ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Death Penalty Archives » Dynamic Leader
October 23, 2024
Home Posts tagged Death Penalty
ಕ್ರೈಂ ರಿಪೋರ್ಟ್ಸ್

ಮುಂಬೈ: ತಾಯಿಯನ್ನು ಕೊಂದು ದೇಹದ ಭಾಗಗಳನ್ನು ಹುರಿದು ತಿಂದ ವ್ಯಕ್ತಿಯೊಬ್ಬನ ಮರಣದಂಡನೆಯನ್ನು ಮುಂಬೈ ಹೈಕೋರ್ಟ್ ಎತ್ತಿ ಹಿಡಿದಿದೆ.

ಸುನೀಲ್ ಮಹಾರಾಷ್ಟ್ರದ ಕೊಲ್ಲಾಪುರದವನು. ಈತ 2017ರಲ್ಲಿ ತನ್ನ ತಾಯಿ ಎಲ್ಲಮ್ಮನನ್ನು ಹತ್ಯೆ ಮಾಡಿ, ಅವರ ದೇಹದ ಭಾಗಗಳನ್ನು ಬೇರ್ಪಡಿಸಿ ಹುರಿದು ತಿಂದಿದ್ದಾನೆ. ಕುಡಿತಕ್ಕೆ ಹಣ ನೀಡದ ಕಾರಣ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಸರ್ಕಾರದ ಪರವಾಗಿ ಆರೋಪಿಸಲಾಗಿತ್ತು.

ತನಿಖೆ ನಡೆಸಿದ ವಿಚಾರಣಾ ನ್ಯಾಯಾಲಯ ಇದೊಂದು ಅಪರೂಪದ ಪ್ರಕರಣ ಎಂದು ಹೇಳಿ ಸುನಿಲ್‌ಗೆ 2021ರಲ್ಲಿ ಮರಣದಂಡನೆ ವಿಧಿಸಿತ್ತು. ಸದ್ಯ ಆರೋಪಿಯನ್ನು ಪುಣೆ ಜೈಲಿನಲ್ಲಿ ಇರಿಸಲಾಗಿದೆ. ಇದರ ವಿರುದ್ಧ ಸುನೀಲ್ ಬಾಂಬೆ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರೇವತಿ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು, ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.

‘ಈ ಪ್ರಕರಣ ಬಹಳ ಅಪರೂಪದಲ್ಲೂ ಅಪುರೂಪವಾಗಿದೆ. ಆರೋಪಿಯು ತಾಯಿಯನ್ನು ಕೊಂದಿದ್ದಲ್ಲದೆ ಆಕೆಯ ಕಿಡ್ನಿ, ಮೆದುಳು, ಹೃದಯ, ಲಿವರ್ ಮುಂತಾದವುಗಳನ್ನು ಹುರಿದು ತಿಂದಿದ್ದಾರೆ. ಇದು ನರಭಕ್ಷಕತೆಯನ್ನು ತೋರಿಸುತ್ತದೆ. ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದರೆ ಜೈಲಿನಲ್ಲಿಯೂ ಇದೇ ರೀತಿಯ ಅಪರಾಧಗಳನ್ನು ಮಾಡುತ್ತಾರೆ’ ಎಂದು ಹೇಳಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದ್ದಾರೆ.

ವಿದೇಶ

ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಕತಾರ್‌ನಲ್ಲಿರುವ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಗೆ ಮರಣದಂಡನೆ ವಿಧಿಸಿದ ವಿರುದ್ಧ ಕೇಂದ್ರ ಸರಕಾರ ಮೇಲ್ಮನವಿ ಸಲ್ಲಿಸಿದೆ.

ಎಂಟು ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿಗಳು ಪಶ್ಚಿಮ ಏಷ್ಯಾದ ಕತಾರ್‌ನಲ್ಲಿರುವ ತಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕತಾರ್ ಸಶಸ್ತ್ರ ಪಡೆಗಳಿಗೆ ತರಬೇತಿ ಸೇರಿದಂತೆ ವಿವಿಧ ಸೇವೆಗಳನ್ನು ಈ ಕಂಪನಿ ಒದಗಿಸುತ್ತದೆ. ಕಂಪನಿಯ ವಿವಿಧ ಪ್ರಮುಖ ಯೋಜನೆಗಳಲ್ಲಿ ಅವರು ಭಾಗವಹಿಸಿದ್ದರು.

ಈ ಹಿನ್ನಲೆಯಲ್ಲಿ, ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳು, ಇಸ್ರೇಲ್ ಪರವಾಗಿ ಕತಾರ್‌ನಲ್ಲಿ ಬೇಹುಗಾರಿಕೆ ನಡೆಸಿದರು ಎಂಬ ಆರೋಪ ಹುಟ್ಟಿಕೊಂಡಿತು. ಇದರಿಂದ ಈ ಎಂಟು ಮಂದಿಯನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಅವರ ಜಾಮೀನು ಅರ್ಜಿಯನ್ನು ಹಲವು ಬಾರಿ ತಿರಸ್ಕರಿಸಲಾಗಿತ್ತು. ಈ ಪ್ರಕರಣದಲ್ಲಿ ಕತಾರ್ ನ್ಯಾಯಾಲಯವು ಎಂಟು ಮಾಜಿ ಭಾರತೀಯ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದೆ.

ಈ ಪ್ರಕರಣದಲ್ಲಿ 8 ಭಾರತೀಯರಿಗೆ ವಿಧಿಸಲಾದ ಮರಣದಂಡನೆ ವಿರುದ್ಧ, ಕತಾರ್ ನ್ಯಾಯಾಲಯದಲ್ಲಿ ಕೇಂದ್ರ ಸರ್ಕಾರದ ಪರವಾಗಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಶಿ ಹೇಳಿದ್ದಾರೆ.

ಮತ್ತು ನಾವು ಎಂಟು ಜನರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಸಚಿವ ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಎಲ್ಲರಿಗೂ ಗೊತ್ತೇ ಇದೆ. ಎಲ್ಲಾ ರೀತಿಯ ಕಾನೂನು ನೆರವು ಮತ್ತು ರಾಜತಾಂತ್ರಿಕ ನೆರವು ನೀಡಲಾಗುವುದು. ತೀರ್ಪಿನ ವಿವರಗಳನ್ನು ಕಾನೂನು ತಜ್ಞರಿಗೆ ನೀಡಲಾಗಿದೆ. ಕಳೆದ ಮಂಗಳವಾರ, ಎಲ್ಲಾ ಎಂಟು ಮಂದಿಗೆ ರಾಜತಾಂತ್ರಿಕ ನೆರವು ನೀಡಲಾಯಿತು ಎಂದು ಹೇಳಿದರು.