ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Cauvery Issuce Archives » Dynamic Leader
October 23, 2024
Home Posts tagged Cauvery Issuce
ದೇಶ

ತಿರುಚ್ಚಿ: ಶ್ರೀರಂಗಂ ದೇವಸ್ಥಾನಕ್ಕೆ ಸ್ವಾಮಿ ದರ್ಶನಕ್ಕಾಗಿ ಬಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಕಾವೇರಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸುವ ಕುರಿತು ಮಾತನಾಡಿದರು.

ಕರ್ನಾಟಕ ಮತ್ತು ತಮಿಳುನಾಡು ನಡುವಿನ ದೀರ್ಘಕಾಲದ ಸಮಸ್ಯೆಗಳಲ್ಲಿ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಯೂ ಒಂದು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇದುವರೆಗೆ ಯಾವ ಸರಕಾರಕ್ಕೂ ಸಾಧ್ಯವಾಗಿಲ್ಲ. ಕಾವೇರಿ ವಿಚಾರದಲ್ಲಿ ಎರಡು ರಾಜ್ಯ ಸರ್ಕಾರಗಳು ಮಾತ್ರವಲ್ಲದೆ ಕೇಂದ್ರ ಸರ್ಕಾರವೂ ರಾಜಕೀಯ ಮಾಡುತ್ತಿದೆ ಎಂದು ತಮಿಳುನಾಡಿನ ರೈತರು ಆರೋಪ ಮಾಡುತ್ತಿದ್ದಾರೆ. ಬೇಸಿಗೆ ಬಂತೆಂದರೆ ಕಾವೇರಿ ಸಮಸ್ಯೆ ತಲೆದೋರುತ್ತದೆ.

ಈ ಹಿನ್ನೆಲೆಯಲ್ಲಿ, ಕಾವೇರಿ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂದರ್ಶನ ನೀಡಿದ್ದಾರೆ. ಅದರಲ್ಲಿ, “ಶಾಸನಬದ್ಧ ಕಾವೇರಿ ವಿತರಣಾ ಯೋಜನೆಯು ಬರಗಾಲದಲ್ಲಿ ಕಾವೇರಿ ನೀರಿನ ಸಮಸ್ಯೆಗೆ ಸಹಾಯ ಮಾಡುವುದಿಲ್ಲ. ಕಾವೇರಿ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಎರಡು ರಾಜ್ಯ ಸರ್ಕಾರಗಳು ಚರ್ಚಿಸಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು. ಕಾವೇರಿ ಸಮಸ್ಯೆಗೆ Give and take policy ನೀತಿಯೊಂದೇ ಪರಿಹಾರ” ಎಂದು ಹೇಳಿದರು

ರಾಜಕೀಯ

ಬೆಂಗಳೂರು: “ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ.

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ; ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ; ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.