ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
HD Kumaraswamy Archives » Page 4 of 4 » Dynamic Leader
October 23, 2024
Home Posts tagged HD Kumaraswamy (Page 4)
ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯನ್ನು (ಸಿಡಿಸಿ) ರದ್ದುಗೊಳಿಸಿ, ಕರ್ನಾಟಕ ಕ್ರೈಸ್ತರ ಅಭಿವೃದ್ಧಿ ಮಂಡಳಿ ಅಥವಾ ಅಭಿವೃದ್ಧಿ ನಿಗಮವನ್ನು ಮತ್ತು 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡುವಂತೆ ಜನಶಕ್ತಿ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.

ಕರ್ನಾಟಕದಲ್ಲಿ ಕ್ರೈಸ್ತರ ಜನಸಂಖ್ಯೆ ಸುಮಾರು ಶೇ.4% ರಷ್ಟಿದೆ. ಸಮುದಾಯದ ಅಭಿವೃದ್ಧಿಗಾಗಿ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿ ರಚಿಸಿ, ರೂ.50 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದರು. ನಂತರ ಬಂದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ, 2013-14ರಲ್ಲಿ ರೂ.75 ಕೋಟಿ, 2014-15ರಲ್ಲಿ ರೂ.100 ಕೋಟಿ, 2015-16ರಲ್ಲಿ 125 ಕೋಟಿ, 2016-17ರಲ್ಲಿ 175 ಕೋಟಿ ರೂಪಾಯಿಗಳನ್ನು ಅನುದಾನವಾಗಿ ಬಿಡುಗಡೆ ಮಾಡಿತು.

ಸದರಿ ಅನುದಾನದಿಂದ ಚರ್ಚ್ ಹಾಗೂ ಪ್ರಾರ್ಥನಾ ಮಂದಿರಗಳ ದುರಸ್ಥಿ ಹಾಗೂ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣಕ್ಕೆ ಸಹಾಯಧನ, ಅನಾಥಾಶ್ರಮಗಳು, ವೃದ್ಧಾಪ್ಯ ಆಶ್ರಮಗಳು, ವಿಕಲ ಚೇತನಾ ಹಾಗೂ ನಿರಾಶ್ರಿತ ಆಶ್ರಮಗಳ ನಡೆಸುವಿಕೆಗೆ ಸಹಾಯಧನ, ಹೊರ ದೇಶಗಳಲ್ಲಿ ಸ್ನಾತಕೋತ್ತರ ಪದವಿಗಳಿಗೆ ಹಾಗೂ ಹೆಚ್ಚಿನ ವಿದ್ಯಾಬ್ಯಾಸ ಶಿಕ್ಷಣಕ್ಕೆ ಸಹಾಯಧನ ಇತ್ಯಾದಿಗಳಿಗೆ ಈ ಅನುದಾನವು ವಿನಿಯೋಗಿಸಲಾಗುತ್ತಿತ್ತು.

2018ರಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ರವರು ಕ್ರೈಸ್ತರ ಅಭಿವೃದ್ಧಿ ನಿಗಮ ಸ್ಥಾಪಿಸಿ ರೂ.200 ಕೋಟಿಯನ್ನು ಘೋಷಣೆ ಮಾಡಿ, ರೂ.75 ಕೋಟಿಯನ್ನು ಮೀಸಲಿಟ್ಟರು. ನಂತರ ಬಂದ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ನಿಗಮದ ಘೋಷಣೆಯನ್ನು ರದ್ಧುಗೊಳಿಸಿ, ‘ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ’ ಯನ್ನು ರಚಿಸಿ, ರೂ.200 ಕೋಟಿಯನ್ನು ಅನುದಾನವಾಗಿ ನೀಡಿತು, ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ದಿನಾಂಕ: 06.11.2019 ರಂದು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ದಕ್ಷಿಣ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯ್ಲಸ್ ಡಿಸೋಜ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಆದೇಶ ಹೊರಡಿಸಿತು. ಇದರಿಂದ ಕ್ರೈಸ್ತರ ಬಹುದಿನಗಳ ಬೇಡಿಕೆಯಾದ ಕ್ರೈಸ್ತರ ಅಭಿವೃದ್ಧಿ ನಿಗಮಕ್ಕೆ ಮಣ್ಣೆರಚಿದಂತೆ ಆಯಿತು.

ರಾಜ್ಯದಲ್ಲಿ ಸುಮಾರು ಶೇ.4% ರಷ್ಟಿರುವ ಕ್ರೈಸ್ತ ಜನಾಂಗಕ್ಕೆ ಅಲ್ಪಸಂಖ್ಯಾತರ ಇಲಾಖೆಯಲ್ಲಿ ವಿವಿದ ಸೌಲಭ್ಯವನ್ನು ಪಡೆಯಲು ಕೇವಲ ಶೇ.10 ರಷ್ಟು ಅವಕಾಶವನ್ನು ನೀಡಿ, ಸರ್ಕಾರ ಸಮಾಜದ ಮೇಲೆ ಮಲತಾಯಿ ದೋರಣೆ ಮಾಡುತ್ತಿದೆ.

ರಾಜ್ಯ ಸರ್ಕಾರದ ವಿವಿದ ಇಲಾಖೆಗಳು ಕ್ರೈಸ್ತ ಸಮುದಾಯಕ್ಕೆ ಸೇರಿದ ಶೈಕ್ಷಣಿಕ ಮತ್ತು ಆರೋಗ್ಯ ಸಂಸ್ಥೆಗಳ ಕಟ್ಟಡಗಳನ್ನು ಬೇರೆ ಬೇರೆ ಕಾರ್ಯಕ್ರಮಗಳಿಗೆ ಬಳಸಿಕೊಳ್ಳೂತ್ತವೆ. ಆದರೆ, ಕ್ರೈಸ್ತ ಸಂಸ್ಥೆಗಳ ಕೆಲಸ ಕಾರ್ಯಗಳಿಗೆ ಮಾತ್ರ ಅಧಿಕರಿಗಳು ಸ್ಪಂದಿಸುವುದಿಲ್ಲ. ಇದರಿಂದ ಕ್ರೈಸ್ತರ ಕೆಲಸ ಕಾರ್ಯಗಳು ಇಲಾಖೆಯ ಮಟ್ಟದಲ್ಲಿ ಸುಗುಮವಾಗಿ ನಡೆಯುವುದ್ತಿಲ್ಲ. ಇದು ಎಲ್ಲಾ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳ ಮನಸ್ಥಿತಿ ಇದೇ ಆಗಿರುತ್ತದೆ.

3ಬಿ ವರ್ಗದಲ್ಲಿ ಕ್ರೈಸ್ತ ಸಮುದಾಯ ಬರುವುದರಿಂದ ಬಲಿಷ್ಠ ಸಮುದಾಯಗಳ ಜೊತೆಗೆ ಕ್ರೈಸ್ತ ಮಕ್ಕಳು ಸ್ಪರ್ದಿಸಲಾಗದೆ ಸರ್ಕಾರದ ಪ್ರಮುಖ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುತ್ತಿಲ್ಲ. ಇದರಿಂದ ಸಮುದಾಯದ ಪ್ರಗತಿಗೂ ಹಿನ್ನಡೆಯಾಗುತ್ತಿದೆ. ಆದ್ದರಿಂದ 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿಕೊಡಬೇಕಾಗಿದೆ.

ರಾಜ್ಯದಲ್ಲಿ ಬೇರೆ ಬೇರೆ ಸಮುದಾಯದವರಿಗೆ ಅಭಿವೃದ್ಧಿ ಮಂಡಳಿಯನ್ನು ಸರ್ಕಾರ ರಚಿಸಿಕೊಟ್ಟಿದೆ. ಕ್ರೈಸ್ತ ಸಮುದಾಯದವರು ಸಾಕಷ್ಟು ವರ್ಷಗಳಿಂದ ಈ ಬಗ್ಗೆ ಬೆಡಿಕೆ ಇಟ್ಟಿದ್ದರೂ ಇನ್ನೂ ಕ್ರೈಸ್ತ ಅಭಿವೃದ್ಧಿ ಮಂಡಳಿ ರಚಣೆ ಆಗಿಲ್ಲ. ಸರ್ಕಾರ ಕ್ರೈಸ್ತರ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಳ್ಳೂತ್ತಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೈಸ್ತ ಸಮುದಾಯದ ಮೇಲೆ ಸರಣಿ ದಾಳಿ ನಡೆದಿದೆ. ಆದರೂ ಕ್ರೈಸ್ತರು ಸಹಿಸಿಕೊಂಡರು. ಇದರ ತನಿಖೆಗಾಗಿ ಆಯೋಗ ರಚನೆ ಮಾಡಲಾಯಿತು. ಆದರೆ, ಆಯೋಗದ ತೀರ್ಮಾನ ಏನೆಂಬುದು ಇಲ್ಲಿಯವರೆಗೆ ತಿಳಿದುಕೊಳ್ಳಲು ಆಗುತ್ತಿಲ್ಲ. ರಾಜ್ಯದ – ದೇಶದ ಅಭಿವೃದ್ಧಿಯಲ್ಲಿ ಕ್ರೈಸ್ತರ ಪಾಲೂ ಇದೆ. ಬಡವರ್ಗದ ಕ್ರೈಸ್ತರಿಗೆ ಈ ರೀತಿ ಅನ್ಯಾಯ ಮಾಡುವುದು ಸರಿಯಲ್ಲ.

ಆದ್ದರಿಂದ ಈ ಸರ್ಕಾರ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯನ್ನು (ಸಿಡಿಸಿ) ರದ್ದುಗೊಳಿಸಿ, ಕರ್ನಾಟಕ ಕ್ರೈಸ್ತರ ಅಭಿವೃದ್ಧಿ ಮಂಡಳಿ ಅಥವಾ ಅಭಿವೃದ್ಧಿ ನಿಗಮವನ್ನು ಮತ್ತು 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡಬೇಕೆಂದು ಜನಶಕ್ತಿ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.

ಜನಶಕ್ತಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಡೈನಾಮಿಕ್ ಲೀಡರ್ ಪತ್ರಿಕೆಯ ಸಂಪಾದಕ ಡಿ.ಸಿ.ಪ್ರಕಾಶ್ ನಮ್ಮೊಂದಿಗೆ ಮಾತನಾಡುತ್ತಾ: “ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕ್ರೈಸ್ತರ ಮೇಲೆ ತೋರಿಸಿದ ಅತಿಯಾದ ಪ್ರೀತಿ, ವಿಶ್ವಾಸ, ಅನುಕಂಪ ಹಾಗೂ ಕ್ರೈಸ್ತ ಸಂಘಟನೆಗಳು ನಿರಂತರವಾಗಿ ಮಾಡಿಬಂದ ಹೋರಾಟಕ್ಕೆ ಮಣಿದು 2010ರಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿಯನ್ನು ರಚಿಸಿ ರೂ.50 ಕೋಟಿಯನ್ನು ಅನುದಾನವಾಗಿ ಬಿಡುಗಡೆ ಮಾಡಿ, ಕ್ರೈಸ್ತರ ಏಳಿಗೆಗೆ ಮುನ್ನುಡಿ ಬರೆದರು. ಮುಂದುವರಿದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಸಂಪ್ರದಾಯವನ್ನು ಮುಂದುವರಿಸಿ ಅನುದಾನವನ್ನು ಹೆಚ್ಚು ಮಾಡುತ್ತಾ ಕ್ರೈಸ್ತರ ಬಾಳಿಗೆ ಬೆಳಕಾದರು.

ಆದರೂ ಇದು ಅತಿ ಕಡಿಮೆಯ ಅನುದಾನವಾಗಿದೆ. ಸುಮಾರು ಶೇ.4% ರಷ್ಟಿರುವ ಕ್ರೈಸ್ತ ಸಮುದಾಯಕ್ಕೆ ಇದರಿಂದ ಏನೂ ಪ್ರಯೋಜನವಾಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದ ಬಡ ಕ್ರೈಸ್ತರು ಸ್ವಾವಲಂಬಿಗಳಾಗಬೇಕಾದರೆ, ಅವರಿಗೆ ಪ್ರತ್ಯೇಕವಾದ ನಿಗಮ ಅಥವಾ ಮಂಡಳಿ ರಚನೆಯಾದರೆ ಮಾತ್ರ ಅದು ಸಾದ್ಯವಾಗುತ್ತದೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಕ್ರೈಸ್ತ ಸಮುದಾಯ ಅಭಿವೃದ್ಧಿ ಪಡೆಯಬೇಕಾದರೆ, 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಸರ್ಕಾರ ಘೋಷಣೆ ಮಾಡಬೇಕಾಗಿದೆ.

ಈ ಏರಡು ಪ್ರಮುಖವಾದ ಬೇಡಿಕೆಗಳನ್ನು ನಾವು ಇಂದು ಸರ್ಕಾರದ ಮುಂದಿಟ್ಟಿದ್ದೇವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಮೇಲ್ಕಂಡ ಎರಡು ಬೇಡಿಕೆಗಳಿಗೆ ಸ್ಪಂದಿಸಿ, ಮುಂಬರುವ 2023ರ ಬಜೆಟ್ ಅಧಿವೇಶನದಲ್ಲಿ ಇದರ ಬಗ್ಗೆ ಘೋಷನೆ ಮಾಡುತ್ತಾರೆ ಎಂದು ನಂಬಿದ್ದೇವೆ” ಎಂದು ಹೇಳಿದರು.      

ಬೆಂಗಳೂರು ರಾಜಕೀಯ

ಬೆಂಗಳೂರು: ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಇಂದು ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಸರ್ವೋದಯ ದಿನಾಚರಣೆ ಆಚರಿಸಲಾಯಿತು. ಪ್ರತಿವರ್ಷದಂತೆ ಈ ವರ್ಷವೂ ದಿನಾಚರಣೆ ಸಾಂಸ್ಕೃತಿಕವಾಗಿ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷ ಅರ್.ಪ್ರಕಾಶ್ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದರು.

ಜೆ.ಪಿ.ಭವನದಲ್ಲಿ ಇಂದು ಆಚರಿಸಲಾದ ಸರ್ವೋದಯ ದಿನಾಚರಣೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್, ರಾಜ್ಯ ಹಿರಿಯ ಮುಖಂಡ ಶಫಿಯುಲ್ಲಾ, ನಾಗರಾಜ್, ಮಹಿಳಾ ಘಟಕದ ಅಧ್ಯಕ್ಷೆ ಡಾ.ರೂತ್ ಮನೋರಮ, ಶಾಂತಿನಗರ ಮಹಿಳಾ ಘಟಕದ ಅಧ್ಯಕ್ಷೆ ಸರಸ್ವತಿ ಮುಂತಾದ ಹಲವರು ಭಾಗವಿಸಿದ್ದರು.

ಜೆಡಿಎಸ್ ಕಚೇರಿಯಲ್ಲಿ ನಡೆದ ಸರ್ವೋದಯ ದಿನಾಕಾರಣೆ

ದೇಶಾದ್ಯಂತ ದೇಶಕ್ಕಾಗಿ ಜೀವತೆತ್ತ ಹುತಾತ್ಮರನ್ನು ಸ್ಮರಣೆ ಮಾಡಿ ಅವರ ತ್ಯಾಗ ಸೇವೆ ಮತ್ತು ದೇಶಪ್ರೇಮವನ್ನು ಕೊಂಡಾಡಿ, ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿರುತ್ತದೆ. ವಿಶ್ವದಾದ್ಯಂತ ಸುಮಾರು 15 ದೇಶಗಳು ಪ್ರತಿ ವರ್ಷ ಹುತಾತ್ಮರ ದಿನವನ್ನು ಬೇರೆ ಬೇರೆ ದಿನಗಳಲ್ಲಿ ಆಚರಣೆ ಮಾಡಿ ಜನರಲ್ಲಿ ದೇಶ ಪ್ರೇಮದ ಬಗ್ಗೆ ಭಕ್ತಿ ಮೂಡುವಂತೆ ಮಾಡುತ್ತದೆ. ಮೊದಲೆಲ್ಲಾ ಜನವರಿ 26ರ ಗಣರಾಜ್ಯೋತ್ಸವದ ದಿನದಂದು ದೇಶಕ್ಕಾಗಿ ಜೀವತೆತ್ತ ಸೈನಿಕರನ್ನು ನೆನೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿತ್ತು. ಜನವರಿ 30ರಂದು ನಮ್ಮ ದೇಶದ ಸ್ವಾತಂತ್ರಕ್ಕಾಗಿ ‘ಅಹಿಂಸಾ’ ಅಸ್ತ್ರದ ಮುಖಾಂತರ ಹೋರಾಡಿದ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು ಆಚರಿಸಲಾಗುತ್ತಿದೆ.

ಗಾಂಧೀಜಿಯವರ ಪುಣ್ಯತಿಥಿಯ ನೆನಪಿಗಾಗಿಯೂ ಈ ದಿನವನ್ನು ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ. ಈ ದಿನದಂದು ಭಾರತದ ಪ್ರಧಾನ ಮಂತ್ರಿ ಮತ್ತು ವಿವಿಧ ಸೇನಾ ದಳಗಳ ಮುಖ್ಯಸ್ಥರು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹುತಾತ್ಮರಿಗೆ ಗೌರವವನ್ನು ಸಲ್ಲಿಸುತ್ತಾರೆ. ಎರಡು ನಿಮಿಷಗಳ ಮೌನಾಚರಣೆಯ ಮಾಡಿ ಪ್ರಾರ್ಥಿಸುತ್ತಾರೆ.

ದೇಶ ಬೆಂಗಳೂರು ರಾಜಕೀಯ ರಾಜ್ಯ

ಬೆಂಗಳೂರು: ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಾ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿರುವ ರಾಹುಲ್ ಗಾಂಧಿಯವರ ನಡೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.  

2023, ಜನವರಿ 10 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಪತ್ರ ಬರೆದು, ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದರು. ಮಲ್ಲಿಕಾರ್ಜುನ ಖರ್ಗೆಯವರ ಆಹ್ವಾನ ಪತ್ರಕ್ಕೆ ಇಂದು ಪ್ರತಿಯುತ್ತರ ನೀಡಿದ ದೇವೇಗೌಡರು, ‘ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರುವುದಕ್ಕೆ ಧನ್ಯವಾದಗಳು, ರಾಷ್ಟ್ರಪಿತ ಹುತಾತ್ಮರಾದ ದಿನದಂದು ಶ್ರೀನಗರದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವುದು ತುಂಬಾ ಸೂಕ್ತವಾಗಿದೆ.

ನಾನು ಕಾರ್ಯಕ್ರಮಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗದಿದ್ದರೂ ನನ್ನ ಶುಭಾಶಯಗಳು ರಾಹುಲ್ ಗಾಂಧಿಯವರಿಗಿದೆ. ಅವರು ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಮತ್ತು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿದ್ದಾರೆ. ದಯವಿಟ್ಟು ಅವರಿಗೆ ನನ್ನ ಆಳವಾದ ಮೆಚ್ಚುಗೆಯನ್ನು ಸೂಚಿಸಿ’ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಇಂದು ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.