ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Kannada News Archives » Page 7 of 13 » Dynamic Leader
October 23, 2024
Home Posts tagged Kannada News (Page 7)
ರಾಜಕೀಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗವು ಇಂದು ಭೇಟಿಮಾಡಿ, ಸಮಾಲೋಚನೆ ನಡೆಸಿತು. ನಿಯೋಗದ ಪರವಾಗಿ ಮಡಿಕೇರಿ ವಿವಿಯ ಪ್ರೊ.ಅಶೋಕ್ ಆಲೂರು, ಕೊಪ್ಪಳ ವಿವಿಯ ಡಾ.ಬಿ.ಕೆ.ರವಿ, ಬಾಗಲಕೋಟೆ ವಿವಿಯ ಪ್ರೊ.ದೇಶಪಾಂಡೆ, ಹಾವೇರಿ ವಿವಿಯ ಡಾ.ಜಂಗಮಶೆಟ್ಟಿ, ಬೀದರ್ ವಿವಿಯ ಪ್ರೊ.ಬಿರಾದಾರ್, ಹಾಸನ ವಿವಿಯ ಪ್ರೊ.ತಾರಾನಾಥ್, ಚಾಮರಾಜನಗರ ವಿವಿಯ ಕುಲಪತಿ ಪ್ರೊ.ಗಂಗಾಧರ್ ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಸಾಮಾಜಿಕ ಮೌಲ್ಯ, ಸಾಮಾಜಿಕ ನ್ಯಾಯಕ್ಕಾಗಿ ವಿಶ್ವವಿದ್ಯಾಲಯಗಳು ತುಡಿಯಬೇಕು. ದೇಶದ ಭವಿಷ್ಯವನ್ನು ಹೆಚ್ಚು ವೈಜ್ಞಾನಿಕವಾಗಿ ರೂಪಿಸುವ ಶಕ್ತಿ ವಿಶ್ವವಿದ್ಯಾಲಯಗಳಿಗೆ ಇದೆ. ಆದರೆ, ತಮ್ಮ ನಿಜವಾದ ಉದ್ದೇಶಗಳಿಂದ ವಿಶ್ವವಿದ್ಯಾಲಯಗಳು ವಿಮುಖವಾಗಿ ಪ್ರತಿಗಾಮಿ ಆದರೆ ವಿದ್ಯಾರ್ಥಿಗಳ ಮತ್ತು ದೇಶದ ಭವಿಷ್ಯವೂ ಕರಾಳ ಆಗುತ್ತದೆ. ನಮ್ಮ ಸರ್ಕಾರ ಉನ್ನತ ಶಿಕ್ಷಣವನ್ನು ವೈಜ್ಞಾನಿಕ ತಳಹದಿಯಲ್ಲಿ ಬಲಪಡಿಸಲು ಬದ್ಧವಾಗಿದೆ. ಇದಕ್ಕೆ ಹೊರತಾದದ್ದನ್ನು ನಾವು ಒಪ್ಪಿಕೊಳ್ಳುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಲಪತಿಗಳ ನಿಯೋಗಕ್ಕೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿನಿಮಾ

ವರದಿ: ಅರುಣ್ ಜಿ.,

ತಮಿಳು ಚಿತ್ರರಂಗದ ಖ್ಯಾತ ನಟ ರಜನಿಕಾಂತ್ ನಟಿಸಿದ ಎಂಧಿರನ್ ಚಿತ್ರವು 2010ರಲ್ಲಿ ಬಿಡುಗಡೆಯಾಯಿತು. ಶಂಕರ್ ನಿರ್ದೇಶನದ ಈ ಚಿತ್ರದಲ್ಲಿ ಐಶ್ವರ್ಯ ರೈ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ, ಸಂತಾನಂ, ಕರುಣಾಸ್, ದೇವ ದರ್ಶಿನಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಎ.ಆರ್.ರಹಮಾನ್ ಸಂಗೀತ ನೀಡಿದ್ದಾರೆ.

ಚಿತ್ರದಲ್ಲಿ ರಜನಿ ವಶೀಕರನ್ ಎಂಬ ವಿಜ್ಞಾನಿ ಮತ್ತು ಚಿಟ್ಟಿ ಎಂಬ ರೋಬೋಟ್ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರದಲ್ಲಿನ ಗ್ರಾಫಿಕ್ ದೃಶ್ಯಗಳು ಚಿತ್ರಕ್ಕೆ ಬಲವನ್ನು ತಂದು ದೊಡ್ಡ ಯಶಸ್ಸನ್ನು ನೀಡಿತು. ಅಲ್ಲದೆ ಎಂಧಿರನ್ ಚಿತ್ರವು 2010ರಲ್ಲಿ ಬಿಡುಗಡೆಯಾದ ಚಿತ್ರಗಳ ದಾಖಲೆಯನ್ನು ಮುರಿದಿದೆ.

ಈ ಹಿನ್ನಲೆಯಲ್ಲಿ ಎಂಧಿರನ್ ಸಿನಿಮಾ ಹೊಸ ಹೊಳಪಿನೊಂದಿಗೆ ರಿ-ರಿಲೀಸ್ ಆಗಲಿದೆ. ಅಂದರೆ, ಮೊದಲ ಬಾರಿಗೆ ಡಿಜಿಟಲ್ ರಿಮಾಸ್ಟರ್ ಮಾಡಿ, 4k ಅಲ್ಟ್ರಾ HD ಗುಣಮಟ್ಟದಲ್ಲಿ, ಡಾಲ್ಬಿ ಅಟ್ಮಾಸ್ ಮತ್ತು ಡಾಲ್ಬಿ ವಿಷನ್‌ನಲ್ಲಿ ಅದ್ಧೂರಿಯಾಗಿ ಸಿದ್ಧಪಡಿಸಲಾಗಿದೆ. ಚಿತ್ರವು ಜೂನ್ 9 ರಂದು ಸನ್ ನೆಕ್ಸ್ಟ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ.

ಇದುವರೆಗೆ ಹಲವು ನಟರ ಚಿತ್ರಗಳು ಹೊಸ ಹೊಳಪಿನೊಂದಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ಹಿನ್ನಲೆಯಲ್ಲಿ, ಎಂಧಿರನ್ ಚಿತ್ರವು ಮೊದಲ ಬಾರಿಗೆ OTT ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂಬುದು ಗಮನಾರ್ಹ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಸಿಸಿಬಿ ಕಾರ್ಯಚರಣೆ, ತಮಿಳುನಾಡು ಮೂಲದ ಇಬ್ಬರು ಬಂಧನ. ಕೋಟ್ಯಾಂತರ ಬೆಲೆಬಾಳುವ 6.5 ಕೆಜಿ ತೂಕದ ನಿಷೇಧಿತ ಅಂಬರ್ ಗ್ರೀಸ್ ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ದಿನಾಂಕ: 30-05-2023 ರಂದು ತಮಿಳುನಾಡು ರಾಜ್ಯದಿಂದ ಬೆಂಗಳೂರಿಗೆ ಬಂದು, ಕಾನೂನು ಬಾಹೀರವಾಗಿ ಸುಮಾರು 6.5 ಕೆಜಿ ತೂಕದ ನಿಷೇಧಿತ ಅಂಬರ್ ಗ್ರೀಸ್ ವಸ್ತುವನ್ನು, ಕೋಟ್ಯಾಂತರ ರೂಪಾಯಿ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಇಬ್ಬರು ಆಸಾಮಿಗಳನ್ನು ಬಂಧಿಸಿ ಕೋಟ್ಯಾಂತರ ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಈ ಆರೋಪಿಗಳ ವಿರುದ್ಧ ಬೆಂಗಳೂರು ನಗರ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಸಿಸಿಬಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರಾಜ್ಯ

ಬೆಂಗಳೂರು: ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್‌ ವಿತರಣೆ ಮಾಡುವವರೆಗೂ ಅಂದರೆ ಜೂನ್‌ 15ರವರೆಗೆ ಹಿಂದಿನ ವರ್ಷದ ಬಸ್‌ ಪಾಸ್‌ಗಳು ಹಾಗೂ ಶಾಲೆ-ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಬಿಎಂಟಿಸಿ ಸೇರಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.

Students from all over the state can travel for free till the passes are distributed (up to June 15th) on buses operated by the Karnataka State Road Transport Corporation, including BMTC, by showing their previous year’s bus passes and fee payment receipts received from schools and colleges.

ರಾಜಕೀಯ

ಸ್ಯಾನ್ ಫ್ರಾನ್ಸಿಸ್ಕೋ: ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ‘ಮೊಹಬ್ಬತ್ ಕಿ ದುಕಾನ್’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದಲ್ಲಿ 1980ರ ದಶಕದಲ್ಲಿ ದಲಿತರು ಎದುರಿಸಿದ್ದ ಪರಿಸ್ಥಿತಿಯನ್ನು ಇಂದು ಮುಸ್ಲಿಮರು ಎದುರಿಸುತ್ತಿದ್ದಾರೆ. ಇದರ ವಿರುದ್ಧ ಅಭಿಮಾನದಿಂದ ಹೋರಾಡಬೇಕು” ಎಂದರು.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕೆಲವು ಕ್ರಮಗಳು ಅಲ್ಪಸಂಖ್ಯಾತರು, ದಲಿತ ಮತ್ತು ಬುಡಕಟ್ಟು ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಕೇಂದ್ರದ ಕ್ರಮಗಳು ಮುಸ್ಲಿಮರ ಮೇಲೆ ನೇರವಾಗಿ ಪರಿಣಾಮ ಬೀರುತ್ತಿವೆ. ಆದರೆ ವಾಸ್ತವವಾಗಿ, ಇದನ್ನು ಎಲ್ಲಾ ಸಮುದಾಯಗಳಿಗೆ ಮಾಡಲಾಗುತ್ತಿದೆ. ನೀವು (ಮುಸ್ಲಿಮರು) ಹೇಗೆ ದಾಳಿಗೆ ಒಳಗಾಗುತ್ತೀರಿ, ಹಾಗೆಯೇ ಸಿಖ್ಖರು, ಕ್ರಿಶ್ಚಿಯನ್ನರು, ದಲಿತರು ಮತ್ತು ಬುಡಕಟ್ಟು ಜನಾಂಗದವರೂ ದಾಳಿಗೆ ಒಳಗಾಗುತ್ತಿದ್ದಾರೆ. ಆದರೆ ನೀವು ದ್ವೇಷದಿಂದ ದ್ವೇಷವನ್ನು ಕತ್ತರಿಸಲು ಸಾಧ್ಯವಿಲ್ಲ. ಪ್ರೀತಿ ಮತ್ತು ವಾತ್ಸಲ್ಯದಿಂದ ಮಾತ್ರ ಸಾಧ್ಯ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

“ಇಂದು ಭಾರತದಲ್ಲಿ ಮುಸ್ಲಿಮರಿಗೆ ಏನಾಗುತ್ತಿದೆಯೋ ಅದನ್ನು 1980ರ ದಶಕದಲ್ಲಿ ದಲಿತರು ಅನುಭವಿಸಿದರು. ನೀವು 1980ರ ದಶಕದಲ್ಲಿ ಉತ್ತರ ಪ್ರದೇಶಕ್ಕೆ ಹೋಗಿದ್ದರೆ ದಲಿತರ ಪರಿಸ್ಥಿತಿ ತಿಳಿಯುತ್ತಿತ್ತು. ನಾವು ಅದನ್ನು ಸವಾಲಾಗಿ ಸ್ವೀಕರಿಸಬೇಕು ಮತ್ತು ಅದರ ವಿರುದ್ಧ ಹೋರಾಡಬೇಕು” ಎಂದಿದ್ದಾರೆ.

 

ದೇಶ ರಾಜಕೀಯ

ಜೈಪುರ: ‘ಬಡವರನ್ನು ವಂಚಿಸುವುದು ಕಾಂಗ್ರೆಸ್ ತಂತ್ರ; ಕಳೆದ 50 ವರ್ಷಗಳಿಂದಲೂ ಅದನ್ನೇ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಆಯೋಜಿಸಿದ್ದ ಬೃಹತ್ ರ‍್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿಯ 9 ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಇಂದು (ಮೇ 31) ಪ್ರಧಾನಿ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ಮೆಗಾ ರ‍್ಯಾಲಿಯನ್ನು ಉದ್ಘಾಟಿಸಿದರು. ಇದೇ ರೀತಿಯ ರ‍್ಯಾಲಿಗಳನ್ನು ದೇಶಾದ್ಯಂತ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಒಂದು ತಿಂಗಳ ಕಾಲ ಈ ರ‍್ಯಾಲಿ ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವರು, ಸಂಸದರು, ಬಿಜೆಪಿ ನಾಯಕರು ಭಾಗವಹಿಸಿ, ತಮ್ಮ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಿದ್ದಾರೆ.

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ರಾಜಸ್ಥಾನದ ಅಜ್ಮೀರ್‌ಗೆ ಬರುವ ಮೊದಲು, ಬ್ರಹ್ಮ ದೇವಾಲಯ ಪುಷ್ಕರಕ್ಕೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತು. ಬ್ರಹ್ಮದೇವನ ಆಶೀರ್ವಾದದಿಂದ, ಭಾರತದಲ್ಲಿ ಹೊಸ ಸೃಷ್ಟಿಗಳ ಯುಗ ನಡೆಯುತ್ತಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ 9 ವರ್ಷಗಳ ಆಡಳಿತ ಪೂರ್ಣಗೊಂಡಿದೆ. ಈ 9 ವರ್ಷಗಳ ಸರ್ಕಾರದ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ತರಲಾಗಿದೆ.

ಬ್ರಹ್ಮ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ

2014ರ ಮೊದಲು ಪರಿಸ್ಥಿತಿ ಹೇಗಿತ್ತು? ಆ ಸಂದರ್ಭದಲ್ಲಿ ಭಯೋತ್ಪಾದಕ ದಾಳಿಗಳು ನಡೆದವು. ಗಡಿಯಲ್ಲಿ ರಸ್ತೆ ನಿರ್ಮಿಸಲು ಕಾಂಗ್ರೆಸ್ ಸರಕಾರ ಹೆದರುತಿತ್ತು. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಾಣುತಿತ್ತು. ಕಾಂಗ್ರೆಸ್ ಸರ್ಕಾರ ರಿಮೋಟ್ ಕಂಟ್ರೋಲ್ ಮೂಲಕ ಕೆಲಸ ಮಾಡುತಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಕೇವಲ 60% ಲಸಿಕೆಗಳನ್ನು ಮಾತ್ರ ಜನರಿಗೆ ನೀಡಲಾಗುತ್ತಿತ್ತು. 100ರಲ್ಲಿ 40 ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಜೀವ ಉಳಿಸುವ ಲಸಿಕೆಗಳನ್ನು ನೀಡಲು ಅಸಮರ್ಥರಾಗಿದ್ದರು. ಪ್ರಸ್ತುತ, 100% ಲಸಿಕೆಗಳನ್ನು ಎಲ್ಲರಿಗೂ ನೀಡಲಾಗುತ್ತಿದೆ.

ಈಗ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ. ದೇಶದಲ್ಲಿ 100% ಲಸಿಕೆಗಳ ವ್ಯಾಪ್ತಿಯನ್ನು ಸಾಧಿಸಲು ಇನ್ನೂ 40 ವರ್ಷಗಳನ್ನು ತೆಗೆದುಕೊಳ್ಳುತಿತ್ತು. ಜೀವ ಉಳಿಸುವ ಲಸಿಕೆಗಳು ಲಭ್ಯವಿಲ್ಲದಿದ್ದಾಗ, ಸತ್ತ ಬಡ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆಯನ್ನು ನೀವು ಊಹಿಸಬಲ್ಲಿರಾ? ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಸುಳ್ಳು ಭರವಸೆ ನೀಡುವುದು ಹೊಸದೇನಲ್ಲ. ಇದನ್ನು 50 ವರ್ಷಗಳ ಹಿಂದಿನಿಂದಲೂ ಮಾಡುತ್ತಿದೆ.

ಇದು ಬಡವರಿಗೆ ಆ ಪಕ್ಷ ಮಾಡುವ ದೊಡ್ಡ ದ್ರೋಹವಾಗಿದೆ. ಬಡವರಿಗೆ ಮೋಸ ಮಾಡುವುದೇ ಕಾಂಗ್ರೆಸ್ ತಂತ್ರ. ಇದರಿಂದ ರಾಜಸ್ಥಾನದ ಜನರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಒಂದು ಹುದ್ದೆ, ಒಂದು ಪಿಂಚಣಿ ಹೆಸರಿನಲ್ಲಿ, ಮಾಜಿ ಸೈನಿಕರಿಗೆ ದ್ರೋಹ ಬಗೆದಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾಜಿ ಸೈನಿಕರಿಗೆ ಬಾಕಿ ಹಣ ನೀಡಿ, ಅವರ ಅಭಿವೃದ್ಧಿಗೆ ನೆರವಾದರು’ ಎಂದು ಪ್ರಧಾನಿ ಮೋದಿ ಮಾತನಾಡಿದರು.

ರಾಜಕೀಯ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಯುವ ನಿಧಿ, ಮಹಿಳೆಯರಿಗೆ ಸರ್ಕಾರಿ ಬಸ್ ಸಂಚಾರ ಉಚಿತ ಮುಂತಾದ  5 ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದರು.

ನಂತರ ಈ ವಿಚಾರದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು, “ನಾವು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ ನಮ್ಮ ಎಲ್ಲಾ 5 ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದ್ದೇವೆ. ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಅವುಗಳನ್ನು ಜಾರಿಗೆ ಕೊಡುತ್ತೇವೆ” ಎಂದು ಭರವಸೆಯ ಮಾತುಗಳನ್ನು ಆಡಿದರು.

—–

ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿ: ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಅಹವಾಲುಗಳನ್ನು ಆಲಿಸಿ, ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸುವ ಮೂಲಕ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಗೆ ಸಮರ್ಪಕವಾಗಿ ಹಣ ಪಾವತಿಯಾಗುವಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕ್ರೀಡೆ ದೇಶ ರಾಜಕೀಯ

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಬೆಂಬಲಿಸಿ, ಸಂಯುಕ್ತ ಕಿಶಾನ್ ಮೋರ್ಚ (ಎಸ್‌ಕೆಎಂ) ದೇಶವ್ಯಾಪಿ ಹೋರಾಟಗಳಿಗೆ ಕರೆ ನೀಡಿದೆ.

ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ನಡೆಯುತ್ತಿರುವ ಹೋರಾಟಕ್ಕೆ ಯಾವುದೇ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ, ತಮ್ಮ ಪದಕಗಳನ್ನು ಗಂಗೆಗೆ ಎಸೆಯಲು ತಯಾರಿ ನಡೆಸುತ್ತಿದ್ದ ಕುಸ್ತಿಪಟುಗಳೊಂದಿಗೆ ಸಂಯುಕ್ತ ಕಿಶಾನ್ ಮೋರ್ಚ ಮುಖಂಡ ರಾಕೇಶ್ ಟಿಕಾಯಿತ್ ರಾಜೀ ಸಂಧಾನ ನಡೆಸಿದರು.

ಕುಸ್ತಿಪಟುಗಳ ಪದಕಗಳನ್ನು ಸ್ವೀಕರಿಸಿ, 5 ದಿನಗಳಲ್ಲಿ ಇದನ್ನು ಪರಿಹರಿಸುವುದಾಗಿ ಭರವಸೆ ನೀಡಿದರು. ಇದರಿಂದಾಗಿ ಕುಸ್ತಿಪಟುಗಳ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಲೈಂಗಿಕ ಆರೋಪ ಮಾಡಿರುವ, ಕುಸ್ತಿಪಟುಗಳು ಮತ್ತು ಮಹಿಳಾ ಕುಸ್ತಿಪಟುಗಳು ಒಂದು ತಿಂಗಳಿಗೂ ಹೆಚ್ಚಾಗಿ, ನವದೆಹಲಿಯ ಜಂತರ್ ಮಂತರ್‌ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಬೆಂಬಲಿಸಿ, ಜೂನ್ 1 ರಂದು ಎಲ್ಲಾ ತಾಲ್ಲೂಕು ಕಛೇರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಪತ್ರ ರವಾನಿಸುವುದು ಮತ್ತು ಜೂನ್ 5 ರಂದು  ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆಗಳನ್ನು ನಡೆಸಲು ಸಂಯುಕ್ತ ಕಿಶಾನ್ ಮೋರ್ಚ ಕರೆ ನೀಡಿದೆ.

ಸಿನಿಮಾ

ವರದಿ:ಅರುಣ್ ಜಿ.,

ಬೆಂಗಳೂರು: ಸೋನು ಫಿಲಂಸ್ ಲಾಂಛನದಲ್ಲಿ ಕೆ.ಮಂಜುನಾಥ್ ನಾಯಕ್ ಅವರು ನಿರ್ಮಾಣ ಮಾಡಿರುವ ಚಿತ್ರ “ಅರಳಿದ ಹೂವುಗಳು” ಚಿತ್ರದುರ್ಗದ ಶಿಕ್ಷಕರು ಹಾಗೂ ಸಾಹಿತಿಗಳೂ ಆದ ಕೆ.ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಹೆಣ್ಣು ಅಬಲೆಯಲ್ಲ ಸಬಲೆ, ಆಕೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬ ಸಂದೇಶ ಹೊತ್ತು ಬರುತ್ತಿರುವ ಈ ಚಿತ್ರದ ಚಿತ್ರಕಥೆ, ಸಂಭಾಷಣೆ, ಹಾಡುಗಳಿಗೆ ಸಾಹಿತ್ಯ ಬರೆದು ನಿರ್ದೇಶನ ಮಾಡಿರುವವರು ಬಿ.ಎ.ಪುರುಷೋತ್ತಮ್ ಓಂಕಾರ್. ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಮಂಜುನಾಥ್ ಈ ಹಿಂದೆ ಸೀತಮ್ಮನ ಮಗ ಚಿತ್ರ ನಿರ್ಮಿಸಿದ್ದೆ. 100 ಸಿನಿಮಾ ಮಾಡಿದ ಅನುಭವವನ್ನು ಅದೊಂದೇ ಸಿನಿಮಾ ನೀಡಿತು.

ಕಳೆದ ವರ್ಷ ನಾನೇ ಬರೆದ ಕಾದಂಬರಿಯನ್ನು ಇಟ್ಟುಕೊಂಡು ಸಿನಿಮಾ ಮಾಡಬೇಕೆಂದು ನಿರ್ಧರಿಸಿ ಈ ಚಿತ್ರಕ್ಕೆ ‌ಕೈ ಹಾಕಿದೆ. ಅಲ್ಲದೆ ಪುರುಷೋತ್ತಮ್ ಅವರ ಪ್ಲಾನ್ ನನಗೆ ಇಷ್ಟವಾಯಿತು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಸಮಾಜಕ್ಕೆ ಒಂದು ಸಂದೇಶ ಕೊಡಬೇಕು ಎಂಬುದು ನನ್ನ ಉದ್ದೇಶ. ಚಿತ್ರದ 63 ಸೀನ್‌ಗಳಲ್ಲೂ ಒಂದೊಂದು ಸಂದೇಶ ಹೇಳಿದ್ದೇವೆ. ಪುರುಷೋತ್ತಮ್ ಅವರ ಕಾರಣದಿಂದಲೇ ನಿಂತುಹೋಗಬೇಕಿದ್ದ ಈ ಸಿನಿಮಾ ರಿಲೀಸ್ ಹಂತಕ್ಕೆ ಬಂದಿದೆ. ಜೂನ್ 9ಕ್ಕೆ ಬಿಡುಗಡೆ ಮಾಡಬೇಕು ಅಂದುಕೊಂಡಿದ್ದೇವೆ. ಇಡೀ ಚಿತ್ರವನ್ನು ಚಿತ್ರದುರ್ಗದ ಚಂದವಳ್ಳಿಯ ತೋಟ, ಕಾಲೇಜು, ಕೋಟೆಯ ಸುತ್ತಮುತ್ತ 30 ದಿನಗಳ ಕಾಲ  ಚಿತ್ರೀಕರಿಸಿದ್ದೇವೆ ಎಂದರು.

ನಿರ್ದೇಶಕ ಪುರುಷೋತ್ತಮ್ ಮಾತನಾಡಿ, “ಹೆಣ್ಣು ಅಬಲೆಯಲ್ಲ ಸಬಲೆ, ಅವಮಾನ  ಮಾಡಿದವರ, ಆಡಿಕೊಂಡವರ ಮುಂದೆ ಗೆದ್ದು, ಸಾಧನೆ ಮಾಡಿ ಎಲ್ಲರೆದುರು ತಲೆಯೆತ್ತಿ ನಿಲ್ಲಬೇಕು. ಸಾವೇ ಕೊನೆ ಹಂತ ಎಂದು ನಿರ್ಧರಿಸಬಾರದು. ಕಷ್ಟ ಬಂದಿದೆ, ಮೋಸ ಹೋಗಿದ್ದೇನೆಂದು ಹೆದರಿ ಕುಳಿತರೆ ಏನನ್ನು ಸಾಧಿಸಲು ಸಾಧ್ಯವಿಲ್ಲ. ಸೋಲನ್ನೇ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸಬೇಕು. ಎಲ್ಲವನ್ನು ಸವಾಲಾಗಿ ಸ್ವೀಕರಿಸಿ ಛಲದಿಂದ ಗೆಲ್ಲುವುದೇ ಸಾಧನೆ. ಆಗಲೇ ನಮ್ಮ ಜೀವನ ಅರಳಿದ ಹೂವುಗಳು ಆಗುತ್ತದೆ ಎನ್ನುವುದೇ ಈ ಚಿತ್ರದ ಕಥೆ” ಎಂದು ಹೇಳಿದರು.

ಇನ್ನು ಈ ಚಿತ್ರದ ನಾಲ್ಕು ಹಾಡುಗಳಿಗೆ ರಾಜ್ ಭಾಸ್ಕರ್ ಅವರ ಸಂಗೀತ ಸಂಯೋಜನೆ ಇದ್ದು, ಮುತ್ತುರಾಜ್  ಅವರ ಛಾಯಾಗ್ರಹಣ, ಕವಿತಾ ಭಂಡಾರಿ ಅವರ ಸಂಕಲನವಿದೆ. ಚಿತ್ರದ ಸಹ ನಿರ್ಮಾಪಕರಾಗಿ ಸುಮೀತ್ ಕುಮಾರ್ ಕಾರ್ಯ ನಿರ್ವಹಿಸಿದ್ದಾರೆ. ನಿರ್ಮಾಪಕ ಕೆ.ಮಂಜುನಾಥ್ ನಾಯಕ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧನಲಕ್ಷ್ಮಿ ಭಾಗ್ಯಶ್ರೀ, ಶಶಿಕಲಾ, ಸುಲೋಚನ, ರಂಜಿತ್, ಗಂಚು ಕುಮಾರ್, ಅಪ್ಪು ಮಂಜುಳಾ, ವಿಶ್ವ ಡುಮ್ಮು ಉಳಿದ ಪಾತ್ರವರ್ಗದಲ್ಲಿದ್ದಾರೆ. ಜಯಲಕ್ಷ್ಮಿ ಫಿಲಂಸ್‌ನ ರಾಜು ಅವರು ಈ ಚಿತ್ರದ ವಿತರಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ದೇಶ

ಜೈಪುರ: ಪ್ರತಿಯೊಬ್ಬರೂ ತಮ್ಮ ಲಿಂಗ ಮತ್ತು ಲಿಂಗ ಗುರುತನ್ನು ನಿರ್ಧರಿಸುವುದು ಒಬ್ಬರ ಹಕ್ಕಾಗಿದೆ ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.

ರಾಜಸ್ಥಾನದಲ್ಲಿ ಹುಟ್ಟಿನಿಂದಲೇ ಹೆಣ್ಣಾಗಿದ್ದ ವ್ಯಕ್ತಿಗೆ, ಹೆಣ್ಣಿನ ಸ್ಥಾನಮಾನದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲಾಯಿತು. 2013ರಲ್ಲಿ ಸರ್ಕಾರಿ ಸೇವೆಗೆ ಸೇರಿದ್ದ ಅವರಿಗೆ ಲಿಂಗ ದೋಷವಿರುವುದು ಪತ್ತೆಯಾಗಿತ್ತು. ತರುವಾಯ, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ, ಲಿಂಗ ಪರಿವರ್ತನೆ ಮಾಡಿ ಪುರುಷರಾದರು.

ಮಹಿಳೆ ಒಬ್ಬಳನ್ನು ಮದುವೆಯಾಗಿ ಮಕ್ಕಳೂ ಸಹ ಅವರಿಗಿದ್ದಾರೆ. ಈ ಹಿನ್ನಲೆಯಲ್ಲಿ ಆತನ ಕುಟುಂಬವು ಭವಿಷ್ಯದಲ್ಲಿ ಎಲ್ಲಾ ವಿತ್ತೀಯ ಪ್ರಯೋಜನಗಳನ್ನು ಪಡೆಯುವ ರೀತಿಯಲ್ಲಿ, ತನ್ನ ಲಿಂಗವನ್ನು ಪುರುಷ ಎಂದು ನೋಂದಾಯಿಸಲು ಆದೇಶ ನೀಡುವಂತೆ ಕೋರಿ ಅವರು ರಾಜಸ್ಥಾನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಇದೀಗ ತೀರ್ಪನ್ನು ಪ್ರಕಟಿಸಿದೆ. ತೀರ್ಪಿನಲ್ಲಿ ‘ಪ್ರತಿಯೊಬ್ಬರೂ ತಮ್ಮ ಲಿಂಗ ಮತ್ತು ಲಿಂಗ ಗುರುತಿನ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ತಾಯಿಯ ಗರ್ಭದಲ್ಲಿರುವಾಗಲೇ ಒಬ್ಬರಿಗೆ ಸಾಂವಿಧಾನಿಕವಾಗಿ ಸಿಗಬಹುದಾದ ಎಲ್ಲಾ ಹಕ್ಕುಗಳನ್ನು ನೀಡಬೇಕಾಗಿದೆ. ತೃತೀಯ ಲಿಂಗ ಕಾಯ್ದೆಯ ಪ್ರಕಾರ ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಪರಿವರ್ತನೆಗೊಂಡ ವ್ಯಕ್ತಿಗೆ, ಅವರು ಬಯಸಿದ ಲಿಂಗ ಮಾನ್ಯತೆಯನ್ನು ನೀಡಬೇಕು.

ಆದರೆ, 2019ರಲ್ಲಿ ಕಾನೂನು ಜಾರಿಗೆ ಬರುವ ಮೊದಲೇ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹಿಂದಿನ ಕಾನೂನುಗಳ ಪ್ರಕಾರ, ಅವರು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವ ಮೂಲಕ ತಮ್ಮ ಲಿಂಗವನ್ನು ಬದಲಾಯಿಕೊಳ್ಳಬಹುದು. ಅದರ ಆಧಾರದ ಮೇಲೆ, ರಾಜ್ಯ ಸರ್ಕಾರವು ಅವರ ಸೇವಾ ದಾಖಲೆಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ಮಾಡಬೇಕು’ ಎಂದು ತೀರ್ಪಿನಲ್ಲಿ ಹೇಳಲಾಗಿದೆ.