ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Madal Virupakshappa Archives » Dynamic Leader
October 23, 2024
Home Posts tagged Madal Virupakshappa
ರಾಜಕೀಯ

“ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ! ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ! ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ! ಇದೇ ಅಂತರಂಗ ಶುದ್ದಿ ಇದೇ ಬಹಿರಂಗ ಶುದ್ದಿ! – ನರೇಂದ್ರ ಮೋದಿ ಅವರೇ ನಿಮ್ಮ ಇಂದಿನ ಭಾಷಣ ಕೇಳಿ ಬಸವಣ್ಣನವರ ಈ ವಚನ ನೆನಪಾಯಿತು. ಇದು ನಿಮ್ಮ ನಡೆ-ನುಡಿಗೆ ಹೇಳಿ ಮಾಡಿಸಿದಂತಿದೆ”. ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸರಣಿ ಟ್ವೀಟ್‌ಗಳನ್ನು ಹಾಕಿ ಪ್ರಧಾನಿ ನರೇಂದ್ರ ಮೋದಿಗೆ ಸರಿಯಾದ ಟಕ್ಕರ್ ನೀಡಿದ್ದಾರೆ.

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎನ್ನುವ ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಅಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ? ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟ ಮುಖಗಳೂ ಕಾಣಲಿಲ್ಲವೇ ನರೇಂದ್ರ ಮೋದಿ?

ಅದಾನಿ

ರಾಜ್ಯದ ಬಿಜೆಪಿ ಸಚಿವರ 40% ಕಮಿಷನ್ ಕಿರುಕಳದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ? ಕಳೆದ ಮೂರುವರೆ ವರ್ಷಗಳಲ್ಲಿ ಒಂದೂವರೆ ಲಕ್ಷ ಕೋಟಿ ರೂಪಾಯಿಗಳನ್ನು ಲೂಟಿ ಹೊಡೆದಿರುವ ರಾಜ್ಯದ ಬಿಜೆಪಿ ಸಚಿವರಿಗೆ ಖಂಡಿತ ಇದು ಅಮೃತ ಕಾಲ. ಆದರೆ ನಿಮ್ಮಂತಹ ಭ್ರಷ್ಟರ ಸರ್ಕಾರ ಪಡೆದ ರಾಜ್ಯದ ಜನತೆಗೆ ಇದು ವಿಷಕಾಲ ನರೆಂದ್ರ ಮೋದಿ ಅವರೇ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ? ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲದಲ್ಲಿಯೇ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದಿರಿ, ಅವರನ್ನು ಎರಡೆರಡು ಬಾರಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದಿರಿ, ಅವರ ಮಗನಿಗೆ ಕನಿಷ್ಠ ಶಾಸಕನನ್ನಾಗಿ ಮಾಡಲಿಲ್ಲ, ಸಚಿವರನ್ನಾಗಿ ಮಾಡಲಿಲ್ಲ. ಈಗ ಐಟಿ, ಇಡಿ, ಸಿಬಿಐ ಮೂಲಕ ಬಾಯಿಮುಚ್ಚಿಸಿ ಕೂರಿಸಿರುವವರು ನೀವೇ ಅಲ್ಲವೇ ನರೇಂದ್ರ ಮೋದಿ ಅವರೇ?

ಬಿ.ಎಸ್.ಯಡಿಯೂರಪ್ಪ

ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸಂಜಯ ಪಾಟೀಲ್, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ ನರೇಂದ್ರ ಮೋದಿ ಜೀ?

ಲಕ್ಷ್ಮಣ ಸವದಿ

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಲಿಂಗಾಯತರ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಯಾವ ಕಾರಣಕ್ಕೆ ಈ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದಿರಿ? ಅವರ ಮೇಲೆ ಭ್ರಷ್ಟಾಚಾರದ ಆರೋಪಗಳಿತ್ತಾ? ಸಿಡಿ ಹಗರಣ ಇತ್ತೇ? ಅವರು ಒಳ್ಳೆಯ ಆಡಳಿತಗಾರರರಾಗಿರಲಿಲ್ಲವೇ? ಯಾಕೆ ಅವರನ್ನು ಮೂಲೆಗೆ ತಳ್ಳಿದ್ದೀರಿ? ಅವರ ಈ ಪ್ರಶ್ನೆಗಳು ರಾಜ್ಯದ ಲಿಂಗಾಯತರ ಪ್ರಶ್ನೆಯೂ ಹೌದು. ಧಮ್-ತಾಕತ್ ಇದ್ದರೆ ಇದಕ್ಕೆ ಉತ್ತರ ಕೊಡಿ ನರೇಂದ್ರ ಮೋದಿ ಜೀ.

ಜಗದೀಶ್ ಶೆಟ್ಟರ್

ಬಂಜಾರ ಸಮುದಾಯ ಮತ್ತು ಕಾಂಗ್ರೆಸ್ ಸಂಬಂಧಕ್ಕೆ ಹುಳಿ ಹಿಂಡುವ ನಿಮ್ಮ ಕುತಂತ್ರ ಫಲ ನೀಡಲಾರದು. ಬಂಜಾರರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಪಕ್ಷ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಭೂ ಸುಧಾರಣೆ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿಯನ್ನು ತಂದಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ ಎನ್ನುವುದು ನಿಮಗೆ ತಿಳಿದಿಲ್ಲವೇ ನರೇಂದ್ರ ಮೋದಿ ಅವರೇ?

ಲಂಬಾಣಿ ತಾಂಡಾ

ನರೇಂದ್ರ ಮೋದಿಯವರೇ ನಿಮ್ಮ ಇಡೀ ರಾಜಕೀಯ ಬದುಕೇ ಒಂದು ಸುಳ್ಳಿನ ಕೋಟೆ. ಅದು ಮುರಿದು ಬೀಳುವ ಕಾಲ ಬಂದಿದೆ. ಕಾಂಗ್ರೆಸ್ ನಿಮ್ಮನ್ನು 91 ಬಾರಿ ನಿಂದಿಸಿದೆ ಎನ್ನುವುದು ನಿಮ್ಮ ಇತ್ತೀಚಿನ ಸುಳ್ಳು. ನಮ್ಮ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ನಿಂದಿಸುವುದೇ ನಿಮ್ಮ ಮತ್ತು ನಿಮ್ಮ ಪಕ್ಷದ ನಾಯಕರ ದಿನಚರಿ ಅಲ್ಲವೇ ನರೇಂದ್ರ ಮೋದಿ ಜೀ?

ಸೋನಿಯಾ ಗಾಂಧಿಯವರನ್ನು ಜರ್ಸಿ ಕೌ, ಬಾರ್ ಡಾನ್ಸರ್, ಕಾಂಗ್ರೆಸ್ ಕಿ ವಿಧವಾ ಇನ್ನೂ ಏನೇನೋ ಅಂದವರು ನೀವೇ ಅಲ್ಲವೇ? ನಿಮ್ಮದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ತಾನೆ ಸೋನಿಯಾಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿಲ್ಲವೇ? ನಿಮ್ಮ ರಕ್ತದ ಕಣಕಣದಲ್ಲಿಯೂ ದ್ವೇಷಾಸೂಯ ವಿಷ ಇಲ್ಲವೇ ನರೇಂದ್ರ ಮೋದಿ?

ಸೋನಿಯಾ ಗಾಂಧಿ

ರಾಜ್ಯದ ಬಿಜೆಪಿ ಸರ್ಕಾರ 9 ಲಕ್ಷ ಮನೆಗಳನ್ನು ಕಟ್ಟಿದೆ ಎಂಬ ಹಸಿ ಹಸಿ ಸುಳ್ಳು ಹೇಳಿದ್ದಿರಲ್ಲಾ, ನಾವು ಕಟ್ಟಿರುವ ಮನೆಗಳ ಲೆಕ್ಕವನ್ನು ನಿಮಗೆ ಕೊಟ್ಟು ನಿಮ್ಮಿಂದ ಸುಳ್ಳು ಹೇಳಿಸಿದ ವಸತಿ ಸಚಿವರನ್ನು ಒಮ್ಮೆ ಜನರ ಮಧ್ಯೆ ಬಹಿರಂಗ ಚರ್ಚೆಗೆ ಕರೆತನ್ನಿ. ಇದು ನನ್ನ ಸವಾಲು ನರೇಂದ್ರ ಮೋದಿ.

2013-18ರ ಅವಧಿಯಲ್ಲಿ ರೈತರಿಗೆ ಕೊಟ್ಟ ಮಾತಿನಂತೆ 50 ಸಾವಿರ ಕೋಟಿಗೂ ಹೆಚ್ಚು ಹಣವನ್ನು ನೀರಾವರಿಗೆ ಖರ್ಚು ಮಾಡಿ ರೈತರ ಹೊಲಕ್ಕೆ ನೀರು ಹರಿಸಿದ ಹೆಮ್ಮೆ ನಮ್ಮದು. ಮೇಕೆದಾಟು, ಕಳಸ-ಬಂಡೂರಿ ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳೆರಡೂ ನಿರ್ಲಕ್ಷಿಸುತ್ತಾ ಬಂದಿದೆ ಎನ್ನುವುದನ್ನು ರಾಜ್ಯದ ರೈತರಿಗೆ ಗೊತ್ತಿದೆ ನರೇಂದ್ರ ಮೋದಿ.

ಕಳಸ-ಬಂಡೂರಿ

ಕಮಿಷನ್ ನುಂಗುವ ಕರ್ನಾಟಕ ಬಿಜೆಪಿ ಸರ್ಕಾರದ ಚಾಳಿ ಮಠ-ಮಂದಿರಗಳನ್ನೂ ಬಿಟ್ಟಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತರ ಕರ್ನಾಟಕದ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದರೆ ಅದು ತಲುಪುವಾಗ ಕಡ್ಡಿ ಮಾತ್ರ ಉಳಿಯುತ್ತದೆ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಗಳ ಆಕ್ರೋಶ ನಿಮಗೆ ಕೇಳಿಸಿಲ್ಲವೇ ನರೇಂದ್ರ ಮೋದಿ?

ವಿರೂಪಾಕ್ಷಪ್ಪ ಮಾಡಾಳ್

ನಿಮ್ಮದೇ ಪಕ್ಷದ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮತ್ತು ಅವರ ಮಗ ಈಗ ಜೈಲಲ್ಲಿರುವುದು ಯಾವ ದೇಶ ಸೇವೆ ಮಾಡಿದ್ದಕ್ಕಾಗಿ ಮೋದಿಯವರೇ? ಪ್ರತಿಷ್ಠಿತ ಕೆಎಸ್ ಡಿಸಿಎಎಲ್ ಕಚೇರಿಯಲ್ಲಿಯೇ ಈ ಶಾಸಕರ ಮಗ ಲಂಚ ತಿನ್ನುವಾಗ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದನ್ನಲ್ಲಾ? ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲಿ ಎಂಟುವರೆ ಕೋಟಿ ಹಣವನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದರಲ್ಲಾ ಅದೇನು ಅವರು ಬೆಳೆದ ಅಡಿಕೆ ಮಾರಾಟದ ದುಡ್ಡೇ ಮೋದಿ? ಎಂದು ಪ್ರಶ್ನೆಗಳನ್ನು ಕೇಳುವ ಮೂಲಕ ಬಿಜೆಪಿಯ ಭ್ರಷ್ಟಾಚಾರ, ಆಡಳಿತ ವೈಫಲ್ಯ, ದ್ವೇಷಾಸೂಯ ರಾಜಕಾರಣದ ಬಗ್ಗೆ ಕಿಡಿ ಕಾರಿದ್ದಾರೆ.

ರಾಜಕೀಯ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ ಸಿಕ್ಕ ಕೋಟ್ಯಂತರ ರೂ. ಹಣ ಚುನಾವಣೆಗೆ ಹೊಂದಿಸಿಟ್ಟಿದ್ದು ಎಂಬ ಸಂಗತಿ ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಒಬ್ಬ ಶಾಸಕನ ಮನೆಯಲ್ಲಿ ಇಷ್ಟು ದುಡ್ಡು ಚುನಾವಣೆಗಾಗಿ ಸಂಗ್ರಹವಾಗಿದೆ ಅಂದ್ರೆ, ಬಿಜೆಪಿ ಸರ್ಕಾರದ ಸಚಿವರ ಕತೆ ಏನು? ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.

ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಹೋಗಿ ಮಾಡಾಳ್ ಅವರು ಸಿಕ್ಕಿಹಾಕಿಕೊಂಡಿದ್ದಾರೆ. ಹಣದ ಥೈಲಿಯಲ್ಲಿ ಬಿಜೆಪಿ ಸರ್ಕಾರ ಮುಳುಗಿರುವುದು ಗುಟ್ಟಾಗಿ ಉಳಿದಿಲ್ಲ. 40% ಕಮಿಷನ್ ದಂಧೆಯಲ್ಲಿ ಇವರೆಲ್ಲ ಎಷ್ಟು ದುಡ್ಡು ಲೂಟಿ ಹೊಡೆದಿದ್ದಾರೆ? ಚುನಾವಣೆಯಲ್ಲಿ ನೀರಿನ ರೀತಿ ಹಣ ಖರ್ಚು ಮಾಡುವುದಕ್ಕೆ ಭೂಮಿಕೆ ಸಿದ್ಧವಾಗಿದೆ.

ಕಳಪೆ ಆಡಳಿತ, ಜನರ ತೆರಿಗೆ ಹಣದ ಸುಲಿಗೆ, ಕೋಮು ರಾಜಕಾರಣ ಇವೇ ಮುಂತಾದ ಕುಕೃತ್ಯಗಳನ್ನು ಮಾಡಿ ಹೇಳಿಕೊಳ್ಳಲು ಒಂದು ಕೆಲಸವಿಲ್ಲದ ಕೆಟ್ಟ ಸರ್ಕಾರವಿದು. ಈಗ ಕೋಟಿಗಟ್ಟಲೆ ಹಣ ಸಂಗ್ರಹಿಸಿ ಚುನಾವಣೆಗೆ ಸುರಿಯಲು ಮುಂದಾಗಿದ್ದಾರೆ. ರಾಜ್ಯದ ಜನತೆಯನ್ನು ದುಡ್ಡಿನಲ್ಲಿ ಕೊಳ್ಳಲು ಸಾಧ್ಯವಿಲ್ಲ. ಈ ಸಲ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ.