ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Dalit Reservation Archives » Dynamic Leader
October 18, 2024
Home Posts tagged Dalit Reservation
ರಾಜಕೀಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ. ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ” ಎಂದು ಹೇಳಿದ್ದಾರೆ.

“ಸಚಿವರಾದ  ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ನನ್ನನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು. ಒಳಮೀಸಲಾತಿ ಜಾರಿ ವಿಚಾರದಲ್ಲಿ ನನ್ನ ಬದ್ಧತೆಯನ್ನು ಅವರಿಗೆ ತಿಳಿಸಿದೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ” ಎಂದಿದ್ದಾರೆ.

“ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾಪವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಜಕೀಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

“ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ.

ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು. ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ” ಎಂದರು.