ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Minister Anand Singh Archives » Dynamic Leader
October 23, 2024
Home Posts tagged Minister Anand Singh
ರಾಜಕೀಯ

ವಿಜಯಪುರ: (ಹಗರಬೊಮ್ಮನಳ್ಳಿ) ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ರಣಕಹಳೆ ಊದಿದೆ. ಪ್ರಚಾರ ಜೋರಾಗಿಯೇ ನಡೆಯುತ್ತಿದ್ದು, ಕಾಂಗ್ರೆಸ್, ಜೆಡಿಎಸ್, ಎಎಪಿ ಹಾಗೂ ಗಾಲಿ ಜನಾರ್ದನ ರೆಡ್ಡಿಯ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸರ್ಕಾರಿ ನೌಕರರು ಅನೇಕರು ರಾಜಕಾರಣದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ಮುಂದಾಗಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿಯಾದ ಲಕ್ಷ್ಮಿ ನಾರಾಯಣ ಬಿಜೆಪಿ ಸೇರಿದ್ದು, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಲಕ್ಷ್ಮೀ ನಾರಾಯಣ ವಿಜಯನಗರದ ಬಿಜೆಪಿ ಕಚೇರಿಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. 2023ರ ಚುನಾವಣೆಯಲ್ಲಿ ಅವರು ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಲಕ್ಷ್ಮೀ ನಾರಾಯಣ ಹಲವು ದಿನಗಳಿಂದ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ತೊಡಗಿಕೊಂಡು ಸಂಘಟನೆ, ಕಾರ್ಯಕರ್ತರ ಭೇಟಿಯಲ್ಲಿದ್ದು ಬಿಜೆಪಿ ಟಿಕೆಟ್ ಆಕಾಂಕ್ಷಿ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ. ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೂಡಾ ಆರಂಭಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಿವೃತ್ತರಾದ ಬಳಿಕ ಅವರನ್ನು ವಿಶೇಷ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದರು. ಬಿಬಿಎಂಪಿ ಆಯುಕ್ತರಾಗಿ, ಕರ್ನಾಟಕ ಗೃಹ ಮಂಡಳಿ, ಸಮಾಜ ಕಲ್ಯಾಣ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ.

ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಟಿಕೆಟ್ ಬಯಸಿರುವ ಇವರಿಗೆ, ಈ ಕ್ಷೇತ್ರದಲ್ಲಿ ಜಾತಿ ಕಾರ್ಡ್ ಪ್ಲೆಯಾಗದಿರುವುದು ವರದಾನವಾಗಿದ್ದು, ಹಲವು ಇಲಾಖೆಯಲ್ಲಿ ಕೆಸಲ ಮಾಡಿದ ಇವರು ಗೆದ್ದು ಬಂದರೆ ಕ್ಷೇತ್ರದ ಅಭಿವೃದ್ಧಿ ನಾಗಲೋಟಕ್ಕೆ ಸಾಗುವುದು ಎಂಬ ಅಭಿಪ್ರಾಯ ಕ್ಷೇತ್ರದ ಜನತೆಯದಾಗಿದೆ. ಹಾಗಾಂತ ಇಲ್ಲಿ ಟಿಕೆಟಿಗಾಗಿ ಬಿಜೆಪಿಯಲ್ಲಿ ಪೈಪೋಟಿ ಏರ್ಪಡದಿರುವುದು ಕೂಡ ಪಕ್ಷಕ್ಕೆ ವರದಾನವಾಗಲಿದೆ.

2018ರ ಚುನಾವಣೆಯಲ್ಲಿ ಕ್ಷೇತ್ರದ ಶಾಸಕರಾದ ಭೀಮಾ ನಾಯ್ಕ್ ವಿರುದ್ಧ ಕೆ.ನೇಮಿರಾಜ್ ನಾಯಕ್ ಬಿಜೆಪಿ ಅಭ್ಯರ್ಥಿಯಾಗಿ 71105 ಮತಗಳನ್ನು ಪಡೆದು ಸೋಲು ಕಂಡಿದ್ದರು. ಕಳೆದೆರಡು ಬಾರಿ ಶಾಸಕರಾದ ಭೀಮಾ ನಾಯ್ಕ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಹಾಲಿ ನಗರ ಸಭೆ ಸದಸ್ಯರ ವಿರೋಧವಿದೆ ಎಂದು ಹೇಳಲಾಗುತ್ತಿದ್ದು, ತಾವು ಖರೀದಿ ಮಾಡಿರುವ ಜಾಗದಲ್ಲಿ ಕುರುಬರಿಗೆ ಅನ್ಯಾಯವಾಗಿದೆ ಎಂಬ ಕೂಗು ಜೋರಾಗಿ ಕೇಳಿ ಬರುತ್ತಿದೆ. ಇಲ್ಲಿ ಜೆಡಿಎಸ್ ಕೂಡ ಪ್ರಬಲವಾಗಿ ಸ್ಪರ್ಧೆಯೊಡ್ಡಲಿದೆ. ಒಟ್ಟಾರೆಯಾಗಿ ಹೇಳುವುದಾದರೆ ಇಲ್ಲಿ ಮೂರನೇ ಬಾರಿಗೆ ಆಯ್ಕೆಯಾಗುವ ಭೀಮಾ ನಾಯ್ಕ್ ರವರಿಗೆ ಬಿಜೆಪಿ ಕಬ್ಬಿಣದ ಕಡಲೆಕಾಯಿಯಾಗುವುದಂತೂ ಅಲ್ಲಗಳೆಯುವಂತಿಲ್ಲ.