ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Kalaburagi Archives » Dynamic Leader
October 23, 2024
Home Posts tagged Kalaburagi
ರಾಜ್ಯ

ಕಲಬುರಗಿ: ಕಲಬುರಗಿ ತಾಲ್ಲೂಕಿನ‌ ಕವಲಗಿ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತ್ಸೋತ್ಸವವನ್ನು ಉದ್ಘಾಟಿಸಿ, ರಾಯಣ್ಣನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ಸ್ವಾತಂತ್ರ್ಯ ಸೇನಾನಿಗೆ ಪುಷ್ಪನಮನ ಸಲ್ಲಿಸಿದರು.

ತಿಂಥಣಿ ಕಾಗಿನೆಲೆ ಪೀಠದ ಜಗದ್ಗುರು ಸಿದ್ದರಾಮಾನಂದಪುರಿ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ, ಶಾಸಕರಾದ ಎಂ.ವೈ.ಪಾಟೀಲರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಚಿವರಾದ ಬೈರತಿ ಸುರೇಶ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು, ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

ರಾಜ್ಯ

ಕಲಬುರಗಿ:  ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಇಂದಿರಾ ಕ್ಯಾಂಟೀನನ್ನು ಮತ್ತೆ ತೆರೆದಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಬಡವರಿಗೆ, ವಿಧ್ಯಾರ್ಥಿಗಳಿಗೆ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ಬಡರೋಗಿಗಳಿಗೆ ಆಶಾ ಕಿರಣವಾಗಿದ್ದ ಇಂದಿರಾ ಕ್ಯಾಂಟೀನ್ ಗೆ ಬೀಗ ಜಡಿದಿದ್ದು ಸ್ಥಳೀಯರಲ್ಲಿ ಬೇಸರ ತಂದಿತ್ತು.

ಇದರ ವಿರುದ್ಧವಾಗಿ ವೆಲ್ಪೇರ್ ಪಾರ್ಟಿಯು ತೀವ್ರ ಸ್ವರೂಪದ ಹೋರಾಟ ಮಾಡಿದರ ಫಲವಾಗಿ, ಸರ್ಕಾರ ಮತ್ತು ಜಿಲ್ಲಾಡಳಿತವು ಇಂದಿರಾ ಕ್ಯಾಂಟೀನನ್ನು ಪುನರಾರಂಭಗೊಳಿಸಿದೆ. ಈ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಲಬುರಗಿ ಜಿಲ್ಲಾ ಶಾಖೆ ಕ್ರತಜ್ಞತೆ ಸಲ್ಲಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯ

ಕಲಬುರಗಿ: ಕಲಬುರಗಿಯ ಜನತೆಗೆ ಇಂದು ಸಂತಸದ ದಿನವಾಗಿದೆ. ಅವರ ಬಹುದಿನಗಳ ಕನಸು ಇಂದು ಈಡೇರಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ.

ತುರ್ತು ಚಿಕಿತ್ಸೆಗಾಗಿ ಅತ್ಯಾಧುನಿಕ ಸೌಲಭ್ಯವುಳ್ಳ ‘ಟ್ರಾಮಾ ಕೇರ್ ಸೆಂಟರ್’ ನಿರ್ಮಿಸಲಾಗಿದ್ದು ಇಂದು ಕಲಬುರಗಿ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಸೇರಿ ಉದ್ಘಾಟನೆ ನೆರವೇರಿಸಿದ್ದಾರೆ.

ಸುಸಜ್ಜಿತ ಕಟ್ಟಡ, ಅತ್ಯಾಧುನಿಕ ಸೌಲಭ್ಯಗಳು, ಪ್ರತ್ಯೇಕ OT ವ್ಯವಸ್ಥೆ, ಪ್ರತ್ಯೇಕ ಮಹಿಳಾ ವಾರ್ಡ್, ಆಧುನಿಕ CT & MRI ಸ್ಕ್ಯಾನಿಂಗ್ ಸೌಲಭ್ಯಗಳು, ಆಂಬುಲೆನ್ಸ್ ವ್ಯವಸ್ಥೆ ಹೊಂದಿರುವ ಈ ‘ಟ್ರಾಮಾ ಕೇರ್ ಸೆಂಟರ್’ ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ವರದಾನವಾಗಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ ಮತ್ತಿತರರು ಪಾಲ್ಗೊಂಡಿದ್ದರು.