ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
HD Devegowda Archives » Page 2 of 2 » Dynamic Leader
October 23, 2024
Home Posts tagged HD Devegowda (Page 2)
ಬೆಂಗಳೂರು ರಾಜಕೀಯ

ಬೆಂಗಳೂರು: ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಇಂದು ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಸರ್ವೋದಯ ದಿನಾಚರಣೆ ಆಚರಿಸಲಾಯಿತು. ಪ್ರತಿವರ್ಷದಂತೆ ಈ ವರ್ಷವೂ ದಿನಾಚರಣೆ ಸಾಂಸ್ಕೃತಿಕವಾಗಿ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷ ಅರ್.ಪ್ರಕಾಶ್ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದರು.

ಜೆ.ಪಿ.ಭವನದಲ್ಲಿ ಇಂದು ಆಚರಿಸಲಾದ ಸರ್ವೋದಯ ದಿನಾಚರಣೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್, ರಾಜ್ಯ ಹಿರಿಯ ಮುಖಂಡ ಶಫಿಯುಲ್ಲಾ, ನಾಗರಾಜ್, ಮಹಿಳಾ ಘಟಕದ ಅಧ್ಯಕ್ಷೆ ಡಾ.ರೂತ್ ಮನೋರಮ, ಶಾಂತಿನಗರ ಮಹಿಳಾ ಘಟಕದ ಅಧ್ಯಕ್ಷೆ ಸರಸ್ವತಿ ಮುಂತಾದ ಹಲವರು ಭಾಗವಿಸಿದ್ದರು.

ಜೆಡಿಎಸ್ ಕಚೇರಿಯಲ್ಲಿ ನಡೆದ ಸರ್ವೋದಯ ದಿನಾಕಾರಣೆ

ದೇಶಾದ್ಯಂತ ದೇಶಕ್ಕಾಗಿ ಜೀವತೆತ್ತ ಹುತಾತ್ಮರನ್ನು ಸ್ಮರಣೆ ಮಾಡಿ ಅವರ ತ್ಯಾಗ ಸೇವೆ ಮತ್ತು ದೇಶಪ್ರೇಮವನ್ನು ಕೊಂಡಾಡಿ, ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿರುತ್ತದೆ. ವಿಶ್ವದಾದ್ಯಂತ ಸುಮಾರು 15 ದೇಶಗಳು ಪ್ರತಿ ವರ್ಷ ಹುತಾತ್ಮರ ದಿನವನ್ನು ಬೇರೆ ಬೇರೆ ದಿನಗಳಲ್ಲಿ ಆಚರಣೆ ಮಾಡಿ ಜನರಲ್ಲಿ ದೇಶ ಪ್ರೇಮದ ಬಗ್ಗೆ ಭಕ್ತಿ ಮೂಡುವಂತೆ ಮಾಡುತ್ತದೆ. ಮೊದಲೆಲ್ಲಾ ಜನವರಿ 26ರ ಗಣರಾಜ್ಯೋತ್ಸವದ ದಿನದಂದು ದೇಶಕ್ಕಾಗಿ ಜೀವತೆತ್ತ ಸೈನಿಕರನ್ನು ನೆನೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿತ್ತು. ಜನವರಿ 30ರಂದು ನಮ್ಮ ದೇಶದ ಸ್ವಾತಂತ್ರಕ್ಕಾಗಿ ‘ಅಹಿಂಸಾ’ ಅಸ್ತ್ರದ ಮುಖಾಂತರ ಹೋರಾಡಿದ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು ಆಚರಿಸಲಾಗುತ್ತಿದೆ.

ಗಾಂಧೀಜಿಯವರ ಪುಣ್ಯತಿಥಿಯ ನೆನಪಿಗಾಗಿಯೂ ಈ ದಿನವನ್ನು ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ. ಈ ದಿನದಂದು ಭಾರತದ ಪ್ರಧಾನ ಮಂತ್ರಿ ಮತ್ತು ವಿವಿಧ ಸೇನಾ ದಳಗಳ ಮುಖ್ಯಸ್ಥರು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹುತಾತ್ಮರಿಗೆ ಗೌರವವನ್ನು ಸಲ್ಲಿಸುತ್ತಾರೆ. ಎರಡು ನಿಮಿಷಗಳ ಮೌನಾಚರಣೆಯ ಮಾಡಿ ಪ್ರಾರ್ಥಿಸುತ್ತಾರೆ.

ದೇಶ ಬೆಂಗಳೂರು ರಾಜಕೀಯ ರಾಜ್ಯ

ಬೆಂಗಳೂರು: ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಾ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿರುವ ರಾಹುಲ್ ಗಾಂಧಿಯವರ ನಡೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.  

2023, ಜನವರಿ 10 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಪತ್ರ ಬರೆದು, ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದರು. ಮಲ್ಲಿಕಾರ್ಜುನ ಖರ್ಗೆಯವರ ಆಹ್ವಾನ ಪತ್ರಕ್ಕೆ ಇಂದು ಪ್ರತಿಯುತ್ತರ ನೀಡಿದ ದೇವೇಗೌಡರು, ‘ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರುವುದಕ್ಕೆ ಧನ್ಯವಾದಗಳು, ರಾಷ್ಟ್ರಪಿತ ಹುತಾತ್ಮರಾದ ದಿನದಂದು ಶ್ರೀನಗರದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವುದು ತುಂಬಾ ಸೂಕ್ತವಾಗಿದೆ.

ನಾನು ಕಾರ್ಯಕ್ರಮಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗದಿದ್ದರೂ ನನ್ನ ಶುಭಾಶಯಗಳು ರಾಹುಲ್ ಗಾಂಧಿಯವರಿಗಿದೆ. ಅವರು ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಮತ್ತು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿದ್ದಾರೆ. ದಯವಿಟ್ಟು ಅವರಿಗೆ ನನ್ನ ಆಳವಾದ ಮೆಚ್ಚುಗೆಯನ್ನು ಸೂಚಿಸಿ’ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಇಂದು ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.