ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Dynamic Archives » Page 3 of 13 » Dynamic Leader
October 23, 2024
Home Posts tagged Dynamic (Page 3)
ವಿದೇಶ

ಪ್ಯೊಂಗ್ಯಾಂಗ್: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉತ್ತರ ಕೊರಿಯಾದಲ್ಲಿ ಆತ್ಮಹತ್ಯೆಗಳ ಸಂಖ್ಯೆ ಶೇ.40 ರಷ್ಟು ಹೆಚ್ಚಾಗಿರುವ ಕಾರಣ, ಅಲ್ಲಿ ಆತ್ಮಹತ್ಯೆಯನ್ನು ನಿಷೇಧಿಸಿ ಅಧ್ಯಕ್ಷ ಕಿಮ್ ಜಾಂಗ್ ಉನ್ ರಹಸ್ಯ ಆದೇಶ ನೀಡಿದ್ದಾರೆ. ಆತ್ಮಹತ್ಯೆ ಎಂದರೆ ಒಬ್ಬರು ಸ್ವಯಂಪ್ರೇರಿತವಾಗಿ ಮಾಡಿಕೊಳ್ಳುವ ಕೊಲೆಯಾಗಿದೆ. ದ್ವೇಷ, ಕೋಪ, ಒತ್ತಡ, ಭಯ, ಬಡತನ ಮುಂತಾದ ಹಲವು ಕಾರಣಗಳಿಂದ ಆತ್ಮಹತ್ಯೆ ನಡೆಯುತ್ತದೆ. ಇದನ್ನು ಅಪರಾಧವೆಂದು ಪರಿಗಣಿಸಲಾಗಿದ್ದರೂ, ಆ ಆಲೋಚನೆಯಿಂದ ಚೇತರಿಸಿಕೊಳ್ಳಲು ಹಲವು ಮಾರ್ಗಗಳಿವೆ.

ಈ ಸ್ಥಿತಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉತ್ತರ ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ ಶೇ.40ರಷ್ಟು ಹೆಚ್ಚಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಆ ದೇಶದ ಅಧ್ಯಕ್ಷ ಕಿಮ್ ಜಾಂಗ್ ಉನ್ ದೇಶದಲ್ಲಿ ಆತ್ಮಹತ್ಯೆ ನಿಷೇಧಿಸಿ ರಹಸ್ಯ ಆದೇಶವನ್ನು ಹೊರಡಿಸಿದ್ದಾರೆ. ಮತ್ತು ಇದನ್ನು ‘ಆತ್ಮಹತ್ಯೆ ಸಮಾಜವಾದದ ವಿರುದ್ದ ದೇಶದ್ರೋಹ’ ಎಂದು ಲೇಬಲ್ ಮಾಡಲಾಗಿದೆ. ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಿಮ್ ಸ್ಥಳೀಯ ಸರ್ಕಾರಗಳಿಗೆ ಆದೇಶ ನೀಡಿದ್ದಾರೆ ಎಂದು ರೇಡಿಯೊ ಫ್ರೀ ಏಷ್ಯಾದ ವರದಿ ಹೇಳಿದೆ.

North Korea’s Kim Jong Un passes ‘secret order’ banning suicide:
North Korean leader Kim Jong-un has reportedly passed a secret order to ban suicide in the country, labelling it as a “treason against socialism”. A report by Radio Free Asia claimed that Kim has ordered local governments to take preventative measures.

ವಿದೇಶ

ಇಟಲಿ ಸಂಸತ್ತಿನಲ್ಲಿ ಮಹಿಳಾ ಸಂಸದೆಯೊಬ್ಬರು ಅಳುತ್ತಿದ್ದ 2 ತಿಂಗಳ ಮಗುವಿಗೆ ಹಾಲುಣಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಟಲಿ ಸಂಸತ್ತು ಇತ್ತೀಚೆಗೆ ಮಹಿಳಾ ಸಂಸದರು ತಮ್ಮ ಮಕ್ಕಳನ್ನು ಸಂಸತ್ತಿಗೆ ಕರೆತರಲು ಮತ್ತು ಒಂದು ವರ್ಷದವರೆಗೆ ತಮ್ಮ ಶಿಶುಗಳಿಗೆ ಹಾಲುಣಿಸಲು ಅನುಮತಿಸುವ ನಿಯಮಗಳಿಗೆ ತಿದ್ದುಪಡಿ ತಂದು ಜಾರಿಗೊಳಿಸಿತು. ಇಟಲಿ ಸಂಸತ್ತಿನ ಸದಸ್ಯೆಯಾಗಿರುವ 36 ವರ್ಷದ ಗಿಲ್ಡಾ ಸ್ಪೋರ್ಟಿಯೆಲ್ಲೊ ತನ್ನ 2 ತಿಂಗಳ ಗಂಡು ಮಗುವಿನೊಂದಿಗೆ ಸಂಸತ್ತಿಗೆ ಬಂದಿದ್ದರು. ನಂತರ ಮಗು ಇದ್ದಕ್ಕಿದ್ದಂತೆ ಅಳಲು ಪ್ರಾರಂಭಿಸಿತು.

ಇದನ್ನು ಕೇಳಿ ಸಂಸತ್ತು ಮೌನವಾಯಿತು. ಮಗು ಹಸಿವಿನಿಂದ ಅಳುತ್ತಿದೆ ಎಂದು ತಿಳಿದ ಗಿಲ್ಡಾ ಸ್ಪೋರ್ಟಿಯೆಲ್ಲೊ ಮಗುವನ್ನು ಶಾಂತಗೊಳಿಸಿ ಹಾಲುಣಿಸಲು ಆರಂಭಿಸಿದಳು. ಆಗ ಸಭೆಯ ಎಲ್ಲಾ ಸದಸ್ಯರು ಚಪ್ಪಾಳೆ ತಟ್ಟಿ ಹಾರೈಸಿದರು. ಇದರೊಂದಿಗೆ ಇಟಲಿ ಸಂಸತ್ತಿನಲ್ಲಿ ಮಗುವಿಗೆ ಹಾಲುಣಿಸಿದ ಮೊದಲ ಮಹಿಳಾ ಸಂಸದೆ ಎಂಬ ಗೌರವಕ್ಕೆ ಪಾತ್ರರಾದರು. ಈ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Gilda Sportiello becomes first Italian MP to breastfeed baby in Parliament.

ರಾಜಕೀಯ

ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿದ್ದರು. ಚುನಾವಣೆ ವೇಳೆ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಕ್ಕೆ ಗುಜರಾತ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತು. ತರುವಾಯ, ಚುನಾವಣಾ ನೀತಿ ನಿಯಮಗಳ ಅಡಿಯಲ್ಲಿ, ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಲಾಯಿತು. ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ವಯನಾಡು ಕ್ಷೇತ್ರವು ಖಾಲಿಯಾಗಿದೆ ಎಂದೂ ಘೋಷಿಸಲಾಯಿತು.

ಮುಂದಿನ ವರ್ಷ ಮೇ ತಿಂಗಳಲ್ಲಿ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ತೆರವಾಗಿರುವ ವಯನಾಡು ಕ್ಷೇತ್ರಕ್ಕೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ. ಅದರಂತೆ ವಯನಾಡು ಕ್ಷೇತ್ರಕ್ಕೆ ಬೇಕಾದ ವಿದ್ಯುನ್ಮಾನ ಮತಯಂತ್ರಗಳನ್ನು ಕೋಳಿಕ್ಕೋಡ್, ವಯನಾಡ್ ಮತ್ತು ಮಲಪ್ಪುರಂ ಕಲೆಕ್ಟರ್ ಕಚೇರಿಗಳಲ್ಲಿ ಇರಿಸಲಾಗಿದೆ. ಕೋಳಿಕ್ಕೋಡ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇರಿಸಲಾಗಿದ್ದ ವಿದ್ಯುನ್ಮಾನ ಮತಯಂತ್ರಗಳನ್ನು ನಿನ್ನೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ ಮಾದರಿ ಮತದಾನವನ್ನೂ ನಡೆಸಲಾಯಿತು. ಪಕ್ಷದ ಎಲ್ಲ ಮುಖಂಡರು ಪಾಲ್ಗೊಂಡಿದ್ದರು.

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಅಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಯಾರು ಸ್ಪರ್ಧಿಸುತ್ತಾರೆ ಎಂಬ ನಿರೀಕ್ಷೆ ಮೂಡಿದೆ. ರಾಹುಲ್ ಗಾಂಧಿ ಇಲ್ಲಿ ಸ್ಪರ್ಧಿಸಿದಾಗ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಪರ ಪ್ರಚಾರ ಮಾಡಿದ್ದರು. ಅವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಿದ ನಂತರ ನಡೆದ ಕಾಂಗ್ರೆಸ್ ಸಭೆಯಲ್ಲೂ ಭಾಗವಹಿಸಿದ್ದರು. ಅವರು ನಿಯಮಿತವಾಗಿ ವಯನಾಡು ಕ್ಷೇತ್ರದ ಜನರನ್ನು ಭೇಟಿಯಾಗುತ್ತಾ ಪಕ್ಷದ ಪರವಾಗಿ ಪ್ರಚಾರವನ್ನೂ ಮಾಡಿದರು. ಇದರಿಂದಾಗಿ ಈ ಬಾರಿಯ ಉಪಚುನಾವಣೆಯಲ್ಲಿ ಅವರು ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಬಹುದು ಎನ್ನಲಾಗಿದೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಡ ಕಾತರದಿಂದ ಕಾಯುತ್ತಿದ್ದಾರೆ.

ರಾಜ್ಯ

ವೈದ್ಯ ಕೋರ್ಸಿನಲ್ಲಿ ಸ್ವರ್ಣ ಪದಕಗಳನ್ನು ಗಳಿಸಿ, ಆ ನಂತರ ಸ್ನಾತಕೋತ್ತರ ಪರೀಕ್ಷೆಯಲ್ಲೂ ಇಡೀ ಭಾರತಕ್ಕೆ 2000ನೇ ಸ್ಥಾನ ಪಡೆದಿರುವುದು ಅಸಾಮಾನ್ಯ ಸಾಧನೆ ಎಂದು ಬಣ್ಣಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,

“ನನ್ನ ಮತಕ್ಷೇತ್ರ ಚನ್ನಪಟ್ಟಣದ ಚಕ್ಕಲೂರು ಗ್ರಾಮದ ರೈತರ ಮನೆಯ ಮಗಳು ಡಾ.ಅನುಶ್ರೀ ಅವರು ವೈದ್ಯಕೀಯ ಶಿಕ್ಷಣದಲ್ಲಿ ಮಾಡಿರುವ ಅನುಪಮ ಸಾಧನೆ ಬಗ್ಗೆ ತಿಳಿದು ನನಗೆ ಬಹಳ ಸಂತೋಷವಾಗಿದೆ. ಅವರ ಪ್ರತಿಭೆ ಎಲ್ಲರಿಗೂ ಮಾದರಿ ಹಾಗೂ ಪ್ರೇರಣೆ. ಅವರು ಚನ್ನಪಟ್ಟಣದ ಕೀರ್ತಿಯ ಕಳಸ.

ವೈದ್ಯ ಕೋರ್ಸಿನಲ್ಲಿ ಸ್ವರ್ಣ ಪದಕಗಳನ್ನು ಗಳಿಸಿ, ಆ ನಂತರ ಸ್ನಾತಕೋತ್ತರ ಪರೀಕ್ಷೆಯಲ್ಲೂ ಇಡೀ ಭಾರತಕ್ಕೆ 2000ನೇ ಸ್ಥಾನ ಪಡೆದಿರುವುದು ಅಸಾಮಾನ್ಯ ಸಾಧನೆ. ಡಾ.ಅನುಶ್ರೀ ಅವರಿಗೆ ಎಲ್ಲವೂ ಒಳ್ಳೆಯದಾಗಲಿ, ಭವಿಷ್ಯದಲ್ಲಿ ಅವರು ಇನ್ನೂ ಎತ್ತರದ ಸ್ಥಾನ ತಲುಪಲಿ ಎಂದು ಹಾರೈಸುತ್ತೇನೆ. ಅವರ ಪೋಷಕರಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

 

ಕ್ರೈಂ ರಿಪೋರ್ಟ್ಸ್

ಬೆಂಗಳೂರು ನಗರ 08 ವಿಭಾಗಗಳ ವ್ಯಾಪ್ತಿಯಲ್ಲಿ 1344 ರೌಡಿ ಪಟ್ಟಿ ಆಸಾಮಿಗಳ ನಿವಾಸಗಳಲ್ಲಿ ಏಕಕಾಲಕ್ಕೆ ತಪಾಸಣೆ ನಡೆಸಿ, 9.1 ಕೆಜಿ ಗಾಂಜಾ, ದುಷ್ಕೃತ್ಯಕ್ಕೆ ಸಂಗ್ರಹಿಸಿದ್ದ ಮಾರಕಾಸ್ತ್ರಗಳು, 16 ವಾಹನಗಳನ್ನು ಅಮಾನತ್ತು ಪಡಿಸಿಕೊಂಡು, 05 ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ಬೆಂಗಳೂರು ನಗರ ವ್ಯಾಪ್ತಿಯ 08 ವಿಭಾಗದ ಪೊಲೀಸ್ ಅಧಿಕಾರಿಗಳು ಇಂದು (08.06.2023) ಮುಂಜಾನೆ ಏಕಕಾಲಕ್ಕೆ 1334 ರೌಡಿ ಆಸಾಮಿಗಳ ನಿವಾಸಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಕೆಲವು ರೌಡಿಗಳ ವಶದಲ್ಲಿ ಗಾಂಜಾ, ಮಾರಕಾಸ್ತ್ರಗಳು, ಕಳ್ಳತನದ ವಾಹನಗಳು ಪತ್ತೆಯಾಗಿದ್ದು, ಈ ಕಾರ್ಯಚರಣೆಯಲ್ಲಿ ಒಟ್ಟು 09.01 ಕೆ.ಜಿ. ಗಾಂಜಾ, 16 ವಾಹನಗಳು ಮತ್ತು ಮಾರಕಾಸ್ತ್ರಗಳನ್ನು ಅಮಾನತ್ತು ಪಡಿಸಿಕೊಂಡು ಆರೋಪಿಗಳ ವಿರುದ್ದ ಶಸ್ತ್ರಾಸ್ತ್ರ ಕಾಯಿದೆ ಅಡಿ 02 ಪ್ರಕರಣ, ಎನ್ ಡಿ ಪಿ ಎಸ್ ಕಾಯಿದೆ ಅಡಿ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಅಲ್ಲದೆ, ಈ ಕಾರ್ಯಚರಣೆಯಲ್ಲಿ ವಿಚಾರಣಾ ಪ್ರಕರಣಗಳ್ಳಿ ನ್ಯಾಯಾಲಯಗಳಿಂದ ಹೊರಡಿಸಲಾಗಿದ್ದ ರೌಡಿಗಳ ವಿರುದ್ದದ 46 ಜಾಮೀನು ರಹಿತ ವಾರಂಟ್ ಆಸಾಮಿಗಳನ್ನು ಪತ್ತೆ ಮಾಡಿ ಸಂಬಂಧಪಟ್ಟ ನ್ಯಾಯಾಲಯಗಳಿಗೆ ಹಾಜರು ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಕ್ರೈಂ ರಿಪೋರ್ಟ್ಸ್

ಕೇಂದ್ರ ವಿಭಾಗದ ಪೊಲೀಸ್ ಠಾಣೆಗಳಲ್ಲಿ 106 ಜನ ಆರೋಪಿಗಳನ್ನು ಬಂಧಿಸಿ, 103 ಪ್ರಕರಣಗಳನ್ನು ಪತ್ತೆ ಮಾಡಿ, ಸುಮಾರು 2 ಕೋಟಿ, 69 ಲಕ್ಷ, 76 ಸಾವಿರದ 225 ರೂಗಳ ಬೆಲೆ ಬಾಳುವ ಕಳವು ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿನ್ನ:
ಶೇಷಾದ್ರಿಪುರಂ, ವೈಯಾಲಿಕಾವಲ್, ಹಲಸೂರು ಗೇಟ್, ಅಶೋಕ ನಗರ, ವಿವೇಕನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 14; ಪತ್ತೆಯಾದ ಪ್ರಕರಣಗಳ ಸಂಖ್ಯೆ 19; ಇವರಿಂದ ವಶಪಡಿಸಿಕೊಳ್ಳಲಾದ ಚಿನ್ನದ ತೂಕ 2 ಕೆಜಿ 110 ಗ್ರಾಂ. ಇದರ ಮೌಲ್ಯ ರೂ. 1,05,24,100/-

ಬೆಳ್ಳಿ:
ಹಲಸೂರು ಗೇಟ್ ಹಾಗೂ ವಿವೇಕನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಬೆಳ್ಳಿಯ ತೂಕ 105 ಕೆಜಿ 263 ಗ್ರಾಂ. ಇದರ ಮೌಲ್ಯ ರೂ.63,19,135/-

ಕಾರುಗಳು:
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 02; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಕಾರಿನ ಸಂಖ್ಯೆ 01. ಇದರ ಮೌಲ್ಯ ರೂ.18,00,000/-

ದ್ವೀಚಕ್ರ ವಾಹನ:
ಶೇಷಾದ್ರಿಪುರಂ ಹಾಗೂ ಅಶೋಕ ನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 07; ಇವರಿಂದ ವಶಪಡಿಸಿಕೊಳ್ಳಲಾದ ದ್ವೀಚಕ್ರ ವಾಹನದ ಸಂಖ್ಯೆ 5. ಇದರ ಮೌಲ್ಯ ರೂ.3,30,000/-

ನಗದು ಹಣ:
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 04; ಪತ್ತೆಯಾದ ಪ್ರಕರಣಗಳ ಸಂಖ್ಯೆ 02; ಇವರಿಂದ ವಶಪಡಿಸಿಕೊಳ್ಳಲಾದ ಹಣ ರೂ.2,12,720/-

ಶಸ್ತ್ರ:
ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 01; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಪಿಸ್ತೂಲ್‌ಗಳ ಸಂಖ್ಯೆ 03. ಗುಂಡುಗಳ ಸಂಖ್ಯೆ 99. ಇದರ ಮೌಲ್ಯ ರೂ.2,49,000/-

ಮೊಬೈಲ್ ಪೋನ್:
ವಿವೇಕನಗರ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 02; ಇವರಿಂದ ವಶಪಡಿಸಿಕೊಳ್ಳಲಾದ ಮೊಬೈಲ್‌ಗಳ ಸಂಖ್ಯೆ 113. ಇದರ ಮೌಲ್ಯ ರೂ.40,00,000/-

NDPS Act:
ಎನ್.ಡಿ.ಪಿ.ಎಸ್ ಆಕ್ಟ್ ಅಡಿಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 76; ಪತ್ತೆಯಾದ ಪ್ರಕರಣಗಳ ಸಂಖ್ಯೆ 70; ಇವರಿಂದ ಒಟ್ಟು 101 ಕೆಜಿ 780 ಗ್ರಾಂ ಗಾಂಜಾ ಮತ್ತು 44.93 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ.35,41,300/-

ಹೆಚ್ಚುವರಿ ಪೊಲೀಸ್ ಆಯುಕ್ತರು, ಪಶ್ಚಿಮ, ಸಂದೀಪ್ ಪಾಟೀಲ್ ಐಪಿಎಸ್, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀನಿವಾಸಗೌಡ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಕಬ್ಬನ್ ಪಾರ್ಕ್. ಉಪ-ವಿಭಾಗದ ಎಸಿಪಿ ಡಿ.ಎಸ್.ರಾಜೇಂದ್ರ, ಹಲಸೂರು ಗೇಟ್ ಉಪ-ವಿಭಾಗದ ಎಸಿಪಿ ನಾರಾಯಣಸ್ವಾಮಿ ಮತ್ತು ಶೇಷಾದ್ರಿಪುರಂ ಉಪ-ವಿಭಾಗದ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಪೊಲೀಸ್‌ ಇನ್ಸ್‌ಪೆಕ್ಟರ್ ರವರುಗಳು ಮಾಡಿರುವ ಈ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರವರು ಶ್ಲಾಘಿಸಿದ್ದಾರೆ.

ಸಿನಿಮಾ

ವರದಿ: ಅರುಣ್ ಜಿ.,

ಹಿರಿಯ ನಿರ್ದೇಶಕ ಕೆ.ಎಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್ ‘ಆಡೇ ನಮ್ God’ ಅಂತಿದ್ದಾರೆ ರಾಮ ರಾಮ ರೇ ನಟರಾಜ್.

ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವರೆಸ್ಟ್ ಇಂಡಿಯಾ ಎಂಟರ್‌ಟೈನರ್ ಬ್ಯಾನರ್‌ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡ್ತಿರುವ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಪಂಚಮ ವೇದ, ಶ್ರೀಗಂಧ, ಅರಗಿಣಿ, ಅರುಣೋದಯ, ರಂಗೋಲಿ, ಅಂಡಮಾನ್, ಮುಂಜಾನೆ ಮಂಜು, ಮುಸುಕು ಸಿನಿಮಾಗಳ ಖ್ಯಾತಿ ಹಿರಿಯ ನಿರ್ದೇಶಕ ಕೆ.ಎಚ್.ವಿಶ್ವನಾಥ್ ಆಕ್ಷನ್ ಕಟ್ ಹೇಳ್ತಿರುವ ಚಿತ್ರಕ್ಕೆ ‘ಆಡೇ ನಮ್ God’ ಎಂಬ ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ: ದರ್ಬಾರ್ ಪರಿಶುದ್ದ ಹಾಸ್ಯ ಚಿತ್ರ: ನಾಯಕ ಸತೀಶ್

ಮೂಡನಂಬಿಕೆ ಸುತ್ತ ಸಾಗುವ ಈ ಕಥೆಯಲ್ಲಿ ಮ್ಯಾನ್ ಆಫ್ ದಿ ಮ್ಯಾಚ್, ರಾಮ ರಾಮ ರೇ ಸಿನಿಮಾ ಖ್ಯಾತಿಯ ನಟರಾಜ್, ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಪಿಂಕಿ ಎಲ್ಲಿ ಚಿತ್ರದ ಅನೂಪ್ ಶೂನ್ಯ, ಸಾರಿಕ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಿ.ಸುರೇಶ್ ಸೇರಿದಂತೆ ಇತರರು ತಾರಾ ಬಳಗದಲ್ಲಿದ್ದಾರೆ. ಪಿ.ಕೆ.ಎಚ್.ದಾಸ್ ಛಾಯಾಗ್ರಹಣ, ಬಿ.ಎಸ್,ಕೆಂಪರಾಜು ಸಂಕಲನ, ಸ್ವಾಮಿನಾಥನ್ ಸಂಗೀತ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಅಕ್ಷಯ್ ವಿಶ್ವನಾಥ್ ಚಿತ್ರಕಥೆ-ಸಹ ನಿರ್ದೇಶನ ‘ಆಡೇ ನಮ್ God’ ಚಿತ್ರಕ್ಕಿದೆ. ಸೆನ್ಸಾರ್ ಪಾಸಾಗಿರುವ ಸಿನಿಮಾ ಶೀಘ್ರದಲ್ಲಿಯೇ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಸಿನಿಮಾ

ವರದಿ: ಅರುಣ್ ಜಿ.,

ಬೆಂಗಳೂರು: ಇನ್ನೇನು ಬಹುದಿನಗಳಿಂದ ಕಾಯುತ್ತಿದ್ದ ದರ್ಬಾರ್ ಚಲನಚಿತ್ರ ಈ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಂಗೀತ ನಿರ್ದೇಶಕ ವಿ.ಮನೋಹರ್ ಅವರನ್ನು 23 ವರ್ಷಗಳ‌ ನಂತರ ಮತ್ತೆ ನಿರ್ದೇಶನಕ್ಕೆ ಕೈ ಹಾಕುವಂತೆ ಪ್ರೇರೇಪಿಸಿದ್ದು “ದರ್ಬಾರ್” ಚಿತ್ರದ ಕಂಟೆಂಟ್.  ಇದೇ 9 ರಂದು ತೆರೆ ಕಾಣಲಿರುವ ಈ ಚಿತ್ರದ ಬಿಡುಗಡೆಪೂರ್ವ ಪತ್ರಿಕಾಗೋಷ್ಟಿ ಇತ್ತೀಚೆಗೆ ನಡೆದಿದ್ದು, ಈ ಸಂದರ್ಭದಲ್ಲಿ ಸಿನಿಮಾ ಕುರಿತಂತೆ ನಿರ್ದೇಶಕ ವಿ.ಮನೋಹರ್, ನಾಯಕ ಸತೀಶ್, ನಾಯಕಿ ಜಾಹ್ನವಿ, ಕಾಮಿಡಿ ಕಿಲಾಡಿ ಸಂತು, ಹುಲಿ ಕಾರ್ತೀಕ್  ಮಾತನಾಡಿದರು. 

ಮೊದಲು ವಿ.ಮನೋಹರ್ ಮಾತನಾಡುತ್ತ  “ಸಂತು ಕಾರ್ತೀಕ್ ನಮ್ಮ ಚಿತ್ರದಲ್ಲಿ  ಪ್ರಧಾನ ಪಾತ್ರ ವಹಿಸಿದ್ದಾರೆ. ಮೈಸೂರು, ಚನ್ನಪಟ್ಟಣ, ದಾವಣಗೆರೆ ಇಲ್ಲೆಲ್ಲ ಟ್ಯಾಬುಲೋ ಜೊತೆ ಹೋದಾಗ ಬಹಳ ದೊಡ್ಡ ರೆಸ್ಪಾನ್ಸ್ ಬಂತು. ಕಾಲೇಜ್ ಸ್ಟೂಡೆಂಟ್ ಗಳಲ್ಲಿ  ಜೋಷ್ ಇತ್ತು. 23 ವರ್ಷಗಳ ವನವಾಸ ಮುಗಿಸಿ ಬಂದಿದ್ದೀರಿ ಎಂದು ಒಬ್ಬ ಪತ್ರಕರ್ತರು ಹೇಳಿದರು. ನಮ್ಮ‌ ನೋವು ದುಃಖಗಳನ್ನು ಕಾಮಿಡಿಯಾಗಿ ತಗೊಂಡಾಗ ತೃಪ್ತಿಯಾಗುತ್ತೆ. ಮ್ಯೂಸಿಕ್ ಮಾಡುವುದು ಇನ್ನೊಬ್ಬರ ಕನಸಿಗೆ, ಸಿನಿಮಾ ಮಾಡುವುದು ನಮ್ಮ‌ ಕನಸಿಗೆ. ಸತೀಶ್ ನಮ್ಮ‌ ಕನಸಿಗೆ ಜೊತೆಯಾದರು. ಈಚೆಗೆ ಚಿತ್ರದ ಟೆಸ್ಟ್ ಷೋ‌ ಮಾಡಿದಾಗ ಒಳ್ಳೆಯ ಅಭಿಪ್ರಾಯ ಬಂತು. ಥಿಯೇಟರಿಗೆ ಬರುವ ಪ್ರೇಕ್ಷಕರಿಗೆ ಮನರಂಜನೆ ಖಚಿತ. ಚಂದನ್ ಶೆಟ್ಟಿ ಅವರು ಹಾಡಿದ ಹೀರೋ ಇಂಟ್ರಡಕ್ಷನ್ ಹಾಡನ್ನು ಮಂಗಳವಾರ ರಿಲೀಸ್ ಮಾಡುತ್ತೇವೆ. ಚಿತ್ರದ ಆರಂಭದಲ್ಲಿ ಬರುವ, ನಾಯಕನ ನೈತಿಕ ದಾದಾಗಿರಿ ಹೇಳುವ ಸಾಂಗ್ ಅದು” ಎಂದರು. 

ನಂತರ ಸಂತು ಮಾತನಾಡಿ, “ಅದ್ಭುತವಾದ ಸಿಚುಯೇಶನ್ ಕಾಮಿಡಿ ಇರುವಂಥ ಚಿತ್ರ. ಟೆಕ್ನಿಕಲ್ ಪ್ರೀಮಿಯರ್ ಷೋ ಮಾಡಿದಾಗ ಬಂದ ರಿಯಾಕ್ಷನ್ ಕಂಡು ನಿಜಕ್ಕೂ ಖುಷಿ ಆಯ್ತು. ಜನ ದುಡ್ಡು ಇಸ್ಕೊಂಡು ಓಟ್ ಹಾಕಿದರೆ ಏನಾಗುತ್ತೆ ಅನ್ನೋದು ಈ ಸಿನಿಮಾದಲ್ಲಿದೆ. ಪ್ರಾಮಾಣಿಕ‌ ವ್ಯಕ್ತಿಗೆ‌ ನಮ್ಮ ಮತ ಹಾಕಬೇಕು ಎಂಬ ಅರಿವು ಮೂಡಿಸುತ್ತದೆ. ನನ್ನ ಪಾತ್ರ ತುಂಬಾ ನಗಿಸುತ್ತದೆ. ಕಾರ್ತೀಕ್ ಕಾಮಿಡಿ ಬಿಟ್ಟು ಫಸ್ಟ್ ಟೈಮ್ ವಿಲನ್ ರೋಲ್ ಮಾಡಿದ್ದಾರೆ. ಸತೀಶ್ ತಾವೊಬ್ಬರೇ ಸ್ಕ್ರೀನ್ ಮೇಲಿರಬೇಕು ಎಂದು ಯೋಚಿಸದೆ ಎಲ್ಲರಿಗೂ ಸಮಾನ ಅವಕಾಶ ನೀಡಿದ್ದಾರೆ. ಪ್ರತಿ ಪಾತ್ರಕ್ಕೂ ನುರಿತ ಕಲಾವಿದರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನನ್ನದು ವೈರ ಎಂಬ ಪಾತ್ರ” ಎಂದು ಹೇಳಿದರು.

ನಾಯಕ ಸತೀಶ್ ‌ಮಾತನಾಡಿ, “ಇತ್ತೀಚಿಗೆ ಜನ ಯಾಕೆ ಸಿನಿಮಾಗೆ ಬರುತ್ತಿಲ್ಲ ಅಂತ ನಾನೂ ಯೋಚಿಸಿದೆ. ನಮ್ಮ ಚಿತ್ರವು ಖಂಡಿತ ಮನರಂಜನೆ ನೀಡುತ್ತದೆ. ಕಾರ್ತೀಕ್ ಅವರು ನಾವು ಜೀವನದಲ್ಲಿ ನೋಡುವಂಥ ಅನೇಕ ಚಪ್ಪರ್ ಗಳ ಪಾತ್ರವನ್ನು ಪ್ರತಿನಿಧಿಸಿದ್ದಾರೆ. ಇನ್ನು ಸಂತು ಇಬ್ಬರಿಗೆ ಜಗಳ ತಂದಿಟ್ಟು ಎಂಜಾಯ್ ಮಾಡುವಂಥ ಪಾತ್ರ. ಸಿನಿಮಾದಲ್ಲಿ ಪಾತ್ರಗಳು ಗಂಭೀರವಾಗಿರುತ್ತೆ. ಅದು ನೋಡುಗರಿಗೆ ಮನರಂಜನೆ ನೀಡುತ್ತೆ. ಸಾಂದರ್ಭಿಕ ಹಾಸ್ಯ ದೃಶ್ಯಗಳನ್ನು ಜಾಸ್ತಿ ಇಟ್ಟಿದ್ದೇವೆ. ಇಂಡಸ್ಟ್ರಿ ಮತ್ತೆ ಮೊದಲಿನಂತಾಗಬೇಕು. ಅದು ನಮ್ಮ ಚಿತ್ರದಿಂದಲೇ ಆಗಲಿ. ನಾನು ಸಿನಿಮಾದಲ್ಲಿ ದುಡ್ಡು ಮಾಡಲು ಬಂದಿಲ್ಲ. ಜನರಿಗೆ  ಒಳ್ಳೆಯ ಸಿನಿಮಾ ಕೊಡಬೇಕು ಅಂತ ಬಂದಿದ್ದೇನೆ. ಹತ್ತು ಜನ ಬಂದು ಸಿನಿಮಾ ನೋಡಿದರೆ ಅವರು ನೂರು ಜನಕ್ಕೆ ಖಂಡಿತ ಹೇಳ್ತಾರೆ. ಸಿನಿಮಾ‌ ಕಮರ್ಷಿಯಲಿ ಏನಾಗುತ್ತೋ ಗೊತ್ತಿಲ್ಲ. ಒಳ್ಳೆಯ ಸಿನಿಮಾ ಟೀಮ್ ನೊಂದಿಗೆ ಕೆಲಸ ಮಾಡಿದ ತೃಪ್ತಿಯಿದೆ” ಎಂದು ಹೇಳಿದರು.

ಇದನ್ನೂ ಓದಿ: ಆಡೆ ನಮ್ God: ಕೆ.ಹೆಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾ ಟೈಟಲ್!

ನಂತರ ನಾಯಕಿ ಜಾಹ್ನವಿ, ಖಳನಾಯಕನ ಪಾತ್ರ ಮಾಡಿರುವ ಹುಲಿ ಕಾರ್ತೀಕ್ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಸತೀಶ್ ಅವರೇ  ಬರೆದಿದ್ದು, ದರ್ಬಾರ್ ಪ್ರೊಡಕ್ಷನ್ಸ್ ಮೂಲಕ ಬಿ.ಎನ್.ಶಿಲ್ಪ ಅವರು ನಿರ್ಮಾಣ ಮಾಡಿದ್ದಾರೆ. ಮಾಸ್ ಮಾದ, ವಿನೋದ್ ಸಾರಥ್ಯದ 3 ಸಾಹಸ ದೃಶ್ಯಗಳು ಚಿತ್ರದಲ್ಲಿವೆ. ಹಿರಿಯ ಕಲಾವಿದರಾದ ಎಂ.ಎನ್.ಲಕ್ಷ್ಮಿದೇವಿ, ಅಶೋಕ್ ಹೀಗೆ ಸಾಕಷ್ಟು ಜನ ಅಭಿನಯಿಸಿದ್ದಾರೆ. ಮೂರು ಹಾಡುಗಳು ಚಿತ್ರದಲ್ಲಿದ್ದು, ಟೈಟಲ್ ಸಾಂಗನ್ನು ಚಂದನ್ ಶೆಟ್ಟಿ ಹಾಡಿದ್ದಾರೆ, ರಾಜಕೀಯ ವಿಡಂಬನೆಯ ಹಾಡನ್ನು ಉಪೇಂದ್ರ ಹಾಡಿದ್ದಾರೆ, ಇನ್ನು ಡ್ಯುಯೆಟ್ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.

ವಿದೇಶ

ದುಬೈ: ಇರಾನ್‌ನ ಪರಮಾಣು ಕಾರ್ಯಕ್ರಮದಿಂದಾಗಿ, ಅಮೆರಿಕ ಮತ್ತು ಆ ದೇಶದ ನಡುವೆ, ಈಗಾಗಲೇ ಸಂಘರ್ಷ ನಡೆಯುತ್ತಿರುವ ಹಿನ್ನಲೆಯಲ್ಲಿ, ಶಬ್ದದ ವೇಗಕ್ಕಿಂತ 15 ಪಟ್ಟು ಹೆಚ್ಚು ಚಲಿಸುವ ಸಾಮರ್ಥ್ಯ ಹೊಂದಿದ ಹೈಪರ್ಸಾನಿಕ್ ಕ್ಷಿಪಣಿಯನ್ನು ಇರಾನ್ ಅಭಿವೃದ್ಧಿಪಡಿಸಿದೆ ಎಂಬ ಘೋಷಣೆಯು ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಹೈಪರ್ಸಾನಿಕ್ ಕ್ಷಿಪಣಿ

ಪಶ್ಚಿಮ ಏಷ್ಯಾ ರಾಷ್ಟ್ರವಾದ ಇರಾನ್ ಮತ್ತು ಅಮೆರಿಕ ನಡುವೆ, ಟೆಹ್ರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಉದ್ವಿಗ್ನತೆಗಳು ಬಹಳ ಹಿಂದಿನಿಂದಲೂ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ, ವಾಯು ರಕ್ಷಣೆಯನ್ನು ಬಲಪಡಿಸುವ ದೃಷ್ಟಿಯಿಂದ, ಶಬ್ದಕ್ಕಿಂತ 15 ಪಟ್ಟು ಹೆಚ್ಚು ವೇಗವಾಗಿ ಚಲಿಸುವ ಹೈಪರ್ಸಾನಿಕ್ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿರುವುದಾಗಿ ಇರಾನ್ ನಿನ್ನೆ ಘೋಷಿಸಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ

ಈ ಬಗ್ಗೆ ಹೇಳಿರುವ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, “ನಾವು ದೊಡ್ಡ ಪ್ರತಿಬಂಧಕವನ್ನು ರಚಿಸಿದ್ದೇವೆ ಎಂದು ಭಾವಿಸುತ್ತೇವೆ. ಇದು ಪ್ರಾದೇಶಿಕ ದೇಶಗಳ ಶಾಶ್ವತ ಭದ್ರತೆ ಮತ್ತು ಶಾಂತಿಗೆ ಆಧಾರವಾಗಲಿದೆ” ಎಂದರು. ಇರಾನ್‌ನ ಅರೆಸೇನಾ ಪಡೆಯ ಬಾಹ್ಯಾಕಾಶ ಯೋಜನೆಯ ಮುಖ್ಯಸ್ಥ ಜನರಲ್ ಅಮೀರ್ ಅಲಿ ಹಾಜಿಜಾದೆ ಅವರು ನಿನ್ನೆ ಹೈಪರ್ಸಾನಿಕ್ ಕ್ಷಿಪಣಿಯ ಮಾದರಿಯನ್ನು ಅನಾವರಣಗೊಳಿಸಿದರು.

ಜನರಲ್ ಅಮೀರ್ ಅಲಿ ಹಾಜಿಜಾದೆ

ಈ ಕುರಿತು ಮಾತನಾಡಿದ ಅವರು, “ಈ ಕ್ಷಿಪಣಿಯು 1,400 ಕಿ.ಮೀ. ವರೆಗೆ ಹೋಗಿ ದಾಳಿ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಕ್ಷಿಪಣಿಯೊಂದಿಗೆ ಸ್ಪರ್ಧಿಸುವ ಅಥವಾ ಎದುರಿಸುವ ಯಾವುದೇ ವ್ಯವಸ್ಥೆ ಇಲ್ಲ” ಎಂದರು. ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಪಶ್ಚಿಮ ಏಷ್ಯಾದ ಸೌದಿ ಅರೇಬಿಯಾಕ್ಕೆ ಹೋಗಲಿರುವ ಹಿನ್ನಲೆಯಲ್ಲಿ, ಕ್ಷಿಪಣಿ ಕುರಿತು ಇರಾನ್ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ.

ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್

ಏತನ್ಮಧ್ಯೆ, ಸೌದಿ ಅರೇಬಿಯಾದಲ್ಲಿ, ಏಳು ವರ್ಷಗಳ ನಂತರ, ನಿನ್ನೆ ಇರಾನ್ ತನ್ನ ರಾಯಭಾರ ಕಚೇರಿಯನ್ನು ತೆರೆದಿರುವುದು ಗಮನಾರ್ಹ.

ದೇಶ

ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತದೆ. ಕೊನೆಯ ಜನಗಣತಿ 2011ರಲ್ಲಿ ಆಗಿತ್ತು. ಇದರಲ್ಲಿ ಹೆಸರು, ಲಿಂಗ, ಧರ್ಮ, ಮಾತೃಭಾಷೆ ಹಾಗೂ ತಿಳಿದಿರುವ ಭಾಷೆಗಳು ಸೇರಿದಂತೆ ಹಲವು ಅಂಶಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಈಗ 2023ರ ಜನಗಣತಿ ನಡೆಯಲಿದೆ. ಈ ಜನಗಣತಿಯ ಬಗ್ಗೆ ಸಂಸ್ಕೃತ ವಿದ್ವಾಂಸೆ, 17 ಪುಸ್ತಕಗಳ ಲೇಖಕಿಯೂ ಆದ ಮೃದುಲ್ ಕೀರ್ತಿ ಕೆಲವು ವಿಚಾರಗಳನ್ನು ಮುಂದಿಟ್ಟಿದ್ದಾರೆ.

“2023ರ ಜನಗಣತಿಯ ತಯಾರಿ ಅಂತಿಮ ಹಂತದಲ್ಲಿದೆ. ಅಧಿಕಾರಿಗಳು ಶೀಘ್ರದಲ್ಲೇ ನಿಮ್ಮ ಮನೆಗೆ ಬಂದು ಮಾಹಿತಿಯನ್ನು ಪಡೆಯಲಿದ್ದಾರೆ. ಅದರಲ್ಲಿ, ನಿಮ್ಮ ಮಾತೃ ಭಾಷೆಯನ್ನು ಕುರಿತು ಹಾಗೂ ನಿಮಗೆ ತಿಳಿದಿರುವ ಬೇರೆ ಭಾಷೆಗಳನ್ನು ಕುರಿತು ಪ್ರಶ್ನೆ ಕೇಳುತ್ತಾರೆ. ಆಗ ನಿಮ್ಮ ಮಾತೃ ಭಾಷೆಯನ್ನು ಹೊರತುಪಡಿಸಿ, ನೀವು ಮಾತನಾಡುವ ಅಥವಾ ತಿಳಿದಿರುವ ಇತರೆ ಭಾಷೆಯೆಂದು ಸಂಸ್ಕೃತವನ್ನು ಉಲ್ಲೇಖಿಸಿ. ಏಕೆಂದರೆ, ಸಂಸ್ಕೃತವನ್ನು ನೀವು ಪೂರ್ತಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದರೂ ಪ್ರತಿ ದಿನವೂ ಅದನ್ನು ಮಾತನಾಡುತ್ತಿದ್ದೀರಿ ಎಂಬುದು ಸತ್ಯ. ಹೌದು, ಹಾಡುವುದರ ಮೂಲಕ, ಮಂತ್ರಗಳನ್ನು ಉಚ್ಚರಿಸುವ ಮೂಲಕ, ಪ್ರಾರ್ಥಿಸುವುದರ ಮೂಲಕ ನಾವು ಪ್ರತಿದಿನ ಸಂಸ್ಕೃತ ಭಾಷೆಯನ್ನು ಬಳಸುತ್ತಾ ಇರುತ್ತೇವೆ. ಅನೇಕರು ತಮ್ಮ ಶಾಲೆಗಳಲ್ಲಿ ಈ ಭಾಷೆಯನ್ನು ಕಲಿಯುತ್ತಿದ್ದಾರೆ.

ಹೀಗಿರುವಾಗ ಸಂಸ್ಕೃತ ಭಾಷೆಯ ಬಗ್ಗೆ ಹೇಳುವುದು ಮುಖ್ಯವಾಗಿದೆ. ಜನಗಣತಿಯಲ್ಲಿ ಇಡೀ ದೇಶದಲ್ಲಿ ಕೇವಲ 2000 ಜನರು ಮಾತ್ರ ಸಂಸ್ಕೃತ ಮಾತನಾಡುವುದಾಗಿ ಹೇಳಿದ್ದಾರೆ. ಅದೇ ಸಮಯದಲ್ಲಿ, ಅರೇಬಿಕ್ ಭಾಷೆಯನ್ನು 50 ಸಾವಿರ ಜನರು, ಪರ್ಷಿಯನ್ ಭಾಷೆಯನ್ನು ಸುಮಾರು 12 ಸಾವಿರ ಜನರು ಮಾತನಾಡುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಈ ಭಾಷೆಗಳು ತಮ್ಮ ಅಭಿವೃದ್ಧಿಗೆ ಹಣವನ್ನು ಪಡೆಯುತ್ತವೆ. ಆದರೆ ನಮ್ಮದೇ ಸಂಸ್ಕೃತಿಯ ತಳಹದಿಯಾದ ಸಂಸ್ಕೃತ ನಿಧಾನವಾಗಿ ಮರೆಯಾಗುತ್ತಿದೆ. ಈ ಸಂಖ್ಯೆ ಇನ್ನೂ ಕಡಿಮೆಯಾದರೆ, ಸಂಸ್ಕೃತ ಅಳಿವಿನಂಚಿನಲ್ಲಿದೆ ಎಂದು ಘೋಷಿಸಲಾಗುವುದು. ನಮ್ಮ ಪರಂಪರೆಯನ್ನು ಉಳಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ. ಸಂಸ್ಕೃತ ಪದವನ್ನು ಉಲ್ಲೇಖಿಸಿದರೆ ಸಾಕು” ಎಂದು ಹೇಳಿದ್ದಾರೆ.