ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Madhya Pradesh Archives » Dynamic Leader
October 23, 2024
Home Posts tagged Madhya Pradesh
ದೇಶ ರಾಜಕೀಯ

ರಾಯ್‌ಪುರ: ಪ್ರಧಾನಿ ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಛತ್ತೀಸ್‌ಗಢ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಛತ್ತೀಸ್‌ಗಢದ ಪಲೋಡಾ ಬಜಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು: ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮೋದಿ ಗ್ಯಾರಂಟಿ ಎಂದರೆ ಅದು ಅದಾನಿಯ ಗ್ಯಾರಂಟಿಯೇ.

ಛತ್ತೀಸ್‌ಗಢದಲ್ಲಿ ಕೆ.ಜಿ.ಯಿಂದ ಪಿ.ಜಿ.ವರೆಗೆ ಉಚಿತ ಶಿಕ್ಷಣ ನೀಡಲು ಭೂಪೇಶ್ ಬಾಗಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಜಾತಿವಾರು ಜನಗಣತಿ:
ಮಧ್ಯಪ್ರದೇಶದ ದಾಡಿಯಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು, “ಮಧ್ಯಪ್ರದೇಶದಲ್ಲಿ ನಾವು (ಕಾಂಗ್ರೆಸ್) ಅಧಿಕಾರಕ್ಕೆ ಬಂದರೆ, ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ. ಜಾತಿವಾರು ಜನಗಣತಿ ನಡೆಸುತ್ತೇವೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರಕ್ಕಾಗಿ ರೈತರು ಉದ್ದನೆಯ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇಲ್ಲಿ ರಸಗೊಬ್ಬರ ಸಿಗುತ್ತಿಲ್ಲ. ಮಧ್ಯಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ರಸಗೊಬ್ಬರದ ಚೀಲಗಳ ಮೇಲೆ ಮೋದಿ ಫೋಟೋ ಅಂಟಿಸಿದ್ದಕ್ಕೆ ಚುನಾವಣಾ ಆಯೋಗ ಗೊಬ್ಬರ ವಿತರಣೆಗೆ ನಿಷೇಧ ಹೇರಿದೆ. ಇದರಿಂದ ಮಧ್ಯಪ್ರದೇಶದ ರೈತರು ಕಂಗಾಲಾಗಿದ್ದಾರೆ” ಎಂದು ಮಾತನಾಡಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮಧ್ಯಪ್ರದೇಶದಲ್ಲಿ ಸೋಲನ್ನು ತಪ್ಪಿಸಲು ಬಿಜೆಪಿಯಿಂದ ಕೇಂದ್ರ ಸಚಿವರಿಗೆ ಶಾಸಕ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಳಗಳಲ್ಲಿ ಕಾಂಗ್ರೆಸ್ ಪಕ್ಷ 114 ಸ್ಥಾನಗಳನ್ನು ಗೆದ್ದುಕೊಂಡಿತು. ಆ ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು.

ಆದರೆ ಕಳೆದ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದರು. ಇದರಿಂದ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿತು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನದ ಅಲೆ ಎದ್ದಿದೆ.

ಸದ್ಯದಲ್ಲೇ ಅಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಇತ್ತೀಚಿನ ಸಮೀಕ್ಷೆಗಳು ಬಹಿರಂಗಪಡಿಸಿವೆ. ಇದರಿಂದ ಬಿಜೆಪಿ ನಾಯಕತ್ವ ತೀವ್ರ ಆಘಾತಕ್ಕೊಳಗಾಗಿದೆ.

ಈ ಹಿನ್ನಲೆಯಲ್ಲಿ, ಮಧ್ಯಪ್ರದೇಶದಲ್ಲಿ ಸೋಲು ತಪ್ಪಿಸಲು ಬಿಜೆಪಿಯಿಂದ ಕೇಂದ್ರ ಸಚಿವರಿಗೆ ವಿಧಾನಸಭೆಗೆ ಟಿಕೆಟ್ ನೀಡಲಾಗಿದೆ. ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗನ್ ಸಿಂಗ್ ಕುಲಸ್ತೆ ಸೇರಿದಂತೆ 7 ಸಂಸದರನ್ನು ಬಿಜೆಪಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸುವ ಮೂಲಕ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಈಗಾಗಲೇ ಅಲ್ಲಿ ಬಿಜೆಪಿ ವರ್ಚಸ್ಸು ಕುಸಿದಿದ್ದು, ಜನರಿಗೆ ಒಂದಷ್ಟು ಪರಿಚಿತ ಮುಖಗಳನ್ನು ಬಳಸಿಕೊಂಡರೆ ಅಲ್ಲಿ ಆಗಿರುವ ಹಾನಿಯನ್ನು ಸ್ವಲ್ಪ ಕಡಿಮೆ ಮಾಡಬಹುದು ಎಂದು ಬಿಜೆಪಿ ಭಾವಿಸಿದೆ ಎನ್ನಲಾಗಿದೆ.

ದೇಶ

ಸಹ ಮನುಷ್ಯನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣದಲ್ಲಿ ದಿಢೀರ್ ಟ್ವಿಸ್ಟ್; ಬಾಧಿತ ವ್ಯಕ್ತಿ ಆರೋಪಿಯನ್ನು ಖುಲಾಸೆಗೊಳಿಸುವಂತೆ ಮನವಿ ಮಾಡಿರುವುದು ಎಲ್ಲರನ್ನೂ ಚಕಿತಗೊಳಿಸುವಂತೆ ಮಾಡಿದೆ.

ಆರೋಪಿಗೆ ತಾನು ಮಾಡಿರುವುದು ಅಪರಾಧವೆಂದು ಅರಿವಾಗಿರುವುದರಿಂದ ಆತನನ್ನು ಬಿಡುಗಡೆ ಮಾಡಬಹುದು ಎಂದು ಬುಡಕಟ್ಟು ಜನಾಂಗದ ದಶ್ಮತ್ ರಾವತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶ ಸಿಧಿ ಜಿಲ್ಲೆಗೆ ಸೇರಿದ ಅದಿವಾಸಿ ಯುವಕನ ಮೇಲೆ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ, ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆ ಕೆಲವು ದಿನಗಳ ಹಿಂದೆ ನಡೆದಿತ್ತು. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ದೇಶಾದ್ಯಂತ ಸಂಚಲನ ಮೂಡಿಸಿತು.

ನಂತರದ ತನಿಖೆಯಲ್ಲಿ, ಸಿಧಿ ಜಿಲ್ಲೆಯ 36 ವರ್ಷದ ದಶ್ಮತ್ ರಾವತ್ ಸಂತ್ರಸ್ತನಾಗಿದ್ದು, ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಎಂದು ತಿಳಿದುಬಂದಿತು. ಆರೋಪಿ ಪ್ರವೇಶ್ ಶುಕ್ಲಾ, ಕ್ಷೇತ್ರದ ಬಿಜೆಪಿ ಶಾಸಕ ಕೇದಾರ್ ಶುಕ್ಲಾ ಅವರ ಪ್ರತಿನಿಧಿ ಎಂದು ವಿರೋಧ ಪಕ್ಷಗಳು ಬಲವಾಗಿ ಆರೋಪಿಸಿತು. ಆದರೆ, ಶಾಸಕ ಕೇದಾರ್ ಶುಕ್ಲಾ ಅವರು, “ಪ್ರವೇಶ್ ಶುಕ್ಲಾ ಅವರನ್ನು ಕ್ಷೇತ್ರದ ವ್ಯಕ್ತಿಯಾಗಿ ನನಗೆ ತಿಳಿದಿದೆ. ಆದರೆ, ಬಿಜೆಪಿಗೂ ಆತನಿಗೂ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಆಡಳಿತಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದರು.ಮತ್ತು ಕಳೆದ ಗುರುವಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂತ್ರಸ್ತನನ್ನು ಭೋಪಾಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಕರೆದು, ಅವರ ಪಾದಗಳನ್ನು ತೊಳೆದು ಕ್ಷಮೆಯಾಚಿಸಿದರು. ಆದರೆ ಮುಖ್ಯಮಂತ್ರಿಗಳ ಈ ಕ್ರಮ ಬರೀ ನಾಟಕ ಎಂದು ವಿರೋಧ ಪಕ್ಷಗಳು ವ್ಯಂಗ್ಯ ಮಾಡಿದವು.

ಇದನ್ನೂ ಓದಿ: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಮುಖಂಡನ ಬಂಧನ!

ಸಿಧಿ ಪೊಲೀಸರು ಪ್ರವೇಶ್ ಶುಕ್ಲಾ ವಿರುದ್ಧ ಐಪಿಸಿ ಸೆಕ್ಷನ್ 294 ಮತ್ತು 504, SC/ST ಕಾಯಿದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ಕಳೆದ ಬುಧವಾರ ಬಂಧಿಸಿದರು. ಈ ಹಿನ್ನಲೆಯಲ್ಲಿ ಪ್ರವೇಶ್ ಶುಕ್ಲಾ ಅವರಿಂದ ಬಾಧೆಗೊಳಗಾದ ದಶ್ಮತ್ ರಾವತ್, ಆತನನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾನೆ.

ಇದರ ಬಗ್ಗೆ ಮಾತನಾಡಿದ ಸಂತ್ರಸ್ತ ದಶ್ಮತ್ ರಾವತ್, “ತಪ್ಪು ನಡೆದಿರುವುದು ನಿಜ; ಆದರೂ ಆತನನ್ನು ಬಿಡುಗಡೆ ಮಾಡುವಂತೆ ಸರ್ಕಾರವನ್ನು ಕೋರುತ್ತೇನೆ. ಪ್ರವೇಶ್ ಶುಕ್ಲಾಗೆ ತನ್ನ ತಪ್ಪಿನ ಅರಿವಾಗಿದೆ. ಅವರು ನಮ್ಮ ಹಳ್ಳಿಯ ಪಂಡಿತರು” ಎಂದು ಹೇಳಿದ್ದಾರೆ. ಇದು ಎಲ್ಲರನ್ನೂ ಚಕಿತಗೊಳಿಸುವಂತೆ ಮಾಡಿದೆ.

ದೇಶ ರಾಜ್ಯ

ಜಬಲ್ಪುರ್: ಮಧ್ಯಪ್ರದೇಶಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಲ್ಲಿನ ನರ್ಮದಾ ನದಿಗೆ ವಿಶೇಷ ಆರತಿ ಪೂಜೆ ಸಲ್ಲಿಸಿದರು. ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ, ‘ರಾಜ್ಯದಲ್ಲಿ 220 ತಿಂಗಳ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿವೆ’ ಎಂದು ಆರೋಪಿಸಿದರು.

ಮಧ್ಯಪ್ರದೇಶ ರಾಜ್ಯದಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಇದಕ್ಕಾಗಿ ಪ್ರಿಯಾಂಕಾ ಅಭಿಯಾನ ಆರಂಭಿಸಲಿದ್ದಾರೆ. ಇಂದು ಜಬಲ್ಪುರಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಕಮಲ್ ನಾಥ್, ಸಂಸದರು ಹಾಗೂ ಶಾಸಕರೊಂದಿಗೆ ನರ್ಮದಾ ನದಿಗೆ ತೆರಳಿ, ಅಲ್ಲಿ ಆರತಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹನುಮಂತನ ವೇಷ ಧರಿಸಿದ ಸ್ವಯಂ ಸೇವಕರು ಪ್ರಿಯಾಂಕಾ ಅವರನ್ನು ಸ್ವಾಗತಿಸಿದರು. ಅನೇಕರು ಪ್ರಿಯಾಂಕಾಗೆ ಹಿಂದೂ ದೇವರಾದ ಗಣೇಶನ ಚಿತ್ರಗಳನ್ನು ಉಡುಗೊರೆಯಾಗಿ ನೀಡಿದರು.

ನಂತರ ಜಬಲ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ನಮ್ಮ ಪಕ್ಷ (ಕಾಂಗ್ರೆಸ್) ಏನು ಭರವಸೆ ನೀಡಿತ್ತೋ, ಅವುಗಳನ್ನು ಛತ್ತೀಸ್‌ಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ಮಾಡಿ ತೋರಿಸಿದ್ದೇವೆ. ಕಾಂಗ್ರೆಸ್ ಆಡಳಿತದ ರಾಜ್ಯಗಳ ಸ್ಥಿತಿಯನ್ನು ನೋಡಿದರೆ ಅದು ನಿಮಗೇ ಅರ್ಥವಾಗುತ್ತದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಲವು ಕಾಮಗಾರಿಗಳು ಮತ್ತು ಅಭಿವೃದ್ಧಿಗಳನ್ನು ಕೈಗೊಳ್ಳಲಾಯಿತು. ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ, ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿತು. ವ್ಯಾಪಾರ ಮತ್ತು ಪಡಿತರ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ.

ರಾಜ್ಯದಲ್ಲಿ 220 ತಿಂಗಳ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿವೆ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಕೇವಲ 21 ಸರ್ಕಾರಿ ಉದ್ಯೋಗಗಳನ್ನು ಮಾತ್ರ ನೀಡಿದೆ. ಈ ಅಂಕಿ ಅಂಶವನ್ನು ನನ್ನ ಗಮನಕ್ಕೆ ತಂದಾಗ, ನಾನು ನನ್ನ ಕಛೇರಿಯಿಂದ ಮೂರು ಬಾರಿ ಪರಿಶೀಲಿಸಿದ್ದೇನೆ. ಅದು ಸತ್ಯ. ಮೇ 28 ರಂದು ಉಜ್ಜಯಿನಿಯಲ್ಲಿ ಬೀಸಿದ ಜೋರಾದ ಗಾಳಿಗೆ 6 ದೇವರ ಮೂರ್ತಿಗಳು ಬಿದ್ದು ಹಾನಿಗೀಡಾಗಿದ್ದವು. ಚೌಹಾಣ್ ಸರ್ಕಾರ ದೇವರನ್ನೂ ಬಿಡಲಿಲ್ಲ” ಎಂದರು.

ರಾಜಕೀಯ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ಎಲ್ಲಾ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಡೆಯಿತು. ಮೇ 13 ರಂದು ಮತ ಎಣಿಕೆ ನಡೆಯಿತು. ಇದರಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಸೋಲಿಸಿ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗಳಿಸಿತು.

ಈ ಗೆಲುವಿನೊಂದಿಗೆ ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಸಂಪೂರ್ಣವಾಗಿ ಮುಚ್ಚಿದೆ ಎಂದು ರಾಜಕೀಯ ವಿಮರ್ಶಕರು ಅಭಿಪ್ರಾಯಪಡುತ್ತಿದ್ದಾರೆ. ಮೇಲಾಗಿ ಕರ್ನಾಟಕದಲ್ಲಿ ಬಿಜೆಪಿಯ ಸೋಲು ಇತರ ರಾಜ್ಯಗಳಲ್ಲೂ ಪ್ರತಿಧ್ವನಿಸಲಿದೆ ಎಂದು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಹೇಳಿದ್ದವು.

ಈ ಹಿನ್ನಲೆಯಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಳಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಇತ್ತೀಚಿನ ಸಮೀಕ್ಷೆಯ ಫಲಿತಾಂಶಗಳು ಹೇಳುತ್ತಿವೆ. ಅಲ್ಲಿ ನಡೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಾನಗಳಲ್ಲಿ 114 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು.

ಆದರೆ ಕಳೆದ ವರ್ಷ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಪರಿಣಾಮವಾಗಿ ಅಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಅಧಿಕಾರಕ್ಕೆ ಬಂತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನವೇ ಹೆಚ್ಚಾಗಿತ್ತು.

ಸದ್ಯದಲ್ಲೇ ಅಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ನವಭಾರತ್ ಸಮಾಚಾರ್ (Navbharat Samachar) ಎಂಬ ಸುದ್ದಿ ಸಂಸ್ಥೆ, ಮಧ್ಯಪ್ರದೇಶದಲ್ಲಿ ಮುಂದಿನ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬುದರ ಕುರಿತು ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ. ಆ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 55 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಮತ್ತು ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

ಈ ಹಿಂದಿನ ಸಮೀಕ್ಷೆಗಳು ಕೂಡ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದವು ಎಂಬುದು ಗನಾರ್ಹ.