ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Crime News Archives » Dynamic Leader
October 23, 2024
Home Posts tagged Crime News
ದೇಶ ರಾಜಕೀಯ

ಜುನಾಗಢ್: ಗುಜರಾತ್‌ನ ಜುನಾಗಢ್‌ನಲ್ಲಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ, ಅಕ್ರಮವಾಗಿ ದರ್ಗಾವನ್ನು ನಿರ್ಮಿಸಲಾಗಿದೆ ಎಂದು ಹೇಳಿಕೊಂಡಿರುವ ಮುನ್ಸಿಪಲ್ ಕಾರ್ಪೊರೇಷನ್, ಅದನ್ನು ಕೆಡವಲು ಮುಂದಾಗಿ ನೋಟಿಸ್‌ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ, ಘರ್ಷಣೆಗಳು ಭುಗಿಲೆದ್ದ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಮತ್ತು ಉಪ ಪೊಲೀಸ್ ಅಧೀಕ್ಷಕರು ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ, ಗುಜರಾತ್‌ನ ಜುನಾಗಢದಲ್ಲಿ ನಡೆದ ಹಿಂಸಾಚಾರದ ವೇಳೆ ಕಲ್ಲು ತೂರಾಟ ನಡೆಸುತ್ತಿದ್ದ ಅಪ್ರಾಪ್ತ ವಯಸ್ಕರ ಮೇಲೆ, ಏಳು ದಿನಗಳೊಳಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಸೂಚಿಸಿದೆ. ಶುಕ್ರವಾರ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಅಪ್ರಾಪ್ತ ವಯಸ್ಕರು ಭಾಗವಹಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಭಾನುವಾರ ಜುನಾಗಢ್ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದೆ.

ಪೊಲೀಸ್ ವರಿಷ್ಠಾಧಿಕಾರಿಗೆ (SP) ಬರೆದ ಪತ್ರದಲ್ಲಿ ವೀಡಿಯೊವನ್ನು ಉಲ್ಲೇಖಿಸಲಾಗಿದೆ ಮತ್ತು ಹಿಂಸಾಚಾರದ ಸಂದರ್ಭದಲ್ಲಿ ಅನೇಕ ಅಪ್ರಾಪ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ನೋಡಲಾಗಿದೆ ಎಂದು ಹೇಳಲಾಗಿದೆ. ದರ್ಗಾವನ್ನು ಧ್ವಂಸಗೊಳಿಸುವ ಸೂಚನೆಯನ್ನು ಹೊರ ಹಾಕಿದ ನಂತರ, ಕನಿಷ್ಠ 200-300 ಜನರು ದರ್ಗಾದ ಸುತ್ತಲೂ ಜಮಾಯಿಸಿದ್ದರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಿದರು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಗುಜರಾತ್ ಜುನಾಗಢ ಪ್ರದೇಶದಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ವಿಚಾರದಲ್ಲಿ ಗಲಭೆ: ಓರ್ವ ಸಾವು!

NCPCRನ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಎಸ್‌ಪಿಗೆ ಬರೆದ ಪತ್ರದಲ್ಲಿ ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಏಳು ದಿನಗಳೊಳಗೆ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಜೊತೆಗೆ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 83(2) ಮತ್ತು 75ರ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಬಾಲಾಪರಾಧಿ ಕಾಯಿದೆಯ ಸೆಕ್ಷನ್ 83(2) ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು, ಮಕ್ಕಳನ್ನು ಬಳಸಿಕೊಳ್ಳುವ ಯಾವುದೇ ವಯಸ್ಕರು ಅಥವಾ ವಯಸ್ಕ ಗುಂಪುಗಳಿಗೆ ಸುಮಾರು ಏಳು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆಯನ್ನು ವಿಧಿಸುತ್ತದೆ. ಅದೇ ಕಾಯಿದೆಯ ಸೆಕ್ಷನ್ 75ರ ಅಡಿಯಲ್ಲಿ, ಒಬ್ಬ ವ್ಯಕ್ತಿಯು ಮಗುವಿನ ಮೇಲೆ ಆಕ್ರಮಣ, ಕೈಬಿಡುವುದು, ನಿಂದನೆ ಅಥವಾ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದಕ್ಕಾಗಿ ಶಿಕ್ಷಿಸಬಹುದು.

NCPCR ಎಸ್‌ಪಿಗೆ ತನಿಖೆಯನ್ನು ಪ್ರಾರಂಭಿಸಲು ಮತ್ತು ಸೆಕ್ಷನ್‌ಗಳನ್ನು ಉಲ್ಲಂಘಿಸುವ ಯಾರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೇಳಿದೆ ಮತ್ತು ಏಳು ದಿನಗಳಲ್ಲಿ ಕ್ರಮ-ತೆಗೆದುಕೊಂಡ ವರದಿಯನ್ನು ನೀಡುವಂತೆ ಸೂಚಿಸಿದೆ.

ಕ್ರೈಂ ರಿಪೋರ್ಟ್ಸ್

ಮಾರ ಕಾಸ್ತ್ರಗಳೊಂದಿಗೆ ದರೋಡೆ ಮಾಡಲು ಸಂಚು ರೂಪಿಸಿದ್ದ ರೌಡಿ ಶಿಟರ್ ಮಹೇಶ @ ಸಿದ್ದಾಪುರ ಮಹೇಶನ 5 ಜನ ಸಹಚರರ ಬಂಧನ. ಒಂದು ಪಾರ್ಚೂನರ್ ಕಾರು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಬೆಂಗಳೂರು: ಜೂನ್ 17 ರಂದು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ಸರಹದ್ದಿನ KSRTC ಕೇಂದ್ರ ಕಚೇರಿಯ ಪಕ್ಕದ ಬಿಟಿಎಸ್ ಸರ್ವೀಸ್ ರಸ್ತೆಯಲ್ಲಿ, ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಅಡ್ಡಗಟ್ಟಿ ಅವರಿಗೆ ಮಾರಕಾಸ್ತ್ರಗಳಾದ ಲಾಂಗು, ಮಚ್ಚು, ಚಾಕು ದೊಣ್ಣೆಗಳಿಂದ ಹಲ್ಲೆ ಮಾಡಿ, ಅವರಿಂದ ನಗದು ಮತ್ತು ಚಿನ್ನಾಭರಣಗಳನ್ನು ದೋಚಲು ಸಜ್ಜಾಗಿದ್ದ ರೌಡಿ ಶೀಟರ್ ಮಹೇಶ @ ಸಿದ್ದಾಪುರದ ಮಹೇಶನ 5 ಜನ ಸಹಚರರನ್ನು ಹಿಡಿಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಇವರುಗಳ ಕಡೆಯಿಂದ ಮಾರಕಾಸ್ತ್ರಗಳನ್ನು ಮತ್ತು ಪಾರ್ಚೂನ್ ಕಾರನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ.

ಇವರುಗಳು ಕಳೆದ ವರ್ಷ ಬನಶಂಕರಿ ಮೆಟ್ರೋ ನಿಲ್ದಾಣ ಹತ್ತಿರ ರೌಡಿ ಶೀಟರ್ ಮದನ್ @ ಪಿಟೀಲ್ ಎಂಬುವವನನ್ನು ಕೊಲೆ ಮಾಡಿದ್ದ ಮಹೇಶ @ ಸಿದ್ದಾಪುರ ಮಹೇಶ್ ಎಂಬುವವನ ಸಹಚರರಾಗಿರುತ್ತಾರೆ.

ಇವರುಗಳು ಈ ದಿನ ಮಹೇಶನ ಎದುರಾಳಿಯಾದ ವಿಲ್ಸನ್ ಗಾರ್ಡನ್ ನಾಗ ಅಥವಾ ಆತನ ಸಹಚರರು ಸಿಕ್ಕರೆ ಅವರುಗಳನ್ನು ಹೊಡೆಯಬೇಕೆಂದು ಮತ್ತು ದಾರಿಯಲ್ಲಿ ಒಂಟಿಯಾಗಿ ಬರುವ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ಅವರಿಂದ ನಗದು ಹಣ ಅಥವಾ ಒಡವೆಗಳನ್ನು ದೋಚಲು ಹೊಂಚು ಹಾಕುತ್ತಿದ್ದುದಾಗಿ ತಿಳಿಸಿರುತ್ತಾರೆ. ಮೇಲ್ಕಂಡ ಆಸಾಮಿಗಳ ವಿರುದ್ದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದರೋಡೆ ಸಂಚು ರೂಪಿಸಿದ ಕುರಿತು ಪ್ರಕರಣ ದಾಖಲಾಗಿದ್ದು, ಪ್ರಕರಣ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು ಸಿಸಿಬಿ, ಸಂಘಟಿತ ಅಪರಾಧ ದಳ (ಪಶ್ಚಿಮ) ದ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಯಶಸ್ವಿಯಾಗಿ ಆರೋಪಿಗಳನ್ನು ಮಾಲಿನ ಸಮೇತ ವಶಕ್ಕೆ ಪಡೆದುಕೊಂಡಿರುತ್ತಾರೆ.  

ಕ್ರೈಂ ರಿಪೋರ್ಟ್ಸ್

ಗಮನವನ್ನು ಬೇರೆಡೆ ಸೆಳೆದು ವಾಹನದಲ್ಲಿರುವ ಹಣವನ್ನು ಕಳವು ಮಾಡುತ್ತಿದ್ದ ಅಂತರರಾಜ್ಯ ಆರೋಪಿತರ ಬಂಧನ. 13,97,000/- ರೂ ನಗದು ಹಣ ಮತ್ತು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಿಟಿಗಾ ಕಾರು, ಅಪಾಚೆ ಹಾಗೂ ಹೋಂಡಾ ಹಾರ್ನಟ್ ಮೋಟಾರ್ ಸೈಕಲ್ ಗಳ ವಶ.

ಬೆಂಗಳೂರು: ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರುದಾರರಾದ ಚೇತನ್ ರವರು, ಜೂನ್ 6 ರಂದು ರಾಜರಾಜೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಮ್ಮ ಟೊಯೋಟಾ ಇನ್ನೋವ ಕಾರಿನಲ್ಲಿ ಇಟ್ಟಿದ್ದ ಒಟ್ಟು 15,00,000/- ರೂ ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿದ ಮೆರೆಗೆ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.

ಜೂನ್ 6 ರಂದು ಸದರಿ ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಒಟ್ಟು 13,97,000/- ರೂ ನಗದು ಹಣ ಮತ್ತು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಿಟಿಗಾ ಕಾರು, ಒಂದು ಅಪಾಚೆ ಹಾಗೂ ಒಂದು ಹೋಂಡಾ ಹಾರ್ನಟ್ ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿರುತ್ತದೆ. ಸದರಿ ಆರೋಪಿತರು ಬೆಂಗಳೂರು ನಗರದ ರಾಜರಾಜೇಶ್ವರಿ ಪೊಲೀಸ್ ಠಾಣೆಯ ಈ ಹಿಂದೆಯೂ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಹಾಗೂ ಜೆ.ಪಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಸಹ ಇದೇ ರೀತಿ ಕಳವು ಮಾಡಿದ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ. ಪ್ರಕರಣದ ಉಳಿದ ಆರೋಪಿತರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿರುತ್ತದೆ.

ಸದರಿ ಕಾರ್ಯಚರಣೆಯನ್ನು ಬೆಂಗಳೂರು ನಗರದ ಡಿಸಿಪಿ (ಪಶ್ಚಿಮ) ಲಕ್ಷ್ಮಣ್ ಬಿ ನಿಂಬರಗಿ. ಕೆಂಗೇರಿ ಗೇಟ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಭರತ್ ಎಸ್ ರೆಡ್ಡಿ ರವರುಗಳ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಎಂ.ಶಿವಣ್ಣ ರವರ ನೇತೃತ್ವದಲ್ಲಿ ಹಾಗೂ ಅಪರಾಧ ಪತ್ತೆದಳದ ಸಿಬ್ಬಂಧಿಯವರೊಂದಿಗೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಮಾಹಿತಿ ತಂತ್ರಜ್ಞಾನ ಬೆಳೆದಿರುವ ಇಂದಿನ ಯುಗದಲ್ಲಿ ನಮ್ಮ ಬಳಕೆಗಾಗಿ ಸೆಲ್ ಫೋನ್‌ಗಳಲ್ಲಿ ಡೌನ್ ಲೋಡ್ ಮಾಡಿಕೊಂಡು ಬಳಸಬಹುದಾದ ಹಲವು ‘ಆ್ಯಪ್ ’ಗಳು ಬಂದಿವೆ. ಆ ರೀತಿಯಲ್ಲಿ, ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲು ನಮಗೆ ಸಹಾಯ ಮಾಡುವುದು WhatsApp ಆಗಿದೆ.

ಈ ವಾಟ್ಸಾಪ್ ಗ್ರೂಪ್‌ಗಳಲ್ಲಿರುವ ಗುಂಪುಗಳ ಮೂಲಕ, ನಮ್ಮ ವೈಯಕ್ತಿಕ ಮಾಹಿತಿ ಮತ್ತು ಬ್ಯಾಂಕ್ ಖಾತೆಗಳನ್ನು ಕದ್ದು ನಮ್ಮ ಹಣವನ್ನು ಸುಲಿಗೆ ಮಾಡುತ್ತಿದ್ದಾರೆ. ವಾಟ್ಸಾಪ್ ಗುಂಪುಗಳಲ್ಲಿ, ಸೆಲ್ ಫೋನ್‌ನಲ್ಲಿ ‘ವಾಟ್ಸಾಪ್ ಪಿಂಕ್’ ಹೆಸರಿನಲ್ಲಿ ಹಸಿರು ಬಣ್ಣವನ್ನು ಗುಲಾಬಿ ಬಣ್ಣಕ್ಕೆ ತಿರುಗಿಸುವ ಲಿಂಕ್ ಅನ್ನು ಪ್ರಸಾರ ಮಾಡಲಾಗುತ್ತಿದೆ.

ಇದು ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುವ ಅಪಾಯಕಾರಿ ವೈರಸ್ ಆಗಿದೆ. ಮೊದಲು ವಾಟ್ಸಾಪ್ ಗುಂಪುಗಳಲ್ಲಿ ಗುಲಾಬಿ ಲಿಂಕ್ ಅನ್ನು ಕಳುಹಿಸಿ, ಡೌನ್‌ಲೋಡ್ ಮಾಡಲು ಲಿಂಕ್ ಅನ್ನು ಕ್ಲಿಕ್ ಮಾಡಲು ಹೇಳುತ್ತಾರೆ. ಡೌನ್‌ಲೋಡ್ ಮಾಡುವಾಗ ಲಿಂಕ್‌ನಲ್ಲಿ ಅಡಗಿರುವ ಅಪಾಯಕಾರಿ ವೈರಸ್, ಜೊತೆಯಲ್ಲೇ ಡೌನ್‌ಲೋಡ್ ಆಗುತ್ತದೆ.

ಒಮ್ಮೆ ಕ್ಲಿಕ್ ಮಾಡಿದರೆ, ಈ ವೈರಸ್ ತಕ್ಷಣವೇ ಮೊಬೈಲ್‌ನಲ್ಲಿ ಸಂಪೂರ್ಣವಾಗಿ ಹರಡುತ್ತದೆ ಮತ್ತು ವಾಟ್ಸಾಪ್ ಗ್ರೂಪ್‌ನಲ್ಲಿ ಪೋಸ್ಟ್ ಮಾಡುವ ವ್ಯಕ್ತಿ ಯಾವುದೇ ಗ್ರೂಪ್‌ನಲ್ಲಿದ್ದರೂ ಆ ಗುಂಪಿನಲ್ಲಿರುವ ವ್ಯಕ್ತಿಗೆ ಪಿಂಕ್ ವಾಟ್ಸಾಪ್ ಅಪ್‌ಡೇಟ್ ಎಂದು ಸ್ವಯಂಚಾಲಿತವಾಗಿ ತಿಳಿಸಲಾಗುತ್ತದೆ.

ಈ ಲಿಂಕ್ ಅನ್ನು ಯಾರಾದರೂ ಸ್ಪರ್ಶಿಸಿದರೆ, ಸಂಪೂರ್ಣ ವಾಟ್ಸಾಪ್ ಹ್ಯಾಕ್ ಆಗುತ್ತದೆ ಮತ್ತು ಬ್ಯಾಂಕ್ ಖಾತೆಯಿಂದ ಹಿಡಿದು ವೈಯಕ್ತಿಕ ಮಾಹಿತಿಯವರೆಗೂ ಕದಿಯಲಾಗುತ್ತದೆ. ಇದಲ್ಲದೇ ಫೋನ್‌ನಲ್ಲಿರುವ ಫೋಟೋ, ವಿಡಿಯೋ, ಫೋನ್ ನಂಬರ್ ಸೇರಿದಂತೆ ಹಲವು ಮಾಹಿತಿಗಳನ್ನು ಕದಿಯಲಾಗುತ್ತದೆ.

ಈ ವೈರಸ್ ಅನ್ನು ತಡೆಗಟ್ಟುವ ಮೊದಲ ಹಂತವೆಂದರೆ ಈ ಲಿಂಕ್ ಅನ್ನು ಯಾರೂ ಸ್ಪರ್ಶಿಸಬಾರದು. ತಕ್ಷಣವೇ ಲಿಂಕ್ ಅನ್ನು ತೆರವುಗೊಳಿಸುವುದು ಉತ್ತಮ ಕ್ರಮವಾಗಿರುತ್ತದೆ. ಯಾವುದೇ ಅಪ್ಲಿಕೇಶನ್ ಅನ್ನು Google Play Store ನಿಂದ ಮಾತ್ರ ಡೌನ್‌ಲೋಡ್ ಮಾಡಬೇಕು. ಯಾವುದೇ ಇತರ ಲಿಂಕ್‌ನಿಂದ ಡೌನ್‌ಲೋಡ್ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

WhatsApp ಪಿಂಕ್ ಅನ್ನು ತೊಡೆದುಹಾಕಲು ಮತ್ತು ಸುರಕ್ಷಿತವಾಗಿಡುವುದು ಹೇಗೆ?
ಹಂತ 1: ನೀವು ಮೊದಲು WhatsApp ಪಿಂಕ್ ಅನ್ನು ಅನ್‌ಇನ್‌ಸ್ಟಾಲ್ ಮಾಡಬೇಕಾಗುತ್ತದೆ. ಅದಕ್ಕೂ ಮೊದಲು, ನೀವು ಎಲ್ಲಾ Whatsapp ವೆಬ್ ಸಾಧನಗಳನ್ನು ಲಿಂಕ್ ಮಾಡಿದ್ದರೆ, ತಕ್ಷಣವೇ ಅವುಗಳನ್ನು ಅನ್‌ಲಿಂಕ್ ಮಾಡಿ.
ಹಂತ 2: ಸೆಟ್ಟಿಂಗ್‌ಗಳಿಂದ ಬ್ರೌಸರ್ ಸಂಗ್ರಹವನ್ನು ತೆರವುಗೊಳಿಸಿ. ಅದನ್ನು ಹೇಗೆ ಮಾಡಬೇಕೆಂದು ನಿಮಗೆ ತಿಳಿದಿಲ್ಲದಿದ್ದರೆ, ಎಂಬೆಡೆಡ್ ಲೇಖನವನ್ನು ಓದಿ.

WHATSAPP PINK SCAM: WHAT TO LOOK FOR AND HOW TO AVOID
Just a few days back, a WhatsApp forward made rounds on the messaging app, which asked users to download a pink version of the app. The message involves a link and suggests that you can use a new version of WhatsApp with new features. The name of the app is “WhatsApp Pink,” which turned out to be a malicious app.

HOW TO GET RID OF WHATSAPP PINK AND BE SAFE
Step 1: You first need to uninstall WhatsApp Pink. Before that, if you have linked all Whatsapp Web Devices, then unlink them immediately.
Step 2: Clear the browser cache from settings. In case you don’t know how to do that, then read the embedded article.

ದೇಶ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಸೆಂಥಿಲ್ ಬಾಲಾಜಿ ಮತ್ತು ಇತರರ ಮನೆಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಸೆಂಥಿಲ್ ಬಾಲಾಜಿಯನ್ನು ಬಂಧಿಸಿ, ಅವರನ್ನು ವಿಚಾರಣೆಗೆ ಕರೆದೊಯ್ದರು. ಆಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸೆಂಥಿಲ್ ಬಾಲಾಜಿ ತಮಿಳುನಾಡು ಇಂಧನ ಸಚಿವರಾಗಿದ್ದಾರೆ. ಅವರು ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಆಗ 81 ಮಂದಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ, 1.62 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಈ ವಿಚಾರದಲ್ಲಿ ನಡೆದ ಅಕ್ರಮ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸೆಂಥಿಲಬಾಲಾಜಿ, ಅವರ ಸಹೋದರನ ಮನೆ ಹಾಗೂ ಅವರ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾನೂನುಬಾಹಿರ ಹಣ ವರ್ಗಾವಣೆ ನಿಷೇಧ ಕಾಯಿದೆ ಅಡಿಯಲ್ಲಿ ಇಡಿ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಶಸ್ತ್ರ ಅರೆಸೇನಾ ಪಡೆಗಳ ರಕ್ಷಣೆಯೊಂದಿಗೆ ಚೆನ್ನೈ ಗ್ರೀನ್‌ವೇಸ್ ರಸ್ತೆಯಲ್ಲಿರುವ ಸಚಿವ ಸೆಂಥಿಲ್ ಬಾಲಾಜಿ ಅವರ ಬಂಗಲೆ ಮತ್ತು ಮಂದೈವೆಳಿ ಬಿಷಪ್ ಗಾರ್ಡನ್ ಪ್ರದೇಶದಲ್ಲಿರುವ ಅವರ ಸಹೋದರ ಅಶೋಕ್ ಕುಮಾರ್ ಮನೆಯಲ್ಲಿ ಇಡಿ ಅಧಿಕಾರಿಗಳು ನಿನ್ನೆ ಬೆಳಿಗ್ಗೆ 8:30ಕ್ಕೆ ತನಿಖೆ ಪ್ರಾರಂಭಿಸಿ, ಮಧ್ಯರಾತ್ರಿ 1:30ಕ್ಕೆ ಪೂರ್ಣಗೊಳಿಸಿದರು.

ನಂತರ ಮಧ್ಯರಾತ್ರಿ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿ, ವಿಚಾರಣೆಗಾಗಿ ನುಂಗಮ್ ಪಾಕ್ಕಂನಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದರು. ಆಗ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು ಎನ್ನಲಾಗಿದೆ. ನಂತರ ಅವರನ್ನು ಓಮಂದೂರಾರ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ವೈದ್ಯರು ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ.

ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವಿಷಯ ತಿಳಿದು, ಸಚಿವರಾದ ಎಂ.ಸುಬ್ರಮಣಿಯನ್, ಎ.ವಿ.ವೇಲು, ಶೇಖರ್ ಬಾಬು, ಮತ್ತು ಉದಯನಿಧಿ ಸ್ಟಾಲಿನ್ ಮುಂತಾದವರು ಯೋಗಕ್ಷೇಮ ವಿಚಾರಿಸಲಿಕ್ಕಾಗಿ, ಓಮಂದೂರಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

‘ಸೆಂಥಿಲ್ ಬಾಲಾಜಿ ಬಂಧನದ ಬಗ್ಗೆ ಸಂಬಂಧಿಕರಿಗೂ ಮಾಹಿತಿ ನೀಡಿಲ್ಲ. ಅವರನ್ನು ಯಾವ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂಬುದೂ ತಿಳಿದುಬಂದಿಲ್ಲ. ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಗೊತ್ತಿಲ್ಲ. ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇದು ಸಂಪೂರ್ಣ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

TAMILNADU MINISTER V.SENTHIL BALAJI ARRESTED IN MONEY LAUNDERING CASE 
The Enforcement Directorate arrested Tamil Nadu Electricity Minister V. Senthil Balaji in a money-laundering case on Wednesday early morning. The arrest came after an 18-hour questioning at Senthilbalaji’s residence in Chennai, according to a report by The Hindu.

ಕ್ರೈಂ ರಿಪೋರ್ಟ್ಸ್

ಬೆಂಗಳೂರು ನಗರ 08 ವಿಭಾಗಗಳ ವ್ಯಾಪ್ತಿಯಲ್ಲಿ 1344 ರೌಡಿ ಪಟ್ಟಿ ಆಸಾಮಿಗಳ ನಿವಾಸಗಳಲ್ಲಿ ಏಕಕಾಲಕ್ಕೆ ತಪಾಸಣೆ ನಡೆಸಿ, 9.1 ಕೆಜಿ ಗಾಂಜಾ, ದುಷ್ಕೃತ್ಯಕ್ಕೆ ಸಂಗ್ರಹಿಸಿದ್ದ ಮಾರಕಾಸ್ತ್ರಗಳು, 16 ವಾಹನಗಳನ್ನು ಅಮಾನತ್ತು ಪಡಿಸಿಕೊಂಡು, 05 ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ಬೆಂಗಳೂರು ನಗರ ವ್ಯಾಪ್ತಿಯ 08 ವಿಭಾಗದ ಪೊಲೀಸ್ ಅಧಿಕಾರಿಗಳು ಇಂದು (08.06.2023) ಮುಂಜಾನೆ ಏಕಕಾಲಕ್ಕೆ 1334 ರೌಡಿ ಆಸಾಮಿಗಳ ನಿವಾಸಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಕೆಲವು ರೌಡಿಗಳ ವಶದಲ್ಲಿ ಗಾಂಜಾ, ಮಾರಕಾಸ್ತ್ರಗಳು, ಕಳ್ಳತನದ ವಾಹನಗಳು ಪತ್ತೆಯಾಗಿದ್ದು, ಈ ಕಾರ್ಯಚರಣೆಯಲ್ಲಿ ಒಟ್ಟು 09.01 ಕೆ.ಜಿ. ಗಾಂಜಾ, 16 ವಾಹನಗಳು ಮತ್ತು ಮಾರಕಾಸ್ತ್ರಗಳನ್ನು ಅಮಾನತ್ತು ಪಡಿಸಿಕೊಂಡು ಆರೋಪಿಗಳ ವಿರುದ್ದ ಶಸ್ತ್ರಾಸ್ತ್ರ ಕಾಯಿದೆ ಅಡಿ 02 ಪ್ರಕರಣ, ಎನ್ ಡಿ ಪಿ ಎಸ್ ಕಾಯಿದೆ ಅಡಿ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಅಲ್ಲದೆ, ಈ ಕಾರ್ಯಚರಣೆಯಲ್ಲಿ ವಿಚಾರಣಾ ಪ್ರಕರಣಗಳ್ಳಿ ನ್ಯಾಯಾಲಯಗಳಿಂದ ಹೊರಡಿಸಲಾಗಿದ್ದ ರೌಡಿಗಳ ವಿರುದ್ದದ 46 ಜಾಮೀನು ರಹಿತ ವಾರಂಟ್ ಆಸಾಮಿಗಳನ್ನು ಪತ್ತೆ ಮಾಡಿ ಸಂಬಂಧಪಟ್ಟ ನ್ಯಾಯಾಲಯಗಳಿಗೆ ಹಾಜರು ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಕ್ರೈಂ ರಿಪೋರ್ಟ್ಸ್

ಕೇಂದ್ರ ವಿಭಾಗದ ಪೊಲೀಸ್ ಠಾಣೆಗಳಲ್ಲಿ 106 ಜನ ಆರೋಪಿಗಳನ್ನು ಬಂಧಿಸಿ, 103 ಪ್ರಕರಣಗಳನ್ನು ಪತ್ತೆ ಮಾಡಿ, ಸುಮಾರು 2 ಕೋಟಿ, 69 ಲಕ್ಷ, 76 ಸಾವಿರದ 225 ರೂಗಳ ಬೆಲೆ ಬಾಳುವ ಕಳವು ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿನ್ನ:
ಶೇಷಾದ್ರಿಪುರಂ, ವೈಯಾಲಿಕಾವಲ್, ಹಲಸೂರು ಗೇಟ್, ಅಶೋಕ ನಗರ, ವಿವೇಕನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 14; ಪತ್ತೆಯಾದ ಪ್ರಕರಣಗಳ ಸಂಖ್ಯೆ 19; ಇವರಿಂದ ವಶಪಡಿಸಿಕೊಳ್ಳಲಾದ ಚಿನ್ನದ ತೂಕ 2 ಕೆಜಿ 110 ಗ್ರಾಂ. ಇದರ ಮೌಲ್ಯ ರೂ. 1,05,24,100/-

ಬೆಳ್ಳಿ:
ಹಲಸೂರು ಗೇಟ್ ಹಾಗೂ ವಿವೇಕನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಬೆಳ್ಳಿಯ ತೂಕ 105 ಕೆಜಿ 263 ಗ್ರಾಂ. ಇದರ ಮೌಲ್ಯ ರೂ.63,19,135/-

ಕಾರುಗಳು:
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 02; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಕಾರಿನ ಸಂಖ್ಯೆ 01. ಇದರ ಮೌಲ್ಯ ರೂ.18,00,000/-

ದ್ವೀಚಕ್ರ ವಾಹನ:
ಶೇಷಾದ್ರಿಪುರಂ ಹಾಗೂ ಅಶೋಕ ನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 07; ಇವರಿಂದ ವಶಪಡಿಸಿಕೊಳ್ಳಲಾದ ದ್ವೀಚಕ್ರ ವಾಹನದ ಸಂಖ್ಯೆ 5. ಇದರ ಮೌಲ್ಯ ರೂ.3,30,000/-

ನಗದು ಹಣ:
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 04; ಪತ್ತೆಯಾದ ಪ್ರಕರಣಗಳ ಸಂಖ್ಯೆ 02; ಇವರಿಂದ ವಶಪಡಿಸಿಕೊಳ್ಳಲಾದ ಹಣ ರೂ.2,12,720/-

ಶಸ್ತ್ರ:
ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 01; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಪಿಸ್ತೂಲ್‌ಗಳ ಸಂಖ್ಯೆ 03. ಗುಂಡುಗಳ ಸಂಖ್ಯೆ 99. ಇದರ ಮೌಲ್ಯ ರೂ.2,49,000/-

ಮೊಬೈಲ್ ಪೋನ್:
ವಿವೇಕನಗರ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 02; ಇವರಿಂದ ವಶಪಡಿಸಿಕೊಳ್ಳಲಾದ ಮೊಬೈಲ್‌ಗಳ ಸಂಖ್ಯೆ 113. ಇದರ ಮೌಲ್ಯ ರೂ.40,00,000/-

NDPS Act:
ಎನ್.ಡಿ.ಪಿ.ಎಸ್ ಆಕ್ಟ್ ಅಡಿಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 76; ಪತ್ತೆಯಾದ ಪ್ರಕರಣಗಳ ಸಂಖ್ಯೆ 70; ಇವರಿಂದ ಒಟ್ಟು 101 ಕೆಜಿ 780 ಗ್ರಾಂ ಗಾಂಜಾ ಮತ್ತು 44.93 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ.35,41,300/-

ಹೆಚ್ಚುವರಿ ಪೊಲೀಸ್ ಆಯುಕ್ತರು, ಪಶ್ಚಿಮ, ಸಂದೀಪ್ ಪಾಟೀಲ್ ಐಪಿಎಸ್, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀನಿವಾಸಗೌಡ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಕಬ್ಬನ್ ಪಾರ್ಕ್. ಉಪ-ವಿಭಾಗದ ಎಸಿಪಿ ಡಿ.ಎಸ್.ರಾಜೇಂದ್ರ, ಹಲಸೂರು ಗೇಟ್ ಉಪ-ವಿಭಾಗದ ಎಸಿಪಿ ನಾರಾಯಣಸ್ವಾಮಿ ಮತ್ತು ಶೇಷಾದ್ರಿಪುರಂ ಉಪ-ವಿಭಾಗದ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಪೊಲೀಸ್‌ ಇನ್ಸ್‌ಪೆಕ್ಟರ್ ರವರುಗಳು ಮಾಡಿರುವ ಈ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರವರು ಶ್ಲಾಘಿಸಿದ್ದಾರೆ.

ರಾಜಕೀಯ

ಮಂಗಳೂರು: ಮಂಗಳೂರು ಐಜಿಪಿ ಕಛೇರಿ ವ್ಯಾಪ್ತಿಯ ಹಾಗೂ ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಪರಮೇಶ್ವರ್ ಅವರು ಪಶ್ಚಿಮ ವಲಯ ಐಜಿಪಿ ಕಛೇರಿ ವ್ಯಾಪ್ತಿಯ ಹಾಗೂ ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಗೃಹ ಸಚಿವರು, ‘ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ’ ಎಂದರು.

‘ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ ಎಂದರು. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಅಂತಾ ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.

ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು’ ಎಂದು ಪೊಲೀಸರಿಗೆ ಸೂಚನೆ ನೀಡಿದರು.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಬೆಂಗಳೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆ ಅಧಿಕಾರಿಗಳು ಫ್ರೀ ಆಕ್ಟಿವೇಟೆಡ್ ಸಿಮ್ ಕಾರ್ಡುಗಳನ್ನು ದುರುಪಯೋಗಪಡಿಸಿ, ಪ್ರತಿಷ್ಠಿತ ಕ್ಯಾಬ್ (Cab Aggregators) ಆಪರೇಟಿವ್ ಸಂಸ್ಥೆಗಳಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿ 3 ಆರೋಪಿಗಳನ್ನು ಬಂಧಸಿದ್ದಾರೆ. 1055 ಫ್ರೀ ಆಕ್ಟಿವೇಟೆಡ್ ಮೊಬೈಲ್ ಸಿಮ್ ಕಾರ್ಡುಗಳು, 15 ಮೊಬೈಲ್ ಪೋನ್, 4 ಲ್ಯಾಪ್‌ಟಾಪ್, 1 ಕಂಪ್ಯೂಟರ್ ಸಿಸ್ಟಮ್ ಅನ್ನು ವಸಕ್ಕೆ ಪಡೆಯಲಾಗಿದೆ.

ಬೆಂಗಳೂರು ನಗರದಲ್ಲಿ ಬಾಡಿಗೆ ವಾಹನ ಸೇವೆ ನೀಡುತ್ತಿರುವ ಹೆಸರಾಂತ ಕಂಪನಿಗಳಾದ ಉಬರ್ ಮತ್ತು ರ‍್ಯಾಪಿಡೋ ಕಂಪನಿಗಳಿಗೆ ಡ್ರೈವರ್‌ಗಳನ್ನು ಮತ್ತು ವಾಹನಗಳನ್ನು ನೋಂದಣಿ ಮಾಡುವ ಸಲುವಾಗಿ ವೆಂಡರ್‌ಶಿಪ್ ಪಡೆದು, ಆನ್‌ಲೈನ್ ಮೂಲಕ ಡ್ರೈವರ್ ಮತ್ತು ವಾಹನಗಳನ್ನು ಅಟಾಚ್ ಮಾಡಿಸಿ, ಬೇರೆಯವರ ಹೆಸರಿನಲ್ಲಿ ತೆಗೆದುಕೊಂಡಿದ್ದ ಸಾವಿರಾರು ಮೊಬೈಲ್ ಸಿಮ್ ಕಾರ್ಡುಗಳನ್ನು ಉಪಯೋಗಿಸಿ, ಯಾವುದೇ ಸಂಚಾರ ಸೇವೆಯನ್ನು ನೀಡದೆ, ಸಾಪ್ಟ್ ವೇರ್ ದುರುಪಯೋಗಪಡಿಸಿಕೊಂಡು ಸಂಚಾರಿ ಸೇವೆ ನೀಡಿದಂತೆ ಮಾಡಿ ಕಂಪನಿಗಳಿಂದ ಬರುತ್ತಿದ್ದ ಸಾವಿರಾರು ರೂಪಾಯಿಗಳ ಇನ್ ಸೆಂಟಿವ್ ಹಣವನ್ನು ಪಡೆದು, ಕಂಪನಿಗಳಿಗೆ ಮೋಸ ಮಾಡುತ್ತಿದ್ದ 3 ಆಸಾಮಿಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.

ಸಾಂದರ್ಭಿಕ ಚಿತ್ರ

ಇವರುಗಳಲ್ಲಿ ಎ1 ಆರೋಪಿಯು ಉಬರ್ ಮತ್ತು ರ‍್ಯಾಪಿಡೋ ಕಂಪೆನಿಗಳ ವೆಂಡರ್‌ಶಿಪ್ ಪಡೆದಿದ್ದು, ಈತನ ಸ್ನೇಹಿತನಾದ ಎ2 ಫೈನಾನ್ಸ್ ಕಂಪನಿಯಲ್ಲಿ ಲೋನ್ ಕೊಡಿಸುವ ಕೆಲಸ ಮಾಡಿಕೊಂಡಿದ್ದು, ಎ3 ಆರೋಪಿಯು ವೋಡಾ ಪೋನ್ ಕಂಪನಿಯಲ್ಲಿ ಸಿಮ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಈ ಮೂರು ಜನರು ಸೇರಿ ಸುಲುಭವಾಗಿ ಹಣ ಮಾಡುವ ಸಲುವಾಗಿ, ದುರುದ್ದೇಶದಿಂದ ಒಳ ಸಂಚು ರೂಪಿಸಿ, ಎ1 ಹೊಂದಿದ್ದ ಉಬರ್ ಮತ್ತು ರ‍್ಯಾಪಿಡೋ ವೆಂಡರ್‌ಶಿಪ್ನ ಸಹಾಯದಿಂದ ಎ2 ಒದಗಿಸುತ್ತಿದ್ದ ದಾಖಲಾತಿಗಳನ್ನು ಬಳಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿ, ಎ3 ನೀಡುತ್ತಿದ್ದ ಫ್ರೀ ಆಕ್ಟಿವೇಟೆಡ್ ಸಿಮ್ ಕಾರ್ಡುಗಳನ್ನು ಬಳಸಿಕೊಂಡು ಕಾರು / ಬೈಕುಗಳು ಓಡುವ ರೀತಿಯಲ್ಲಿ ಮೊಬೈಲ್ ಪೋನ್, ಲ್ಯಾಪ್‌ಟಾಪ್‌ಗಳ ಮೂಲಕ ಸಾಪ್ಟ್ ವೇರ್ ಬಳಸಿ ಯಾವುದೇ ವಾಹನವನ್ನು ಚಲಿಸದೇ ಇದ್ದರೂ ವಾಹನಗಳು ಚಲಿಸಿದ ರೀತಿಯಲ್ಲಿ ಡಾಟಾ ಸೃಷ್ಟಿಸಿ, ಕಂಪನಿಗಳಿಂದ ವೆಂಡರ್‌ಗೆ ಬರುವ ಇನ್‌ಸೆಂಟಿವ್ ಹಣವನ್ನು ಅಕ್ರಮವಾಗಿ ಪಡೆದುಕೊಂಡು ಹಂಚಿಕೊಳ್ಳುತ್ತಿದ್ದರೆಂಬುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.

ಮೇಲ್ಕಂಡ 3 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅವರುಗಳ ವಿಚಾರಣೆ ಮಾಡಿ ಅವರು ಕೃತ್ಯಕ್ಕೆ ಉಪಯೋಗಿಸುತ್ತಿದ್ದ 1055 ಫ್ರೀ ಆಕ್ಟಿವೇಟೆಡ್ ಮೊಬೈಲ್ ಸಿಮ್‌ಗಳು, 15 ಮೊಬೈಲ್ ಪೋನ್‌ಗಳು, 4 ಲ್ಯಾಪ್‌ಟಾಪ್, 1 ಕಂಪ್ಯೂಟರ್ ಸಿಸ್ಟಮ್ ಮತ್ತು ಒಂದು ಬಯೋಮೆಟ್ರಿಕ್ ಡಿವೈಸ್ ಇವುಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಆರೋಪಿಗಳ ವಿರುದ್ಧ ಐಪಿಸಿ, ಟೆಲಿಗ್ರಾಫ್ ಆಕ್ಟ್ ಹಾಗೂ ಐಟಿ ಆಕ್ಟ್ ಗಳಡಿಯಲ್ಲಿ ತನಿಖೆ ಮುಂದುವರಿದಿದೆ ಎಂದು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿಗಳಿಂದ ತಿಳಿದುಬಂದಿದೆ.     

ಕ್ರೈಂ ರಿಪೋರ್ಟ್ಸ್

ಗೃಹ ಬಳಕೆ ಸಿಲಿಂಡರ್‌ಗಳನ್ನು ಅನಧಿಕೃತ್ವಾಗಿ ದಾಸ್ತಾನು ಮಾಡಿಕೊಂಡು; ವಾಣಿಜ್ಯ ಬಳಕೆ ಸಿಲಿಂಡರ್‌ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡಿ; ಮಾರಾಟ ಮಾಡಿಕೊಂಡಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರ, ಮಡಿವಾಳ ಪೊಲೀಸ್ ಠಾಣೆ ಸರಹದ್ದಿಗೆ ಸೇರಿರುವ ವಿಆರ್‌ಎಂ ಎಂಟರ್‌ಪ್ರೈಸಸ್, ಟಿವಿಎಸ್ ಶೋ ರೂಂ ಹತ್ತಿರ, ಸುಭಾಷ್ ನಗರ, ಮಡಿವಾಳ, ಬೆಂಗಳೂರು ವಿಳಾಸದ ಶಾಪ್‌ನಲ್ಲಿ ಗೃಹಬಳಕೆ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು, ಇವುಗಳಿಂದ ವಾಣಿಜ್ಯ ಬಳಕೆ ಸಿಲಿಂಡರ್‌ಗಳು ಮತ್ತು ಸಣ್ಣ ಸಣ್ಣ ಸಿಲಿಂಡರ್‌ಗಳಿಗೆ ರೀಫಿಲ್ಲಿಂಗ್ ರಾಡ್‌ಗಳ ಮೂಲಕ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಿ ಮಾರಾಟ ಮಾಡಿಕೊಂಡು ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿದ್ದ ಅಕ್ರಮ ಜಾಲವೊಂದನ್ನು ಸಿಸಿಬಿ ಪೊಲೀಸರು ಪತ್ತೆಮಾಡಿದ್ದಾರೆ.

ಇದರ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಪಡೆದು, ಮಾಹಿತಿ ಖಚಿತ ಪಡಿಸಿಕೊಂಡು ಸದರಿ ಶಾಪ್ ಮೇಲೆ ದಾಳಿ ಮಾಡಿ ಆರೋಪಿ ಕಡೆಯಿಂದ ಸುಮಾರು, 2 ಲಕ್ಷ ರೂ ಬೆಲೆಬಾಳುವ ಸರ್ಕಾರಿ ಸ್ವಾಮ್ಯದ ಭಾರತ್, ಇಂಡೇನ್ ಹಾಗೂ ಖಾಸಗಿ ಸ್ವಾಮ್ಯದ ಜ್ಯೋತಿ, ಎಂವಿಆರ್ ಕಂಪೆನಿಯ ದೊಡ್ಡ ಸಿಲಿಂಡರ್‌ಗಳು 47, ಸಣ್ಣ ಸಿಲಿಂಡರ್‌ಗಳು 49 ಒಟ್ಟು 96 ಸಿಲಿಂಡರ್‌ಗಳು ಒಂದು ರಾಡ್, ಒಂದು ಅಳತೆ ಯಂತ್ರ ಇವುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಶಾಪ್‌ನ ಮಾಲೀಕನಾದ ಆರೋಪಿ ಧನರಾಜ್ ತಲೆ ಮರೆಸಿ ಕೊಂಡಿರುತ್ತಾನೆ.

ಈ ಸಂಬಂಧ ಆರೋಪಿಯ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ / ಸಿಬ್ಬಂಧಿಯವರುಗಳು ಯಶಶ್ವಿಯಾಗಿ ಕೈಗೊಂಡಿರುತ್ತಾರೆ.