ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Halasuru Gate Police Station Archives » Dynamic Leader
October 23, 2024
Home Posts tagged Halasuru Gate Police Station
ಬೆಂಗಳೂರು ರಾಜಕೀಯ

ಬೆಂಗಳೂರು: ಜುಲೈ 3 ರಿಂದ 14 ರವರೆಗೆ ವಿಧಾನಸೌಧದಲ್ಲಿ ಜಂಟಿ ಮತ್ತು ಬಜೆಟ್ ಅಧಿವೇಶನ ನಡೆಯಲಿದೆ. ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತವೆ.

ಇದರಿಂದ ಅಧಿವೇಶನದ ಕಾರ್ಯ-ಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಗಳು ಇರುವುದರಿಂದ ಮತ್ತು ವಿಶೇಷ ಅಧಿವೇಶನದ ಕಲಾಪಗಳು ಸುಗುಮವಾಗಿ ನಡೆಯುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಐಪಿಎಸ್ ಅವರು ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿದ್ದಾರೆ.

ದಂಡ ಪ್ರಕ್ರಿಯಾ ಸಂಹಿತೆ ಕಲಂ 144ನೇ ಪ್ರಕರಣದ ಅನ್ವಯ ದಿನಾಂಕ: 03.07.2023 ರಿಂದ ದಿನಾಂಕ: 14.07.2023 ರವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂ ಪಾರ್ಕ್ ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

  1. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇಧಿಸಿದೆ.
  2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.
  3. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
  4. ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
  5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷನೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.       
ಕ್ರೈಂ ರಿಪೋರ್ಟ್ಸ್

ಕೇಂದ್ರ ವಿಭಾಗದ ಪೊಲೀಸ್ ಠಾಣೆಗಳಲ್ಲಿ 106 ಜನ ಆರೋಪಿಗಳನ್ನು ಬಂಧಿಸಿ, 103 ಪ್ರಕರಣಗಳನ್ನು ಪತ್ತೆ ಮಾಡಿ, ಸುಮಾರು 2 ಕೋಟಿ, 69 ಲಕ್ಷ, 76 ಸಾವಿರದ 225 ರೂಗಳ ಬೆಲೆ ಬಾಳುವ ಕಳವು ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿನ್ನ:
ಶೇಷಾದ್ರಿಪುರಂ, ವೈಯಾಲಿಕಾವಲ್, ಹಲಸೂರು ಗೇಟ್, ಅಶೋಕ ನಗರ, ವಿವೇಕನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 14; ಪತ್ತೆಯಾದ ಪ್ರಕರಣಗಳ ಸಂಖ್ಯೆ 19; ಇವರಿಂದ ವಶಪಡಿಸಿಕೊಳ್ಳಲಾದ ಚಿನ್ನದ ತೂಕ 2 ಕೆಜಿ 110 ಗ್ರಾಂ. ಇದರ ಮೌಲ್ಯ ರೂ. 1,05,24,100/-

ಬೆಳ್ಳಿ:
ಹಲಸೂರು ಗೇಟ್ ಹಾಗೂ ವಿವೇಕನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಬೆಳ್ಳಿಯ ತೂಕ 105 ಕೆಜಿ 263 ಗ್ರಾಂ. ಇದರ ಮೌಲ್ಯ ರೂ.63,19,135/-

ಕಾರುಗಳು:
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 02; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಕಾರಿನ ಸಂಖ್ಯೆ 01. ಇದರ ಮೌಲ್ಯ ರೂ.18,00,000/-

ದ್ವೀಚಕ್ರ ವಾಹನ:
ಶೇಷಾದ್ರಿಪುರಂ ಹಾಗೂ ಅಶೋಕ ನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 07; ಇವರಿಂದ ವಶಪಡಿಸಿಕೊಳ್ಳಲಾದ ದ್ವೀಚಕ್ರ ವಾಹನದ ಸಂಖ್ಯೆ 5. ಇದರ ಮೌಲ್ಯ ರೂ.3,30,000/-

ನಗದು ಹಣ:
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 04; ಪತ್ತೆಯಾದ ಪ್ರಕರಣಗಳ ಸಂಖ್ಯೆ 02; ಇವರಿಂದ ವಶಪಡಿಸಿಕೊಳ್ಳಲಾದ ಹಣ ರೂ.2,12,720/-

ಶಸ್ತ್ರ:
ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 01; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಪಿಸ್ತೂಲ್‌ಗಳ ಸಂಖ್ಯೆ 03. ಗುಂಡುಗಳ ಸಂಖ್ಯೆ 99. ಇದರ ಮೌಲ್ಯ ರೂ.2,49,000/-

ಮೊಬೈಲ್ ಪೋನ್:
ವಿವೇಕನಗರ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 02; ಇವರಿಂದ ವಶಪಡಿಸಿಕೊಳ್ಳಲಾದ ಮೊಬೈಲ್‌ಗಳ ಸಂಖ್ಯೆ 113. ಇದರ ಮೌಲ್ಯ ರೂ.40,00,000/-

NDPS Act:
ಎನ್.ಡಿ.ಪಿ.ಎಸ್ ಆಕ್ಟ್ ಅಡಿಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 76; ಪತ್ತೆಯಾದ ಪ್ರಕರಣಗಳ ಸಂಖ್ಯೆ 70; ಇವರಿಂದ ಒಟ್ಟು 101 ಕೆಜಿ 780 ಗ್ರಾಂ ಗಾಂಜಾ ಮತ್ತು 44.93 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ.35,41,300/-

ಹೆಚ್ಚುವರಿ ಪೊಲೀಸ್ ಆಯುಕ್ತರು, ಪಶ್ಚಿಮ, ಸಂದೀಪ್ ಪಾಟೀಲ್ ಐಪಿಎಸ್, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀನಿವಾಸಗೌಡ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಕಬ್ಬನ್ ಪಾರ್ಕ್. ಉಪ-ವಿಭಾಗದ ಎಸಿಪಿ ಡಿ.ಎಸ್.ರಾಜೇಂದ್ರ, ಹಲಸೂರು ಗೇಟ್ ಉಪ-ವಿಭಾಗದ ಎಸಿಪಿ ನಾರಾಯಣಸ್ವಾಮಿ ಮತ್ತು ಶೇಷಾದ್ರಿಪುರಂ ಉಪ-ವಿಭಾಗದ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಪೊಲೀಸ್‌ ಇನ್ಸ್‌ಪೆಕ್ಟರ್ ರವರುಗಳು ಮಾಡಿರುವ ಈ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರವರು ಶ್ಲಾಘಿಸಿದ್ದಾರೆ.