ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
HD Kumaraswamy Archives » Page 3 of 4 » Dynamic Leader
October 23, 2024
Home Posts tagged HD Kumaraswamy (Page 3)
ರಾಜ್ಯ

ವೈದ್ಯ ಕೋರ್ಸಿನಲ್ಲಿ ಸ್ವರ್ಣ ಪದಕಗಳನ್ನು ಗಳಿಸಿ, ಆ ನಂತರ ಸ್ನಾತಕೋತ್ತರ ಪರೀಕ್ಷೆಯಲ್ಲೂ ಇಡೀ ಭಾರತಕ್ಕೆ 2000ನೇ ಸ್ಥಾನ ಪಡೆದಿರುವುದು ಅಸಾಮಾನ್ಯ ಸಾಧನೆ ಎಂದು ಬಣ್ಣಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,

“ನನ್ನ ಮತಕ್ಷೇತ್ರ ಚನ್ನಪಟ್ಟಣದ ಚಕ್ಕಲೂರು ಗ್ರಾಮದ ರೈತರ ಮನೆಯ ಮಗಳು ಡಾ.ಅನುಶ್ರೀ ಅವರು ವೈದ್ಯಕೀಯ ಶಿಕ್ಷಣದಲ್ಲಿ ಮಾಡಿರುವ ಅನುಪಮ ಸಾಧನೆ ಬಗ್ಗೆ ತಿಳಿದು ನನಗೆ ಬಹಳ ಸಂತೋಷವಾಗಿದೆ. ಅವರ ಪ್ರತಿಭೆ ಎಲ್ಲರಿಗೂ ಮಾದರಿ ಹಾಗೂ ಪ್ರೇರಣೆ. ಅವರು ಚನ್ನಪಟ್ಟಣದ ಕೀರ್ತಿಯ ಕಳಸ.

ವೈದ್ಯ ಕೋರ್ಸಿನಲ್ಲಿ ಸ್ವರ್ಣ ಪದಕಗಳನ್ನು ಗಳಿಸಿ, ಆ ನಂತರ ಸ್ನಾತಕೋತ್ತರ ಪರೀಕ್ಷೆಯಲ್ಲೂ ಇಡೀ ಭಾರತಕ್ಕೆ 2000ನೇ ಸ್ಥಾನ ಪಡೆದಿರುವುದು ಅಸಾಮಾನ್ಯ ಸಾಧನೆ. ಡಾ.ಅನುಶ್ರೀ ಅವರಿಗೆ ಎಲ್ಲವೂ ಒಳ್ಳೆಯದಾಗಲಿ, ಭವಿಷ್ಯದಲ್ಲಿ ಅವರು ಇನ್ನೂ ಎತ್ತರದ ಸ್ಥಾನ ತಲುಪಲಿ ಎಂದು ಹಾರೈಸುತ್ತೇನೆ. ಅವರ ಪೋಷಕರಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

 

ರಾಜಕೀಯ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಮರು ಆಯ್ಕೆ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಹಂಗಾಮಿ ಸ್ಪೀಕರ್ ಶ್ರೀ.ಆರ್.ವಿ.ದೇಶಪಾಂಡೆ ಅವರಿಂದ ವಿಧಾನಸಭೆಯ ನೂತನ ಶಾಸಕನಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾನ್ಯ ಸಭಾಧ್ಯಕ್ಷರ ಕಚೇರಿಯಲ್ಲಿ ಪ್ರಮಾಣ ಸ್ವೀಕಾರ ಮಾಡುವ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹೊಳೆನರಸೀಪುರದ ಶಾಸಕರೂ ಆದ ಹೆಚ್.ಡಿ.ರೇವಣ್ಣ ಜೊತೆಯಲ್ಲಿದ್ದರು.

ರಾಜಕೀಯ

ಮಂಗಳವಾರ ತಮ್ಮ ನಿವಾಸದ ಬಳಿ ಸುದ್ಧಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,  ‘ಬಿಜೆಪಿಯವರು ಪ್ರಚಾರಕ್ಕೆ ಪ್ರಧಾನಿಯನ್ನದರೂ ಕರೆಸಲಿ, ಅಮೆರಿಕದ ಅಧ್ಯಕ್ಷರನ್ನಾದರೂ ಕರೆಸಲಿ ನನಗೇನು ಆತಂಕ ಇಲ್ಲ’ ಎಂದು ಹೇಳಿದರು. ಇದಕ್ಕೆ ಕರ್ನಾಟಕ ಬಿಜೆಪಿ, ‘ನಾವು ನಮ್ಮೆಲ್ಲರ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ನಮ್ಮ ಪಕ್ಷದ ಪ್ರಚಾರಕ್ಕೆ ಆಹ್ವಾನಿಸಿದರೆ ನಿಮಗೇಕೆ ಈ ಪರಿ ಹೊಟ್ಟೆ ಉರಿ? ಅಂದ ಹಾಗೆ, ನಿಮ್ಮ ರೀತಿ ನಾವು ಪ್ಲಾಸ್ಟಿಕ್ ಕುರ್ಚಿಯ ಮೇಲೆ ಕೂತು ಮಮತಾ ಬ್ಯಾನರ್ಜಿಯವರನ್ನು ಬೆನ್ನು ಬಗ್ಗಿಸಿ ಬಿನ್ನವಿಸಿಕೊಂಡು ಕರೆತರುವುದಿಲ್ಲ ಬಿಡಿ’ ಎಂದು ಪ್ರತಿಕ್ರಿಯೆ ನೀಡಿತು.

ಇದಕ್ಕೆ ಜೆಡಿಎಸ್ ಪಕ್ಷವು ‘ಚುನಾವಣೆ ವೇಳೆ ಮಾತ್ರ ರಾಜ್ಯಕ್ಕೆ ಬರುವ ‘ಚುನಾವಣಾಜೀವಿ’ ನರೇಂದ್ರ ಮೋದಿ ಅವರನ್ನು ನೀವು ಹೆಮ್ಮೆ ಎಂದು ಹೇಳುತ್ತಿದ್ದೀರಿ. ಇದನ್ನೆ ನಾವು ಗುಲಾಮಗಿರಿ ಎಂದು ಕರೆಯುವುದು. ಹಿಂದಿ ಮತ್ತು ಗುಜರಾತಿಗಳ ಗುಲಾಮಗಿರಿ ಮಾಡುವ ನಿಮ್ಮಿಂದ ಸ್ವಾಭಿಮಾನ ಕಲಿಯುವ ಅಗತ್ಯತೆ ಕುಮಾರಸ್ವಾಮಿಗೆ ಅವರಿಗೆ ಬಂದಿಲ್ಲ.

ಗುಜರಾತಿನ ಹಿಂದಿ ದೊರೆಗಳ ಮುಂದೆ ನಡುಬಗ್ಗಿಸಿ ನಿಂತು ‘ಜೀ ಹುಜೂರ್’ ಅನ್ನುವುದಕ್ಕೂ, ಮಹಿಳೆಯೊಬ್ಬರಿಗೆ ಗೌರವ ಕೊಡುವುದಕ್ಕೂ ವ್ಯತ್ಯಾಸವಿದೆ. ಓಟಿಗಾಗಿ ಮಾತ್ರ ಸಂಸ್ಕೃತಿ ಪಾಠ ಮಾಡುವ ನಿಮಗೆ, ಮಹಿಳೆಯೊಬ್ಬರಿಗೆ ಮನಸ್ಸಿನಿಂದ ಗೌರವ ನೀಡುವುದನ್ನು ಯೋಚಿಸಲು ಕೂಡಾ ಸಾಧ್ಯವೇ ಇಲ್ಲ. ನಿಮ್ಮದೇನಿದ್ದರೂ ಢಾಂಬಿಕತೆ ಮಾತ್ರ.

ಅಷ್ಟೊಂದು ಸ್ವಾಭಿಮಾನವಿದ್ದರೆ ಅಮಿತ್ ಶಾ ಮುಂದೆ ನಿಂತು ಹಿಂದಿ ಹೇರಿಕೆ ವಿರುದ್ಧ ಒಂದೇ ಒಂದು ಶಬ್ಧ ಮಾತನಾಡಿ. ನೀವು ‘ಚುನಾವಣಾಜೀವಿ’ ಯನ್ನು ಕರೆಸಿರುವುದರಲ್ಲಿ ನಮಗೆ ಯಾವ ತಕರಾರೂ ಇಲ್ಲ. ಆದರೆ, ಇನ್ನೂ ಪೂರ್ಣಗೊಳ್ಳದ ಕಾಮಗಾರಿಯ ಉದ್ಘಾಟನೆ ಹೆಸರಿನಲ್ಲಿ ಅವರನ್ನು ಕರೆಸಿ ಜನರ ತೆರಿಗೆ ಹಣ ಪೋಲು ಮಾಡಿದ್ದೀರಿ ಎಂಬುವುದೇ ನಮ್ಮ ತಕರಾರು’ ಎಂದು ಜೆಡಿಎಸ್ ಪಕ್ಷ ಕಾರವಾಗಿ ಉತ್ತರ ನೀಡಿದೆ.

ರಾಜಕೀಯ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಾಮಪತ್ರ ಭರಾಟೆ ಜೋರಾಗಿದೆ. ಅದರಂತೆ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರಂ ಸ್ವೀಕರಿಸುವಾಗ ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಂದೆ ಹೆಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಭಾಗಿಯಾಗಿದ್ದರು.

ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ನಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ತೆರಳಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ರಾಜಕೀಯ

ಬೆಂಗಳೂರು: ಚಿತ್ರದುರ್ಗದ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಘು ಆಚಾರ್ ಇಂದು ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಜಾತ್ಯತೀತ ಜನತಾದಳ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಸಿಎಂ ಇಬ್ರಾಹಿಂ ರವರು, ವಿಧಾನಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರು, ಟಿ.ಎ ಶರವಣ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾಂಗ್ರೆಸ್ ಪಟ್ಟಿ ಪ್ರಕಟವಾದ ಬೆನ್ನಲ್ಲೆ ಕೋಟೆನಾಡು ಚಿತ್ರದುರ್ಗದಲ್ಲಿ ಭಾರಿ ಬಂಡಾಯ ಬಿಸಿ ಆವರಿಸಿತು. ಇದೀಗ ಅಲ್ಲಿನ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಘು ಆಚಾರ್ ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಸೇರಿದ್ದಾರೆ.

ಇವರಲ್ಲೆದೇ ಜೇವರ್ಗಿಯ ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್ ಸೇರಿ ಅವರ ಅಪಾರ ಬೆಂಬಲಿಗರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಸವದತ್ತಿಯ ಶ್ರೀ ಸೌರಭ್ ಚೋಪ್ರಾ, ಕಾರವಾರದ ಶ್ರೀಮತಿ ಚೈತ್ರಾ ಕೊಡೇಕರ್, ಪಾವಗಡದ ಶ್ರೀರಾಮ್, ಮಾಯಕೊಂಡದ ಸವಿತಾ ಬಾಯಿ, ಪುತ್ತೂರಿನ ದಿವ್ಯಾ ಪುತ್ತೂರು, ಶ್ರೀಮತಿ ದಿವ್ಯಪ್ರಭಾ ಗೌಡ ಸೇರಿದಂತೆ ಇನ್ನೂ ಅನೇಕ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದರು. ಎಲ್ಲರನ್ನೂ ಸಂತೋಷದಿಂದ ಪಕ್ಷಕ್ಕೆ ಸ್ವಾಗತಿಸಲಾಯಿತು.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನೆನ್ನೆ ರಾತ್ರಿ 9 ಗಂಟೆಯ ವೇಳೆಗೆ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದ 189 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಪಟ್ಟಿಯಲ್ಲಿ 52 ಹೊಸ ತಲೆಮಾರಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮತ್ತು 9 ವೈದ್ಯರಿಗೆ, ನಿವೃತ್ತ ಐಎಸ್ಎಸ್, ಐಪಿಎಸ್ ಗಳಿಗೆ ಟಿಕೆಟ್ ನೀಡಲಾಗಿದೆ. 32 ಒಬಿಸಿಗಳಿಗೆ ಟಿಕೆಟ್ ನೀಡಲಾಗಿದೆ  ಎಂಬ ಸುಳಿವನ್ನು ಸುದ್ದಿಗೋಷ್ಠಿಯಲ್ಲಿ ನೀಡಿದರು. ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಟಿಕೆಟ್ ಘೋಷಿಸಲಾಗಿದೆ.

ಬೆಂಗಳೂರಿನ ಯಲಹಂಕ-ಎಸ್.ಆರ್.ವಿಶ್ವನಾಥ್, ಕೆ.ಆರ್.ಪುರ-ಬಿ.ಎ.ಬಸವರಾಜ, ಬ್ಯಾಟರಾಯನಪುರ-ತಮ್ಮೇಶ್ ಗೌಡ, ಯಶವಂತಪುರ-ಎಸ್.ಟಿ.ಸೋಮಶೇಖರ್, ರಾಜರಾಜೇಶ್ವರಿನಗರ-ಮುನಿರತ್ನ ನಾಯ್ಡು, ದಾಸರಹಳ್ಳಿ-ಎಸ್.ಮುನಿರಾಜು, ಮಹಾಲಕ್ಷ್ಮಿ ಲೇಔಟ್-ಕೆ.ಗೋಪಾಲಯ್ಯ, ಮಲ್ಲೇಶ್ವರಂ-ಡಾ.ಸಿ.ಎಸ್.ಅಶ್ವಥ್ ನಾರಾಯಣ್, ಪುಲಕೇಶಿನಗರ (ಎಸ್.ಸಿ) ಮುರಳಿ, ಸರ್ವಜ್ಞನಗರ-ಪದ್ಮನಾಭರೆಡ್ಡಿ, ಸಿ.ವಿ.ರಾಮನ್ ನಗರ (ಎಸ್.ಸಿ) ಎಸ್.ರಘು, ಶಿವಾಜಿನಗರ-ಎನ್.ಚಂದ್ರ, ಶಾಂತಿನಗರ-ಶಿವಕುಮಾರ್, ಗಾಂಧಿನಗರ-ಎ.ಅರ್.ಸಪ್ತಗಿರಿ ಗೌಡ, ರಾಜಾಜಿನಗರ-ಎಸ್.ಸುರೇಶ್ ಕುಮಾರ್, ವಿಜಯನಗರ-ಹೆಚ್.ರವೀಂದ್ರ, ಚಾಮರಾಜಪೇಟೆ-ಭಾಸ್ಕರ್ ರಾವ್ (ನಿವೃತ್ತಿ), ಚಿಕ್ಕಪೇಟೆ-ಉದಯ್ ಗರುಡಾಚಾರ್, ಬಸವನಗುಡಿ-ರವಿ ಸುಬ್ರಮಣ್ಯ, ಪದ್ಮನಾಭನಗರ-ಆರ್.ಅಶೋಕ್, ಬಿಟಿಎಂ ಲೇಔಟ್-ಶ್ರೀಧರ್ ರೆಡ್ಡಿ, ಜಯನಗರ-ಸಿ.ಕೆ.ರಾಮಮೂರ್ತಿ, ಬೊಮ್ಮನಹಳ್ಳಿ-ಸತೀಶ್ ರೆಡ್ಡಿ, ಬೆಂಗಳೂರು ದಕ್ಷಿಣ-ಎಂ.ಕೃಷ್ಣಪ್ಪ ಮುಂತಾದವರಿಗೆ ಮೊದಲ ಪಟ್ಟಿಯಲ್ಲೇ ಹೆಸರನ್ನು ಘೋಷಿಸಲಾಗಿದೆ.

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಮಯ್ಯ

ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಪದ್ಮನಾಭನಗರ ಕ್ಷೇತ್ರದೊಂದಿಗೆ ಕನಕಪುರ ಕ್ಷೇತ್ರವನ್ನೂ ನೀಡಲಾಗಿದೆ. ಇದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕ್ಷೇತ್ರ, ಅದೇ ರೀತಿ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಚಾಮರಾಜನಗರ ಕ್ಷೇತ್ರದೊಂದಿಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ದಿಸಲಿರುವ ವರುಣ ಕ್ಷೇತ್ರವನ್ನೂ ನೀಡಲಾಗಿದೆ. 

ಆರ್.ಅಶೋಕ್ ಮತ್ತು ವಿ.ಸೋಮಣ್ಣ

52 ಹೊಸ ತಲೆಮಾರಿಗೆ ಟಿಕೆಟ್ ನೀಡಲಾಗಿದೆ. ಅದೇ ಸಂದರ್ಭದಲ್ಲಿ ಪಕ್ಷ ಕಟ್ಟಿದ ಹಿರಿಯರನ್ನು ಕೈಬಿಡಲಾಗಿದೆ. ಆರ್.ಅಶೋಕ್ ಅವರನ್ನು ಡಿ.ಕೆ.ಶಿವಕುಮಾರ್ ವಿರುದ್ಧ ಹಾಗೂ ವಿ.ಸೋಮಣ್ಣ ಅವರನ್ನು ಸಿದ್ದರಾಮಯ್ಯನವರ ವಿರುದ್ಧ ಎತ್ತಿಕಟ್ಟಲಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂಬುದು ಜನರ ಅಭಿಪ್ರಾಯವಾಗಿದೆ. ‘ಬಿಜೆಪಿಗೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರನ್ನು ಕಂಡರೆ ಭಯ’ ಎಂಬುದನ್ನೇ ಇದು ಎತ್ತಿ ತೋರಿಸುತ್ತಿದೆ. ಕನಕಪುರ ಮತ್ತು ವರುಣ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲ್ಲುವ ವಿಶ್ವಾಸ ಇದ್ದರೆ ಆರ್.ಅಶೋಕ್ ಹಾಗೂ ವಿ.ಸೋಮಣ್ಣ ಅವರನ್ನು ಎರಡೆರಡುಕಡೆ ನಿಲ್ಲಿಸದೇ ನೇರವಾಗಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನ ವಿರುದ್ಧ ಸ್ಪರ್ದಿಸುವಂತೆ ಮಾಡಬಹುದಿತ್ತು. ಆಗ ಬಿಜೆಪಿಯ ಗೆತ್ತನ್ನು ಎಲ್ಲರೂ ಕೊಂಡಾಡಿರುತ್ತಾರೆ.

ಜಗದೀಶ್ ಶೆಟ್ಟರ್

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಓಟಕ್ಕೆ ಕಡಿವಾಣ ಹಾಕಲಿಕ್ಕಾಗಿ ಅಥವಾ ಅವರನ್ನು ಡಿಸ್ಟರ್ಬ್ ಮಾಡಲಿಕ್ಕಾಗಿ ಅಥವಾ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲಿಕ್ಕಾಗಿ ಬಿಜೆಪಿ ಈ ತಂತ್ರವನ್ನು ಅನುಸರಿಸಿದೆ ಎಂದು ಹೇಳಿಕೊಂಡಾರೂ ‘ಈ ಎರಡೂ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಅನುಕೂಲ ಮಾಡಲಿಕ್ಕಾಗಿಯೇ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು ಈ ರೀತಿಯ ತಂತ್ರವನ್ನು ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಪ್ರಚಾರವನ್ನು ಕೈಗೆತ್ತಿಕೊಂಡರೆ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯ ಜೊತೆಗೆ ಜೆಡಿಎಸ್ ಗೂ ಹೆಚ್ಚಿನ ರೀತಿಯಲ್ಲಿ ಹಾನಿಯಾಗುತ್ತದೆ. ಮತ್ತು ಆರ್.ಅಶೋಕ್ ಹಾಗೂ ವಿ.ಸೋಮಣ್ಣ ಅವರನ್ನು ಎರಡೆರಡು ಕಡೆ ಅಲೆದಾಡಿಸಿ ಸೋಲಿಸುವಂತೆ ಮಾಡಲು ಬಿಜೆಪಿ ಪಕ್ಷ ಏನಾದರೂ ಕುತಂತ್ರ ಮಾಡಿದೆಯೇ ಎಂಬುದನ್ನು ಮೇ 13 ರಂದು ಬರುವ ಫಲಿತಾಂಶವೇ ಹೇಳಬೇಕು. ಆರ್.ಆಶೋಕ್ ನೆನ್ನೆ ಸುದ್ದಿಗಾರರೊಂದಿಗೆ ಮಾತನಾಡುವಾಗ, “ನಾನು ಪಕ್ಷದ ಶಿಸ್ತಿನ ಸಿಪಾಯಿ; ಪಕ್ಷ ಸೂಚಿಸುವುದನ್ನು ಪಾಲಿಸುತ್ತೇನೆ” ಎಂದರು. ಆದರೆ, ವಿ.ಸೋಮಣ್ಣ ಪಾಳಯದಲ್ಲಿ ಅಸಮಧಾನವಿದೆ.

ಲಕ್ಷ್ಮಣ ಸವದಿ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಮಾಜಿ ಸಚಿವ ಆರ್.ಶಂಕರ್, ಮಾಜಿ ಮೀನುಗಾರಿಕೆ ಸಚಿವ ಎಸ್.ಅಂಗಾರ, ಶಾಸಕರುಗಳಾದ ಸಂಜೀವ್ ಮಠಂದೂರು, ಲಾಲಾಜಿ ಮೆಂಡನ್, ರಘುಪತಿ ಭಟ್, ಗೂಳಿಹಟ್ಟಿ ಶೇಖರ್, ಅನಿಲ್ ಬೆನಕ, ಮಹದೇವಪ್ಪ ಯಾದವಾಡ, ರಾಮಪ್ಪ ಲಮಾಣಿ ಮುಂತಾದವರಿಗೆ ಟಿಕೆಟ್ ಕೈತಪ್ಪಿಸಲಾಗಿದೆ. ಇವರೆಲ್ಲರ ಬಂಡಾಯವನ್ನು ಬಿಜೆಪಿ ಹೇಗೆ ಸರಿಮಾಡುತ್ತದೆ ಎಂಬುದು ಕುತೂಹಲ. ಮತ್ತು ಬಿಜೆಪಿಯ ಬಂಡಾಯವನ್ನು ವಿರೋಧ ಪಕ್ಷಗಳು ಯಾವ ರೀತಿ ಬಳಕೆ ಮಾಡಿಕೊಳ್ಳುತ್ತದೆ ಎಂಬುದನ್ನು ಕಾದು ನೋಡೋಣ. Karnataka assembly elections: BJP’s first list has 8 women, 52 new faces, 8 social activists. In this list, tickets have been given to Lingayat-51, Vokkalinga-41, Kuruba-7, SC-30, ST-16 and 32 from the OBC community.

ರಾಜಕೀಯ

“ಬಿಜೆಪಿಯ ಸಂಸದೀಯ ಮಂಡಳಿಯ ಸದಸ್ಯರಾಗಿದ್ದರೂ ಟಿಕೆಟ್ ವಿಚಾರವಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹೊರಗಿಟ್ಟು ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಪಕ್ಷ ಕಟ್ಟಿಬೆಳೆಸಿದ ನಾಯಕನ ದುಸ್ಥಿತಿಯಿದು. ಬಳಸಿ ಎಸೆಯುವುದು ಬಿಜೆಪಿಯ ಜನ್ಮಸಿದ್ದ ಹಕ್ಕು. ವಿಶ್ವದ ಅತ್ಯಂತ ದೊಡ್ಡ ಪಕ್ಷ ಎಂದು ಕೊಚ್ಚಿಕೊಳ್ಳುವ ಕರ್ನಾಟಕ ಬಿಜೆಪಿ ಟಿಕೆಟ್ ಘೋಷಣೆ ಮಾಡದೆ ದಿನ ದೂಡುತ್ತಿವೆ.

ರೌಡಿಗಳನ್ನು ಸೆಳೆಯುವ ಪಕ್ಷವು, ತನ್ನನ್ನು ಕಟ್ಟಿ ಬೆಳೆಸಿದ ನಾಯಕನನ್ನು ಮೂಲೆಗುಂಪು ಮಾಡಲು ನಾಟಕವಾಡುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದಂತೆ ಪೇಶ್ವೆಗಳನ್ನು ಮುನ್ನೆಲೆಗೆ ತರಲು ವೇದಿಕೆ ತಯಾರಾಗುತ್ತಿದೆ. ಹೀಗಾಗಿಯೆ ಕರ್ನಾಟಕ ಬಿಜೆಪಿ ತನ್ನ ಟಿಕೆಟ್ ಘೋಷಣೆಗೆ ಮೀನಮೇಷ ಎಣಿಸುತ್ತಿದೆ.

ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ತೀರ್ಮಾನಿಸಲು ನಡೆಸಿದ ಸಭೆಯ ಮುಖ್ಯ ಸೂತ್ರದಾರ ಅಮಿತ್ ಶಾ ತನ್ನ ಮಗನಿಗೆ ಆಯಕಟ್ಟಿನ ಜಾಗ ನೀಡಿದವರು ಎನ್ನುವುದೆ ಪರಿಸ್ಥಿತಿಯ ವ್ಯಂಗ್ಯ. ಎಲ್ಲಾ ಸಮುದಾಯಗಳ ಕೋಪಕ್ಕೆ ಗುರಿಯಾಗಿರುವ BJP ಈ ಬಾರಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡಿದೆ. BJP’s list of candidates delayed again, Yediyurappa returns to Bengaluru

ರಾಜಕೀಯ

“ಮಹಾರಾಷ್ಟ್ರದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರಕಾರ ಪದೇಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರಕಾರ ಇದೆಲ್ಲವನ್ನು ನೋಡಿಕೊಂಡು ಮೌನವಾಗಿದೆ. ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಇದೇ ಕಾರಣವಾಗಬಹುದು” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಒಂದಲ್ಲ ಎರಡಲ್ಲ, ಪ್ರತಿಯೊಂದು ವಿಷಯದಲ್ಲೂ ಮಹಾರಾಷ್ಟ್ರವು ಕರ್ನಾಟಕವನ್ನು ಕೆರಳಿಸುತ್ತಿದೆ. ರಾಜ್ಯದ ಗಡಿ ಒಳಗಿರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ಮಾಡಿದ ಆ ರಾಜ್ಯ ಸರಕಾರದ ನಡೆ ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ನೇರ, ಧೂರ್ತ ಪ್ರಯತ್ನವಾಗಿದೆ.

ಮಹಾರಾಷ್ಟ್ರವು ಒಕ್ಕೂಟ ವ್ಯವಸ್ಥೆಯ ಎಲ್ಲಾ ಎಲ್ಲೆಗಳನ್ನು ಮೀರಿ ಅಹಂಕಾರದಿಂದ ವರ್ತಿಸುತ್ತಿದೆ. ಬಿಜೆಪಿ ಸರ್ಕಾರ ‘ಶಿಂಧೆ ಸೂತ್ರದ ಗೊಂಬೆ’ ಯಾಗಿ ಅಂತಹ ರಾಜಕಾರಣಕ್ಕೆ ಕರ್ನಾಟಕವನ್ನು ಬಲಿ ಕೊಡಲು ಹೊರಟಿದೆಯಾ? ಎನ್ನುವ ಅನುಮಾನ ನನ್ನದು. ಇಲ್ಲವಾದರೆ, ಮಹಾರಾಷ್ಟ್ರ ಈ ಪರಿಯ ಉದ್ಧಟತನ ತೋರುತ್ತಿದ್ದರೂ ಮೋದಿ ಸರಕಾರದ ಮೌನವೇಕೆ?

ಕರ್ನಾಟಕದಲ್ಲಿ ಇಡೀ ಭಾರತವೇ ಅಡಗಿದೆ. ಕಾಶ್ಮೀರದಿಂದ ಕನ್ಯಾಕಮಾರಿಯವರೆಗೆ, ಗುಜರಾತಿನಿಂದ ಒಡಿಶಾವರೆಗೆ ಎಲ್ಲ ಕಡೆಯಿಂದಲೂ ಅನ್ನ ಅರಸಿಕೊಂಡು ಬಂದವರಿಗೆ ಆಶ್ರಯ ನೀಡಿದೆ. ಆ ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸವನ್ನು ಮಹಾರಾಷ್ಟ್ರ ಎಗ್ಗಿಲ್ಲದೆ ಮಾಡುತ್ತಿದೆ. ಕನ್ನಡಿಗರು ಸುಮ್ಮನಿರುವ ಕಾಲ ಮುಗಿದಿದೆ.

ಭಾರತ ಸ್ವತಂತ್ರ್ಯಗೊಂಡಾಗ ಎಲ್ಲರಿಗಿಂತ ಮೊದಲೇ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವರು ನಾವು. ನಮ್ಮ ಉದಾರತೆಯೇ ನಮಗೆ ಇಂದು ಮುಳುವಾಗಿದೆಯಾ? ನೆಲ, ಜಲ, ಭಾಷೆ, ಅನುದಾನ ಸೇರಿ ಪ್ರತಿ ವಿಷಯದಲ್ಲೂ ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ!! ಇನ್ನೆಷ್ಟು ದಿನ ಈ ಅನ್ಯಾಯ?” ಎಂದು ಮಹಾರಾಷ್ಟ್ರ ಬಿಜೆಪಿ ಡಬಲ್ ಎಂಜಿನ್ ಸರ್ಕಾರವನ್ನು ಮತ್ತು ಬಿಜೆಪಿಯ ಕೇಂದ್ರ ನಾಯಕರ ವಿರುದ್ಧ ತಮ್ಮ ಆಕ್ರೊಷವನ್ನು ವ್ಯಕ್ತ ಪಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ. Ahead of elections in Karnataka, Maharashtra issues order to extend medical benefits to border villages.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮೈಸೂರು (ಮಾ.26): ಕುಮಾರಸ್ವಾಮಿ ಹಮ್ಮಿಕೊಂಡಿದ್ದ ಪಂಚರತ್ನ ಯಾತ್ರೆಯಲ್ಲಿ ಒಮ್ಮೆಯಾದರೂ ಭಾಗವಹಿಸಲು ಅವಕಾಶ ಮಾಡಿಕೊಡುವಂತೆ ಭಗವಂತನಲ್ಲಿ ನಾನು ಬೇಡಿಕೊಂಡಿದ್ದೆನು. ಈಗ ಆ ಮಹದಾಸೆ ಈಡೇರಿದೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದರು. ಮೈಸೂರು ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಬಳಿಯ ಮೈದಾನದಲ್ಲಿ ಇಂದು ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ‘ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು. ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು’ ಎಂದರು.

ಮೈಸೂರಿನ ಕೃಷ್ಣರಾಜೇಂದ್ರ ಒಡೆಯರು, ಸರ್.ಎಂ.ವಿಶ್ವೇಶ್ವರಯ್ಯ, ಟಿಪ್ಪು ಸುಲ್ತಾನ್, ಕುವೆಂಪು ಅವರಂತಹ ವಿಶ್ವಮಾನ್ಯ ನಾಯಕರು ಹುಟ್ಟಿದ ಕನ್ನಡ ನಾಡಿನಲ್ಲಿ ಜನಿಸಿದ ಹೆಮ್ಮೆ ನನಗಿದೆ. ನಾನೊಬ್ಬ ಕನ್ನಡಿಗನಾಗಿ ದೇಶದ ಅಭಿವೃದ್ಧಿಗೆ ಪ್ರಧಾನಮಂತ್ರಿಯಾಗಿ ಮಾಡಿದ ಕೆಲಸವು ಇಂದಿಗೂ ಮಾತನಾಡುತ್ತಿದೆ. ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹೇಳುತ್ತಾ ಜನಸಂದಣಿ ನೋಡಿ ಗದ್ಗದಿತರಾದರು. ತಾವು ಪ್ರಧಾನಮಂತ್ರಿ ಆಗಿದ್ದಾಗ, ರೈತನ ಮಗನಾಗಿ ರೈತರ ಹಕ್ಕುಗಳ ರಕ್ಷಣೆಗೆ ಮಾಡಿದ ಕಾರ್ಯಗಳನ್ನು ಬಿಚ್ಚಿಟ್ಟರು. ಪಂಜಾಬಿನ ರೈತರು ಒಂದು ಭತ್ತದ ತಳಿಗೆ ದೇವೇಗೌಡರ ಹೆಸರನ್ನು ಇಟ್ಟಿರುವ ಬಗ್ಗೆ ನನೆಪಿಸಿಕೊಂಡರು. ಇನ್ನು ಪ್ರಧಾನಮಂತ್ರಿಯಾಗಿ ಆಡಳಿತ ನಡೆಸಿದ ಇಷ್ಟು ವರ್ಷಗಳ ನಂತರವೂ ದೇಶ, ವಿದೇಶದ ಜನರು ಸ್ಮರಿಸುತ್ತಾರೆ. ಹಲವು ಮಹನೀಯರು ಹುಟ್ಟಿದ ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಭಾವುಕರಾದರು.

ಜಾತಿ, ಮತ ಆಧಾರದ ಮೇಲೆ ಅಧಿಕಾರ ಹಿಡಿಯುವುದು ನಿಂತಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಹಾಗೂ ರೈತರ ಹಕ್ಕುಗಳಿಗೆ ನ್ಯಾಯ ಒದಗಿಸಿದ್ದೇನೆ. ರೈತರ ಹಕ್ಕಿಗಾಗಿ, ಕಾವೇರಿ, ಗಂಗೆ, ಕೃಷ್ಣೆ ಸೇರಿ ಹಲವು ನೀರಾವರಿ ಯೋಜನೆಗಳಿಗೆ ಮಾಡಿದ್ದೇನೆ. ನಾನು ಮಹಿಳೆಯರಿಗೆ ರಾಜಕೀಯ ಮೀಸಲಾತಿ ನಿಡಲು ಶ್ರಮಿಸಿದ್ದೇನೆ. ನಾನು ಪ್ರಧಾನಮಂತ್ರಿ ಆಗಿದ್ದಾಗ ಕಾನೂನು ರೂಪಿಸಲು ಮುಂದಾದಾಗ ಅಧಿಕಾರ ಕಳೆದುಕೊಂಡೆನು. ನಂತರ ಅಧಿಕಾರಕ್ಕೆ ಬಂದವರು ಕಾನೂನು ರೂಪಿಸಿದರೂ, ಅದಕ್ಕೆ ಯೋಜನೆ ಹಾಕಿದ್ದ ನನ್ನ ಹೆಸರು ಹೇಳುವುದನ್ನೇ ಮರೆತುಬಿಟ್ಟರು ಎಂದು ಹೇಳಿದರು. ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ದೊರಕಬೇಕಾದರೆ ನಾನು ಪ್ರಧಾನಮಂತ್ರಿ ಚಂದ್ರಶೇಖರ್‌ ಅವರೊಂದಿಗೆ ಹೋರಾಟ ಮಾಡಿದ ಪರಿಪಾಟಲು ನನಗೆ ಗೊತ್ತು. ಬೆಂಗಳೂರು ಅಭಿವೃದ್ಧಿಗೆ ಈ ರೈತನ ಮಗನಾಗಿ ದುಡಿದಿದ್ದೇನೆ. ನಾನು ಏನು ಮಾಡಿದ್ದೇನೆ ಎಂಬುದು ಭಗವಂತನಿಗೆ ಮತ್ತು ನಿಮಗೆ ತಿಳಿದಿದೆ. ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾಗ ಬೆಂಗಳೂರು – ಮೈಸೂರು ಹೆದ್ದಾರಿ ಅಭಿವೃದ್ಧಿಗೆ ಏನು ತೀರ್ಮಾನ ಕೈಗೊಂಡಿದ್ದೇನೆ ಎಂಬುದು ಗೊತ್ತಿದೆ. ಅದರೆ, ನಾನು ಪ್ರಚಾರವನ್ನು ಪಡೆಯುವುದಿಲ್ಲ ಎಂದರು.

ನನ್ನ 70 ವರ್ಷಗಳ ಅಧಿಕಾರದಲ್ಲಿ ಎಂದಿಗೂ ಕೊಟ್ಟ ಭರವಸೆ ಈಡೇರಿಸಲು ವಿಫಲವಾಗಿಲ್ಲ. ಒಂದು ವೇಳೆ ನಾನು ಕೊಟ್ಟ ಭರವಸೆ ಈಡೇರಿಸಲಿದ್ದಾಗ ರಾಜಿನಾಮೆ ಕೊಟ್ಟಿದ್ದೇನೆ. ನಾನು ಎಲ್ಲ ಕಾಲಕ್ಕೂ ಅಭಿವೃದ್ಧಿ ಮಂತ್ರ ಜಪಿಸಿದ್ದೇನೆ. ನಾನು ಬೆರಳೆಣಿಕೆ ವರ್ಷಗಳಷ್ಟು ಮಾತ್ರ ಅಧಿಕಾರದಲ್ಲಿ ಇದ್ದು, ದೇವರಾಣೆಗೂ ನಾನು ಜನರ ಅಭಿವೃದ್ಧಿಗೆ ದುಡಿದಿದ್ದೇನೆ. ನನ್ನ ಮಕ್ಕಳು, ಮೊಮ್ಮಕ್ಕಳಿಗೂ ಜನರಿಗೋಸ್ಕರ ದುಡಿಯುವಂತೆ ಹೇಳಿದ್ದೇನೆ. ಅವರೂ ಕೂಡ ನಾನು ಸಾಗಿದ ದುಡಿಮೆ ಹಾದಿಯಲ್ಲಿಯೇ ನಡೆಯುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು. ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು. ನನ್ನ ಆಸೆಯನ್ನು ಕೇಳಿಕೊಂಡ ಭಗವಂತ ನನ್ನನ್ನು ನಿಮ್ಮಮುಂದೆ ನಿಲ್ಲಿಸಿದ್ದಾನೆ. ನಾನು ಭಗವಂತನ ಆಶೀರ್ವಾದದ ಭಾಗವಾಗಿದ್ದೇನೆ. ಆದರೆ, ನನ್ನ ಶಕ್ತಿ ನೀವು ಆಗಿದ್ದೀರಿ ಎಂದರು.

ಸಮಾರೋಪ ಸಮಾರಂಭವನ್ನು ಉದ್ದೇಶಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನನ್ನ ರಾಜಕೀಯ ಜೀವನದ ಅವಿಸ್ಮರಣೀಯ ಕ್ಷಣವಿದು. ನನ್ನ ಪೂಜ್ಯ ತಂದೆಯವರು, ಮಾಜಿ ಪ್ರಧಾನಮಂತ್ರಿಗಳು ಆದ ಶ್ರೀ.ಹೆಚ್.ಡಿ.ದೇವೇಗೌಡ ಪಂಚರತ್ನ ರಥಯಾತ್ರೆ ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅವರ ಸಾನ್ನಿಧ್ಯದಲ್ಲಿ ನಡೆದ ಜೆಡಿಎಸ್ ಹಬ್ಬ ನನ್ನ ರಾಜಕೀಯ ಜೀವನದ ಮಹೋನ್ನತ ಮೈಲುಗಲ್ಲು. ಮೈಸೂರಿನ ಶ್ರೀ.ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಐತಿಹಾಸಿಕ ಸಮಾವೇಶಕ್ಕೆ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಹರಿದುಬಂದಿದ್ದ ಜನಸಾಗರಕ್ಕೆ ನನ್ನ ಅನಂತ ಧನ್ಯವಾದಗಳು ಎಂದರು.

ಪಂಚರತ್ನ ಯಾತ್ರೆ ಸಮಾರೋಪದಲ್ಲಿ ದೇವೇಗೌಡರು ಭಾಷಣ ಮಾಡುತ್ತಿದಾಗ ಕಣ್ಣೀರು ಹಾಕಿದ ಕುಮಾರಸ್ವಾಮಿ ಮತ್ತು ರೇವಣ್ಣ. ಹತ್ತು ಲಕ್ಷಕ್ಕೂ ಹೆಚ್ಚು ಜನರು ಈ ಐತಿಹಾಸಿಕ ಸಮಾವೇಶದಲ್ಲಿ ಸೇರಿರುವ ನಿರೀಕ್ಷೆ ಇದೆ, ರಾಜ್ಯದ ದಶದಿಕ್ಕುಗಳಿಂದ ಆಗಮಿಸುವ ಪ್ರತಿಯೊಬ್ಬರಿಗೂ ಆಸನ ಹಾಗೂ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.

ರಾಜಕೀಯ

ಕೋಲ್ಕತ್ತಾ: ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಜಾತ್ಯತೀತ ಜನತಾ ದಳದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪಕ್ಷಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು.

ಒಡಿಶಾಗೆ ಭೇಟಿ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾ ಬಿಜು ಜನತಾದಳ ನಾಯಕ ಹಾಗೂ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾದರು. ಬೇಟಿಯ ಸಂದರ್ಭದಲ್ಲಿ 2024ರ ಲೋಕಸಭೆ ಚುನಾವಣೆ ಮೈತ್ರಿ ಕುರಿತು ಮಾತುಕತೆ ನಡೆಸಿದ್ದರು ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಶ್ಚಿಮ ಬಂಗಾಳಕ್ಕೆ ತೆರಳಿ, ಕೋಲ್ಕತ್ತಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಇಬ್ಬರೂ ರಾಷ್ಟ್ರೀಯ ರಾಜಕೀಯದ ಬಗ್ಗೆ ಮತ್ತು ವಿಶೇಷವಾಗಿ 2024ರ ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಹೆಚ್.ಡಿ.ಕುಮಾರಸ್ವಾಮಿ ನಂತರ ಮಾಧ್ಯಮದವರನ್ನು ಭೇಟಿ ಮಾಡಿದರು. ರಾಹುಲ್ ಗಾಂಧಿ ಅನರ್ಹತೆ ಬಗ್ಗೆ ಕೇಳಿದಾಗ, ‘ಇದು ಕೇಂದ್ರ ಸರ್ಕಾರದ ಕೆಲಸ ಎಂಬುದು ದೇಶಕ್ಕೆ ಗೊತ್ತಿದೆ. ರಾಹುಲ್ ಅನರ್ಹತೆಗೆ ಬಗ್ಗೆ ಆಶ್ಚರ್ಯಪಡುವಂಥದ್ದೇನೂ ಇಲ್ಲ’ ಎಂದರು.
HD Kumaraswamy to meet Mamata Banerjee in Kolkata this evening