ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Chhattisgarh Archives » Dynamic Leader
October 23, 2024
Home Posts tagged Chhattisgarh
ದೇಶ

ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮಾರ್ ನಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಪ್ರಾಣ ಕಳೆದುಕೊಂಡು ಇನ್ನಿಬ್ಬರು ಗಾಯಗೊಂಡಿದ್ದಾರೆ.

ಮಾದ್ ಮತ್ತು ನಾರಾಯಣಪುರ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ನಾರಾಯಣಪುರ-ಕೊಂಡಗಾಂವ್-ಕಂಕೇರ್-ದಂತೇವಾಡ ಡಿಆರ್‌ಜಿ, ಎಸ್‌ಟಿಎಫ್ ಮತ್ತು ಐಟಿಬಿಪಿ 53ನೇ ಬೆಟಾಲಿಯನ್ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿವೆ.

ಭದ್ರತಾ ಪಡೆಗಳು “ರೆಡ್ ಕಾರಿಡಾರ್” ನಲ್ಲಿ ನಕ್ಸಲೀಯರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ ಮತ್ತು ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಬಲಪಡಿಸಿವೆ. ಕಳೆದ ತಿಂಗಳು ದೀರ್ಘಾವಧಿಯ ಗುಂಡಿನ ಕಾಳಗ ಮುಂದುವರಿಸಿ, ಪ್ರಕ್ಷುಬ್ಧ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಪಡೆಗಳು ಕನಿಷ್ಠ 12 ನಕ್ಸಲೀಯರನ್ನು ನಿರ್ಮೂಲನೆ ಮಾಡಿದೆ.

ಗಂಗಲೂರು ಪ್ರದೇಶದ ಪಿಡಿಯಾ ಗ್ರಾಮದ ಬಳಿ ಬೆಳಿಗ್ಗೆ ನಕ್ಸಲೀಯರೊಂದಿಗೆ ಎನ್‌ಕೌಂಟರ್ ನಡೆದಾಗ ಭದ್ರತಾ ಸಿಬ್ಬಂದಿಯ ತಂಡವು ಶೋಧ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಪಡೆಗಳು ಹಿಂತಿರುಗುವ ಮೊದಲು ಸಂಜೆಯವರೆಗೆ ಹನ್ನೊಂದು ಗಂಟೆಗಳ ಕಾಲ ಎನ್‌ಕೌಂಟರ್ ನಡೆದಿದೆ.

ಈ ಹಿನ್ನೆಲೆಯಲ್ಲಿ, ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಮತ್ತು ಅಧಿಕಾರಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

“ಛತ್ತೀಸ್‌ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ನಕ್ಸಲೀಯರ ವಿರುದ್ಧ ಕ್ರಮಗಳು ಹೆಚ್ಚಿವೆ ಮತ್ತು ನಾವು ಅವರಿಗೆ ಪ್ರಬಲ ಹೋರಾಟ ನೀಡುತ್ತಿದ್ದೇವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನಕ್ಸಲಿಸಂ ಕೊನೆಗೊಳ್ಳಲಿ ಎಂದು ಬಯಸಿದ್ದಾರೆ ಮತ್ತು ಜನರು ಡಬಲ್ ಇಂಜಿನ್ ಸರ್ಕಾರದ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ” ಎಂದು ಸಾಯಿ ಹೇಳಿದರು.

ಏಪ್ರಿಲ್ 16 ರಂದು, ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 29 ನಕ್ಸಲೀಯರನ್ನು ಹೊಡೆದುರುಳಿಸಿದರೆ, ಅದೇ ನಾರಾಯಣಪುರ ಜಿಲ್ಲೆಯ ಅಬುಜ್ಮಾರ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಹತ್ತು ನಕ್ಸಲೀಯರು ಕೊಲ್ಲಲ್ಪಟ್ಟರು ಎಂಬುದು ಗಮನಾರ್ಹ.

ದೇಶ ರಾಜಕೀಯ

ರಾಯ್‌ಪುರ: ಪ್ರಧಾನಿ ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಛತ್ತೀಸ್‌ಗಢ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಛತ್ತೀಸ್‌ಗಢದ ಪಲೋಡಾ ಬಜಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು: ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮೋದಿ ಗ್ಯಾರಂಟಿ ಎಂದರೆ ಅದು ಅದಾನಿಯ ಗ್ಯಾರಂಟಿಯೇ.

ಛತ್ತೀಸ್‌ಗಢದಲ್ಲಿ ಕೆ.ಜಿ.ಯಿಂದ ಪಿ.ಜಿ.ವರೆಗೆ ಉಚಿತ ಶಿಕ್ಷಣ ನೀಡಲು ಭೂಪೇಶ್ ಬಾಗಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಜಾತಿವಾರು ಜನಗಣತಿ:
ಮಧ್ಯಪ್ರದೇಶದ ದಾಡಿಯಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು, “ಮಧ್ಯಪ್ರದೇಶದಲ್ಲಿ ನಾವು (ಕಾಂಗ್ರೆಸ್) ಅಧಿಕಾರಕ್ಕೆ ಬಂದರೆ, ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ. ಜಾತಿವಾರು ಜನಗಣತಿ ನಡೆಸುತ್ತೇವೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರಕ್ಕಾಗಿ ರೈತರು ಉದ್ದನೆಯ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇಲ್ಲಿ ರಸಗೊಬ್ಬರ ಸಿಗುತ್ತಿಲ್ಲ. ಮಧ್ಯಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ರಸಗೊಬ್ಬರದ ಚೀಲಗಳ ಮೇಲೆ ಮೋದಿ ಫೋಟೋ ಅಂಟಿಸಿದ್ದಕ್ಕೆ ಚುನಾವಣಾ ಆಯೋಗ ಗೊಬ್ಬರ ವಿತರಣೆಗೆ ನಿಷೇಧ ಹೇರಿದೆ. ಇದರಿಂದ ಮಧ್ಯಪ್ರದೇಶದ ರೈತರು ಕಂಗಾಲಾಗಿದ್ದಾರೆ” ಎಂದು ಮಾತನಾಡಿದ್ದಾರೆ.

ದೇಶ ರಾಜಕೀಯ

ಸಿಯೋನಿ: ಮಧ್ಯಪ್ರದೇಶದ ಸಿಯೋನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲ ಎಂದು ಹೇಳಿದ್ದಾರೆ.

“ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಮ್ಮ ದೇಶದ ಜನರನ್ನು ಉಳಿಸಲು ನಾವು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದೇವೆ. ಮತ್ತು ಬಡವರು ಆಹಾರದ ಕೊರತೆಯಿಂದ ಬಳಲದಂತೆ ನಾವು ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಅದಕ್ಕಾಗಿಯೇ ನಾವು ಜನರಿಗೆ ಉಚಿತ ಪಡಿತರ ವಸ್ತುಗಳನ್ನು ನೀಡಿದವು.

ಗರೀಬ್ ಕಲ್ಯಾಣ್ ಯೋಜನೆಯಡಿ ಉಚಿತ ಆಹಾರ ಧಾನ್ಯಗಳ ವಿತರಣೆಯು ಡಿಸೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಆದರೆ ಬಡವರ ನೋವನ್ನು ಅರಿತು ಡಿಸೆಂಬರ್ ನಂತರ ಮುಂದಿನ ಐದು ವರ್ಷಗಳ ಕಾಲ ಒದಗಿಸಲು ನಿರ್ಧರಿಸಿದ್ದೇವೆ.

ನಾನು ಬಡತನದಿಂದ ಎದ್ದು ಬಂದಿದ್ದೇನೆ. ಬಡತನ ಎಂದರೆ ಏನು ಎಂಬುದನ್ನು ಪುಸ್ತಕಗಳಲ್ಲಿ ಓದುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಆದಿವಾಸಿಗಳ ಕಲ್ಯಾಣದ ಬಗ್ಗೆ ಕಾಳಜಿ ಇಲ್ಲ. ಸ್ವಾತಂತ್ರ್ಯಾ ನಂತರ 60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತದಲ್ಲಿ ಆದಿವಾಸಿಗಳಿಗೆ ಯಾವುದೇ ಒಳಿತಾಗಲಿಲ್ಲ.

2014ರ ಮೊದಲು ಕಾಂಗ್ರೆಸ್ ಆಡಳಿತದಲ್ಲಿ ಪ್ರತಿ ಯೋಜನೆಯಲ್ಲಿ ಹಲವು ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಈಗ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಇಲ್ಲ. ಬಡವರ ಹಕ್ಕುಗಳಿಗಾಗಿ ನಾವು ಉಳಿಸಿದ ಹಣವನ್ನು ಈಗ ಬಡವರಿಗಾಗಿ ಖರ್ಚು ಮಾಡಲಾಗುತ್ತಿದೆ. ಇದುವೇ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ನಡುವಿನ ದೊಡ್ಡ ವ್ಯತ್ಯಾಸವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇದಕ್ಕೂ ಮುನ್ನ ಛತ್ತೀಸ್‌ಗಢದ ಬಮಲೇಶ್ವರಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯವರು ಸ್ವಾಗತಿಸಿದರು.