ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
KMU Archives » Page 2 of 2 » Dynamic Leader
October 23, 2024
Home Posts tagged KMU (Page 2)
ರಾಜ್ಯ

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಕಾರ್ಯಕಾರಿ ಸಮಿತಿಯು ಪುನರ್ ರಚನೆಯಾಗಿದ್ದು, ಜನಾಬ್ ಜಬ್ಬಾರ್ ಕಲಬುರ್ಗಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಂದು ಕೆ.ಎಂ.ಯುನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಖಾಸಿಂ ಸಾಬ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೊತೆಗೆ ಗೌರವ ಅಧ್ಯಕ್ಷರಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳಾದ ಜಿ.ಎ.ಬಾವ ರವರನ್ನು, ಶೇಕಬ್ಬ ಅವರನ್ನು ಕಾರ್ಯಾಧ್ಯಕ್ಷರಾಗಿ, ಉತ್ತರ ಕರ್ನಾಟಕದ ಸಂಚಾಲಕರಾಗಿ ಬಾಗಲಕೋಟೆ ಜಿಲ್ಲೆಯ ವಕ್ಫ್ ಬೋರ್ಡ್ನ ಅಧ್ಯಕ್ಷರಾದ ಎಂ.ಎಲ್.ಸರ್ಕಾವಾಸ ಅವರನ್ನು, ದಕ್ಷಿಣ ಕರ್ನಾಟಕದ ಸಂಚಾಲಕರಾಗಿ ಚಿಕ್ಕಮಗಳೂರಿನ ಅಬ್ದುಲ್ ವಾಹಿದ್ ಮಾಗುಂಡಿ ಅವರನ್ನು ನೇಮಿಸಲಾಯಿತು. ಅಲ್ಲದೆ ಒಟ್ಟು 21 ಸದಸ್ಯರ ರಾಜ್ಯಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಲಾಗಿದೆ ಎಂದು ಖಾಸಿಂ ಸಾಬ್ ತಿಳಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ನಂಬಿ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಆ ಕಾರಣಕ್ಕಾಗಿ ವರ್ತಮಾನದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಈ ಸರ್ಕಾರದ ಮೇಲೆ ಬಹಳಷ್ಟು ನಿರೀಕ್ಷೆಗಳಿವೆ. ಎಂಬುದನ್ನು ರಾಜ್ಯ ಸರ್ಕಾರ ಮರೆಯಬಾರದು ಎಂದು ಕರ್ನಾಟಕ ಮುಸ್ಲಿಮ್ ಯುನಿಟಿಯ ನೂತನ ಅಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಯವರು ಪತ್ರಿಕಾ ಹೇಳಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಕೆ.ಎಂ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್

2ಬಿ ಮೀಸಲಾತಿ ಪರಿಹಾರ ಮುಂತಾದ ಹಲವು ಬೇಡಿಕೆಗಳು ಸೇರಿದಂತೆ ಪರಿಹರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕರ್ನಾಟಕದ ಮುಸ್ಲಿಮ್ ಸಮುದಾಯವು ಇದೀಗ ರಾಜಕೀಯವಾಗಿ ಅತ್ಯಂತ ಪ್ರಬುದ್ಧವಾಗಿದೆ. ಆದ್ದರಿಂದ ಈ ಸತ್ಯವನ್ನು ಅರಿತು ರಾಜ್ಯ ಸರ್ಕಾರವು ಮುಸ್ಲಿಮ್ ಸಮುದಾಯದ ಸಮಗ್ರ ಕಲ್ಯಾಣ ಹಾಗೂ ಸಾಮಾಜಿಕ ನ್ಯಾಯದ ಬೇಡಿಕೆಗಳನ್ನು ಈಡೇರಿಸುವ ಯೋಜನೆಗಳನ್ನು ಕಾರ್ಯಗತ ಗೊಳಿಸುವುದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಸಚಿವರುಗಳ ಹೊಣೆಗಾರಿಕೆಯಾಗಿದೆ.

ಕರ್ನಾಟಕದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಕಳೆದ ನಾಲ್ಕು ವರ್ಷಗಳಲ್ಲಿ ಸಾಕಷ್ಟು ನೋವು, ಅನ್ಯಾಯ, ಹಿಂಸೆ ಅನುಭವಿಸಿದೆ. ಗೋವು ಸಂರಕ್ಷಕರ ಹೆಸರಿನಲ್ಲಿ ಅನೈತಿಕ ಪೋಲಿಸ್ ಗಿರಿ, 4% ಒಬಿಸಿ ಮೀಸಲಾತಿ ಮತ್ತು ಅಲ್ಪಸಂಖ್ಯಾತ ವಿಧ್ಯಾರ್ಥಿ ವೇತನವನ್ನು ಕಡಿತಗೊಳಿಸಿ, ಸುಮಾರ 6 ಲಕ್ಷಕ್ಕೂ ಹೆಚ್ಚು ಮಕ್ಕಳ ಭವಿಷ್ಯವನ್ನು ಹಾಳು ಮಾಡಿರುವುದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ನಿಗಮದಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನು ದ್ವೇಷದಿಂದ ರದ್ದುಗೊಳಿಸಿ, ಅನುದಾನಗಳನ್ನು ಕಡಿತಗೊಳಿಸಿದ ಕಾರಣ ರಾಜ್ಯದ ಮುಸ್ಲಿಮರಿಗೆ ಅಘಾದ ನೋವು ಮತ್ತು ಅನ್ಯಾಯವಾಗಿದೆ.

ಈ ಎಲ್ಲಾ ಮುಸ್ಲಿಮರ ಮೇಲಿನ ಅಸಮಾನತೆಗಳನ್ನು ಹೋಗಲಾಡಿಸಿ, ನ್ಯಾಯ ಮತ್ತು ಭದ್ರತೆಯನ್ನು ಕೊಡುವುದು ಈ ಸರ್ಕಾರದ ಹೊಣೆ ಮತ್ತು ಜವಾಬ್ದಾರಿ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ನೂತನ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಹೇಳಿಕೆ ನೀಡಿದ್ದಾರೆ. ರಾಜ್ಯದ ಮುಸ್ಲಿಮರ ಸಾಮಾಜಿಕ ನ್ಯಾಯ, ಎಲ್ಲಾ ಕ್ಷೇತ್ರಗಳಲ್ಲಿ ಸಮಪಾಲು ಹಾಗು ಸರಕಾರಿ ಯೋಜನೆಗಳ ಸಮಗ್ರ ಬಳಕೆಯ ಗುರಿಯುಳ್ಳ ಕರ್ನಾಟಕ ಮುಸ್ಲಿಮ್ ಯೂನಿಟಿಯು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕುಗಳ ಮಟ್ಟದಲ್ಲಿ ವಿಸ್ತರಿಸಿ ಇಡೀ ರಾಜ್ಯಾದಂತ್ಯ ಮುಸ್ಲಿಮರ ಸಾಮಾಜಿಕ ಜಾಗೃತಿಯಲ್ಲಿ ತೊಡಗಲಿದೆ ಎಂದು ಖಾಸಿಂ ಸಾಬ್ ತಿಳಿಸಿದರು.

ರಾಜಕೀಯ

ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಮತದಾರರ ಪಾತ್ರವನ್ನು ಗುರುತಿಸಿ ಸೂಕ್ತ ಸ್ಥಾನ – ಮಾನಗಳನ್ನು ನೀಡಲು ಕರ್ನಾಟಕ ಮುಸ್ಲಿಮ್ ಯುನಿಟಿ ಒತ್ತಾಯ.

ಈ ಭಾರಿ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬಹಳ ಮುತುವರ್ಜಿಯಿಂದ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಕಾಂಗ್ರೆಸ್ಸಿನೊಂದಿಗೆ ಮುಸ್ಲಿಂ ಸಮುದಾಯಕ್ಕೆ ಬಹಳಷ್ಟು ನಿರೀಕ್ಷೆಗಳಿವೆ

2ಬಿ ಮೀಸಲಾತಿ ಪರಿಹಾರ ಮುಂತಾದ ಹಲವು ಬೇಡಿಕೆಗಳು ಇವೆ. ಇದೆಲ್ಲವನ್ನೂ ಪರಿಹರಿಸುವುದು ಕಾಂಗ್ರೆಸ್ಸಿನ ಜವಾಬ್ದಾರಿಯಾಗಿದೆ. ಕರ್ನಾಟಕದಲ್ಲಿ ದಲಿತರ ನಂತರ ಎರಡನೇ ಅತಿ ದೊಡ್ಡ ಮತದಾರರನ್ನು ಹೊಂದಿರುವ ಮುಸ್ಲಿಮ್ ಸಮುದಾಯಕ್ಕೆ ಒಂದು ಪಕ್ಷವನ್ನು ಜಯಿಸಲಿಕ್ಕೂ ಅಥವಾ ಸೋಲಿಸಲಿಕ್ಕೂ ಸಾಧ್ಯವೆಂಬ ಸತ್ಯ ಈ ಚುನಾವಣೆಯಲ್ಲಿ ಸಾಬೀತಾಗಿದೆ. ಕರ್ನಾಟಕದ ಮುಸ್ಲಿಮ್ ಸಮುದಾಯವು ಇದೀಗ ರಾಜಕೀಯವಾಗಿ ಅತ್ಯಂತ ಪ್ರಬುದ್ಧವಾಗಿದೆ. ಆದ್ದರಿಂದ ಈ ಸತ್ಯವನ್ನು ಅರಿತು ಕಾಂಗ್ರೆಸ್ ಪಕ್ಷ / ಸರ್ಕಾರ ಮುಸ್ಲಿಮ್ ಸಮುದಾಯದ ಸಾಮಾಜಿಕ ನ್ಯಾಯದ ಬೇಡಿಕೆಗಳನ್ನು ಈಡೇರಿಸುವ ಯೋಜನೆಗಳನ್ನು ಮಾಡಿದರೆ ಮಾತ್ರ ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಜಯಗಳಿಸಬಹುದು. ಕಾಂಗ್ರೆಸ್ಸಿನ ನೇತಾರರು ಇದರ ಬಗ್ಗೆ ವಿಶೇಷವಾಗಿ ಚಿಂತಿಸಬೇಕಾಗಿದೆ.

ಕರ್ನಾಟಕದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಕಳೆದ ನಾಲ್ಕು ವರ್ಷದಲ್ಲಿ  ಸಾಕಷ್ಟು ನೋವು, ಅನ್ಯಾಯ, ಹಿಂಸೆ ಅನುಭವಿಸಿರುತ್ತಾರೆ. ಮಹಿಳೆಯರ ಶಿಕ್ಷಣದ ವಿಚಾರ (ಹಿಜಾಬ್) ದಲ್ಲಿ ಗೊಂದಲವನ್ನು ಸೃಷ್ಠಿ ಮಾಡಲಾಗಿತ್ತು. ದೇವಸ್ಥಾನ ಪ್ರದೇಶದಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಸಂಘಿಗಳಿಂದ ತಾಕೀತು ಮಾಡಲಾಗಿತ್ತು. ಅನಗತ್ಯವಾಗಿ ಗೋವು ಸಂರಕ್ಷಕರ ಹೆಸರಿನಲ್ಲಿ ಅನೈತಿಕ ಪೋಲಿಸ್ ಗಿರಿ ಮಾಡಲಾಗಿತ್ತು. ಲವ್‌ ಜೀಹಾದ್‌ ಹೆಸರಲ್ಲಿ ಮುಸ್ಲಿಮ್ ಯುವಕ/ಯುವತಿಯರ ಮೇಲೆ ವಿನಾ ಕಾರಣ ದೌರ್ಜನ್ಯ ಮಾಡಲಾಗುತಿತ್ತು. 4% ಮೀಸಲಾತಿಯನ್ನು ರದ್ದುಗೊಳಿಸಿ, ಲಿಂಗಾಯತರಿಗೆ ಮತ್ತು ಒಕ್ಕಲಿಗರಿಗೆ ಮರುಹಂಚಿಕೆ ಮಾಡಿ, ಮುಸ್ಲಿಮರನ್ನು ಇ ಡಬ್ಲ್ಯೂಎಸ್ ಕೋಟಾಗೆ ವರ್ಗಾವಣೆಮಾಡಿ ಗೊಂದಲವನ್ನು ಸೃಷ್ಠಿಸಿತು. ಗಣನೀಯವಾಗಿ ಅಲ್ಪಸಂಖ್ಯಾತ ವಿಧ್ಯಾರ್ಥಿ ವೇತನವನ್ನು ಕಡಿತ ಗೋಳಿಸಿ ಸುಮಾರ 6 ಲಕ್ಷಕ್ಕೂ ಹೆಚ್ಚು ಮಕ್ಕಳ ವಿಧ್ಯಾರ್ಥಿ ವೇತನದಿಂದ ವಂಚನೆ ಮಾಡಿತು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಗೂ ನಿಗಮದಿಂದ ಜಾರಿಯಲ್ಲಿದ್ದ ಯೋಜನೆಗಳನ್ನು ದ್ವೇಶದಿಂದ ರದ್ದುಗೊಳಿಸಿತು.

ಅನುದಾನ ಕಡಿತಗೊಳಿಸಿ ಮುಸ್ಲಿಂ ಸಮುದಾಯವನ್ನು ಹೆದರಿಕೆಯಲ್ಲಿಡುವ ಪ್ರಯತ್ನವನ್ನು ಸರ್ಕಾರದಿಂದಲೇ ಮಾಡಲಾಗಿತ್ತು. ಸಿ.ಎ.ಎ. ಮತ್ತು ಎನ್.ಆರ್.ಸಿ ಹೋರಾಟದಲ್ಲಿ ಮಂಗಳೂರಿನಲ್ಲಿ ಗೋಲಿಬಾರ್ ನಡೆಸಿ ಮುಗ್ದ ಮುಸ್ಲಿಮರ ಸಾವಿಗೆ ಕಾರಣವಾಯಿತು. ಮಂಗಳೂರು ಹಾಗೂ ನರಗುಂದದಲ್ಲಿ ಕೋಮುದ್ವೇಶದ ಕಾರಣ ಕೊಲೆಗಳಾದರೂ ಕನಿಷ್ಠ ಮಾನವಿಯತೆ ತೋರದಿರುವದು ಮತ್ತು ಅವರಿಗೆ ಸೂಕ್ತ ಪರಿಹಾರ ನೀಡದೆ ತಾರತಮ್ಯ ಮಾಡಿರುವದು ಮುಸ್ಲಿಮ್ ಭೇಗುದಿಗೆ ಕಾರಣವಾಗಿತ್ತು. ಇದೆಲ್ಲವನ್ನು ಸೂಕ್ಷ್ಮವಾಗಿ ನೋಡುತ್ತಿದ್ದ ಮುಸ್ಲಿಮ್ ಸಮುದಾಯಕ್ಕೆ 2023ರ ಸಾರ್ವತ್ರಿಕ ಚುನಾವಣೆ ವರವಾಗಿ ಬಂದಿತು.

ಈ ಮೇಲಿನ ಎಲ್ಲ ಬೆಳವಣಿಗೆಗಳನ್ನ ಹತ್ತಿರದಲ್ಲಿ ಕಂಡಿದ್ದ ಮುಸ್ಲಿಮರಲ್ಲಿ ಸಾಕಷ್ಟು ಜಾಗೃತಿ ಉಂಟಾಗಿತ್ತು. ಹೀಗಾಗಿ ರಾಜ್ಯದ ಮುಸ್ಲಿಮ್ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಇಡಿಯಾಗಿ ಬೆಂಬಲಿಸಿ ಶೇ.95ರಷ್ಟು ಪೂಲಿಂಗ್ ಮಾಡಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲು ಮುಸ್ಲಿಮರು ಬಹುಮುಖ್ಯ ಪಾತ್ರವನ್ನುವಹಿಸಿದರು. ಇದಕ್ಕಾಗಿ ಕರ್ನಾಟಕ ಮುಸ್ಲಿಮ್ ಯೂನಿಟಿಯು, ಸಮುದಾಯದ ಎಲ್ಲಾ ಮುಖಂಡರುಗಳಿಗೆ, ಉಲೇಮಾಗಳಿಗೆ, ಚಿಂತಕರಿಗೆ ಹಾಗೂ ರಾಜ್ಯದ ಸಮಸ್ತ ಮುಸ್ಲಿಮ್ ಮತದಾರರಿಗೆ ಅಭಿನಂದಿಸುತ್ತದೆ.

ಕರ್ನಾಟಕದಲ್ಲಿ ಮುಸ್ಲಿಂ ಮತಗಳು ವಿಭಜನೆಯಾಗದೆ ಇಂದು ಬಹುಮತದ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದಲ್ಲಿ 9  ಮುಸ್ಲಿಂ ಅಭ್ಯರ್ಥಿಗಳು ಗೆದ್ದು ಬಿಗಿದ್ದಾರೆ. ಇವರಲ್ಲಿ ಬಹುತೇಕರಿಗೆ ಸರ್ಕಾರದಲ್ಲಿ ಪ್ರಾತಿನಿಧ್ಯ ಸಿಗಬೇಕು ಎಂಬುದು ಕರ್ನಾಟಕ ಮುಸ್ಲಿಮ್ ಯೂನಿಟಿಯ ಹೊಕ್ಕೋತ್ತಾಯವಾಗಿದೆ. ಹಾಗೆಯೇ ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಗಳಲ್ಲಿ ಮುಸ್ಲಿಮರಿಗೆ ಸೂಕ್ತ ಆಧ್ಯತೆ, ಸರ್ಕಾರದ ಎಲ್ಲಾ ಪ್ರಮುಖ ನಿಗಮ / ಮಂಡಳಿಗಳಲ್ಲಿ ಸೂಕ್ತ ಆಧ್ಯತೆ ನೀಡಬೇಕು, ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ನಿಗಮ / ಮಂಡಳಿಗಳನ್ನು ಸಂಪೂರ್ಣ ಹಾಗು ಖಡ್ದಾಯವಾಗಿ ಭರ್ತಿಮಾಡ ಬೇಕು. ಅದರಲ್ಲೂ ವಿಶೇಷವಾಗಿ ರಾಜ್ಯಾದ್ಯಂತ ಚುನಾವಣಾ ಪ್ರವಾಸ ಕೈಕೊಂಡು, ಮುಸ್ಲಿಮರ ಮತಗಳನ್ನು ಕ್ರೋಢೀಕರಿಸಿದ, ಕರ್ನಾಟಕ ಮುಸ್ಲಿಮ್ ಜನನಾಯಕ, ಪ್ರಖರ ವಾಗ್ಮಿ, ಅರ್ಹ, ಅಹಿಂದ ಮುಖಂಡರೂ ಆಗಿರುವ ಶ್ರೀ.ಬಿ.ಜಡ್.ಜಮೀರ್ ಅಹ್ಮದ್ ಖಾನ್ ರವರಿಗೆ  ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿ, ಕಾಂಗ್ರೆಸ್ ಪಕ್ಷದೊಂದಿಗೆ ನಿಂತಿರುವ ಸಮುದಾಯದ ಉಪಕಾರ ಸ್ಮರಿಸಬೇಕು ಎಂದು ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಮುಸ್ಲಿಮ್ ಯುನಿಟಿ ಸಂಘಟನೆ ಒತ್ತಾಯ ಮಾಡುತ್ತಿದೆ.

ಗೆಲುವಿನ ಸಂಭ್ರಮದಲ್ಲಿ ಶೇ.95ರಷ್ಟು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವ ಮುಸ್ಲಿಮ್ ಸಮಾಜವನ್ನು ಮರೆಯಬಾರದು. ಮುಸ್ಲಿಮ್ ಸಮುದಾಯಕ್ಕೆ ನೀಡಿರುವ 2ಬಿ ಮೀಸಲಾತಿಯ ಪ್ರಕರಣವನ್ನು ತಕ್ಷಣಕ್ಕೆ ಬಗೆಹರಿಸಬೇಕು. ದಲಿತರಿಗೆ ನೀಡಿರುವ ಭರವಸೆಯನ್ನೂ ಈಡೇರಿಸಬೇಕು ಎಂದು ಕರ್ನಾಟಕ ಮುಸ್ಲಿಂ ಯೂನಿಟಿ ಒತ್ತಾಯಿಸುತ್ತಿದೆ. ಅಲ್ಲದೆ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಸಮುದಾಯದ ಒಂಬತ್ತು ಅಭ್ಯರ್ಥಿಗಳಿಗೆ ಹಾಗೂ ರಾಜ್ಯದ ಧಿಮಂತ ನಾಯಕ ಶ್ರೀ.ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಶ್ರೀ. ಡಿ.ಕೆ. ಶಿವಕುಮಾರ್ ರವರನ್ನು ಈ ಮೂಲಕ ಕೆ.ಎಮ್.ಯು ಅಭಿನಂದಿಸುತ್ತಿದೆ.

ರಾಜಕೀಯ

ಬೆಂಗಳೂರು: ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಸಂವಿಧಾನ ಬದ್ಧವಾಗಿ ನೀಡಿರುವ ಶೇಕಡಾ 4ರ ಮೀಸಲಾತಿಯನ್ನು ಏಕಾ ಏಕಿ ರದ್ದು ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮುಸ್ಲಿಂ ದ್ವೇಷವನ್ನು ಬಹಿರಂಗಪಡಿಸಿದ್ದಾರೆ. ರಾಜ್ಯ ಸರಕಾರದ ಈ ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕ ಮುಸ್ಲಿಂ ಯುನಿಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ ಕಳೆದ 60 ವರ್ಷಗಳಲ್ಲಿ ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನ ಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ 4% ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ. ಇದನ್ನು ಏಕಾ ಏಕಿ ರದ್ದು ಪಡಿಸಿರುವುದು ಸಂವಿಧಾನ ವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ. ಚುನಾವಣೆ ಹತ್ತಿರ ಬಂದಿರುವ ಸಮಯದಲ್ಲಿ ಮುಸ್ಲಿಮರು ಮತ್ತು ಲಿಂಗಾಯತ / ಒಕ್ಕಲಿಗ ಸಮುದಾಯದ ಮಧ್ಯೆ ವೈಷಮ್ಯ ಹುಟ್ಟಿಸಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಈ ಮೂಲಕ ರಾಜಕೀಯ ದುರ್ಲಾಭ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಸಂಚು ಹೂಡಿದ್ದಾರೆ. ಈ ಸಂಚಿಗೆ ಮುಸ್ಲಿಮರು ಬಲಿಯಾಗಬಾರದು. ಸಂಯಮದಿಂದ ವರ್ತಿಸಬೇಕು. ಯಾವುದೇ ಬೀದಿ ಹೋರಾಟಕ್ಕೆ ಇಳಿಯದೆ, ಈ ಕ್ರಮದ ವಿರುದ್ಧ ಕಾನೂನು ಹೋರಾಟವನ್ನು ಕೈಗೆತ್ತಿಕೊಳ್ಳಬೇಕು. ಕರ್ನಾಟಕ ಮುಸ್ಲಿಂ ಯೂನಿಟಿ ಕಾನೂನು ತಜ್ಞರ ಜೊತೆಗೆ ಈಗಾಗಲೆ ಸಮಾಲೋಚನೆ ನಡೆಸುತ್ತಿದ್ದು ಕಾನೂನು ಹೋರಾಟವನ್ನು ಕೈಗೆತ್ತಿಕೊಳ್ಳಲಿದೆ.

ಜಯಪ್ರಕಾಶ್ ಹೆಗ್ಡೆ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಶಿಫಾರಸ್ಸಿನ ಅನ್ವಯ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಅವರನ್ನು ಮುಂದುವರಿದ ವರ್ಗ ಎಂದು ಪರಿಗಣಿಸಿ, ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (EWS) ಸೇರಿಸಿ, ಮೀಸಲಾತಿ ಕೊಡಲಾಗುವುದು (EWS) ಎಂದು ಮುಖ್ಯ ಮಂತ್ರಿಯವರು ಹೇಳಿದ್ದಾರೆ. ಜಯಪ್ರಕಾಶ್ ಹೆಗ್ಡೆ ಆಯೋಗವು ಈ ಕುರಿತು ಯಾವ ಸಮೀಕ್ಷೆಯನ್ನೂ ಮಾಡದೆ ಹೇಗೆ ನಿರ್ಧಾರ ಕೈ ಗೊಂಡಿದೆ? ಜಯಪ್ರಕಾಶ್ ಹೆಗ್ಡೆ ಆಯೋಗವು ರಹಸ್ಯ ಸಮೀಕ್ಷೆ ಏನಾದರೂ ಮಾಡಿದೆಯೆ? ಹಾಗಿದ್ದರೆ ಆ ವರದಿಯನ್ನು ಸರ್ಕಾರ ಬಹಿರಂಗ ಪಡಿಸಬೇಕು ಎಂದು ಕರ್ನಾಟಕ ಮುಸ್ಲಿಂ ಯೂನಿಟಿಯು ಒತ್ತಾಯಿಸಿದೆ. ಮುಸ್ಲಿಮರ ಮೀಸಲಾತಿಯನ್ನು ಸಂವಿಧಾನ ಬದ್ಧವಾಗಿ ರಕ್ಷಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗುವುದು. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಸಲಹೆಯನ್ನೂ ಪಡೆದು ಮುಂದು ವರಿಯಲಾಗುವುದು. ಸಮುದಾಯ ಯಾವುದೇ ಭಾವಾವೇಶಕ್ಕೆ ಒಳಗಾಗದೆ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಲು ಯತ್ನಿಸಬೇಕು ಎಂದು ಮುಸ್ಲಿಂ ಯೂನಿಟಿ ಮನವಿ ಮಾಡಿದೆ. karnataka Government scraps Reservation For muslim

ರಾಜ್ಯ

ಚಿತ್ರದುರ್ಗ: ಕರ್ನಾಟಕ ಮುಸ್ಲಿಂ ಯುನಿಟಿಯ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯು ಕಳೆದ ಮಾರ್ಚ್ 15 ರಂದು ಚಿತ್ರದುರ್ಗದ ಅಹ್ಮದ್ ಪ್ಯಾಲೆಸ್ ನಲ್ಲಿ ನಡೆಯಿತು. ರಾಜ್ಯಾಧ್ಯಕ್ಷರಾದ ಅಬ್ದುಲ್ ಸತ್ತಾರ್ ಬೆಂಗಳೂರು, ರಾಜ್ಯ ಉಪಾಧ್ಯಕ್ಷರಾದ ನಾಸೀರ್ ಇಂಪಾಲ್ ಚಿಕ್ಕಮಗಳೂರು, ಕಾರ್ಯಾಧ್ಯಕ್ಷರಾದ ಜಿ.ಎ.ಬಾವಾ ಬೆಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಖಾಸಿಂ ಸಾಬ್, ಉತ್ತರ ಕರ್ನಾಟಕ ಸಂಚಾಲಕರಾದ ಜಬ್ಬಾರ್ ಕಲಬುರ್ಗಿ, ದಕ್ಷಿಣ ಕರ್ನಾಟಕ ಸಂಚಾಲಕರಾದ ಅಬ್ದುಲ್ ವಾಹಿದ್ ಮಾಗುಂಡಿ ಸೇರಿದಂತೆ ಸಂಘಟನಾ ಕಾರ್ಯದರ್ಶಿ ಜಾಬೀರ್ ತಂಙಳ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದ ಈ ಸಮಾಲೋಚನ ಸಭೆಯಲ್ಲಿ ಕರ್ನಾಟಕ ಮುಸ್ಲಿಮ್ ಯುನಿಟಿಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾಗಿ ಸೈಯದ್ ನದೀಮ್ ಹಾಗು ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾಗಿ ಸಾದಿಕ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜ್ಯದ ಮುಸ್ಲಿಮರ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿಗಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ KMU ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿಯ ಸಮಾವೇಶದಲ್ಲಿ ಕರ್ನಾಟಕ ಮುಸ್ಲಿಮ್ ಯುನಿಟಿಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾಗಿ ಕನ್ನಡಪರ ಹೋರಾಟಗಾರರು, ಯುವ ಉದ್ಯಮಿ ಹಾಗೂ ಗುರುಕುಲ ಮೆಂಟರ್ಸ್ ಫೌಂಡೇಷನ್ ಸಂಸ್ಥಾಪಕರು ಆಗಿರುವ ಸೈಯದ್ ನದೀಮ್ ಎಸ್ (ಕನ್ನಡ ನದೀಮ್) ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾಗಿ ಯುವ ಮುಖಂಡರೂ ಆಗಿರುವ ಯುವ ಉದ್ಯಮಿ ಚಿಂತಾಮಣಿ ಸಾದಿಕ್ ರವರನ್ನು ಆಯ್ಕೆಮಾಡಲಾಗಿದೆ.