ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Mamata Banerjee Archives » Dynamic Leader
October 23, 2024
Home Posts tagged Mamata Banerjee
ದೇಶ

“ಮಹಿಳೆಯರ ಮೇಲಿನ ಅಪರಾಧಗಳಿಗಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಮಣಿಪುರದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದ್ದಾರೆಯೇ” – ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಅಪರಾಧಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಹೆಣಗಾಡುತ್ತಿರುವ ಬಿಜೆಪಿಗೆ ಪ್ರತಿಸ್ಪರ್ಧಿಯಾಗಿ ಮಮತಾ ಇದನ್ನು ಘೋಷಿಸಿದ್ದಾರೆ.

ಕೋಲ್ಕತ್ತಾದ ಆರ್‌.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದ 31 ವರ್ಷದ ಮಹಿಳಾ ಟ್ರೈನಿ ವೈದ್ಯೆಯನ್ನು ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಪ್ರಮುಖ ಆರೋಪಿಯಾದ ಭದ್ರತಾ ಸ್ವಯಂಸೇವಕ ಸಂಜಯ್ ರಾಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಕೋಲ್ಕತ್ತಾದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವೆಡೆ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಮಮತಾ ಅವರನ್ನು ಖಂಡಿಸಿ ಬಿಜೆಪಿ 12 ಗಂಟೆಗಳ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ, ತೃಣಮೂಲ ಕಾಂಗ್ರೆಸ್ ಯುವ ಘಟಕದ ಸಭೆಯಲ್ಲಿ ಮಾತನಾಡಿದ ಮಮತಾ, “ನಾವು ವಿಧಾನಸಭೆ ಸಭೆಯನ್ನು ಕರೆದು, ಏಳು ದಿನಗಳಲ್ಲಿ ಅತ್ಯಾಚಾರಿಯನ್ನು ಗಲ್ಲಿಗೇರಿಸಲು ಕಾನೂನಿಗೆ ತಿದ್ದುಪಡಿ ತರುತ್ತೇವೆ. ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ನ್ಯಾಯ ಸಿಗುವುದರಲ್ಲಿ ಆಸಕ್ತಿ ಇಲ್ಲ. ರಾಜ್ಯವನ್ನು ಅವಮಾನಿಸುವ ಯತ್ನವನ್ನು ಮಾಡುತ್ತಿದೆ.

ಆಗಷ್ಟ್ 31 ರಂದು ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆಗೆ ಪಕ್ಷ ಮುಂದಾಗಬೇಕು. ಮರುದಿನ ಮಹಿಳೆಯರು ಪ್ರತಿಭಟನೆ ನಡೆಸಬೇಕು. ಮಹಿಳೆಯರ ಮೇಲಿನ ಅಪರಾಧಗಳಿಗಾಗಿ ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಮಣಿಪುರದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದ್ದಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ

ರಾಜಕೀಯ

ಏಪ್ರಿಲ್ 19 ರಿಂದ ಸಂಸತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ಆ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತೀಚಿಗೆ ತಲೆಗೆ ಪೆಟ್ಟಾದ ಕಾರಣ, ಕೆಲ ದಿನಗಳ ನಂತರ ಮತ್ತೆ ಸಕ್ರಿಯ ಪ್ರಚಾರದಲ್ಲಿ ತೊಡಗಿದ್ದಾರೆ.

ಅದರಂತೆ ನಿನ್ನೆ ಕೃಷ್ಣಾ ನಗರ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಹುವಾ ಮೊಯಿತ್ರಾ ಅವರಿಗಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ಕುರಿತು ಮಾತನಾಡಿದ ಅವರು, “ಬಿಜೆಪಿ ಮತ್ತು ಅದರ ಮೈತ್ರಿಕೂಟ ದೇಶಾದ್ಯಂತ 400 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಮಾತನಾಡುತ್ತಿದೆ. ನಾನು ನಿಮಗೆ (ಬಿಜೆಪಿ) ಸವಾಲು ಹಾಕುತ್ತೇನೆ. 400 ಸ್ಥಾನಗಳಲ್ಲಿ ಬೇಡ; ಬರೀ 200 ಸ್ಥಾನಗಳಲ್ಲಿ ಗೆದ್ದು ತೋರಿಸಿ.

ಅದೇ ರೀತಿ ಕಳೆದ 2021ರ ವಿಧಾನಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿತ್ತು. ಆದರೆ ಅಂತಿಮವಾಗಿ ಅವರಿಗೆ ಕೇವಲ 77 ಸ್ಥಾನಗಳು ಮಾತ್ರವೇ ಸಿಕ್ಕಿದ್ದು. ಆ 77 ರಲ್ಲಿ ಕೂಡ ಕೆಲವರು ನಮ್ಮಲ್ಲಿ (ತೃಣಮೂಲ ಕಾಂಗ್ರೆಸ್‌) ಸೇರಿಕೊಂಡಿದ್ದಾರೆ. ಹೀಗಾಗಿ ಬಿಜೆಪಿಯವರು ಹೇಳುವುದನ್ನು ಗಂಭೀರವಾಗಿ ಪರಿಗಣಿಸಬೇಡಿ’’ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಅವರು, “ಬಿಜೆಪಿ ಖಾಲಿ (ಡಮ್ಮಿ) ಪಕ್ಷ. ಬಿಜೆಪಿಯವರು ಜನರಿಗೆ ಸುಳ್ಳು ಭರವಸೆಗಳನ್ನು ಮಾತ್ರವೇ ನೀಡುತ್ತಾರೆ. ಸಿಎಎ (CAA) ಕಾನೂನು ಬದ್ಧವಾದ ನಾಗರಿಕರನ್ನು ವಿದೇಶಿಯರನ್ನಾಗಿ ಮಾಡುವ ತಂತ್ರವಾಗಿದೆ. ಸಿಎಎ ಮೊದಲು ಬಂದರೆ, ನಂತರ ಎನ್‌ಆರ್‌ಸಿ (NRC) ಬರುತ್ತದೆ. ಪಶ್ಚಿಮ ಬಂಗಾಳದಲ್ಲಿ ಸಿಎಎ, ಎನ್‌ಆರ್‌ಸಿಯಂತಹ ಯಾವುದನ್ನೂ ನಾವು ಅನುಮತಿಸುವುದಿಲ್ಲ.

ನೀವು ಮತ್ತೆ ಕೇಂದ್ರ ಬಿಜೆಪಿ ಸರ್ಕಾರವನ್ನು ನಂಬಿದರೆ, ಅವರು ನಿಮ್ಮನ್ನೂ ವಿದೇಶಿಯರನ್ನಾಗಿ ಮಾಡುತ್ತಾರೆ. ಬಿಜೆಪಿಯವರನ್ನು ಎಂದಿಗೂ ನಂಬಬೇಡಿ. ‘ಬಿಜೆಪಿ ನಾಯಕರು ಸಿಎಎಗೆ ಏಕೆ ಅರ್ಜಿ ಸಲ್ಲಿಸಲಿಲ್ಲ? ಏಕೆಂದರೆ ಅವರು ಅರ್ಜಿ ಸಲ್ಲಿಸಿದರೆ, ಅವರು ತಮ್ಮನ್ನು ವಿದೇಶಿಯರೆಂದು ಘೋಷಿಸಬೇಕು. ಹಾಗಾಗಿ ಅವರು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.” ಎಂದರು.

ದೇಶ

ಕೊಲ್ಕತ್ತಾ: ಉತ್ತರ 24 ಪರಗಣ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪೌರತ್ವ ತಿದ್ದುಪಡಿ ಕಾಯ್ದೆಯು ಜನರ ಹಕ್ಕುಗಳನ್ನು ಕಸಿದುಕೊಳ್ಳುವ “ಗೇಮ್” ಆಗಿದೆ ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಮಮತಾ ಬ್ಯಾನರ್ಜಿ, ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನನಗೆ ಅನುಮಾನವಿದೆ. ನಿಯಮಗಳಲ್ಲಿ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸರ್ಕಾರ ಸ್ಪಷ್ಟ ಉತ್ತರವನ್ನೂ ನೀಡಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಎಂಬುದು ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಆಟವಾಗಿದೆ. 2019ರಲ್ಲಿ, 13 ಲಕ್ಷ ಹಿಂದೂ ಬಂಗಾಳಿಗಳ ಹೆಸರುಗಳನ್ನು ಪ್ರಕಟಿಸಲಾಯಿತು. ಅಸ್ಸಾಂನಲ್ಲಿ ಕೆಲವು ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಹೆಸರುಗಳು ತೆಗೆದುಹಾಕಲ್ಪಟ್ಟವರು ಪ್ರಸ್ತುತ ಪೌರತ್ವ ಕೋರಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದರೆ ನೀಡಲಾಗುವುದೇ? ಅವರ ಮಕ್ಕಳ ಭವಿಷ್ಯ ಏನಾಗಲಿದೆ? ಅವರ ಆಸ್ತಿಗಳನ್ನು ಏನು ಮಾಡುತ್ತಾರೆ? ಅವರನ್ನು ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ. ಪಶ್ಚಿಮ ಬಂಗಾಳದಿಂದ ಯಾರನ್ನೂ ಕರೆದುಕೊಂಡು ಹೋಗಲು ನಾನು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ದೇಶ

ಕೊಲ್ಕತ್ತ: ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಶ್ಚಿಮ ಬಂಗಾಳ ಸರ್ಕಾರ ನೀಡುತ್ತಿರುವ ಕಲ್ಯಾಣ ಯೋಜನೆಗಳನ್ನು ತಡೆಯಲು ಕೇಂದ್ರ ಸರ್ಕಾರ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ರೀತಿ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿರುವ ಬಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ದೂರುಗಳು ಬಂದಿವೆ. ತಮ್ಮ ಸರ್ಕಾರದ ವಿವಿಧ ಸಮಾಜ ಕಲ್ಯಾಣ ಯೋಜನೆಗಳ ಲಾಭವನ್ನು ಸಾಮಾನ್ಯ ಜನರಿಗೆ ಸಿಗದಂತೆ ತಡೆಯಲು ಬಿಜೆಪಿಯು ರಾಜ್ಯದಲ್ಲಿ ಜನರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಇಂದು ರಾಜ್ಯ ಸಚಿವಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಿದ್ದೇನೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಗೆ ಮುನ್ನ ಅನೇಕ ಆಧಾರ್ ಕಾರ್ಡ್‌ಗಳನ್ನು ಏಕೆ ನಿಷ್ಕ್ರಿಯಗೊಳಿಸಲಾಯಿತು? ಬಹುತೇಕ ‘ಮಾಟುವಾ’ ಸಮುದಾಯದ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಎಸ್‌ಟಿ ಮತ್ತು ಅಲ್ಪಸಂಖ್ಯಾತರ ಕಾರ್ಡ್‌ಗಳನ್ನೂ ನಿಷ್ಕ್ರಿಯಗೊಳಿಸಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ದೇಶ

ಕೋಲ್ಕತ್ತಾ: ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ನಡುವೆ ಜನವರಿ 22 ರಂದು ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ ‘ಸಾಮರಸ್ಯಕ್ಕಾಗಿ ರ‍್ಯಾಲಿ’ಯನ್ನು ಮುನ್ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಘೋಷಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ರಾಜ್ಯ ಕಾರ್ಯಾಲಯದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಜನವರಿ 22 ರಂದು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ನಂತರ ಎಲ್ಲ ಧರ್ಮದವರೊಂದಿಗೆ ‘ಸಾಮರಸ್ಯ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತೇನೆ. ಇದಕ್ಕೂ ಬೇರೆ ಯಾವುದೇ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಆಡಳಿತಾರೂಢ ಟಿಎಂಸಿಯ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಾಳಿಘಾಟ್ ದೇವಸ್ಥಾನದಲ್ಲಿ ಕಾಳಿ ದೇವಿಗೆ ಪೂಜೆ ಸಲ್ಲಿಸಿದ ನಂತರ ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್‌ನಿಂದ ಮೆರವಣಿಗೆಯನ್ನು ಪ್ರಾರಂಭಿಸುತ್ತಾರೆ ಎಂದು ತಿಳಿದು ಬಂದಿದೆ. ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭ ನಡೆಯುವ ಅದೇ ದಿನ ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ‍್ಯಾಲಿ’ ಆಯೋಜಿಸಿರುವುದು ಗಮನಾರ್ಹ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್
dynamicleaderdesk@gmail.com

ಸಂಸತ್ತಿನ ಚಳಿಗಾಲದ ಅಧಿವೇಶನದ 5ನೇ ದಿನವಾದ ಇಂದು (ಡಿ.8) ಲೋಕಸಭೆಯಲ್ಲಿ ಪ್ರಶ್ನೋತ್ತರ ಸಮಯ ಆರಂಭವಾದಾಗ ತೃಣಮೂಲ ಕಾಂಗ್ರೆಸ್ ಎಂ.ಪಿ. ಮಹುವಾ ಮೊಯಿತ್ರಾ ಅವರ ಉಚ್ಚಾಟನೆಗೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯ ವರದಿ ಮಂಡನೆಯಾಗಬೇಕಿದ್ದ ಸಂದರ್ಭದಲ್ಲಿ ಉಂಟಾದ ಗಲಭೆಯಿಂದ ಸ್ಪೀಕರ್ ಸದನವನ್ನು 12 ಗಂಟೆಗೆ ಮುಂದೂಡಿದರು.

ನಂತರ ಮತ್ತೆ 12 ಗಂಟೆಗೆ ಲೋಕಸಭೆ ಪ್ರಾರಂಭವಾಯಿತು. ಆಗ ಬಿಜೆಪಿ ಸಂಸದ ವಿಜಯ್ ಸೋಂಕರ್ ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಸದಸ್ಯೆ ಮಹುವಾ ಮೊಯಿತ್ರಾ ಅವರನ್ನು ವಜಾಗೊಳಿಸುವ ವರದಿಯನ್ನು ಮಂಡಿಸಿದರು. ಈ ನಿರ್ಣಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಸ್ತಾಪಿಸಿದರು. ಇದರ ಬೆನ್ನಲ್ಲೇ ತೃಣಮೂಲ ಮತ್ತು ಕಾಂಗ್ರೆಸ್ ಸದಸ್ಯರು ವರದಿಯ ನಕಲು ಪ್ರತಿ ನೀಡುವಂತೆ ಒತ್ತಾಯಿಸಿ ಧರಣಿ ನಡೆಸಿದರು.

“ಮೊಯಿತ್ರಾ ಅವರನ್ನು ಸದನದಿಂದ ಹೊರಹಾಕಲು ಶಿಫಾರಸು ಮಾಡುವ ವರದಿಯ ಮೇಲಿನ ಮತದಾನದ ಮೊದಲು ಚರ್ಚೆ ನಡೆಸಬೇಕು” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಆಗ್ರಹಿಸಿದರು. ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದರಿಂದ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಆಗ ಸ್ಪೀಕರ್ ಆಗಿದ್ದ ಬಿಜೆಪಿ ಸಂಸದ ರಾಜೇಂದ್ರ ಅಗರ್ವಾಲ್, “ಸದ್ಯ ವರದಿ ಮಾತ್ರ ಸಲ್ಲಿಕೆಯಾಗಿದೆ. ಈ ಬಗ್ಗೆ ಸದನ ನಿರ್ಧರಿಸಲಿದೆ” ಎಂದರು.

ನಂತರ 2 ಗಂಟೆಗೆ ಸದನ ಆರಂಭವಾದಾಗ, ಮಹುವಾ ಕುರಿತ ನಿರ್ಣಯದ ಮೇಲೆ ಚರ್ಚೆ ನಡೆಯಿತು. ಚರ್ಚೆಯ ನಂತರ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ನಿರ್ಣಯವನ್ನು ಅಂಗೀಕರಿಸಿದ ನಂತರ, ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸುವುದಾಗಿ ಸ್ಪೀಕರ್ ಓಂ ಬಿರ್ಲಾ ಅವರು ಘೋಷಿಸಿದರು. ಈ ನಿರ್ಧಾರವನ್ನು ವಿರೋಧಿಸಿ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದರು.

ಈ ವಿಚಾರದಲ್ಲಿ ಮಹುವಾ ಮೊಯಿತ್ರಾ ಅವರು ಆರೋಪ ಮಾಡಿದ ದಿನದಿಂದಲೂ ಅದನ್ನು ನಿರಾಕರಿಸುತ್ತಲೇ ಬಂದಿರುವುದು ಗಮನಾರ್ಹ. ನಂತರ ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹುವಾ ಮೊಯಿತ್ರಾ, “ಸಂಪೂರ್ಣ ತನಿಖೆ ನಡೆಸದೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇಡೀ ಸರ್ಕಾರ ಅದಾನಿ ಎಂಬ ಒಬ್ಬ ವ್ಯಕ್ತಿಗಾಗಿ ಕಾರ್ಯನಿರ್ವಹಿಸುತ್ತಿದೆ. ಜನರ ವೇದಿಕೆಯಲ್ಲಿ ಅದಾನಿ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಬದಲಾಗಿ ಅದಾನಿಯನ್ನು ಉಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಸಿದುಕೊಳ್ಳುತ್ತಿದೆ. ಸಂಸತ್ತಿನಲ್ಲಿ 300ಕ್ಕೂ ಹೆಚ್ಚು ಸದಸ್ಯರಿರುವ ಬಿಜೆಪಿಗೆ ಒಬ್ಬ ಮುಸ್ಲಿಂ ಸದಸ್ಯರಿಲ್ಲ. ದಮನಕಾರಿ ನೀತಿಯನ್ನು ಅನುಸರಿಸುತ್ತಿರುವ ಬಿಜೆಪಿ ಸರ್ಕಾರದ ಅಂತ್ಯ ಸಮೀಪಿಸಿದೆ” ಎಂದು ಭಾವೋದ್ವೇಗದಿಂದ ಹೇಳಿದರು.

ಮಹುವಾ ಮೊಯಿತ್ರಾ ಅವರನ್ನು ವಜಾಗೊಳಿಸಿರುವುದನ್ನು ವಿರೋಧ ಪಕ್ಷಗಳು ಖಂಡಿಸಿವೆ. “ಮಹುವಾ ಮೊಯಿತ್ರಾ ಅವರ ಕಡೆಯಿಂದ ವಿವರಣೆ ಕೇಳದೆ ಕ್ರಮ ಕೈಗೊಳ್ಳಲಾಗಿದೆ” ಎಂದು ವಿರೋಧ ಪಕ್ಷಗಳು ಖಂಡಿಸಿವೆ.

ಏತನ್ಮಧ್ಯೆ, ಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಮಹುವಾ ಮೊಯಿತ್ರಾ ಅವರು ಸಂಸತ್ತಿನ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “ದುರ್ಗಾ ಮಾತೆ ಬಂದಿದ್ದಾಳೆ; ಈಗ ನಾವು ನೋಡೋಣ. ಒಬ್ಬ ವ್ಯಕ್ತಿಯ ಮೇಲೆ ದುಷ್ಟ ಶಕ್ತಿ ಬಿದ್ದಾಗ, ಜ್ಞಾನವು ಮೊದಲು ನಾಶವಾಗುತ್ತದೆ. ವಸ್ತ್ರಾಹರಣ ಆರಂಭಿಸಿದ್ದಾರೆ; ಈಗ ನೀವು ಮಹಾಭಾರತ ಯುದ್ಧವನ್ನು ನೋಡುತ್ತೀರಿ” ಎಂದು ಹೇಳಿದರು.

ದೇಶ ರಾಜಕೀಯ

ಇಂದು ಬಿಹಾರದ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾಲೋಚನಾ ಸಭೆ ಮುಕ್ತಾಯವಾಗಿದೆ. ಜೆಡಿಯು ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಸುಮಾರು 4 ಗಂಟೆಗಳ ಕಾಲ ಸಮಾಲೋಚನೆ ಸಭೆ ನಡೆಯಿತು.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಕೆ.ಸಿ.ವೇಣುಗೋಪಾಲ್, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಹಾಗೂ ಟಿ.ಆರ್.ಬಾಲು, ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್‌ನ ಉಮರ್ ಅಬ್ದುಲ್ಲಾ,  ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕಿ ಮೆಹಬೂಬಾ ಮುಫ್ತಿ, ರಾಷ್ಟ್ರೀಯ ಜನತಾ ದಳದ ನಾಯಕ ಲಾಲು ಪ್ರಸಾದ್ ಯಾದವ್ ಹಾಗೂ ತೇಜಸ್ವಿ ಯಾದವ್, ಭಾರತೀಯ ಕಮ್ಯುನಿಸ್ಟ್ ಪಕ್ಷದ ನಾಯಕ ಡಿ.ರಾಜಾ, ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಸೀತಾರಾಂ ಯೆಚೂರಿ, ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಅಧ್ಯಕ್ಷ ಉದ್ಧವ್ ಠಾಕ್ರೆ,  ಜಾರ್ಖಂಡ್ ಮುಕ್ತಿ ಮೋರ್ಚಾ ಅಧ್ಯಕ್ಷ ಹೇಮಂತ್ ಸೊರೆನ್ ಸೇರಿದಂತೆ 15ಕ್ಕೂ ಹೆಚ್ಚು ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು.

ಸಮಾಲೋಚನಾ ಸಭೆಯ ನಂತರ, ವಿರೋಧ ಪಕ್ಷಗಳ ನಾಯಕರು ಜಂಟಿಯಾಗಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಭಾರತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಮಾತನಾಡಿ, “ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲಾಯಿತು. ಬಿಜೆಪಿಯ ಕಳೆದ 9 ವರ್ಷಗಳ ಆಡಳಿತ ಅನಾಹುತಕ್ಕೆ ಕಾರಣವಾಗಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಪ್ರಜಾಪ್ರಭುತ್ವ ಮತ್ತು ಸಮಾಜ ದುರಂತವಾಗಿದೆ. ಮೋದಿ ನೇತೃತ್ವದ ಸರ್ಕಾರ ದೊಡ್ಡ ಉದ್ಯಮಿಗಳ ಪರವಾಗಿ ನಾಚಿಕೆಯಿಲ್ಲದೆ ಕೆಲಸ ಮಾಡುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ದೇಶದಲ್ಲಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತದೆ. ಬಿಜೆಪಿಯನ್ನು ಸೋಲಿಸಲೇಬೇಕು ಎಂದು ವಿರೋಧ ಪಕ್ಷಗಳು ತೀರ್ಮಾನಿಸಿವೆ” ಎಂದರು.

ಮಲ್ಲಿಕಾರ್ಜುನ ಖರ್ಗೆ: “ಜಾತ್ಯತೀತ ಪಕ್ಷದ ನಾಯಕರ ಮುಂದಿನ ಸಭೆ ಜುಲೈ 12 ರಂದು ಶಿಮ್ಲಾದಲ್ಲಿ ನಡೆಯಲಿದೆ. ಸಭೆಯಲ್ಲಿ ರಾಜ್ಯಗಳ ಪ್ರಮುಖ ನಾಯಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪ್ರಾದೇಶಿಕ ಪಕ್ಷಗಳ ವಿಲೀನದ ಬಗ್ಗೆಯೂ ಚರ್ಚಿಸಿದ್ದೇವೆ” ಎಂದರು.

ರಾಹುಲ್ ಗಾಂಧಿ: ” ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶದ ರಚನೆಯನ್ನು ಹಾಳು ಮಾಡುತ್ತಿವೆ. ನಮ್ಮ ಭಿನ್ನಾಭಿಪ್ರಾಯಗಳ ಹೊರತಾಗಿಯೂ ನಾವು ಸಿದ್ಧಾಂತದಲ್ಲಿ ಒಂದಾಗಿದ್ದೇವೆ” ಎಂದರು.

ಮಮತಾ ಬ್ಯಾನರ್ಜಿ: “ಬಿಹಾರದಲ್ಲಿನ ಗೊಂದಲವೇ ವಿರೋಧ ಪಕ್ಷಗಳು ಒಗ್ಗೂಡಲು ಕಾರಣ. ಸಿಬಿಐ ಹಾಗೂ ಇಡಿಯನ್ನು ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರದ ಬಳಿ ಹೋರಾಡಬೇಕಿದೆ. ಕೇಂದ್ರ ಸರ್ಕಾರ ಯಾವುದೇ ವಿಷಯದ ಬಗ್ಗೆ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸುವುದಿಲ್ಲ. ನಾವು ಒಗ್ಗಟ್ಟಾಗಿದ್ದೇವೆ; ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಮುಂದಿನ ಸಭೆಯಲ್ಲಿ ಬಿಜೆಪಿಯನ್ನು ಸೋಲಿಸುವ ಬಗ್ಗೆ ವಿವರವಾಗಿ ಚರ್ಚಿಸುತ್ತೇವೆ. ಇತಿಹಾಸ ಇಲ್ಲಿಂದ ಆರಂಭವಾಗುತ್ತದೆ. ಇತಿಹಾಸ ಬದಲಿಸುವ ಬಿಜೆಪಿಯ ಪ್ರಯತ್ನವನ್ನು ಒಗ್ಗಟ್ಟಾಗಿ ಎದುರಿಸೋಣ. ಈ ಬಾರಿಯೂ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗೆದ್ದರೆ ಅದು ಭಾರತದ ಕೊನೆಯ ಸಾರ್ವತ್ರಿಕ ಚುನಾವಣೆಯಾಗಲಿದೆ” ಎಂದರು.

ಮೆಹಬೂಬಾ ಮುಫ್ತಿ: “ದೇಶದ ಜಾತ್ಯತೀತ ಸ್ವರೂಪದ ಮೇಲೆ ದಾಳಿ ನಡೆಯುತ್ತಿದೆ. ಗಾಂಧಿಯನ್ನು ಬೆಂಬಲಿಸೋಣ; ಗೋಡ್ಸೆಯನ್ನು ಅಲ್ಲ” ಎಂದು ಹೇಳಿದರು.

ವಿರೋಧ ಪಕ್ಷದ ನಾಯಕರ ಮುಂದಿನ ಸಭೆ ಜುಲೈ 12 ರಂದು ಶಿಮ್ಲಾದಲ್ಲಿ ನಡೆಯಲಿದೆ. ಈ ಸಭೆಗೆ ಕಾಂಗ್ರೆಸ್ ನೇತೃತ್ವ ವಹಿಸಲಿದೆ ಎಂದು ತಿಳಿದು ಬಂದಿದೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮೋದಿ ಆಡಳಿತವನ್ನು ಕಿತ್ತೊಗೆಯಲು ನಿರ್ಧರಿಸಿರುವ ಪಕ್ಷಗಳ ನಾಯಕರು ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಲಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪೂರ್ವ ಪ್ರಯತ್ನದಲ್ಲಿ ನಡೆಯಲಿರುವ ಸಭೆಯಾಗಿರುವುದರಿಂದ ಇದು ರಾಷ್ಟ್ರ ರಾಜಕಾರಣದಲ್ಲಿ ಭಾರೀ ನಿರೀಕ್ಷೆಯನ್ನು ಮೂಡಿಸಿದೆ.

ನಿತೀಶ್ ಕುಮಾರ್ ಅವರೇ ಪಾಟ್ನಾ ಸಭೆಯ ಹೀರೋ. ಏಕೆಂದರೆ ಒಂದಾಗಲು ಸಾದ್ಯವೇ ಇಲ್ಲವೆಂದ ಪಕ್ಷಗಳನ್ನೆಲ್ಲ ಒಟ್ಟುಗೂಡಿಸಿ, ಒಂದೇ ವೇದಿಕೆಗೆ ಕರೆತರುವುದರಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮುಂತಾದವುಗಳನ್ನು ಹೇಳಬಹುದು. ಕಳೆದ ತಿಂಗಳವರೆಗೆ ಕಾಂಗ್ರೆಸ್ ಜೊತೆ ಕೈಜೋಡಿಸುವ ಅವಕಾಶವೇ ಇಲ್ಲವೆಂದು ಹೇಳಿಕೊಂಡಿದ್ದ ಆ ಪರಿಸ್ಥಿತಿ ಈಗ ಸಂಪೂರ್ಣವಾಗಿ ಬದಲಾಗಿದೆ. ಅದಕ್ಕೆ ನಿತೀಶ್‌ಕುಮಾರ್ ಅವರ ಪ್ರಯತ್ನವೇ ಕಾರಣವಾಗಿದೆ.

ಸತತ ಎರಡು ಅವಧಿಗೆ ಅಧಿಕಾರದ ಗದ್ದುಗೆಯಲ್ಲಿ ಕುಳಿತಿರುವ ಬಿಜೆಪಿಯ್ ವಿರುದ್ಧ, ಬಹುತೇಕ ಪಕ್ಷಗಳು ಒಗ್ಗೂಡಿರುವುದು ರಾಷ್ಟ್ರ ರಾಜಕಾರಣದ ಪ್ರಮುಖ ಘಟನೆಯಾಗಿದೆ. ಅದೇ ಸಮಯದಲ್ಲಿ, ಈ ಕಾರ್ಯಕ್ರಮ ದೊಡ್ಡ ಪರಿಣಾಮ ಬೀರಬೇಕಾದರೆ, ಭಾಗವಹಿಸುವ ಪಕ್ಷಗಳ ಪ್ರಮುಖ ನಾಯಕರು ಮಾತ್ರ ಸಭೆಯಲ್ಲಿ ಭಾಗವಹಿಸಬೇಕೆಂಬುದು ಷರತ್ತಾಗಿದೆ. ಆದರೆ ಬಿಜೆಪಿಗೆ ಪರ್ಯಾಯವಾಗಿರುವ ಕಾಂಗ್ರೆಸ್ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈ ಸಭೆಯಲ್ಲಿ ಭಾಗವಹಿಸಲು ಆಸಕ್ತಿ ತೋರಿದರು. ಆದರೆ ಸಭೆಯಲ್ಲಿ ಪಕ್ಷಗಳ ನಾಯಕರು ಮಾತ್ರ ಭಾಗವಹಿಸಬೇಂಬ ನಿತೀಶ್ ಕುಮಾರ್ ಅವರ ಷರತ್ತನ್ನು ಒಪ್ಪಿಕೊಳ್ಳುವ ಮೂಲಕ ಖರ್ಗೆಯವರ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ.

ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಟಿ.ರಾಜಾ, ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಉದ್ಧವ್) ಅಧ್ಯಕ್ಷ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಕ್ತಿ ಮೋಚಾ ಅಧ್ಯಕ್ಷರೂ ಆಗಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರನ್ ಸೇರಿದಂತೆ 16 ರಿಂದ 20 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಕೆಲವು ನಾಯಕರನ್ನು ಹೊರತುಪಡಿಸಿ ಉಳಿದೆಲ್ಲ ವಿರೋಧ ಪಕ್ಷಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನಾಯಕರಾಗಲೀ ಅಥವಾ ಬೇರೆ ಪಕ್ಷಗಳ ಮುಖಂಡರೇ ಆಗಲಿ ಇಂತಹ ಪ್ರಯತ್ನ ನಡೆಸಿದ್ದರೆ, ಇಷ್ಟು ಪಕ್ಷಗಳ ಒಪ್ಪಿಗೆ ಸಿಗುತ್ತಿತ್ತೇನೋ ಎಂಬ ಅನುಮಾನ ಮೂಡುತ್ತಿದೆ. ಹಿರಿಯ ರಾಜಕಾರಣಿ ನಿತೀಶ್ ಕುಮಾರ್ ಅವರು ಎಲ್ಲಾ ಪಕ್ಷಗಳ ನಾಯಕರೊಂದಿಗೆ ನಿಕಟ ಸ್ನೇಹವನ್ನು ಹೊಂದಿರುವುದರಿಂದ ಇದು ಸಾಧ್ಯವಾಗಿದೆ.

ಸಭೆಯ ದಿನಾಂಕವನ್ನು ಮೊದಲು ಜೂನ್ 12 ಎಂದು ಘೋಷಿಸಲಾಗಿತ್ತು. ಆದರೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸಭೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡುವಂತೆ ಮನವಿ ಮಾಡಿದರು. ಜೂನ್ 23 ರಂದು ಸಭೆ ನಡೆಯಲಿದೆ ಎಂದು ನಿತೀಶ್ ಕುಮಾರ್ ಘೋಷಿಸಿದ್ದಾರೆ. ಸಭೆ ನಡೆಯುವ ಸ್ಥಳದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ನಂತರ ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದ ಶಿಮ್ಲಾವನ್ನು ಆಯ್ಕೆ ಮಾಡಬಹುದು ಎಂಬ ವರದಿಯೂ ಪ್ರಕಟವಾಗಿತು.

ಈ ಹಿನ್ನಲೆಯಲ್ಲಿ, ಪಾಟ್ನಾದಲ್ಲಿ ಸಭೆ ನಡೆಯಲಿದೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಖಚಿತಪಡಿಸಿದ್ದಾರೆ. ವಿರೋಧ ಪಕ್ಷಗಳ ಸಭೆಗೆ ಹಲವು ನಾಯಕರ ಹಾಜರಾತಿಯನ್ನು ಖಚಿತಪಡಿಸಿರುವುದಕ್ಕೆ ನಿತೀಶ್ ಕುಮಾರ್ ಅವರ ಪ್ರಯತ್ನಕ್ಕೆ ಇದು ಮೊದಲ ಯಶಸ್ಸು ಎಂದು ಪರಿಗಣಿಸಲಾಗಿದೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಕಾಂಗ್ರೆಸ್ ಪಕ್ಷವು ರಾಜ್ಯ ಪಕ್ಷಗಳೊಂದಿಗೆ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಭಾರತೀಯ ಜನತಾ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಸೋಲಿಸಲು ಸಾಧ್ಯ ಎಂದು ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಶರದ್ ಪವಾರ್ ಮುಂತಾದ ನಾಯಕರು ಒತ್ತಾಯಿಸಿದ್ದಾರೆ. ಆದರೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ಪಕ್ಷಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವಲ್ಲಿ ವಿವಿಧ ಸಮಸ್ಯೆಗಳು ಕಂಡುಬರುತ್ತವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಕಾಂಗ್ರೆಸ್ ನೇತೃತ್ವದಲ್ಲಿ ಒಟ್ಟುಗೂಡಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಇದುವರೆಗೆ ಮಮತಾ ಬ್ಯಾನರ್ಜಿ, ಶರದ್ ಪವಾರ್, ಚಂದ್ರಶೇಖರ್ ರಾವ್, ಅಖಿಲೇಶ್ ಯಾದವ್, ಕೇಜ್ರಿವಾಲ್ ಸೇರಿದಂತೆ ರಾಜ್ಯದ ವಿವಿಧ ಪಕ್ಷದ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನೂ ಭೇಟಿಯಾಗಿದ್ದರು. ಇದಾದ ಬಳಿಕ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ಅಂತಿಮ ರೂಪ ಪಡೆಯುತ್ತಿದೆ. ಈ ವೇಳೆ ರಾಜಕೀಯ ತಜ್ಞರು ಕುತೂಹಲದಿಂದ ಕಾಯುತ್ತಿದ್ದ ಎಲ್ಲ ವಿರೋಧ ಪಕ್ಷಗಳು ಒಂದೆಡೆ ಸೇರುವ ಕಾರ್ಯಕ್ರಮ ಜೂನ್ 12 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಸಭೆಗೆ ಹಾಜರಾಗುವಂತೆ ನಿತೀಶ್ ಕುಮಾರ್ ವಿಪಕ್ಷ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಖರ್ಗೆ ಮತ್ತು ರಾಹುಲ್ ಭಾಗವಹಿಸುವುದು ಖಚಿತವಾಗಿದೆ. ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ಮತ್ತು ಶರದ್ ಪವಾರ್ ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ.ಈ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ ಭಾಗವಹಿಸುವ ನಿರೀಕ್ಷೆಯಿದೆ. ಕಮ್ಯುನಿಸ್ಟರೂ ಭಾಗವಹಿಸಲಿದ್ದಾರೆ.

ಆದರೆ, ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಭಾರತ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಚಂದ್ರಶೇಖರ್ ರಾವ್, ತೆಲುಗು ದೇಶಂ ಅಧ್ಯಕ್ಷ ಚಂದ್ರಬಾಬು ನಾಯ್ಡು, ವೈ.ಎಸ್.ಆರ್. ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಸಮನ್ವಯಗೊಳಿಸಲು ನಿತೀಶ್ ಕುಮಾರ್ ಅವರಿಗೆ ಇನ್ನೂ ಸಾಧ್ಯವಾಗಿಲ್ಲ.

ಆದರೂ ನಿತೀಶ್ ಕುಮಾರ್ ಅವರು ಒಮ್ಮತದಿಂದ ಎಲ್ಲರನ್ನೂ ಒಟ್ಟುಗೂಡಿಸಿ ಕಾರ್ಯನಿರ್ವಹಿಸಲು ನಿರ್ಧರಿಸಿದ್ದಾರೆ. ಕಳೆದ 2019ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಶೇ.38ರಷ್ಟು ಮತಗಳನ್ನು ಪಡೆದಿತ್ತು. ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಬಿಕ್ಕಟ್ಟು ಸೃಷ್ಟಿಸಬಹುದು ಎಂದು ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಅದರಲ್ಲೂ ನಿರ್ದಿಷ್ಟವಾಗಿ ಒಟ್ಟು 543 ಎಂಪಿ ಕ್ಷೇತ್ರದಲ್ಲಿ ಕನಿಷ್ಠ 450 ಕ್ಷೇತ್ರಗಳಲ್ಲಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

450 ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಖಂಡಿತವಾಗಿಯೂ ಭಾರತೀಯ ಜನತಾ ಪಕ್ಷಕ್ಕೆ ಬಹುಮತ ಬರದಂತೆ ತಡೆಯಬಹುದು ಎಂದು ನಿತೀಶ್ ಕುಮಾರ್ ರಾಜ್ಯ ಪಕ್ಷದ ನಾಯಕರೊಂದಿಗೆ ಮಾತನಾಡುತ್ತಿದ್ದಾರೆ. ಆದರೆ ರಾಜ್ಯ ಪಕ್ಷದ ನಾಯಕರು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿರುವುದರಿಂದ ಕಾಂಗ್ರೆಸ್ ತನ್ನ ನಿಲುವು ಬದಲಿಸುತ್ತದೆಯೇ? ಎಂಬುದನ್ನು ಕಾದು ನೋಡಬೇಕು.

ರಾಜಕೀಯ

ಕೋಲ್ಕತ್ತಾ: ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ ತುರ್ತು ಕಾಯ್ದೆಯನ್ನು ವಿರೋಧಿಸುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬೆಂಬಲ ನೀಡಿದ್ದಾರೆ.

ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, “ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿತು. ಇದರ ವಿರುದ್ಧ ಕೇಂದ್ರ ಸರ್ಕಾರ ಹೊಸ ತುರ್ತು ಕಾಯ್ದೆಯನ್ನು ಜಾರಿಗೆ ತಂದಿದೆ. ಇದನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಸಂಸದರು ವಿರೋಧಿಸಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿ ಸರ್ಕಾರಕ್ಕೆ ಬೆಂಬಲವನ್ನು ಪಡೆಯಲು ಬಿಜೆಪಿ ಆಡಳಿತವಿಲ್ಲದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಕೇಜ್ರಿವಾಲ್ ಮುಂದಾಗಿದ್ದಾರೆ.

ಈ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಮುಖಂಡರು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ಆಗ ಇಬ್ಬರೂ ಕೇಂದ್ರ ಸರ್ಕಾರದ ತುರ್ತು ಕಾಯ್ದೆ ಬಗ್ಗೆ ಚರ್ಚೆ ನಡೆಸಿದರು.

ನಂತರ, ಮಮತಾ ಬ್ಯಾನರ್ಜಿ ಅವರು ಸುದ್ದಿಗಾರರಿಗೆ ಸಂದರ್ಶನ ನೀಡಿದರು:
“ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರದ ತುರ್ತು ಮಸೂದೆಯನ್ನು ತೃಣಮೂಲ ಕಾಂಗ್ರೆಸ್ ವಿರೋಧಿಸಲಿದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ಒಂದಾಗುವಂತೆ ಒತ್ತಾಯಿಸುತ್ತೇವೆ. ಕೇಂದ್ರ ಸರ್ಕಾರವು ಸಂವಿಧಾನವನ್ನು ಬದಲಾಯಿಸುತ್ತದೆಯೋ ಅಥವಾ ದೇಶದ ಹೆಸರನ್ನು ಬದಲಾಯಿಸುತ್ತದೆಯೋ ಎಂಬ ಭಯ ನಮಗಿದೆ” ಎಂದರು.