ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
BJp Archives » Page 9 of 9 » Dynamic Leader
October 23, 2024
Home Posts tagged BJp (Page 9)
ರಾಜಕೀಯ

ದೆಹಲಿ: ಬಿಜೆಪಿ ದುರ್ಬಲ ಎಂದೆನಿಸಿದಾಗಲೆಲ್ಲ ಅದು ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.! ಕಳೆದ ವಾರ ದೇಶಾದ್ಯಂತ ರಾಮನವಮಿ ಹಬ್ಬವನ್ನು ಆಚರಿಸಲಾಯಿತು. ಈ ಸಂಭ್ರಮಾಚರಣೆಯಲ್ಲಿ ಬಿಹಾರ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಹಿಂಸಾಚಾರದ ಘಟನೆಗಳು ನಡೆದವು.

ಬಿಹಾರದ ನಳಂದಾ ಮತ್ತು ಸಸ್ಸಾರಾಮ್ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆ ಪ್ರದೇಶಗಳಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಮನವಮಿ ಹಬ್ಬದ ವೇಳೆ ನಡೆದ ಹಿಂಸಾಚಾರವನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂಸತ್ತಿನಲ್ಲಿ ಸುದ್ದಿಗಾರರನ್ನು ಭೇಟಿ ಮಾಡಿ ಮಾತನಾಡಿದರು:

“ಬಿಜೆಪಿ ದುರ್ಬಲ ಎಂದೆನಿಸಿದಾಗಲೆಲ್ಲ ಹಿಂಸೆಯನ್ನು ಪ್ರಚೋದಿಸುತ್ತದೆ. ಬಿಜೆಪಿ ಆಡಳಿತವಿಲ್ಲದ ರಾಜ್ಯಗಳಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ಮೂಲಕ ಲಾಭ ಗಳಿಸಲು ಪ್ರಯತ್ನಿಸುತ್ತಿದೆ. ನ್ಯಾಯಾಲಯದ ಆದೇಶದ ವಿರುದ್ಧ ವಾದ ಮಾಡಲು ಸಾಧ್ಯವಿಲ್ಲ; ಆದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬಹುದು” ಎಂದು ಹೇಳಿದರು. “ಅವರು (ಕೇಂದ್ರ) ಅದಾನಿ ವಿಷಯದಲ್ಲಿ ಜಂಟಿ ಸದನ ಸಮಿತಿ (ಜೆಪಿಸಿ) ನಿರ್ಮಿಸಲು ಬಯಸುವುದಿಲ್ಲ. ಸಂಸತ್ತಿನ ಕಲಾಪ ನಡೆಯುವುದಿಲ್ಲ ಎಂದು ಯೋಜನೆ ರೂಪಿಸಿದ್ದಾರೆ” ಎಂದೂ ಅವರು ಹೇಳಿದರು.

ರಾಜಕೀಯ

ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್, ಜಾತ್ಯತೀತ ಜನತಾದಳ ಮತ್ತು ಆಮ್ ಆದ್ಮಿ ಪಕ್ಷಗಳು ಕಣದಲ್ಲಿವೆ.

ಈ ಹಿನ್ನಲೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿ, ಆಡಳಿತವನ್ನು ಉಳಿಸಿಕೊಳ್ಳಲು ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಅದರಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕ ಚುನಾವಣಾ ಉಸ್ತುವಾರಿಯಾಗಿ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರನ್ನು ಸಹ ಉಸ್ತುವಾರಿಯಾಗಿ ನೇಮಿಸಿ ಘೋಷಣೆ ಮಾಡಿದರು.

ಈ ಬಗ್ಗೆ ತಮಿಳುನಾಡು ಬಿಜೆಪಿ ಕಡೆಯಿಂದ ವಿಚಾರಿಸಿದಾಗ, ‘ಕರ್ನಾಟಕದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು, ಬಿಜೆಪಿ ವರಿಷ್ಟರು ಶತಪ್ರಯತ್ನ ಪಡುತ್ತಿದ್ದಾರೆ. ಇದಕ್ಕಾಗಿ ನಾನಾ ರೀತಿಯ ಕಾರ್ಯ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಯನ್ನು ಅವರ ಕೆಳಗೆ ನೇಮಿಸಿದೆ. ಇದು ಅಣ್ಣಾಮಲೈ ಅವರನ್ನು ಶೀಘ್ರದಲ್ಲೇ ಅಧ್ಯಕ್ಷ ಸ್ಥಾನದಿಂದ ಅಥವಾ ತಮಿಳುನಾಡಿನಿಂದ ಸ್ಥಳಾಂತರಿಸುವ ಸೂಚನೆಯಾಗಿದೆ’ ಎಂದು ಅವರು ಹೇಳುತ್ತಿದ್ದಾರೆ.

ಅನುಭವವಿಲ್ಲದ, ರಾಜಕೀಯ ತಂತ್ರಗಾರಿಕೆ ಗೊತ್ತಿಲ್ಲದ ಮಾಜಿ ಐಪಿಎಸ್ ಅಧಿಕಾರಿ ‘ಶಾರ್ಟ್ ಟೆಂಪರ್’ ಅಣ್ಣಾಮಲೈಯನ್ನು ಇಲ್ಲಿಗೆ ಏಕೆ ಸಹ ಉಸ್ತುವಾರಿಯಾಗಿ ನೇಮಿಸುತ್ತಿದ್ದಿರಿ ಎಂದು ಕರ್ನಾಟಕ ಬಿಜೆಪಿಯವರು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ತಮಿಳುನಾಡು ರಾಜಕೀಯದಲ್ಲಿ ತನ್ನನ್ನು ಉತ್ಸಾಹಿಯಾಗಿ ತೋರಿಸಿಕೊಳ್ಳುತ್ತಿದ್ದ ಅಣ್ಣಾಮಲೈಕೂಡ ತಮ್ಮನ್ನು ಏಕೆ ಕರ್ನಾಟಕಕ್ಕೆ ಸಹ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ ಎಂಬ ಗೊಂದಲದಲ್ಲಿ ಇದ್ದಾರೆ.

ರಾಜಕೀಯ ರಾಜ್ಯ

1) ಕೇಂದ್ರದ ಟ್ರಬಲ್ ಎಂಜಿನ್ ಬಿಜೆಪಿ ಸರ್ಕಾರ ಕಳೆದ 8 ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್’ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ 2023-2024ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

2) ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಕೊರೊನಾ ರೋಗದಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟುಹೋಗಿದೆ. ಬಹಳ ಮುಖ್ಯವಾಗಿ ದೇಶದ ಬೆನ್ನೆಲುಬು ಎಂದು ಭಾಷಣದಲ್ಲಿ ಎಲ್ಲರೂ ಕೊಂಡಾಡುವ ರೈತರ ಬದುಕು ನೆಲ ಹಿಡಿದಿದೆ.

3) ನಿರುದ್ಯೋಗದ ಪ್ರಮಾಣ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇಕಡಾ 54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

4) 2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿ ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ. ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ.

5) ಎಂಎಸ್‌ಪಿಯಲ್ಲಿನ ಅನ್ಯಾಯ, ಅವೈಜ್ಞಾನಿಕ ಬೆಳೆ ವಿಮೆ, ಸಾಲದಹೊರೆ, ನೆರೆ ಮತ್ತು ಬರಪರಿಹಾರದಲ್ಲಿನ ಕೊರತೆಗಳ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ. ರೈತರ ಆದಾಯವನ್ನು ದುಪ್ಪಟ್ಟು ಮಾಡಲಾಗುವುದು ಎಂಬ ಘೋಷಣೆ ಪೊಳ್ಳಾಗಿದೆ. ಕನಿಷ್ಠ ಸಣ್ಣ ಹಿಡುವಳಿದಾರ ರೈತರ ಸಾಲವನ್ನಾದಾರೂ ಮನ್ನಾ ಮಾಡಬಹುದೆಂಬ ನಿರೀಕ್ಷೆ ಸುಳ್ಳಾಗಿದೆ.

6) ರೈತರಿಗೆ ಸಾಲ ನೀಡಲು ಎರಡು ಲಕ್ಷ ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ರೈತರನ್ನು ಋಣಮುಕ್ತಗೊಳಿಸಬೇಕಾಗಿರುವ ಸರ್ಕಾರ ಅವರನ್ನು ಇನ್ನಷ್ಟು ಸಾಲದ ಬಲೆಗೆ ನೂಕಲು ಹೊರಟಿದೆ. ಹೊಸ ಸಾಲ ಪಡೆದು ಹಳೆಸಾಲ ತೀರಿಸಿ ಎನ್ನುವುದನ್ನು ಸರ್ಕಾರ ಹೇಳಿದೆ. ಈ ಸಾಲದ ಬಡ್ಡಿದರ ಎಷ್ಟು ಎನ್ನುವುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ.

7) ಹತ್ತಿಬೆಳೆಯನ್ನು ಹೊರತುಪಡಿಸಿದರೆ ಬೇರೆ ಯಾವ ಬೆಳೆಗಳಿಗೂ ಬೆಳೆ ಕೇಂದ್ರಿತ ಯೋಜನೆಗಳು ಬಜೆಟ್ ನಲ್ಲಿ ಇಲ್ಲ. ತೋಟಗಾರಿಕಾ ಬೆಳೆಗಳನ್ನು ಪ್ರಸ್ತಾಪ ಮಾಡಲಾಗಿದ್ದರು ಅಲ್ಲಿಯೂ ಬೆಳೆ ಕೇಂದ್ರಿತ ಯೋಜನೆ ಇಲ್ಲ. ಉದಾಹರಣೆಗೆ ತೆಂಗು, ಅಡಿಕೆ ಇತ್ಯಾದಿ ಬೆಳೆಗಳಿಗೆ ನಿರ್ಧಿಷ್ಟ ಯೋಜನೆಗಳನ್ನು ಹೇಳಿಲ್ಲ.

8) ಭದ್ರ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ ರೂ.23,000 ಕೋಟಿ ಅವಶ್ಯಕತೆಯಿದೆ. ಕೇಂದ್ರದ ಬಿಜೆಪಿ ಸರ್ಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ.

9) ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ಹಣದಲ್ಲಿ 40% ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು ರೂ.3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವದನ್ನೂ ಸ್ಪಷ್ಟಪಡಿಸಿಲ್ಲ.

10) ಬಹಳ ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿರುವ ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ‘ಬಿ ಸ್ಕೀಮ್’ ಗೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯ ವರೆಗೆ ಈ ಹಣವನ್ನು ಖರ್ಚು ಮಾಡುವ ಹಾಗಿಲ್ಲ.

11) ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಪೈಸೆ ಹಣವನ್ನೂ ನೀಡಿಲ್ಲ. ಉಪನಗರ ರೈಲ್ವೆ ಮತ್ತು ಮೆಟ್ರೋ ರೈಲು ಯೋಜನೆಗೆ ಹೆಚ್ಚಿನ ಅನುದಾನ ನೀಡಬಹುದೆಂಬ ನಿರೀಕ್ಷೆ ಇತ್ತು ಅದೂ ಸುಳ್ಳಾಗಿದೆ.

12) ಆಹಾರ ಸಬ್ಸಿಡಿಯನ್ನು ಶೇಕಡಾ 31ರಷ್ಟು ಕಡಿಮೆ ಮಾಡಲಾಗಿದೆ. 2022-23ರಲ್ಲಿ ರೂ.2,87,194 ಕೋಟಿಯಷ್ಟು ಆಹಾರ ಸಬ್ಸಿಡಿ ನೀಡಲಾಗಿತ್ತು. ಈ ಬಾರಿ ಅದನ್ನು ರೂ.1,97,350 ಕೋಟಿಗೆ ಇಳಿಸಲಾಗಿದೆ.

13) ನರೇಗಾ ಯೋಜನೆಗೆ ಶೇಕಡಾ 32ರಷ್ಟು ಕಡಿಮೆ ಅನುದಾನ ನಿಗದಿಪಡಿಸಲಾಗಿದೆ. 2022-23ರಲ್ಲಿ ರೂ.89,154 ಕೋಟಿ ಗಳಷ್ಟು ನೀಡಲಾಗಿದ್ದ ಅನುದಾನವನ್ನು 2023-24ರ ಸಾಲಿನಲ್ಲಿ ರೂ.61,032 ಕೋಟಿಗೆ ಇಳಿಸಲಾಗಿದೆ.

14) ಎಲ್.ಪಿ.ಜಿ. ಸಬ್ಸಿಡಿಯನ್ನು ಶೇಕಡಾ 75ರಷ್ಟು ಕಡಿತಗೊಳಿಸಲಾಗಿದೆ. 2022-23ರಲ್ಲಿ ರೂ.9,170 ಕೋಟಿಗಳಷ್ಟಿದ್ದ ಎಲ್‌ಪಿಜಿ ಸಬ್ಸಿಡಿಯನ್ನು 2023-24ರ ಸಾಲಿಗೆ ರೂ.2,257 ಕೋಟಿಗೆ ಇಳಿಸಲಾಗಿದೆ.

15) ಪ್ರಧಾನ ಮಂತ್ರಿ ಆವಾಸ್ ಯೋಜನಾ ವೆಚ್ಚವನ್ನು ಶೇಕಡಾ 66ರಷ್ಟು ಹೆಚ್ಚಿಸಲಾಗಿದೆ. ಪ್ರತಿಮನೆ ನಿರ್ಮಾಣ ವೆಚ್ಚವನ್ನು ರೂ.48,000 ರೂಪಾಯಿಗಳಿಂದ ರೂ.79,590 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಹೆಚ್ಚಳ ಬಡ ಕುಟುಂಬಗಳಿಗೆ ನೆರವಾಗುವುದಕ್ಕೋ? ಗುತ್ತಿಗೆದಾರರಿಗೆ ಲಾಭ ಮಾಡಿಕೊಡಲಿಕ್ಕೋ?

16) ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ಶೇಕಡಾ 50ರಷ್ಟು ಮನೆಗಳನ್ನು ನಿರ್ಮಿಸಲಾಗಿಲ್ಲ. ಬಹಳ ಮುಖ್ಯವಾಗಿ ನಗರ ಪ್ರದೇಶದಲ್ಲಿರುವ ಕೊಳಗೇರಿ ನಿವಾಸಿಗಳ ವಸತಿ ಸಮಸ್ಯೆಯನ್ನು ಪರಿಹರಿಸುವ ಪ್ರಸ್ತಾಪ ಬಜೆಟ್ ನಲ್ಲಿ ಇಲ್ಲ.

17) ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದರೂ ಅವರು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಒಂದೆರಡು ಬಾರಿ ಕರ್ನಾಟಕದ ಹೆಸರನ್ನು ಉಲ್ಲೇಖಮಾಡಿದ ಹೊರತಾಗಿ ವಿಶೇಷ ನೆರವಿನ ಘೋಷಣೆಗಳನ್ನು ಮಾಡಿಲ್ಲ.

18) ಕೇಂದ್ರ ಬಿಜೆಪಿ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಸಂಪೂರ್ಣ ವಿಫಲವಾಗಿದೆ.

19) ಸಾಮಾನ್ಯವಾಗಿ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಸಂಸತ್ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ರಾಜ್ಯದ ಬೇಡಿಕೆಗಳನ್ನು ಕೇಂದ್ರ ಬಿಜೆಪಿ ಸರ್ಕಾರದ ಮುಂದಿಡುವುದು ರೂಢಿ. ಆದರೆ ಈ ಬಾರಿ ಈ ಸಂಪ್ರದಾಯವನ್ನು ಮುರಿಯಲಾಗಿದೆ.

20) ರಾಜ್ಯದಿಂದ ಆರಿಸಿಹೋಗಿರುವ ರಾಜ್ಯದ 25 ಲೋಕಸಭಾ ಸದಸ್ಯರು ಮತ್ತು ಆರು ರಾಜ್ಯಸಭಾ ಸದಸ್ಯರಿದ್ದಾರೆ. ಇವರಲ್ಲಿ ಯಾರೋಬ್ಬರು ರಾಜ್ಯದ ಬೇಡಿಕೆಗಳ ಬಗ್ಗೆಯಾಗಲಿ, ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆಯಾಗಲಿ ಎಲ್ಲಿಯೂ ಸೊಲ್ಲೆತ್ತಿಲ್ಲ, ಇದರಿಂದಾಗಿ ಕೇಂದ್ರ ಸರ್ಕಾರ ಕೂಡಾ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ.

ದೇಶ

ನವದೆಹಲಿ: ಮುಂದಿನ ವರ್ಷ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆ ಎದುರಿಸಲು ಎಲ್ಲ ಪಕ್ಷಗಳು ಈಗಾಗಲೆ ಸಿದ್ದತೆಗಳನ್ನು ನಡೆಸಿಕೊಂಡು ಬರುತ್ತಿವೆ. ಸದ್ಯ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ಕೂಡ 3ನೇ ಅವಧಿಗೆ ಅಧಿಕಾರ ಹಿಡಿಯಲು ತಂತ್ರಗಳನ್ನು ರೂಪಿಸುತ್ತಿದೆ.

ಭಾರತೀಯ ಜನತಾ ಪಾರ್ಟಿ ವಿಶೇಷವಾಗಿ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿಯ ಪರವಾಗಿ ಹೆಚ್ಚುವರಿ ಕ್ಷೇತ್ರಗಳನ್ನು ಗೆಲ್ಲಲು ಮುಂದಾಗಿದೆ. ಇದಕ್ಕಾಗಿ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ಅದರ ಭಾಗವಾಗಿಯೇ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ಧಿಯನ್ನು ಹರಿಯಬಿಟ್ಟಿದ್ದಾರೆ.

ಪ್ರಧಾನಿ ಮೋದಿ ಉತ್ತರದಲ್ಲಿ ಒಂದು ಹಾಗೂ ದಕ್ಷಿಣ ರಾಜ್ಯದಲ್ಲಿ ಒಂದು ಕ್ಷೇತ್ರಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದು, ದಕ್ಷಿಣ ರಾಜ್ಯದ ತಮಿಳುನಾಡಿನಿಂದಲೇ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸುವುದಾದರೆ ರಾಮನಾಥಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಜನತಾ ಪಕ್ಷದ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಅವರನ್ನು ಕೇಳಿದಾಗ, ‘ಪ್ರಧಾನಿ ನರೇಂದ್ರ ಮೋದಿ ವಿದೇಶಿಯಲ್ಲ; ಆತ ಭಾರತೀಯ. ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ನಾಡಿನ ಜನ ಅವರ ಮೇಲೆ ಪ್ರೀತಿ, ಮಮತೆ ಹೊಂದಿದ್ದಾರೆ. ಅಷ್ಟೇ ಅಲ್ಲ ಮುಂದಿನ ಸಂಸತ್ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಇದು ನಿಜವೇ ಎಂದು ಅನೇಕರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ನಾನು ತೂತ್ತುಕುಡಿಗೆ ಹೋಗಿದ್ದೆ. ಅಲ್ಲಿನ ಅಂಗಡಿಯೊಂದರಲ್ಲಿ ಟೀ ಕುಡಿಯಲು ಹೋಗಿದ್ದಾಗ, ನನ್ನನ್ನು ನೋಡಿದ ಅಲ್ಲಿನ ಜನರು, ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸುತ್ತಾರೆಯೇ? ಎಂದು ಕೇಳಿದರು.

ಇದನ್ನು ತಿಳಿದುಕೊಳ್ಳಲು ಜನರು ತುಂಬಾ ಆಸಕ್ತಿ ಹೊಂದಿದ್ದಾರೆ. ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಿಷ್ಠಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ.

ತಮಿಳುನಾಡಿನ ಜನರು ಪ್ರಧಾನಿ ಮೋದಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದಾರೆ. ಅವರ ಚಟುವಟಿಕೆಗಳನ್ನು ಮೆಚ್ಚುತ್ತಾರೆ. ತಮಿಳುನಾಡಿನಲ್ಲೂ ಪ್ರಧಾನಿ ಮೋದಿಯ ಅಲೆ ಎದ್ದಿದೆ. ತಮಿಳುನಾಡಿನಲ್ಲೂ ಭಾರತೀಯ ಜನತಾ ಪಕ್ಷಕ್ಕೆ ಪ್ರತ್ಯೇಕ ಗುರುತು ಸಿಗಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದನ್ನು ನಾವು ಸಾಬೀತು ಮಾಡುತ್ತೇವೆ’ ಎಂದರು.

ರಾಜಕೀಯ ರಾಜ್ಯ

ಡಿ.ಸಿ.ಪ್ರಕಾಶ್, ಸಂಪಾದಕರು

‘ತಮಿಳುನಾಡಿನ ಕೊಡೈಕಾನಲ್ ಪ್ರದೇಶದಲ್ಲಿ ಬೆಳೆಯುವ ಒಂದು ರೀತಿಯ ಮಾದಕ ಅಣಬೆಯೆ ಇದಕ್ಕೆ ಕಾರಣ’ ಎಂದು ಅಲ್ಲಿನ ಬಿಜೆಪಿಯವರು ಹೇಳುತ್ತಿರುವುದು ಆಶ್ಚರ್ಯವಾಗಿದೆ!

ತಮಿಳುನಾಡಿನ ಬಿಜೆಪಿ ಪಕ್ಷಕ್ಕೆ ಸೇರಿದವನು ಸೆಲ್ವಕುಮಾರ್. ಕರೂರು ಜಿಲ್ಲೆಯ ಇಲುಪ್ಪೂರು ಪ್ರದೇಶಕ್ಕೆ ಸೇರಿದ ಶಕ್ತಿ ಎಂಬ ಡ್ರಗ್ ಪೆಡ್ಲರ್ ಇವನ ಸಂಬಂಧಿ. ತಮಿಳುನಾಡು ಪೊಲೀಸರು ಡ್ರಗ್ಸ್ ಜಾಲವೊಂದನ್ನು ಪತ್ತೆಹಚ್ಚಿದಾಗ, ಅವರ ಸೆಲ್ ಫೋನ್ ನಂಬರ್ ಬಳಸಿ ಶಕ್ತಿಯನ್ನು ಬಂಧಿಸಿದ್ದರು. ಈ ಶಕ್ತಿ ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಗೆ ಕೊಕೇನ್ ಮತ್ತು ಹೆರಾಯಿನ್‌ನಂತಹ ಮಾದಕವಸ್ತುಗಳನ್ನು ಪೂರೈಸುವ ಡ್ರಗ್ ಗ್ಯಾಂಗ್‌ನ ಒಂದು ಭಾಗ. ಡ್ರಗ್ ಪೆಡ್ಲರ್ ಶಕ್ತಿಯ ಸೋದರ ಸಂಬಂಧಿ ಸೆಲ್ವಕುಮಾರ್ ಬಿಜೆಪಿಯ ಅನುಯಾಯಿ. ಸೋಶಿಯಲ್ ಮೀಡಿಯಾದಲ್ಲಿ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಖ್ಯಾತಿಯನ್ನು ಬಿತ್ತರಿಸುವುದೇ ಇವನ ದಿನನಿತ್ಯದ ಕಾಯಕ. ಶಕ್ತಿ ಬಂಧನಕ್ಕೊಳಗಾದ ನಂತರ ಪೊಲೀಸರು ತನ್ನ ಕಡೆಗೂ ಬರಬಹುದು ಎಂದು ಅನುಮಾನಿಸಿದ ಸೆಲ್ವಕುಮಾರ್ ಅಣ್ಣಾಮಲೈ ಬಳಿ ಶರಣಾಗುತ್ತಾನೆ. ಸೆಲ್ವಕುಮಾರನನ್ನು ಪಕ್ಷಕ್ಕೆ ಸೇರಿಸಿಕೊಂಡ ಅಣ್ಣಾಮಲೈ, ಕೂಡಲೇ ಪಕ್ಷದಲ್ಲಿ ಜವಾಬ್ದಾರಿಯನ್ನೂ ನೀಡುತ್ತಾರೆ. ಅಮರ್ ಪ್ರಸಾದ್ ರೆಡ್ಡಿ, ತಿರುಚ್ಚಿ ಸೂರ್ಯ, ಸೆಲ್ವಕುಮಾರ್ ಮತ್ತು ಅಲಿಶಾ ಅವರನ್ನೊಳಗೊಂಡ ಅಣ್ಣಾಮಲೈ ತಂಡದಲ್ಲಿ ಸೆಲ್ವಕುಮಾರ್ ಪ್ರಮುಖ ಭಾಗವಾಗುತ್ತಾನೆ. ಈ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದ ಸೆಲ್ವಕುಮಾರ್ ಪೊಲೀಸ್ ಕಾರ್ಯಾಚರಣೆಯಿಂದ ಪಾರಾಗುತ್ತಾನೆ.

ಸೆಲ್ವಕುಮಾರ್, ಶಕ್ತಿ

‘ಅಣ್ಣಾಮಲೈ ಸದಾ ಸೈಕೋ ತರಹ ವರ್ತಿಸುತ್ತಾನೆ. ಇದ್ದಕ್ಕಿದ್ದಂತೆ ನಾನು ಚಾಣಕ್ಯ ಎಂದು ಕೂಗುತ್ತಾನೆ. ಮುಂದಿನ ನಿಮಿಷ ಮೇಜಿನ ಮೇಲೆ ತಲೆಯಿಟ್ಟು ಮಲಗಿಕೊಳ್ಳುತ್ತಾನೆ. ಆತನು ಪ್ರತಿದಿನ ಸಾಕಷ್ಟು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾನೆ. ಆತನಿಗೆ ಮಾನಸಿಕ ಖಾಯಿಲೆ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂಬ ಸುದ್ದಿ ಬಿಜೆಪಿ ಕಾರ್ಯಕರ್ತರಲ್ಲಿ ಹಬ್ಬಿತ್ತು. ‘ಅವನಿಗೆ ಯಾವುದೇ ಮಾನಸಿಕ ಕಾಯಿಲೆಗಳು ಇಲ್ಲ. ಯಹೂದಿಗಳು ದೇಶವನ್ನು ಆಳಬೇಕಾದರೆ ಅವರು ಮತಾಂಧರಾಗಿರಬೇಕು ಎಂಬುದಕ್ಕಾಗಿ ಅವರು ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಹಾಗಾಗಿ ಕೊಡೈಕಾನಲ್ ಪ್ರದೇಶದಿಂದ ನೈಸರ್ಗಿಕವಾಗಿ ಬೆಳೆಯುವ ಅಣಬೆ ಮಾದರಿಯ ಮಾದಕ ವಸ್ತುವನ್ನು ಖರೀದಿಸಿ ಅಣ್ಣಾಮಲೈ ಸೇವಿಸುತ್ತಿದ್ದಾನೆ’ ಎಂದು ಅಮರ್ ಪ್ರಸಾದ್ ರೆಡ್ಡಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾನೆ ಎಂದು ಬಿಜೆಪಿ ವಲಯದಲ್ಲಿ ಗುಸುಗುಸು ಇದೆ.

ಅಮರ್ ಪ್ರಸಾದ್ ರೆಡ್ಡಿ ಮತ್ತು ನೈಸರ್ಗಿಕವಾಗಿ ಬೆಳೆಯುವ ಅಣಬೆ ಮಾದರಿಯ ಮಾದಕ ವಸ್ತು

ಅಣ್ಣಾಮಲೈ ಹಾಗೂ ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಡಿಸೆಂಬರ್ 10 ರಂದು ವಿಮಾನದ ತುರ್ತು ಬಾಗಿಲು ತೆರೆಯುವ ಹಿಂದಿನ ದಿನ, ಪೂರ್ವ ಕರಾವಳಿ (ECR) ರಸ್ತೆಯಲ್ಲಿರುವ ಜನಪ್ರಿಯ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ವಾಸ್ತವ್ಯ ಹೂಡಿದ್ದರು. 10ರಂದು ತಿರುಚ್ಚಿಯಲ್ಲಿ ನಡೆಯುವ ಬಿ.ಜೆ.ಪಿ. ಯುವ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ತೇಜಸ್ವಿ ಸೂರ್ಯ ಬೆಂಗಳೂರಿನಿಂದ ಬಂದಿದ್ದನು.

‘ಆ ರಾತ್ರಿ ತೇಜಸ್ವಿ ಸೂರ್ಯನೊಂದಿಗೆ ಅಣ್ಣಾಮಲೈ ಜೊತೆಗೂಡಿ ಮದ್ಯಪಾನ, ಡ್ಯಾನ್ಸು, ಡ್ರಗ್ಸು ಎಂದು ಇಬ್ಬರೂ ಸಂಭ್ರಮಿಸಿದ್ದರು. ತೇಜಸ್ವಿ ಸೂರ್ಯ ಮಹಿಳೆಯೊಬ್ಬರ ಜೊತೆಯಿರುವ ಖಾಸಗಿ ವಿಡಿಯೋವೊಂದನ್ನು ಅಣ್ಣಾಮಲೈ ತಮ್ಮ ಹನಿ ಟ್ರ್ಯಾಪ್ ಶೈಲಿಯಲ್ಲಿ ಚಿತ್ರೀಕರಿಸಿದ್ದಾನೆ’ ಎಂಬ ಸುದ್ಧಿಗಳು ಅಲ್ಲಿನ ಮಾಧ್ಯಮಗಳಲ್ಲಿ ಬಿತ್ತರಿಸಲಾಗಿದೆ.

ಅಣ್ಣಾಮಲೈ ಹಾಗೂ ತೇಜಸ್ವಿ ಸೂರ್ಯ ಕರ್ನಾಟಕದ ಶೃಂಗೇರಿ ಶಂಕರ ಮಠದ ಬೆಂಬಲಿಗರಾಗಿದ್ದಾರೆ. ಬಿಜೆಪಿಯನ್ನು ನಿಯಂತ್ರಿಸಲು ಆರ್‌ಎಸ್‌ಎಸ್ ನಿಯೋಜಿಸಿದ ವ್ಯಕ್ತಿಯೇ ಬಿ.ಎಲ್.ಸಂತೋಷ್. ಅವರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೂ ಆಗಿದ್ದಾರೆ. ಇವರು ಶೃಂಗೇರಿ ಶಂಕರ ಮಠದ ಪ್ರಮುಖರಲ್ಲಿ ಒಬ್ಬರು. ತೇಜಸ್ವಿ ಸೂರ್ಯನನ್ನು ಸಂಸದನಾಗಿ ಮಾಡಿದವರು ಇದೇ ಬಿ.ಎಲ್.ಸಂತೋಷ್.

ಬಿ.ಎಲ್.ಸಂತೋಷ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದಶಿ

ಸೂರ್ಯನ ಅಮಲಿನ ಮಾತು ಕರ್ನಾಟಕದಲ್ಲಿ ಜನಪ್ರಿಯ. ಈತನ ಬಗ್ಗೆ ಮಾಧ್ಯಮಗಳಲ್ಲಿ ಆಗಾಗ ಚರ್ಚೆಯಾಗುತ್ತಿರುತ್ತದೆ. ಬೆಂಗಳೂರು ನಗರವು ಮಳೆಯ ಅಬ್ಬರಕ್ಕೆ ತತ್ತರಸಿ ಹೋಗಿದ್ದ ಸಂದರ್ಭದಲ್ಲಿ ಪದ್ಮನಾಭನಗರದ ಹೋಟೆಲ್‌ ಒಂದರಲ್ಲಿ ನಿಂತು ‘ನಾನು ಖುಷಿಯಿಂದ ಮಸಾಲೆ ದೋಸೆ ತಿನ್ನುತ್ತಿದ್ದೇನೆ’ ಎಂದು ವಿಡಿಯೋ ಮಾಡಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ಅವಹೇಳನಕ್ಕೆ ಒಳಗಾದವನು ಈ ತೇಜಸ್ವಿ ಸೂರ್ಯ. ಕೋವಿಡ್ ಸಮಯದಲ್ಲಿ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಬೇಟಿ ನೀಡಿ, ‘ಹಿಂದೂ ರೋಗಿಗಳನ್ನು ಮುಸ್ಲಿಂ ಸಿಬ್ಬಂದಿಗಳು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ’ ಎಂಬ ಸುಳ್ಳು ನಾಟಕವಾಡಿ ಜನರಿಂದ ಉಗಿಸಿಕೊಂಡಿದ್ದನ್ನು ಯಾರೂ ಇನ್ನೂ ಮರೆತಿಲ್ಲ.  

ಇದೇ ತೇಜಸ್ವಿ ಸೂರ್ಯ ಅರಬ್ ಮಹಿಳೆಯರನ್ನು ಅವಹೇಳನ ಮಾಡಿ ‘ಕಳೆದ ಕೆಲವು ಶತಮಾನಗಳಿಂದ 95% ಅರಬ್ ಮಹಿಳೆಯರು ಪರಾಕಾಷ್ಠೆಯನ್ನು (Orgasm) ತಲುಪಲಿಲ್ಲ’ ಎಂದು ಬರೆದ ಟ್ವೀಟ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಂ ರಾಷ್ಟ್ರಗಳ ಮದ್ಯೆ ಭಾರತವು ತಲೆ ತಗ್ಗಿಸುವಂತೆ ಮಾಡಿತು.

ಬಿ.ಎಲ್.ಸಂತೋಷ್ ಮುಖಾಂತರ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಹಾಗೂ ಸಂಸದ ತೇಜಸ್ವಿ ಸೂರ್ಯ ಡಿಸಂಬರ್ 10ರಂದು ಮದ್ಯದ ಅಮಲಿನಲ್ಲಿ ತಿರುಚ್ಚಿಗೆ ವಿಮಾನ ಹತ್ತಿದರು. ಇವರ ಜೊತೆ ನಾಲ್ವರು ಬಿಜೆಪಿ ಸದಸ್ಯರು ಇದ್ದರು ಎಂದು ಈ ಹಿಂದೆ ತಮಿಳುನಾಡು ಬಿಜೆಪಿಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿದ್ದ ಪಿ.ಟಿ.ಅರಸುಕುಮಾರ್, ಆ ದಿನ ನಡೆದ ಘಟನೆಯನ್ನು ವಿವರಿಸಿದ್ದಾರೆ. ತಮಿಳುನಾಡು ಬಿಜೆಪಿಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿದ್ದ ಪಿ.ಟಿ.ಅರಸುಕುಮಾರ್ 2019ರಲ್ಲಿ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷದಲ್ಲಿ ಸೇರ್ಪಡೆಯಾದರು. ಅರಸುಕುಮಾರ್ ಕೂಡ ಇದೇ ವಿಮಾನದಲ್ಲಿ ಅಂದು ಪ್ರಯಾಣ ಮಾಡಿರುತ್ತಾರೆ. ಇವರು ಈ ಘಟನೆಯನ್ನು ಹತ್ತಿರದಿಂದ ನೋಡಿದ ಪ್ರತ್ಯಕ್ಷದರ್ಶಿಯೂ ಆಗಿದ್ದಾರೆ.

ಪಿ.ಟಿ.ಅರಸುಕುಮಾರ್

‘ಬೆಳಿಗ್ಗೆ ಹತ್ತು ಗಂಟೆಯ ಸಮಯಕ್ಕೆ ತಿರುಚ್ಚಿಗೆ ಹೊರಡಲಿರುವ ಆ ಪುಟ್ಟ ವಿಮಾನದಲ್ಲಿ ಒಟ್ಟು 76 ಪ್ರಯಾಣಿಕರು ಕುಳಿತುಕೊಳ್ಳಬಹುದು. ನಾನು ತಡವಾಗಿಯೇ ಆ ವಿಮಾನದೊಳಗೆ ಪ್ರವೇಶ ಮಾಡಿದೆ. ವಿಮಾನದ ತುರ್ತು ನಿರ್ಗಮನದ ಬಾಗಿಲ ಬಳಿ ಅಣ್ಣಾಮಲೈ ಹಾಗೂ ತೇಜಸ್ವಿ ಸೂರ್ಯ ಕುಳಿತಿದ್ದರು. ಪ್ರಯಾಣಿಕರು ಯಾವುದೇ ಅಪಘಾತ ಸಂಭವಿಸಿದಾಗ ತುರ್ತು ಬಾಗಿಲು ತೆರೆಯುವುದು ಹೇಗೆ ಎಂದು ಪ್ರಯಾಣಿಕರಿಗೆ ವಿವರಿಸಿಕೊಂಡಿದ್ದ ಗಗನಸಖಿಯರು ಹಿಂದಿನ ಬಾಗಿಲುಗಳನ್ನು ಮುಚ್ಚಿ ಪಕ್ಕಕ್ಕೆ ನಡೆದರು.

ಪ್ರಯಾಣಿಕರ ಆಗಮನವು ಮುಗಿಯುತ್ತಿದ್ದಂತೆ, ವಿಮಾನ ಚಲಿಸಲು ಜೋರಾಗಿ ಎಂಜಿನ್ ಆನ್ ಮಾಡಲಾಯಿತು. ವಿಮಾನ ಟೇಕ್ ಆಫ್ ಆಗುತ್ತಿದೆ ಎಂದು ನಾವು ಭಾವಿಸುತ್ತಿದ್ದಂತೆ, ವಿಮಾನ ಸಿಬ್ಬಂದಿಗಳು (ಕಾಕ್‌ಪಿಟ್ ಕಡೆಗೆ) ಪೈಲಟ್ ಕೋಣೆಯ ಕಡೆಗೆ ಓದಿದರು. ಅದೇ ವೇಳೆಯಲ್ಲಿ ಪೊಲೀಸರೂ ಏಕಾಏಕಿ ವಿಮಾನವನ್ನು ಪ್ರವೇಶಿಸಿದರು.

‘ವಿಮಾನದಲ್ಲಿ ದೊಡ್ಡ ಸೋರಿಕೆಯಾಗಿದೆ ಎಂದು ಪೈಲಟ್ ನ ಕಂಪ್ಯೂಟರ್ ತಿಳಿಸುತ್ತಿದೆ. ಆದ್ದರಿಂದ ಈ ವಿಮಾನವನ್ನು ಚಲಾಯಿಸಲು ಸಾಧ್ಯವಿಲ್ಲ. ಆ ಸೋರಿಕೆಯನ್ನು ಸರಿಪಡಿಸಲಾಗುತ್ತದೆಯೇ? ಅಥವಾ ಪ್ರಯಾಣಿಕರನ್ನು ಬೇರೆ ವಿಮಾನಕ್ಕೆ ಸ್ಥಳಾಂತರಿಸಲಾಗುತ್ತದೆಯೇ? ಇದನ್ನು ಇಂಡಿಗೋ ಏರ್‌ಲೈನ್ಸ್ ನಿರ್ಧರಿಸುತ್ತದೆ’ ಎಂದು ಗಗನಸಖಿಯರು ಘೋಷಣೆ ಮಾಡಿದರು.

ವಿಮಾನದ ತುರ್ತು ನಿರ್ಗಮನದ ಬಾಗಿಲು

ವಿಮಾನದೊಳಗೆ ಬಂದಿದ್ದ ಪೊಲೀಸರು ಅಣ್ಣಾಮಲೈ, ತೇಜಸ್ವಿ ಸೂರ್ಯ ಹಾಗೂ ಅವರೊಂದಿಗಿದ್ದ ಬಿಜೆಪಿಯವರನ್ನು ಪ್ರತ್ಯೇಕವಾದ ಒಂದು ಬಸ್ಸಿನಲ್ಲಿ ಹತ್ತಿಸಿ ವಿಮಾನ ನಿಲ್ದಾಣದೊಳಗೆ ಕರೆದೊಯ್ದರು. ನಾನೂ ಸೇರಿದಂತೆ ಇತರ ಪ್ರಯಾಣಿಕರನ್ನು ಬೇರೆಯ ಬಸ್ಸಿನೊಳಗೆ ಕೂರಿಸಿ, ನಮಗೆ ಸ್ನಾಕ್ಸ್ ಮತ್ತು ಕೂಲ್ ಡ್ರಿಂಕ್ಸ್ ಕೊಟ್ಟರು. ಅಷ್ಟರೊಳಗೆ ಅಣ್ಣಾಮಲೈ ಹಾಗೂ ತೇಜಸ್ವಿ ಸೂರ್ಯ ಇಬ್ಬರು ಸೇರಿಕೊಂಡು ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು (Emergency Exit) ತೆರೆದಿದ್ದ ಕಾರಣ, ವಿಮಾನದೊಳಗೆ ದೊಡ್ಡ ಸೋರಿಕೆ ಉಂಟಾಯಿತು ಎಂಬುದನ್ನು ಪೈಲಟ್ ಪತ್ತೆ ಮಾಡಿದ್ದರು. ಪೈಲಟ್ ಅದನ್ನು ಕಂಡುಹಿಡಿದಿರದಿದ್ದರೆ ನೇಪಾಳ ದೇಶದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 76 ಜನರು ಅಪಘಾತದಲ್ಲಿ ಸತ್ತಂತೆ ನಾವು ಕೂಡ ಸತ್ತಿರಬೇಕು. ಪೈಲೆಟ್ ಸಾಮಾರ್ಥ್ಯದಿಂದ ಅಣ್ಣಾಮಲೈ ಮತ್ತು ಇತರರು ಮಾಡಿದ ಕೆಲಸ ಪತ್ತೆ ಮಾಡಲಾಯಿತು.

ಅಗ್ನಿಶಾಮಕ ವಾಹನಗಳು ಸೇರಿದಂತೆ ಎಲ್ಲಾ ತುರ್ತು ವಾಹನಗಳು ವಿಮಾನದ ಸುತ್ತಲೂ ನಿಂತಿದ್ದವು. ಫ್ಲೈಟ್ ಎಂಜಿನಿಯರ್‌ಗಳು ವಿಮಾನವನ್ನು ಇಂಚಿಂಚಾಗಿ ಪರೀಕ್ಷಿಸಿದರು. ತೇಜಸ್ವಿ ಸೂರ್ಯ ಹಾಗೂ ಅಣ್ಣಾಮಲೈ ವಿಮಾನದ ತುರ್ತು ಬಾಗಿಲನ್ನು ಏಕೆ ತೆರೆದರು? ಅವರು ಭಯೋತ್ಪಾದಕರೇ? ಎಂದೆಲ್ಲ ಅವರನ್ನು ಪ್ರತ್ಯೇಕವಾಗಿ ತನಿಖೆಗೆ ಒಳಪಡಿಸಲಾಯಿತು. ಆ ನಂತರ ಅವರ ಆಸನಗಳನ್ನು ಬದಲಾಯಿಸಿ ಬೇರೆಕಡೆ ಕೂರಿಸಲಾಯಿತು. ಹತ್ತು ಗಂಟೆಗೆ ಹೊರಡಬೇಕಿದ್ದ ವಿಮಾನ ಒಂದೂವರೆ ಗಂಟೆ ತಡವಾಗಿ ಹನ್ನೊಂದು ಮೂವತ್ತಕ್ಕೆ ಟೇಕ್ ಆಫ್ ಆಯಿತು’ ಎಂದು ಅಲ್ಲಿ ನಡೆದ ಘಟನೆಯನ್ನು ಬಿಡಿಬಿಡಿಯಾಗಿ ವಿವರಿಸಿದ್ದಾರೆ ಅರಸುಕುಮಾರ್.

ಅಮಿತ್ ಶಾ, ಗೃಹ ಸಚಿವರು

ಇದರ ಬಗ್ಗೆ ಇಂಡಿಗೋ ಸಂಸ್ಥೆಯು ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿತ್ತು. ದೂರಿನ ಆಧಾರದ ಮೇಲೆ, ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ತನಿಖೆ ನಡೆಸಿ, ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಇಬ್ಬರಿಂದಲೂ ಕ್ಷಮಾಪಣೆ ಪತ್ರ ಬರೆದು ಕೊಂಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶದ ನಂತರ ಇಬ್ಬರನ್ನೂ ಬಿಡುಗಡೆ ಮಾಡಲಾಗಿತ್ತು.

ತಮಿಳುನಾಡು ಮತ್ತು ಕರ್ನಾಟಕದ ಬಿ.ಜೆ.ಪಿ. ನಾಯಕರು ಮದ್ಯದ ಅಮಲಿನಲ್ಲಿ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿದ್ದನ್ನು ಕೇಂದ್ರ ಸರ್ಕಾರ ಮರೆತ್ತಿದ್ದರೂ ಇಂಡಿಗೋ ವಿಮಾನ ಸಂಸ್ಥೆ ನೀಡಿದ ದೂರಿನ ಮೇರೆಗೆ ಒಂದು ತಿಂಗಳ ನಂತರ ಪ್ರಕರಣ ವಿಚಾರಣೆಗೆ ಬಂದಿತ್ತು. ‘ಇಂತಹ ಒಂದು ಘಟನೆ ನಡೆದಿದ್ದು ನಿಜ; ಅದನ್ನು ನಾವು ವಿಚಾರಣೆ ಮಾಡುತ್ತಿದ್ದೇವೆ’ ಎಂದು ನಾಗರಿಕ ವಿಮಾನಯಾನ ಇಲಾಖೆ ತಿಳಿಸಬೇಕಾದ ಅನಿವಾರ್ಯತೆ ಇವರಿಂದ ಎದುರಾಯಿತು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜೋತಿರಾಧಿತ್ಯ ಸಿಂಧ್ಯ, ‘ವಿಮಾನದ ತುರ್ತು ಬಾಗಿಲನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹಾಗೂ ಸಂಸದ ತೇಜಸ್ವಿ ಸೂರ್ಯ ಕಳಚಿದ್ದನ್ನು ಒಪ್ಪಿಕೊಂಡಿದ್ದು ಅಲ್ಲದೆ, ಈಗಾಗಲೇ ಅವರು ಕ್ಷಮಾಪಣೆ ಪತ್ರ ಬರೆದು ಕೊಟ್ಟಿದ್ದಾರೆ ಎಂದು ಹೇಳಿ ಈ ಪ್ರಕರಣಕ್ಕೆ ಇತಿಶ್ರೀ ಹಾಡಿದರು.

ದೇಶ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಗೆ ಗೆಲುವಿನ ರಣತಂತ್ರ ರೂಪಿಸುವುದು, ಗಡಿ ಗ್ರಾಮಗಳಲ್ಲಿ ಭದ್ರತೆಯನ್ನು ಬಲಪಡಿಸುವುದು ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಮುಕ್ತಾಯದ ದಿನವಾದ ಇಂದು ಪ್ರಮುಖವಾಗಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಿನ್ನೆ ನವದೆಹಲಿಯಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಟ್ಟಾ ಮತ್ತು 350 ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.

ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ, ಮಿಜೋರಾಂ, ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇಂದಿನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ಮುಂಬರುವ 2024ರ ಲೋಕಸಭೆ ಚುನಾವಣೆಗೆ 400 ದಿನಗಳು ಬಾಕಿಯಿದ್ದು, ನಾವು ಈಗಲೇ ತಯಾರಿ ಮಾಡಿಕೊಳ್ಳಬೇಕಾಗಿದೆ. ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯಲು ನೂತನ ಪದಾಧಿಕಾರಿಗಳ ನೇಮಕ ಅಗತ್ಯವಾಗಿದೆ. ಯುವ ಮತದಾರರನ್ನು ಸೆಳೆಯುವುದು ಮತ್ತು ವಿಶೇಷವಾಗಿ ಗಡಿ ಗ್ರಾಮಗಳಲ್ಲಿ ಭದ್ರತೆ ಹಾಗೂ ಪಕ್ಷದ ಬಲವರ್ಧನೆಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸಲು ಬದ್ದರಾಗಿರಬೇಕು’ ಎಂದು ಹೇಳಿರುವುದಾಗಿ ಬಿಜೆಪಿಯ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ದೇಶ

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ಆಮ್ ಆದ್ಮಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕರು ಇಂದು ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಷಿಜೆನ್ ಸಿಲಿಂಡರ್ ನೊಂದಿಗೆ ಬಂದಿದ್ದರು.

ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಕಾರಣದಿಂದಾಗಿ ಅನೇಕ ಜನರು ಉಸಿರಾಟದ ತೊಂದರೆ ಮತ್ತು ಹೃದಯದ ತೊಂದರೆಗಳಿಂದ ಬಳಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ದೆಹಲಿ ವಿಧಾನಸಭೆ ನಡೆಯಿತು. ಆಗ ಬಿಜೆಪಿ ಶಾಸಕರು ಮುಖ ಕವಚದೊಂದಿಗೆ ಕೈಯಲ್ಲಿ ಸಣ್ಣ ಆಮ್ಲಜನಕ ಸಿಲಿಂಡರ್ ಹಿಡಿದು ವಿಧಾನಸಭೆಗೆ ಬಂದು ಕೋಲಾಹಲವನ್ನು ಎಬ್ಬಿಸಿದರು.

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದನ್ನುಖಂಡಿಸಲು ಸಿಲಿಂಡರ್ ಸಮೇತ ವಿಧಾನಸಭೆಗೆ ಬಂದಿರುವುದಾಗಿ ಅವರು ಹೇಳಿದರು.

ದೆಹಲಿಯ ಸಮೀಪವಿರುವ ಪಂಜಾಬ್ ರಾಜ್ಯದಲ್ಲಿ ಕೋಲುಗಳನ್ನು ಸುಡುವುದರಿಂದ ವಾಯುಮಾಲಿನ್ಯ ಪರಿಸ್ಥಿತಿಯು ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ನಡೆದುಕೊಂಡು ಹೋಗಲು ಸಹ ಸಾಧ್ಯವಿಲ್ಲ. ಕೋಲು ಸುಡುವುದರಿಂದ ವಾಯು ಗುಣಮಟ್ಟ ಸೂಚ್ಯಂಕ (AQI) ಮಟ್ಟಕ್ಕೆ ಏರಿಕೆಯಾಗಿದೆ.

ಚಳಿಗಾಲ ಆರಂಭವಾಗುತ್ತಿದ್ದಂತೆ ದೆಹಲಿಯ ಗಾಳಿಯ ಗುಣಮಟ್ಟ ಪ್ರತಿವರ್ಷವು ಅಪಾಯಕಾರಿ ಮಟ್ಟ ತಲುಪುತ್ತದೆ. ದೆಹಲಿಯ ಸುತ್ತಲಿನ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನದಲ್ಲಿ ಗೋಧಿ ಬೆಳೆದ ನಂತರ ಹುಲ್ಲುಗಳನ್ನು ಸುಡುವುದರಿಂದ, ಸಾರಿಗೆಯಿಂದ ಹೊರಸೂಸುವಿಕೆ, ಇತರ ಕೈಗಾರಿಕೆಗಳ ಹೊರಗಿನ ಕಲ್ಲಿದ್ದಲು ಸ್ಥಾವರಗಳು, ತೆರೆದ ಜಾಗದಲ್ಲಿ ಕಸವನ್ನು ಸುಡುವುದು ಮತ್ತು ಧೂಳಿನಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ.

ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವುದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬುದು ಬಿಜೆಪಿಯವರ ಆರೋಪವಾಗಿದೆ. ಅದಕ್ಕಾಗಿ ಈ ರೀತಿಯ ವಿನೂತನವಾದ, ಜನರ ಗಮನ ಸೆಳೆಯುವ ಗುರುತರವಾದ ಪ್ರತಿಭಟನೆಗಳನ್ನು ಬಿಜೆಪಿ ಪಕ್ಷವು ಮಾಡುತ್ತಿದೆ.

ಬೆಂಗಳೂರು ರಾಜಕೀಯ ರಾಜ್ಯ

ಮಂಜುಳಾ ರೆಡ್ಡಿ, ವರದಿಗಾರರು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾರವಾರದ ಅಂಕೋಲಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಗಂಗಾಧರ ನಾಗೇಶ ಭಟ್ಟರನ್ನು ಪರಿಗಣಿಸಬೇಕೆಂದು ದೈವಜ್ಞ ಬ್ರಾಹ್ಮಣ ಒಕ್ಕೂಟದ ಅಧ್ಯಕ್ಷ ಮಹೇಶ್ ಶೇಟ್ ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬಿಜೆಪಿಯನ್ನು ಒತ್ತಾಯಿಸಿದರು.

‘ಬೆಂಗಳೂರು ದೈವಜ್ಞ ಯುವಕ ಸಂಘದ ಅಧ್ಯಕ್ಷ ಮಹೇಶ್ ಶೇಟ್, ದೈವಜ್ಞ ಬ್ರಾಹ್ಮಣರು ತಮ್ಮ ಸಾಧನೆಯ ಮೂಲಕ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ. ದೈವಜ್ಞ ಬ್ರಾಹ್ಮಣ ಸಮಾಜದವರು ಕರ್ನಾಟಕ ರಾಜ್ಯದ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ನೆಲೆಸಿರುತ್ತಾರೆ. ಕೇಂದ್ರದ ಒಬಿಸಿ ಮತ್ತು ರಾಜ್ಯದ 2 ಎ ಪಂಗಡದಲ್ಲಿ ನಮ್ಮ ಸಮಾಜವನ್ನು ಸೇರಿಸಿರುತ್ತಾರೆ. ಇಲ್ಲಿಯವರಗೆ ಯಾವುದೇ ರಾಜಕೀಯ ಪಕ್ಷಗಳು ಹಾಗೂ ನಮ್ಮನ್ನು ಆಳಿದ ಸರ್ಕಾರಗಳು ದೈವಜ್ಞ ಸಮಾಜಕ್ಕೆ ಹೇಳಿಕೊಳ್ಳುವಂತಹ ಯಾವುದೇ ಸ್ಥಾನಮಾನಗಳನ್ನು ನೀಡಿಲ್ಲ.

ದೈವಜ್ಞ ಬ್ರಾಹ್ಮಣರು ಜನಸಂಘ ಕಾಲದಿಂದಲೂ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುತ್ತಾರೆ. ದೈವಜ್ಞ ಬ್ರಾಹ್ಮಣರು ಕಾರಣಿಭೂತರಾಗಿರುವುದು ರಾಜಕೀಯ ಪಕ್ಷಗಳಿಗೆ ಗೊತ್ತಿರುವ ವಿಚಾರವೇ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹಾಗೂ ಬೆಂಗಳೂರಿನ ಅನೇಕ ಮತ ಕ್ಷೇತ್ರಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿರುವ ದೈವಜ್ಞರು ಪ್ರಭಾವಶಾಲಿಗಳಾಗಿದ್ದಾರೆ. ಅದರ ಲಾಭವನ್ನು ಬಿಜೆಪಿ ಪಕ್ಷವು ಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯದ ಸಮಸ್ತ ದೈವಜ್ಞ ಬ್ರಾಹ್ಮಣ ಸಮಾಜದ ಬೇಡಿಕೆಯಾಗಿದೆ.

ಆದ್ದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೈವಜ್ಞ ಬ್ರಾಹ್ಮಣ ಸಮುದಾಯದವರಾದ ಗಂಗಾಧರ ಭಟ್ಟರನ್ನು ಉತ್ತರ ಕನ್ನಡ ಭಾಗದ ಕಾರವಾರ ಅಂಕೋಲಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸಲು ಒಕ್ಕೂಟವು ತೀರ್ಮಾನಿಸಿದೆ. ಮತ್ತು ಅವರಿಗೆ ತನು, ಮನ, ಧನ ನೀಡುವ ನಿರ್ಧಾರವನ್ನೂ ತೆಗೆದುಕೊಂಡಿದೆ. ಅದಕ್ಕೆ ಬಿಜೆಪಿ ಪಕ್ಷವು ಸಂಪೂರ್ಣ ಸಹಕಾರ ಮತ್ತು ಬೆಂಬಲವನ್ನು ನೀಡಬೇಕೆಂದು ಕರ್ನಾಟಕ ರಾಜ್ಯದ ಸಮಸ್ತ ದೈವಜ್ಞ ಬ್ರಾಹ್ಮಣ ಸಮಾಜದ ಒಕ್ಕೂಟವು ಆಗ್ರಹಿಸುತ್ತಿದೆ’ ಎಂದು ಪತ್ರಿಕಾ ಗೋಷ್ಠಿಯಲ್ಲಿ ದೈವಜ್ಞ ಬ್ರಾಹ್ಮಣ ಒಕ್ಕೂಟದ ಅಧ್ಯಕ್ಷ ಮಹೇಶ್ ಶೇಟ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉದಯ ರಾಯಕಾರ್, ಮೋಹನ್ ಪಲಕರ್, ಪ್ರೇಮ ಮೂರ್ತಿ, ವಿವೇಕಾನಂದ ಬೈಕೇನಿಕರ್ ಮುಂತಾದವರು ಇದ್ದರು. 

ದೇಶ ರಾಜಕೀಯ

ಡಿ.ಸಿ.ಪ್ರಕಾಶ್, ಸಂಪಾದಕರು

ತಮಿಳುನಾಡು: ತಮಿಳುನಾಡು ವಿಧಾನಸಭೆಯು ಸಾಮಾನ್ಯವಾಗಿ ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಪ್ರಾರಂಭಿಸುತ್ತದೆ. ಅದರಂತೆ ಇಂದು (ಜನವರಿ 9) ಬೆಳಗ್ಗೆ 10 ಗಂಟೆಗೆ ರಾಜ್ಯಪಾಲ ಆರ್.ಎನ್.ರವಿ ಭಾಷಣದೊಂದಿಗೆ ವರ್ಷದ ಮೊದಲ ಸಭೆ ಆರಂಭವಾಯಿತು.

ಸಭಾಧ್ಯಕ್ಷರು ಎಂ.ಅಪ್ಪಾವು ಹಾಗೂ ಕಾರ್ಯದರ್ಶಿ ಕೆ.ಶ್ರೀನಿವಾಸನ್ ಅವರು ರಾಜ್ಯಪಾಲರನ್ನು ಸ್ವಾಗತಿಸಿದರು. ಇದಾದ ಬಳಿಕ ರಾಜ್ಯಪಾಲರಿಗೆ ಪೊಲೀಸ್ ಪರೇಡ್ ಗೌರವ ಸಲ್ಲಿಸಲಾಯಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ರಾಜ್ಯಪಾಲರು ವಿಧಾನಸಭೆಯಲ್ಲಿ ಭಾಷಣ ಆರಂಭಿಸಿದರು. ಅವರು ಭಾಷಣ ಮಾಡುವಾಗ ಸಾಮಾಜಿಕ ನ್ಯಾಯ, ಸ್ವಾಭಿಮಾನ, ಸಮಗ್ರ ಅಭಿವೃದ್ಧಿ, ಸಮಾನತೆ, ಮಹಿಳಾ ಹಕ್ಕುಗಳು, ಧಾರ್ಮಿಕ ಸೌಹಾರ್ದತೆ, ವೈವಿಧ್ಯತೆ, ಪೆರಿಯಾರ್, ಅಂಬೇಡ್ಕರ್, ಕಾಮರಾಜ್, ಅಣ್ಣಾದುರೈ, ಎಂ.ಕರುಣಾನಿಧಿ, ದ್ರಾವಿಡ ಮಾದರಿ ಆಡಳಿತ, ತಮಿಳುನಾಡು ಶಾಂತಿ ಉದ್ಯಾನದಂತಹ ಪದಗಳನ್ನು ಹೇಳಲು ನಿರಾಕರಿಸಿದರು.

ಭಾಷಣ ಆರಂಭವಾಗುತ್ತಿದ್ದಂತೆ ಡಿಎಂಕೆ ಮಿತ್ರಪಕ್ಷಗಳು “ಗೊ ಬ್ಯಾಕ್ ಗವರ್ನರ್” ಎಂಬ ಘೋಷಣೆಗಳನ್ನು ಕೂಗಿದರು. ರಾಜ್ಯಪಾಲರ ಭಾಷಣದ ನಂತರ ಅದರ ತಮಿಳು ಆವೃತಿಯನ್ನು ಸಭಾಧ್ಯಕ್ಷರು ಎಂ.ಅಪ್ಪಾವು ವಾಚಿಸಿದರು. ಅಪ್ಪಾವು ಅದನ್ನು ಓದುತ್ತಿರುವಾಗ ಮದ್ಯ ಪ್ರವೇಶಿಸಿದ ಪ್ರತಿಪಕ್ಷಗಳು ‘ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಸರಿಯಾಗಿ ಓದಲಿಲ್ಲ’ ಎಂದು ಆರೋಪ ಮಾಡಿದವು.

ಅಪ್ಪಾವು ಮಾತು ಮುಗಿಸಿದ ಬಳಿಕ ಎದ್ದು ನಿಂತ ಮುಖ್ಯಮಂತ್ರಿ ಸ್ಟಾಲಿನ್, ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಸರಿಯಾಗಿ ಓದಲಿಲ್ಲ ಎಂದು ಅಪಾದಿಸಿದರು. ರಾಜ್ಯಪಾಲರು ಓದಿದ ಭಾಗಗಳನ್ನು ಟಿಪ್ಪಣಿಗಳಲ್ಲಿ ಸೇರಿಸಬಾರದು ಎಂಬ ಗೊತ್ತುವಳಿಯನ್ನು ಮುಖ್ಯಮಂತ್ರಿ ಸ್ಟಾಲಿನ್ ಮಂಡಿಸಿದರು. ಮುಖ್ಯಮಂತ್ರಿ ಗೊತ್ತುವಳಿಯನ್ನು ಸಭೆಯಲ್ಲಿ ಮಂಡಿಸುತ್ತಿರುವಾಗಲೇ ರಾಜ್ಯಪಾಲರು ವಿಧಾನಸಭೆಯಿಂದ ಹೊರನಡೆದರು. ರಾಜ್ಯಪಾಲರು ತೆರಳಿದನಂತರ ಮುಖ್ಯಮಂತ್ರಿಗಳು ಮಂಡಿಸಿದ ಗೊತ್ತುವಳಿಯನ್ನು ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ವಿಧಾನಸಭೆ ಕಲಾಪ ಮುಗಿದ ಬಳಿಕ ರಾಷ್ಟ್ರಗೀತೆ ಮೊಳಗಿದಾಗ ರಾಜ್ಯಪಾಲರು ಸದನದಲ್ಲಿ ಇರಲಿಲ್ಲ ಎಂಬುದು ಗಮನಾರ್ಹ. ಭಾಷಣವನ್ನು ಅನುಮೋದಿಸಿದ ನಂತರ ಅದನ್ನು ಬದಲಾಯಿಸಿ ಸದನದಲ್ಲಿ ಓದುವುದನ್ನು ಒಪ್ಪಲು ಸಾಧ್ಯವಿಲ್ಲ. ಇದು ಕಲಾಪದ ಸಂಸ್ಕೃತಿಯಲ್ಲ. ಐತಿಹಾಸಿಕವಾದ ದ್ರಾವಿಡ ಚಳುವಳಿಯನ್ನು ಕಟ್ಟಿ, ಬ್ರಾಹ್ಮಣ್ಯಕ್ಕೆ ಸೆಡ್ಡು ಹೊಡೆದು ‘ಸನಾತನ ರೋಗಕ್ಕೆ ದ್ರಾವಿಡವೇ ಮದ್ದು’ ಎಂಬ ನಂಬಿಕೆಯನ್ನು ದಕ್ಷಿಣ ಭಾರತೀಯರಿಗೆ ನೀಡಿರುವ ತಮಿಳುನಾಡು ವಿಧಾನ ಸಭೆಯಲ್ಲಿ ಸಾಮಾಜಿಕ ನ್ಯಾಯ, ಸ್ವಾಭಿಮಾನ, ಸಮಗ್ರ ಅಭಿವೃದ್ಧಿ, ಸಮಾನತೆ, ಮಹಿಳಾ ಹಕ್ಕುಗಳು, ಧಾರ್ಮಿಕ ಸೌಹಾರ್ದತೆ, ವೈವಿಧ್ಯತೆ, ಪೆರಿಯಾರ್, ಅಂಬೇಡ್ಕರ್, ಕಾಮರಾಜ್, ಅಣ್ಣಾದುರೈ, ಎಂ.ಕರುಣಾನಿಧಿ, ದ್ರಾವಿಡ ಮಾದರಿ ಆಡಳಿತ, ತಮಿಳುನಾಡು ಶಾಂತಿ ಉದ್ಯಾನದಂತಹ ಪದಗಳನ್ನು ಹೇಳಲು ರಾಜ್ಯಪಾಲರು ನಿರಾಕರಿಸಿದ್ದಾರೆ ಎಂದರೆ ಇವರು ಎಂತಹ ಉಗ್ರ ಸನಾತನವಾದಿಯಾಗಿರಬೇಕು ಎಂಬುದನ್ನು ನೀವೇ ಊಹಿಸಿಕೊಳ್ಳಿ.

‘ರಾಜ್ಯಪಾಲರು ಇಂತಹ ಹಲವಾರು ಸಮಸ್ಯೆಗಳನ್ನು ದಿನನಿತ್ಯ ಸೃಷ್ಟಿಸುತ್ತಿರುವುದು ನಿಜಕ್ಕೂ ನನಗೆ ನೋವು ತಂದಿದೆ’ ಎಂದು ವಿಧಾನಸಭೆ ಸಭಾಪತಿ ಅಪ್ಪಾವು ಹೇಳಿರುವುದು ಗಮನಾರ್ಹವಾದದ್ದು.

‘ರಾಜ್ಯಪಾಲ ಆರ್.ಎನ್.ರವಿ ಉಗ್ರ ಸನಾತನವಾದಿ, ದ್ರಾವಿಡ ವಿರೋಧಿ, ಬಿಜೆಪಿ ಏಜೆಂಟ್’ ಎಂದೆಲ್ಲ ತಮಿಳುನಾಡು ಜನರು ಹೇಳುವುದು ಸರಿಯಾಗಿಯೇ ಇದೆ ಎಂಬುದನ್ನು ಇಂದಿನ ನಡವಳಿಕೆ ನಮಗೆ ತೋರಿಸಿಕೊಟ್ಟಿದೆ.