ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
BJp Archives » Page 7 of 9 » Dynamic Leader
October 23, 2024
Home Posts tagged BJp (Page 7)
ದೇಶ ರಾಜಕೀಯ

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯುವಂತೆ ಬಿಜೆಪಿ ರಾಜ್ಯ ನಾಯಕರುಗಳಿಗೆ ಪಕ್ಷದ ನಾಯಕತ್ವ ಸೂಚನೆ ನೀಡಿದೆ ಎಂದು ವರದಿಯಾಗಿದೆ. ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳಲ್ಲಿ ಹಾಗೂ ಪಕ್ಷದ ಆಂತರಿಕ ಗೊಂದಲದಿಂದ ಕರ್ನಾಟಕದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸ್ಥಾನಗಳು ಕಡಿಮೆಯಾಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ.

ಇದನ್ನೂ ಓದಿ: ಉಪನಿಷತ್ತುಗಳು, ವೇದಗಳು ಮತ್ತು ಸಂಸ್ಕೃತ ಇಡೀ ಜಗತ್ತಿಗೆ ವಿಶ್ವಕೋಶಗಳಾಗಿವೆ; ಯಾವುದೇ ಆಕ್ಷೇಪವಿಲ್ಲದೆ ಅಧಿಕೃತ ಭಾಷೆಯನ್ನಾಗಿ ಹಿಂದಿಯನ್ನು ಒಪ್ಪಿಕೊಳ್ಳುವ ಅಗತ್ಯವನ್ನು ರೂಪಿಸಿಕೊಲ್ಲಿ! – ಅಮಿತ್ ಶಾ

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಭಾವಿ ಜಾತಿ ಮುಖಂಡರು, ಸಮುದಾಯ ಸಂಘಟನೆಗಳು, ಖ್ಯಾತ ಕ್ರೀಡಾ ಪಟುಗಳು, ಕೈಗಾರಿಕೋದ್ಯಮಿಗಳು, ಚಿತ್ರರಂಗದ ಗಣ್ಯರು ಮುಂತಾದವರ ಬೆಂಬಲ ಪಡೆಯಬೇಕು. ಇವರು ಬಹಿರಂಗವಾಗಿ ಬಿಜೆಪಿಗೆ ಬೆಂಬಲ ನೀಡದಿದ್ದರೂ ಬಿಜೆಪಿ ವಿರುದ್ಧ ಹೋಗದಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: ಭಾರತ ಮಾತೆ ಕೇವಲ ಭೂಮಿ ಅಲ್ಲ; ನಿರ್ದಿಷ್ಟ ಸಂಸ್ಕೃತಿ, ಇತಿಹಾಸ, ಧರ್ಮಕ್ಕೆ ಸಂಬಂಧಿಸಿಲ್ಲ ಭಾರತ ಪ್ರತಿಯೊಬ್ಬ ಭಾರತೀಯನ ಧ್ವನಿಯಾಗಿದೆ! – ರಾಹುಲ್ ಗಾಂಧಿ

ಇದರಿಂದ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ವಾತಾವರಣ ನಿರ್ಮಾಣವಾಗುವುದನ್ನು ತಪ್ಪಿಸಬಹುದು ಎಂದು ರಾಜ್ಯ ಅಧ್ಯಕ್ಷರುಗಳು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೇಶ

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಯು ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಬಿಜೆಪಿಯನ್ನು ಅಳಿಸಿಹಾಕಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, “ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯನ್ನು ಕಂಡು ಬಿಜೆಪಿ ಆತಂಕಕ್ಕೆ ಒಳಗಾಗಿದೆ. 2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯನ್ನು 2024ರಲ್ಲಿ ಕಿತ್ತೊಗೆಯಲಾಗುವುದು. ಬಿಜೆಪಿ ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ಇಡೀ ದೇಶದಿಂದಲೇ ಕಿತ್ತೊಗೆಯಲಾಗುವುದು. ಹೀಗಾಗಿ ಸಂವಿಧಾನವನ್ನು ಹಾಳುಗೆಡವಲು ಪ್ರಯತ್ನಿಸಿದವರು ಹೆದರುತ್ತಿದ್ದಾರೆ.

ಆರ್‌ಎಸ್‌ಎಸ್‌ ಹರಡಿದ ದ್ವೇಷ ಮತ್ತು ಬಿಜೆಪಿಯ ವೋಟ್ ಬ್ಯಾಂಕ್ ರಾಜಕಾರಣವೇ ಮಣಿಪುರದ ಇಂದಿನ ಪರಿಸ್ಥಿತಿಗೆ ಕಾರಣ. ಗುಪ್ತಚರ ಸಂಸ್ಥೆಗಳಿಗೆ ಇದೆಲ್ಲ ತಿಳಿಯದೇ ಇರಲು ಸಾಧ್ಯವಿಲ್ಲ. ಅಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ತಿಳಿದಿರಬೇಕು.

ಸರ್ಕಾರ ಇದನ್ನೆಲ್ಲ ಸುಮ್ಮನೆ ನೋಡುತ್ತಿರುವುದಾದರೆ, ಅವರು ಅಧಿಕಾರದಲ್ಲಿ ಮುಂದುವರಿಯಬಾರದು. ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಯ ಬಗ್ಗೆ ಮಾತನಾಡುವ ಮೊದಲು, ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿದ ಬಗ್ಗೆ ಬಿಜೆಪಿ ಮಾತನಾಡಬೇಕು” ಎಂದು ಹೇಳಿದ್ದಾರೆ.

ರಾಜಕೀಯ

ಅನ್ನ ಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರ ಹಾಗೂ ರಾಜ್ಯಕ್ಕೆ ಅಕ್ಕಿ ಕೊಡಿಸುವಲ್ಲಿ ವಿಫಲರಾದ ಕರ್ನಾಟಕ ಬಿಜೆಪಿ ಸಂಸದರ ವಿರುದ್ಧ, ಬಿಜೆಪಿ ಕಚೇರಿ ಮುಂದೆ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ಅವರ ನೇತೃತ್ವದಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.

ಸ್ಯಾಂಕಿ ಟ್ಯಾಂಕ್, ವರನಟ ಡಾ.ರಾಜ್‌ಕುಮಾರ್ ಪುತ್ಥಳಿಯಿಂದ ಬಿಜೆಪಿ ಕಾರ್ಯಾಲಯದವರಗೆ ನಡಿಗೆ ಮೂಲಕ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ನೂರಾರು ಕರ್ನಾಟಕ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

“ಹಸಿವು ಮುಕ್ತ ಕರ್ನಾಟಕಕ್ಕೆ ನಮ್ಮ ಸರ್ಕಾರದ ‘ಅನ್ನ ಭಾಗ್ಯ’ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ. 25 ಬಿಜೆಪಿ ಸಂಸದರು ರಾಜ್ಯಕ್ಕೆ ಅಕ್ಕಿ ಕೊಡಿಸುವ ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿಗೆ ಮತ ನೀಡದಿದ್ದರೆ, ಕೇಂದ್ರದಿಂದ ರಾಜ್ಯಕ್ಕೆ ಬರುವ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಚುನಾವಣಾ ಪೂರ್ವದಲ್ಲಿ ಜಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದರು. ಈಗ ಅಕ್ಕಿ ಕೊಡುತ್ತಿಲ್ಲ. ರಾಜ್ಯಕ್ಕೆ ಕೇಂದ್ರ ಮಲತಾಯಿ ಧೋರಣೆ ಮಾಡುತ್ತಿದೆ” ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನಾ ವೇಳೆ ಬಿಜೆಪಿ ಕೇಂದ್ರ ಕಛೇರಿಗೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು. ಬ್ಯಾರಿಕೇಡ್ ಮೇಲೆ ಏರಿ ಪ್ರತಿಭಟಿಸಿದ ಮೊಹಮ್ಮದ್ ನಲಪಾಡ್ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ.  

ದೇಶ

ಮಧ್ಯಪ್ರದೇಶದ ಆದಿವಾಸಿ ಯುವಕನ ಮೇಲೆ ಮುತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.

ಮಧ್ಯಪ್ರದೇಶ ಸಿಧಿ ಜಿಲ್ಲೆಗೆ ಸೇರಿದ ಅದಿವಾಸಿ ಯುವಕನ ಮೇಲೆ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ, ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆಯೊಂದು ನಡೆದಿತ್ತು. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಈ ವಿಚಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಗಮನಕ್ಕೆ ಬಂದಿದ್ದು, ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಇಂದು ಮುಂಜಾನೆ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾವನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.     

ದೇಶ ರಾಜಕೀಯ

ಬಿಜೆಪಿಯ ಪ್ರಮುಖ ನಾಯಕರ ಜೊತೆ ನಿನ್ನೆ ಮಧ್ಯರಾತ್ರಿಯವರೆಗೂ ಸಮಾಲೋಚನೆ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಆಗಿರುವ ತಪ್ಪುಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೇವಲ ಎಂಟು ತಿಂಗಳೇ ಬಾಕಿ ಉಳಿದಿರುವ ಹಿನ್ನಲೆಯಲ್ಲಿ, ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಕಾರ್ಯವನ್ನು ಬಿರುಸಿನಿಂದ ಆರಂಭಿಸಿವೆ. ಈ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು, ಕಳೆದ 23 ರಂದು ಬಿಹಾರದ ಪಾಟ್ನಾದಲ್ಲಿ ವಿಪಕ್ಷ ನಾಯಕರು ಸಭೆ ನಡೆಸಿದ್ದಾರೆ.

ಈ ಹಿನ್ನಲೆಯಲ್ಲಿ ನವದೆಹಲಿಯಲ್ಲಿರುವ ಪ್ರಧಾನಿ ಮೋದಿ ನಿವಾಸದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಜಂಟಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಬನ್ಸಾಲ್, ಅರುಣ್ ಸಿಂಗ್ ಮತ್ತಿತರರೊಂದಿಗೆ ಮೋದಿ ಸಮಾಲೋಚನೆ ನಡೆಸಿದ್ದಾರೆ. ಸಭೆ ರಾತ್ರಿ 10 ಗಂಟೆಯ ಸುಮಾರಿಗೆ ಪ್ರಾರಂಭವಾಗಿ, ಮುಂಜಾನೆ 3.30 ರವರೆಗೆ ಮುಂದುವರೆದಿದೆ.

ಸಭೆಯ ಪ್ರಾರಂಭದಲ್ಲೇ, ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆಯ ಬಗ್ಗೆ ಮೋದಿ ವಿಚಾರಿಸಿದ್ದಾರೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಮೋದಿ, ‘ವಿರೋಧ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಕ್ಕೂಟ ರಚನೆ ಮಾಡಲು ಸಾಧ್ಯವಿಲ್ಲ. ಇದೇ ವೇಳೆ ವಿರೋಧ ಪಕ್ಷಗಳ ತಂತ್ರಗಾರಿಕೆಯನ್ನು ಸೋಲಿಸಲು ಪ್ರತಿ ರಾಜ್ಯದಲ್ಲೂ ಬಲಿಷ್ಠವಾದ ಮೈತ್ರಿಕೂಟ ರಚನೆಯಾಗಬೇಕು. ಪ್ರತಿಯೊಂದು ಕ್ಷೇತ್ರವೂ ಮುಖ್ಯ ಎಂಬ ಕಲ್ಪನೆಯೊಂದಿಗೆ ಯೋಜನೆ ಮಾಡಬೇಕು.

10 ವರ್ಷಗಳಿಂದ ಅಧಿಕಾರ ಇಲ್ಲದ ಕಾರಣ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಮಾತ್ರವಲ್ಲದೆ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮಾಧ್ಯಮಗಳು ಮತ್ತು ಉದ್ಯಮಿಗಳು ಸೇರಿದಂತೆ ರಾಜಕೀಯ ಹೊರತಾಗಿಯೂ ನಾವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗಿರುತ್ತದೆ.

ಇವೆಲ್ಲಕ್ಕೂ ಸಿದ್ಧರಾಗಿರಬೇಕು. ಕಾಂಗ್ರೆಸ್ ಮತ್ತು ರಾಜ್ಯ ಪಕ್ಷಗಳ ಭ್ರಷ್ಟಾಚಾರ ಹಾಗೂ ಉತ್ತರಾಧಿಕಾರ ರಾಜಕಾರಣದ ಬಗ್ಗೆ ಜನರಲ್ಲಿ ಪ್ರಚಾರ ಮಾಡಬೇಕು. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರ ರಚನೆಯಾಗದಿದ್ದರೂ ಕನಿಷ್ಠ 90 ಸ್ಥಾನ ಗೆಲ್ಲುತ್ತೇವೆ ಎಂದು ನೀವೆಲ್ಲರೂ ಹೇಳಿದ್ದೀರಿ. ಇದಕ್ಕಾಗಿ ನೀವು ತೀವ್ರ ವಿರೋಧದ ನಡುವೆಯೂ ಅನೇಕ ನಿರ್ಧಾರಗಳನ್ನು ತೆಗೆದುಕೊಂಡಿದ್ದೀರಿ.

ಆದರೆ ಗೆದ್ದಿದ್ದು ಬರೀ 66 ಕ್ಷೇತ್ರಗಳಲ್ಲಿ ಮಾತ್ರ. ಕರ್ನಾಟಕದಲ್ಲಿ ಆದ ತಪ್ಪುಗಳು, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ಮರುಕಳಿಸಬಾರದು’ ಎಂದು ಮೋದಿ ಕಟ್ಟುನಿಟ್ಟಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಮುಂದೆ, ಪಕ್ಷದ ಕೆಲಸಕ್ಕಾಗಿ ಕೆಲವು ಕೇಂದ್ರ ಮಂತ್ರಿಗಳನ್ನು ವಿಶೇಷವಾಗಿ ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಗಳಾಗಿ ನೇಮಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಾಜ್ಯಪಾಲರಾಗಿರುವ ಕೆಲವರು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ. ಮತ್ತೆ ಅವರನ್ನು ಪಕ್ಷದ ಕೆಲಸಕ್ಕೆ ಕರೆತರಬಹುದೇ; ಕೆಲವು ಹಿರಿಯ ನಾಯಕರನ್ನು ರಾಜ್ಯಪಾಲರನ್ನಾಗಿ ನೇಮಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ಏಕರೂಪ ನಾಗರಿಕ ನೀತಿಸಂಹಿತೆ ತರುವುದರಿಂದ ರಾಜಕೀಯ ಪರಿಣಾಮ ಏನಾಗಬಹುದು; ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದಂತೆ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳ ಬಗ್ಗೆಯೂ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು ಎಂದು ಹೇಳಲಾಗುತ್ತಿದೆ. Plan For 2024 Polls, Reshuffle Discussed At Late-Night BJP Meet

ರಾಜಕೀಯ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ಎಲ್ಲಾ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಡೆಯಿತು. ಮೇ 13 ರಂದು ಮತ ಎಣಿಕೆ ನಡೆಯಿತು. ಇದರಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಸೋಲಿಸಿ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗಳಿಸಿತು.

ಈ ಗೆಲುವಿನೊಂದಿಗೆ ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಸಂಪೂರ್ಣವಾಗಿ ಮುಚ್ಚಿದೆ ಎಂದು ರಾಜಕೀಯ ವಿಮರ್ಶಕರು ಅಭಿಪ್ರಾಯಪಡುತ್ತಿದ್ದಾರೆ. ಮೇಲಾಗಿ ಕರ್ನಾಟಕದಲ್ಲಿ ಬಿಜೆಪಿಯ ಸೋಲು ಇತರ ರಾಜ್ಯಗಳಲ್ಲೂ ಪ್ರತಿಧ್ವನಿಸಲಿದೆ ಎಂದು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಹೇಳಿದ್ದವು.

ಈ ಹಿನ್ನಲೆಯಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಳಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಇತ್ತೀಚಿನ ಸಮೀಕ್ಷೆಯ ಫಲಿತಾಂಶಗಳು ಹೇಳುತ್ತಿವೆ. ಅಲ್ಲಿ ನಡೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಾನಗಳಲ್ಲಿ 114 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು.

ಆದರೆ ಕಳೆದ ವರ್ಷ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಪರಿಣಾಮವಾಗಿ ಅಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಅಧಿಕಾರಕ್ಕೆ ಬಂತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನವೇ ಹೆಚ್ಚಾಗಿತ್ತು.

ಸದ್ಯದಲ್ಲೇ ಅಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ನವಭಾರತ್ ಸಮಾಚಾರ್ (Navbharat Samachar) ಎಂಬ ಸುದ್ದಿ ಸಂಸ್ಥೆ, ಮಧ್ಯಪ್ರದೇಶದಲ್ಲಿ ಮುಂದಿನ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬುದರ ಕುರಿತು ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ. ಆ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 55 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಮತ್ತು ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

ಈ ಹಿಂದಿನ ಸಮೀಕ್ಷೆಗಳು ಕೂಡ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದವು ಎಂಬುದು ಗನಾರ್ಹ.

ದೇಶ ರಾಜಕೀಯ

ಮುಂದಿನ ವರ್ಷ ನಡೆಯಲಿರುವ ಸಂಸತ್ ಚುನಾವಣೆ ಎದುರಿಸಲು ಬಿಜೆಪಿ ಸಜ್ಜಾಗಿದೆ. ಕಳೆದ ಸೋಮವಾರ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಪಕ್ಷಗಳೊಂದಿಗೆ ಮೈತ್ರಿ ರಚನೆ ಕುರಿತು ಚರ್ಚಿಸಿದರು. ಅದನ್ನು ಆಧರಿಸಿ ಸರ್ಕಾರ ಹಾಗೂ ಪಕ್ಷದಲ್ಲಿ ಒಂದಷ್ಟು ಬದಲಾವಣೆ ತರಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮುಂದಿನ ವಾರ ಗುರುವಾರದೊಳಗೆ ಈ ಬಗ್ಗೆ ಕೆಲವು ಘೋಷಣೆಗಳನ್ನು ಮಾಡಲು ಅವರು ನಿರ್ಧರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಬಿ.ಜೆ.ಪಿ ಆಡಳಿತಾರೂಢ ರಾಜ್ಯಗಳ ಮುಖ್ಯಮಂತ್ರಿಗಳನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಅವರೊಂದಿಗೆ ಸಂಸತ್ ಚುನಾವಣೆ ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಮೋದಿ ವಿಸ್ತೃತ ಸಮಾಲೋಚನೆ ನಡೆಸಲಿದ್ದಾರೆ.

ಸಮಾಲೋಚನೆ ಸಭೆ ನಾಳೆಯ ಮರುದಿನ (ಭಾನುವಾರ) ಆರಂಭವಾಗಲಿದೆ. ಪ್ರತಿ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲು ಯೋಜಿಸಲಾಗಿದೆ. ಹಾಗಾಗಿ ಮೇ 12, ಸೋಮವಾರದವರೆಗೆ ಬಿ.ಜೆ.ಪಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬಿಜೆಪಿ ರಹಸ್ಯ ಸಮಾಲೋಚನಾ ಸಭೆ: ಅರ್‌ಎಸ್‌ಎಸ್ ಪ್ರಮುಖರು ಬಾಗಿ!

5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಸಂಸತ್ ಚುನಾವಣೆಗೆ ಹೊಸ ತಂತ್ರಗಾರಿಕೆಯ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಬಿ.ಜೆ.ಪಿ. ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ .

ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಅಲ್ಲದೆ, 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳು ಕೈಗೊಳ್ಳಬಹುದಾದ ಕ್ರಮಗಳಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ರಾಜಕೀಯ

ನ್ಯೂಯಾರ್ಕ್: ಬಿಜೆಪಿಯನ್ನು ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಮೇಲೆ ಆರೋಪ ಮಾಡುವುದನ್ನೇ ರೂಡಿಸಿಕೊಂಡಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಅಮೆರಿಕಕ್ಕೆ ತೆರಳಿರುವ ಕಾಂಗ್ರೆಸ್‌ನ ಮಾಜಿ ನಾಯಕ ರಾಹುಲ್‌ ಗಾಂಧಿ, ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುವಾಗ, “ನೀವು ಬಿಜೆಪಿಯನ್ನು ಏನೇ ಕೇಳಿದರೂ ಅದಕ್ಕೆ ಉತ್ತರ ಕೊಡದೆ, ಅದರಿಂದ ಹಾದುಹೋಗುವುದನ್ನು ಕಾಣಬಹುದು. ಒಡಿಶಾ ರೈಲು ಅಪಘಾತದ ಬಗ್ಗೆ ಬಿಜೆಪಿಯವರನ್ನು ಪ್ರಶ್ನೆ ಮಾಡಿ; 50 ವರ್ಷಗಳ ಹಿಂದಿನ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಾರೆ. ಬಿಜೆಪಿಯವರ ಬಳಿ ಇರುವ ತಕ್ಷಣದ ಉತ್ತರ ಏನು ಗೊತ್ತೆ? ಇತಿಹಾಸವನ್ನು ನೋಡಿ ಎಂಬುದೇ. ಬಿಜೆಪಿ ಮತ್ತು ಆರೆಸ್ಸೆಸ್ ಎರಡೂ ಇತರರನ್ನು ದೂಷಿಸುವ ಪ್ರವೃತ್ತಿಯನ್ನು ಹೊಂದಿದೆ.

ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ರೈಲು ಅಪಘಾತಗಳು ಸಂಭವಿಸಿದರೆ ತಕ್ಷಣವೇ ಸಚಿವರು ರಾಜೀನಾಮೆ ನೀಡುತ್ತಿದ್ದರು. ಕೇಂದ್ರ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದು ಸರಿಯಾದ ಕ್ರಮವಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ರೈಲು ಅಪಘಾತಗಳು ನಡೆದಿವೆ; ಬ್ರಿಟಿಷರ ಆಡಳಿತವೇ ಅದಕ್ಕೆ ಕಾರಣ ಎಂದು ಹೇಳಿ, ಕಾಂಗ್ರೆಸ್ ಸರಕಾರ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಲಿಲ್ಲ ಎಂಬುದನ್ನೂ ನೆನಪಿನಲ್ಲಿಟ್ಟುಕೊಳ್ಳಬೇಕು. ಬಿಜೆಪಿ, ಆರೆಸ್ಸೆಸ್, ಪ್ರಧಾನಿ ಮೋದಿ ಯಾರೇ ಆಗಲಿ ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡುವುದಿಲ್ಲ. ಅವರು ಹಿಂದಿನದನ್ನು ದೂಷಿಸುವುದನ್ನೇ ವಾಡಿಕೆಯಾಗಿ ಮಾಡಿಕೊಂಡಿದ್ದಾರೆ.

ಇತರರನ್ನು ದೂಷಿಸಿ ತಪ್ಪಿಸಿಕೊಳ್ಳುವುದನ್ನೇ ಅಭ್ಯಾಸ ಮಾಡಿಕೊಂಡಿದ್ದಾರೆ. ಆಧುನಿಕ ಭಾರತದ ನಿರ್ಮಾಣದಲ್ಲಿ ಅನಿವಾಸಿ ಭಾರತೀಯರ (NRI) ಪಾತ್ರ ಪ್ರಮುಖವಾದದ್ದು. ಮಹಾತ್ಮಾ ಗಾಂಧಿಯವರು ಕೂಡ ಅನಿವಾಸಿ ಭಾರತೀಯರಾಗಿದ್ದರು. ನೆಹರೂ, ಅಂಬೇಡ್ಕರ್, ವಲ್ಲಭ ಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್ ಎಲ್ಲರೂ ಅನಿವಾಸಿ ಭಾರತೀಯರೇ. ವಿಭಿನ್ನ ಸಿದ್ಧಾಂತಗಳನ್ನು ಹೊಂದಿದ್ದರೂ ಸಹ ಅವರು ಒಟ್ಟಿಗೆ ಕೆಲಸ ಮಾಡಿದರು. ಇದನ್ನೇ ನಾನು ಭಾರತೀಯ ಸಮಾಜದಿಂದ ನಿರೀಕ್ಷಿಸುತ್ತೇನೆ” ಎಂದರು.

ದೇಶ ರಾಜಕೀಯ

ಜೈಪುರ: ‘ಬಡವರನ್ನು ವಂಚಿಸುವುದು ಕಾಂಗ್ರೆಸ್ ತಂತ್ರ; ಕಳೆದ 50 ವರ್ಷಗಳಿಂದಲೂ ಅದನ್ನೇ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಆಯೋಜಿಸಿದ್ದ ಬೃಹತ್ ರ‍್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿಯ 9 ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಇಂದು (ಮೇ 31) ಪ್ರಧಾನಿ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ಮೆಗಾ ರ‍್ಯಾಲಿಯನ್ನು ಉದ್ಘಾಟಿಸಿದರು. ಇದೇ ರೀತಿಯ ರ‍್ಯಾಲಿಗಳನ್ನು ದೇಶಾದ್ಯಂತ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಒಂದು ತಿಂಗಳ ಕಾಲ ಈ ರ‍್ಯಾಲಿ ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವರು, ಸಂಸದರು, ಬಿಜೆಪಿ ನಾಯಕರು ಭಾಗವಹಿಸಿ, ತಮ್ಮ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಿದ್ದಾರೆ.

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ರಾಜಸ್ಥಾನದ ಅಜ್ಮೀರ್‌ಗೆ ಬರುವ ಮೊದಲು, ಬ್ರಹ್ಮ ದೇವಾಲಯ ಪುಷ್ಕರಕ್ಕೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತು. ಬ್ರಹ್ಮದೇವನ ಆಶೀರ್ವಾದದಿಂದ, ಭಾರತದಲ್ಲಿ ಹೊಸ ಸೃಷ್ಟಿಗಳ ಯುಗ ನಡೆಯುತ್ತಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ 9 ವರ್ಷಗಳ ಆಡಳಿತ ಪೂರ್ಣಗೊಂಡಿದೆ. ಈ 9 ವರ್ಷಗಳ ಸರ್ಕಾರದ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ತರಲಾಗಿದೆ.

ಬ್ರಹ್ಮ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ

2014ರ ಮೊದಲು ಪರಿಸ್ಥಿತಿ ಹೇಗಿತ್ತು? ಆ ಸಂದರ್ಭದಲ್ಲಿ ಭಯೋತ್ಪಾದಕ ದಾಳಿಗಳು ನಡೆದವು. ಗಡಿಯಲ್ಲಿ ರಸ್ತೆ ನಿರ್ಮಿಸಲು ಕಾಂಗ್ರೆಸ್ ಸರಕಾರ ಹೆದರುತಿತ್ತು. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಾಣುತಿತ್ತು. ಕಾಂಗ್ರೆಸ್ ಸರ್ಕಾರ ರಿಮೋಟ್ ಕಂಟ್ರೋಲ್ ಮೂಲಕ ಕೆಲಸ ಮಾಡುತಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಕೇವಲ 60% ಲಸಿಕೆಗಳನ್ನು ಮಾತ್ರ ಜನರಿಗೆ ನೀಡಲಾಗುತ್ತಿತ್ತು. 100ರಲ್ಲಿ 40 ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಜೀವ ಉಳಿಸುವ ಲಸಿಕೆಗಳನ್ನು ನೀಡಲು ಅಸಮರ್ಥರಾಗಿದ್ದರು. ಪ್ರಸ್ತುತ, 100% ಲಸಿಕೆಗಳನ್ನು ಎಲ್ಲರಿಗೂ ನೀಡಲಾಗುತ್ತಿದೆ.

ಈಗ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ. ದೇಶದಲ್ಲಿ 100% ಲಸಿಕೆಗಳ ವ್ಯಾಪ್ತಿಯನ್ನು ಸಾಧಿಸಲು ಇನ್ನೂ 40 ವರ್ಷಗಳನ್ನು ತೆಗೆದುಕೊಳ್ಳುತಿತ್ತು. ಜೀವ ಉಳಿಸುವ ಲಸಿಕೆಗಳು ಲಭ್ಯವಿಲ್ಲದಿದ್ದಾಗ, ಸತ್ತ ಬಡ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆಯನ್ನು ನೀವು ಊಹಿಸಬಲ್ಲಿರಾ? ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಸುಳ್ಳು ಭರವಸೆ ನೀಡುವುದು ಹೊಸದೇನಲ್ಲ. ಇದನ್ನು 50 ವರ್ಷಗಳ ಹಿಂದಿನಿಂದಲೂ ಮಾಡುತ್ತಿದೆ.

ಇದು ಬಡವರಿಗೆ ಆ ಪಕ್ಷ ಮಾಡುವ ದೊಡ್ಡ ದ್ರೋಹವಾಗಿದೆ. ಬಡವರಿಗೆ ಮೋಸ ಮಾಡುವುದೇ ಕಾಂಗ್ರೆಸ್ ತಂತ್ರ. ಇದರಿಂದ ರಾಜಸ್ಥಾನದ ಜನರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಒಂದು ಹುದ್ದೆ, ಒಂದು ಪಿಂಚಣಿ ಹೆಸರಿನಲ್ಲಿ, ಮಾಜಿ ಸೈನಿಕರಿಗೆ ದ್ರೋಹ ಬಗೆದಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾಜಿ ಸೈನಿಕರಿಗೆ ಬಾಕಿ ಹಣ ನೀಡಿ, ಅವರ ಅಭಿವೃದ್ಧಿಗೆ ನೆರವಾದರು’ ಎಂದು ಪ್ರಧಾನಿ ಮೋದಿ ಮಾತನಾಡಿದರು.

ರಾಜಕೀಯ

ಜೂನ್ ಮೊದಲ ವಾರದಲ್ಲಿ ನವದೆಹಲಿಯಲ್ಲಿ ಬಿಜೆಪಿಯ ರಹಸ್ಯ ಸಮಾಲೋಚನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಐವರು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರೊಂದಿಗೆ ಆರ್‌ಎಸ್‌ಎಸ್‌ನ ಇಬ್ಬರು ಪ್ರಮುಖ ನಾಯಕರೂ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಆರ್‌ಎಸ್‌ಎಸ್‌ ಸಂಘಟನೆ ಮೇಲೆ ಬಿಜೆಪಿ ನಾಯಕರಿಗೆ ಯಾವಾಗಲೂ ಹೆಚ್ಚು ಗೌರವವಿರುತ್ತದೆ. ಪಕ್ಷದ ಚುನಾವಣಾ ರಣತಂತ್ರದಲ್ಲಿ ಭಾಗಿಯಾಗುವುದು, ಕ್ಷೇತ್ರ ಪ್ರವೇಶಿಸಿ ಬಿಜೆಪಿ ಪರ ಕೆಲಸ ಮಾಡುವುದು ಮುಂತಾದ ಕಾರ್ಯದಲ್ಲಿ ಆರ್ ಎಸ್ಎಸ್‌ ಸಕ್ರಿಯವಾಗಿ ಇರುತ್ತದೆ.

ಈ ಹಿನ್ನಲೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಇಬ್ಬರೂ ಈ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ . ಈ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆಯ ಕಾರ್ಯತಂತ್ರ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣಗಳು ಮುಂತಾದ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಮತ್ತು ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಬಿಜೆಪಿ ಸರ್ಕಾರ ರಚಿಸಲು ಏನು ಮಾಡಬೇಕು ಎಂಬುದರ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ವರದಿಯಾಗಿದೆ.

ಈ ಸಭೆಯಲ್ಲಿ ಕೈಗೊಳ್ಳುವ ನಿರ್ಣಯಗಳು ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಜಾರಿಯಾಗಲಿದೆ ಎಂದೂ ಹೇಳಲಾಗುತ್ತಿದೆ.