ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Bhagwant singh mann Archives » Dynamic Leader
October 23, 2024
Home Posts tagged Bhagwant singh mann
ರಾಜಕೀಯ

ಕೋಲ್ಕತ್ತಾ: ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ ತುರ್ತು ಕಾಯ್ದೆಯನ್ನು ವಿರೋಧಿಸುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬೆಂಬಲ ನೀಡಿದ್ದಾರೆ.

ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, “ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿತು. ಇದರ ವಿರುದ್ಧ ಕೇಂದ್ರ ಸರ್ಕಾರ ಹೊಸ ತುರ್ತು ಕಾಯ್ದೆಯನ್ನು ಜಾರಿಗೆ ತಂದಿದೆ. ಇದನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಸಂಸದರು ವಿರೋಧಿಸಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿ ಸರ್ಕಾರಕ್ಕೆ ಬೆಂಬಲವನ್ನು ಪಡೆಯಲು ಬಿಜೆಪಿ ಆಡಳಿತವಿಲ್ಲದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಕೇಜ್ರಿವಾಲ್ ಮುಂದಾಗಿದ್ದಾರೆ.

ಈ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಮುಖಂಡರು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ಆಗ ಇಬ್ಬರೂ ಕೇಂದ್ರ ಸರ್ಕಾರದ ತುರ್ತು ಕಾಯ್ದೆ ಬಗ್ಗೆ ಚರ್ಚೆ ನಡೆಸಿದರು.

ನಂತರ, ಮಮತಾ ಬ್ಯಾನರ್ಜಿ ಅವರು ಸುದ್ದಿಗಾರರಿಗೆ ಸಂದರ್ಶನ ನೀಡಿದರು:
“ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರದ ತುರ್ತು ಮಸೂದೆಯನ್ನು ತೃಣಮೂಲ ಕಾಂಗ್ರೆಸ್ ವಿರೋಧಿಸಲಿದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ಒಂದಾಗುವಂತೆ ಒತ್ತಾಯಿಸುತ್ತೇವೆ. ಕೇಂದ್ರ ಸರ್ಕಾರವು ಸಂವಿಧಾನವನ್ನು ಬದಲಾಯಿಸುತ್ತದೆಯೋ ಅಥವಾ ದೇಶದ ಹೆಸರನ್ನು ಬದಲಾಯಿಸುತ್ತದೆಯೋ ಎಂಬ ಭಯ ನಮಗಿದೆ” ಎಂದರು.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಖಲಿಸ್ತಾನ್ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸುತ್ತಿರುವ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖಂಡ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪೊಲೀಸರ ಈ ಕ್ರಮದಿಂದ ಅಮೆರಿಕ, ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ನೆಲೆಸಿರುವ ಖಲಿಸ್ತಾನ್ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ದಾಳಿ ಮಾಡಿದ ಖಲಿಸ್ತಾನದ ಬೆಂಬಲಿಗರು, ಭಾರತದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಖಲಿಸ್ತಾನದ ಧ್ವಜವನ್ನು ಹಾರಿಸುಲು ಮಾಡಿದ ದಾಂದಲೆಗಳನ್ನು ನಾವು ನೋಡಿದೆವು. ಅದೇ ರೀತಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಉಪ ರಾಯಭಾರಿ ಕಚೇರಿ ಮೇಲೆಯೂ ಖಲಿಸ್ತಾನ್ ಬೆಂಬಲಿಗರು ದಾಳಿ ನಡೆಸಿದ್ದಾರೆ. ಅಮೃತಪಾಲ್ ಸಿಂಗ್ ಅವರನ್ನು ಬೆಂಬಲಿಸಿ ಕೆಲವರು ಆಸ್ಟ್ರೇಲಿಯಾ ಸಂಸತ್ತಿನ ಮುಂದೆಯೂ ಪ್ರತಿಭಟನೆ ನಡೆಸಿದ್ದಾರೆ.

ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ

ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲು ಕಳೆದ ವಾರ ಪೊಲೀಸರು ಮುಂದಾದರು. ಆದರೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅಮೃತಪಾಲ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರಿನಿಂದ ಇಳಿದು ಬೈಕ್ ನಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಅಮೃತಪಾಲ್ ಅವರನ್ನು ಪೊಲೀಸರು ಬಂದಿಸಿದ್ದಾರೆ ಎಂದು  ಹೇಳುವ ಅವರ ಬೆಂಬಲಿಗರು, ಅಮೃತಪಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ‘ಪಂಜಾಬ್ ರಾಜ್ಯದ 80,000 ಪೊಲೀಸರನ್ನು ಧಿಕ್ಕರಿಸಿ ಪರಾರಿಯಾಗುವುದು ಹೇಗೆ ಎಂದು ಪ್ರಶ್ನಿಸಿದರು. ಹಾಗಿದ್ದಲ್ಲಿ, ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ’ ಎಂದ ನ್ಯಾಯಾಧೀಶರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ನ್ಯಾಯಾಲಯದ ಟೀಕೆ ಹಿನ್ನೆಲೆಯಲ್ಲಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಆರು ವಿಭಿನ್ನ ನೋಟಗಳಲ್ಲಿ ಅಮೃತಪಾಲ್ ಸಿಂಗ್ ಅವರ ಛಾಯಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತಂದ ಆರೋಪದ ಮೇಲೆ 154 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಪಾಲ್ ಮತ್ತು ಅವರ ಕೆಲವು ಬೆಂಬಲಿಗರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹಾಕಲಾಗಿದೆ. ಅಮೃತಪಾಲ್ ಅವರ ಕೆಲವು ಬಂಧಿತ ಬೆಂಬಲಿಗರನ್ನು ಭದ್ರತಾ ಕಾರಣಗಳಿಗಾಗಿ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿ ಇರಿಸಲಾಗಿದೆ. ಅಮೃತಪಾಲ್ ಸಿಂಗ್ ಅವರ ತವರು ಗ್ರಾಮ ಜಲ್ಲುಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಅಸ್ಸಾಂನ ದಿಬ್ರುಗಢ ಜೈಲ್

ಅಮ್ಜಲಂದರ್ ಪ್ರದೇಶದಲ್ಲಿ ಯಾರೂ ಗಮನಿಸದೆ ನಿಲ್ಲಿಸಿದ್ದ ಇಸುಜು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಿಂದ ಪಿಸ್ತೂಲ್, ಕತ್ತಿ ಮತ್ತು ವಾಕಿಟಾಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಖಲಿಸ್ತಾನ್ ಚಳವಳಿ ಆರಂಭಿಸಿ ಹಿಂಸಾಚಾರದಲ್ಲಿ ತೊಡಗಿದ್ದ ಭಿಂದ್ರನ್ ವಾಲೆ ಸೇನೆಯ ಕಾರ್ಯಾಚರಣೆಯಲ್ಲಿ ಹತರಾಗಿದ್ದರು. ಇಂತಹ ಪರಿಸ್ಥಿತಿಯ ಭೀತಿ ಈಗ ಪಂಜಾಬ್ ಜನರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪೊಲೀಸ್ ಹಾಗೂ ಅರೆಸೇನಾ ಪಡೆಗಳು ಪಥಸಂಚಲನ ನಡೆಸಿ ಜನರ ಆತಂಕವನ್ನು ದೂರ ಮಾಡಿದೆ.

‘ಅಕಲ್ ತಖ್ತ್’ ಎಂಬ ಸಿಖ್ ಸಂಘಟನೆಯು ಪಂಜಾಬ್‌ನಲ್ಲಿ ಭಯೋತ್ಪಾದಕ ಪರಿಸ್ಥಿತಿಯನ್ನು ಸೃಷ್ಟಿಸಬೇಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕೇಳಿಕೊಂಡಿದೆ. ಪಂಜಾಬ್ ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಚರ್ಚಿಸಲು ಅಕಲ್ ತಖ್ತ್ ಸಂಘಟನೆಯು ಇತರ ಸಿಖ್ ಸಂಘಟನೆಗಳನ್ನು ಆಹ್ವಾನಿಸಿದೆ. ಅದರಂತೆ ಮಾರ್ಚ್ 27 ರಂದು ಸಿಖ್ ಸಂಘಟನೆಗಳ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಫೆಬ್ರವರಿ 23 ರಂದು ಅಮೃತಪಾಲ್ ಸಿಂಗ್ ಅವರ ಬೆಂಬಲಿಗರು ಅಜ್ನಾಲಾ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ ನಂತರ, ಕೇಂದ್ರ ಸರ್ಕಾರವು ಪಂಜಾಬ್‌ನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ಪ್ರಾರಂಭಿಸಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ರಾಷ್ಟ್ರದ ವಿರುದ್ಧ ಯಾವುದೇ ಶಕ್ತಿಗೆ ವರ್ತಿಸಲು ನಾವು ಬಿಡುವುದಿಲ್ಲ ಎಂದು ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ. ಪ್ರತ್ಯೇಕತಾವಾದಿ ಚಟುವಟಿಕೆಗಳ ವಿರುದ್ಧ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಕೈಜೋಡಿಸಿವೆ. ಯಾವುದೇ ಹಿಂಸಾಚಾರವಿಲ್ಲದೆ ಶಾಂತಿ ನೆಲೆಸಬೇಕು ಎಂಬುದು ಪಂಜಾಬ್ ಜನತೆಯ ಆಶಯವಾಗಿದೆ.