ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Kannada News Archives » Page 2 of 13 » Dynamic Leader
October 23, 2024
Home Posts tagged Kannada News (Page 2)
ಕ್ರೈಂ ರಿಪೋರ್ಟ್ಸ್ ದೇಶ

ಜುನಾಗಢ: ಜೂನ್ 14ರಂದು ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ಮಜೆವಾಡಿ ದರ್ವಾಜಾ ಬಳಿಯ ಮಸೀದಿಯೊಂದಕ್ಕೆ ಜಮೀನಿನ ಮಾಲೀಕತ್ವದ ಬಗ್ಗೆ ದಾಖಲೆಗಳನ್ನು ನೀಡುವಂತೆ ನೋಟಿಸ್ ನೀಡಿತ್ತು. ನೋಟಿಸ್‌ನಿಂದ ಕ್ಷೋಭೆಗೊಳಗಾದ ಸುಮಾರು 500-600 ಜನರು ಶುಕ್ರವಾರ ರಾತ್ರಿ ಧಾರ್ಮಿಕ ಕಟ್ಟಡದ ಬಳಿ ಜಮಾಯಿಸಿ ರಸ್ತೆಗಳನ್ನು ತಡೆದರು ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ತಿಳಿಸಿದ್ದಾರೆ.

ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ಸಲುವಾಗಿ, ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ನ ಕಾರ್ಯಚರಣೆಯನ್ನು ವಿರೋಧಿಸಿ, ಸ್ಥಳೀಯರ ಗುಂಪೊಂದು ಕಲ್ಲು ತೂರಾಟ ಮತ್ತು ವಾಹನಕ್ಕೆ ಬೆಂಕಿ ಹಚ್ಚಿದ ಕಾರಣ, ಉಂಟಾದ ಗಲಭೆಯಲ್ಲಿ ಗುಜರಾತಿನ ಜುನಾಗಢ ನಗರದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮತ್ತು ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದ ಮಜೆವಾಡಿ ದರ್ವಾಜಾ ಬಳಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ನಂತರ ಅಲ್ಲಿದ್ದ 174 ಜನರನ್ನು ಸುತ್ತುವರೆದು ಗಲಭೆ ನಡೆಯದಂತೆ ಎಚ್ಚರಿಕೆಯ ಕ್ರಮವನ್ನು ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ನಾಗರಿಕನ ಸಾವಿನ ಹಿಂದಿನ ನಿಖರವಾದ ಕಾರಣ ತಿಳಿದುಬರುತ್ತದೆ. ಆದರೆ, ಗುಂಪು ಎಸೆದ ಕಲ್ಲಿನಿಂದಲೇ ಆತ ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ಸ್ಥಳದಲ್ಲಿದ್ದ ಜುನಾಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರ ಸಿಬ್ಬಂದಿಗಳು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯ ಬಳಿಕ, ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರತಿಭಟನಾಕಾರರ ರಸ್ತೆ ತಡೆಯನ್ನು ತೆರವುಗೊಳಿಸಲಾಯಿತು. ಆದರೆ, ರಾತ್ರಿ 10.15ರ ಸುಮಾರಿಗೆ ಏಕಾ ಏಕಿ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಲಾಯಿತು ಎಂದು ಪೊಲೀಸರು ಹೇಳುತ್ತಾರೆ.

ಘೋಷಣೆಗಳನ್ನು ಕೂಗುತ್ತಾ, ದರ್ಗಾಗೆ ನೋಟಿಸ್ ನೀಡಿದ್ದಕ್ಕೆ ಆಕ್ರೋಶಗೊಂಡ ಕೆಲವರು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದರು. ಅಶಿಸ್ತಿನ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಲಾಠಿ ಚಾರ್ಜ್ ಮಾಡಿದರು. ಘಟನೆಯಲ್ಲಿ ಜುನಾಗಢ ಡಿವೈಎಸ್ಪಿ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

“ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಸಾವಿನ ಬಗ್ಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಪೊಲೀಸ್ ತಂಡಗಳ ಕೂಂಬಿಂಗ್ ಕಾರ್ಯಾಚರಣೆಯಲ್ಲಿ 174 ಜನರನ್ನು ಸುತ್ತುವರೆದು ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಘರ್ಷಣೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ಹೇಳಿದ್ದಾರೆ.

ಸಿನಿಮಾ

ಓಂ ರಾವತ್ ನಿರ್ದೇಶನದ ಆದಿಪುರುಷ ಸಿನಿಮಾ ರಾಮಾಯಣ ಕಥೆಯನ್ನಾಧರಿಸಿ ತೆರೆಕಂಡಿದೆ. ಇದರಲ್ಲಿ ರಾಮನಾಗಿ ಪ್ರಭಾಸ್, ರಾವಣನಾಗಿ ಸೈಫ್ ಅಲಿ ಖಾನ್ ಮತ್ತು ಸೀತೆಯಾಗಿ ಕೀರ್ತಿ ಸನನ್ ನಟಿಸಿದ್ದಾರೆ. ಅದ್ಧೂರಿ ಚಿತ್ರವನ್ನು ಡಿ ಸಿರೀಸ್ ಮತ್ತು ರೆಟ್ರೋ ಪೈಲ್ಸ್ ಜಂಟಿಯಾಗಿ ನಿರ್ಮಿಸಿವೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇತರ ಭಾಷೆಗಳಲ್ಲಿ 3ಡಿ ತಂತ್ರಜ್ಞಾನದಲ್ಲಿ ಆದಿಪುರುಷ ಚಿತ್ರ ನಿನ್ನೆ (ಜೂನ್ 16) ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ.

ಭಾರೀ ನಿರೀಕ್ಷೆಗಳ ನಡುವೆ ತೆರೆಕಂಡಿರುವ ಆದಿಪುರುಷ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಭಾಸ್ ಅಭಿಮಾನಿಗಳಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ, ಚಿತ್ರವಾಗಿ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂಬ ನೆಗೆಟಿವ್ ವಿಮರ್ಶೆಗಳೂ ಬಂದಿವೆ.

ಸುಮಾರು ರೂ.500 ಕೋಟಿ ಬಜೆಟ್ ನಲ್ಲಿ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದೊಂದಿಗೆ ತಯಾರಾಗಿರುವ ಚಿತ್ರದ ಅನಿಮೇಷನ್ ದೃಶ್ಯಗಳನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ. VFX ದೃಶ್ಯಗಳು ಇನ್ನೂ ಚೆನ್ನಾಗಿರಬಹುದಿತ್ತು ಎಂಬುದು ಹೆಚ್ಚಿನ ಅಭಿಮಾನಿಗಳ ಸಾಮಾನ್ಯ ಅಭಿಪ್ರಾಯವಾಗಿದೆ.

ಈ ಹಿನ್ನಲೆಯಲ್ಲಿ ಹಿಂದೂಸೇನಾ ಸಂಘಟನೆಯು ಆದಿಪುರುಷ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ರಾಮಾಯಣ ಕಥೆಯಾಧಾರಿತ ಆದಿಪುರುಷ ಸಿನಿಮಾದಲ್ಲಿ ವಿವಾದಾತ್ಮಕ ದೃಶ್ಯಗಳಿದ್ದು, ಅದನ್ನು ತೆಗೆಯಬೇಕು ಎಂದು ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರಾಮ, ರಾಮಾಯಣ, ಹಿಂದೂ ಸಂಸ್ಕೃತಿಯನ್ನು ಗೇಲಿ ಮಾಡಲಿಕ್ಕಾಗಿ ಆದಿಪುರುಷ ಸಿನಿಮಾ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಹಿಂದೆ, ಆದಿಪುರುಷ ಚಿತ್ರದಲ್ಲಿ, ಸೀತೆಯನ್ನು ಭಾರತದ ಮಗಳು ಎಂದು ಉಲ್ಲೇಖಿಸಿದ್ದಕ್ಕಾಗಿ ನೇಪಾಳದಲ್ಲಿ ತೀವ್ರ ಪ್ರತಿಭಟನೆಯನ್ನು ಹುಟ್ಟುಹಾಕಿತ್ತು. ರಾಮಾಯಣದ ಪ್ರಕಾರ ಸೀತೆ ನೇಪಾಳದಲ್ಲಿ ಜನಿಸಿದವಳು. ರಾಮ ಬಂದು ಸೀತೆಯನ್ನು ಮದುವೆಯಾಗುತ್ತಾರೆ.

ಇದಾದ ನಂತರ ನೇಪಾಳದ ಕಠ್ಮಂಡುವಿನ ಮೇಯರ್ ಬಲೇನ್ ಶಾ ಟ್ವೀಟ್ ಮಾಡಿ, “ಸೀತೆ ಭಾರತದ ಮಗಳು ಎಂಬ ವಿವಾದಾತ್ಮಕ ದೃಶ್ಯವನ್ನು ತೆಗೆದುಹಾಕದಿದ್ದರೆ ನೇಪಾಳದಲ್ಲಿ ಆದಿಪುರುಷ ಚಿತ್ರವನ್ನು ಬಿಡುಗಡೆ ಮಾಡುವುದಿಲ್ಲ” ಎಂದು ಹೇಳಿದ್ದಾರೆ. ಆ ನಂತರ ಆದಿಪುರುಷ ಚಿತ್ರತಂಡ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಆ ಸಂಭಾಷಣೆಯನ್ನು ತೆಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ದೇಶ

ಪಾಟ್ನಾ: ಪ್ರಸುದಾ ಪ್ರಿಯಾ ದೇವಿಯವರು ಬಿಹಾರದ ಚಪ್ರಾ ಪಕ್ಕದ ಶ್ಯಾಮಚಕ್‌ನವರು. ತುಂಬು ತಿಂಗಳ ಗರ್ಭಿಣಿಯಾಗಿದ್ದ ಪ್ರಸುದಾ ಪ್ರಿಯಾ ದೇವಿ ಅವರನ್ನು ಸಂಬಂಧಿಕರು ಆ ಪ್ರದೇಶದ ಖಾಸಗಿ ನರ್ಸಿಂಗ್ ಹೋಂಗೆ ದಾಖಲಿಸಿದ್ದರು. ಅಲ್ಲಿ ವೈದ್ಯರು ಅವರಿಗೆ ಹೆರಿಗೆ ಮಾಡಿದರು.

ಮಹಿಳೆ ಸುಂದರವಾದ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಆದರೆ, ಮಗುವನ್ನು ನೋಡಿದ ವೈದ್ಯರು ಆಶ್ಚರ್ಯಚಕಿತರಾದರು. ಕಾರಣ, ಆ ಮಗುವಿಗೆ 4 ಕಾಲುಗಳು, 4 ತೋಳುಗಳು, 4 ಕಿವಿಗಳು ಮತ್ತು 2 ಬೆನ್ನುಗಳಿದ್ದವು. ಅದೇ ರೀತಿ ಮಗುವಿನ ದೇಹವನ್ನು ಪರೀಕ್ಷಿಸಿದಾಗ ಮಗುವಿಗೆ 2 ಹೃದಯಗಳು ಇರುವುದು ಪತ್ತೆಯಾಗಿತು.

ಬಳಿಕ ವೈದ್ಯರು ಮಗುವನ್ನು ತೀವ್ರ ನಿಗಾ ಘಟಕಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹುಟ್ಟಿದ 20 ನಿಮಿಷದಲ್ಲಿ ಮಗು ದುರಂತ ಸಾವನ್ನಪ್ಪಿತು. ಈ ನಡುವೆ ಎರಡು ಹೃದಯ ಹಾಗೂ 4 ಕಾಲು ಹಾಗೂ ತೋಳುಗಳೊಂದಿಗೆ ಜನಿಸಿದ ಮಗುವಿನ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.

ಇದನ್ನು ನೋಡಿದ ಜನರು ಆ ಮಗು ದೇವರ ಮಗು ಅದನ್ನು ನೋಡಲೇಬೇಕು ಎಂದು ಸಾಮಾಜಿಕ ಜಾಲತಾನಗಳಲ್ಲಿ ಕಾಮೆಂಟ್ ಮಾಡಿದರು. ಈ ಮಾಹಿತಿ ವೈರಲ್ ಆದ ಬಳಿಕ ಮಗು ಜನಿಸಿದ ಆಸ್ಪತ್ರೆಯ ಮುಂದೆ ಭಾರೀ ಸಂಖ್ಯೆಯಲ್ಲಿ ಜನ ಸೇರಲು ಆರಂಭಿಸಿದರು. ಇದು ಅಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಬಳಿಕ ವೈದ್ಯರು ಮಗು ಸಾವನ್ನಪ್ಪಿರುವುದಾಗಿ ತಿಳಿಸಿದ್ದರಿಂದ ಜನ ಅಲ್ಲಿಂದ ಚದುರಿದರು.

Baby born with two hearts and eight limbs in bihar chhapra hailed as miracle child

ದೇಶ ವಿದೇಶ

ಕೊಲಂಬೊ: ಶ್ರೀಲಂಕಾದ ಸೇನಾ ವೈದ್ಯರ ತಂಡವೊಂದು, ವಿಶ್ವದ ಅತಿ ಭಾರವಾದ ಕಿಡ್ನಿ ಕಲ್ಲನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದು ಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. 2004ರಲ್ಲಿ ಭಾರತೀಯ ವೈದ್ಯರು ಹೊರತೆಗೆದ ಮೂತ್ರಪಿಂಡದ ಕಲ್ಲೇ ಅತಿ ದೊಡ್ಡದೆಂಬ ದಾಖಲೆ ಆಗಿತ್ತು. ಇದೀಗ ಆ ದಾಖಲೆ ಮುರಿದಿದೆ.

ಈ ತಿಂಗಳ ಆರಂಭದಲ್ಲಿ ಕೊಲಂಬೊ ಮಿಲಿಟರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಂದ ತೆಗೆಯಲಾಗಿದ್ದ ಕಲ್ಲು, 13.372 ಸೆಂ.ಮೀ ಉದ್ದ ಮತ್ತು 801 ಗ್ರಾಂ ತೂಕವಿತ್ತು ಎಂದು ಸೇನೆ ತಿಳಿಸಿದೆ. ಗಿನ್ನೆಸ್ ವಿಶ್ವ ದಾಖಲೆಗಳ ಪಟ್ಟಿಯಲ್ಲಿ, ಇದುವರೆಗೆ ತೆಗೆದ ಕಲ್ಲುಗಳಲ್ಲಿ, 2004ರಲ್ಲಿ ಭಾರತದಲ್ಲಿ ತೆಗೆದ 13 ಸೆಂ.ಮೀ ಉದ್ದದ ಕಲ್ಲೇ ದೊಡ್ಡದಾಗಿತ್ತು. ಅದೇ ರೀತಿ, 2008ರಲ್ಲಿ ಪಾಕಿಸ್ತಾನದಲ್ಲಿ ತೆಗೆದ 620 ಗ್ರಾಂ ಕಲ್ಲನ್ನು ಅತ್ಯಂತ ಭಾರವಾದ ಕಲ್ಲು ಎಂದು ಪಟ್ಟಿ ಮಾಡಲಾಗಿದೆ.

ಶ್ರೀಲಂಕಾದ ಪ್ರಸ್ತುತ ದಾಖಲೆಯನ್ನು ದೃಢಪಡಿಸಿರುವ ಗಿನ್ನೆಸ್ ವಿಶ್ವ ದಾಖಲೆ ಸಂಸ್ಥೆ, ಶ್ರೀಲಂಕಾದ ಕ್ಯಾನಿಸ್ಟಸ್ ಕೂಂಗೆಯವರ ಮೂತ್ರಪಿಂಡದಿಂದ 13.372 ಸೆಂಟಿಮೀಟರ್ (5.264 ಇಂಚು) ಅಳತೆಯ ಮೂತ್ರಪಿಂಡದ ಕಲ್ಲನ್ನು ಕಳೆದ 1ರಂದು ಹೊರತೆಗೆಯಲಾಗಿದೆ ಎಂದು ವರದಿ ಮಾಡಿದೆ. ಸೇನಾ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸುದರ್ಶನ್ ನೇತೃತ್ವದಲ್ಲಿ, ಡಾ.ಪತಿರತ್ನ ಹಾಗೂ ಡಾ.ತಮಶಾ ಪ್ರೇಮತಿಲಕ ಶಸ್ತ್ರ ಚಿಕಿತ್ಸೆ ನಡೆಸಿದ್ದರು.

SRI LANKAN ARMY DOCTORS REMOVE WORLD’S LARGEST KIDNEY STONE, SET WORLD RECORD
A group of Sri Lankan Army doctors have set a Guinness World Record by removing the world’s largest kidney stone, surpassing the previous record registered by Indian doctors in 2004. The stone, removed early this month at the Colombo Army Hospital, is 13.372 centimeters long and weighs 801 grams, a statement by the Army said on Tuesday.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಮಾಹಿತಿ ತಂತ್ರಜ್ಞಾನ ಬೆಳೆದಿರುವ ಇಂದಿನ ಯುಗದಲ್ಲಿ ನಮ್ಮ ಬಳಕೆಗಾಗಿ ಸೆಲ್ ಫೋನ್‌ಗಳಲ್ಲಿ ಡೌನ್ ಲೋಡ್ ಮಾಡಿಕೊಂಡು ಬಳಸಬಹುದಾದ ಹಲವು ‘ಆ್ಯಪ್ ’ಗಳು ಬಂದಿವೆ. ಆ ರೀತಿಯಲ್ಲಿ, ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲು ನಮಗೆ ಸಹಾಯ ಮಾಡುವುದು WhatsApp ಆಗಿದೆ.

ಈ ವಾಟ್ಸಾಪ್ ಗ್ರೂಪ್‌ಗಳಲ್ಲಿರುವ ಗುಂಪುಗಳ ಮೂಲಕ, ನಮ್ಮ ವೈಯಕ್ತಿಕ ಮಾಹಿತಿ ಮತ್ತು ಬ್ಯಾಂಕ್ ಖಾತೆಗಳನ್ನು ಕದ್ದು ನಮ್ಮ ಹಣವನ್ನು ಸುಲಿಗೆ ಮಾಡುತ್ತಿದ್ದಾರೆ. ವಾಟ್ಸಾಪ್ ಗುಂಪುಗಳಲ್ಲಿ, ಸೆಲ್ ಫೋನ್‌ನಲ್ಲಿ ‘ವಾಟ್ಸಾಪ್ ಪಿಂಕ್’ ಹೆಸರಿನಲ್ಲಿ ಹಸಿರು ಬಣ್ಣವನ್ನು ಗುಲಾಬಿ ಬಣ್ಣಕ್ಕೆ ತಿರುಗಿಸುವ ಲಿಂಕ್ ಅನ್ನು ಪ್ರಸಾರ ಮಾಡಲಾಗುತ್ತಿದೆ.

ಇದು ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುವ ಅಪಾಯಕಾರಿ ವೈರಸ್ ಆಗಿದೆ. ಮೊದಲು ವಾಟ್ಸಾಪ್ ಗುಂಪುಗಳಲ್ಲಿ ಗುಲಾಬಿ ಲಿಂಕ್ ಅನ್ನು ಕಳುಹಿಸಿ, ಡೌನ್‌ಲೋಡ್ ಮಾಡಲು ಲಿಂಕ್ ಅನ್ನು ಕ್ಲಿಕ್ ಮಾಡಲು ಹೇಳುತ್ತಾರೆ. ಡೌನ್‌ಲೋಡ್ ಮಾಡುವಾಗ ಲಿಂಕ್‌ನಲ್ಲಿ ಅಡಗಿರುವ ಅಪಾಯಕಾರಿ ವೈರಸ್, ಜೊತೆಯಲ್ಲೇ ಡೌನ್‌ಲೋಡ್ ಆಗುತ್ತದೆ.

ಒಮ್ಮೆ ಕ್ಲಿಕ್ ಮಾಡಿದರೆ, ಈ ವೈರಸ್ ತಕ್ಷಣವೇ ಮೊಬೈಲ್‌ನಲ್ಲಿ ಸಂಪೂರ್ಣವಾಗಿ ಹರಡುತ್ತದೆ ಮತ್ತು ವಾಟ್ಸಾಪ್ ಗ್ರೂಪ್‌ನಲ್ಲಿ ಪೋಸ್ಟ್ ಮಾಡುವ ವ್ಯಕ್ತಿ ಯಾವುದೇ ಗ್ರೂಪ್‌ನಲ್ಲಿದ್ದರೂ ಆ ಗುಂಪಿನಲ್ಲಿರುವ ವ್ಯಕ್ತಿಗೆ ಪಿಂಕ್ ವಾಟ್ಸಾಪ್ ಅಪ್‌ಡೇಟ್ ಎಂದು ಸ್ವಯಂಚಾಲಿತವಾಗಿ ತಿಳಿಸಲಾಗುತ್ತದೆ.

ಈ ಲಿಂಕ್ ಅನ್ನು ಯಾರಾದರೂ ಸ್ಪರ್ಶಿಸಿದರೆ, ಸಂಪೂರ್ಣ ವಾಟ್ಸಾಪ್ ಹ್ಯಾಕ್ ಆಗುತ್ತದೆ ಮತ್ತು ಬ್ಯಾಂಕ್ ಖಾತೆಯಿಂದ ಹಿಡಿದು ವೈಯಕ್ತಿಕ ಮಾಹಿತಿಯವರೆಗೂ ಕದಿಯಲಾಗುತ್ತದೆ. ಇದಲ್ಲದೇ ಫೋನ್‌ನಲ್ಲಿರುವ ಫೋಟೋ, ವಿಡಿಯೋ, ಫೋನ್ ನಂಬರ್ ಸೇರಿದಂತೆ ಹಲವು ಮಾಹಿತಿಗಳನ್ನು ಕದಿಯಲಾಗುತ್ತದೆ.

ಈ ವೈರಸ್ ಅನ್ನು ತಡೆಗಟ್ಟುವ ಮೊದಲ ಹಂತವೆಂದರೆ ಈ ಲಿಂಕ್ ಅನ್ನು ಯಾರೂ ಸ್ಪರ್ಶಿಸಬಾರದು. ತಕ್ಷಣವೇ ಲಿಂಕ್ ಅನ್ನು ತೆರವುಗೊಳಿಸುವುದು ಉತ್ತಮ ಕ್ರಮವಾಗಿರುತ್ತದೆ. ಯಾವುದೇ ಅಪ್ಲಿಕೇಶನ್ ಅನ್ನು Google Play Store ನಿಂದ ಮಾತ್ರ ಡೌನ್‌ಲೋಡ್ ಮಾಡಬೇಕು. ಯಾವುದೇ ಇತರ ಲಿಂಕ್‌ನಿಂದ ಡೌನ್‌ಲೋಡ್ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

WhatsApp ಪಿಂಕ್ ಅನ್ನು ತೊಡೆದುಹಾಕಲು ಮತ್ತು ಸುರಕ್ಷಿತವಾಗಿಡುವುದು ಹೇಗೆ?
ಹಂತ 1: ನೀವು ಮೊದಲು WhatsApp ಪಿಂಕ್ ಅನ್ನು ಅನ್‌ಇನ್‌ಸ್ಟಾಲ್ ಮಾಡಬೇಕಾಗುತ್ತದೆ. ಅದಕ್ಕೂ ಮೊದಲು, ನೀವು ಎಲ್ಲಾ Whatsapp ವೆಬ್ ಸಾಧನಗಳನ್ನು ಲಿಂಕ್ ಮಾಡಿದ್ದರೆ, ತಕ್ಷಣವೇ ಅವುಗಳನ್ನು ಅನ್‌ಲಿಂಕ್ ಮಾಡಿ.
ಹಂತ 2: ಸೆಟ್ಟಿಂಗ್‌ಗಳಿಂದ ಬ್ರೌಸರ್ ಸಂಗ್ರಹವನ್ನು ತೆರವುಗೊಳಿಸಿ. ಅದನ್ನು ಹೇಗೆ ಮಾಡಬೇಕೆಂದು ನಿಮಗೆ ತಿಳಿದಿಲ್ಲದಿದ್ದರೆ, ಎಂಬೆಡೆಡ್ ಲೇಖನವನ್ನು ಓದಿ.

WHATSAPP PINK SCAM: WHAT TO LOOK FOR AND HOW TO AVOID
Just a few days back, a WhatsApp forward made rounds on the messaging app, which asked users to download a pink version of the app. The message involves a link and suggests that you can use a new version of WhatsApp with new features. The name of the app is “WhatsApp Pink,” which turned out to be a malicious app.

HOW TO GET RID OF WHATSAPP PINK AND BE SAFE
Step 1: You first need to uninstall WhatsApp Pink. Before that, if you have linked all Whatsapp Web Devices, then unlink them immediately.
Step 2: Clear the browser cache from settings. In case you don’t know how to do that, then read the embedded article.

ದೇಶ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಸೆಂಥಿಲ್ ಬಾಲಾಜಿ ಮತ್ತು ಇತರರ ಮನೆಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಸೆಂಥಿಲ್ ಬಾಲಾಜಿಯನ್ನು ಬಂಧಿಸಿ, ಅವರನ್ನು ವಿಚಾರಣೆಗೆ ಕರೆದೊಯ್ದರು. ಆಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸೆಂಥಿಲ್ ಬಾಲಾಜಿ ತಮಿಳುನಾಡು ಇಂಧನ ಸಚಿವರಾಗಿದ್ದಾರೆ. ಅವರು ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಆಗ 81 ಮಂದಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ, 1.62 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಈ ವಿಚಾರದಲ್ಲಿ ನಡೆದ ಅಕ್ರಮ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸೆಂಥಿಲಬಾಲಾಜಿ, ಅವರ ಸಹೋದರನ ಮನೆ ಹಾಗೂ ಅವರ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾನೂನುಬಾಹಿರ ಹಣ ವರ್ಗಾವಣೆ ನಿಷೇಧ ಕಾಯಿದೆ ಅಡಿಯಲ್ಲಿ ಇಡಿ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಶಸ್ತ್ರ ಅರೆಸೇನಾ ಪಡೆಗಳ ರಕ್ಷಣೆಯೊಂದಿಗೆ ಚೆನ್ನೈ ಗ್ರೀನ್‌ವೇಸ್ ರಸ್ತೆಯಲ್ಲಿರುವ ಸಚಿವ ಸೆಂಥಿಲ್ ಬಾಲಾಜಿ ಅವರ ಬಂಗಲೆ ಮತ್ತು ಮಂದೈವೆಳಿ ಬಿಷಪ್ ಗಾರ್ಡನ್ ಪ್ರದೇಶದಲ್ಲಿರುವ ಅವರ ಸಹೋದರ ಅಶೋಕ್ ಕುಮಾರ್ ಮನೆಯಲ್ಲಿ ಇಡಿ ಅಧಿಕಾರಿಗಳು ನಿನ್ನೆ ಬೆಳಿಗ್ಗೆ 8:30ಕ್ಕೆ ತನಿಖೆ ಪ್ರಾರಂಭಿಸಿ, ಮಧ್ಯರಾತ್ರಿ 1:30ಕ್ಕೆ ಪೂರ್ಣಗೊಳಿಸಿದರು.

ನಂತರ ಮಧ್ಯರಾತ್ರಿ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿ, ವಿಚಾರಣೆಗಾಗಿ ನುಂಗಮ್ ಪಾಕ್ಕಂನಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದರು. ಆಗ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು ಎನ್ನಲಾಗಿದೆ. ನಂತರ ಅವರನ್ನು ಓಮಂದೂರಾರ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ವೈದ್ಯರು ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ.

ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವಿಷಯ ತಿಳಿದು, ಸಚಿವರಾದ ಎಂ.ಸುಬ್ರಮಣಿಯನ್, ಎ.ವಿ.ವೇಲು, ಶೇಖರ್ ಬಾಬು, ಮತ್ತು ಉದಯನಿಧಿ ಸ್ಟಾಲಿನ್ ಮುಂತಾದವರು ಯೋಗಕ್ಷೇಮ ವಿಚಾರಿಸಲಿಕ್ಕಾಗಿ, ಓಮಂದೂರಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

‘ಸೆಂಥಿಲ್ ಬಾಲಾಜಿ ಬಂಧನದ ಬಗ್ಗೆ ಸಂಬಂಧಿಕರಿಗೂ ಮಾಹಿತಿ ನೀಡಿಲ್ಲ. ಅವರನ್ನು ಯಾವ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂಬುದೂ ತಿಳಿದುಬಂದಿಲ್ಲ. ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಗೊತ್ತಿಲ್ಲ. ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇದು ಸಂಪೂರ್ಣ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

TAMILNADU MINISTER V.SENTHIL BALAJI ARRESTED IN MONEY LAUNDERING CASE 
The Enforcement Directorate arrested Tamil Nadu Electricity Minister V. Senthil Balaji in a money-laundering case on Wednesday early morning. The arrest came after an 18-hour questioning at Senthilbalaji’s residence in Chennai, according to a report by The Hindu.

ವಿದೇಶ

ಭಾರತ್ ಜೋಡೋ ಪಯಣ ಮುಗಿಸಿದರೂ ರಾಹುಲ್ ಪಯಣ ವಿಶ್ರಮಿಸಲಿಲ್ಲ. ಕೆಲವು ವಾರಗಳ ಹಿಂದೆ ಅವರು ದೆಹಲಿ-ಚಂಡೀಗಢದಲ್ಲಿ ರಾತ್ರಿ ಸರಕು ಟ್ರಕ್‌ನಲ್ಲಿ ಪ್ರಯಾಣಿಸಿ, ಚಾಲಕನ ಕಷ್ಟದ ಬಗ್ಗೆ ಕೇಳಿದ್ದರು. ಪ್ರಸ್ತುತ ಅವರು ಅಮೆರಿಕಾದ ವಾಷಿಂಗ್ಟನ್‌ನಿಂದ ನ್ಯೂಯಾರ್ಕ್‌ಗೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದಾರೆ. ಆ ವಿಡಿಯೋ ಈಗ ವೈರಲ್ ಆಗಿದೆ.

ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಅದರ ಒಂದು ಭಾಗವಾಗಿ, ವಾಷಿಂಗ್ಟನ್‌ನಿಂದ ನ್ಯೂಯಾರ್ಕ್ ನಗರಕ್ಕೆ ‘ಅಮೆರಿಕನ್ ಟ್ರಕ್ ಯಾತ್ರಾ’ ಹೆಸರಿನಲ್ಲಿ 190 ಕಿಲೋ ಮೀಟರ್, ಭಾರತೀಯರೊಬ್ಬರು ಚಾಲಕಾರಾಗಿರುವ ಅತ್ಯಾಧುನಿಕ ಟ್ರಕ್‌ನಲ್ಲಿ ಪ್ರಯಾಣಿಸಿದ್ದಾರೆ.

“ಸಮುದಾಯದಲ್ಲಿನ ವೈವಿಧ್ಯಮಯ ಜನರ ಧ್ವನಿಗಳನ್ನು ಕೇಳುವ ಪ್ರಯಾಣವು ಅಮೆರಿಕಾದಲ್ಲೂ ಮುಂದುವರೆದಿದೆ. ಭಾರತದ ದೆಹಲಿಯಿಂದ ಚಂಡೀಗಢಕ್ಕೆ ಹೋದ ನನ್ನ ಟ್ರಕ್ ಪ್ರಯಾಣದಂತೆ, ಈ ಬಾರಿ ಅಮೆರಿಕಾದಲ್ಲಿರುವ ಭಾರತೀಯ ಮೂಲದ ಟ್ರಕ್ ಡ್ರೈವರ್‌ಗಳ ದೈನಂದಿನ ಜೀವನವನ್ನು ನಾನು ತಿಳಿದುಕೊಂಡೆ.

ಅವರೊಂದಿಗಿನ ಸಂಭಾಷಣೆ ಹೃದಯಸ್ಪರ್ಶಿಯಾಗಿತ್ತು. ಚಾಲಕನ ಸೌಕರ್ಯಗಳಿಗೆ ಒತ್ತು ನೀಡುವ ವ್ಯವಸ್ಥೆ, ಅವರು ಗಳಿಸುವ ನ್ಯಾಯಯುತ ವೇತನವನ್ನು ನೋಡಿ ನನಗೆ ಸಂತೋಷವಾಯಿತು. ಭಾರತದಲ್ಲಿ ಕಷ್ಟಪಟ್ಟು ಕೆಲಸ ಮಾಡುವ ಟ್ರಕ್ ಚಾಲಕರು ಸಹ ಯೋಗ್ಯವಾದ ಜೀವನಕ್ಕೆ ಅರ್ಹರಾಗಿದ್ದಾರೆ. ಅವರನ್ನು ಮುಂದೆ ಕೊಂಡೊಯ್ಯುವ ಯೋಜನೆ, ನಮ್ಮ ಇಡೀ ದೇಶದ ಆರ್ಥಿಕತೆಯ ಮೇಲೆ ಧನಾತ್ಮಕವಾದ ಶ್ರೇಣೀಕೃತ ಪರಿಣಾಮವನ್ನು ಬೀರುತ್ತದೆ” ಎಂದು ಹೇಳಿದ್ದಾರೆ.

ಟ್ರಕ್ ಚಾಲಕನೊಂದಿಗೆ ಮಾತನಾಡುತ್ತಲೇ ಸಾಗಿದ ರಾಹುಲ್ ಗಾಂಧಿಯೊಂದಿಗೆ ಮಾತನಾಡಿದ ಆ ಚಾಲಕ, “ಇಲ್ಲಿ ನನಗೆ ಮಾಸಿಕ ರೂ.6 ರಿಂದ 8 ಲಕ್ಷದವರೆಗೆ ವೇತನ ಸಿಗುತ್ತಿದೆ; ನಾನು ಸ್ವಂತವಾಗಿ ಟ್ರಕ್ ಹೊಂದಿದ್ದೇನೆ” ಎಂದು ಹೇಳಿದರು. “ಭಾರತದಲ್ಲಿ ಟ್ರಕ್ ಮಾಲೀಕರು ಬೇರೆಯವರಾಗಿರುತ್ತಾರೆ; ಚಾಲಕರೇ ಬೇರೆಯಾಗಿರುತ್ತಾರೆ. ಚಾಲಕರು ಅತೀ ಬಡವರಾಗಿರುತ್ತಾರೆ. ಅವರು ಆಸ್ತಿ ಇಲ್ಲದೆ ಸಾಲ ಪಡೆಯಲು ಸಾಧ್ಯವಿಲ್ಲ. ಅನೇಕ ಜನರು ಅಲ್ಲಿ ಆಸ್ತಿ ಹೊಂದಿರುವುದಿಲ್ಲ. ಹಾಗಾಗಿ ಅವರು ಚಾಲಕರಾಗಿ ಮುಂದುವರಿಯುತ್ತಾರೆ. ಭಾರತದಲ್ಲಿರುವಂತೆ ಆರ್‌ಟಿಒ ಕಿರುಕುಳ ಇಲ್ಲಿ ಇರುವುದಿಲ್ಲ” ಎಂದು ಹೇಳಿದರು. Rahul Gandhi takes truck ride from Washington to New York

ಸಿನಿಮಾ

ವರದಿ: ಅರುಣ್ ಜಿ.,

ಮತ್ತೆ ಶುರು ಡಾ.ರಾಜ್ ಕಪ್! ದುಬೈನಲ್ಲಿ ನಡೆಯಲಿದೆ ರಾಜ್ ಕಪ್ ಸೀಸನ್-6 ಹರಾಜು ಪ್ರಕ್ರಿಯೆ; ವಿಶೇಷ ಅತಿಥಿಯಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗಿ!

ಸ್ಯಾಂಡಲ್ ವುಡ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ ಶುರುವಾಗ್ತಿದೆ. ಸಿಸಿಎಲ್ ಕ್ರಿಕೆಟ್ ಲೀಗ್ ಬೆನ್ನಲ್ಲೀಗ ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಇದೇ ಜೂನ್ 17 ರಂದು ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಆಯೋಜರಾದ ರಾಜೇಶ್ ಬ್ರಹ್ಮಾವರ, ಅನಿರುದ್, ಮಣಿಕಾಂತ್ ಕದ್ರಿ, ಸಿಂಪಲ್ ಸುನಿ, ರವಿಶಂಕರ್ ಗೌಡ, ಜೇಮ್ಸ್ ಚೇತನ್, ಪವನ್ ಒಡೆಯರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. 

ರಾಜ್ ಕಪ್ ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, “ಇದೇ 17ಕ್ಕೆ ದುಬೈನಲ್ಲಿ ರಾಜ್ ಕಪ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಕಳೆದ ಬಾರಿ 8 ತಂಡ ಇತ್ತು. ಈ ಬಾರಿ 12 ತಂಡಗಳಾಗಿವೆ.  1000ಕ್ಕೂ ಹೆಚ್ಚು ಅಪ್ಲೀಕೇಷನ್ ಬಂದಿತ್ತು. ಅವುಗಳಲ್ಲಿ ರೂಲ್ಸ್ ಗೆ ತಕ್ಕಂತೆ ಆಯ್ಕೆ ಮಾಡಲಾಗಿದೆ. 12 ತಂಡಗಳಿಗೆ 12 ಕ್ಯಾಪ್ಟನ್, 12 ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ. ರಾಜ್ ಕಪ್ ಸೀಸನ್ 6ನ್ನು ಆರು ದೇಶಗಳಲ್ಲಿ ಮಾಡುವ ಪ್ಲಾನ್ ನಡೆದಿದೆ. ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ. ದುಬೈನಲ್ಲಿ ನಡೆಯುವ ಆಟಗಾರರ ಹರಾಜಿನಲ್ಲಿ ಮುಖ್ಯ ಅತಿಥಿಯಾಗಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು. 

ನಟ ಅನಿರುದ್ಧ್ ಮಾತನಾಡಿ, “ಡಾ.ರಾಜ್ ಕಪ್ ಹೆಸರಲ್ಲೇ ಸಕಾರಾತ್ಮಕತೆ ಇದೆ. ಆ ಒಂದು ವ್ಯಕ್ತಿಗೆ ಮಹಾನ್ ಕಲಾವಿದರಿಗೆ ಅವರ ಹೆಸರಲ್ಲಿ ಅವರ ಸ್ಮಾರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಆಡುತ್ತಿರುವುದು ನಿಜಕ್ಕೂ ಸಂತೋಷ. ಅದರಲ್ಲಿ ನಾನೂ ಭಾಗಿಯಾಗಿದ್ದು, ರಾಜೇಶ್ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನನಗೆ ವೈಯಕ್ತಿಕವಾಗಿ ಬಹಳ ಸಂತೋಷವಾಗಿದೆ. ರಾಜೇಶ್ ನನಗೆ ಆತ್ಮೀಯರು. ನನ್ನ ಮೊದಲ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ. ಕ್ರಿಕೆಟ್ ಅನ್ನೋದು ನಿಮಿತ್ತ ಅಷ್ಟೇ. ಕನ್ನಡ ಚಿತ್ರರಂಗಲ್ಲಿ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ; ನಮ್ಮಲ್ಲಿ ಬಾಂಧವ್ಯ ಇದೆ ಅನ್ನೋದನ್ನು ತೋರಿಸಿಕೊಡುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲಿ ಎಂದರು. 

ಡಾ.ರಾಜ್ ಕಪ್ ಸೀಸನ್ 6ರಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಮ್ಯಾಚ್‌ಗಳು ನಡೆಯಲಿದೆ.  ಡಾಲಿ ಧನಂಜಯ್, ಅನಿರುದ್, ಡಾರ್ಲಿಂಗ್ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಾಲ್ಗೊಳ್ಳಲಿವೆ. ಇನ್ನು, ರಾಜ್ ಕಪ್ ಸೀಸನ್ 6ರ ಲೀಗ್ ಮ್ಯಾಚ್‌ಗಳು ವಿದೇಶದಲ್ಲಿ ನಡೆಯಲಿದೆ. ಈ ಬಾರಿ ಲೀಗ್ ಪಂದ್ಯಗಳು ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ ಬ್ಯಾಂಕಾಕ್ ಮತ್ತು ದುಬೈನಲ್ಲಿ ನಡೆಯಲಿವೆ. ಈ ಮಹತ್ವದ ರಾಜ್ ಕಫ್ ಟೂರ್ನಿಗಾಗಿ ಸ್ಯಾಂಡಲ್ ವುಡ್ ತಾರೆಯರು, ತಂತ್ರಜ್ಞರ, ರಾಜಕೀಯ, ಮಾಧ್ಯಮದವರು ಭಾಗಿಯಾಗಲಿದ್ದಾರೆ.

ಶಿಕ್ಷಣ

ಮೆಟ್ರಿಕ್‌ ನಂತರದ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಪರೀಕ್ಷೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗಸ್ಟ್‌ 31 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆದ್ದರಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸಕಾಲದಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಿ.   

ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ: https://sw.kar.nic.in/swprizemoney/Home.aspx?ReturnUrl=%2Fswprizemoney%2F

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿದ್ದ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ 2020ರಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಈ ಹೋರಾಟ ಭಾರತವನ್ನು ಸ್ಥಬ್ದಗೊಳಿಸಿತ್ತು. ಅದರಲ್ಲೂ ದೆಹಲಿಯ ಗಡಿಗೆ ಹೊಂದಿಕೊಂಡಿರುವ ಸಿಂಘು, ಟಿಕ್ರಿ ಮತ್ತು ಗಾಜಿಪುರ ಪ್ರದೇಶಗಳಲ್ಲಿ ಪಂಜಾಬ್, ಹರಿಯಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳ ರೈತರು ಕೊರೊನಾ ವೈರಸ್ ಹರಡುವಿಕೆಯ ನಡುವೆಯೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ಟ್ರಾಕ್ಟರ್ ರ‍್ಯಾಲಿ, ಚಕ್ಕಾ ಜಾಮ್ ಮತ್ತು ರಸ್ತೆ ತಡೆಗಳಂತಹ ಹಲವಾರು ಹಂತಗಳ ಪ್ರತಿಭಟನೆಗಳನ್ನು ನಡೆಸಿದರೂ ಕೇಂದ್ರ ಸರ್ಕಾರ ರೈತರ ನ್ಯಾಯಸಮ್ಮತ ಬೇಡಿಕೆಗಳನ್ನು ನಿರ್ಲಕ್ಷಿಸಿ ವಂಚಿಸುತ್ತಾ ಬಂದಿತು. ಮತ್ತು ಬಿಜೆಪಿ ಬೆಂಬಲಿಗರು ಅವರ ವಿರುದ್ಧ ಮಾನಹಾನಿ ಹರಡಲು ಹಲವು ಪ್ರಯತ್ನಗಳನ್ನು ಮಾಡಿದರು. ಸರಣಿ ಪ್ರತಿಭಟನೆಗಳ ಪರಿಣಾಮದಿಂದ ಮಣಿದ ಕೇಂದ್ರ ಸರ್ಕಾರ ಅಂತಿಮವಾಗಿ ರೈತ ವಿರೋಧಿ ಕಾಯ್ದೆಯನ್ನು ಹಿಂತೆಗೆದುಕೊಂಡಿತು.

ಅದೇ ಸಮಯದಲ್ಲಿ, ಮೋದಿಯವರ ಆಡಳಿತ ದೌರ್ಜನ್ಯವನ್ನು ಟೀಕಿಸಿದ ಅನೇಕ ಪತ್ರಕರ್ತರನ್ನು ಬಿಜೆಪಿ ಸರ್ಕಾರ ಬೆದರಿಸುತ್ತಲೇ ಬಂದಿತು. ಮತ್ತು ಕೇಂದ್ರ ಸರ್ಕಾರದಿಂದ ಕೆಲವು ಪತ್ರಕರ್ತರನ್ನು ಜೈಲಿಗಟ್ಟುವ ಕ್ರೌರ್ಯವೂ ನಡೆಯಿತು.

ಈ ಹಿನ್ನಲೆಯಲ್ಲಿ ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡಾರ್ಸಿ ಅವರು, ‘ರೈತರ ಪ್ರತಿಭಟನೆಯ ಸುದ್ದಿ ನೀಡುವ ಖಾತೆಗಳನ್ನು ಮತ್ತು ಸರ್ಕಾರವನ್ನು ಟೀಕಿಸುವ ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಭಾರತ ಸರ್ಕಾರ ಕೇಳಿತು’ ಎಂಬ ಆಘಾತಕಾರಿ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘2020-21ರ ರೈತರ ಪ್ರತಿಭಟನೆಯ ಖಾತೆಗಳನ್ನು ನಿರ್ಬಂಧಿಸಲು, ಭಾರತ ಸರ್ಕಾರದಿಂದ ಅನೇಕ ವಿನಂತಿಗಳು ಬಂದವು ಮತ್ತು ಸರ್ಕಾರವನ್ನು ಟೀಕಿಸುವ ಪತ್ರಕರ್ತರ ಖಾತೆಗಳನ್ನು ನಿರ್ಬಂಧಿಸುವಂತೆಯೂ ಭಾರತ ಸರ್ಕಾರ ಕೇಳಿತು’ ಎಂದು ಹೇಳಿದ್ದಾರೆ.

“ಅಲ್ಲದೆ, ಬೃಹತ್ ಮಾರುಕಟ್ಟೆಯಾಗಿರುವ ಭಾರತದಲ್ಲಿ ಟ್ವಿಟರ್ ಕಂಪನಿಯನ್ನು ಮುಚ್ಚುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು ಮತ್ತು ಖಾತೆಗಳನ್ನು ಬ್ಲಾಕ್ ಮಾಡದಿದ್ದರೆ ಟ್ವಿಟರ್ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ನಡೆಸುವುದಾಗಿ ಅವರು ಹೇಳಿದರು . ಅವರು ಹೇಳಿದಂತೆ ದಾಳಿ ನಡೆಸಲಾಗಿತ್ತು. ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಇದು ನಡೆಯುತ್ತಿದೆ” ಎಂದು ನೋವಿನಿಂದ ಹೇಳಿದ್ದಾರೆ. ಅವರ ಈ ಹೇಳಿಕೆ ಅಘಾತಕಾರಿಯಾಗಿದೆ.