ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
HD Revanna Archives » Dynamic Leader
October 23, 2024
Home Posts tagged HD Revanna
ರಾಜಕೀಯ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಮರು ಆಯ್ಕೆ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಹಂಗಾಮಿ ಸ್ಪೀಕರ್ ಶ್ರೀ.ಆರ್.ವಿ.ದೇಶಪಾಂಡೆ ಅವರಿಂದ ವಿಧಾನಸಭೆಯ ನೂತನ ಶಾಸಕನಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾನ್ಯ ಸಭಾಧ್ಯಕ್ಷರ ಕಚೇರಿಯಲ್ಲಿ ಪ್ರಮಾಣ ಸ್ವೀಕಾರ ಮಾಡುವ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹೊಳೆನರಸೀಪುರದ ಶಾಸಕರೂ ಆದ ಹೆಚ್.ಡಿ.ರೇವಣ್ಣ ಜೊತೆಯಲ್ಲಿದ್ದರು.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮೈಸೂರು (ಮಾ.26): ಕುಮಾರಸ್ವಾಮಿ ಹಮ್ಮಿಕೊಂಡಿದ್ದ ಪಂಚರತ್ನ ಯಾತ್ರೆಯಲ್ಲಿ ಒಮ್ಮೆಯಾದರೂ ಭಾಗವಹಿಸಲು ಅವಕಾಶ ಮಾಡಿಕೊಡುವಂತೆ ಭಗವಂತನಲ್ಲಿ ನಾನು ಬೇಡಿಕೊಂಡಿದ್ದೆನು. ಈಗ ಆ ಮಹದಾಸೆ ಈಡೇರಿದೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದರು. ಮೈಸೂರು ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಬಳಿಯ ಮೈದಾನದಲ್ಲಿ ಇಂದು ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ‘ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು. ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು’ ಎಂದರು.

ಮೈಸೂರಿನ ಕೃಷ್ಣರಾಜೇಂದ್ರ ಒಡೆಯರು, ಸರ್.ಎಂ.ವಿಶ್ವೇಶ್ವರಯ್ಯ, ಟಿಪ್ಪು ಸುಲ್ತಾನ್, ಕುವೆಂಪು ಅವರಂತಹ ವಿಶ್ವಮಾನ್ಯ ನಾಯಕರು ಹುಟ್ಟಿದ ಕನ್ನಡ ನಾಡಿನಲ್ಲಿ ಜನಿಸಿದ ಹೆಮ್ಮೆ ನನಗಿದೆ. ನಾನೊಬ್ಬ ಕನ್ನಡಿಗನಾಗಿ ದೇಶದ ಅಭಿವೃದ್ಧಿಗೆ ಪ್ರಧಾನಮಂತ್ರಿಯಾಗಿ ಮಾಡಿದ ಕೆಲಸವು ಇಂದಿಗೂ ಮಾತನಾಡುತ್ತಿದೆ. ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹೇಳುತ್ತಾ ಜನಸಂದಣಿ ನೋಡಿ ಗದ್ಗದಿತರಾದರು. ತಾವು ಪ್ರಧಾನಮಂತ್ರಿ ಆಗಿದ್ದಾಗ, ರೈತನ ಮಗನಾಗಿ ರೈತರ ಹಕ್ಕುಗಳ ರಕ್ಷಣೆಗೆ ಮಾಡಿದ ಕಾರ್ಯಗಳನ್ನು ಬಿಚ್ಚಿಟ್ಟರು. ಪಂಜಾಬಿನ ರೈತರು ಒಂದು ಭತ್ತದ ತಳಿಗೆ ದೇವೇಗೌಡರ ಹೆಸರನ್ನು ಇಟ್ಟಿರುವ ಬಗ್ಗೆ ನನೆಪಿಸಿಕೊಂಡರು. ಇನ್ನು ಪ್ರಧಾನಮಂತ್ರಿಯಾಗಿ ಆಡಳಿತ ನಡೆಸಿದ ಇಷ್ಟು ವರ್ಷಗಳ ನಂತರವೂ ದೇಶ, ವಿದೇಶದ ಜನರು ಸ್ಮರಿಸುತ್ತಾರೆ. ಹಲವು ಮಹನೀಯರು ಹುಟ್ಟಿದ ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಭಾವುಕರಾದರು.

ಜಾತಿ, ಮತ ಆಧಾರದ ಮೇಲೆ ಅಧಿಕಾರ ಹಿಡಿಯುವುದು ನಿಂತಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಹಾಗೂ ರೈತರ ಹಕ್ಕುಗಳಿಗೆ ನ್ಯಾಯ ಒದಗಿಸಿದ್ದೇನೆ. ರೈತರ ಹಕ್ಕಿಗಾಗಿ, ಕಾವೇರಿ, ಗಂಗೆ, ಕೃಷ್ಣೆ ಸೇರಿ ಹಲವು ನೀರಾವರಿ ಯೋಜನೆಗಳಿಗೆ ಮಾಡಿದ್ದೇನೆ. ನಾನು ಮಹಿಳೆಯರಿಗೆ ರಾಜಕೀಯ ಮೀಸಲಾತಿ ನಿಡಲು ಶ್ರಮಿಸಿದ್ದೇನೆ. ನಾನು ಪ್ರಧಾನಮಂತ್ರಿ ಆಗಿದ್ದಾಗ ಕಾನೂನು ರೂಪಿಸಲು ಮುಂದಾದಾಗ ಅಧಿಕಾರ ಕಳೆದುಕೊಂಡೆನು. ನಂತರ ಅಧಿಕಾರಕ್ಕೆ ಬಂದವರು ಕಾನೂನು ರೂಪಿಸಿದರೂ, ಅದಕ್ಕೆ ಯೋಜನೆ ಹಾಕಿದ್ದ ನನ್ನ ಹೆಸರು ಹೇಳುವುದನ್ನೇ ಮರೆತುಬಿಟ್ಟರು ಎಂದು ಹೇಳಿದರು. ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ದೊರಕಬೇಕಾದರೆ ನಾನು ಪ್ರಧಾನಮಂತ್ರಿ ಚಂದ್ರಶೇಖರ್‌ ಅವರೊಂದಿಗೆ ಹೋರಾಟ ಮಾಡಿದ ಪರಿಪಾಟಲು ನನಗೆ ಗೊತ್ತು. ಬೆಂಗಳೂರು ಅಭಿವೃದ್ಧಿಗೆ ಈ ರೈತನ ಮಗನಾಗಿ ದುಡಿದಿದ್ದೇನೆ. ನಾನು ಏನು ಮಾಡಿದ್ದೇನೆ ಎಂಬುದು ಭಗವಂತನಿಗೆ ಮತ್ತು ನಿಮಗೆ ತಿಳಿದಿದೆ. ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾಗ ಬೆಂಗಳೂರು – ಮೈಸೂರು ಹೆದ್ದಾರಿ ಅಭಿವೃದ್ಧಿಗೆ ಏನು ತೀರ್ಮಾನ ಕೈಗೊಂಡಿದ್ದೇನೆ ಎಂಬುದು ಗೊತ್ತಿದೆ. ಅದರೆ, ನಾನು ಪ್ರಚಾರವನ್ನು ಪಡೆಯುವುದಿಲ್ಲ ಎಂದರು.

ನನ್ನ 70 ವರ್ಷಗಳ ಅಧಿಕಾರದಲ್ಲಿ ಎಂದಿಗೂ ಕೊಟ್ಟ ಭರವಸೆ ಈಡೇರಿಸಲು ವಿಫಲವಾಗಿಲ್ಲ. ಒಂದು ವೇಳೆ ನಾನು ಕೊಟ್ಟ ಭರವಸೆ ಈಡೇರಿಸಲಿದ್ದಾಗ ರಾಜಿನಾಮೆ ಕೊಟ್ಟಿದ್ದೇನೆ. ನಾನು ಎಲ್ಲ ಕಾಲಕ್ಕೂ ಅಭಿವೃದ್ಧಿ ಮಂತ್ರ ಜಪಿಸಿದ್ದೇನೆ. ನಾನು ಬೆರಳೆಣಿಕೆ ವರ್ಷಗಳಷ್ಟು ಮಾತ್ರ ಅಧಿಕಾರದಲ್ಲಿ ಇದ್ದು, ದೇವರಾಣೆಗೂ ನಾನು ಜನರ ಅಭಿವೃದ್ಧಿಗೆ ದುಡಿದಿದ್ದೇನೆ. ನನ್ನ ಮಕ್ಕಳು, ಮೊಮ್ಮಕ್ಕಳಿಗೂ ಜನರಿಗೋಸ್ಕರ ದುಡಿಯುವಂತೆ ಹೇಳಿದ್ದೇನೆ. ಅವರೂ ಕೂಡ ನಾನು ಸಾಗಿದ ದುಡಿಮೆ ಹಾದಿಯಲ್ಲಿಯೇ ನಡೆಯುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು. ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು. ನನ್ನ ಆಸೆಯನ್ನು ಕೇಳಿಕೊಂಡ ಭಗವಂತ ನನ್ನನ್ನು ನಿಮ್ಮಮುಂದೆ ನಿಲ್ಲಿಸಿದ್ದಾನೆ. ನಾನು ಭಗವಂತನ ಆಶೀರ್ವಾದದ ಭಾಗವಾಗಿದ್ದೇನೆ. ಆದರೆ, ನನ್ನ ಶಕ್ತಿ ನೀವು ಆಗಿದ್ದೀರಿ ಎಂದರು.

ಸಮಾರೋಪ ಸಮಾರಂಭವನ್ನು ಉದ್ದೇಶಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನನ್ನ ರಾಜಕೀಯ ಜೀವನದ ಅವಿಸ್ಮರಣೀಯ ಕ್ಷಣವಿದು. ನನ್ನ ಪೂಜ್ಯ ತಂದೆಯವರು, ಮಾಜಿ ಪ್ರಧಾನಮಂತ್ರಿಗಳು ಆದ ಶ್ರೀ.ಹೆಚ್.ಡಿ.ದೇವೇಗೌಡ ಪಂಚರತ್ನ ರಥಯಾತ್ರೆ ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅವರ ಸಾನ್ನಿಧ್ಯದಲ್ಲಿ ನಡೆದ ಜೆಡಿಎಸ್ ಹಬ್ಬ ನನ್ನ ರಾಜಕೀಯ ಜೀವನದ ಮಹೋನ್ನತ ಮೈಲುಗಲ್ಲು. ಮೈಸೂರಿನ ಶ್ರೀ.ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಐತಿಹಾಸಿಕ ಸಮಾವೇಶಕ್ಕೆ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಹರಿದುಬಂದಿದ್ದ ಜನಸಾಗರಕ್ಕೆ ನನ್ನ ಅನಂತ ಧನ್ಯವಾದಗಳು ಎಂದರು.

ಪಂಚರತ್ನ ಯಾತ್ರೆ ಸಮಾರೋಪದಲ್ಲಿ ದೇವೇಗೌಡರು ಭಾಷಣ ಮಾಡುತ್ತಿದಾಗ ಕಣ್ಣೀರು ಹಾಕಿದ ಕುಮಾರಸ್ವಾಮಿ ಮತ್ತು ರೇವಣ್ಣ. ಹತ್ತು ಲಕ್ಷಕ್ಕೂ ಹೆಚ್ಚು ಜನರು ಈ ಐತಿಹಾಸಿಕ ಸಮಾವೇಶದಲ್ಲಿ ಸೇರಿರುವ ನಿರೀಕ್ಷೆ ಇದೆ, ರಾಜ್ಯದ ದಶದಿಕ್ಕುಗಳಿಂದ ಆಗಮಿಸುವ ಪ್ರತಿಯೊಬ್ಬರಿಗೂ ಆಸನ ಹಾಗೂ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.