ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Forest Archives » Dynamic Leader
October 22, 2024
Home Posts tagged Forest
ದೇಶ

ತಿರುವನಂತಪುರಂ: ಕೇರಳದ 8 ಪೊಲೀಸ್ ಠಾಣೆಗಳನ್ನು ಸ್ಫೋಟಿಸಲು ಮಾವೋವಾದಿಗಳು ಮುಂದಾಗಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಪೊಲೀಸ್ ಠಾಣೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.  ಕೇರಳ ರಾಜ್ಯದ ಕೋಳಿಕೋಡ್, ಮಲಪ್ಪುರಂ, ಪತ್ತನಂತಿಟ್ಟ ಮತ್ತು ಕಣ್ಣೂರು ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ಮಾವೋವಾದಿಗಳು ಸಕ್ರಿಯರಾಗಿದ್ದಾರೆ.

ಆಗಾಗ ಊರಿಗೆ ಬಂದು ಸಾರ್ವಜನಿಕರಿಂದ ಆಹಾರ ಪದಾರ್ಥಗಳನ್ನು ಖರೀದಿಸಿಕೊಂಡು ಹೋಗುವುದನ್ನು ವಾಡಿಕೆಯಾಗಿಸಿಕೊಂಡಿರುವ ಮಾವೋವಾದಿಗಳು, ಪೊಲೀಸ್ ಠಾಣೆಗಳು, ಅರಣ್ಯ ಇಲಾಖೆ ಕಚೇರಿ ಸೇರಿದಂತೆ ಸರಕಾರಿ ಕಚೇರಿಗಳ ಮೇಲೆ ದಾಳಿಯನ್ನೂ ನಡೆಸುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಹಲವು ಬಾರಿ ಮಾವೋವಾದಿಗಳಿಗೂ ಕೇರಳ ಕಾರ್ಯಪಡೆ ಪೊಲೀಸರಿಗೂ ಗುಂಡಿನ ಚಕಮಕಿ ನಡೆದಿರುತ್ತದೆ. ಹಲವು ಮಾವೋವಾದಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಈ ಹಿನ್ನಲೆಯಲ್ಲಿ, ವಯನಾಡ್ ಜಿಲ್ಲೆಯ ಕಂಬಮಲೈ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಮಾವೋವಾದಿಗಳು ಆಗಾಗ್ಗೆ ಭೇಟಿ ನೀಡುತ್ತಿರುವುದು ಕಳೆದ ಕೆಲವು ದಿನಗಳಿಂದ ಸಂಚಲನ ಮೂಡಿಸಿದೆ. ಬಳಿಕ ಪೊಲೀಸ್ ಕಾರ್ಯಪಡೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಕೋಳಿಕೋಡ್ ಜಿಲ್ಲೆಯ 8 ಪೊಲೀಸ್ ಠಾಣೆಗಳನ್ನು ಸ್ಫೋಟಿಸಲು ಮಾವೋವಾದಿಗಳು ಮುಂದಾಗಿದ್ದಾರೆ ಎಂಬ ಗುಪ್ತಚರ ಸಂಸ್ಥೆ ಬಿಡುಗಡೆ ಮಾಡಿರುವ ಮಾಹಿತಿ ಸಂಚಲನ ಮೂಡಿಸಿದೆ.

ಕೋಳಿಕೋಡ್ ಜಿಲ್ಲೆಯ ವಳಯಂ, ಕುಟ್ರಿಯಾಡಿ, ತೊಟ್ಟಿಲ್ ಬಾಲಂ, ಪೆರುವನ್ನಾಮೂಳಿ, ಕೂರಾಚ್ಚುಂಡು, ತಾಮರಚೇರಿ, ತಿರುವಂಬಾಡಿ ಮತ್ತು ಕೋಟ್ಟಚೇರಿ ಪೊಲೀಸ್ ಠಾಣೆಗಳನ್ನು ಮಾವೋವಾದಿಗಳು ಸ್ಫೋಟಿಸುವ ಸಾಧ್ಯತೆಯಿರುವುದರಿಂದ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕು ಎಂದು ಗುಪ್ತಚರ ಸಂಸ್ಥೆ ತಿಳಿಸಿದೆ.

ಇದನ್ನು ಅನುಸರಿಸಿ, ಸದರಿ ಪೊಲೀಸ್ ಠಾಣೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ತಮಿಳುನಾಡು ಮತ್ತು ಕರ್ನಾಟಕ ರಾಜ್ಯದ ಅರಣ್ಯ ಪ್ರದೇಶದ ಮೂಲಕ ಕೋಳಿಕೋಡ್ ಜಿಲ್ಲೆಯ ಅರಣ್ಯ ಪ್ರದೇಶಕ್ಕೆ ಮಾವೋವಾದಿಗಳು ಸುಲಭವಾಗಿ ಬರುವ ಸಾಧ್ಯತೆ ಇರುವುದರಿಂದ ಇಲ್ಲಿನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ತೀವ್ರಗೊಳಿಸಲು ಕೇರಳ ಕಾರ್ಯಪಡೆ ಯೋಜನೆ ರೂಪಿಸಿದೆ.

ರಾಜಕೀಯ

ಬೆಂಗಳೂರು: ಕಸ್ತೂರಿ ರಂಗನ್ ವರದಿಯನ್ನು ಯಥಾವತ್ ಅನುಷ್ಠಾನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆಯವರು ನೀಡಿರುವ ಹೇಳಿಕೆಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಸಚಿವ ಸುನಿಲ್ ಕುಮಾರ್ ಈ ವರದಿಯ ಯಥಾವತ್ ಜಾರಿಯಿಂದ ಪಶ್ಚಮಘಟ್ಟ ವ್ಯಾಪ್ತಿಯ ಜನಜೀವನಕ್ಕೆ ಸಮಸ್ಯೆಯಾಗುತ್ತದೆ ಮತ್ತು ಅರಣ್ಯಾಶ್ರಿತ ಜನರ ಬದುಕು ಹೈರಾಣಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇನ್ನೊಬ್ಬ ವ್ಯಕ್ತಿಯನ್ನು ತನ್ನ ಪತಿ ಎಂದು ಭಾವಿಸಿ ಮನೆಗೆ ಕರೆದೊಯ್ದ ಮಹಿಳೆ!

ಹೀಗಾಗಿ ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿ ಅವೈಜ್ಞಾನಿಕವಷ್ಟೇ ಅಲ್ಲ, ಅಮಾನವೀಯವೂ ಹೌದು. ಈ ವರದಿ ಜಾರಿ ಬಗ್ಗೆ ಕೇಂದ್ರಕ್ಕೆ ವರದಿ ಕಳುಹಿಸುವುದಕ್ಕೆ ಮುನ್ನ ಇನ್ನಷ್ಟು ಚರ್ಚೆಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯೋಜನಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಸಕರ ಸಭೆ ಕರೆದು ಚರ್ಚಿಸಿ ನಿರ್ಣಯ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.