ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Loan Waiver Archives » Dynamic Leader
October 23, 2024
Home Posts tagged Loan Waiver
ದೇಶ

ನವದೆಹಲಿ: ‘ಕಾಂಗ್ರೆಸ್ ಎಲ್ಲೇ ಅಧಿಕಾರದಲ್ಲಿದ್ದರೂ ಅದು ಭಾರತದ ಹಣವನ್ನು ಭಾರತೀಯರಿಗೆ ಖರ್ಚು ಮಾಡುತ್ತದೆ; ಬಂಡವಾಳಶಾಹಿಗಳಿಗೆ ಅಲ್ಲ. ಇದು ನಮ್ಮ ಭರವಸೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಹೇಳಿದ್ದಾರೆ.

ಈ ಕುರಿತು ಅವರು ತಮ್ಮ ‘ಎಕ್ಸ್’ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹೇಳಿಕೆಯಲ್ಲಿ, ತೆಲಂಗಾಣ ರೈತ ಕುಟುಂಬಗಳಿಗೆ ಅಭಿನಂದನೆಗಳು. 2 ಲಕ್ಷದವರೆಗಿನ ಎಲ್ಲಾ ಸಾಲಗಳನ್ನು ಮನ್ನಾ ಮಾಡುವ ಮೂಲಕ, 40 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳನ್ನು ಸಾಲದಿಂದ ಮುಕ್ತಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಐತಿಹಾಸಿಕವಾದ ಕ್ರಮ ಕೈಗೊಂಡಿದೆ.

ರೈತರು ಏನು ಹೇಳುತ್ತಾರೋ ಅದನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತದೆ. ಇದುವೇ ನನ್ನ ಆಲೋಚನೆ ಮತ್ತು ನನ್ನ ಅಭ್ಯಾಸವಾಗಿದೆ. ರೈತರು, ಕಾರ್ಮಿಕರು ಸೇರಿದಂತೆ ದಲಿತ ಸಮುದಾಯದ ಬಲವರ್ಧನೆಗೆ ಕಾಂಗ್ರೆಸ್ ಸರಕಾರ ಮುಂದಾಗಲಿದೆ.

ತೆಲಂಗಾಣ ಸರ್ಕಾರದ ಈ ನಿರ್ಧಾರ ಅದಕ್ಕೆ ನಿದರ್ಶನ. ಕಾಂಗ್ರೆಸ್ ಎಲ್ಲೇ ಅಧಿಕಾರದಲ್ಲಿದ್ದರೂ ಅದು ಭಾರತದ ಹಣವನ್ನು ಭಾರತೀಯರಿಗೆ ಖರ್ಚು ಮಾಡುತ್ತದೆ. ಬಂಡವಾಳಶಾಹಿಗಳಿಗೆ ಅಲ್ಲ. ಇದು ನಮ್ಮ ಭರವಸೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಹೇಳಿದ್ದಾರೆ.

ದೇಶ ರಾಜಕೀಯ

 ಡಿ.ಸಿ.ಪ್ರಕಾಶ್, ಸಂಪಾದಕರು

ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿಗಳ ವಿರುದ್ಧ ಮಾತನಾಡುತ್ತಿದ್ದರೂ ಬಿಜೆಪಿ ಚುನಾವಣೆಯ ಸಮಯದಲ್ಲಿ ಬಿಟ್ಟಿಗಳೆಂಬ ಅಸ್ತ್ರವನ್ನು ತಪ್ಪದೇ ಹೊರತಂದು ಮತದಾರರ ಮುಂದೆ ಜಳಪಿಸುತ್ತದೆ!

“ವಿರೋಧ ಪಕ್ಷಗಳು ಮತ ಸೆಳೆಯಲು ಉಚಿತ ಕೊಡುಗೆಗಳನ್ನು ನೀಡುತ್ತವೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಚಿತಗಳ ವಿರುದ್ಧ ಮಾತನಾಡುತ್ತಾರೆ. ಮತ್ತು “ಉಚಿತಗಳು ನಮ್ಮ ಮಕ್ಕಳ ಹಕ್ಕುಗಳನ್ನು ಕಸಿದುಕೊಂಡು ನಮ್ಮ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ” ಎಂದು ಹೇಳುತ್ತಾರೆ. “ಸ್ವಾರ್ಥ ರಾಜಕಾರಣಕ್ಕಾಗಿ ರಾಜಕೀಯ ಪಕ್ಷಗಳಿಂದ ಘೋಷಿಸಲ್ಪಡುವ ಉಚಿತ ಘೋಷಣೆಗಳು ದೇಶವು ಸ್ವಾವಲಂಬಿಯಾಗುವುದನ್ನು ತಡೆಯುತ್ತದೆ. ಮತ್ತು ಪ್ರಾಮಾಣಿಕ ತೆರಿಗೆದಾರರ ಮೇಲಿನ ಹೊರೆ ಹೆಚ್ಚಿಸುವುದರ ಜೊತೆಗೆ, ಹೊಸ ತಂತ್ರಜ್ಞಾನಗಳಲ್ಲಿನ ಹೂಡಿಕೆಗಳನ್ನು ಸಹ ನಿರ್ಬಂಧಿಸುತ್ತದೆ” ಎಂದು ಪ್ರಧಾನಿ ಮೋದಿ ಎಲ್ಲಡೆಯೂ ಹೇಳುತ್ತಾರೆ.

”ಉಚಿತಗಳನ್ನು ನೀಡುವುದರಿಂದ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಉಚಿತಗಳು ಮುಂದುವರಿದರೆ ಶ್ರೀಲಂಕಾ, ಪಾಕಿಸ್ತಾನದಂತಹ ದೇಶಗಳ ಸ್ಥಿತಿ ಭಾರತಕ್ಕೂ ಬರುತ್ತದೆ” ಎಂಬುದು ಪ್ರಧಾನಿ ಮೋದಿಯವರ ಅಭಿಪ್ರಾಯ. ಮೋದಿ ಅವರು ಉಚಿತಗಳ ವಿರುದ್ಧ ಮಾತನಾಡಲು ಪ್ರಾರಂಭಿಸಿದ ನಂತರ, ಚುನಾವಣಾ ಪ್ರಣಾಳಿಕೆಗಳಲ್ಲಿ ‘ಅಲ್ಪಾವಧಿಯ ಉಚಿತ’ಗಳಿಗೆ ಸಂಬಂಧಿಸಿದ ಘೋಷಣೆಗಳನ್ನು ತಪ್ಪಿಸುವಂತೆ ಬಿಜೆಪಿ ತನ್ನ ರಾಜ್ಯ ಘಟಕಗಳಿಗೆ ಸೂಚನೆ ನೀಡಿದೆ ಎಂದು ವರದಿಗಳಾಗಿವೆ.

ಇದನ್ನೂ ಓದಿ: ಕಾಶ್ಮೀರಿ ಭಯೋತ್ಪಾದಕರ ಕಾಲಿಗೆ ಜಿಪಿಎಸ್ ಸಾಧನ ಅಳವಡಿಕೆ: ಓಡಲು ಸಾಧ್ಯವಿಲ್ಲ; ಅಡಗಿಕೊಳ್ಳಲೂ ಸಾಧ್ಯವಿಲ್ಲ.!

ಉಚಿತಗಳ ವಿರುದ್ಧ ಪ್ರಧಾನಿ ಮೋದಿಯವರ ಹೇಳಿಕೆಗಳಿಗೆ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ. “ನಾವು ಉಚಿತಗಳನ್ನು ನೀಡುವುದಿಲ್ಲ ಶಿಕ್ಷಣ, ವೈದ್ಯಕೀಯ ಮುಂತಾದ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುತ್ತೇವೆ; ಅದು ಉಚಿತಗಳಲ್ಲ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಪ್ರಧಾನಿಯವರು ಉಚಿತಗಳ ವಿರುದ್ಧ ಮಾತನಾಡುತ್ತಿರುವಾಗಲೇ ಬಿಜೆಪಿಯ ಭದ್ರಕೋಟೆಯಾಗಿರುವ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಬಿಟ್ಟಿ ಭರವಸೆಗಳನ್ನು ನೀಡಿತ್ತು. ಅದೇನೆಂದರೆ, ಹಿರಿಯ ನಾಗರಿಕರಿಗೆ ಉಚಿತ ಬಸ್ ಪ್ರಯಾಣ, ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಕಾಲೇಜು ಹೆಣ್ಣುಮಕ್ಕಳಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಆರ್ಥಿಕವಾಗಿ ಹಿಂದುಳಿದ ಗರ್ಭಿಣಿಯರಿಗೆ ಉಚಿತ ಮಾಸಿಕ ಪೌಷ್ಟಿಕಾಂಶ ಯೋಜನೆ, ಪ್ರತಿ ವರ್ಷ ಎರಡು ಅಡುಗೆ ಅನಿಲ ಸಿಲಿಂಡರ್ ಇತ್ಯಾದಿಗಳು. ‘ಇದರೊಂದಿಗೆ ಬಿಜೆಪಿ ಉಚಿತಗಳ ವಿರುದ್ಧ ತನ್ನ ನಿಲುವನ್ನು ಬದಲಿಸಿಕೊಂಡಿದೆ’ ಎಂದು ವಿರೋಧ ಪಕ್ಷಗಳು ಟೀಕಿಸಿತು.

ಮುಂದೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಉಚಿತ ಭರವಸೆಗಳನ್ನು ನೀಡಿತ್ತು. ಕರ್ನಾಟಕದಲ್ಲಿ ಬಡವರಿಗೆ ದಿನಕ್ಕೆ ಅರ್ಧ ಲೀಟರ್ ಹಾಲು, ವರ್ಷಕ್ಕೆ ಮೂರು ಅಡುಗೆ ಅನಿಲ ಸಿಲಿಂಡರ್‌ಗಳು, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಯಂದು ಬಡವರಿಗೆ ಉಚಿತ ಸಿಲಿಂಡರ್ ನೀಡಲಾಗುವುದು ಮುಂತಾದ ಹತ್ತುಹಲವು ಭರವಸೆಗಳನ್ನು ಬಿಜೆಪಿ ನೀಡಿತ್ತು.

ಇದೀಗ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ರಂಗೇರುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಛತ್ತೀಸ್ ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ವಿವಾಹಿತ ಮಹಿಳೆಯರಿಗೆ ವಾರ್ಷಿಕ 12 ಸಾವಿರ ರೂಪಾಯಿಗಳು ನೀಡುವುದಾಗಿ ಭರವಸೆ ನೀಡಿದ್ದಾರೆ. ಅಂದರೆ, ತಮಿಳುನಾಡಿನ ಡಿಎಂಕೆ ಸರ್ಕಾರ ಮಹಿಳೆಯರಿಗೆ 1000 ರೂಪಾಯಿ ಮಹಿಳಾ ಸ್ಟೈಫಂಡ್ ನೀಡುತ್ತಿರುವಂತೆಯೇ ಛತ್ತೀಸ್‌ಗಢದಲ್ಲಿ ಬಿಜೆಪಿ ಯೋಜನೆಯನ್ನು ಘೋಷಿಸಿದೆ. ಇದರಿಂದಾಗಿ ಡಿಎಂಕೆ ಆಡಳಿತದ ಯೋಜನೆಯನ್ನು ಬಿಜೆಪಿ ನಕಲು ಮಾಡುತ್ತಿದೆ ಎಂಬ ಟೀಕೆಯೂ ವ್ಯಕ್ತವಾಗಿದೆ.

ಇದನ್ನೂ ಓದಿ: ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು: ಸುಪ್ರೀಂ ಕೋರ್ಟ್!

ಬಿಟ್ಟಿಗಳನ್ನು ವಿರೋಧಿಸುವ ಬಿಜೆಪಿಯವರು ಉಚಿತ ಭರವಸೆಗಳನ್ನು ನೀಡುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನೂ ರಾಜಕೀಯ ವಿಮರ್ಶಕರು ಎತ್ತುತ್ತಿದ್ದಾರೆ. ಉಚಿತಗಳು ಎಂದು ಪ್ರಧಾನಿ ಮೋದಿಯಂತಹವರು ಮಾತನಾಡುವುದು ರಾಜ್ಯ ಸರ್ಕಾರಗಳು ಜಾರಿಗೊಳಿಸುವ ಬಡವರ ಕಲ್ಯಾಣ ಯೋಜನೆಗಳನ್ನೇ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಅದನ್ನೇ ಬಿಜೆಪಿ ಮತ್ತು ಸಂಘಪರಿವಾರದವರು ವಿರೋಧಿಸುವುದು.  

ಅದೇ ಸಮಯದಲ್ಲಿ, ದೊಡ್ಡ ಕಾರ್ಪೊರೇಟ್‌ಗಳಿಗೆ ನೀಡುತ್ತಿರುವ ಆ ಉಚಿತಗಳನ್ನು ಬಿಜೆಪಿ ವಿರೋಧಿಸುವುದಿಲ್ಲ! ಕಳೆದ ಒಂಬತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಸಾಲ ಮನ್ನಾ ಮತ್ತು ತೆರಿಗೆ ವಿನಾಯಿತಿ ಎಂದು 25 ಲಕ್ಷ ಕೋಟಿ ರೂಪಾಯಿಗಳನ್ನು ಬಿಜೆಪಿ ಸರ್ಕಾರ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ನೀಡಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಆದರೆ, ಸಣ್ಣಪುಟ್ಟ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಬಡವರಿಗೆ ನೀಡುವ ಮೂಲಭೂತ ಸೌಲಭ್ಯಗಳನ್ನು ಮಾತ್ರ ‘ಉಚಿತ’ ಎಂದು ಬಿಜೆಪಿ ವಿರೋಧಿಸುತ್ತದೆ.

ಇದನ್ನೂ ಓದಿ: ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ಯನ್ನು ವ್ಯಂಗ್ಯವಾಗಿ ಸ್ವಾಗತ ಮಾಡಿದ ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ!

ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿಗಳ ವಿರುದ್ಧ ಮಾತನಾಡುತ್ತಿದ್ದರೂ ಬಿಜೆಪಿ ಚುನಾವಣೆಯ ಸಮಯದಲ್ಲಿ ಬಿಟ್ಟಿಗಳೆಂಬ ಅಸ್ತ್ರವನ್ನು ತಪ್ಪದೇ ಹೊರತಂದು ಮತದಾರರ ಮುಂದೆ ಜಳಪಿಸುತ್ತದೆ! ವಿರೋಧ ಪಕ್ಷಗಳ ಬಿಟ್ಟಿಗಳನ್ನು ಟೀಕಿಸುವ ಮೋದಿ ಅವರು, ಸ್ವಂತ ಪಕ್ಷದ ಬಿಟ್ಟಿ ಘೋಷಣೆಗಳ ಬಗ್ಗೆ ಮಾತನಾಡದೇ ಹಾದುಹೋಗುತ್ತಾರೆ!?

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!