ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Karnataka BJP Archives » Dynamic Leader
October 19, 2024
Home Posts tagged Karnataka BJP
ರಾಜ್ಯ

ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಸಮನ್ಸ್ ಪ್ರತಿ

2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ ಎಂದು ಹೇಳಿದ್ದಾರೆ.

ಇದು ಸಹಜ ಕಾನೂನು ಪ್ರಕ್ರಿಯೆ; ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು ಎಂದು ಮಾಧ್ಯಮಗಳಿಗೆ ಕಿವಿಮಾತು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.  

ರಾಜಕೀಯ

ಬೆಂಗಳೂರು: ನವೆಂಬರ್ 17 ರಂದು ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆ, ಘೋಷಣೆಯಾಗುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಅವರು ಔಪಚಾರಿಕವಾಗಿ ಅಧಿಕಾರ ಸ್ವೀಕರಿಸಿದರು.

“ನವೆಂಬರ್ 17 ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಕೇಂದ್ರ ವೀಕ್ಷಕರು ಬರಲಿದ್ದಾರೆ. ಮಾಹಿತಿ ಪ್ರಕಾರ ಇಬ್ಬರು ವೀಕ್ಷಕರು ಬರಲಿದ್ದಾರೆ. ಯಾರು ಬರುತ್ತಾರೆ ಎಂಬುದು ನಾಳೆ ತಿಳಿಯಲಿದೆ” ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.

ರಾಜಕೀಯ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಕಾಂಗ್ರೆಸ್ ಎದುರು ಸೋಲನ್ನು ಪ್ರದರ್ಶಿಸಿತು. ಸೋಲಿಗೆ ಹೊಣೆಹೊತ್ತ ಜಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆಯನ್ನು ಅಂಗೀಕರಿಸದೇ ವಿಳಂಬ ಮಾಡಿಬಂದ ಬಿಜೆಪಿ ವರಿಷ್ಠರು ಅದರ ಮೇಲೆ ಇದೀಗ ಕ್ರಮ ವಹಿಸಿದ್ದಾರೆ.

ಖಾಲಿಯಿದ್ದ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ಪಾಟೀಲ ಯತ್ನಾಲ್, ಸಿ.ಟಿ.ರವಿ, ಶೋಭ ಕರಂದ್ಲಾಜೆ ಮುಂತಾದವರ ಹೆಸರುಗಳನ್ನು ಕೆಲವರು ತೇಲಿಬಿಟ್ಟಿದ್ದರು. ಅದರೂ ಕೇಂದ್ರದ ಬಿಜೆಪಿ ನಾಯಕರು ಮೌನವಾಗಿಯೇ ಇದ್ದರು. ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿಯಾಗಿರುವುದರಿಂದ ಎಚ್ಚೆತ್ತುಕೊಂಡ ಕೇಂದ್ರ ಬಿಜೆಪಿ ನಾಯಕರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವುದರ ಮೂಲಕ, ಬಿಜೆಪಿ ಪಕ್ಷವು ಲಿಂಗಾಯತರನ್ನು ಮೂಲೆಗುಂಪು ಮಾಡಿದೆ ಎಂಬ ಅಪಾವಾದಕ್ಕೆ ತೆರೆ ಎಳೆದಿದೆ. ನಿಧಾನವಾದರೂ ಯೋಚಿಸಿ, ಅಳೆದು ತೂಗಿ, ಈ ನೇಮಕವನ್ನು ಮಾಡಲಾಗಿದೆ. ಸಂಘಟನಾ ಚತುರ, ಕ್ರಿಯಾಶೀಲ, ಉತ್ಸಾಹಿ ನಾಯಕ ವಿಜಯೇಂದ್ರ ಯಡಿಯೂರಪ್ಪ ಅವರು ಉತ್ತಮವಾದ ಆಯ್ಕೆ ಎಂಬುದರಲ್ಲಿ ಎರಡು ಮಾತಿಲ್ಲ.

ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, “ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್.ಸಂತೋಷ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳು.

ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನ್ನ್ಗೆ ಶ್ರೀರಕ್ಷೆ” ಎಂದು ಹೇಳಿದ್ದಾರೆ.

ರಾಜಕೀಯ

ಮಳೆ ನಿಂತರೂ ಹನಿ ನಿಲ್ಲದು ಎಂಬ ಗಾದೆಯಂತೆ ಬಿಜೆಪಿಯ ನಾಲ್ಕು ವರ್ಷದ ಭ್ರಷ್ಟ ಆಡಳಿತದ ಅವ್ಯವಸ್ಥೆಯು ಫಲ ಈಗಲೂ ಜನರ ಜೀವ ಹಿಂಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರ ಬಂದು ಎರಡು ತಿಂಗಳಾಗಿದೆ; ಭ್ರಷ್ಟ ಬಿಜೆಪಿ ಮಾಡಿದ್ದ ಅವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ಜಾರಿಯಲ್ಲಿದೆ. ಜಲಜೀವನ್ ಮಿಷನ್‌ನಲ್ಲಿ ಪ್ರತಿ ಮನೆಗೂ ನೀರು ಕೊಟ್ಟೇ ಬಿಟ್ಟಿದ್ದೇವೆ ಎಂದು ಪ್ರಚಾರ ಮಾಡಿದ್ದ ಬಿಜೆಪಿ, ಈಗ ತಮ್ಮ ಸುಳ್ಳನ್ನು ತಾವೇ ಬಯಲು ಮಾಡುತ್ತಿದ್ದಾರೆ. ಈ ಫ್ಯಾಕ್ಟ್ ಚೆಕ್ ಕೆಲಸವನ್ನು ಬಿಜೆಪಿ ಹೀಗೆಯೇ ಮುಂದುವರೆಸಲಿ!

ಜಲಜೀವನ್ ಮಿಷನ್ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು 55%, ಕೇಂದ್ರದ ಪಾಲು 45%, ಬಿಜೆಪಿಯ ಭ್ರಷ್ಟಾಚಾರದ ಪಾಲು 40%, ಮೋದಿಯವರಿಗೆ ಕ್ರೆಡಿಟ್ ಮಾತ್ರ 100%. ಬಿಜೆಪಿ ಅವಧಿಯಲ್ಲಿ ಜಲಜೀವನ್ ಮಿಷನ್ ಎನ್ನುವುದು “ಭ್ರಷ್ಟಾಚಾರದ ಮಿಷನ್” ಆಗಿತ್ತು, ಇದರ ಪರಿಣಾಮವನ್ನೇ ಇಂದಿಗೂ ರಾಜ್ಯದ ಜನತೆ ಎದುರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಭ್ರಷ್ಟಾಚಾರದ ಆರೋಪದಲ್ಲಿ ರಾಜೀನಾಮೆ ನೀಡಿದ್ದರು; ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 40% ಕಮಿಷನ್‌ಗೆ ಗುತ್ತಿಗೆದಾರರೊಬ್ಬರು ಜೀವವನ್ನೇ ಬಿಡಬೇಕಾಯ್ತು. ನನ್ನ ಇಲಾಖೆಗೆ ಇಷ್ಟು ಘಾಡವಾಗಿ ಅಂಟಿರುವ ಕೊಳೆಯನ್ನು ಸ್ವಚ್ಛ ಮಾಡುತ್ತಿದ್ದೇನೆ.

ಬಿಜೆಪಿ ಅವಧಿಯಲ್ಲಿ ಪರ ರಾಜ್ಯಗಳತ್ತ ಮುಖ ಮಾಡಿದ್ದ ಉದ್ಯಮಗಳನ್ನು, ಹೂಡಿಕೆಗಳನ್ನು ಕರ್ನಾಟಕದತ್ತ ಕರೆತರುತ್ತಿದ್ದೇವೆ. ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ನಿರ್ಮಿಸುತ್ತಿದ್ದೇವೆ. ಅಜಾನ್, ಹಲಾಲ್, ಹಿಜಾಬ್ ಎಂಬ ಪ್ರಚೋದನೆಗೆ ಕನ್ನಡಿಗರು ಸಂಪೂರ್ಣ ತಿರಸ್ಕಾರದ ಉಡುಗೊರೆ ಕೊಟ್ಟಿದ್ದಾರೆ. ಬಿಜೆಪಿ ಮುಕ್ತ ದಕ್ಷಿಣ ಭಾರತವಾಗಿದೆ; ಆದರೂ, ಬುದ್ದಿ ಕಲಿಯದೆ ಸುಳ್ಳಿನ ಸೌಧ ಕಟ್ಟವುದನ್ನು ಮುಂದುವರೆಸಿದ ಬಿಜೆಪಿಯನ್ನು ದೇಶದ ಜನ ತಿರಸ್ಕರಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷವಾಗಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ್ದು ಬಿಜೆಪಿ ರಾಜಕೀಯ ದಿವಾಳಿತನ. ಮೇಲ್ಮನೆ, ಕೆಳಮನೆಗಳಲ್ಲಿ ವಿರೋಧ ಪಕ್ಷದ ನಾಯಕನ ಕುರ್ಚಿ ಖಾಲಿ ಇದೆ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿ ಮೊದಲು ತಮ್ಮ ರಾಜಕೀಯ ದಾರಿದ್ರ್ಯವನ್ನು ನಿವಾರಣೆ ಮಾಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ರಾಜಕೀಯ

ಬೆಂಗಳೂರು: ಉಡುಪಿ ನಗರದ ಅರೆ ವೈದ್ಯಕೀಯ ಕಾಲೇಜಿನ ವಾಶ್‍ರೂಂನಲ್ಲಿ ವಿದ್ಯಾರ್ಥಿನಿಯೋರ್ವಳ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಅವರು ಸ್ಪಷ್ಟೀಕರಣ ನೀಡಿದ ನಂತರವೂ ಈ ವಿಚಾರವನ್ನು ಕೆದುಕುತ್ತಿರುವ ಬಿಜೆಪಿಯವರ ಮೇಲೆ ಹರಿಹಾಯ್ದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, 

ಇದನ್ನೂ ಓದಿ: ಹಿಂದೂಗಳೇ ಆಚರಿಸುವ ಮೊಹರಂ ಹಬ್ಬ; 300 ವರ್ಷಗಳಿಂದ ನಡೆದು ಬರುವ ಅದ್ಭುತ!

“ಉಡುಪಿ ಪ್ರಕರಣದಲ್ಲಿ ಬಿಜೆಪಿಯವರು ಮತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಎಲ್ಲವನ್ನೂ ಕೂಲಂಕುಷವಾಗಿ ಪರಿಶೀಲಿಸಿ ವದಂತಿ ಹಬ್ಬಿಸಬೇಡಿ ಎಂದಿದ್ದಾರೆ. ಖುಷ್ಬೂ ಬಿಜೆಪಿ ಸದಸ್ಯೆ. ಬಿಜೆಪಿಯವರಿಗೆ ಅವರ ಮಾತಿನ ಮೇಲೂ ನಂಬಿಕೆಯಿಲ್ಲವೇ?

ಇದನ್ನೂ ಓದಿ: ರೂ.10 ಕೋಟಿಯನ್ನು ತಮ್ಮದಾಗಿಸಿಕೊಂಡ 11 ಸ್ವಚ್ಛತಾ ಮಹಿಳಾ ಕಾರ್ಮಿಕರು!

ಅಧಿಕಾರವಿಲ್ಲದೆ ನಿರುದ್ಯೋಗಿಗಳಾಗಿರುವ ಬಿಜೆಪಿ ಉಡುಪಿ ಪ್ರಕರಣವನ್ನು ‘ರಾಷ್ಟ್ರೀಯ ವಿವಾದ’ ಎಂಬಂತೆ ಬಿಂಬಿಸುತ್ತಿದ್ದಾರೆ. ಮಣಿಪುರದಲ್ಲಿ ಇಬ್ಬರು ‌ಮಹಿಳೆಯರ ನಗ್ನ ಮೆರವಣಿಗೆ ‌ಮಾಡಿ ಅತ್ಯಾಚಾರಗೈದಾಗ ಬಿಜೆಪಿಯವರ ಬಾಯಿ ಸತ್ತು ಹೋಗಿತ್ತು. ಉಡುಪಿ ವಿಚಾರದಲ್ಲಿ ಇಷ್ಟು ಗಲಭೆ ಮಾಡುತ್ತಿರುವ ಬಿಜೆಪಿ ಮಣಿಪುರ ವಿಚಾರದಲ್ಲಿ ಯಾಕೆ ಗಲಭೆ ಎಬ್ಬಿಸಲಿಲ್ಲ? ಎಂದು ಕಿಡಿಕಾರಿದ್ದಾರೆ.

ರಾಜಕೀಯ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ “ಅನ್ನ ಭಾಗ್ಯ” ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಮಾತನಾಡಿದರು:

“ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ, ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅಕ್ಕಿಯನ್ನು ನಮಗೆ ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ; ಕೆಜಿಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರ್ಕಾರ, ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ, ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ?

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ? ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ” ಎಂದರು.

ದೇಶ

ಡಿ.ಸಿ.ಪ್ರಕಾಶ್

ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಪುನರುಚ್ಚರಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಇದೇ ಅಣ್ಣಾಮಲೈ “ತಮಿಳುನಾಡು ಮುಖ್ಯಮಂತ್ರಿ ಏನಾದರೂ ಕರ್ನಾಟಕಕ್ಕೆ ಹೋಗಿ, ಕಾಂಗ್ರೆಸ್ ಕರೆದಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದರೆ, ತಮಿಳುನಾಡಿನಲ್ಲಿ ಸ್ಟಾಲಿನ್ ಅವರಿಗೆ ಪ್ರವೇಶ ನೀಡುವುದಿಲ್ಲ” ಎಂದು ಭಹಿರಂಗ ಹೇಳಿಕೆ ನೀಡಿದ್ದರು.

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನೀಡಬೇಕಿದ್ದ ಜೂನ್ ತಿಂಗಳ ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿರುವುದಕ್ಕೆ ಅಣ್ಣಾಮಲೈ ಪ್ರತಿಕ್ರಿಯೆ ಇದಾಗಿತ್ತು. ಈಗ ಮುಂದುವರೆದು “ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ಪುನರುಚ್ಚರಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈತನನ್ನು ಕರ್ನಾಟಕ ಚುನಾವಣೆ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷ ನೇಮಕ ಮಾಡಿತ್ತು. ಅದೂ ಅಲ್ಲದೇ ಈ ಆಸಾಮಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದಾಗ, ನಮ್ಮ ಕನ್ನಡಿಗರು ಇವರನ್ನು “ರಿಯಲ್ ಸಿಂಗಂ” ಎಂದೆಲ್ಲಾ ಕರೆದು ಕೊಂಡಾಡಿದ್ದರು. ಆದರೆ ಇವರು ಮೇಕೆದಾಟುವಿನಲ್ಲಿ ಅಣೆಕಟ್ಟುವುದಕ್ಕೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ನೀರು ಕೊಡದ ಕರ್ನಾಟಕಕ್ಕೆ ಹೋದರೆ, ತಮಿಳುನಾಡಿಗೆ ವಾಪಸ್ಸ್ ಬರಲು ಅವಕಾಶ ನೀಡುವುದಿಲ್ಲ ಮತ್ತು ಗೋ ಬ್ಯಾಕ್ ಸ್ಟಾಲಿನ್ ಎಂದು ಬ್ಯಾನರ್ಗಳೊಂದಿಗೆ ಕಪ್ಪು ಬಲೂನ್ ಹಾರಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧಮ್ಕಿ ಹಾಕಿದ ಅಣ್ಣಾಮಲೈ, ಈಗ ಮೇಕೆದಾಟು ಅಣೆಕಟ್ಟಿಗೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದರ ಬಗ್ಗೆ ಕೆಲವು ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ ಬಳಿ ಮಾತನಾಡಿದಾಗ, “ಮೇಕೆದಾಟು ಅಣೆಕಟ್ಟು ವಿರೋಧಿ, ಕನ್ನಡ ದ್ರೋಹಿ ಅಣ್ಣಾಮಲೈ ಕರ್ನಾಟಕಕ್ಕೆ ಪ್ರವೇಶ ಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಮ್ಮ ನೀರನ್ನು ಕುಡಿದು, ನಮ್ಮಲ್ಲಿ ಬೆಳದ ಆತನಿಗಿ ಎಷ್ಟು ಅಹಂಕಾರ ಇರಬಹುದು” ಎಂದು ಹೇಳಿಕೊಂಡಿದ್ದಾರೆ.

ರಾಜಕೀಯ

ಸಂವಿಧಾನದಲ್ಲಿ ವಿಪಕ್ಷ ನಾಯಕನ ಹುದ್ದೆಗೆ ಮಹತ್ವದ ಸ್ಥಾನವಿದೆ. ಯಾವುದೇ ಸರ್ಕಾರದ ತಪ್ಪು ಒಪ್ಪುಗಳನ್ನು ತಿದ್ದಿ ತೀಡುವುದು ವಿಪಕ್ಷ ನಾಯಕನ ಕೆಲಸ. ಪ್ರಜಾಪ್ರಭುತ್ವದ ಸೌಂದರ್ಯ ಇರುವುದೇ ಇಲ್ಲಿ.

“ನಮ್ಮ ಸರ್ಕಾರದ ಪ್ರಥಮ ಬಜೆಟ್ ಅಧಿವೇಶನ ನಾಳೆಯಿಂದ ಪ್ರಾರಂಭವಾಗಲಿದೆ.‌ ಅಧಿವೇಶನ ಶುರುವಾಗುತ್ತಿದ್ದರೂ ರಾಜ್ಯದ ಅಧಿಕೃತ ವಿರೋಧ ಪಕ್ಷವಾದ BJP ವಿಪಕ್ಷ ನಾಯಕನನ್ನೇ ಆಯ್ಕೆ ಮಾಡಿಲ್ಲ. ಒಂದು ಸೋಲು ವಿಪಕ್ಷ ನಾಯಕನನ್ನೂ ಆಯ್ಕೆ ಮಾಡದಷ್ಟು BJP ನಾಯಕರಿಗೆ ರೇಜಿಗೆ ಹುಟ್ಟಿಸಿದೆಯೇ? ವಿಪಕ್ಷ ನಾಯಕನಿಲ್ಲದೆ ಅಧಿವೇಶನ ‌ನಡೆಸಬೇಕೇ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಯವರನ್ನು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಯಂತೆ ವಿಪಕ್ಷ ನಾಯಕನ ಹುದ್ದೆಯೂ ಸಾಂವಿಧಾನಿಕ ಹುದ್ದೆ. ನಮ್ಮ ಸರ್ಕಾರದ CM ಆಯ್ಕೆ ವಿಚಾರದಲ್ಲಿ BJPಯವರು, ಯಾರು‌ CM? ಯಾವಾಗ ಮುಖ್ಯಮಂತ್ರಿ ಆಯ್ಕೆ ಎಂದು ರಚ್ಚೆ ಹಿಡಿದಿದ್ದರು. ನಮ್ಮಲ್ಲಿ CM ಆಯ್ಕೆಯೂ ಆಯಿತು. DCM ಆಯ್ಕೆಯೂ ಆಯಿತು. ಪೂರ್ಣಪ್ರಮಾಣದ ಸಂಪುಟವೂ ಆಯಿತು. ಈಗ ನಾವು ಕೇಳುತ್ತಿದ್ದೇವೆ ವಿಪಕ್ಷ ನಾಯಕ ಯಾರು?

ವಿಪಕ್ಷ ನಾಯಕ ಯಾರಾಗಬೇಕೆಂಬುದು BJPಯ ಆಂತರಿಕ ವಿಚಾರ ಇರಬಹುದು. ಸಂವಿಧಾನದಲ್ಲಿ ವಿಪಕ್ಷ ನಾಯಕನ ಹುದ್ದೆಗೆ ಮಹತ್ವದ ಸ್ಥಾನವಿದೆ. ಯಾವುದೇ ಸರ್ಕಾರದ ತಪ್ಪು ಒಪ್ಪುಗಳನ್ನು ತಿದ್ದಿ ತೀಡುವುದು ವಿಪಕ್ಷ ನಾಯಕನ ಕೆಲಸ. ಪ್ರಜಾಪ್ರಭುತ್ವದ ಸೌಂದರ್ಯ ಇರುವುದೇ ಇಲ್ಲಿ. BJPಯವರ ಒಳ ಜಗಳ ಏನೇ ಇರಲಿ. ಮೊದಲು ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಿ” ಎಂದು ಹೇಳಿದ್ದಾರೆ.

ರಾಜಕೀಯ

ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇನ್ನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

“ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ.

ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು” ಎಂದು ನಳೀನ್ ಕುಮಾರ್ ಕಟೀಲ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

“ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ. ನಿಮ್ಮ ಈ ಮನೆಮುರಕುತನಕ್ಕೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ‌.‌ ಆದರೂ ನಿಮಗೆ ಬುದ್ದಿ ಬಂದಿಲ್ಲ. ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲಿಲ್ಲ. ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಅದೂ ಮಾರುಕಟ್ಟೆ ದರದಲ್ಲಿ. ಇದು ತಪ್ಪೆ” ಎಂದು ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್‌ ಅವರನ್ನು ಪ್ರಶ್ನೆ ಮಾಡಿದ್ದಾರೆ.

“ಕೇಂದ್ರದ ನಿಮ್ಮ BJP ಸರ್ಕಾರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಒಂದೇ ಎರಡೇ? GST ಬಾಕಿಯಲ್ಲಿ ಮೋಸ, GST ಪರಿಹಾರದಲ್ಲಿ ಮೋಸ, ನೆರೆ ಪರಿಹಾರದಲ್ಲಿ ಮೋಸ, ಬರ ಪರಿಹಾರದಲ್ಲೂ ಮೋಸ, ಯೋಜನೆ ಅನುಷ್ಠಾನದಲ್ಲೂ ಮೋಸ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು.

ನೀವು ಈ ರಾಜ್ಯದ ಮನೆ ಮಗನಾಗಿ ಬಡವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಗೆ ಹೆಗಲು ಕೊಡಬೇಕು. ರಾಜ್ಯದ ಬಡವರಿಗೆ ಅಕ್ಕಿ ಕೊಡದೇ ದ್ವೇಷದ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ನಾಯಕರಿಗೆ ತಿಳಿಹೇಳಬೇಕು. ಅದು ಬಿಟ್ಟು ಮೋದಿಯವರ ದ್ವೇಷದ ಬೆಂಕಿಗೆ ನೀವೆ ತುಪ್ಪ ಸುರಿದರೆ ಬಡವರ ಶಾಪ ನಿಮಗೆ ತಟ್ಟದಿರುತ್ತದೆಯೇ” ಎಂದು ಹೇಳಿದ್ದಾರೆ.