ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Manvi MLA Archives » Dynamic Leader
October 23, 2024
Home Posts tagged Manvi MLA
ದೇಶ ರಾಜ್ಯ

ವರದಿ: ರಾಮು ನೀರ ಮಾನ್ವಿ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಉಳಿದಿದೆ. ಮಾನ್ವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಹಂಪಯ್ಯ ನಾಯಕ, ಜೆಡಿಎಸ್ ನಿಂದ ರಾಜಾ ವೆಂಕಟಪ್ಪ ನಾಯಕ, ಬಿಜೆಪಿಯಿಂದ ಬಿ.ವಿ.ನಾಯಕ ಹಾಗೂ ಆಮ್ ಆದ್ಮಿಯಿಂದ ರಾಜಾ ಶಾಮಸುಂದರ್ ನಾಯಕ ಮುಂತಾದವರು ಚುನಾವಣೆ ಅಖಾಡದಲ್ಲಿ ಇದ್ದಾರೆ.

ದಿನದಿಂದ ದಿನಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಪ್ರಚಾರವು ಭರಾಟೆಯಿಂದ ನೆಡೆಯುತ್ತಿದೆ. ಪ್ರಚಾರದಲ್ಲಿ ಯಾವುದೇ ಪಕ್ಷಗಳು ನಾ ಮುಂದೆ ತಾಮುಂದೆ ಅನ್ನುವ ರೀತಿಯಲ್ಲಿ ಪ್ರಚಾರವನ್ನು ಮಾಡುತ್ತಿದೆ. ಕಳೆದ 2018ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಜ ವೆಂಕಟಪ್ಪ ನಾಯಕ ಜಯ ಶಾಲಿಯಾಗಿದ್ದರು. ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಡಾ.ತನುಶ್ರೀ, ಮೂರನೆಯ ಸ್ಥಾನದಲ್ಲಿ ಬಿಜೆಪಿಯ ಶರಣಪ್ಪ ನಾಯಕ ಹಾಗೂ ನಾಲ್ಕನೇ ಸ್ಥಾನದಲ್ಲಿ ಕಾಂಗ್ರೆಸ್‌ನ ಹಂಪಯ್ಯ ನಾಯಕ ಇದ್ದರು. ಆದರೆ ಈ ಸಾರಿ ಮಾನ್ವಿಯ ಮತದಾರರು ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸಲಿದ್ದಾರೆ ಎಂಬ ಸೂಚನೆ ಸಿಕ್ಕಿದೆ.

ಪ್ರಸ್ತುತ ಜೆಡಿಎಸ್ ಮೊದಲ ಸ್ಥಾನದಲ್ಲಿ ಇದ್ದರೆ, ಎರಡನೆಯದಾಗಿ ಕಾಂಗ್ರೆಸ್ ಇದೆ. ಮೂರನೆಯ ಸ್ಥಾನದಲ್ಲಿ ಬಿಜೆಪಿ ಇದ್ದು, ಎಂದಿನಂತೆ ಎಲ್ಲಾ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಎಡಬಿಡದೆ ನಡೆಯುತ್ತಿದೆ. ಮುಂಜಾನೆ ಒಂದು ಪಕ್ಷದಲ್ಲಿದ್ದರೆ ಮಧ್ಯಾಹ್ನ ಒಂದು ಪಕ್ಷದಲ್ಲಿರುತ್ತಾರೆ. ರಾತ್ರಿಯಲ್ಲಿ ಮತ್ತೊಂದು ಪಕ್ಷದಲ್ಲಿ ಕಂಡುಬರುತ್ತಾರೆ. ಅವರಿಗೆ ಪಕ್ಷ ಸಿದ್ದಾಂತ, ತತ್ವ, ನಿಷ್ಟೆ ಯಾವುದೂ ಇಲ್ಲ. ಆರು ಕೊಟ್ಟರೆ ಅತ್ತೆಯ ಕಡೆ; ಹತ್ತು ಕೊಟ್ಟರೆ ಮಾವನ ಕಡೆ ಅನ್ನುವ ಪರಿಸ್ಥಿತಿ ಇಲ್ಲಿದೆ. ಒಟ್ಟಿನಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಮತದಾರರು ಹಾಗೂ ಕಾರ್ಯಕರ್ತರು ನಾಯಕರ ಇಡುಗಂಟು ಕಡೆ ಕಣ್ಣಿಟ್ಟು ಕಾಯುತ್ತಿದ್ದಾರೆ. ಆದರೆ ಯಾರೂ ಹಣ ಬಿಚ್ಚುತ್ತಿಲ್ಲ ಎಂದು ಕಾರ್ಯಕರ್ತರು ಗೋಳಾಡುತ್ತಿದ್ದಾರೆ. ‘ನಾ ಖಾವುಂಗ ನಾ ಖಾನೆ ದುಂಗಾ’ ಅನ್ನುವ ಪರಿಸ್ಥಿತಿ ಇಲ್ಲಿದೆ. ಇದರಿಂದ ಕಾರ್ಯಕರ್ತರು ಗೊಂದಲಕ್ಕೆ ಸಿಲುಕಿ ಕೊಂಡಿದ್ದಾರೆ.

ಆದರೆ ಬಿಜೆಪಿಯ ದೇವದುರ್ಗದ ಶಿವನಗೌಡ ನಾಯಕರ ಒಂದು ಮಾತು ಈಗ ಎಲ್ಲಡೆ ವೈರಲ್ ಆಗಿದೆ. ‘ರಾಯಚೂರು ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡುವವರು ಮಾನ್ವಿಯಲ್ಲಿ ಯಾರೂ ಇಲ್ಲ; ದೇವದುರ್ಗದ ನಾವೇ ಬರಬೇಕು’ ಅನ್ನುವ ಮಾತು ಮಾನ್ವಿ ತಾಲೂಕಿನ ಜನತೆಯಲ್ಲಿ ಆಕ್ರೋಷಕ್ಕೆ ಕಾರಣವಾಗಿದೆ. ಇದರಿಂದ ಬಿಜೆಪಿ ಅಭ್ಯರ್ಥಿಗೆ ಬಹು ದೊಡ್ಡ ಹೊಡೆತವಾಗಲಿದೆ. ಈ ಮಾತುಗಳಿಂದ ತಾಲೂಕಿನ ಜನತೆ ಕೆಂಡದಂತೆ ಹಾಗಿದ್ದಾರೆ. ಇದರಿಂದಾಗಿ ಬಿಜೆಪಿ ಪಕ್ಷ ಹಿನ್ನಡೆಗೆ ಕಾರಣವಾಗಿದೆ. ಅಂತಿಮವಾಗಿ ಕಾಂಗ್ರೆಸ್, ಜೆಡಿಎಸ್ ಮಧ್ಯೆ ರಣ ಕಾಳಗ ನಡೆಯುವುದು ಬಹುತೇಕ ಖಚಿತವಾಗಿದೆ.

ಕಳೆದ ಭಾರಿ ಪಕ್ಷೇತರರಾಗಿ ಸ್ಪರ್ದಿಸಿದ ಎಂ.ಈರಣ್ಣನವರ ಸೊಸೆ ಡಾ.ತನುಶ್ರೀ, ಮೂವತ್ತೇಳು ಸಾವಿರ ಮತಗಳನ್ನು ತೆಗೆದುಕೊಂಡು ಸೋತಿದ್ದರು. ಇದು ಒಂದು ರೀತಿಯಲ್ಲಿ ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಬಹುಮುಖ್ಯ ಕಾರಣವಾಗಿತ್ತು. ನೆನ್ನೆ ನೆಡೆದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ನೇತ್ರತ್ವದಲ್ಲಿ ಎಂ.ಈರಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು ಕಾಂಗ್ರೆಸ್‌ನ ಬಹುದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಇದರಿಂದ ಕ್ಷೇತ್ರದಲ್ಲಿ ಗೆಲುವು ಯಾರದ್ದು ಎಂಬ ವಿಷಯವು ಗೊಂದಲಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ; ಮನ್ವಿಯ ಪ್ರಜ್ಞಾವಂತ ಮತದಾರರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ರಾಜಕೀಯ

ವರದಿ: ರಾಮು, ನೀರಮಾನ್ವಿ

ಮಾನ್ವಿ: ರಾಯಚೂರು ಜಿಲ್ಲೆ, ಮಾನ್ವಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯು ದಿನದಿಂದ ದಿನಕ್ಕೆ ಹಲವಾರು ರೀತಿಯ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಮಾನ್ವಿ ಕ್ಷೇತ್ರದಲ್ಲಿ, ಅಧಿಕಾರದ ಚುಕ್ಕಾಣಿ ಹಿಡಿಯಲು ಸದರಿ ಜನಾಂಗದಲ್ಲಿಯೇ ತೀವ್ರ ಪೈಪೋಟಿ ನೆಡೆಯುತ್ತಿದೆ. ಜೆಡಿಎಸ್ ನಿಂದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಈ ಬಾರಿಯೂ ಜೆಡಿಎಸ್ ಟಿಕೆಟ್ ನೀಡುವುದು ಖಚಿತವಾಗಿದೆ. ಅವರು ಮತ್ತೊಮ್ಮೆ ಆರಿಸಿ ಬರಲು ತೆರೆಮರೆಯಲ್ಲಿ ಕಸರತ್ತು ಮಾಡಿಕೊಂಡು ಬರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯ ಪಂಚರತ್ನ ಯಾತ್ರೆಯ ಎಫೆಕ್ಟು ಇವರಿಗೆ ಕೈ ಕೊಡುವುದೇ ಎಂದು ಕಾದು ನೋಡೋಣ.

ಕಾಂಗ್ರೆಸ್ ನಲ್ಲಿ ಗೊಂದಲದ ವಾತಾವರಣ ಇದೆ. ಆ ಪಕ್ಷದಿಂದ ಜಿ.ಹಂಪಯ್ಯ ನಾಯಕ, ಶರಣಪ್ಪ ನಾಯಕ ಗುಡದಿನ್ನಿ, ರಾಜ ವಸಂತ್ ನಾಯಕ, ದೇವದುರ್ಗದ ಮಾಜಿ ಸಂಸದರಾದ ಬಿ.ವಿ.ನಾಯಕ ಮುಂತಾದವರು ತಮ್ಮದೇ ಆದ ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಟಿಕೆಟ್ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎಂಬ ಗುಟ್ಟನ್ನು ಬಿಟ್ಟುಕೊಡದೆ, ಆಕಾಂಕ್ಷಿಗಳನ್ನು ತುದಿಕಾಲಮೇಲೆ ನಿಲ್ಲುವಂತೆ ಮಾಡಿದೆ. ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕರಾದ ಗಂಗಾಧರ ನಾಯಕ, ಮಾನಪ್ಪ ನಾಯಕ, ಮ್ಯಾಕಲ್ ಅಯ್ಯಪ್ಪ ನಾಯಕ ಸೇರಿದಂತೆ ಹಾಲಿ ಸಚಿವರಾದ ಶ್ರೀರಾಮುಲು ಹಾಗೂ ದೇವದುರ್ಗ ಶಾಸಕರಾದ ಶಿವನಗೌಡ ನಾಯಕ ಅವರು ಟಿಕೆಟ್ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಮ್ ಅದ್ಮಿ ಪಕ್ಷದಿಂದ ರಾಜ ಶ್ಯಾಮ್ ಸುಂದರ್ ನಾಯಕ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಇನ್ನು ಜನಾರ್ದನ ರೆಡ್ಡಿಯ ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯು ಕೂಡ ಕಣದಲ್ಲಿ ಇರಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿದ ಡಾ.ತನುಶ್ರೀ ಕೂಡ ಕಾಂಗ್ರೆಸ್ ಟಿಕೆಟ್ ಗಾಗಿ ಹರಸಾಹಸ ಪಡುತ್ತಿರುವುದು ಗುಟ್ಟಾಗಿ ಏನು ಉಳಿದಿಲ್ಲ. ಒಂದು ವೇಳೆ ಕಾಂಗ್ರೆಸ್ ಟಿಕೆಟ್ ಕೊಡದಿದ್ದರೆ ಹಿಂದಿನಂತೆ; ಮುಂದೆಯೂ ಪಕ್ಷೇತರರಾಗಿ ಸ್ಪರ್ಧಿಸುವುಸು ನಿಶ್ಚಿತ.

ಈ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು?
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹಂಪಯ್ಯ ನಾಯಕ, ಬಿಜೆಪಿಯಿಂದ ಶರಣಪ್ಪ ನಾಯಕ, ಜೆಡಿಎಸ್ ನಿಂದ ರಾಜಾ ವೆಂಕಟಪ್ಪ ನಾಯಕ, ಪಕ್ಷೇತರ ಅಭ್ಯರ್ಥಿ ಎಂ.ಈರಣ್ಣನವರ ಸೊಸೆ ಡಾ.ತನುಶ್ರೀ ಅವರ ಮದ್ಯ ತೀವ್ರ ಸ್ವರೂಪದ ಪೈಪೋಟಿ ಇತ್ತು. ಆದರೆ ಎಲ್ಲವನ್ನು ಹಿಮ್ಮೆಟ್ಟಿಸಿ ಗೆದ್ದ ನಿಂತವರು ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ. ಆದರೇ ಆಗಿನ ಪರಿಸ್ಥಿತಿಯೇ ಬೇರೆಯದಾಗಿತ್ತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಎಂ.ಈರಣ್ಣನವರು ತಮ್ಮ ಮಡದಿಯನ್ನು ಅಧ್ಯಕ್ಷೆಯಾಗಿ ಮಾಡಲು ಶತಃ ಪ್ರಯತ್ನ ಮಾಡುತ್ತಿರುವ ಸಂದರ್ಭದಲ್ಲಿ, ರಾಯಚೂರು ಜಿಲ್ಲಾ ಮುಖಂಡರು ಅದಕ್ಕೆ ಎಳ್ಳು ನೀರು ಬಿಟ್ಟು, ರಾಜಕೀಯ ಗಂದ ಗಾಳಿ ಗೊತ್ತಿಲ್ಲದ ಬಿಜೆಪಿ ಪಕ್ಷದ ಅದಿ ವೀರಲಕ್ಷ್ಮಿ ಎನ್ನುವ ಅಭ್ಯರ್ತಿಯನ್ನು ತಂದು ವಾಮ ಮಾರ್ಗದಲ್ಲಿ ಗೆಲ್ಲಿಸಿಕೊಂಡರು. ಇದರಿಂದ ಕೆಂಡಾಮಂಡಲರಾದ ಎಂ.ಈರಣ್ಣ, ಅಧ್ಯಕ್ಷರ ಚುನಾವಣೆಯಲ್ಲಿ ಕುತಂತ್ರ ಮಾಡಿದ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಕ್ಕ ಪಾಠವನ್ನು ಕಲಿಸಬೇಕೆನ್ನುವ ಜಿದ್ದಿಗೆ ಬಿದ್ದು, ಸೊಸೆ ಡಾ.ತನುಶ್ರೀಯನ್ನು ಪಕ್ಷೇತರ ಅಭ್ಯರ್ತಿಯಾಗಿ ಕಣಕ್ಕೆ ಇಳಿಸಿ, ಕಾಂಗ್ರೆಸ್ ಸೋಲಿಸುವಲ್ಲಿ ಯಶಶ್ವಿಯಾದರು. ಆದ್ದರಿಂದ ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಗೆಲುವು ಸುಲುಭವಾಗಿತ್ತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ನಾಲ್ಕನೇ ಸ್ಥಾನಕ್ಕೆ ಕಳುಹಿಸಿದ ಕೀರ್ತಿ ಎಂ.ಈರಣ್ಣನವರಿಗೆ ಸಲ್ಲುತ್ತದೆ.

ಎಂ.ಈರಣ್ಣ

ಕಳೆದ ಬಾರಿ ನೆಡದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹಂಪಯ್ಯ ನಾಯಕ, ಜೆಡಿಎಸ್ ನಿಂದ ರಾಜ ವೆಂಕಟಪ್ಪ ನಾಯಕ, ಬಿಜೆಪಿಯಿಂದ ಮೊದಲಿಗೆ ಮಾನಪ್ಪ ನಾಯಕಗೆ ಟಿಕೆಟ್ ಘೋಷಿಸಿ, ನಂತರ ಶರಣಪ್ಪ ನಾಯಕ ಗುಡದಿನ್ನಿ ಅವರಿಗೆ ನೀಡಲಾಯಿತು. ಶರಣಪ್ಪ ನಾಯಕ ಈಗ ಕಾಂಗ್ರೆಸ್ ನಲ್ಲಿ ಇದ್ದಾರೆ. ಮುಂಬರುವ ಚುನಾವಣೆಯಲ್ಲಿ ಎಂ.ಈರಣ್ಣ ಹಾಗೂ ಅವರ ಸೊಸೆ ಡಾ.ತನುಶ್ರೀಯ ಪಾತ್ರ ನಿರ್ನಾಯಕವಾಗಿರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಕಳೆದ ಬಾರಿ ಇದ್ದಂತ ವಾತವಾರಣ ಈಗಿಲ್ಲ. ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಇದರಿಂದಾಗಿ ಈ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದು ಯಾಕ್ಷ ಪ್ರಶ್ನೆಯಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಗೊಂದಲವಿದೆ. ಇವರೆಡರ ಮದ್ಯ ಎಂ.ಈರಣ್ಣನವರ ನೆಡೆ ಗುಪ್ಪವಾಗಿದೆ. ಹಾಗಾದರೆ ಗೆಲ್ಲುವ ಅಭ್ಯರ್ತಿ ಯಾರು ಎಂಬುದು ರಾಯಚೂರಿನಲ್ಲಿ ಮಾತ್ರವಲ್ಲ ಮಾನ್ವಿಯಲ್ಲೂ ಪ್ರತಿಧ್ವನಿಸುತ್ತಿದೆ.