ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Constituency Distribution Archives » Dynamic Leader
October 17, 2024
Home Posts tagged Constituency Distribution
ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ-3, ಕಾಂಗ್ರೆಸ್-2, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟ-1 ಸ್ಥಾನಕ್ಕೆ ಸ್ಪರ್ಧಿಸಲು ಒಪ್ಪಂದ ನಡೆದಿವೆ ಎಂಬ ವರದಿಗಳು ಬರುತ್ತಿವೆ!

ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ ಮತ್ತು ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯೊಂದಿಗೆ ಕಾಂಗ್ರೆಸ್ ಪಕ್ಷವು ಸುಗಮ ಕ್ಷೇತ್ರ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ವರದಿಯಾಗಿವೆ. ಈ ಕುರಿತು ಅಧಿಕೃತ ಅಧಿಸೂಚನೆ ಹೊರ ಬೀಳುವುದೊಂದೆ ಬಾಕಿ.

ಕಾಂಗ್ರೆಸ್ ಪಕ್ಷವು ‘ಇಂಡಿಯಾ’ ಮೈತ್ರಿಕೂಟದಲ್ಲಿರುವ ಆಮ್ ಆದ್ಮಿ ಪಕ್ಷ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿಯೊಂದಿಗೆ ಕ್ಷೇತ್ರ ಒಪ್ಪಂದದ ಮಾತುಕತೆಗಳನ್ನು ನಡೆಸಿತು. ಆದರೆ, ಈ ಮಾತುಕತೆಗಳಲ್ಲಿ ಆರಂಭದಲ್ಲಿ ಭಾರಿ ಹಿನ್ನಡೆ ಉಂಟಾಯಿತು. ಅಲ್ಲದೆ, ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿದ್ದ ನಿತೀಶ್ ಕುಮಾರ್, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಮತ್ತೆ ಪಲಾಯನ ಮಾಡಿದರು. ಉತ್ತರಪ್ರದೇಶದಲ್ಲಿ ರಾಷ್ಟ್ರೀಯ ಲೋಕದಳ ಕೂಡ ಬಿಜೆಪಿ ಕಡೆಗೆ ಓಡಿ ಹೋಯಿತು.

‘ಇಂಡಿಯಾ’ ಮೈತ್ರಿಕೂಟವು ಲೋಕಸಭೆ ಚುನಾವಣೆಯನ್ನು ಎದುರಿಸಲಿದೆಯೇ? ‘ಇಂಡಿಯಾ ಮೈತ್ರಿಕೂಟ ಉಳಿಯುತ್ತದೆಯೇ? ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಮುಗಿಲುಮುಟ್ಟಿದವು. ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ 5 ರಾಜ್ಯಗಳಲ್ಲಿ ಸೀಟು ಹಂಚಿಕೆ ನಿರ್ಧಾರ ಪ್ರಕಟಿಸಿತು. ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪ್ರಬಲವಾಗಿರುವುದರಿಂದ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧಾರ ಕೈಗೊಂಡಿತು. ಉತ್ತರಪ್ರದೇಶದಲ್ಲೂ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸುಲಲಿತವಾಗಿ ಕ್ಷೇತ್ರ ಒಪ್ಪಂದವನ್ನು ಮಾಡಿಕೊಂಡಿತು.

ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಜೊತೆ ಸೀಟು ಹಂಚಿಕೆಗೆ ಮಾತುಕತೆ ನಡೆಸುತ್ತಿದೆ. ಈ ಮಾತುಕತೆ ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ ಎಂದು ವರದಿಗಳಾಗಿವೆ. ಆಂಧ್ರಪ್ರದೇಶದಲ್ಲಿ, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶರ್ಮಿಳಾ ಎಡಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಕೇರಳದಲ್ಲಿ ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಪ್ರಬಲ ಪಕ್ಷಗಳಾಗಿರುವುದರಿಂದ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ.

ಅದೇ ರೀತಿ ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಜೊತೆ ಕಾಂಗ್ರೆಸ್ ಪಕ್ಷ ನಡೆಸಿದ ಸೀಟು ಹಂಚಿಕೆಯ ಮೊದಲ ಹಂತದ ಮಾತುಕತೆಯಲ್ಲಿ ಭಾರಿ ಹಿನ್ನಡೆಯಾಗಿತ್ತು. ಇದರಿಂದ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದರು.

ಆದರೆ, ಕಾಂಗ್ರೆಸ್ ಪಕ್ಷವು ಸೀಟು ಹಂಚಿಕೆ ಬಗ್ಗೆ ನಿರಂತರ ಮಾತುಕತೆ ನಡೆಸಿದ ಪರಿಣಾಮ, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ-3, ಕಾಂಗ್ರೆಸ್-2, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟ-1 ಸ್ಥಾನಕ್ಕೆ ಸ್ಪರ್ಧಿಸಲು ಒಪ್ಪಂದ ನಡೆದಿವೆ ಎಂಬ ವರದಿಗಳು ಬರುತ್ತಿವೆ. ಈ ಕುರಿತು ಅಧಿಕೃತ ಅಧಿಸೂಚನೆ ಯಾವಾಗ ಬೇಕಾದರೂ ಬಿಡುಗಡೆಯಾಗಬಹುದು ಎಂದು ಹೇಳಲಾಗುತ್ತಿದೆ. ಇದರಿಂದ ಬಿಜೆಪಿಯ 370 ಕ್ಷೇತ್ರಗಳ ಕನಸು ಬಗ್ನವಾಗವ ಕಾಲ ಸಮೀಪಿಸುತ್ತಿದೆಯೇ ಎಂಬುದನ್ನು ಕಾದು ನೋಡಣ.

ರಾಜಕೀಯ

ಕೊಲ್ಕತ್ತಾ: 2024ರ ಸಂಸತ್ತಿನ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ, ಸೀಟು ಹಂಚಿಕೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ನಡುವೆ ಮಾತುಕತೆಗಳು ತೀವ್ರಗೊಂಡಿವೆ. ಈ ಹಿನ್ನಲೆಯಲ್ಲಿ, ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಹಲವು ಹಂತಗಳಲ್ಲಿ ಮಾತುಕತೆ ನಡೆಸಲಾಗುತ್ತಿದೆ.

ಪಶ್ಚಿಮ ಬಂಗಾಳದಲ್ಲಿ, ಕಾಂಗ್ರೆಸ್ 8 ರಿಂದ 14 ಸ್ಥಾನಗಳನ್ನು ಕೇಳುವ ಮೂಲಕ ತೃಣಮೂಲ ಕಾಂಗ್ರೆಸ್ ಜೊತೆ ಮಾತುಕತೆ ಆರಂಭಿಸಿತು. ಆದರೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ‘ಪಶ್ಚಿಮ ಬಂಗಾಳದಲ್ಲಿ ನಿಮಗೆ ಒಬ್ಬ ಶಾಸಕರೂ ಇಲ್ಲ. ಎರಡು ಲೋಕಸಭಾ ಕ್ಷೇತ್ರಗಳನ್ನು ನೀಡುತ್ತೇನೆ. ಆ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವನ್ನು ಖಚಿತಪಡಿಸಿಕೊಳ್ಳೋಣ’ ಎಂದರು. ಅಂತಿಮವಾಗಿ ಕಾಂಗ್ರೆಸ್‌ಗೆ 6 ಲೋಕಸಭಾ ಕ್ಷೇತ್ರಗಳನ್ನು ನೀಡುವಂತೆ ಒತ್ತಾಯಿಸಿತು.

ಈ ಹಿನ್ನಲೆಯಲ್ಲಿ, ಇತ್ತೀಚೆಗೆ ಮಾಲ್ದಾ ಪ್ರದೇಶದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ‘ಕಾಂಗ್ರೆಸ್‌ಗೆ ಒಂದು ಸ್ಥಾನವನ್ನೂ ನೀಡುವುದಿಲ್ಲ’ ಎಂದು ಹೇಳಿದರು. ಅಲ್ಲದೆ, ‘ಇಂಡಿಯಾ’ ಮೈತ್ರಿಕೂಟದಲ್ಲಿ ತನ್ನ ಭಾಗವಹಿಸುವಿಕೆಯನ್ನು ಸದ್ಯಕ್ಕೆ ತಡೆಹಿಡಿದಿರುವುದಾಗಿಯೂ ಚುನಾವಣೆಯ ಫಲಿತಾಂಶವನ್ನು ಆಧರಿಸಿ, ಚುನಾವಣೆಯ ನಂತರ ಈ ನಿರ್ಧಾರವನ್ನು ಮರುಪರಿಶೀಲನೆ ಮಾಡುವುದಾಗಿಯೂ ಅವರು ಹೇಳಿದರು.

ಈ ಹಿನ್ನಲೆಯಲ್ಲಿ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳ ನಡುವಿನ ಮಾತುಕತೆ ಪುನರಾರಂಭವಾಗಿದ್ದು, ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಒಮ್ಮತಕ್ಕೆ ಬಂದರೆ, ಸದ್ಯದಲ್ಲೇ ಘೋಷಣೆ ಹೊರಬೀಳಲಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಪಕ್ಷವು, ಪಶ್ಚಿಮ ಬಂಗಾಳದ 42 ಸ್ಥಾನಗಳ ಪೈಕಿ ಬರ್ಹಾಂಪುರ್, ದಕ್ಷಿಣ ಮಾಲ್ದಾ, ಉತ್ತರ ಮಾಲ್ದಾ, ರಾಯ್‌ಗಂಜ್, ಡಾರ್ಜಿಲಿಂಗ್ ಮತ್ತು ಪುರುಲಿಯಾ ಮುಂತಾದ 6 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸುತ್ತಿದೆ. ಈ ಪೈಕಿ 5 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ನಂಬುವುದಾಗಿ ಆ ಪಕ್ಷದ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾತುಕತೆ ನಡೆಸಿತ್ತು. ಅದರಂತೆ ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಮತ್ತು ದೆಹಲಿಯ 7 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದೆ ಎಂಬುದು ಗಮನಾರ್ಹ.