ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Basangouda Patil Yatnal Archives » Dynamic Leader
October 23, 2024
Home Posts tagged Basangouda Patil Yatnal
ರಾಜ್ಯ

ವಿಜಯಪುರದ ಮುಸ್ಲಿಂ ಧಾರ್ಮಿಕ ಮುಖಂಡರಾದ ಸೈಯ್ಯದ್ ತನ್ವೀರ್ ಹಾಶ್ಮಿಯವರ ವಿರುದ್ಧದ ಬಸನಗೌಡ ಪಾಟೀಲ್ ಯತ್ನಾಳ್‌  ಹೇಳಿಗೆ ಖಂಡನೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 4 ರಂದು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಒಂದು ಚಿತ್ರವೊಂದನ್ನು ಇಟ್ಟುಕೊಂಡು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು  ‘ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ’ ಎಂದು ಆರೋಪಿಸಿ ಸಂಚಲನ ಮೂಡಿಸಿದರು.

ಇದನ್ನು ಕರ್ನಾಟಕ ಮುಸ್ಲಿಂ ಯೂನಿಟಿಯ (ರಾಜ್ಯ ಸಮಿತಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಖಾಸಿಂ ಸಾಬ್. ಎ.,  ತೀವ್ರವಾಗಿ ಖಂಡಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಸುನ್ನಿ ಜಮಾತ್‌ನ ಮುಖಂಡರು, ಹಿರಿಯ ಸಮಾಜ ಸೇವಕರು ಹಾಗೂ ಜಾತ್ಯತೀತ ಮನೋಭಾವದ ಧಾರ್ಮಿಕ ಪಂಡಿತರು ಆಗಿರುವ ತನ್ವೀರ್ ಪೀರಾ ರವರ ಕುರಿತು ಯತ್ನಾಳರ ತೇಜೋವದೆ ಹೇಳಿಕೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದ್ದಾರೆ.

“ಯತ್ನಾಳ್ ಅಪಪ್ರಚಾರ ಮಾಡುತ್ತಿರುವ ತನ್ವೀರ್ ಪೀರಾ ರವರ ಫೋಟೋಗಳಲ್ಲಿ ಒಂದು ಬಾಗ್ದಾದಿನ ಪ್ರಿನ್ಸ್‌ ಶೇಖ್‌ ಖಾಲಿದ್‌ ಅವರ ಜ್ಯೋತೆಗಿನ ಫೋಟೋ ಹಾಗೂ ಮತ್ತೊಂದು ಫೋಟೋದಲ್ಲಿ ಇರುವವರು ಇರಾಕ್‌ ಸರ್ಕಾರದ ಸೆಕ್ಯುರಿಟಿ ಆಫೀಸರ್‌ ಆಗಿರುವ ಸಜ್ಜಾದೇ ನಶೀನ್‌ ಹಜ್ರತ್‌ ಗೌಸ್‌ ಆಜಂ ರವರ ಜ್ಯೋತೆಗೆ ತನ್ವೀರ್ ಪೀರಾ ರವರು ಇರುವ ಹತ್ತು ವರ್ಷಗಳ ಹಿಂದಿನ ಫೋಟೋಗಳು” ಎಂದು ಸ್ಪಷ್ಟನೆ ನೀಡಿದ್ದಾರೆ.

“ಫೋಟೋಗಳನ್ನು ತಿರುಚಿ, ಬಳಸಿ ಐಸಿಸ್ ಬೆಂಬಲಿಗರು ಮತ್ತು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವ ತನ್ವೀರ್ ಪೀರಾರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಅಪಪ್ರಚಾರದ ಹಿಂದೆ ಮುಸ್ಲಿಂ ವಿರೋಧಿ ಭಾವನೆ, ಶಾಂತಿಕದಡುವ ಉದ್ದೇಶ ಯತ್ನಾಳ್ ಹೊಂದಿದ್ದಾರೆ” ಆರೋಪಿಸಿದ್ದಾರೆ. “ಈ ಕೂಡಲೇ ಕರ್ನಾಟಕ ಸರಕಾರ ಬಿಜೆಪಿಯ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಮುಸ್ಲಿಂ ಯುನಿಟಿ ಒತ್ತಾಯಿಸುತ್ತಿದೆ” ಎಂದು ಹೇಳಿದ್ದಾರೆ.

“ಹುಬ್ಬಳ್ಳಿಯ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮ್ ಸಮುದಾಯದ ರಕ್ಷಣೆ ನಮ್ಮ ಸರಕಾರ ಜವಾಬ್ದಾರಿಯಾಗಿರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಅವರ ಅಭಿವೃದ್ಧಿಗೆ ಹತ್ತು ಸಾವಿರ ಕೋಟಿಗಳನ್ನು ಮೀಸಲು ಇರಿಸುವುದಾಗಿ ಘೋಷಣೆ ಮಾಡಿದ್ದು ಸ್ವಾಗತಾರ್ಹ. ಅಲ್ಲದೆ, ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿಯನ್ನು ಮರು ಸ್ಥಾಪಿಸಬೇಕು. ಓಬಿಸಿಯೊಳಗಿನ ಮುಸ್ಲಿಮರ ಶೇ.4ರಷ್ಟು ಇರುವ ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕೆಂದು KMU ಸರಕಾರಕ್ಕೆ ಒತ್ತಾಯಿಸುತ್ತಿದೆ” ಎಂದು ಹೇಳಿದ್ದಾರೆ.