ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Bomb Blast Archives » Dynamic Leader
October 23, 2024
Home Posts tagged Bomb Blast
ರಾಜ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ?

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.

ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ನಾಯಕರು ಈ ಬಗ್ಗೆ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ? ಎಂದು ಪ್ರಶ್ನಿಸಿದ್ದಾರೆ.

2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಎನ್.ಐ.ಎ, RAW ಗಳ ವೈಫಲ್ಯವಲ್ಲವೇ? ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಹಾಗೂ ಹಿಂದೊಮ್ಮೆ ಬಿಜೆಪಿ ಕಚೇರಿ ಮುಂದೆಯೇ ಬಾಂಬ್ ಸ್ಫೋಟವಾಗಿತ್ತು. ಆಗ ಬಿಜೆಪಿಯೇ ಅಧಿಕಾರದಲ್ಲಿದ್ದರು. ಅವರಂತೆಯೇ ಇದನ್ನು ನಾವು ರಾಜಕೀಯ ದೃಷ್ಟಿಯಿಂದ ನೋಡಿದೆವಾ? ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶ

ಹೈದರಾಬಾದ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಅಖಿಲ ಭಾರತ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಹೈದರಾಬಾದ್‌ನ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದರು. ಶುಕ್ರವಾರ ಬೆಂಗಳೂರಿನ ರಾಮೇಶ್ವರಂ ಕೆಫೆ ಶಾಖೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ಸಾಂತ್ವನ ಹೇಳುವ ಪ್ರಯತ್ನವಾಗಿ ಅವರು ಅಲ್ಲಿಗೆ ಭೇಟಿ ನೀಡಿದ್ದರು.

ಸ್ಫೋಟವನ್ನು ಖಂಡಿಸಿರುವ ಅಸಾದುದ್ದೀನ್ ಓವೈಸಿ, ‘ಈ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಹೇಳಿದ್ದಾರೆ. ಕೆಫೆಗೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಸ್ಥಳ ರಾಮೇಶ್ವರಂ ಹೆಸರನ್ನು ಇಡಲಾಗಿದೆ ಎಂದು ಅವರು ಸ್ಮರಿಸಿದರು.

“ಹೈದರಾಬಾದ್‌ನ ರಾಮೇಶ್ವರಂ ಕೆಫೆಗೆ ಒಗ್ಗಟ್ಟನ್ನು ಪ್ರದರ್ಶಿಸಿದ್ದೇವೆ. ಆಹಾರವು ರುಚಿಯಾಗಿತ್ತು ಮತ್ತು ಕೆಫೆಗೆ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಸ್ಥಳದ ಹೆಸರನ್ನು ಇಡಲಾಗಿದೆ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯವಾಗಿದೆ. ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿಯಾಗಿದೆ” ಎಂದು ಹೇಳಿದ್ದಾರೆ. ಮತ್ತು ಅವರು ಕೆಫೆಗೆ ಭೇಟಿ ನೀಡಿದ ಕೆಲವು ಫೋಟೋಗಳನ್ನು ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಹಂಚಿಕೊಂಡಿದ್ದಾರೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಬೆಂಗಳೂರಿನ ಜನಪ್ರಿಯ ‘ರಾಮೇಶ್ವರಂ ಕೆಫೆ’ಯಲ್ಲಿ ನೆನ್ನೆ ನಡೆದ ಬಾಂಬ್ ಸ್ಫೋಟದ ಶಂಕಿತ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು  ಇಂದು ಬಿಡುಗಡೆಗೊಳಿಸಿದ್ದಾರೆ.

ಬೆಂಗಳೂರಿನ ‘ವೈಟ್ ಫೀಲ್ಡ್’ ಪ್ರದೇಶದಲ್ಲಿರುವ ‘ರಾಮೇಶ್ವರಂ ಕೆಫೆ’ಯಲ್ಲಿ ನಿನ್ನೆ ಮಧ್ಯಾಹ್ನ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ 3 ಮಹಿಳೆಯರು ಸೇರಿದಂತೆ 10 ಮಂದಿ ಗಾಯಗೊಂಡಿದ್ದರು. ಮಾಹಿತಿ ತಿಳಿದ ಡಿಜಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಅಲ್ಲದೆ ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನೂ ಪರಿಶೀಲಿಸಲಾಯಿತು. ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು 4 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಪೊಲೀಸರು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಇಂದು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಸ್ಫೋಟಕ್ಕೆ ಕಾರಣವಾದ ಶಂಕಿತ ವ್ಯಕ್ತಿಯ ಫೋಟೋವನ್ನು ಸೇರಿಸಲಾಗಿದೆ.  ಮುಖಕ್ಕೆ ಮಾಸ್ಕ್ ಹಾಕಿಕೊಂಡು, ಕನ್ನಡಕ, ಟೋಪಿ ಹಾಕಿಕೊಂಡು ತಿರುಗಾಡುತ್ತಿರುವ ಮತ್ತು ಸ್ಫೋಟಕ್ಕೂ ಮುನ್ನ ಹೊಟೇಲ್‌ಗೆ ತೆರಳುವ ವೇಳೆ ಬ್ಯಾಗ್‌ ಇಟ್ಟು ಅಲ್ಲಿಂದ ತೆರಳುವ ದೃಶ್ಯಗಳು ಅದರಲ್ಲಿ ದಾಖಲಾಗಿರುತ್ತವೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಏತನ್ಮಧ್ಯೆ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೃಢೀಕರಿಸದ ವರದಿಗಳು ರಾರಾಜಿಸುತ್ತಿವೆ. ಆದರೆ, ಪೊಲೀಸರು ಇದನ್ನು ಖಚಿತಪಡಿಸಿಲ್ಲ.

ಕ್ರೈಂ ರಿಪೋರ್ಟ್ಸ್ ದೇಶ

ತಿರುವನಂತಪುರಂ: ಕಳೆದ ಅಕ್ಟೋಬರ್ 29 ರಂದು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿ ಪ್ರದೇಶದಲ್ಲಿ ಕ್ರಿಶ್ಚಿಯನ್ ಧರ್ಮದ ಸಭೆಯಲ್ಲಿ ದಿಢೀರ್ ಬಾಂಬ್ ಸ್ಫೋಟ ಸಂಭವಿಸಿತು. ಇದರಲ್ಲಿ 3 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಹಿನ್ನಲೆಯಲ್ಲಿ, ಸ್ಫೋಟದ ತನಿಖೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎನ್‌ಐಎ ಮತ್ತು ರಾಷ್ಟ್ರೀಯ ಭದ್ರತಾ ಪಡೆಗಳಿಗೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುವಂತೆ ಆದೇಶಿಸಿದರು.

ಸ್ಫೋಟ ನಡೆದ ಕೆಲವು ಗಂಟೆಗಳ ನಂತರ ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ, ಕ್ರಿಶ್ಚಿಯನ್ ಧರ್ಮದ ಸಭೆಯಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಹೇಳಿಕೊಂಡು, ಸ್ಫೋಟಕ್ಕೆ ಹೊಣೆ ಹೊತ್ತು, ತ್ರಿಶೂರ್ ಜಿಲ್ಲೆಯ ಕೊಡಕ್ಕರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಕೇರಳ ರಾಜ್ಯದ ಕಲಮಸ್ಸೇರಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯತ್ತೂರಿನ ಪ್ರವೀಣ್ ಪ್ರದೀಪ್ ಎಂಬ ಯುವಕ ಇಂದು ಮೃತಪಟ್ಟಿದ್ದಾನೆ. ಇದರೊಂದಿಗೆ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸ್ಫೋಟದಲ್ಲಿ ಗಾಯಗೊಂಡ 11 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 6 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶ

ಕೊಯಮತ್ತೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಮತ್ತೊಬ್ಬನನ್ನು ಬಂಧಿಸಿದ್ದಾರೆ!

ಕಳೆದ ವರ್ಷ, ಕೊಯಮತ್ತೂರು ಟೌನ್ ಹಾಲ್ ಪ್ರದೇಶದ ಕೋಟೆ ಈಶ್ವರನ್ ದೇವಾಲಯದ ಮುಂಭಾಗದಲ್ಲಿ ನಡೆದ ಕಾರ್ ಸ್ಫೋಟದಲ್ಲಿ ಆರೋಪಿ ಜಮೇಶಾ ಮುಬಿನ್ ಸುಟ್ಟು ಕರಕಲಾಗಿದ್ದರು. ಈ ಬಗ್ಗೆ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 13 ಮಂದಿಯನ್ನು ಬಂಧಿಸಿದ್ದಾರೆ.

ಈ ಹಿನ್ನಲೆಯಲ್ಲಿ, ಈ ಪ್ರಕರಣದಲ್ಲಿ 14ನೇ ವ್ಯಕ್ತಿಯಾಗಿ ಪೋತ್ತನೂರು ತಿರುಮರೈ ನಗರದ ತಾಹಾ ನಸೀರ್ (27) ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಇವರು ಕಾರ್ ಸರ್ವಿಸ್ ಕಂಪನಿಯಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದರು.

ಕಾರ್ ಸ್ಪೋಟ ಅಪಘಾತದ ಬಗ್ಗೆ ನಸೀರ್‌ಗೆ ಮೊದಲೇ ಮಾಹಿತಿ ಇತ್ತು ಎಂಬ ಶಂಕೆಯ ಆಧಾರದ ಮೇಲೆ, ನಿನ್ನೆ ನಾಸೀರ್ ನನ್ನು ಬಂಧಿಸಿದ್ದ ರಾಷ್ಟ್ರೀಯ ಗುಪ್ತಚರ ದಳದ ಅಧಿಕಾರಿಗಳು ಇಂದು ಚೆನ್ನೈನ ಪೂನ್ದಮಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಹಾಕಿದ್ದಾರೆ.