ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
India Archives » Dynamic Leader
October 23, 2024
Home Posts tagged India
ದೇಶ

ಎಐ ತಂತ್ರಜ್ಞಾನದ ಮೂಲಕ ರಚಿತವಾದ ನಕಲಿ ರಾಜಕೀಯ ಜಾಹೀರಾತುಗಳು, ಡೀಪ್‌ಫೇಕ್ ಆಡಿಯೊಗಳು ಮತ್ತು ವೀಡಿಯೊಗಳು ಮತದಾರರನ್ನು ದಾರಿ ತಪ್ಪಿಸಬಹುದು ಎಂದು ಮೈಕ್ರೋಸಾಫ್ಟ್ ಎಚ್ಚರಿಸಿದೆ!

ಭಾರತದಲ್ಲಿ ದೇಶಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಯು ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, 7ನೇ ಹಂತವು ಜೂನ್ 1 ರಂದು ಕೊನೆಗೊಳ್ಳಲಿದೆ. ಈ ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಎಐ (AI) ತಂತ್ರಜ್ಞಾನದೊಂದಿಗೆ ಚೀನಾ ಚುನಾವಣೆಗಳನ್ನು ಅಸ್ಥಿರಗೊಳಿಸುವ ಸಂಚು ರೂಪಿಸಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಸಿದೆ.

ತೈವಾನ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲು ಎಐ ತಂತ್ರಜ್ಞಾನವನ್ನು ಬಳಸಲು ಚೀನಾ ಪ್ರಯತ್ನಿಸಿದ್ದು, ಅಮೆರಿಕಾದಲ್ಲಿ ಪ್ರಸ್ತುತ ನಡೆಯುತ್ತಿರುವ ಚುನಾವಣಾ ಪ್ರಚಾರದ ಮೇಲೆಯೂ ಪ್ರಭಾವ ಬೀರಲು ಈ ಚೀನೀ ಗುಂಪುಗಳು ಪ್ರಯತ್ನಿಸುತ್ತಿವೆ ಎಂದು ಮೈಕ್ರೋಸಾಫ್ಟ್ ಇಂಟೆಲಿಜೆನ್ಸ್ ಗ್ರೂಪ್ ಎಚ್ಚರಿಸಿದೆ.

ಎಐ ತಂತ್ರಜ್ಞಾನದ ಮೂಲಕ ರಚಿತವಾದ ನಕಲಿ ರಾಜಕೀಯ ಜಾಹೀರಾತುಗಳು, ಡೀಪ್‌ಫೇಕ್ ಆಡಿಯೊಗಳು ಮತ್ತು ವೀಡಿಯೊಗಳು ಮತದಾರರನ್ನು ದಾರಿ ತಪ್ಪಿಸಬಹುದು ಎಂದು ಮೈಕ್ರೋಸಾಫ್ಟ್ ಎಚ್ಚರಿಸಿದೆ.

ಈ ಎಐ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳ ಹೇಳಿಕೆಗಳು ಮತ್ತು ವಿವಿಧ ವಿಷಯಗಳ ಬಗ್ಗೆ ಅವರ ನಿಲುವುಗಳನ್ನು ಜನರಲ್ಲಿ ತಪ್ಪಾಗಿ ಹರಡಿಸಿ, ಜನರನ್ನು ತಪ್ಪುದಾರಿಗೆಳೆಯಬಹುದು. ಹಾಗಾಗಿ ಆ ಸಂದೇಶಗಳನ್ನು ಪರಿಶೀಲಿಸದೇ ಅನುಮತಿಸಿದರೆ ಮತದಾರರು ಸರಿಯಾದ ನಿರ್ಧಾರ ತೆಗೆದುಕೊಳ್ಳದಿರುವ ಸಾಧ್ಯತೆಗಳು ಇದೆ.

ಅಲ್ಲದೆ, “ಚೀನಾ ಸರ್ಕಾರದ ಬೆಂಬಲಿತ ಸೈಬರ್ ಗುಂಪುಗಳು ಉತ್ತರ ಕೊರಿಯಾದ ಸಹಾಯದಿಂದ 2024ರಲ್ಲಿ ನಡೆಯಲಿರುವ ವಿವಿಧ ಚುನಾವಣೆಗಳನ್ನು ಹಾಳುಮಾಡಲು ಯೋಜಿಸುತ್ತಿವೆ. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಎಐ ತಂತ್ರಜ್ಞಾನದ ಮೂಲಕ ರಚಿತವಾದ ಅಭಿಪ್ರಾಯಗಳನ್ನು ಹರಡಿಸಿ ಸಾರ್ವಜನಿಕ ಅಭಿಪ್ರಾಯಗಳನ್ನು ಬದಲಾಯಿಸಲು ಯೋಜಿಸಿದ್ದಾರೆ” ಎಂದು ಮೈಕ್ರೋಸಾಫ್ಟ್ ಇಂಟೆಲಿಜೆನ್ಸ್ ಗ್ರೂಪ್ ಎಚ್ಚರಿಸಿದೆ. ಆದರೂ, ಭಾರತದಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮೈಕ್ರೋಸಾಫ್ಟ್ ಸಹ ಸಂಸ್ಥಾಪಕರಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಕಳೆದ ತಿಂಗಳು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಸಾಮಾಜಿಕ ಪ್ರಗತಿ, ಮಹಿಳೆಯರ ಅಭಿವೃದ್ಧಿ ಹಾಗೂ ಆರೋಗ್ಯದಲ್ಲಿ ಎಐ ತಂತ್ರಜ್ಞಾನವನ್ನು ಹೇಗೆ ಅತ್ಯುತ್ತಮವಾಗಿ ಬಳಸಿಕೊಳ್ಳುವುದು ಎಂಬುದರ ಬಗ್ಗೆ ಇಬ್ಬರೂ ಚರ್ಚಿಸಿದ್ದು ಗಮನಾರ್ಹ.

ರಾಜಕೀಯ

“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ! ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ!” ಎಂದು ಹೇಳಿದ್ದಾರೆ.

ರಾಜಕೀಯ

ನವದೆಹಲಿ: ದೆಹಲಿಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ‘ಇಂಡಿಯಾ’ ಮೈತ್ರಿಕೂಟದ ವತಿಯಿಂದ ಸಮಾಲೋಚನಾ ಸಭೆ ನಡೆಯಿತು.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನಲ್ಲಿ ವಿಶೇಷ ಜಂಟಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ‘ಇಂಡಿಯಾ’ ಮೈತ್ರಿ ಪಕ್ಷಗಳ ಪರವಾಗಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ, ಅವರ ಮನೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಇದನ್ನೂ ಓದಿ: ಮಣಿಪುರ: ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ ವಿಶ್ವಸಂಸ್ಥೆ; ತಿರಸ್ಕರಿಸಿದ ಭಾರತ!

ಸಭೆಯಲ್ಲಿ ಸಂಸತ್ತಿನ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ‘ಒಂದು ದೇಶ-ಒಂದು ಚುನಾವಣೆ’ ಯೋಜನೆ ವಿರುದ್ಧ ನಿರ್ಣಯವನ್ನು ತರಲು ನಿರ್ಧರಿಸಲಾಯಿತು. ಮತ್ತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿಯ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ‘ಇಂಡಿಯಾ’ ಮೈತ್ರಿಯ ಹೆಸರನ್ನು ‘ಭಾರತ’ ಎಂದು ಬದಲಾಯಿಸಿದರೆ ಏನು ಮಾಡುತ್ತೀರಿ? ಕೇಜ್ರಿವಾಲ್ ಪ್ರಶ್ನೆ!

ರಾಜಕೀಯ

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ; ಅದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಜೀವಂತ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. “2018ರಲ್ಲಿ ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ?

ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಮುಖ್ಯಮಂತ್ರಿ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ?

ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ?

ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ?

ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ.

ಅಷ್ಟೇ ಅಲ್ಲ; ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ? ಎಂದು ಕಿಡಿಕಾರಿದ್ದಾರೆ.

ದೇಶ ರಾಜಕೀಯ

ಬೆಂಗಳೂರು: ಬಿಜೆಪಿಯನ್ನು ಸೋಲಿಸುವವರೆಗೂ ವಿರೋಧ ಪಕ್ಷಗಳ ಮೈತ್ರಿ ವಿರಮಿಸುವುದಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯ ನಂತರ ಪ್ರತಿಪಕ್ಷ ನಾಯಕರು ಸುದ್ದಿಗಾರರನ್ನು ಭೇಟಿಯಾಗಿ ಮಾತನಾಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಮೋದಿ ವಿರುದ್ಧ ಭಾರತವಿದೆ ಎಂಬುದನ್ನು ತೋರಿಸಲು ಮೈತ್ರಿಕೂಟಕ್ಕೆ “ಇಂಡಿಯಾ” ಎಂದು ಹೆಸರಿಡಲಾಗಿದೆ. ವಿರೋಧ ಪಕ್ಷಗಳ ಮುಂದಿನ ಸಭೆ ಮುಂಬೈನಲ್ಲಿ ನಡೆಯಲಿದೆ. ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಒಕ್ಕೂಟಕ್ಕೆ 11 ಸಂಯೋಜಕರನ್ನು ನೇಮಿಸಲಾಗುವುದು.

ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ನಾವು ದೇಶವನ್ನು ರಕ್ಷಿಸಲು ಒಗ್ಗಟ್ಟಾಗಿದ್ದೇವೆ. ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಬಿಜೆಪಿಗೆ ನಡುಕ ಶುರುವಾಗಿದೆ. ವಿರೋಧ ಪಕ್ಷಗಳ ವಿರುದ್ಧ ಬಿಜೆಪಿಯು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅನ್ನು ಅಸ್ತ್ರವಾಗಿ ಬಳಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ. ಪ್ರತಿಪಕ್ಷಗಳು ಒಂದಾಗುತ್ತಿರುವುದನ್ನು ಕಂಡು ಸಣ್ಣ ಪಕ್ಷಗಳು ಒಂದಾಗುತ್ತಿವೆ. ಬಿಜೆಪಿ ಮೈತ್ರಿಕೂಟದಲ್ಲಿದೆ ಎನ್ನಲಾದ 38 ಪಕ್ಷಗಳ ಪೈಕಿ ಹಲವು ಪಕ್ಷಗಳ ಹೆಸರನ್ನು ಕೇಳಿಯೇ ಇಲ್ಲ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ: ಪ್ರತಿಪಕ್ಷಗಳ ಸಭೆ ಪ್ರಯೋಜನಕಾರಿ ಮತ್ತು ರಚನಾತ್ಮಕವಾಗಿತ್ತು. ನಮಗೆ ಸವಾಲು ಹಾಕಿದರೆ ಎನ್‌ಡಿಎ ಮೈತ್ರಿಕೂಟ ಸೋಲುತ್ತದೆ. ನಾವು ಜನಾಂಗ, ಭಾಷೆ ಮತ್ತು ಧರ್ಮವನ್ನು ಮೀರಿ ಒಗ್ಗಟ್ಟಾಗಿದ್ದೇವೆ. ಬಿಜೆಪಿಯನ್ನು ತೊಲಗಿಸಿ ದೇಶವನ್ನು ರಕ್ಷಿಸಬೇಕು. ಪ್ರತಿಪಕ್ಷಗಳ ಮೈತ್ರಿ ಗೆಲ್ಲಲಿದೆ. ಬಿಜೆಪಿಗೆ ಸೋಲು ಎದುರಾಗಲಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್: ಮೋದಿಯವರ ಭಾರತದಲ್ಲಿ ಯಾರೂ ನೆಮ್ಮದಿಯಾಗಿಲ್ಲ. ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ನಾಶ ಮಾಡಿದೆ. ನಮ್ಮೊಂದಿಗೆ ಇನ್ನಷ್ಟು ಪಕ್ಷಗಳು ಸೇರಲಿವೆ. ಬಿಜೆಪಿ ಆಡಳಿತದಲ್ಲಿ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲಾಗುತ್ತಿದೆ. ಕಳೆದ 9 ವರ್ಷಗಳಲ್ಲಿ ಮೋದಿಯವರಿಗೆ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಅವಕಾಶ ಸಿಕ್ಕಿತ್ತು. ಆದರೆ ಏನೂ ಆಗಲಿಲ್ಲ. ಬಿಜೆಪಿ ಮಣ್ಣಿನಿಂದ ಹಿಡಿದು ಆಕಾಶದವರೆಗೆ ಎಲ್ಲವನ್ನೂ ಮಾರಿದೆ.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ: ಸರ್ವಾಧಿಕಾರದ ವಿರುದ್ಧ ನಾವು ಒಂದಾಗಿದ್ದೇವೆ. ದೇಶವೇ ನಮ್ಮ ಕುಟುಂಬ. ಅದನ್ನು ರಕ್ಷಿಸಲು ನಾವು ಹೋರಾಟ ನಡೆಸುತ್ತಿದ್ದೇವೆ. ದೇಶವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುತ್ತೇವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಬಿಜೆಪಿಯ ನೀತಿಗಳ ವಿರುದ್ಧ ನಮ್ಮ ಹೋರಾಟ ಇರಲಿದೆ. ದೇಶದ ಧ್ವನಿಗಾಗಿ ಈ ಹೋರಾಟ ನಡೆಯುತ್ತಿದೆ. ಬಿಜೆಪಿಯ ದುಷ್ಟ ಚಿಂತನೆ ಮತ್ತು ಸಿದ್ಧಾಂತದ ವಿರುದ್ಧ ನಾವು ಒಂದಾಗಿದ್ದೇವೆ. ಬಿಜೆಪಿಯಿಂದ ದೇಶವನ್ನು ರಕ್ಷಿಸಲು ಕ್ರಿಯಾ ಯೋಜನೆ ರೂಪಿಸಬೇಕಾಗಿದೆ. ದೇಶದಲ್ಲಿ ಒಂದೆಡೆ ಬೆಲೆ ಏರಿಕೆಯಾದರೆ ಮತ್ತೊಂದೆಡೆ ನಿರುದ್ಯೋಗ ಹೆಚ್ಚುತ್ತಿದೆ. ಈ ಹೋರಾಟ ಎರಡು ಪಕ್ಷಗಳ ನಡುವೆ ಅಲ್ಲ.

ಭಾರತದ ನೀತಿಯನ್ನು ರಕ್ಷಿಸಲು ಹೋರಾಟ. ಇತಿಹಾಸವನ್ನು ನೋಡಿದರೆ ಭಾರತದ ಇತಿಹಾಸದ ವಿರುದ್ಧ ಯಾರೂ ಹೋರಾಡಿಲ್ಲ. ಪ್ರಸ್ತುತ ಭಾರತದ ನೀತಿಗಳಿಗೂ ಮೋದಿಯವರಿಗೂ ನಡುವಿನ ಹೋರಾಟವಾಗಿದೆ. ಬಿಜೆಪಿಯನ್ನು ಸೋಲಿಸುವವರೆಗೂ ನಾವು ವಿರಮಿಸುವುದಿಲ್ಲ. ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಮೈತ್ರಿ ಕೂಟಕ್ಕೆ ‘ಇಂಡಿಯಾ’ (Indian National Developmental Inclusive Alliance – INDIA) ಎಂದು ಹೆಸರಿಸಲಾಗಿದೆ. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆದಿದ್ದು, 26 ಪಕ್ಷಗಳು ಭಾಗವಹಿಸಿದ್ದವು. 6 ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ವಿದೇಶ

ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದ ಬಗ್ಗೆ ಮೂರು ದಿನಗಳ ಮೊದಲೇ ಭವಿಷ್ಯ ನುಡಿದಿದ್ದ ಡಚ್ ಸಂಶೋಧಕ ಫ್ರಾಂಕ್ ಹೂಗರ್‌ ಬೀಟ್ಸ್, ಭಾರತದಲ್ಲೂ ಭೂಕಂಪ ಸಂಭವಿಸಲಿದೆ ಎಂದು ಹೇಳಿದ್ದಾರೆ.

ಟರ್ಕಿ ಮತ್ತು ಸಿರಿಯಾದಲ್ಲಿ ಭಾನುವಾರ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ ಸತ್ತವರ ಸಂಖ್ಯೆ 11 ಸಾವಿರವನ್ನು ದಾಟಿದೆ. ಸಾವಿರಾರು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹಾತೊರೆಯುತ್ತಿರುವ ಈ ಸಂದರ್ಭದಲ್ಲಿ ಜಗತ್ತು ಅವರಿಗೆ ನೆರವಿನ ಹಸ್ತವನ್ನು ಚಾಚುತ್ತಿವೆ.

ಟರ್ಕಿ ಮತ್ತು ಸಿರಿಯಾದಲ್ಲಿ ಮುಂಜಾನೆ ವೇಳೆ; ಜನರು ಗಾಢ ನಿದ್ರೆಯಲ್ಲಿದ್ದಾಗ ನಡುಕ ಸಂಭವಿಸಿತು ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗಿರುತ್ತದೆ ಎಂದು ವರದಿಗಳು ಹೇಳುತ್ತಿವೆ.

ಆದರೆ ಒಬ್ಬ ವ್ಯಕ್ತಿ ಮಾತ್ರ ಜಗತ್ತನ್ನು ಸಂಕಷ್ಟಕ್ಕೆ ದೂಡಿರುವ ಈ ಟರ್ಕಿ-ಸಿರಿಯಾ ಭೂಕಂಪದ ಬಗ್ಗೆ ಮೊದಲೇ ಮುನ್ಸೂಚನೆ ನೀಡಿ ಎಚ್ಚರಿಕೆಯನ್ನು ನೀಡಿದ್ದಾರೆ. ಈ ದುರಂತ ಘಟನೆಗೆ ನಡೆಯುವ ಮೂರು ದಿನಗಳ ಮೊದಲೇ ಫ್ರಾಂಕ್ ಹೂಗರ್‌ ಬೀಟ್ಸ್ ಎಂಬ ಡಚ್ ವಿಜ್ಞಾನಿ, ‘ಫೆಬ್ರವರಿ 3 ರಂದು, ದಕ್ಷಿಣ-ಮಧ್ಯ ಟರ್ಕಿ, ಜೋರ್ಡಾನ್, ಸಿರಿಯಾ ಮತ್ತು ಲೆಬನಾನ್‌ನಲ್ಲಿ ಈಗ ಅಥವಾ ಕೆಲವೇ ದಿನಗಳಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಲಿದೆ’ ಎಂದು ಹೇಳಿದ್ದರು.

ಅವರು ನೆದರ್ಲ್ಯಾಂಡ್ ನ ಸೌರವ್ಯೂಹದ ಆಕಾರದ ಸಂಶೋಧನಾ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಟರ್ಕಿ, ಸಿರಿಯಾ ನಂತರ ಅಫ್ಘಾನಿಸ್ತಾನದಲ್ಲಿ ಆರಂಭವಾಗುವ ಭೂಕಂಪವು ಪಾಕಿಸ್ತಾನ, ಭಾರತದ ಮೂಲಕ ಹಾದು ಹಿಂದೂ ಮಹಾಸಾಗರದಲ್ಲಿ ಕೊನೆಗೊಳ್ಳಲಿದೆ ಎಂದು ಡಚ್ ವಿಜ್ಞಾನಿ ಫ್ರಾಂಕ್ ಹೂಗರ್‌ ಬೀಟ್ಸ್ ಎಚ್ಚರಿಸಿದ್ದಾರೆ.

ಪಾಕಿಸ್ತಾನದ ರಾಜ್ಯ ಸಚಿವ ಇಬ್ರಾಹಿಂ, ಡಚ್ ವಿಜ್ಞಾನಿ ಫ್ರಾಂಕ್ ಹೂಗರ್‌ ಬೀಟ್ಸ್ ಮಾಡಿರುವ ಸಂಭಾಷಣೆಯ ವೀಡಿಯೋವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಪಾಕಿಸ್ತಾನ, ಭಾರತ ಮತ್ತು ಅಫ್ಘಾನಿಸ್ತಾನದಲ್ಲಿ ಭೂಕಂಪದ ಅಪಾಯವಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Earthquake To Strike India Very Soon? Dutch Researcher Frank Hoogerbeets, Who Predicted Earthquake in Turkey and Syria, Had Made Similar Predictions About India, Pakistan and Afghanistan (Watch Video)

A video of Frank Hoogerbeets is going viral in which he is seen predicting a large size earthquake originating in Afghanistan.