ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Kangana Ranaut Archives » Dynamic Leader
October 23, 2024
Home Posts tagged Kangana Ranaut
ಸಿನಿಮಾ

ನವದೆಹಲಿ: ವಿವಾದಾತ್ಮಕ ಚಿತ್ರ ‘ಎಮರ್ಜೆನ್ಸಿ’ಗೆ ಸಂಬಂಧಿಸಿದಂತೆ ನಟಿ ಹಾಗೂ ಸಂಸದೆ ಕಂಗನಾ ರಣಾವತ್‌ಗೆ ಚಂಡೀಗಢ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಭಾರೀ ಕೋಲಾಹಲ ಉಂಟಾಗಿತ್ತು. ಆ ಇತಿಹಾಸವನ್ನು ಕೇಂದ್ರೀಕರಿಸಿ ಖ್ಯಾತ ನಟಿ ಕಂಗನಾ ರಣಾವತ್ ಎಮರ್ಜೆನ್ಸಿ (Emergency) ಎಂಬ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್ 6 ರಂದು ಘೋಷಿಸಲಾಗಿತ್ತು. ಆದರೆ, ಚಿತ್ರದಲ್ಲಿ ಸಿಖ್ ಸಮುದಾಯವನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂಬ ವಿವಾದದ ನಡುವೆ ಚಿತ್ರದ ಬಿಡುಗಡೆ ವಿಳಂಬವಾಗಿದೆ.

ಈ ಹಿನ್ನೆಲೆಯಲ್ಲಿ, ಸಿನಿಮಾ ಕಲಾವಿದರ ಸಂಘದ ಮಾಜಿ ಅಧ್ಯಕ್ಷ, ವಕೀಲ ರವೀಂದರ್ ಸಿಂಗ್ ಬಸ್ಸಿ (Ravinder Singh Bassi) ಚಿತ್ರದಲ್ಲಿ ಸಿಖ್ಖರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಲಾಗಿದೆ ಎಂದು ನ್ಯಾಯಲಯಕ್ಕೆ ಅರ್ಜಿ ಹಾಕಿದರು. ಚಿತ್ರದಲ್ಲಿ ಸಿಖ್ ಸಮುದಾಯದ ವಿರುದ್ಧ ಹಲವಾರು ಸುಳ್ಳು ಆರೋಪಗಳಿವೆ ಎಂದು ಆರೋಪಿಸಿ ರಣಾವತ್ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ವಕೀಲರು ಕೇಳಿಕೊಂಡರು. ಬಳಿಕ ಚಂಡೀಗಢ ನ್ಯಾಯಾಲಯವು ಕಂಗನಾ ರಣಾವತ್‌ಗೆ ನೋಟಿಸ್‌ ಜಾರಿ ಮಾಡಿದೆ. ನ್ಯಾಯಾಲಯವು ಡಿಸೆಂಬರ್ 5 ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದೆ.

ಏತನ್ಮಧ್ಯೆ, ‘ಇಂದು ಸೆನ್ಸಾರ್ ಮಂಡಳಿ ಅನಗತ್ಯ ವ್ಯವಸ್ಥೆಯಾಗಿದೆ. ಈ ಚಿತ್ರ ಥಿಯೇಟರ್‌ಗೆ ಬರಲು ನನ್ನ ವೈಯಕ್ತಿಕ ಸಂಪತ್ತನ್ನು ಪಣಕ್ಕಿಟ್ಟಿದ್ದೇನೆ. ಈಗ ಬಿಡುಗಡೆಯಾಗದ ಕಾರಣ ಆಸ್ತಿ ಮಾರಾಟ ಮಾಡಬೇಕಾಗಿದೆ’ ಎಂದು ಕಂಗನಾ ರಣಾವತ್‌ (Kangana Ranaut) ವಿಷಾದ ವ್ಯಕ್ತಪಡಿಸಿದ್ದಾರೆ.

ದೇಶ

“ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ; ನಮ್ಮ ಹಕ್ಕುಗಳಿಗಾಗಿ ನಾವು ನಿಲ್ಲಬೇಕು. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳದೆ ಮನೆಗೆ ಹಿಂತಿರುಗುವುದು ಬೇಡ” – ವಿನೇಶ್ ಫೋಗಟ್

ಹರಿಯಾಣದ ರೈತರು ಶಂಭು ಗ್ರಾಮದ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ 200 ದಿನಗಳನ್ನು ತಲುಪಿದ್ದು, ಇಂದು (ಶನಿವಾರ) ದೊಡ್ಡ ಪ್ರಮಾಣದ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ರೈತರೊಂದಿಗೆ ಸೇರಿಕೊಂಡಿದ್ದಾರೆ. “ನಿಮ್ಮ ಮಗಳು ನಿಮ್ಮೊಂದಿಗೆ ನಿಂತಿದ್ದಾಳೆ” ಎಂದು ಮಾತನಾಡಿ, ತಮ್ಮ ದೃಢವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಫೆಬ್ರವರಿ 13 ರಿಂದ ಹರಿಯಾಣ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತ್ರಿ ಸೇರಿದಂತೆ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ಆರಂಭಿಸಿದ್ದಾರೆ. ಹರಿಯಾಣದ ಗಡಿಭಾಗದ ಶಂಭು ಪ್ರದೇಶದಲ್ಲಿ ರೈತರು ದೆಹಲಿಗೆ ತೆರಳದಂತೆ ಅಧಿಕಾರಿಗಳು ತಡೆದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ರೈತರನ್ನು ಉದ್ದೇಶಿಸಿ ಮಾತನಾಡಿದ ವಿನೇಶ್ ಫೋಗಟ್, “ಕೃಷಿಕ ಕುಟುಂಬದಲ್ಲಿ ಹುಟ್ಟಿದ್ದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ನಾವು ನಿಲ್ಲಬೇಕು, ಯಾರೂ ನಮಗಾಗಿ ಬರುವುದಿಲ್ಲ. ನಮ್ಮ ಕೋರಿಕೆಗಳು ಈಡೇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳದೆ ಮನೆಗೆ ಹಿಂತಿರುಗುವುದು ಬೇಡ” ಎಂದು ಹೇಳಿದ್ದಾರೆ.

ಅಲ್ಲದೆ, “ರೈತರು ತಮ್ಮ ಹಕ್ಕುಗಳಿಗಾಗಿ ಬಹಳ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. 200 ದಿನ ಕಳೆದರೂ ಅವರ ಬೇಡಿಕೆ ಈಡೇರದಿರುವುದು ಬೇಸರದ ಸಂಗತಿಯಾಗಿದೆ. ಅವರು ತಮ್ಮ ಹಕ್ಕುಗಳಿಗೆ ಧ್ವನಿಗೂಡಿಸುವುದನ್ನು ನೋಡಿದಾಗ ನಾವು ಹೆಚ್ಚುವರಿ ಶಕ್ತಿಯನ್ನು ಪಡೆಯುತ್ತೇವೆ” ಎಂದೂ ಹೇಳಿದ್ದಾರೆ.

2021ರ ಮುಷ್ಕರವನ್ನು ದೂಷಿಸಿದ ಸಂಸದೆ ಕಂಗನಾ ರಣಾವತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಟ ನಿರತ ರೈತರು ಒತ್ತಾಯಿಸಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿಯನ್ನು ಆಗ್ರಹಿಸಿದ್ದಾರೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರಲು ರೈತರು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ರೈತರ ಚುನಾವಣಾ ತಂತ್ರಗಾರಿಕೆ ಬಗ್ಗೆ ಯಾವುದೆ ಸ್ಪಷ್ಟ ಅಭಿಪ್ರಾಯಗಳಿಲ್ಲ!

ದೇಶ

ಕೊಯಮತ್ತೂರು: ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದ ನಟಿ ಕಂಗನಾ ರಣಾವತ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇತ್ತೀಚೆಗೆ ದೆಹಲಿಗೆ ತೆರಳಲು ಚಂಡೀಗಢ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಕಂಗನಾ ರಣಾವತ್ ಕೆನ್ನೆಗೆ ಬಾರಿಸಿದ್ದರು.

ರೈತರ ಬಗ್ಗೆ ತಪ್ಪು ಹೇಳಿಕೆ ನೀಡಿದ್ದಕ್ಕಾಗಿ ಕಂಗನಾ ರಣಾವತ್ ಕೆನ್ನೆಗೆ ಬಾರಿಸಿದ್ದಾಗಿ ವಿಮಾನ ನಿಲ್ದಾಣದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಹೇಳಿದರು. ತರುವಾಯ, ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಈ ಕುರಿತು ಮಾತನಾಡಿದ ಕುಲ್ವಿಂದರ್ ಕೌರ್, “100 ರೂಪಾಯಿ ಪಡೆದುಕೊಂಡು ಮಹಿಳಾ ರೈತರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಣಾವತ್ ಹೇಳಿದ್ದಾರೆ. ಆ ಪ್ರತಿಭಟನೆಯಲ್ಲಿ ನನ್ನ ತಾಯಿ ಕೂಡ ಭಾಗವಹಿಸಿದ್ದರು” ಎಂದು ಅವರು ಹೇಳಿದರು. “ರೈತರನ್ನು ಅವಮಾನಿಸುವ ಕಂಗನಾ ರಣಾವತ್ ಪ್ರತಿಭಟನೆಯ ನೇತೃತ್ವ ವಹಿಸುತ್ತಾರೆಯೇ” ಎಂದು ಅವರು ಪ್ರಶ್ನಿಸಿದ್ದರು ಎಂಬುದು ಗಮನಾರ್ಹ.

ಈ ಹಿನ್ನೆಲೆಯಲ್ಲಿ, ತಮಿಳುನಾಡಿನ ತಂದೆ ಪೆರಿಯಾರ್ ದ್ರಾವಿಡರ್ ಕಳಗಂ ಪ್ರಧಾನ ಕಾರ್ಯದರ್ಶಿ ಕು.ರಾಮಕೃಷ್ಣನ್ ನಿನ್ನೆ ಮಾಧ್ಯಮದವರನ್ನು ಭೇಟಿಯಾದರು. ನಂತರ ಮಾತನಾಡಿದ ಅವರು, ರೈತರ ಬೆಂಬಲಕ್ಕೆ ನಿಂತ ಕುಲ್ವಿಂದರ್ ಕೌರ್ ಅವರನ್ನು ಶ್ಲಾಘಿಸಲು ಸೋಮವಾರ ಎಂಟು ಗ್ರಾಂ ಚಿನ್ನದ ಉಂಗುರವನ್ನು ಕಳುಹಿಸಲು ಯೋಜಿಸಲಾಗಿದೆ ಎಂದರು.

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಅವರ ತಾಯಿಯೂ ಇದ್ದಾರೆ ಆಗಾಗಿ ಕುಲ್ವಿಂದರ್ ಕೌರ್ ಮನೆ ವಿಳಾಸಕ್ಕೆ ಉಂಗುರವನ್ನು ಕಳುಹಿಸಲಿದ್ದೇವೆ ಎಂದು ಕು.ರಾಮಕೃಷ್ಣನ್ ಹೇಳಿದರು. ಕೊರಿಯರ್ ಸೇವೆಗಳು ಚಿನ್ನದ ಉಂಗುರವನ್ನು ಸ್ವೀಕರಿಸದಿದ್ದರೆ, ತಮ್ಮ ಸದಸ್ಯರಲ್ಲಿ ಒಬ್ಬರನ್ನು ರೈಲು ಅಥವಾ ವಿಮಾನದ ಮೂಲಕ ಅವರ ಮನೆಗೆ ಕಳುಹಿಸಿ, ಕೆಲವು ಪುಸ್ತಕಗಳೊಂದಿಗೆ ಪೆರಿಯಾರ್ ಅವರ ಮುಖವುಳ್ಳ ಉಂಗುರವನ್ನು ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದರು.