಾಚಾರ್ಯರುಗಳ ಕೋಪಕ್ಕೆ ಕಾರಣ ಎಂಬ  ಊಹಾಪೋಹಗಳೂ ಇವೆ.

ದ್ರೌಪದಿ ಮುರ್ಮು ಅವರು ಭಾರತದ ರಾಷ್ಟ್ರಪತಿಯೇ ಆದರೂ ಬುಡಕಟ್ಟಿಗೆ ಸೇರಿದವರಾಗಿರುವುದರಿಂದ ಅವರನ್ನು ಕಡೆಗಣಿಸಲಾಯಿತು. ಅಂತೆಯೇ ಹಿಂದೂ ವಿಚಾರಗಳನ್ನು ಸಂಪೂರ್ಣವಾಗಿ ಮೈಗೂಡಿಸಿಕೊಂಡಿರುವ ಮೋದಿಯವರು ಭಾರತದ ಪ್ರಧಾನಿಯೇ ಆಗಿದ್ದರೂ ಬ್ರಾಹ್ಮಣರಲ್ಲದ ಕಾರಣಕ್ಕೆ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗುತ್ತಿವೆ.

ಆದ್ದರಿಂದ ಒಬ್ಬ ವ್ಯಕ್ತಿ ಸೈದ್ಧಾಂತಿಕ ಮಟ್ಟದಲ್ಲಿ ಸನಾತನವನ್ನು ಎತ್ತಿ ಹಿಡಿದರೂ ಹುಟ್ಟಿನಿಂದ ಬೇರೆಯಾಗಿದ್ದರೆ ಆತನನ್ನು ತುಳಿಯುವುದೇ ತಮ್ಮ ರಾಜಕೀಯ ಸಿದ್ದಾಂತ ಎಂಬುದನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ಈ ವಿವಾದದ ಮೂಲಕ ಸ್ಪಷ್ಟವಾಗಿ ನಿರೂಪಿಸಿವೆ.

ರಾಜಕೀಯ

ಬೆಂಗಳೂರು: “ರಾಮನ ಮೇಲಿನ ಭಕ್ತಿಯನ್ನು ಬಿಜೆಪಿ ರಾಜಕೀಯ ಗೊಳಿಸಿ ಲಾಭ ಪಡೆಯಲು ಯತ್ನಿಸುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನರನ್ನು ಭಾವನಾತ್ಮಕವಾಗಿ ಪ್ರಚೋಧಿಸಿ ಮತ ಬ್ಯಾಂಕ್ ಭದ್ರಗೊಳಿಸುತ್ತಿದೆ. ಈ ಮೂಲಕ ಬಿಜೆಪಿ ಲೋಕಸಭಾ ಚುನಾವಣೆಗೆ ಸಿದ್ದವಾಗುತ್ತಿದೆ” ಎಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಅವರು ಮುಂದುವರಿಯುತ್ತಾ “ಧಾರ್ಮಿಕ ನಂಬಿಕೆಗಳನ್ನು ಬಳಸಿ ಮುಗ್ದ ಜನರನ್ನು ಭಾವನಾತ್ಮಕವಾಗಿ ಕೆರಳಿಸುವ ಯಾವುದೇ  ಪಕ್ಷಗಳು ರಾಜಕೀಯ ಮಾಡಿದರೂ ಅದು ಖಂಡನಾರ್ಹ. ಕಾಂಗ್ರೆಸ್ ಕೂಡ ಆರಂಭದಲ್ಲಿ ಬಿಜೆಪಿಯ ಹಾದಿಯಲ್ಲಿ ಸಾಗುವ ಸೂಚನೆ ನೀಡಿದ್ದರೂ ಈಗ ಅದರಿಂದ ದೂರ ನಿಲ್ಲುವುದಾಗಿ ಹೇಳಿದ್ದು ಸ್ವಾಗತಾರ್ಹ” ಎಂದು ಹೇಳಿದ್ದಾರೆ.

ರಾಮನ ಮೇಲಿನ ಭಕ್ತಿಗಿಂತ ರಾಜಕೀಯವೇ ಮೇರೆ ಮೀರುತ್ತಿದೆ. ರಾಮ ಮಂದಿರ ಪೂರ್ಣಗೊಳ್ಳುವ ಮುನ್ನವೇ ತರಾತುರಿಯ ಉದ್ಘಾಟನೆಗೆ ಬಿಜೆಪಿ ಮುಂದಾಗುತ್ತಿರುವುದು ಏತಕ್ಕೆ? ಲೋಕಸಭೆ ಚುನಾವಣೆ ಆಸನ್ನವಾಗಿರುವಾಗ, ವಿಷಯವಿಲ್ಲದೇ ತಡಕಾಡುವ ಬಿಜೆಪಿಗೆ ಇದರ ಅಗತ್ಯವಿತ್ತು. ರಾಮಮಂದಿರ ವಿವಾದದಿಂದಲೇ ಸಾಕಷ್ಟು ಫಸಲು ತೆಗೆದ ಪಕ್ಷದಿಂದ ಇನ್ನೇನು ತಾನೇ ನಿರೀಕ್ಷಿಸಬಹುದು?” ಎಂದು ಅವರು ಪ್ರಶ್ನಿಸಿದ್ದಾರೆ.

ರಾಜಕೀಯ

ನವದೆಹಲಿ: (ಪಿಟಿಐ) ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ “ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕ್ರಮ” ಎಂದಿರುವ ಕಾಂಗ್ರೆಸ್, ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಅಯೋಧ್ಯೆ ಮಂದಿರವನ್ನು ರಾಜಕೀಯ ಯೋಜನೆಯಾಗಿ ಬಳಸಿಕೊಳ್ಳುತ್ತಿದೆ ಎಂದು ಬುಧವಾರ ಹೇಳಿದೆ.

ಲೋಕಸಭೆ ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಅಯೋಧ್ಯೆಯ ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು.

ಜನವರಿ 22 ರಂದು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ದೇಶ

“ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು, ಆರೆಸ್ಸೆಸ್ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರನ್ನು ಆಹ್ವಾನಿಸಲಾಗಿದೆ. ಅದರೆ ರಾಷ್ಟ್ರಪತಿಯವರಿಗೆ ಆಹ್ವಾನವಿಲ್ಲ”

ಭಾರತೀಯ ಇತಿಹಾಸದ ಹೆಗ್ಗುರುತುಗಳಲ್ಲಿ ಒಂದು ಹಳೆಯ ಸಂಸತ್ತಿನ ಕಟ್ಟಡ. ಇಲ್ಲಿಯೇ ಭಾರತದ ಅನೇಕ ಪ್ರಸಿದ್ಧ ಮಸೂದೆಗಳನ್ನು ಅಂಗೀಕರಿಸಲಾಯಿತು. ಆದರೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಿರುವ ಸಂಸತ್ತಿನ ಬದಲಿಗೆ ಹೊಸ ಸಂಸತ್ತನ್ನು ನಿರ್ಮಿಸಿತು.

ಅದೂ ಕೂಡ ಕೊರೊನಾ ಅವಧಿಯಲ್ಲಿ ಜನರು ಸಂಕಷ್ಟದಲ್ಲಿದ್ದಾಗ 1200 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಸಂಸತ್ ಭವನದ ಕಾಮಗಾರಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲಾಗಿತ್ತು. ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದರು ಕೇಂದ್ರ ಸರ್ಕಾರ ಸೊಪ್ಪು ಹಾಕಲಿಲ್ಲ.

ತರುವಾಯ, ಹೊಸ ಸಂಸತ್ ಕಟ್ಟಡವನ್ನು ಕಳೆದ ಮೇ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು. ಆದರೆ, ಭಾರತ ಸರ್ಕಾರದ ಮುಖ್ಯಸ್ಥರಾಗಿರುವ ರಾಷ್ಟ್ರಪತಿಯನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಇದಕ್ಕೆ ಎಲ್ಲ ವಿರೋಧ ಪಕ್ಷಗಳು ಖಂಡನೆ ವ್ಯಕ್ತಪಡಿಸಿದವು. ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡಿಲ್ಲ ಎಂದು ಟೀಕಿಸಲಾಯಿತು.

ಈ ಹಿನ್ನಲೆಯಲ್ಲಿ, ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಪ್ರಮುಖ ರಾಜಕೀಯ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ರಾಷ್ಟ್ರಪತಿಯವರಿಗೆ ಆಹ್ವಾನ ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ. ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಿ ಆ ಜಾಗದಲ್ಲಿ ರಾಮಮಂದಿರವನ್ನು ನಿರ್ಮಿಸಲಾಗಿದೆ.

ಇದೇ ತಿಂಗಳು 22 ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು, ಆರೆಸ್ಸೆಸ್ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರನ್ನು ಆಹ್ವಾನಿಸಲಾಗಿದೆ. ಅದರೆ ರಾಷ್ಟ್ರಪತಿಯವರಿಗೆ ಆಹ್ವಾನ ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ.