ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
#Congressboycottmedia Archives » Dynamic Leader
October 23, 2024
Home Posts tagged #Congressboycottmedia
ರಾಜಕೀಯ ರಾಜ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡದೆ ಪ್ರತಿಯೊಬ್ಬ ಭಾರತೀಯ ಪತ್ರಕರ್ತರನ್ನು ಬಹಿಷ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಒಂದು ರಾಜಕೀಯ ಪಕ್ಷದ ಮುಖವಾಣಿಯಂತೆ ವರ್ತಿಸಿ ಮಾಧ್ಯಮ ನೀತಿಗೆ ಧಕ್ಕೆ ತಂದ 14 ಪತ್ರಕರ್ತರಿಗೆ ಬಹಿಷ್ಕಾರ ಹಾಕಿದ್ದು ಹೇಗೆ ತಪ್ಪು? ಎಂದು ಬಿಜೆಪಿ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಜೆಪಿ ಅಧ್ಯಕ್ಷರಾದ ಜೆಪಿ ನಡ್ಡಾ ಅವರೆ, ದೇಶದ ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಒಂದೇ ಒಂದು ಪತ್ರಿಕಾ ಗೋಷ್ಠಿಯನ್ನು ನಡೆಸದೆ ದೇಶದ ಎಲ್ಲಾ ಪತ್ರಕರ್ತರನ್ನು ಬಹಿಷ್ಕರಿಸಿರುವಾಗ…. ಒಂದು ಪಕ್ಷದ ತುತ್ತೂರಿಯಂತೆ ಕಾರ್ಯನಿರ್ವಹಿಸುತ್ತಾ ಮಾಧ್ಯಮ ಧರ್ಮಕ್ಕೆ ದ್ರೋಹ ಬಗೆಯುತ್ತಿರುವ 14 ಪತ್ರಕರ್ತರ ಮೇಲೆ ಬಹಿಷ್ಕಾರ ಹೇರಿದ್ದನ್ನು ಪ್ರಶ್ನಿಸುವ ಯಾವ ನೈತಿಕತೆ ನಿಮಗಿದೆ ಹೇಳಿ ಎಂದಿರುವ ಸಿದ್ದರಾಮಯ್ಯ, ಈ ಕೆಳಗಿನ ಮಾಹಿತಿಯನ್ನು ಎಕ್ಸ್ ಪೇಜ್ ನಲ್ಲಿ ಪ್ರಕಟಿಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.  

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು: 1) ಸಿದ್ದಿಕ್ ಕಪ್ಪನ್, 2) ಮೊಹಮ್ಮದ್‌ ಝುಬೇರ್, 3) ಅಜಿತ್ ಓಝಾ, 4) ಜಸ್ಪಾಲ್‌ ಸಿಂಘ್‌, 5) ಸಜದ್ ಗುಲ್, 6) ಕಿಶೋರಚಂದ್ರ ವಾಂಗ್‌ಖೇನ್ 7) ಪ್ರಶಾಂತ್ ಕನೋಜಿಯಾ.

ಇದನ್ನೂ ಓದಿ: ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿ! – ಸಿದ್ದರಾಮಯ್ಯ

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು: 1) ರಾಕೇಶ್ ಸಿಂಗ್ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ 2) ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ 3) ಜಿ.ಮೋಸೆಸ್‌, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ 4) ಪರಾಗ್‌ ಭುಯಾನ್, ಅಸ್ಸಾಮ್‌, ಎಸ್‌.ಐ ನೇಮಕಾತಿ ಹಗರಣ ಕುರಿತು ವರದಿ 5) ಗೌರಿ ಲಂಕೇಶ್‌, ಕೋಮುವಾದ ವಿರೋಧಿಸಿದ್ದಕ್ಕೆ.

ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ..!! 2015ರಲ್ಲಿ 136ನೇ ಸ್ಥಾನ, 2019ರಲ್ಲಿ 140ನೇ ಸ್ಥಾನ, 2022ರಲ್ಲಿ 150ನೇ ಸ್ಥಾನ, 2023ರಲ್ಲಿ 161ನೇ ಸ್ಥಾನ.

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ…!! ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಲೈಜ್ಞರ್ ಮಹಿಳಾ ಹಕ್ಕುಭತ್ಯೆ ಯೋಜನೆಗೆ ಇಂದು ಚಾಲನೆ; ತಮಿಳುನಾಡಿನಲ್ಲಿ ಸಂಭ್ರಮದ ವಾತಾವರಣ!