ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Chandigarh Archives » Dynamic Leader
October 23, 2024
Home Posts tagged Chandigarh
ದೇಶ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಿಂದ ಪ್ರತಿ ತಿಂಗಳು ಮನ್ ಕಿ ಬಾತ್ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಇದರಲ್ಲಿ ಅವರು ಸರ್ಕಾರದ ಯೋಜನೆಗಳು ಮತ್ತು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈ ಕಾರ್ಯಕ್ರಮವನ್ನು 34 ದೂರದರ್ಶನ ಚಾನೆಲ್‌ಗಳು ಮತ್ತು 91 ಖಾಸಗಿ ಟಿವಿ ಚಾನೆಲ್‌ಗಳು ದೇಶದಾದ್ಯಂತ ಪ್ರಸಾರ ಮಾಡುತ್ತಿದೆ.

‘ದೇಶದಲ್ಲಿನ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಮಾತನಾಡದೆ, ವಿರೋಧ ಪಕ್ಷದ ನಾಯಕರು ಕೇಳುವ ಪ್ರಶ್ನೆಗಳಿಗೆ ಉತ್ತರಿಸದೆ, ಪ್ರಧಾನಿ ಮೋದಿಯವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುವಂತೆ ಏಕಾಂಗಿಯಾಗಿ ಮಾತನಾಡುತ್ತಿದ್ದಾರೆ’ ಎಂದು ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಆರೋಪಿಸಿದ್ದಾರೆ.

ಈ ಹಿನ್ನಲೆಯಲ್ಲಿ ಏಪ್ರಿಲ್ 30 ರಂದು ಪ್ರಧಾನಿ ಮೋದಿಯವರು ತಮ್ಮ 100ನೇ ಮನ್ ಕಿ ಬಾತ್ ರೇಡಿಯೋ ಭಾಷಣವನ್ನು ಮಾಡಿದರು. ಇದಕ್ಕಾಗಿ ದೇಶಾದ್ಯಂತ ಬಿಜೆಪಿ ವತಿಯಿಂದ ವಿವಿಧ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆಗ ಡೆಹ್ರಾಡೂನ್‌ನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳು ಪ್ರಧಾನಿ ಭಾಷಣಕ್ಕೆ ಹಾಜರಾಗದ ಕಾರಣಕ್ಕೆ 100 ರೂಪಾಯಿ ದಂಡ ವಿಧಿಸಿದ್ದು ಜನರ ಆಕ್ರೋಶಕ್ಕೆ ಕಾರಣವಾಯಿತು.

ಈ ಹಿನ್ನಲೆಯಲ್ಲಿ ಚಂಡೀಗಢದಲ್ಲಿ ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಭಾಷಣದ 100ನೇ ಸಂಚಿಕೆಯನ್ನು ವೀಕ್ಷಿಸಲು ವಿಫಲರಾದ 36 ವಿದ್ಯಾರ್ಥಿಗಳಿಗೆ ಒಂದು ವಾರಕಾಲ ಹಾಸ್ಟೆಲ್ ನಿಂದ ಹೊರಬರದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಯಾಗಿದೆ. ಇದಕ್ಕೆ ದೇಶಾದ್ಯಂತ ತೀವ್ರ ರೀತಿಯ ವಿರೋಧ ವ್ಯಕ್ತವಾಗಿದೆ ಮತ್ತು  ಈ ಘಟನೆಯನ್ನು ವಿವಿಧ ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿದೆ.