ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Hogenakal Archives » Dynamic Leader
October 23, 2024
Home Posts tagged Hogenakal
ರಾಜಕೀಯ

ಬೆಂಗಳೂರು: ಕರ್ನಾಟಕದ ನಿರಂತರ ಹೋರಾಟ, ಬಂದ್‌ ನಡುವೆಯೂ ದೆಹಲಿಯ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿದೆ. 18 ದಿನಗಳ ಕಾಲ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ತಿಳಿಸಿದೆ. ಈ ಹಿನ್ನಡೆಗೆ ಕಾಂಗ್ರೆಸ್ ಸರ್ಕಾರ ಕಾರಣವೆಂದು ಮಾಜಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3000 ಕ್ಯೂಸೆಕ್ಸ್ ಹರಿಸಲು ಕರ್ನಾಟಕಕ್ಕೆ ಇಂದು ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ; ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಾವೇರಿ ಕೊಳ್ಳ ಮತ್ತು ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ಕಾಂಗ್ರೆಸ್ ಸರಕಾರ ಬಂದಿದೆಯೇನೋ ಎಂದು ಬಹಳ ನೋವಿನಿಂದ ಹೇಳಲೇಬೇಕಾಗಿದೆ

‘ಕೆಆರ್ಎಸ್ ಜಲಾಶಯಕ್ಕೆ ನಿತ್ಯವೂ 10,000 ಕ್ಯೂಸೆಕ್ ಒಳಹರಿವು ಇದೆ’ ಎನ್ನುತ್ತಾರೆ ಜಲ ಸಂಪನ್ಮೂಲ ಸಚಿವರು. ಇದಕ್ಕೆ ತದ್ವಿರುದ್ಧವಾಗಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ‘ನಮ್ಮಲ್ಲಿ ನೀರೇ ಇಲ್ಲ’ ಎಂಬ ಮಾಹಿತಿ ನೀಡುತ್ತಾರೆ. ಇನ್ನೊಂದೆಡೆ ಹಿರಿಯ ಅಧಿಕಾರಿಯೊಬ್ಬರು ‘ಈ ಆದೇಶದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಉಳಿತಾಯವಾಗಿದೆ’ ಎನ್ನುತ್ತಾರೆ. ‘ಎತ್ತು ಏರಿಗೆ, ಕೋಣ ನೀರಿಗೆ’ ಎನ್ನುವಂತಿದೆ ಜಲ ಸಂಪನ್ಮೂಲ ಇಲಾಖೆ ಮತ್ತು ಸರಕಾರದ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ಅನರ್ಥಗಳನ್ನೇ ಮಾಡುತ್ತಿರುವ ಈ ಸರಕಾರದ ವೈಫಲ್ಯದ ಲಾಭವನ್ನು ತಮಿಳುನಾಡು ಅತ್ಯಂತ ಜಾಣತನದಿಂದ ಪಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾವು ಕುಡಿಯಲು ನೀರು ಕೇಳುತ್ತಿದ್ದೇವೆ, ತಮಿಳುನಾಡು ಅಕ್ರಮವಾಗಿ ಮಿತಿಮೀರಿದ ವಿಸ್ತೀರ್ಣದಲ್ಲಿ ಬೆಳೆದ ‘ಕುರುವೈ’ ಬೆಳೆಗೆ ನೀರು ಕೇಳುತ್ತಿದೆ. ಅಲ್ಲಿ ಸ್ವಾರ್ಥ ಇದೆ; ಇಲ್ಲಿ ಜನರ ಬದುಕಿದೆ. ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಆ ರಾಜ್ಯದ ಇಂಥ ಮನಃಸ್ಥಿತಿಯ ವಿರುದ್ಧ ಪ್ರಬಲ ಹೋರಾಟ ಮಾಡುವ ಇಚ್ಛಾಶಕ್ತಿ ಈ ಸರ್ಕಾರಕ್ಕೆ ಇಲ್ಲದಾಗಿದೆ. ಕೇವಲ ಪಾಲುದಾರ ಪಕ್ಷ ಡಿಎಂಕೆಯ ಯೋಗಕ್ಷೇಮವನ್ನೇ ಕೈ ಸರಕಾರ ನೋಡುತ್ತಾ, ಕರ್ನಾಟಕದ ಹಿತವನ್ನು ಸಂಪೂರ್ಣ ಬಲಿ ಕೊಟ್ಟಿದೆ. ಕನ್ನಡಿಗರ ಮೇಲೆ ‘ಬಂಡೆ’ ಎಳೆದಿದೆ ಎಂದು ಆಡಳಿತ ರೂಢ ಡಿಎಂಕೆ ಮತ್ತು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಈಗಾಗಲೇ ಕಾವೇರಿ ನೀರು ಹಂಚಿಕೆಯನ್ನು ನ್ಯಾಯಾಧಿಕರಣ ಅಖೈರುಗೊಳಿಸಿದ್ದು, ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಸಂಕಷ್ಟ ಕಾಲದಲ್ಲಿ ಪರಿಹಾರವೇನು? ಮಾತೆತ್ತಿದರೆ ನೀರು ಬಿಡಿ ಎಂದು ಆದೇಶಿಸುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) & ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಈ ಕೂಡಲೇ ‘ಸಂಕಷ್ಟ ಹಂಚಿಕೆ ಸೂತ್ರ’ವನ್ನು ರೂಪಿಸಲೇಬೇಕು. ಆ ನಿಟ್ಟಿನಲ್ಲಿ ಸರ್ಕಾರ ಒತ್ತಡ ಹೇರಿ, ಆ ಸೂತ್ರ ರೂಪಿಸದ ಹೊರತು ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲವೆಂದು ಕಡ್ಡಿ ತುಂಡು ಮಾಡಿದಂತೆ ಸ್ಪಷ್ಟವಾಗಿ ಹೇಳಲೇಬೇಕು. ಯಾವುದೇ ಕಾರಣಕ್ಕೂ ಈಗ ನೀರು ಹರಿಸಬಾರದು ಎಂದು ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ದೇಶ ಬೆಂಗಳೂರು ರಾಜ್ಯ

ಡಿ.ಸಿ.ಪ್ರಕಾಶ್, ಸಂಪಾದಕರು

ಬೆಂಗಳೂರು: ಭಾರತದಲ್ಲಿ 3700 ಅಣೆಕಟ್ಟುಗಳು ಅಪಾಯದಲ್ಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಕೆ ನೀಡಿದ್ದು ಸಂಚಲನ ಮೂಡಿಸಿದೆ.

2050 ರ ವೇಳೆಗೆ ಭಾರತದ 3,700 ಅಣೆಕಟ್ಟುಗಳು ತಮ್ಮ ನೀರಿನ ಸಂಗ್ರಹಣಾ ಸಾಮರ್ಥ್ಯದಲ್ಲಿ ಶೇ.25 ರಷ್ಟನ್ನು ಕಳೆದುಕೊಳ್ಳುವ ಸಾದ್ಯತೆಯಿದೆ. ಮತ್ತು ಹೂಳು ತುಂಬುವುದರಿಂದ ಈ ಅಪಾಯ ಬರುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.

50 ವರ್ಷಕ್ಕಿಂತ ಹಳೆಯದಾದ ಅಣೆಕಟ್ಟುಗಳು ತಮ್ಮ ನೀರಿನ ಸಂಗ್ರಹಣಾ ಸಾಮರ್ಥ್ಯದಲ್ಲಿ ಶೇ.30 ರಷ್ಟನ್ನು ಕಳೆದುಕೊಳ್ಳುತ್ತವೆ ಮತ್ತು ಪ್ರಪಂಚದಾದ್ಯಂತದ ಸುಮಾರು 50,000 ಅಣೆಕಟ್ಟುಗಳು ಹೂಳು ತುಂಬುವಿಕೆಯಿಂದಾಗಿ ತಮ್ಮ ನೀರಿನ ಸಂಗ್ರಹಣಾ ಸಾಮರ್ಥ್ಯದಲ್ಲಿ ಶೇ.13 ರಿಂದ ಶೇ.19 ರಷ್ಟು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ವಿಶ್ವಸಂಸ್ಥೆಯ ಸಹಯೋಗದೊಂದಿಗೆ ಪರಿಸರ ಮತ್ತು ಆರೋಗ್ಯ ಕೇಂದ್ರ ವಿಶ್ವವಿದ್ಯಾನಿಲಯ ವಿಶ್ವಾದ್ಯಂತ ಅಸ್ತಿತ್ವದಲ್ಲಿರುವ ಅಣೆಕಟ್ಟುಗಳ ಭವಿಷ್ಯವನ್ನು ಪರಿಶೀಲಿಸಿ ಅಧ್ಯಯನವುನ್ನು ನಡೆಸಿದೆ. ದೊಡ್ಡ ಅಣೆಕಟ್ಟುಗಳು ಮತ್ತು ಜಲಾಶಯಗಳು ವಿದ್ಯುತ್ ಮತ್ತು ಕುಡಿಯುವ ನೀರನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಮತ್ತು ಈ ಜಲಾಶಯಗಳೆಲ್ಲವೂ ಏಕಕಾಲದಲ್ಲಿ ಪರಿಣಾಮ ಬೀರುತ್ತವೆ ಎಂದೂ ಅಧ್ಯಯನವು ಬಹಿರಂಗಪಡಿಸಿದೆ.

ಹೂಳುಗಳ ಶೇಖರಣೆಯಿಂದಾಗಿ ಭಾರತದಲ್ಲಿರುವ 3,700 ಅಣೆಕಟ್ಟುಗಳು 2050ರ ವೇಳೆಗೆ ಒಟ್ಟು ಸಂಗ್ರಹಣೆಯಲ್ಲಿ ಶೇ.26 ರಷ್ಟುನ್ನು ಕಳೆದುಕೊಳ್ಳುತ್ತವೆ. ಇದು ಭವಿಷ್ಯದ ನೀರಿನ ಭದ್ರತೆ, ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಯನ್ನು ದುರ್ಬಲಗೊಳಿಸುವಂತೆ ಮಾಡುತ್ತದೆ ಎಂದು ವಿಶ್ವಸಂಸ್ಥೆಯ ಹೊಸ ಅಧ್ಯಯನವು ಎಚ್ಚರಿಕೆಯನ್ನು ನೀಡಿದೆ.

ನೀರು, ಪರಿಸರ ಮತ್ತು ಆರೋಗ್ಯದ ಕುರಿತು ವಿಶ್ವಸಂಸ್ಥೆಯ ವಿಶ್ವವಿದ್ಯಾಲಯವು ನಡೆಸಿದ ಅಧ್ಯಯನದ ಪ್ರಕಾರ, 150 ದೇಶಗಳಲ್ಲಿನ 47,403 ದೊಡ್ಡ ಅಣೆಕಟ್ಟುಗಳಲ್ಲಿ 6,316 ಶತಕೋಟಿ ಘನ ಮೀಟರ್ ನೀರಿನ ಸಂಗ್ರಹವು ಕಡಿಮೆಯಾಗುತ್ತದೆ. ಮತ್ತು 2050ರ ವೇಳೆಗೆ 4,665 ಶತಕೋಟಿ ಘನ ಮೀಟರ್ ನೀರಿನ ಸಂಗ್ರದಲ್ಲಿ ಶೇ.26ರಷ್ಟು ನೀರಿನ ಸಂಗ್ರಹವು ನಷ್ಟವಾಗುತ್ತದೆ ಎಂದು ಅದು ಅಂದಾಜಿಸಿದೆ.

ಭಾರತ ಮಾತ್ರವಲ್ಲದೆ ಚೀನಾ, ಇಂಡೋನೇಷ್ಯಾ, ಫ್ರಾನ್ಸ್ ಮತ್ತು ಕೆನಡಾ ಸೇರಿದಂತೆ ಇತರ ದೇಶಗಳಲ್ಲಿ ಅಣೆಕಟ್ಟುಗಳ ಜಲಾಶಯದ ಸಾಮರ್ಥ್ಯ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದೆ.

2022 ರ ಹೊತ್ತಿಗೆ, ಏಷ್ಯಾ-ಪೆಸಿಫಿಕ್ ಪ್ರದೇಶ ಮತ್ತು ಪ್ರಪಂಚವು ತಮ್ಮ ಹೆಚ್ಚುವರಿ ಶೇಖರಣಾ ಸಾಮರ್ಥ್ಯದಲ್ಲಿ ಶೇ.13 ರಷ್ಟನ್ನು ಕಳೆದುಕೊಂಡಿದೆ ಎಂದು ಅಂದಾಜಿಸಲಾಗಿದೆ. ವಿಶ್ವದಲ್ಲಿನ ಈ ಭೂಭಾಗದ ಜನಸಂಖ್ಯೆ ಶೇ.60ರಷ್ಟು ಇರುವುದರಿಂದ ನೀರು ಮತ್ತು ಆಹಾರ ಭದ್ರತೆಯನ್ನು ಉಳಿಸಿಕೊಳ್ಳಲು ನೀರಿನ ಸಂರಕ್ಷಣೆ ನಿರ್ಣಾಯಕವಾಗಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ.

ಭಾರತದ 3,700 ಪ್ರಮುಖ ಅಣೆಕಟ್ಟುಗಳು 2050 ರ ವೇಳೆಗೆ ತಮ್ಮ ಆರಂಭಿಕ ಒಟ್ಟು ಸಂಗ್ರಹಣೆಯಲ್ಲಿ ಸರಾಸರಿಯಾಗಿ ಶೇ.26ರಷ್ಟು ಕಳೆದುಕೊಳ್ಳುತ್ತವೆ ಎಂದು ವಿಶ್ವಸಂಸ್ಥೆ ಹೇಳಿದೆ. ಭಾರತ ಮಾತ್ರವಲ್ಲದೆ ವಿಶ್ವದ ಅತ್ಯಂತ ಅಣೆಕಟ್ಟುಗಳನ್ನು ಹೊಂದಿರುವ ಚೀನಾ ರಾಷ್ಟ್ರದ ಅಣೆಕಟ್ಟುಗಳು ಕೂಡ 2050ರ ಹೊತ್ತಿಗೆ ತಮ್ಮ ಸಂಗ್ರಹದ ಶೇ.10ರಷ್ಟನ್ನು ಕಳೆದುಕೊಳ್ಳುತ್ತದೆ.

ನೀರಿನ ಸಂಗ್ರಹಣೆಯ ಮೂಲಸೌಕರ್ಯವು ಅಭಿವೃದ್ಧಿಗೆ ನಿರ್ಣಾಯಕವಾಗಿರುವುದರಿಂದ, ಪ್ರಮುಖ ಅಣೆಕಟ್ಟುಗಳು ಮತ್ತು ಜಲಾಶಯಗಳನ್ನು ಜಲವಿದ್ಯುತ್, ಪ್ರವಾಹ ನಿಯಂತ್ರಣ ಮತ್ತು ನೀರಾವರಿ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ದುರಸ್ತಿ ಮಾಡಬೇಕು. ನಿರ್ದಿಷ್ಟವಾಗಿ ಹೇಳುವುದಾದರೆ, ಹೂಳು ಸಂಗ್ರಹವಾಗುವುದನ್ನು ತಡೆಯಲು ಪ್ರಯತ್ನಿಸಬೇಕು ಎಂದು ಅಧ್ಯಯನದ ಫಲಿತಾಂಶಗಳು ಸೂಚಿಸುತ್ತವೆ.