ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
KR Circle Archives » Dynamic Leader
October 23, 2024
Home Posts tagged KR Circle
ಬೆಂಗಳೂರು

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.

ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವು: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೋಂಡ ಹೆಚ್.ಡಿ.ಕುಮಾರಸ್ವಾಮಿ.

https://twitter.com/CMofKarnataka/status/1660266705476784128?s=20

ಬೆಂಗಳೂರು

ಬೆಂಗಳೂರು: “ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ” ಎಂದು ಹೆಚ್.ಡಿ.ಕುಮಾರಸ್ವಾಮಿ ಬಿಬಿಎಂಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?

ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು.

 

ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು.

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ” ಎಂದು ಹೇಳಿದ್ದಾರೆ.