ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Caste Census Archives » Dynamic Leader
October 17, 2024
Home Posts tagged Caste Census
ರಾಜಕೀಯ

ಜಾತಿವಾರು ಜನಗಣತಿ ಪರವೋ ಅಥವಾ ವಿರೋಧವೋ ಎಂಬುದನ್ನು ಆರ್‌ಎಸ್‌ಎಸ್ ಸ್ಪಷ್ಟಪಡಿಸಬೇಕು ಎಂದು ಖರ್ಗೆ ಹೇಳಿದ್ದಾರೆ.

ಜಾತಿವಾರು ಜನಗಣತಿ ಕುರಿತು ಬಿಜೆಪಿಯ ಮಾತೃ ಸಂಸ್ಥೆ ಆರ್‌ಎಸ್‌ಎಸ್‌ ಪ್ರತಿಕ್ರಿಯಿಸಿದೆ. ಕಲ್ಯಾಣ ಕಾರ್ಯಕ್ರಮಗಳಿಗೆ ಜಾತಿವಾರು ಜನಗಣತಿ ಉಪಯುಕ್ತವಾಗಿರುತ್ತದೆ. ಆದರೆ, ಅದನ್ನು ಚುನಾವಣಾ ಲಾಭಕ್ಕಾಗಿ ಬಳಸಬಾರದು ಎಂದು ಎಚ್ಚರಿಕೆ ನೀಡಿದೆ.

ಕೇರಳದ ಪಾಲಕ್ಕಾಡ್‌ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಆರ್‌ಎಸ್‌ಎಸ್ ಸಂಘಟನೆಯ ಮುಖ್ಯ ವಕ್ತಾರ ಸುನೀಲ್ ಅಂಬೇಕರ್, “ಜಾತಿವಾರು ಜನಗಣತಿ ಎಂಬುದು ಬಹಳ ಸೂಕ್ಷ್ಮವಾದ ವಿಚಾರ. ಅದು ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಗೆ ಬಹಳ ಮುಖ್ಯವಾದದ್ದು. ಅದನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು.

ಕೆಲವೊಮ್ಮೆ ಸರ್ಕಾರಕ್ಕೆ ದತ್ತಾಂಶಗಳು (Data) ಬೇಕಾಗುತ್ತದೆ. ಹಿಂದಿನ ದಿನಗಳಲ್ಲಿ ಇದೇ ರೀತಿಯ ಪ್ರಯತ್ನಗಳನ್ನು ನಡೆಸಲಾಯಿತು. ಆದರೆ ಜಾತಿ ಗಣತಿಯು ಸಮುದಾಯಗಳು ಮತ್ತು ಜಾತಿಗಳ ಕಲ್ಯಾಣದ ಬಗ್ಗೆ ಮಾತ್ರ ಮಾತನಾಡಬೇಕು. ಇದನ್ನು ರಾಜಕೀಯವಾಗಿ ಅಥವಾ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಬಾರದು” ಎಂದು ಹೇಳಿದರು.

ಈ ಕುರಿತು, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ‘ಎಕ್ಸ್’ ಸೈಟ್‌ನಲ್ಲಿ, “ಜಾತಿವಾರು ಜನಗಣತಿ ಪರವೋ ಅಥವಾ ವಿರೋಧವೋ ಎಂಬುದನ್ನು ಆರ್‌ಎಸ್‌ಎಸ್ ಜನತೆಗೆ ಸ್ಪಷ್ಟಪಡಿಸಬೇಕು.

ದೇಶದ ಸಂವಿಧಾನದ ಬದಲು ಮನುಸ್ಮೃತಿಯನ್ನು ಪ್ರತಿಪಾದಿಸುವ ಸಂಘ ಪರಿವಾರ ದಲಿತರು, ಆದಿವಾಸಿಗಳು, ಹಿಂದುಳಿದ ಮತ್ತು ಬಡ ಸಮುದಾಯದ ಭಾಗವಹಿಸುವಿಕೆಯ ಬಗ್ಗೆ ಕಾಳಜಿ ವಹಿಸುತ್ತದೆಯೇ ಅಥವಾ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಲೇಖನ

ಡಿ.ಸಿ.ಪ್ರಕಾಶ್

ಮತದಾರರು ಈ ಬಾರಿ ಸರ್ಕಾರ ರಚಿಸುವಷ್ಟು ಬಹುಮತವನ್ನು ಬಿಜೆಪಿಗೆ ನೀಡಲಿಲ್ಲ. ಕೆಲವು ಪಕ್ಷಗಳ ಬೆಂಬಲದೊಂದಿಗೆ ನರೇಂದ್ರ ಮೋದಿ ಅವರು ಪ್ರಧಾನಿ ಕುರ್ಚಿಯ ಮೇಲೆ ಕುಳಿತಿದ್ದಾರೆ. ಈ ಪಕ್ಷಗಳು ಮೋದಿ ಹೇಳಿದ್ದನೆಲ್ಲ ಹಾಗೆಯೇ ಒಪ್ಪಿಕೊಳ್ಳುವ ಪಕ್ಷಗಳಲ್ಲ. ಬದಲಾಗಿ, ಬಿಜೆಪಿಯ ವಿಚಾರಗಳಿಗೆ ವಿರುದ್ಧವಾಗಿರುವ ಮತ್ತು ಅದನ್ನು ವಿರೋಧಿಸುವ ಪಕ್ಷಗಳಾಗಿವೆ.

ಇಂತಹ ‘ನೀತಿ ವೈರಿ’ಗಳ ಕರುಣೆಯಿಂದಲೇ ನರೇಂದ್ರ ಮೋದಿಯವರು ಪ್ರಧಾನಿ ಕುರ್ಚಿಯ ಮೇಲೆ ಕುಳಿತಿದ್ದಾರೆ. ಜಾತಿವಾರು ಜನಗಣತಿಯ ತತ್ವವು ಭಾರತದಾದ್ಯಂತ ಬೇಡಿಕೆಯಾಗಿ ಪ್ರತಿಧ್ವನಿಸುತ್ತಿದೆ. ಇದು ಕಾಂಗ್ರೆಸ್, ಡಿಎಂಕೆ ಸೇರಿದಂತೆ ‘ಇಂಡಿಯಾ’ ಮೈತ್ರಿ ಪಕ್ಷಗಳ ಬೇಡಿಕೆ ಮಾತ್ರವಲ್ಲ, ಬಹುಮತದ ಪಕ್ಷಗಳ ಬೇಡಿಕೆಯೂ ಆಗಿದೆ. “ಪ್ರಧಾನಿ ಮೋದಿಯವರು ಜಾತಿವಾರು ಜನಗಣತಿ ನಿಲ್ಲಿಸುವ ಕನಸು ಕಾಣುತ್ತಿದ್ದಾರೆ. ಆದರೆ ಜಾತಿವಾರು ಜನಗಣತಿಯನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ.

ಶೀಘ್ರದಲ್ಲೇ 90 ಪ್ರತಿಶತ ಭಾರತೀಯರು ಜಾತಿ ಆಧಾರಿತ ಜನಗಣತಿಯನ್ನು ಬೆಂಬಲಿಸಿ ಹೋರಾಡುತ್ತಾರೆ. ಪ್ರಸ್ತುತ ಕೇಂದ್ರ ಸರ್ಕಾರವು ಜಾತಿವಾರು ಜನಗಣತಿಗೆ ಆದೇಶಿಸದಿದ್ದರೆ, ನರೇಂದ್ರ ಮೋದಿಯವರು ಮುಂದಿನ ಪ್ರಧಾನಿ ಮಾಡುವುದನ್ನು ನೋಡುತ್ತಾರೆ” ಎಂದು ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ. ಇದು ಬಿಜೆಪಿಯ ಮೈತಿ ಪಕ್ಷಗಳಿಗೂ ನಡುಕವನ್ನು ಹುಟ್ಟಿಸಿದೆ.

ಬಿಜೆಪಿಯ ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ ಕೂಡ ಜಾತಿವಾರು ಜನಗಣತಿಗೆ ಬೆಂಬಲ ವ್ಯಕ್ತಪಡಿಸಿದೆ. “ದೇಶಾದ್ಯಂತ ಜಾತಿವಾರು ಜನಗಣತಿ ನಡೆಸುವುದು ಅಗತ್ಯವಾಗಿದೆ” ಎಂದು ಲೋಕ ಜನಶಕ್ತಿ ಪಕ್ಷದ ನಾಯಕ ಹಾಗೂ ಪ್ರಧಾನಿ ಮೋದಿ ಸಂಪುಟದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿರುವ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. “ಸರ್ಕಾರವು ಜಾರಿಗೊಳಿಸುವ ಯೋಜನೆಗಳು ವಿವಿಧ ವರ್ಗಗಳನ್ನು ಆಧರಿಸಿವೆ.

ಸರ್ಕಾರದ ಯೋಜನೆಗಳು ಸರಿಯಾದ ಜನರಿಗೆ ತಲುಪಲು ಜಾತಿವಾರು ಜನಗಣತಿಯ ಅಗತ್ಯವಿದೆ” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. “ಕೇಂದ್ರ ಸರ್ಕಾರವು ದೇಶಾದ್ಯಂತ ಜಾತಿವಾರು ಜನಗಣತಿ ನಡೆಸಬೇಕು” ಎಂದು ಲೋಕ ಜನಶಕ್ತಿ ಪಕ್ಷ ಸಂಕಲ್ಪ ಮಾಡಿದೆ. ಜನರನ್ನು ಸುಧಾರಿಸಲು ಸರ್ಕಾರಕ್ಕೆ ಜಾತಿ ಆಧಾರಿತ ಜನಸಂಖ್ಯೆಯ ಮಾಹಿತಿ ಅಗತ್ಯವಿದೆ” ಎಂಬುದನ್ನು ಚಿರಾಗ್ ಪಾಸ್ವಾನ್ ಒತ್ತಿ ಹೇಳುತ್ತಿದ್ದಾರೆ.

ಮೀಸಲಾತಿ ಎಂದು ಕರೆಯಲ್ಪಡುವ ಸಾಮಾಜಿಕ ನ್ಯಾಯವನ್ನು ತೊಡೆದುಹಾಕಲು ನೇರ ನೇಮಕಾತಿ ವ್ಯವಸ್ಥೆಯನ್ನು ಪರಿಚಯಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಿತು. ಡಿಎಂಕೆ, ಶಿವಸೇನೆ (ಉದ್ಧವ್ ಠಾಕ್ರೆ) ಸೇರಿದಂತೆ ಪಕ್ಷಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಅದನ್ನು ಹಿಂಪಡೆಯಿತು. ಅದರ ಮಿತ್ರ ಪಕ್ಷ ಲೋಕ ಜನಶಕ್ತಿ ಕೂಡ ಇದನ್ನು ವಿರೋಧಿಸಿತ್ತು. ‘ಇದರಿಂದ ನನಗೆ ತುಂಬಾ ಚಿಂತೆಯಾಗಿದೆ’ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದರು. ಮೈತ್ರಿ ಪಕ್ಷಗಳೇ ವಿರೋಧಿಸಿದಾಗ ಬಿಜೆಪಿಗೆ ಬೇರೆ ದಾರಿಯಿಲ್ಲದೆ ಹಿಂದಕ್ಕೆ ಸರಿಯಿತು.

ವಕ್ಫ್ ಬೋರ್ಡ್ ಕಾಯ್ದೆಯ ವಿಷಯದಲ್ಲೂ ಇದೇ ಆಗಿದೆ. ವಕ್ಫ್ ಬೋರ್ಡ್ ಆಕ್ಟ್-1995 ಅನ್ನು ವಕ್ಫ್ (ತಿದ್ದುಪಡಿ) ಮಸೂದೆ, 2024 ಎಂದು ಮರುನಾಮಕರಣ ಮಾಡಿದ್ದಾರೆ. ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯ ಪ್ರಕಾರ, ಆಸ್ತಿಗಳನ್ನು ನಿರ್ಧರಿಸುವ ವಕ್ಫ್ ಮಂಡಳಿಯ ಅಧಿಕಾರವನ್ನು ಬದಲಾಯಿಸಲಾಗಿದೆ. ಈ ಕಾಯಿದೆಯ ಸೆಕ್ಷನ್ 40 ಅನ್ನು ತೆಗೆದು ಹಾಕಲಾಗಿದೆ.

ಕೇಂದ್ರೀಯ ವಕ್ಫ್ ಕೌನ್ಸಿಲ್ ಎಂಬುದನ್ನು ರಚಿಸಿದ್ದಾರೆ. ಅದರಲ್ಲಿ ಮುಸ್ಲಿಮರು ಮಾತ್ರವಲ್ಲದೆ ಮುಸ್ಲಿಮೇತರರೂ ಇರುತ್ತಾರೆ. ವಕ್ಫ್ ಬೋರ್ಡ್ ಜಮೀನುಗಳನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಬೇಕು. ಈ ಜಾಗ ವಕ್ಫ್ ಆಗಿದೆಯೇ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿಗಳು ನಿರ್ಧರಿಸುತ್ತಾರಂತೆ.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತ ಸಮುದಾಯಗಳಿಗೆ ತಮ್ಮ ಆಸ್ತಿಯನ್ನು ನಿರ್ವಹಿಸಲು ಅಧಿಕಾರ ನೀಡುತ್ತದೆ. ಅದನ್ನೇ ತೆಗೆದುಕೊಂಡು ಹೋಗಿ ಜಿಲ್ಲಾಧಿಕಾರಿಗಳಿಗೆ ನೀಡುವ ಕಾನೂನು ಬಾಹಿರ ಕಾನೂನು ಇದಾಗಿದೆ. ಇದಕ್ಕೆ ‘ಇಂಡಿಯಾ’ ಮೈತ್ರಿ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಮೈತ್ರಿಕೂಟದ ಭಾಗವಾಗಿರುವ, ಮೋದಿ ಸ್ಥಾನವನ್ನು ಉಳಿಸುವ ಇಬ್ಬರು ಪ್ರಮುಖರಲ್ಲಿ ಒಬ್ಬರಾಗಿರುವ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ.

ಇಬ್ಬರಲ್ಲಿ ಮತ್ತೊಬ್ಬರಾದ ನಿತೀಶ್ ಕುಮಾರ್ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. “ಈ ಕಾನೂನು ಮುಸ್ಲಿಮರಿಗೆ ಭಯ ಹುಟ್ಟಿಸುತ್ತದೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರದಲ್ಲಿ ಶೇ.18ರಷ್ಟು ಮುಸ್ಲಿಮರಿದ್ದಾರೆ. ಅದಕ್ಕಾಗಿಯೇ ನಿತೀಶ್ ಭಯ ಪಡುತ್ತಿದ್ದಾರೆ. ನಿತೀಶ್ ಕುಮಾರ್ ಅವರ ಪಕ್ಷವು ಆರಂಭದಲ್ಲಿ ವಕ್ಫ್ ಕಾಯ್ದೆಯನ್ನು ಬೆಂಬಲಿಸಿತ್ತು. ಆ ಪಕ್ಷದ ಸಂಸದ ರಾಜೀವ್ ರಂಜನ್ ಸಂಸತ್ತಿನಲ್ಲಿ ಬೆಂಬಲಿಸಿ ಮಾತನಾಡಿದರು. ಇದು ಬಿಹಾರ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿತು.

ನಿತೀಶ್ ಸಂಪುಟದಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ಮೊಹದ್ ಜಮಾ ಖಾನ್ (Mohd Zama Khan) ತಮ್ಮದೇ ಪಕ್ಷವನ್ನು ವಿರೋಧಿಸಿದರು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಿಹಾರದ ಜಲಸಂಪನ್ಮೂಲ ಸಚಿವ ವಿಜಯಕುಮಾರ್ ಚೌಧರಿ ಕೂಡ ವಕ್ಫ್ ಕಾಯ್ದೆ ವಿರುದ್ಧ ವಾಗ್ದಾಳಿ ನಡೆಸಿದರು.

ನಿತೀಶ್ ಪಕ್ಷದ ಕೆಲ ಶಾಸಕರೂ ಕೈಜೋಡಿಸಿದರು. ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳದ ಕಾರ್ಯಾಧ್ಯಕ್ಷ ಸಂಜಯ್ ಝಾ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮೊಹದ್ ಜಮಾ ಖಾನ್ ಅವರು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಈ ರೀತಿ ಗೊಂದಲದ ಉತ್ತುಂಗದಲ್ಲಿದೆ ಕೇಂದ್ರ ಬಿಜೆಪಿ ಸಮ್ಮಿಶ್ರ ಸರ್ಕಾರ.

ದೇಶ

“ದೇಶದ ಸಂವಿಧಾನ ಶೇ.10ರಷ್ಟು ಮಂದಿಗೆ ಮಾತ್ರವಲ್ಲ. ಜಾತಿವಾರು ಸಮೀಕ್ಷೆ ನಡೆಸದೆ ಭಾರತದ ವಾಸ್ತವದಲ್ಲಿ ನೀತಿಗಳನ್ನು ರೂಪಿಸಲು ಸಾಧ್ಯವಿಲ್ಲ” – ರಾಹುಲ್ ಗಾಂಧಿ

ಪ್ರಯಾಗ್‌ರಾಜ್‌,
ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸಬೇಕು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸುತ್ತ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಿನ್ನೆ ನಡೆದ ಸಾಂವಿಧಾನಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಗ್ಗೆ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

“ದೇಶದ ಶೇ.90ರಷ್ಟು ಜನ ವ್ಯವಸ್ಥೆಯಿಂದ ಹೊರಗಿದ್ದಾರೆ. ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿರುವ ಅವರಿಗೂ ವ್ಯವಸ್ಥೆಗೂ ಯಾವುದೇ ಸಂಬಂಧವಿಲ್ಲ. ಅದಕ್ಕಾಗಿಯೇ ನಾವು ಜಾತಿವಾರು ಜನಗಣತಿಗೆ ಬೇಡಿಕೆಯನ್ನು ಎತ್ತುತ್ತಿದ್ದೇವೆ. ದೇಶದ ಸಂವಿಧಾನ ಶೇ.10ರಷ್ಟು ಮಂದಿಗೆ ಮಾತ್ರವಲ್ಲ. ಜಾತಿವಾರು ಸಮೀಕ್ಷೆ ನಡೆಸದೆ ಭಾರತದ ವಾಸ್ತವದಲ್ಲಿ ನೀತಿಗಳನ್ನು ರೂಪಿಸಲು ಸಾಧ್ಯವಿಲ್ಲ.

ಸಂವಿಧಾನದಂತೆಯೇ ಜಾತಿವಾರು ಎಣಿಕೆ ಕೂಡ ಕಾಂಗ್ರೆಸ್‌ನ ನೀತಿಯ ಚೌಕಟ್ಟಾಗಿಯೂ, ಮಾರ್ಗದರ್ಶಿಯೂ ಆಗಿದೆ. ಈ ಜಾತಿವಾರು ಜನಗಣತಿ ಬೇಡಿಕೆಯಿಂದ ನಾವು ಸಂವಿಧಾನವನ್ನು ರಕ್ಷಿಸಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್

ಡಿಸೆಂಬರ್ 6, 1992 ರಂದು ಕರಸೇವೆ ಎಂಬ ಹೆಸರಿನಲ್ಲಿ ಸಂಘಟಿಸಲಾದ ಗುಂಪು ಬಾಬರಿ ಮಸೀದಿಯನ್ನು ಕೆಡವಿ ನೆಲಸಮಗೊಳಿಸಿತು. ಡಿಸೆಂಬರ್ 6, ಜಾತ್ಯತೀತತೆಯ ಮೇಲೆ ಗಡಪಾರೆ ಇಳಿಸಿದ ದಿನ.

ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಅಶೋಕ್ ಸಿಂಘಾಲ್, ಉಮಾಭಾರತಿ ಮತ್ತಿತರರು ಆರೋಪಿಗಳಾಗಿದ್ದರು. ಆದರೆ ಒಟ್ಟಾರೆ ಎಲ್ಲರೂ ಖುಲಾಸೆಗೊಂಡರು. ಸಿಬಿಐ ಇವರ ಮೇಲಿನ ಆರೋಪಗಳನ್ನು ಸಾಬೀತುಪಡಿಸಿಲ್ಲ ಎಂದು ನ್ಯಾಯಾಲಯ ಹೇಳಿತು.

ಬಾಬರಿ ಮಸೀದಿಯನ್ನು 1528-1530ರ ಅವಧಿಯಲ್ಲಿ ಬಾಬರ್‌ನ ಕಮಾಂಡರ್ ಮೀರ್ ಬಾಕಿ ಅವರಿಂದ ನಿರ್ಮಿಸಲಾಯಿತು. ಆದರೆ, ಮಸೀದಿಯ ಜಾಗ ಶ್ರೀರಾಮನ ಜನ್ಮಸ್ಥಳ ಎಂದು ಸಂಘಪರಿವಾರದಿಂದ ಸುಳ್ಳು ಪ್ರಚಾರವನ್ನು ಬಹಳ ವ್ಯವಸ್ಥಿತವಾಗಿ ಮಾಡಲಾಯಿತು. ಆದರೂ ಕೊನೆಯವರೆಗೆ ಇದಕ್ಕೆ ಯಾವುದೇ ಪುರಾವೆಗಳನ್ನು ನೀಡಲು ಅವರಿಂದ ಸಾಧ್ಯವಾಗಲಿಲ್ಲ.

ಎಲ್.ಕೆ.ಅಡ್ವಾಣಿಯವರು ಈ ಕಥೆಯನ್ನು ಹರಡುತ್ತಲೇ ರಥಯಾತ್ರೆಯನ್ನೂ ನಡೆಸಿದರು. ವಿ.ಪಿ.ಸಿಂಗ್ ನೇತೃತ್ವದ ರಾಷ್ಟ್ರೀಯ ರಂಗದ ಆಡಳಿತದಲ್ಲಿ ಮಂಡಲ್ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಘೋಷಿಸಿದ್ದೇ ಆರ್‌ಎಸ್‌ಎಸ್ ಪರಿವಾರ ಅಯೋಧ್ಯೆ ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಕಾರಣ.

ಮಂಡಲ್-ಕಮಂಡಲ್ ಎಂಬ ಚರ್ಚೆಗಳು ನಡೆದವು. ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬಾರದು ಎಂಬುದು ಆರ್‌ಎಸ್‌ಎಸ್ ಪರಿವಾರದ ಚಿಂತನೆ. ಅದಕ್ಕಾಗಿಯೇ ಅವರು ರಾಮಮಂದಿರ ಸಮಸ್ಯೆಯನ್ನು ಕೈಗೆತ್ತಿಕೊಂಡರು.

ನರೇಂದ್ರ ಮೋದಿ ಆಡಳಿತದಲ್ಲಿ ಅಯೋಧ್ಯೆ ನಿವೇಶನಕ್ಕೆ ಸಂಬಂಧಿಸಿದ ಪ್ರಕರಣವನ್ನು ಸಹ ಜಾಣ್ಮೆಯಿಂದ ಮುಚ್ಚಿ ಹಾಕಲಾಯಿತು ಮತ್ತು ಮಸೀದಿ ಕೆಡವಿದ ಸ್ಥಳದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ರಾಮನ ಮಂದಿರವನ್ನೂ ನಿರ್ಮಿಸಲಾಯಿತು. ಅಯೋಧ್ಯೆ ವಿಚಾರದಲ್ಲಿ ನ್ಯಾಯಾಲಯ ನೀಡಿದ್ದು ತೀರ್ಪು; ನ್ಯಾಯವಲ್ಲ! ಎಂಬುದು ಎಲ್ಲರಿಗೂ ತಿಳಿದ ವಿಷಯ.

ಇದೀಗ ದೇಶಾದ್ಯಂತ ಜಾತಿವಾರು ಜನಗಣತಿ ನಡೆಯಬೇಕೆಂಬ ಬೇಡಿಕೆ ಮುನ್ನೆಲೆಗೆ ಬಂದಿದೆ. ಮತ್ತೊಂದೆಡೆ, ರಾಮಮಂದಿರ ನಿರ್ಮಾಣವನ್ನು ಪ್ರಧಾನಿ ಮೋದಿಯವರು ತಮ್ಮ 10 ವರ್ಷಗಳ ಆಡಳಿತದ ಸಾಧನೆ ಎಂದು ಬಿಂಬಿಸುತ್ತಿದ್ದಾರೆ. 1990ರ ದಶಕದಲ್ಲಿ ಇದ್ದ ಅದೇ ಪರಿಸ್ಥಿತಿ ಈಗ ಮರುಕಳಿಸಿದೆ.

ಜಾತಿವಾರು ಜನಗಣತಿಯನ್ನು ಬಿಜೆಪಿ ಒಪ್ಪುತ್ತಿಲ್ಲ. ಆದರೆ ಸಾಮಾಜಿಕ ನ್ಯಾಯದ ಶಕ್ತಿಗಳು ಇದನ್ನು ಖಚಿತಪಡಿಸಬೇಕು. ಮತೀಯವಾದಕ್ಕೆ ದೇಶ ಭಾರೀ ಬೆಲೆ ಕೊಟ್ಟಿದೆ. ಭಾರತವು ಜಾತ್ಯತೀತ ರಾಷ್ಟ್ರವಾಗಿ ಮುಂದುವರಿಯುತ್ತದೆಯೇ ಅಥವಾ ಇಲ್ಲವೇ ಎಂಬುದು ಡಿಸೆಂಬರ್-6 ರ ಹೊತ್ತಿಗೆ ಎದ್ದಿರುವ ಪ್ರಶ್ನೆಯಾಗಿದೆ.

ಹಿಂದುಳಿದ ವರ್ಗದವರು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಈ ದೇಶ ಎರಡನ್ನು ಕಳೆದುಕೊಂಡಿದೆ. ಒಂದು ವಿ.ಪಿ.ಸಿಂಗ್ ಅವರ ಅಧಿಕಾರ. ಮತ್ತೊಂದು ಐತಿಹಾಸಿಕವಾದ ಬಾಬರಿ ಮಸೀದಿ. ಅದು ಮತ್ತೊಮ್ಮೆ ಮರುಕಳಿಸದಿರಲು ನಾವು ಮರೆಯಬಾರದ ದಿನ ಡಿಸೆಂಬರ್-6.

ದೇಶ ರಾಜಕೀಯ

ರಾಜಸ್ಥಾನ: ರಾಜಸ್ಥಾನದ ವಲ್ಲಭನಗರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಮಾತನಾಡಿದರು: “ನಾವು ಬಡವರಿಗೆ ಸಹಾಯ ಮಾಡಿದಾಗ, ಬಿಜೆಪಿ ಪ್ರತಿ ಯೋಜನೆಯಲ್ಲಿ ಕೋಟ್ಯಾಧಿಪತಿಗಳಿಗೆ ಸಹಾಯ ಮಾಡುತ್ತಿದೆ. ಅವರು ಒಂದು ತಂಡವಾಗಿದ್ದಾರೆ. ಅದಾನಿ ಪಿಕ್ ಪಾಕೆಟ್ ಹೊಡೆಯುವಾಗ ಜನರ ದಿಕ್ಕು ತಪ್ಪಿಸುವುದು ಮೋದಿಯ ಕೆಲಸ” ಎಂದು ಹೇಳಿದ್ದಾರೆ.

“ಜಾತಿವಾರು ಜನಗಣತಿಯು ದೇಶದ ಎಕ್ಸ್-ರೇ ( ಕ್ಷ-ಕಿರಣ) ಆಗಿದೆ. ಅದನ್ನು ಮಾಡಬೇಕಾದ ಅವಶ್ಯಕತೆ ಇದೆ. ಕಾಂಗ್ರೆಸ್ ಪಕ್ಷ ಆದಿವಾಸಿಗಳ ಹಕ್ಕುಗಳನ್ನು ರಕ್ಷಿಸುತ್ತದೆ. ಪ್ರಧಾನಿ ಅವರನ್ನು ಒಬಿಸಿ ಎಂದು ಕರೆದುಕೊಳ್ಳುತ್ತಾರೆ. ಆದರೆ ನಾನು ಜಾತಿವಾರು ಜನಗಣತಿಯ ಬಗ್ಗೆ ಮಾತನಾಡುವಾಗ, ಭಾರತದಲ್ಲಿ ಬಡವರು ಎಂಬ ಒಂದೇ ಜಾತಿ ಇದೆ ಎಂದು ಹೇಳುತ್ತಾರೆ. ಆದರೆ ಅದಾನಿ, ಅಂಬಾನಿಯಂತಹ ಕೋಟ್ಯಾಧಿಪತಿಗಳ ಮತ್ತೊಂದು ಜಾತಿ ಅವರಲ್ಲಿದ್ದಾರೆ” ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ನವಂಬರ್ 25 ರಂದು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರಕ್ಕೆ ಇನ್ನು 3 ದಿನ ಮಾತ್ರ ಬಾಕಿ ಉಳಿದಿರುವ ಹಿನ್ನಲೆಯಲ್ಲಿ, ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಭರವಸೆಯನ್ನು ಇಂದು ಬಿಡುಗಡೆ ಮಾಡಿದೆ. ಅದರಲ್ಲಿ “ರೈತರಿಗೆ 2 ಲಕ್ಷ ರೂ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು. ಸ್ವಾಮಿನಾಥನ್ ವರದಿ ಪ್ರಕಾರ ಕನಿಷ್ಠ ಬೆಂಬಲ ಬೆಲೆ ನೀಡಲಾಗುವುದು. ಕಾಂಗ್ರೆಸ್ ಪಕ್ಷ 10 ಲಕ್ಷ ಉದ್ಯೋಗ ಸೃಷ್ಟಿಸಲಿದೆ. ಇದರಲ್ಲಿ 4 ಲಕ್ಷ ಉದ್ಯೋಗಗಳು ಸರ್ಕಾರಿ ವಲಯದಲ್ಲಿ ಸೃಷ್ಟಿಯಾಗಲಿವೆ.

ಪಂಚಾಯತಿ ಮಟ್ಟದ ನೇಮಕಾತಿ ಯೋಜನೆಯನ್ನು ಜಾರಿಗೆ ತರಲಾಗುವುದು. ಜಾತಿವಾರು ಜನಗಣತಿ ನಡೆಸಲಾಗುವುದು. ಈ ವರ್ಷದ ಅಂತ್ಯದ ವೇಳೆಗೆ ರಾಜಸ್ಥಾನದ ಆರ್ಥಿಕತೆ 15 ಸಾವಿರ ಕೋಟಿ ರೂ ಇರಲಿದೆ. ಇದನ್ನು 2030ರ ವೇಳೆಗೆ 30 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ” ಎಂದು ಹೇಳಿದರು.

ದೇಶ ರಾಜಕೀಯ

ರಾಯ್‌ಪುರ: ಪ್ರಧಾನಿ ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಛತ್ತೀಸ್‌ಗಢ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಛತ್ತೀಸ್‌ಗಢದ ಪಲೋಡಾ ಬಜಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು: ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮೋದಿ ಗ್ಯಾರಂಟಿ ಎಂದರೆ ಅದು ಅದಾನಿಯ ಗ್ಯಾರಂಟಿಯೇ.

ಛತ್ತೀಸ್‌ಗಢದಲ್ಲಿ ಕೆ.ಜಿ.ಯಿಂದ ಪಿ.ಜಿ.ವರೆಗೆ ಉಚಿತ ಶಿಕ್ಷಣ ನೀಡಲು ಭೂಪೇಶ್ ಬಾಗಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಜಾತಿವಾರು ಜನಗಣತಿ:
ಮಧ್ಯಪ್ರದೇಶದ ದಾಡಿಯಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು, “ಮಧ್ಯಪ್ರದೇಶದಲ್ಲಿ ನಾವು (ಕಾಂಗ್ರೆಸ್) ಅಧಿಕಾರಕ್ಕೆ ಬಂದರೆ, ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ. ಜಾತಿವಾರು ಜನಗಣತಿ ನಡೆಸುತ್ತೇವೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರಕ್ಕಾಗಿ ರೈತರು ಉದ್ದನೆಯ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇಲ್ಲಿ ರಸಗೊಬ್ಬರ ಸಿಗುತ್ತಿಲ್ಲ. ಮಧ್ಯಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ರಸಗೊಬ್ಬರದ ಚೀಲಗಳ ಮೇಲೆ ಮೋದಿ ಫೋಟೋ ಅಂಟಿಸಿದ್ದಕ್ಕೆ ಚುನಾವಣಾ ಆಯೋಗ ಗೊಬ್ಬರ ವಿತರಣೆಗೆ ನಿಷೇಧ ಹೇರಿದೆ. ಇದರಿಂದ ಮಧ್ಯಪ್ರದೇಶದ ರೈತರು ಕಂಗಾಲಾಗಿದ್ದಾರೆ” ಎಂದು ಮಾತನಾಡಿದ್ದಾರೆ.