ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Karnataka CM Archives » Dynamic Leader
October 23, 2024
Home Posts tagged Karnataka CM
ರಾಜಕೀಯ

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

“ನಾಡಿನ ಜನತೆ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಕಾಲ ಮಿತಿಯಲ್ಲಿ ಕೆಲಸ ಮಾಡಿ ಜನರ ನಿರೀಕ್ಷೆ ಈಡೇರಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯ. ನನ್ನ ರಾಜಕೀಯ ಜೀವನದಲ್ಲಿ ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ. ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಅವರು ನಮ್ಮನ್ನು ಆರಿಸಿ ಕಳುಹಿಸಿದ್ದಾರೆ. ಅವರ ಪ್ರತಿನಿಧಿಗಳಾಗಿ ಇಲ್ಲಿಗೆ ಬಂದಿದ್ದೇವೆ. ಅವರ ಆಶೋತ್ತರಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಜನರ ನಿರೀಕ್ಷೆಗೆ ಅನುಗುಣವಾಗಿ ಎಲ್ಲರೂ ಕೆಲಸ ಮಾಡಬೇಕಾಗುತ್ತದೆ.

ಜನರ ಆಶೋತ್ತರಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಅವರಿಗೆ ಸ್ಪಂದಿಸಬೇಕೆನ್ನುವ ಬಯಕೆ ನಮ್ಮ ಸರ್ಕಾರಕ್ಕಿದೆ. ಉತ್ತಮ ಸರ್ಕಾರದ ನಿರೀಕ್ಷೆ ಜನರಿಗಿದೆ. ಕ್ರಿಯಾಶೀಲ ಸರ್ಕಾರದ ಅಗತ್ಯವಿದೆ ಎಂದು ಜನ ಬಯಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ನಿಂತುಹೋಗಿದೆ; ಭ್ರಷ್ಟಾಚಾರವಿದೆ ಎಂಬ ಭಾವನೆ ಜನರಲ್ಲಿತ್ತು. ಈ ಭಾವನೆಯನ್ನು ಹೋಗಲಾಡಿಸಲು ಅಧಿಕಾರಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು.

ಗುಣಮಟ್ಟದ ಕಾಮಗಾರಿಗಳಾಗಬೇಕು, ಕಾಲಮಿತಿಯಲ್ಲೇ ಕೆಲಸಗಳಾಗಬೇಕು. ಕಣ್ಣುಮುಚ್ಚಿ ಕೊಂಡು ಸಹಿ ಹಾಕದೇ ಜನರ ಹಣವನ್ನು ಸರಿಯಾದ ರೀತಿಯಲ್ಲಿ ವೆಚ್ಚ ಮಾಡಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಇವುಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ಮಾಡಬೇಕು. ಕ್ಷೇತ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡುವುದಲ್ಲದೇ ಕಚೇರಿಗಳಿಗೆ ಅನಿರೀಕ್ಷಿತ ಭೇಟಿಯನ್ನೂ ನೀಡಬೇಕು.

ಇದನ್ನೂ ಓದಿ: ಮುಂಗಾರಿಗೆ ಮೊದಲೇ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಹಿರಿಯ ಅಧಿಕಾರಿಗಳು ನಿಯಮಗಳನ್ನು ಪಾಲಿಸಬೇಕು. ಯೋಜನೆಗಳ ಕ್ಷಿಪ್ರ ಅನುಷ್ಠಾನವಾದರೆ ಜನರಿಗೆ ಪ್ರಯೋಜನವಾಗುತ್ತದೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆನ್ನುವುದು ಸರ್ಕಾರದ ಉದ್ದೇಶ. ಜನರ ಕಷ್ಟಗಳಿಗೆ ಸ್ಪಂದಿಸುವವರೇ ಮನುಷ್ಯರು ಎಂದು ಅರ್ಥಮಾಡಿಕೊಂಡು ತಾವೆಲ್ಲರೂ ಜನರ ನಿರೀಕ್ಷೆಗಳಿಗೆ ಸಕಾಲದಲ್ಲಿ ಸೂಕ್ತರೀತಿ ಸ್ಪಂದಿಸಬೇಕೆಂದು ಬಯಸುತ್ತೇನೆ” ಎಂದರು.

“Senior officers should follow the rules. Rapid implementation of projects will benefit people. The government’s intention is to keep its promise to the people. I want them all to respond appropriately to people’s expectations by understanding that people are the ones who respond to people’s difficulties”  Siddaramaiah 

ರಾಜಕೀಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್‌ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು.

ಮಳೆ ಬಂದು ಮರಗಳು ಬಿದ್ದುಹೋದರೆ ಕೂಡಲೇ ತೆರವುಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇನೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು.

ಜಿಲ್ಲಾಧಿಕಾರಿಗಳು, ಸಿಇಓಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಬೇಕು. ಕಾರಣ, ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು.

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ-ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ರಾಜಕೀಯ ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೋಳಿಯ ವಿರುದ್ಧ ಇಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ದೂರನ್ನು ದಾಖಲಿಸಿದ್ದಾರೆ.

ಇದರ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ‘ಕರ್ನಾಟಕ ಹಗರಣಗಳಿಂದ ಗ್ರಹಣ ಹಿಡಿದಿದ್ದು, ಇವುಗಳಿಗೆ ಕಡಿವಾಣ ಹಾಕಲು ಸಿಎಂ ಬೊಮ್ಮಾಯಿ ಗಂಭೀರವಾಗಿ ಚಿಂತಿಸಿದ್ದರೆ ಏನಾದರೂ ಮಾಡುತ್ತಿದ್ದರು.

ಸಿಐಡಿ ಅಧಿಕಾರಿ 3 ಕೋಟಿ ಲಂಚ ಕೇಳಿದ್ದಾರೆ ಎಂದು ಪಿಎಸ್‌ಐ ಹಗರಣದ ಆರೋಪಿ ಬಹಿರಂಗವಾಗಿ ಹೇಳಿಕೊಂಡಿರುವುದು ಕೊಳೆತ ಎಷ್ಟು ಆಳವಾಗಿದೆ ಎಂಬುದನ್ನು ತೋರಿಸುತ್ತದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೋಳಿ ಹಾಗೂ ಇತರರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ದೂರು.

ರಾಜ್ಯ BJP ಸರ್ಕಾರದ ಲಂಚಾವತಾರ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಇಲ್ಲಿ ಹಗರಣಗಳ ಸಂಬಂಧ ನಡೆಯುತ್ತಿರುವ ತನಿಖೆಗಳೂ ನ್ಯಾಯಸಮ್ಮತವಾಗಿಲ್ಲ. PSI ಹಗರಣ ಸಂಬಂಧ ನಡೆಯುತ್ತಿರುವ CID ತನಿಖೆಯ ದಾರಿ ತಪ್ಪಿಸಲು ಅಧಿಕಾರಿಗಳು ರೂ.3 ಕೋಟಿ ಲಂಚ ಕೇಳಿದ್ದರು, ಈಗಾಗಲೇ ರೂ.76 ಲಕ್ಷ ನೀಡಿರುವುದಾಗಿ RD ಪಾಟೀಲ್‌ ಹೇಳಿದ್ದಾರೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮತದಾರರಿಗೆ 6ಸಾವಿರ ಲಂಚ ನೀಡುವುದಾಗಿ ಹೇಳುತ್ತಿದ್ದಾರೆ. ಒಂದು ಕಡೆ ನ್ಯಾಯಸಮ್ಮತ ತನಿಖೆಯೂ ನಡೆಯುತ್ತಿಲ್ಲ, ಮತ್ತೊಂದು ಕಡೆ PSI ಉದ್ಯೋಗಾಕಾಂಕ್ಷಿಗಳಿಗೆ ಮರು ಪರೀಕ್ಷೆಯನ್ನೂ ನಡೆಸುತ್ತಿಲ್ಲ. ಮತದಾರರಿಗೆ ಲಂಚ ನೀಡುವುದಾಗಿ ಹೇಳುತ್ತಿರುವ ತಮ್ಮ ಪಕ್ಷದ ನಾಯಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ತಮ್ಮ ಮೂಗಿನ ಕೆಳಗೆ ಇಷ್ಟೆಲ್ಲಾ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಪಿಎಸ್‌ಐ ಹಗರಣದ ಸಂಬಂಧ ನ್ಯಾಯಯುತ ತನಿಖೆ ನಡೆಸದ ಗೃಹ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು. ಹಾಗೆಯೇ ಪ್ರಕರಣ ಸಂಬಂಧ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.