ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Delhi Government Archives » Dynamic Leader
October 23, 2024
Home Posts tagged Delhi Government
ದೇಶ ರಾಜಕೀಯ

ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಈ ಹಿನ್ನಲೆಯಲ್ಲಿ, ‘ಕೇಜ್ರಿವಾಲ್ ಅವರನ್ನು ಬಂಧಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಅವರನ್ನು ಬಂಧಿಸಿದರೆ ದೆಹಲಿ ಸರಕಾರ ಜೈಲಿನಿಂದಲೇ ಕಾರ್ಯನಿರ್ವಹಿಸಲಿದೆ’ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಆಡಳಿತ ನಡೆಸುತ್ತಿದೆ. ಕಳೆದ 2021-2022ರ ಹಣಕಾಸು ವರ್ಷದಲ್ಲಿ, ಮದ್ಯ ಮಾರಾಟದ ನೀತಿಯನ್ನು ತಿದ್ದುಪಡಿ ಮಾಡಲಾಯಿತು. ಇದು ಖಾಸಗಿ ಕಂಪನಿಗಳು ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲವಾಗಿದ್ದು, ಈ ಮೂಲಕ ಹಲವು ಕೋಟಿ ರೂ.ಗಳ ವಂಚನೆ ನಡೆದಿದೆ ಎಂಬ ದೂರುಗಳು ಕೇಳಿಬಂದವು.

ಇದಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದರು. ಇದರಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತು. ಈ ಪ್ರಕರಣದಲ್ಲಿ, ಅಬಕಾರಿ ಇಲಾಖೆ ಉಸ್ತುವಾರಿ ವಹಿಸಿಕೊಂಡಿದ್ದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಯಿತು. ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.

ಇತ್ತೀಚೆಗಷ್ಟೇ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ‘ಈ ವಿಷಯದಲ್ಲಿ ವಂಚನೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಹೀಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ’ ಎಂದು ಆದೇಶ ಹೊರಡಿಸಿತು. ಈ ಹಿನ್ನಲೆಯಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಆಮ್ ಆದ್ಮಿ ಪಕ್ಷದ ಮುಖ್ಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶ್ನಾಲಯ ಸಮನ್ಸ್ ಜಾರಿಮಾಡಿದೆ.

ಇದರ ಪ್ರಕಾರ ಅರವಿಂದ್ ಕೇಜ್ರಿವಾಲ್ ಇಂದು ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಅಧಿಕಾರಿಗಳು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಮೊದಲ ಬಾರಿಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ.

ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ತನಿಖೆಯ ನಂತರ ಅವರನ್ನು ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಸರ್ಕಾರವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದರ ಬಗ್ಗೆ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಸೌರಭ್ ಭಾರದ್ವಾಜ್ ನಿನ್ನೆ ಹೇಳಿಕೆ ನೀಡಿದ್ದಾರೆ:

‘ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದರೆ, ಸರ್ಕಾರವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ಒಟ್ಟಾಗಿ ನಿರ್ಧರಿಸುತ್ತಾರೆ. ಪಕ್ಷದ ಎಲ್ಲಾ ನಾಯಕರು ಜೈಲಿನಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಹಾಗೆ ಎಲ್ಲರನ್ನೂ ಜೈಲಿಗೆ ಹಾಕಿದರೆ ಜೈಲಿನಿಂದಲೇ ಆಡಳಿತ ನಡೆಸುತ್ತೇವೆ.

ಈ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳನ್ನು ನಿಲ್ಲಿಸಬೇಕೆಂದು ಬಿಜೆಪಿ ಬಯಸುತ್ತಿದೆ. ಆದರೆ, ಅದು ಸಾಧ್ಯವಿಲ್ಲ; ಜೈಲಿನಲ್ಲಿದ್ದರೂ ಜನರ ಸೇವೆ ಮಾಡುತ್ತೇವೆ’ ಎಂದು ಅವರು ಹೇಳಿದರು. ಪಕ್ಷದ ಸಂಸದ ರಾಘವ್ ಚಂದಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ತನಿಖೆಯ ನಂತರ ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

2014ರಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಅಂದಿನಿಂದ ಕೇಂದ್ರ ಸರ್ಕಾರವು ದೆಹಲಿ ಸರ್ಕಾರದ ನಿರ್ಧಾರಗಳಲ್ಲಿ ನಿರಂತರವಾಗಿ ಹಸ್ತಕ್ಷೇಪ ಮಾಡುತ್ತಾ ಬರುತ್ತಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವೆ ಸಂಘರ್ಷ ಏರ್ಪಟ್ಟಿದೆ. ಮತ್ತು 2019ರಲ್ಲಿ ನ್ಯಾಯಾಧೀಶ ಅಶೋಕ್ ಭೂಷಣ್ ಅವರ ಪೀಠವು “ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ” ಎಂದು ತೀರ್ಪು ನೀಡಿತ್ತು. ತರುವಾಯ, ಕೇಂದ್ರ ಸರ್ಕಾರದ ಅಧಿಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಾಯಿತು.

ಈ ಪ್ರಕರಣದಲ್ಲಿ ಸಾಂವಿಧಾನಿಕ ಪೀಠದ 5 ನ್ಯಾಯಮೂರ್ತಿಗಳು ಇತ್ತೀಚೆಗೆ ಸರ್ವಾನುಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳ ತೀರ್ಪಿನಲ್ಲಿ, ‘‘2019ರಲ್ಲಿ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ಪೀಠ ನೀಡಿದ ತೀರ್ಪಿಗೆ ಒಮ್ಮತವಿಲ್ಲ; ಜನರ ಹಿತವನ್ನು ಈಡೇರಿಸಲಿಕ್ಕಾಗಿಯೇ ಕಾನೂನುಗಳನ್ನು ಅಂಗೀಕರಿಸುವ ಅಧಿಕಾರವನ್ನು ಶಾಸಕಾಂಗ ಸಭೆಗಳಿಗೆ ನೀಡಲಾಗಿದೆ.

ಇದು ಕೇಂದ್ರಾಡಳಿತ ಪ್ರದೇಶವಾಗಿದ್ದರೂ, ದೆಹಲಿ ಸರ್ಕಾರ ಒಕ್ಕೂಟದ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಪ್ರಜಾಪ್ರಭುತ್ವ ಮತ್ತು ಒಕ್ಕೂಟದ ನೀತಿ ಎಂದರೆ ನಮ್ಮ ರಾಜಕೀಯ ಶಾಸನದ ಮೂಲಭೂತ ರಚನೆಯ ಅಂಗ. ಕೆಲವು ನಿರ್ದಿಷ್ಟ ಅಂಶಗಳಲ್ಲಿ ಮಾತ್ರ ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸುವ ಅಧಿಕಾರವನ್ನು ಹೊಂದಿರುತ್ತದೆ. ಅಧಿಕಾರಿಗಳು, ಸಚಿವರ ಆದೇಶವನ್ನು ಕಾರ್ಯಗತಗೊಳಿಸುವುದನ್ನು ತಡೆದರೆ, ಜಂಟಿ ಹೊಣೆಗಾರಿಕೆಗೆ ತೊಂದರೆಯಾಗುತ್ತದೆ.

ವಿಧಾನಸಭೆಯ ಅಧಿಕಾರಕ್ಕೆ ಹೊರಗೆ ಇರುವ ಕೆಲವು ಅಂಶಗಳಲ್ಲಿ ಮಾತ್ರ ಲೆಫ್ಟಿನೆಂಟ್ ಗವರ್ನರ್ ಮಧ್ಯೆ ಪ್ರವೇಶಿಸಬಹುದು. ಜನರ ಆಯ್ಕೆಯನ್ನು ಪ್ರತಿನಿಧಿಸುವ ಅಧಿಕಾರವನ್ನು ಶಾಸನಸಭೆಗೆ ನೀಡಲಾಗಿದೆ. ಪ್ರಜಾಪ್ರಭುತ್ವ ಸರ್ಕಾರದಲ್ಲಿ ಆಡಳಿತದ ಅಧಿಕಾರ, ಜನರಿಂದ ಆಯ್ಕೆಯಾದವರೊಂದಿಗೆ ಮಾತ್ರ ಇರಬೇಕು. ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗಿಂತ ಮುಖ್ಯಮಂತ್ರಿಗೆ ಹೆಚ್ಚಿನ ಅಧಿಕಾರವಿದೆ” ಎಂದು ಹೇಳಿದೆ.

ಆದರೆ, ಸುಪ್ರೀಂ ಕೋರ್ಟ್‌ನ ಈ ಐತಿಹಾಸಿಕವಾದ ತೀರ್ಪನ್ನು ರದ್ದುಗೊಳಿಸುವ ಸಲುವಾಗಿ, ಕೇಂದ್ರ ಸರ್ಕಾರ ದೆಹಲಿಯ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್‌ಗೆ ನೀಡುವ ತುರ್ತು ಕಾನೂನನ್ನು ರಾತ್ರೋರಾತ್ರಿ ಜಾರಿಗೆ ತಂದಿದೆ. ಜನರಿಂದ ಆಯ್ಕೆಯಾದ ಶಾಸಕಾಂಗಕ್ಕೆ ಅಧಿಕಾರ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನಲೆಯಲ್ಲಿ, ‘ಯಾವುದೇ ಶಾಸಕಾಂಗ ಅಥವಾ ನ್ಯಾಯಾಲಯವು ಆದೇಶವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂಬ ಷರತ್ತಿನೊಂದಿಗೆ ಕೇಂದ್ರ ಸರ್ಕಾರ ತುರ್ತು ಕಾನೂನನ್ನು ಜಾರಿಗೆ ತಂದಿದೆ.

ಮುಂದಿನ 6 ತಿಂಗಳೊಳಗೆ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದರೆ ಮಾತ್ರ ಈ ಸುಗ್ರೀವಾಜ್ಞೆ ಕಾನೂನಾಗಲಿದೆ. ಈ ಹಿನ್ನಲೆಯಲ್ಲಿ ದೆಹಲಿಯ ಆಮ್ ಆದ್ಮಿ ಸರ್ಕಾರವು ಈ ಕಾನೂನನ್ನು ಜಾರಿಗೆ ತರದಂತೆ ತಡೆಯಲು ಪ್ರಯತ್ನಿಸುತ್ತಿದೆ. ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಬಹುಮತವನ್ನು ಹೊಂದಿವೆ.

ಇದರಿಂದಾಗಿ ವಿರೋಧ ಪಕ್ಷಗಳ ಬೆಂಬಲ ಪಡೆಯಲು ದೆಹಲಿ ಸರ್ಕಾರ ತೀವೃತೆಯನ್ನು ತೋರುತ್ತಿದೆ. ಇದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ. ಅವರು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಇದೀಗ ಎನ್‌ಸಿಪಿ ನಾಯಕ ಶರದ್ ಪವಾರ್ ಅವರನ್ನು ಭೇಟಿಮಾಡಿ ಬೆಂಬಲ ಕೋರಿದ್ದಾರೆ. ಬಳಿಕ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ರಾಜ್ಯಸಭೆಯಲ್ಲಿ ತುರ್ತು ಕಾಯ್ದೆಯನ್ನು ಸೋಲಿಸಿದರೆ, ಅದುವೇ 2024ರ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಪಂದ್ಯ ಆಗಲಿದೆ. 2024ರಲ್ಲಿ ಮೋದಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಸಂದೇಶ ಇದಾಗಿರುತ್ತದೆ” ಎಂದು ಹೇಳಿದರು.

   

ದೇಶ

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ಆಮ್ ಆದ್ಮಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕರು ಇಂದು ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಷಿಜೆನ್ ಸಿಲಿಂಡರ್ ನೊಂದಿಗೆ ಬಂದಿದ್ದರು.

ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಕಾರಣದಿಂದಾಗಿ ಅನೇಕ ಜನರು ಉಸಿರಾಟದ ತೊಂದರೆ ಮತ್ತು ಹೃದಯದ ತೊಂದರೆಗಳಿಂದ ಬಳಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ದೆಹಲಿ ವಿಧಾನಸಭೆ ನಡೆಯಿತು. ಆಗ ಬಿಜೆಪಿ ಶಾಸಕರು ಮುಖ ಕವಚದೊಂದಿಗೆ ಕೈಯಲ್ಲಿ ಸಣ್ಣ ಆಮ್ಲಜನಕ ಸಿಲಿಂಡರ್ ಹಿಡಿದು ವಿಧಾನಸಭೆಗೆ ಬಂದು ಕೋಲಾಹಲವನ್ನು ಎಬ್ಬಿಸಿದರು.

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದನ್ನುಖಂಡಿಸಲು ಸಿಲಿಂಡರ್ ಸಮೇತ ವಿಧಾನಸಭೆಗೆ ಬಂದಿರುವುದಾಗಿ ಅವರು ಹೇಳಿದರು.

ದೆಹಲಿಯ ಸಮೀಪವಿರುವ ಪಂಜಾಬ್ ರಾಜ್ಯದಲ್ಲಿ ಕೋಲುಗಳನ್ನು ಸುಡುವುದರಿಂದ ವಾಯುಮಾಲಿನ್ಯ ಪರಿಸ್ಥಿತಿಯು ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ನಡೆದುಕೊಂಡು ಹೋಗಲು ಸಹ ಸಾಧ್ಯವಿಲ್ಲ. ಕೋಲು ಸುಡುವುದರಿಂದ ವಾಯು ಗುಣಮಟ್ಟ ಸೂಚ್ಯಂಕ (AQI) ಮಟ್ಟಕ್ಕೆ ಏರಿಕೆಯಾಗಿದೆ.

ಚಳಿಗಾಲ ಆರಂಭವಾಗುತ್ತಿದ್ದಂತೆ ದೆಹಲಿಯ ಗಾಳಿಯ ಗುಣಮಟ್ಟ ಪ್ರತಿವರ್ಷವು ಅಪಾಯಕಾರಿ ಮಟ್ಟ ತಲುಪುತ್ತದೆ. ದೆಹಲಿಯ ಸುತ್ತಲಿನ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನದಲ್ಲಿ ಗೋಧಿ ಬೆಳೆದ ನಂತರ ಹುಲ್ಲುಗಳನ್ನು ಸುಡುವುದರಿಂದ, ಸಾರಿಗೆಯಿಂದ ಹೊರಸೂಸುವಿಕೆ, ಇತರ ಕೈಗಾರಿಕೆಗಳ ಹೊರಗಿನ ಕಲ್ಲಿದ್ದಲು ಸ್ಥಾವರಗಳು, ತೆರೆದ ಜಾಗದಲ್ಲಿ ಕಸವನ್ನು ಸುಡುವುದು ಮತ್ತು ಧೂಳಿನಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ.

ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವುದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬುದು ಬಿಜೆಪಿಯವರ ಆರೋಪವಾಗಿದೆ. ಅದಕ್ಕಾಗಿ ಈ ರೀತಿಯ ವಿನೂತನವಾದ, ಜನರ ಗಮನ ಸೆಳೆಯುವ ಗುರುತರವಾದ ಪ್ರತಿಭಟನೆಗಳನ್ನು ಬಿಜೆಪಿ ಪಕ್ಷವು ಮಾಡುತ್ತಿದೆ.