ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Delhi Archives » Dynamic Leader
October 23, 2024
Home Posts tagged Delhi
ದೇಶ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಹರಿಯಾಣ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಗೆ ತೆರಳಿದ್ದಾರೆ. ಇದರಿಂದ ಸಾರಿಗೆ ದಟ್ಟಣೆ ಸಂಭವಿಸಿದೆ. ಪ್ರತಿಭಟನೆಯನ್ನು ತಡೆಯಲು ಭದ್ರತೆಯನ್ನು ಹೆಚ್ಚಿಸಲಾಗಿದೆ.

ಉತ್ತರ ಪ್ರದೇಶ, ಹರಿಯಾಣ, ಪಂಜಾಬ್‌ ರಾಜ್ಯಗಳ ರೈತ ಸಂಘಟನೆಗಳು, ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಪಿ (MSP) ಎಂದು ಕರೆಯಲ್ಪಡುವ ಕನಿಷ್ಠ ಬೆಂಬಲ ಬೆಲೆಗೆ ಖಾತ್ರಿ ನೀಡುವ ಕಾನೂನು, ಪಿಂಚಣಿ, ಭೂಕಬಳಿಕೆಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಇಂದು ರಾಜಧಾನಿ ದೆಹಲಿಯತ್ತ ಬೃಹತ್ ಮೆರವಣಿಗೆಗೆ ಕರೆ ನೀಡಿತ್ತು.

ಈ ಹಿನ್ನಲೆಯಲ್ಲಿ, ರಾಜ್ಯಗಳ ರೈತರು ಕೇಂದ್ರ ಸರ್ಕಾರದ ವಿರುದ್ಧ ಮುತ್ತಿಗೆ ಹೋರಾಟ ನಡೆಸಲು ದೆಹಲಿಗೆ ತೆರಳಿದ್ದಾರೆ. ಇದರಿಂದಾಗಿ ದೆಹಲಿಯ ಪ್ರಮುಖ ಗಡಿ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದ ಪ್ರಮುಖ ರಸ್ತೆಗಳ ಮಾರ್ಗವನ್ನು ಬದಲಿಸಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಮಾರ್ಚ್ 12ರವರೆಗೆ ದೆಹಲಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರತಿಭಟನಾಕಾರರು ಯಾವುದೇ ಅಹಿತಕರ ಘಟನೆಗೆ ಒಳಗಾಗದಂತೆ ತಡೆಯಲು ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಅರೆಸೇನಾ ಪಡೆಗಳೂ ಭದ್ರತೆಯಲ್ಲಿ ತೊಡಗಿವೆ.

ರಾಜಕೀಯ

ಕೋಲ್ಕತ್ತಾ: ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ ತುರ್ತು ಕಾಯ್ದೆಯನ್ನು ವಿರೋಧಿಸುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬೆಂಬಲ ನೀಡಿದ್ದಾರೆ.

ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, “ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿತು. ಇದರ ವಿರುದ್ಧ ಕೇಂದ್ರ ಸರ್ಕಾರ ಹೊಸ ತುರ್ತು ಕಾಯ್ದೆಯನ್ನು ಜಾರಿಗೆ ತಂದಿದೆ. ಇದನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಸಂಸದರು ವಿರೋಧಿಸಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿ ಸರ್ಕಾರಕ್ಕೆ ಬೆಂಬಲವನ್ನು ಪಡೆಯಲು ಬಿಜೆಪಿ ಆಡಳಿತವಿಲ್ಲದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಕೇಜ್ರಿವಾಲ್ ಮುಂದಾಗಿದ್ದಾರೆ.

ಈ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಮುಖಂಡರು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ಆಗ ಇಬ್ಬರೂ ಕೇಂದ್ರ ಸರ್ಕಾರದ ತುರ್ತು ಕಾಯ್ದೆ ಬಗ್ಗೆ ಚರ್ಚೆ ನಡೆಸಿದರು.

ನಂತರ, ಮಮತಾ ಬ್ಯಾನರ್ಜಿ ಅವರು ಸುದ್ದಿಗಾರರಿಗೆ ಸಂದರ್ಶನ ನೀಡಿದರು:
“ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರದ ತುರ್ತು ಮಸೂದೆಯನ್ನು ತೃಣಮೂಲ ಕಾಂಗ್ರೆಸ್ ವಿರೋಧಿಸಲಿದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ಒಂದಾಗುವಂತೆ ಒತ್ತಾಯಿಸುತ್ತೇವೆ. ಕೇಂದ್ರ ಸರ್ಕಾರವು ಸಂವಿಧಾನವನ್ನು ಬದಲಾಯಿಸುತ್ತದೆಯೋ ಅಥವಾ ದೇಶದ ಹೆಸರನ್ನು ಬದಲಾಯಿಸುತ್ತದೆಯೋ ಎಂಬ ಭಯ ನಮಗಿದೆ” ಎಂದರು.

ದೇಶ

ಡಿ.ಸಿ.ಪ್ರಕಾಶ್

ದೆಹಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ತಾನು ವಿರೋಧ ಪಕ್ಷವಾಗಿರುವ ರಾಜ್ಯಗಳಲ್ಲಿ ಹೇಗಾದರೂ ಮಾಡಿ, ಸರ್ಕಾರವನ್ನು ಉರುಳಿಸಿ, ಅಲ್ಲಿ ಅಧಿಕಾರವನ್ನು ಹಿಡಿಯಲು ನಾನಾ ರೀತಿಯ ಷಡ್ಯಂತ್ರಗಳನ್ನು ರೂಪಿಸುತ್ತಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನೆ ಪಕ್ಷದ ಶಾಸಕರನ್ನು ಏಕನಾಥ್ ಶಿಂಧೆ ಮೂಲಕ ಖರೀದಿಸಿ ಸರ್ಕಾರವನ್ನು ಉರುಳಿಸಿತು.

ಹೀಗೆ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಹೇಗಾದರು ಮಾಡಿ, ಅಡ್ಡದಾರಿಯಲ್ಲಿ ಅಧಿಕಾರವನ್ನು ಹಿಡಿಯಬೇಕು ಎಂದು ನಾನಾ ಬಗೆಯ ಕಸರತ್ತುಗಳನ್ನು ಮಾಡುತ್ತಿವೆ.  ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷವನ್ನು ಮಹಾರಾಷ್ಟ್ರ ಮಾದರಿಯಲ್ಲಿ ಕೆಡವಿ, ಅಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ನಾನಾ ಬಗೆಯ ತಂತ್ರಗಾರಿಕೆಗಳನ್ನು ಮಾಡುತ್ತಿವೆ.

ಅದರ ಭಾಗವಾಗಿ ದೆಹಲಿಯ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರಿಗೂ ಆಮಿಷಗಳನ್ನು ತೋರಿಸಲಾಯಿತು. ಆದರೆ, ಅವರು ಇದು ಯಾವುದಕ್ಕೂ ಬಗ್ಗದ ಕಾರಣ, ಅವರ ಮೇಲೆ ಭ್ರಷ್ಟಾಚಾರ ಹಗರಣ ಹೂಡಿ, ಸಿಬಿಐ ಬಂಧಿಸುವಂತೆ ಮಾಡಿತು. ಇವರ ಬಂಧನವನ್ನು ಎಲ್ಲಾ ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿತು.

ಇದನ್ನೂ ಓದಿ: ಮನೀಶ್ ಸಿಸೋಡಿಯಾವನ್ನು ಅತ್ಯಂತ ಅಪಾಯಕಾರಿ ಕ್ರಿಮಿನಲ್‌ಗಳೊಂದಿಗೆ ಜೈಲಿನಲ್ಲಿ ಇರಿಸಲಾಗಿದೆ.

ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಗೊಂಡಿತು. ಇದರಿಂದ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ಕರೆತಂದಿತು. ಆಗ ಮನೀಶ್ ಸಿಸೋಡಿಯಾ ಅವರ ಮುಂದೆ ಮುಗಿಬಿದ್ದ ಪತ್ರಕರ್ತರ ಜತೆ ಮಾತನಾಡಲು ಯತ್ನಿಸಿದಾಗ, ಭದ್ರತಾ ಕಾರ್ಯಕ್ಕೆ ಬಂದಿದ್ದ ಪೊಲೀಸ್ ಅಧಿಕಾರಿಯೊಬ್ಬರು, ಅವರ ಕುತ್ತಿಗೆಯನ್ನು ಹಿಡಿದು ನ್ಯಾಯಾಲಯದ ಕೋಣೆಗೆ ಎಳೆದೊಯ್ದರು.

ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ; ಡಿಎಂಕೆ  ಖಂಡನೆ!

ಪೊಲೀಸರ ಈ ಕ್ರಮವನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಮನೀಶ್ ಸಿಸೋಡಿಯಾ ಅವರನ್ನು ಹೀಗೆ ನಡೆಸಿಕೊಳ್ಳುವಂತೆ ಪೊಲೀಸರಿಗೆ ಆದೇಶಿಸಿದವರು ಯಾರು? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಈ ಹಿನ್ನಲೆಯಲ್ಲಿ, ದೆಹಲಿ ವಿಶೇಷ ನ್ಯಾಯಾಲಯವು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಜೂನ್ 1 ರವರೆಗೆ ವಿಸ್ತರಿಸಿದೆ.

ದೇಶ

ದೆಹಲಿ: ದೆಹಲಿ ಸಮೀಪದ ಆಗ್ರಾದ ನಿವಾಸಿ ಅಜಯ್ ಜಾಧವ್. ಇವರಿಗೆ ಮೇ 4 ರಂದು ಮದುವೆ ನಿಗದಿಯಾಗಿತ್ತು. ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿದ್ದವು. ನಂತರ ಮದುಮಗನನ್ನು ಸಂಬಂಧಿಕರು ಕುದುರೆ ಮೇಲೆ ಮೆರವಣಿಗೆ ಮೂಲಕ ಮದುವೆ ಮಂಟಪಕ್ಕೆ ಕರೆದುಕೊಂಡು ಬರುತ್ತಿದ್ದರು. ಮೆರವಣಿಗೆ ಸೊಹಲ್ಲಾ ಜವಾದ್ ಬಸ್ತಿ ನಗರದ ಬಳಿ ಬಂದಾಗ ಕೆಲವರು ಅದನ್ನು ತಡೆದು, ನೀನು ‘ನೀನು ಪರಿಶಿಷ್ಟ ಜಾತಿಯವನು; ನೀನು ಕುದುರೆ ಏರಿ ಮೆರವಣಿಗೆಯಲ್ಲಿ ಹೋಗುವುದಾದರೂ ಹೇಗೆ’ ಎಂದು ಹೇಳಿ ಮದುಮಗನನ್ನು ಕುದುರೆಯಿಂದ ಕೆಳಗಿಳಿಸಿರುತ್ತಾರೆ.

ನಂತರ ಮದುಮಗನನ್ನು ಹಾಗೂ ಆತನ ಜೊತೆಗಿದ್ದ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರನ್ನು ಮದುವೆ ಮಂಟಪದ ವರೆಗೆ ಓಡಿಸಿಕೊಂಡು ಹೋಗಿದ್ದಾರೆ. ಮದುವೆ ಮಂಟಪದಲ್ಲಿದ್ದವರ ಮೇಲೂ ಹಲ್ಲೆ ನಡೆಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಹಾಗಾಗಿ ನಡೆಯಬೇಕಿದ್ದ ಮದುವೆ ನಿಂತು ಹೋಗಿತ್ತು.

ಇದರ ಬಗ್ಗೆ ಮದುಮಗನ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್, ಶಿಶುಪಾಲ್ ಸೇರಿದಂತೆ 20 ಮಂದಿಯನ್ನು ಬಂಧಿಸಿದ್ದಾರೆ.

ದೇಶ

ಗುಜರಾತ್ ಗಲಭೆಗಳ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲು ಮುಂದಾದ ವಿದ್ಯಾರ್ಥಿಗಳು! ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ.!!

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯತ್ನಿಸಿದಾಗ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಬಿಬಿಸಿ ಸುದ್ದಿ ಸಂಸ್ಥೆ 2002ರ ಗುಜರಾತ್ ಗಲಭೆಯ ಕುರಿತು ಸಾಕ್ಷ್ಯಚಿತ್ರವನ್ನು ನಿರ್ಮಿಸಿ ಪ್ರಕಟಿಸಿತ್ತು. ಕೇಂದ್ರ ಸರ್ಕಾರ ಸಾಕ್ಷ್ಯಚಿತ್ರವನ್ನು ನಿಷೇಧಿಸಿತ್ತು. ಈ ವೇಳೆ ದೆಹಲಿ ವಿಶ್ವವಿದ್ಯಾಲಯದಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲು ವಿದ್ಯಾರ್ಥಿಗಳು ಯತ್ನಿಸಿದ್ದರು. ತಕ್ಷಣ ಅಲ್ಲಿಗೆ ತೆರಳಿದ ದೆಹಲಿ ಪೊಲೀಸರು ಸಾಕ್ಷ್ಯಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಅಲ್ಲಿಂದ ಹೊರಹಾಕಲು ಯತ್ನಿಸಿದರು. ವಿದ್ಯಾರ್ಥಿಗಳು ಗುಂಪುಗೂಡುವುದನ್ನು ತಡೆಯಲು ಆ ಪ್ರದೇಶದಲ್ಲಿ 144 ನಿಷೇಧಾಜ್ಞೆಯನ್ನೂ ಹೊರಡಿಸಲಾಗಿದೆ.

ನಿಷೇಧದ ನಡುವೆಯೂ ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ಪ್ರದರ್ಶಿಸಲು ಮುಂದಾದಾಗ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ವಿದ್ಯಾರ್ಥಿಗಳನ್ನು ಬಂದಿಸಿ ಪೊಲೀಸ್ ವಾಹನಕ್ಕೆ ಏರಿಸಲಾಯಿತು. ಈ ಘಟನೆಯಿಂದ ಇಡೀ ಪ್ರದೇಶ ಉದ್ವಿಗ್ನವಾಗಿ ಕಾಣುತ್ತಿದೆ

ದೇಶ

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ಆಮ್ ಆದ್ಮಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕರು ಇಂದು ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಷಿಜೆನ್ ಸಿಲಿಂಡರ್ ನೊಂದಿಗೆ ಬಂದಿದ್ದರು.

ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಕಾರಣದಿಂದಾಗಿ ಅನೇಕ ಜನರು ಉಸಿರಾಟದ ತೊಂದರೆ ಮತ್ತು ಹೃದಯದ ತೊಂದರೆಗಳಿಂದ ಬಳಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ದೆಹಲಿ ವಿಧಾನಸಭೆ ನಡೆಯಿತು. ಆಗ ಬಿಜೆಪಿ ಶಾಸಕರು ಮುಖ ಕವಚದೊಂದಿಗೆ ಕೈಯಲ್ಲಿ ಸಣ್ಣ ಆಮ್ಲಜನಕ ಸಿಲಿಂಡರ್ ಹಿಡಿದು ವಿಧಾನಸಭೆಗೆ ಬಂದು ಕೋಲಾಹಲವನ್ನು ಎಬ್ಬಿಸಿದರು.

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದನ್ನುಖಂಡಿಸಲು ಸಿಲಿಂಡರ್ ಸಮೇತ ವಿಧಾನಸಭೆಗೆ ಬಂದಿರುವುದಾಗಿ ಅವರು ಹೇಳಿದರು.

ದೆಹಲಿಯ ಸಮೀಪವಿರುವ ಪಂಜಾಬ್ ರಾಜ್ಯದಲ್ಲಿ ಕೋಲುಗಳನ್ನು ಸುಡುವುದರಿಂದ ವಾಯುಮಾಲಿನ್ಯ ಪರಿಸ್ಥಿತಿಯು ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ನಡೆದುಕೊಂಡು ಹೋಗಲು ಸಹ ಸಾಧ್ಯವಿಲ್ಲ. ಕೋಲು ಸುಡುವುದರಿಂದ ವಾಯು ಗುಣಮಟ್ಟ ಸೂಚ್ಯಂಕ (AQI) ಮಟ್ಟಕ್ಕೆ ಏರಿಕೆಯಾಗಿದೆ.

ಚಳಿಗಾಲ ಆರಂಭವಾಗುತ್ತಿದ್ದಂತೆ ದೆಹಲಿಯ ಗಾಳಿಯ ಗುಣಮಟ್ಟ ಪ್ರತಿವರ್ಷವು ಅಪಾಯಕಾರಿ ಮಟ್ಟ ತಲುಪುತ್ತದೆ. ದೆಹಲಿಯ ಸುತ್ತಲಿನ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನದಲ್ಲಿ ಗೋಧಿ ಬೆಳೆದ ನಂತರ ಹುಲ್ಲುಗಳನ್ನು ಸುಡುವುದರಿಂದ, ಸಾರಿಗೆಯಿಂದ ಹೊರಸೂಸುವಿಕೆ, ಇತರ ಕೈಗಾರಿಕೆಗಳ ಹೊರಗಿನ ಕಲ್ಲಿದ್ದಲು ಸ್ಥಾವರಗಳು, ತೆರೆದ ಜಾಗದಲ್ಲಿ ಕಸವನ್ನು ಸುಡುವುದು ಮತ್ತು ಧೂಳಿನಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ.

ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವುದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬುದು ಬಿಜೆಪಿಯವರ ಆರೋಪವಾಗಿದೆ. ಅದಕ್ಕಾಗಿ ಈ ರೀತಿಯ ವಿನೂತನವಾದ, ಜನರ ಗಮನ ಸೆಳೆಯುವ ಗುರುತರವಾದ ಪ್ರತಿಭಟನೆಗಳನ್ನು ಬಿಜೆಪಿ ಪಕ್ಷವು ಮಾಡುತ್ತಿದೆ.

ದೇಶ

ದೆಹಲಿ: 10 ದಿನಗಳೊಳಗೆ 164 ಕೋಟಿ ರೂಪಾಯಿ ಪಾವತಿಸದಿದ್ದರೆ ಪಕ್ಷದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಆಮ್ ಆದ್ಮಿ ಪಕ್ಷಕ್ಕೆ ನೋಟಿಸ್ ಜಾರಿಮಾಡಲಾಗಿದೆ. ಇದರಿಂದ ದೆಹಲಿ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

‘ಸರ್ಕಾರಿ ಜಾಹೀರಾತುಗಳ ನೆಪದಲ್ಲಿ ಆಮ್ ಆದ್ಮಿ ಪಕ್ಷ ರಾಜಕೀಯ ಜಾಹೀರಾತುಗಳಿಗೆ ಹಣ ಸುರಿದಿದೆ’ ಎಂದು ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಆರೋಪಿಸಿದ್ದಾರೆ. ಸಕ್ಸೇನಾ ಅವರು ಡಿಸಂಬರ್ 20ರಂದು ಪತ್ರವೊಂದನ್ನು ಬರೆದು ಕೂಡಲೇ 97 ಕೋಟಿ ಪಾವತಿಸುವಂತೆ ಸೂಚಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಜ್ರಿವಾಲ್, ‘ರಾಜ್ಯಪಾಲರಿಗೆ ಇಂತಹ ಪತ್ರ ಕಳುಹಿಸುವ ಅಧಿಕಾರವಿಲ್ಲ’ ಎಂದು ಉತ್ತರಿಸಿದ್ದರು.

ಈ ಹಿನ್ನಲೆಯಲ್ಲಿ ವಾರ್ತಾ ಮತ್ತು ಪ್ರಚಾರ ಸಚಿವಾಲಯ 10 ದಿನದೊಳಗೆ 164 ಕೋಟಿ ರೂಪಾಯಿ ಪಾವತಿಸದಿದ್ದರೆ ಪಕ್ಷದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ನೋಟಿಸ್ ಜಾರಿಮಾಡಿದೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರಿಂದ ಆಯ್ಕೆಯಾದ ಸಚಿವರು ಮತ್ತು ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು.

ಮದ್ಯ ನೀತಿ ಹಾಗೂ ಭ್ರಷ್ಟಾಚಾರದ ದೂರುಗಳ ಬೆನ್ನಲ್ಲೇ ಮತ್ತೆ 164 ಕೋಟಿ ರೂಪಾಯಿ ಸಮಸ್ಯೆ ಭುಗಿಲೆದ್ದು ದೆಹಲಿ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಕ್ರೈಂ ರಿಪೋರ್ಟ್ಸ್ ದೇಶ

ದೆಹಲಿ: ದೆಹಲಿಯಲ್ಲಿ ಕಳ್ಳನೊಬ್ಬ ಪೊಲೀಸ್ ಕಾನ್‌ಸ್ಟೆಬಲ್‌ ಗೆ 12 ಬಾರಿ ಇರಿದಿರುವ ಘಟನೆ ಸಂಚಲನವನ್ನು ಮೂಡಿಸಿದೆ.

ರಾಜಸ್ಥಾನದ ಸಿಕರ್ ಪ್ರದೇಶದವರಾದ ಶಂಬು ದಯಾಳನಿಗೆ ಒಬ್ಬ ಮಗ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಈತ ದೆಹಲಿಯ ಪೊಲೀಸ್ ಠಾಣೆಯೊಂದರಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು. ಜನವರಿ 4ರಂದು ಆ ಪ್ರದೇಶದ ಕೊಳೆಗೇರಿಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ‘ಅನೀಶ್ ಎಂಬುವನು ತನ್ನ ಪತಿಯ ಫೋನನ್ನು ಕಿತ್ತುಕೊಂಡು ನಮಗೆ ಬೆದರಿಕೆ ಹಾಕಿದ್ದಾನೆ’ ಎಂದು ದೂರ ನೀಡಿದ್ದರು.

ದೂರನ್ನು ಸ್ವೀಕರಿಸಿದ ಪೊಲೀಸ್ ಅಧಿಕಾರಿ, ಕಾನ್ ಸ್ಟೇಬಲ್ ಶಂಬು ದಯಾಳ್ ಅವರನ್ನು ದುರುದಾರ ಮಹಿಳೆಯೊಂದಿಗೆ ಕಳುಹಿಸಿ ಅನೀಶನನ್ನು ಬಂಧಿಸುವಂತೆ ಸೂಚಿಸಿದ್ದರು. ಸಂತ್ರಸ್ತೆಯ ಜೊತೆಗಿದ್ದ ಶಂಬು ದಯಾಳ್ ಸ್ಥಳಕ್ಕೆ ಆಗಮಿಸಿದ್ದು, ಮಹಿಳೆ ಅನೀಶನನ್ನು ಗುರುತಿಸಿದ್ದಾಳೆ. ಪೊಲೀಸ್ ಪೇದೆ ಅನೀಶ್‌ನನ್ನು ಹಿಡಿದು ಬೆದರಿಸಿ ಕದ್ದ ಫೋನನ್ನು ವಶಪಡಿಸಿಕೊಂಡಿದ್ದಾರೆ. ಮತ್ತು ಆತನನ್ನು ಬಂಧಿಸಿ ಪಶ್ಚಿಮ ದೆಹಲಿಯ ಮಾಯಾಪುರಿ ಮಾರುಕಟ್ಟೆಯ ಮೂಲಕ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಆಗ ಕಳ್ಳ ಅನೀಶ್ ತನ್ನ ಶರ್ಟ್ ನಲ್ಲಿ ಬಚ್ಚಿಟ್ಟಿದ್ದ ಚಾಕುವನ್ನು ತೆಗೆದು ಶಂಬು ದಯಾಳ್ ಗೆ ಇರಿಯಲು ಆರಂಭಿಸಿದ್ದಾನೆ. ಅಲ್ಲಿ ನೆರೆದಿದ್ದ ಜನರ ಮಧ್ಯೆಯೇ ಅನೀಶ್ 12 ಬಾರಿ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಕಾನ್‌ಸ್ಟೆಬಲ್‌ಗೆ ಎದೆ ಮತ್ತು ಹೊಟ್ಟೆಯಲ್ಲಿ ಗಂಭೀರ ಗಾಯಗಳಾಗಿವೆ.

ಈ ವೇಳೆ ಸ್ಥಳದಲ್ಲಿದ್ದ ಮತ್ತೊಬ್ಬ ಪೊಲೀಸ್ ಅನೀಶನನ್ನು ಹಿಡಿದು ಬಂಧಿಸಿದ್ದಾರೆ. ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದ ಶಂಬು ದಯಾಳ್ ಚಿಕಿತ್ಸೆ ಫಲಕಾರಿಯಾಗದೆ ಕಳೆದ ಭಾನುವಾರ ಮೃತಪಟ್ಟಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಕಾನ್ ಸ್ಟೇಬಲ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.