ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Education Archives » Dynamic Leader
October 23, 2024
Home Posts tagged Education
ದೇಶ

ನವದೆಹಲಿ: “ಬಡವರು ಮತ್ತು ನಿರ್ಗತಿಕರ ಸೇವೆಯಲ್ಲಿ ಕ್ರೈಸ್ತ ಸಮುದಾಯ ಮುಂಚೂಣಿಯಲ್ಲಿದೆ. ಅವರು ಮಕ್ಕಳಿಗೆ ಶಿಕ್ಷಣ ನೀಡಲು ಮತ್ತು ಅವರ ಶೈಕ್ಷಣಿಕ ಬೆಳವಣಿಗೆಗೆ ಸಹಾಯ ಮಾಡಲು ಅನೇಕ ಶಾಲೆಗಳನ್ನು ನಡೆಸುತ್ತಿದ್ದಾರೆ” ಎಂದು ಕ್ರಿಶ್ಚಿಯನ್ನರಿಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ರಿಸ್‌ಮಸ್ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ದೆಹಲಿಯ ತಮ್ಮ ನಿವಾಸದಲ್ಲಿ ಪಾದ್ರಿಗಳು ಸೇರಿದಂತೆ ಪ್ರಮುಖ ಕ್ರಿಶ್ಚಿಯನ್ ಧಾರ್ಮಿಕ ಮುಖಂಡರುಗಳನ್ನು ಭೇಟಿ ಮಾಡಿದರು. ಅವರ ನಡುವೆ ಮಾತನಾಡಿದ ಮೋದಿ ಅವರು,”ಕ್ರಿಸ್‌ಮಸ್ ಹಬ್ಬದಂದು ವಿಶ್ವದ ಜನರಿಗೆ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ನನ್ನ ಶುಭಾಶಯಗಳು. ಇಂತಹ ವಿಶೇಷವಾದ ಶುಭದಿನದಂದು ನೀವೆಲ್ಲರೂ ನನ್ನ ನಿವಾಸಕ್ಕೆ ಬಂದಿರುವುದಕ್ಕೆ ನನಗೆ ಸಂತೋಷವಾಗಿದೆ. ಕ್ರಿಸ್ಮಸ್ ಹಬ್ಬ ಬಡವರ ಕಲ್ಯಾಣಕ್ಕಾಗಿ. ಬಡವರು ಮತ್ತು ನಿರ್ಗತಿಕರ ಸೇವೆಯಲ್ಲಿ ಕ್ರೈಸ್ತ ಸಮುದಾಯ ಮುಂಚೂಣಿಯಲ್ಲಿದೆ.

ಕ್ರೈಸ್ತರು ಸಾಮಾಜಿಕ ನ್ಯಾಯದ ಪರ ನಿಂತಿರುವ ಜನರು. ಅವರು ಮಕ್ಕಳಿಗೆ ಶಿಕ್ಷಣ ನೀಡಲು ಮತ್ತು ಅವರ ಶೈಕ್ಷಣಿಕ ಬೆಳವಣಿಗೆಗೆ ಸಹಾಯ ಮಾಡಲು ಅನೇಕ ಶಾಲೆಗಳನ್ನು ನಡೆಸುತ್ತಿದ್ದಾರೆ. ದೇಶಕ್ಕೆ ನಿಮ್ಮ ಕೊಡುಗೆಯನ್ನು ಭಾರತ ಹೆಮ್ಮೆಯಿಂದ ಅನುಮೋದಿಸುತ್ತದೆ. ಕೆಲವು ವರ್ಷಗಳ ಹಿಂದೆ ಪೋಪ್ ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತ್ತು. ಇದು ನನಗೆ ಬಹಳ ಸ್ಮರಣೀಯ ಕ್ಷಣವಾಗಿತ್ತು.

ನಾವು ಸಾಮಾಜಿಕ ಸಾಮರಸ್ಯ, ಜಾಗತಿಕ ಭ್ರಾತೃತ್ವ, ಹವಾಮಾನ ಬದಲಾವಣೆ ಮತ್ತು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅಂತರ್ಗತ ಅಭಿವೃದ್ಧಿ ಕುರಿತು ಚರ್ಚಿಸಿದ್ದೇವೆ” ಎಂದು ಹೇಳಿದರು.

ರಾಜಕೀಯ

ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ. ಈ ಸಡಗರವನ್ನು ಶಾಲೆಗಳಲ್ಲಿ ಖುಷಿಖುಷಿಯಾಗಿ ಹಾಲು ಕುಡಿಯುತ್ತಿರುವ ಮಕ್ಕಳ ಮುಖಗಳಲ್ಲಿ ನಾನು ಕಾಣುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಒಂದನೇ ತರಗತಿಯಲ್ಲಿ ಬಿಸಿ ಹಾಲು ಕುಡಿಯಲಾರಂಭಿಸಿದ ಮಗುವೊಂದು ಈಗ ಹತ್ತನೇ ತರಗತಿಯ ಪ್ರೌಡ ವಿದ್ಯಾರ್ಥಿಯಾಗಿ ಕ್ಷೀರಭಾಗ್ಯ ಯೋಜನೆಯಿಂದ ತನ್ನ ದೇಹಕ್ಕೆ ಬಲ ಬಂತು, ಓದಲು ಹುಮ್ಮಸ್ಸು ಬಂತು ಎಂದೆಲ್ಲ ಹೇಳುತ್ತಿರುವುದನ್ನು ಕೇಳಿದಾಗ ಯೋಜನೆಯ ಉದ್ದೇಶ ಸಾರ್ಥಕವಾಯಿತು ಎಂದು ಅನಿಸುತ್ತದೆ.

ಇದನ್ನೂ ಓದಿ: ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ಅಪೌಷ್ಟಿಕತೆ ನಿವಾರಣೆಯ ಜೊತೆಗೆ ಕಲಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ 2013ರಲ್ಲಿ ನಮ್ಮ ಸರ್ಕಾರವು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿತ್ತು. ಕ್ಷೀರಭಾಗ್ಯ ಜಾರಿಗೊಂಡ ನಂತರದಿಂದ ಶಾಲಾ ಮಕ್ಕಳ ಪೌಷ್ಟಿಕ ಮಟ್ಟ ಸುಧಾರಣೆಯಾಗಿದೆ, ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗಿದೆ ಮತ್ತು ರಾಜ್ಯದ ಹಾಲು ಉತ್ಪಾದಕ ಒಕ್ಕೂಟಗಳಿಗೂ ಬಲ ಬಂದಿದೆ ಎನ್ನುವುದನ್ನು ತಿಳಿಸಲು ಹೆಮ್ಮೆಯಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೇಮ್ ಚೇಂಜರ್ಸ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ ನೇಮ್ ಚೇಂಜರ್ಸ್ ಆಗಿದೆ!