ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Fertilizer Archives » Dynamic Leader
October 23, 2024
Home Posts tagged Fertilizer
ದೇಶ ರಾಜಕೀಯ

ನವದೆಹಲಿ: ಕಳೆದ ವರ್ಷ ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಒಂದು ದೇಶ ಒಂದು ರಸಗೊಬ್ಬರ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

“ಭಾರತದಾದ್ಯಂತ ಇರುವ ರಸಗೊಬ್ಬರ ಕಂಪನಿಗಳು ಇನ್ನುಮುಂದೆ ‘ಭಾರತ್’ ಎಂಬ ಸಾಮಾನ್ಯ ಹೆಸರಿನಲ್ಲೇ ರಸಗೊಬ್ಬರವನ್ನು ಮಾರಾಟ ಮಾಡಬೇಕು. ರಸಗೊಬ್ಬರ ಯೋಜನೆಯನ್ನು ಸೂಚಿಸುವ ‘ಪ್ರಧಾನ ಮಂತ್ರಿ ಭಾರತೀಯ ಜನ್ ಉರ್ವರಕ್ ಪರಿಯೋಜನ’ ಎಂದು ಸೂಚಿಸುವ ಮುದ್ರೆಯನ್ನೇ ರಸಗೊಬ್ಬರ ಪ್ಯಾಕೆಟ್‌ಗಳ ಮೇಲೆ ಬಳಸಬೇಕು” ಎಂದು ಘೋಷಿಸಲಾಯಿತು.

ಭಾರತದಲ್ಲಿ ಯೂರಿಯಾದ ಬೆಲೆಯನ್ನು ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ. ಸರ್ಕಾರ ನಿರ್ಧಾರಿಸುವ ಬೆಲೆಯಲ್ಲೇ ಕಂಪನಿಗಳು ಅದನ್ನು ಮಾರಾಟ ಮಾಡುತ್ತವೆ. ಉತ್ಪಾದನೆಯ ವೆಚ್ಚದಲ್ಲಿ ಶೇ.80-90 ರಷ್ಟು ಉತ್ಪಾದಕರಿಗೆ ಸರ್ಕಾರ ಸಬ್ಸಿಡಿಯಾಗಿ ನೀಡುತ್ತದೆ. ಆಹಾರ ಸಬ್ಸಿಡಿಯ ನಂತರ ಭಾರತೀಯ ಸರ್ಕಾರವು ರಸಗೊಬ್ಬರಕ್ಕೆ ಹೆಚ್ಚಾಗಿ ಹಣವನ್ನು ನಿಗದಿಪಡಿಸಬೇಕಾಗಿದೆ. ಅಂದರೆ ಸುಮಾರು ರೂ.2 ಲಕ್ಷ ಕೋಟಿಗೂ ಮೇಲಾಗಿ ಸಬ್ಸಿಡಿಗೆ ಹಣವನ್ನು ನಿಗದಿಪಡಿಸುತ್ತಿದೆ.

“ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಒಂದು ದೇಶ ಒಂದು ರಸಗೊಬ್ಬರ ಯೋಜನೆ ಜಾರಿಯಿಂದ ರೈತರಿಗೆ ಕೈಗೆಟಕುವ ದರದಲ್ಲಿ ‘ಭಾರತ್ ಬ್ರಾಂಡ್’ ಗುಣಮಟ್ಟದ ರಸಗೊಬ್ಬರ ದೊರೆಯಲಿದೆ” ಎಂದರು. ಈ ಹಿನ್ನಲೆಯಲ್ಲಿ, ಒಂದು ದೇಶ ಒಂದು ರಸಗೊಬ್ಬರ ಯೋಜನೆಯಡಿ ಮಾರಾಟ ಮಾಡುತ್ತಿರುವ ಭಾರತ್ ಯೂರಿಯಾ ಚೀಲಗಳ ಮೇಲೆ ಹಿಂದಿಯಲ್ಲಿ “ಮೇಡ್ ಇನ್ ಚೈನಾ” ಎಂದು ಮುದ್ರಿಸಿರುವುದು ಆಘಾತವನ್ನು ಉಂಟುಮಾಡಿದೆ. ಇದರ ಬಗ್ಗೆ ವಿರೋಧ ಪಕ್ಷಗಳು ಖಂಡನೆಯನ್ನು ವ್ಯಕ್ತಪಡಿಸಿವೆ.

ಕಳೆದ ವರ್ಷ ಕೆನಡಾದಲ್ಲಿ ಸ್ಪೀಕರ್‌ಗಳಿಗಾಗಿ ನಡೆದ ಕಾಮನ್‌ವೆಲ್ತ್ ಸಮ್ಮೇಳನದಲ್ಲಿ ಸ್ಪೀಕರ್ ಒಂಬಿರ್ಲಾ ನೇತೃತ್ವದಲ್ಲಿ ಸ್ಪೀಕರ್‌ಗಳು ರಾಷ್ಟ್ರಧ್ವಜವನ್ನು ಹಿಡಿದು ರ‍್ಯಾಲಿ ನಡೆಸಿದರು. ಆ ರಾಷ್ಟ್ರಧ್ವಜಗಳ ಮೇಲೆ ‘ಮೇಡ್ ಇನ್ ಚೈನಾ’ ಎಂದು ಬರೆಯಲಾಗಿದ್ದು ವಿವಾದಕ್ಕೆ ಕಾರಣವಾಗಿದ್ದನ್ನು ಸ್ಮರಿಸಬಹುದು.

ದೇಶ ರಾಜಕೀಯ

ರಾಯ್‌ಪುರ: ಪ್ರಧಾನಿ ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಛತ್ತೀಸ್‌ಗಢ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಛತ್ತೀಸ್‌ಗಢದ ಪಲೋಡಾ ಬಜಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು: ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮೋದಿ ಗ್ಯಾರಂಟಿ ಎಂದರೆ ಅದು ಅದಾನಿಯ ಗ್ಯಾರಂಟಿಯೇ.

ಛತ್ತೀಸ್‌ಗಢದಲ್ಲಿ ಕೆ.ಜಿ.ಯಿಂದ ಪಿ.ಜಿ.ವರೆಗೆ ಉಚಿತ ಶಿಕ್ಷಣ ನೀಡಲು ಭೂಪೇಶ್ ಬಾಗಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಜಾತಿವಾರು ಜನಗಣತಿ:
ಮಧ್ಯಪ್ರದೇಶದ ದಾಡಿಯಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು, “ಮಧ್ಯಪ್ರದೇಶದಲ್ಲಿ ನಾವು (ಕಾಂಗ್ರೆಸ್) ಅಧಿಕಾರಕ್ಕೆ ಬಂದರೆ, ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ. ಜಾತಿವಾರು ಜನಗಣತಿ ನಡೆಸುತ್ತೇವೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರಕ್ಕಾಗಿ ರೈತರು ಉದ್ದನೆಯ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇಲ್ಲಿ ರಸಗೊಬ್ಬರ ಸಿಗುತ್ತಿಲ್ಲ. ಮಧ್ಯಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ರಸಗೊಬ್ಬರದ ಚೀಲಗಳ ಮೇಲೆ ಮೋದಿ ಫೋಟೋ ಅಂಟಿಸಿದ್ದಕ್ಕೆ ಚುನಾವಣಾ ಆಯೋಗ ಗೊಬ್ಬರ ವಿತರಣೆಗೆ ನಿಷೇಧ ಹೇರಿದೆ. ಇದರಿಂದ ಮಧ್ಯಪ್ರದೇಶದ ರೈತರು ಕಂಗಾಲಾಗಿದ್ದಾರೆ” ಎಂದು ಮಾತನಾಡಿದ್ದಾರೆ.

ಬೆಂಗಳೂರು

ಡಿ.ಸಿ.ಪ್ರಕಾಶ್

ತಿರುಮಂಗಲಂ: ತಮಿಳುನಾಡಿನ ತಿರುಮಂಗಲಂ ನಗರ ಪುರಸಭೆಯು ಸಾರ್ವಜನಿಕರಿಂದ ಸಂಗ್ರಹಿಸುವ ತಾಜ್ಯವನ್ನು ವಿಂಗಡಣೆ ಮಾಡಿ ಕೊಳೆತ ಹಸಿ ತ್ಯಾಜ್ಯದಿಂದ ನೈಸರ್ಗಿಕ ಗೊಬ್ಬರವನ್ನು ತಯಾರಿಸಿ ರೈತರಿಗೆ ಉಚಿತವಾಗಿ ವಿತರಿಸುತ್ತಿರುವುದು ಸುದ್ದಿಯಾಗಿದೆ.

ತಿರುಮಂಗಲಂ ಪುರಸಭೆಯಲ್ಲಿ ಪ್ರತಿದಿನ 12 ಮೆಟ್ರಿಕ್ ಟನ್ ಕಸವನ್ನು ಸ್ವಚ್ಚತಾ ಕಾರ್ಯಕರ್ತರಿಂದ ಸಂಗ್ರಹಿಸಲಾಗುತ್ತಿದೆ. ಸಂಗ್ರಹಿಸಲಾದ ಕಸವನ್ನು ಸಂಗ್ರಹ ಕೇಂದ್ರಕ್ಕೆ ತಂದು, ಒಣ ತ್ಯಾಜ್ಯ ಮತ್ತು ಹಸಿ ತ್ಯಾಜ್ಯವೆಂದು ಇಬ್ಬಾಗವಾಗಿ ವಿಂಗಡಿಸಲಾಗುತ್ತದೆ. ನಂತರ ಸಂಗ್ರಹ ಕೇಂದ್ರದಲ್ಲಿರುವ ಗ್ರೈಂಡಿಂಗ್ ಯಂತ್ರಗಳ ಮೂಲಕ ಸಣ್ಣ ಸಣ್ಣ ತುಂಡುಗಳಾಗಿ ಪುಡಿಮಾಡಲಾಗುತ್ತದೆ.

ನಂತರ ಈ ಕೇಂದ್ರದಲ್ಲಿರುವ ತೊಟ್ಟಿಗಳಲ್ಲಿ ಇಎಂ ದ್ರಾವಣವನ್ನು (ಸಲ್ಯೂಷನ್) ಬಳಸಿ 21 ದಿನಗಳ ಕಾಲ ಕೊಳೆಯಲು ಬಿಡಲಾಗುತ್ತದೆ. ನಂತರ ಅವುಗಳನ್ನು ತೊಟ್ಟಿಯಿಂದ ಹೊರತೆಗೆದು ಮತ್ತೆ 24 ದಿನಗಳವರೆಗೆ ಒಣಗಿಸಿ ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸಲಾಗುತ್ತದೆ. ಈ ನೈಸರ್ಗಿಕ ಗೊಬ್ಬರಗಳನ್ನು ಮನೆಯಲ್ಲಿ ಬೆಳೆಸುವ ಗಿಡಗಳು, ಬಳ್ಳಿಗಳು ಮತ್ತು ರೈತರಿಗೆ ಉಚಿತವಾಗಿ ನೀಡಲಾಗುತ್ತದೆ. ನೈಸರ್ಗಿಕ ಗೊಬ್ಬರ ಬೇಕಾದವರು ನಗರಸಭೆಯ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಬಹುದು ಎಂದೂ ಪ್ರಕಟಣೆಯನ್ನೂ ನೀಡಲಾಗಿದೆ. ನಗರಸಭೆ ಮೂಲಕ ದೊರೆಯುವ ನೈಸರ್ಗಿಕ ಗೊಬ್ಬರವನ್ನು ಪಡೆಯಲು ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

ಇದಲ್ಲದೇ ಒಣ ತ್ಯಾಜ್ಯಗಳಾದ ರಟ್ಟು, ಹಾಲಿನ ಪ್ಯಾಕೆಟ್, ಪ್ಲಾಸ್ಟಿಕ್ ಕವರ್ ಇತ್ಯಾದಿಗಳನ್ನು ಸ್ವಚ್ಛತಾ ಕಾರ್ಮಿಕರೇ ತೆಗೆದುಕೊಳ್ಳುತ್ತಾರೆ. ಉಳಿದ ತ್ಯಾಜ್ಯಗಳಾದ ರಬ್ಬರ್, ಟೈರ್ ಮತ್ತು ಹಳೆಯ ಶೂಗಳನ್ನು ತಿರುಮಂಗಲಂ ಪುರಸಭೆಯ ಮೂಲಕ ಸಿಮೆಂಟ್ ಕಂಪೆನಿಗಳಿಗೆ ಕಳುಹಿಸಿಕೊಡಲಾಗುತ್ತದೆ. ಹಸಿ ತ್ಯಾಜ್ಯವನ್ನು ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸುವ ತಂತ್ರಗಾರಿಕೆ ನಮಗೆ ತಿಳಿದಿದ್ದರೂ ನಾವು ಆ ಪ್ರಯತ್ನಕ್ಕೆ ಕೈಹಾಕಲಿಲ್ಲ ಎಂದು ಭಾವಿಸುತ್ತೇನೆ. ನಾವು ಯಾಕೆ ಇಂತಹ ಪ್ರಯತ್ನವನ್ನು ಮಾಡಬಾರದು ಎಂಬುದು ನನ್ನ ಪ್ರಶ್ನೆಯಾಗಿದೆ.

ಬೆಂಗಳೂರು ನಗರದಲ್ಲಿ ಸಂಗ್ರಹಿಸಲಾಗುವ ಹಸಿ ತ್ಯಾಜ್ಯವನ್ನು ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸಿ ಹಂಚಿಕೆ ಮಾಡಿದರೆ, ನಮ್ಮ ಅಕ್ಕಪಕ್ಕದಲ್ಲಿರುವ ಎಲ್ಲಾ ಜಿಲ್ಲೆಗಳಿಗೂ ಉಚಿತವಾಗಿ ನೈಸರ್ಗಿಕ ಗೊಬ್ಬರವನ್ನು ಹಂಚಿಕೆಮಾಡಬಹುದು ಅಲ್ಲವೇ? ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನಮ್ಮ ಸುತ್ತಮುತ್ತ ಇರುವ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಇದರ ಬಗ್ಗೆ ಯೋಚಿಸಬೇಕು.