ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Minority Archives » Dynamic Leader
October 23, 2024
Home Posts tagged Minority
ದೇಶ ರಾಜಕೀಯ

“ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ನಾಗರಿಕ ಸಂಹಿತೆ ಜಾರಿಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತಮ್ಮ ಪಕ್ಷದ ವಿರೋಧವಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ ಹೇಳಿದ್ದಾರೆ. “ಏಕರೂಪ ನಾಗರಿಕ ಸಂಹಿತೆಯನ್ನು ಈಗಾಗಲೇ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅದನ್ನು ಹೇರುವುದನ್ನು ಸಂವಿಧಾನ ಬೆಂಬಲಿಸುವುದಿಲ್ಲ. ಯುಸಿಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕಿತ್ತು.

ನಮ್ಮ ಪಕ್ಷ (ಬಿಎಸ್‌ಪಿ) ಯುಸಿಸಿ ಅನುಷ್ಠಾನಕ್ಕೆ ವಿರುದ್ಧವಾಗಿಲ್ಲ; ಆದರೆ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಪ್ರಯತ್ನಿಸುತ್ತಿರುವ ವಿಧಾನವನ್ನು ನಾವು ಬೆಂಬಲಿಸುವುದಿಲ್ಲ. ಈ ವಿಷಯವನ್ನು ರಾಜಕೀಯಗೊಳಿಸುವುದು ಮತ್ತು ದೇಶದಲ್ಲಿ ಯುಸಿಸಿಯನ್ನು ಬಲವಂತವಾಗಿ ಜಾರಿಗೊಳಿಸುವುದು ಸರಿಯಲ್ಲ.

ಪ್ರತಿಯೊಂದು ಸಂದರ್ಭದಲ್ಲೂ ಒಂದೇ ಕಾನೂನು ಎಲ್ಲಾ ಧರ್ಮದ ಜನರಿಗೆ ಅನ್ವಯಿಸಿದರೆ, ಅದು ದೇಶವನ್ನು ಬಲಪಡಿಸುತ್ತದೆ ಎಂದು ಬಹುಜನ ಸಮಾಜ ಪಕ್ಷದ ನಾಯಕರು ಒತ್ತಿ ಹೇಳಿದ್ದಾರೆ” ಎಂದು ಹೇಳಿದ್ದಾರೆ. ಜುಲೈ 3 ರಂದು ಏಕರೂಪ ನಾಗರಿಕ ಸಂಹಿತೆಯ ಸಂಸದೀಯ ಸ್ಥಾಯಿ ಸಮಿತಿಯ ಚರ್ಚೆಗೆ ಮುನ್ನ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ರಾಜ್ಯ

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಕಾರ್ಯಕಾರಿ ಸಮಿತಿಯು ಪುನರ್ ರಚನೆಯಾಗಿದ್ದು, ಜನಾಬ್ ಜಬ್ಬಾರ್ ಕಲಬುರ್ಗಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಂದು ಕೆ.ಎಂ.ಯುನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಖಾಸಿಂ ಸಾಬ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೊತೆಗೆ ಗೌರವ ಅಧ್ಯಕ್ಷರಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳಾದ ಜಿ.ಎ.ಬಾವ ರವರನ್ನು, ಶೇಕಬ್ಬ ಅವರನ್ನು ಕಾರ್ಯಾಧ್ಯಕ್ಷರಾಗಿ, ಉತ್ತರ ಕರ್ನಾಟಕದ ಸಂಚಾಲಕರಾಗಿ ಬಾಗಲಕೋಟೆ ಜಿಲ್ಲೆಯ ವಕ್ಫ್ ಬೋರ್ಡ್ನ ಅಧ್ಯಕ್ಷರಾದ ಎಂ.ಎಲ್.ಸರ್ಕಾವಾಸ ಅವರನ್ನು, ದಕ್ಷಿಣ ಕರ್ನಾಟಕದ ಸಂಚಾಲಕರಾಗಿ ಚಿಕ್ಕಮಗಳೂರಿನ ಅಬ್ದುಲ್ ವಾಹಿದ್ ಮಾಗುಂಡಿ ಅವರನ್ನು ನೇಮಿಸಲಾಯಿತು. ಅಲ್ಲದೆ ಒಟ್ಟು 21 ಸದಸ್ಯರ ರಾಜ್ಯಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಲಾಗಿದೆ ಎಂದು ಖಾಸಿಂ ಸಾಬ್ ತಿಳಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ನಂಬಿ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಆ ಕಾರಣಕ್ಕಾಗಿ ವರ್ತಮಾನದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಈ ಸರ್ಕಾರದ ಮೇಲೆ ಬಹಳಷ್ಟು ನಿರೀಕ್ಷೆಗಳಿವೆ. ಎಂಬುದನ್ನು ರಾಜ್ಯ ಸರ್ಕಾರ ಮರೆಯಬಾರದು ಎಂದು ಕರ್ನಾಟಕ ಮುಸ್ಲಿಮ್ ಯುನಿಟಿಯ ನೂತನ ಅಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಯವರು ಪತ್ರಿಕಾ ಹೇಳಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಕೆ.ಎಂ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್

2ಬಿ ಮೀಸಲಾತಿ ಪರಿಹಾರ ಮುಂತಾದ ಹಲವು ಬೇಡಿಕೆಗಳು ಸೇರಿದಂತೆ ಪರಿಹರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕರ್ನಾಟಕದ ಮುಸ್ಲಿಮ್ ಸಮುದಾಯವು ಇದೀಗ ರಾಜಕೀಯವಾಗಿ ಅತ್ಯಂತ ಪ್ರಬುದ್ಧವಾಗಿದೆ. ಆದ್ದರಿಂದ ಈ ಸತ್ಯವನ್ನು ಅರಿತು ರಾಜ್ಯ ಸರ್ಕಾರವು ಮುಸ್ಲಿಮ್ ಸಮುದಾಯದ ಸಮಗ್ರ ಕಲ್ಯಾಣ ಹಾಗೂ ಸಾಮಾಜಿಕ ನ್ಯಾಯದ ಬೇಡಿಕೆಗಳನ್ನು ಈಡೇರಿಸುವ ಯೋಜನೆಗಳನ್ನು ಕಾರ್ಯಗತ ಗೊಳಿಸುವುದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಸಚಿವರುಗಳ ಹೊಣೆಗಾರಿಕೆಯಾಗಿದೆ.

ಕರ್ನಾಟಕದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಕಳೆದ ನಾಲ್ಕು ವರ್ಷಗಳಲ್ಲಿ ಸಾಕಷ್ಟು ನೋವು, ಅನ್ಯಾಯ, ಹಿಂಸೆ ಅನುಭವಿಸಿದೆ. ಗೋವು ಸಂರಕ್ಷಕರ ಹೆಸರಿನಲ್ಲಿ ಅನೈತಿಕ ಪೋಲಿಸ್ ಗಿರಿ, 4% ಒಬಿಸಿ ಮೀಸಲಾತಿ ಮತ್ತು ಅಲ್ಪಸಂಖ್ಯಾತ ವಿಧ್ಯಾರ್ಥಿ ವೇತನವನ್ನು ಕಡಿತಗೊಳಿಸಿ, ಸುಮಾರ 6 ಲಕ್ಷಕ್ಕೂ ಹೆಚ್ಚು ಮಕ್ಕಳ ಭವಿಷ್ಯವನ್ನು ಹಾಳು ಮಾಡಿರುವುದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ನಿಗಮದಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನು ದ್ವೇಷದಿಂದ ರದ್ದುಗೊಳಿಸಿ, ಅನುದಾನಗಳನ್ನು ಕಡಿತಗೊಳಿಸಿದ ಕಾರಣ ರಾಜ್ಯದ ಮುಸ್ಲಿಮರಿಗೆ ಅಘಾದ ನೋವು ಮತ್ತು ಅನ್ಯಾಯವಾಗಿದೆ.

ಈ ಎಲ್ಲಾ ಮುಸ್ಲಿಮರ ಮೇಲಿನ ಅಸಮಾನತೆಗಳನ್ನು ಹೋಗಲಾಡಿಸಿ, ನ್ಯಾಯ ಮತ್ತು ಭದ್ರತೆಯನ್ನು ಕೊಡುವುದು ಈ ಸರ್ಕಾರದ ಹೊಣೆ ಮತ್ತು ಜವಾಬ್ದಾರಿ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ನೂತನ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಹೇಳಿಕೆ ನೀಡಿದ್ದಾರೆ. ರಾಜ್ಯದ ಮುಸ್ಲಿಮರ ಸಾಮಾಜಿಕ ನ್ಯಾಯ, ಎಲ್ಲಾ ಕ್ಷೇತ್ರಗಳಲ್ಲಿ ಸಮಪಾಲು ಹಾಗು ಸರಕಾರಿ ಯೋಜನೆಗಳ ಸಮಗ್ರ ಬಳಕೆಯ ಗುರಿಯುಳ್ಳ ಕರ್ನಾಟಕ ಮುಸ್ಲಿಮ್ ಯೂನಿಟಿಯು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕುಗಳ ಮಟ್ಟದಲ್ಲಿ ವಿಸ್ತರಿಸಿ ಇಡೀ ರಾಜ್ಯಾದಂತ್ಯ ಮುಸ್ಲಿಮರ ಸಾಮಾಜಿಕ ಜಾಗೃತಿಯಲ್ಲಿ ತೊಡಗಲಿದೆ ಎಂದು ಖಾಸಿಂ ಸಾಬ್ ತಿಳಿಸಿದರು.

ಕ್ರೈಂ ರಿಪೋರ್ಟ್ಸ್ ದೇಶ

ಜುನಾಗಢ: ಜೂನ್ 14ರಂದು ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ಮಜೆವಾಡಿ ದರ್ವಾಜಾ ಬಳಿಯ ಮಸೀದಿಯೊಂದಕ್ಕೆ ಜಮೀನಿನ ಮಾಲೀಕತ್ವದ ಬಗ್ಗೆ ದಾಖಲೆಗಳನ್ನು ನೀಡುವಂತೆ ನೋಟಿಸ್ ನೀಡಿತ್ತು. ನೋಟಿಸ್‌ನಿಂದ ಕ್ಷೋಭೆಗೊಳಗಾದ ಸುಮಾರು 500-600 ಜನರು ಶುಕ್ರವಾರ ರಾತ್ರಿ ಧಾರ್ಮಿಕ ಕಟ್ಟಡದ ಬಳಿ ಜಮಾಯಿಸಿ ರಸ್ತೆಗಳನ್ನು ತಡೆದರು ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ತಿಳಿಸಿದ್ದಾರೆ.

ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ಸಲುವಾಗಿ, ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ನ ಕಾರ್ಯಚರಣೆಯನ್ನು ವಿರೋಧಿಸಿ, ಸ್ಥಳೀಯರ ಗುಂಪೊಂದು ಕಲ್ಲು ತೂರಾಟ ಮತ್ತು ವಾಹನಕ್ಕೆ ಬೆಂಕಿ ಹಚ್ಚಿದ ಕಾರಣ, ಉಂಟಾದ ಗಲಭೆಯಲ್ಲಿ ಗುಜರಾತಿನ ಜುನಾಗಢ ನಗರದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮತ್ತು ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದ ಮಜೆವಾಡಿ ದರ್ವಾಜಾ ಬಳಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ನಂತರ ಅಲ್ಲಿದ್ದ 174 ಜನರನ್ನು ಸುತ್ತುವರೆದು ಗಲಭೆ ನಡೆಯದಂತೆ ಎಚ್ಚರಿಕೆಯ ಕ್ರಮವನ್ನು ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ನಾಗರಿಕನ ಸಾವಿನ ಹಿಂದಿನ ನಿಖರವಾದ ಕಾರಣ ತಿಳಿದುಬರುತ್ತದೆ. ಆದರೆ, ಗುಂಪು ಎಸೆದ ಕಲ್ಲಿನಿಂದಲೇ ಆತ ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ಸ್ಥಳದಲ್ಲಿದ್ದ ಜುನಾಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರ ಸಿಬ್ಬಂದಿಗಳು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯ ಬಳಿಕ, ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರತಿಭಟನಾಕಾರರ ರಸ್ತೆ ತಡೆಯನ್ನು ತೆರವುಗೊಳಿಸಲಾಯಿತು. ಆದರೆ, ರಾತ್ರಿ 10.15ರ ಸುಮಾರಿಗೆ ಏಕಾ ಏಕಿ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಲಾಯಿತು ಎಂದು ಪೊಲೀಸರು ಹೇಳುತ್ತಾರೆ.

ಘೋಷಣೆಗಳನ್ನು ಕೂಗುತ್ತಾ, ದರ್ಗಾಗೆ ನೋಟಿಸ್ ನೀಡಿದ್ದಕ್ಕೆ ಆಕ್ರೋಶಗೊಂಡ ಕೆಲವರು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದರು. ಅಶಿಸ್ತಿನ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಲಾಠಿ ಚಾರ್ಜ್ ಮಾಡಿದರು. ಘಟನೆಯಲ್ಲಿ ಜುನಾಗಢ ಡಿವೈಎಸ್ಪಿ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

“ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಸಾವಿನ ಬಗ್ಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಪೊಲೀಸ್ ತಂಡಗಳ ಕೂಂಬಿಂಗ್ ಕಾರ್ಯಾಚರಣೆಯಲ್ಲಿ 174 ಜನರನ್ನು ಸುತ್ತುವರೆದು ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಘರ್ಷಣೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ಹೇಳಿದ್ದಾರೆ.

ರಾಜಕೀಯ

ಸ್ಯಾನ್ ಫ್ರಾನ್ಸಿಸ್ಕೋ: ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ‘ಮೊಹಬ್ಬತ್ ಕಿ ದುಕಾನ್’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದಲ್ಲಿ 1980ರ ದಶಕದಲ್ಲಿ ದಲಿತರು ಎದುರಿಸಿದ್ದ ಪರಿಸ್ಥಿತಿಯನ್ನು ಇಂದು ಮುಸ್ಲಿಮರು ಎದುರಿಸುತ್ತಿದ್ದಾರೆ. ಇದರ ವಿರುದ್ಧ ಅಭಿಮಾನದಿಂದ ಹೋರಾಡಬೇಕು” ಎಂದರು.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕೆಲವು ಕ್ರಮಗಳು ಅಲ್ಪಸಂಖ್ಯಾತರು, ದಲಿತ ಮತ್ತು ಬುಡಕಟ್ಟು ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಕೇಂದ್ರದ ಕ್ರಮಗಳು ಮುಸ್ಲಿಮರ ಮೇಲೆ ನೇರವಾಗಿ ಪರಿಣಾಮ ಬೀರುತ್ತಿವೆ. ಆದರೆ ವಾಸ್ತವವಾಗಿ, ಇದನ್ನು ಎಲ್ಲಾ ಸಮುದಾಯಗಳಿಗೆ ಮಾಡಲಾಗುತ್ತಿದೆ. ನೀವು (ಮುಸ್ಲಿಮರು) ಹೇಗೆ ದಾಳಿಗೆ ಒಳಗಾಗುತ್ತೀರಿ, ಹಾಗೆಯೇ ಸಿಖ್ಖರು, ಕ್ರಿಶ್ಚಿಯನ್ನರು, ದಲಿತರು ಮತ್ತು ಬುಡಕಟ್ಟು ಜನಾಂಗದವರೂ ದಾಳಿಗೆ ಒಳಗಾಗುತ್ತಿದ್ದಾರೆ. ಆದರೆ ನೀವು ದ್ವೇಷದಿಂದ ದ್ವೇಷವನ್ನು ಕತ್ತರಿಸಲು ಸಾಧ್ಯವಿಲ್ಲ. ಪ್ರೀತಿ ಮತ್ತು ವಾತ್ಸಲ್ಯದಿಂದ ಮಾತ್ರ ಸಾಧ್ಯ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

“ಇಂದು ಭಾರತದಲ್ಲಿ ಮುಸ್ಲಿಮರಿಗೆ ಏನಾಗುತ್ತಿದೆಯೋ ಅದನ್ನು 1980ರ ದಶಕದಲ್ಲಿ ದಲಿತರು ಅನುಭವಿಸಿದರು. ನೀವು 1980ರ ದಶಕದಲ್ಲಿ ಉತ್ತರ ಪ್ರದೇಶಕ್ಕೆ ಹೋಗಿದ್ದರೆ ದಲಿತರ ಪರಿಸ್ಥಿತಿ ತಿಳಿಯುತ್ತಿತ್ತು. ನಾವು ಅದನ್ನು ಸವಾಲಾಗಿ ಸ್ವೀಕರಿಸಬೇಕು ಮತ್ತು ಅದರ ವಿರುದ್ಧ ಹೋರಾಡಬೇಕು” ಎಂದಿದ್ದಾರೆ.

 

ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯನ್ನು (ಸಿಡಿಸಿ) ರದ್ದುಗೊಳಿಸಿ, ಕರ್ನಾಟಕ ಕ್ರೈಸ್ತರ ಅಭಿವೃದ್ಧಿ ಮಂಡಳಿ ಅಥವಾ ಅಭಿವೃದ್ಧಿ ನಿಗಮವನ್ನು ಮತ್ತು 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡುವಂತೆ ಜನಶಕ್ತಿ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.

ಕರ್ನಾಟಕದಲ್ಲಿ ಕ್ರೈಸ್ತರ ಜನಸಂಖ್ಯೆ ಸುಮಾರು ಶೇ.4% ರಷ್ಟಿದೆ. ಸಮುದಾಯದ ಅಭಿವೃದ್ಧಿಗಾಗಿ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿ ರಚಿಸಿ, ರೂ.50 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದರು. ನಂತರ ಬಂದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ, 2013-14ರಲ್ಲಿ ರೂ.75 ಕೋಟಿ, 2014-15ರಲ್ಲಿ ರೂ.100 ಕೋಟಿ, 2015-16ರಲ್ಲಿ 125 ಕೋಟಿ, 2016-17ರಲ್ಲಿ 175 ಕೋಟಿ ರೂಪಾಯಿಗಳನ್ನು ಅನುದಾನವಾಗಿ ಬಿಡುಗಡೆ ಮಾಡಿತು.

ಸದರಿ ಅನುದಾನದಿಂದ ಚರ್ಚ್ ಹಾಗೂ ಪ್ರಾರ್ಥನಾ ಮಂದಿರಗಳ ದುರಸ್ಥಿ ಹಾಗೂ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣಕ್ಕೆ ಸಹಾಯಧನ, ಅನಾಥಾಶ್ರಮಗಳು, ವೃದ್ಧಾಪ್ಯ ಆಶ್ರಮಗಳು, ವಿಕಲ ಚೇತನಾ ಹಾಗೂ ನಿರಾಶ್ರಿತ ಆಶ್ರಮಗಳ ನಡೆಸುವಿಕೆಗೆ ಸಹಾಯಧನ, ಹೊರ ದೇಶಗಳಲ್ಲಿ ಸ್ನಾತಕೋತ್ತರ ಪದವಿಗಳಿಗೆ ಹಾಗೂ ಹೆಚ್ಚಿನ ವಿದ್ಯಾಬ್ಯಾಸ ಶಿಕ್ಷಣಕ್ಕೆ ಸಹಾಯಧನ ಇತ್ಯಾದಿಗಳಿಗೆ ಈ ಅನುದಾನವು ವಿನಿಯೋಗಿಸಲಾಗುತ್ತಿತ್ತು.

2018ರಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ರವರು ಕ್ರೈಸ್ತರ ಅಭಿವೃದ್ಧಿ ನಿಗಮ ಸ್ಥಾಪಿಸಿ ರೂ.200 ಕೋಟಿಯನ್ನು ಘೋಷಣೆ ಮಾಡಿ, ರೂ.75 ಕೋಟಿಯನ್ನು ಮೀಸಲಿಟ್ಟರು. ನಂತರ ಬಂದ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ನಿಗಮದ ಘೋಷಣೆಯನ್ನು ರದ್ಧುಗೊಳಿಸಿ, ‘ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ’ ಯನ್ನು ರಚಿಸಿ, ರೂ.200 ಕೋಟಿಯನ್ನು ಅನುದಾನವಾಗಿ ನೀಡಿತು, ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ದಿನಾಂಕ: 06.11.2019 ರಂದು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ದಕ್ಷಿಣ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯ್ಲಸ್ ಡಿಸೋಜ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಆದೇಶ ಹೊರಡಿಸಿತು. ಇದರಿಂದ ಕ್ರೈಸ್ತರ ಬಹುದಿನಗಳ ಬೇಡಿಕೆಯಾದ ಕ್ರೈಸ್ತರ ಅಭಿವೃದ್ಧಿ ನಿಗಮಕ್ಕೆ ಮಣ್ಣೆರಚಿದಂತೆ ಆಯಿತು.

ರಾಜ್ಯದಲ್ಲಿ ಸುಮಾರು ಶೇ.4% ರಷ್ಟಿರುವ ಕ್ರೈಸ್ತ ಜನಾಂಗಕ್ಕೆ ಅಲ್ಪಸಂಖ್ಯಾತರ ಇಲಾಖೆಯಲ್ಲಿ ವಿವಿದ ಸೌಲಭ್ಯವನ್ನು ಪಡೆಯಲು ಕೇವಲ ಶೇ.10 ರಷ್ಟು ಅವಕಾಶವನ್ನು ನೀಡಿ, ಸರ್ಕಾರ ಸಮಾಜದ ಮೇಲೆ ಮಲತಾಯಿ ದೋರಣೆ ಮಾಡುತ್ತಿದೆ.

ರಾಜ್ಯ ಸರ್ಕಾರದ ವಿವಿದ ಇಲಾಖೆಗಳು ಕ್ರೈಸ್ತ ಸಮುದಾಯಕ್ಕೆ ಸೇರಿದ ಶೈಕ್ಷಣಿಕ ಮತ್ತು ಆರೋಗ್ಯ ಸಂಸ್ಥೆಗಳ ಕಟ್ಟಡಗಳನ್ನು ಬೇರೆ ಬೇರೆ ಕಾರ್ಯಕ್ರಮಗಳಿಗೆ ಬಳಸಿಕೊಳ್ಳೂತ್ತವೆ. ಆದರೆ, ಕ್ರೈಸ್ತ ಸಂಸ್ಥೆಗಳ ಕೆಲಸ ಕಾರ್ಯಗಳಿಗೆ ಮಾತ್ರ ಅಧಿಕರಿಗಳು ಸ್ಪಂದಿಸುವುದಿಲ್ಲ. ಇದರಿಂದ ಕ್ರೈಸ್ತರ ಕೆಲಸ ಕಾರ್ಯಗಳು ಇಲಾಖೆಯ ಮಟ್ಟದಲ್ಲಿ ಸುಗುಮವಾಗಿ ನಡೆಯುವುದ್ತಿಲ್ಲ. ಇದು ಎಲ್ಲಾ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳ ಮನಸ್ಥಿತಿ ಇದೇ ಆಗಿರುತ್ತದೆ.

3ಬಿ ವರ್ಗದಲ್ಲಿ ಕ್ರೈಸ್ತ ಸಮುದಾಯ ಬರುವುದರಿಂದ ಬಲಿಷ್ಠ ಸಮುದಾಯಗಳ ಜೊತೆಗೆ ಕ್ರೈಸ್ತ ಮಕ್ಕಳು ಸ್ಪರ್ದಿಸಲಾಗದೆ ಸರ್ಕಾರದ ಪ್ರಮುಖ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುತ್ತಿಲ್ಲ. ಇದರಿಂದ ಸಮುದಾಯದ ಪ್ರಗತಿಗೂ ಹಿನ್ನಡೆಯಾಗುತ್ತಿದೆ. ಆದ್ದರಿಂದ 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿಕೊಡಬೇಕಾಗಿದೆ.

ರಾಜ್ಯದಲ್ಲಿ ಬೇರೆ ಬೇರೆ ಸಮುದಾಯದವರಿಗೆ ಅಭಿವೃದ್ಧಿ ಮಂಡಳಿಯನ್ನು ಸರ್ಕಾರ ರಚಿಸಿಕೊಟ್ಟಿದೆ. ಕ್ರೈಸ್ತ ಸಮುದಾಯದವರು ಸಾಕಷ್ಟು ವರ್ಷಗಳಿಂದ ಈ ಬಗ್ಗೆ ಬೆಡಿಕೆ ಇಟ್ಟಿದ್ದರೂ ಇನ್ನೂ ಕ್ರೈಸ್ತ ಅಭಿವೃದ್ಧಿ ಮಂಡಳಿ ರಚಣೆ ಆಗಿಲ್ಲ. ಸರ್ಕಾರ ಕ್ರೈಸ್ತರ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಳ್ಳೂತ್ತಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೈಸ್ತ ಸಮುದಾಯದ ಮೇಲೆ ಸರಣಿ ದಾಳಿ ನಡೆದಿದೆ. ಆದರೂ ಕ್ರೈಸ್ತರು ಸಹಿಸಿಕೊಂಡರು. ಇದರ ತನಿಖೆಗಾಗಿ ಆಯೋಗ ರಚನೆ ಮಾಡಲಾಯಿತು. ಆದರೆ, ಆಯೋಗದ ತೀರ್ಮಾನ ಏನೆಂಬುದು ಇಲ್ಲಿಯವರೆಗೆ ತಿಳಿದುಕೊಳ್ಳಲು ಆಗುತ್ತಿಲ್ಲ. ರಾಜ್ಯದ – ದೇಶದ ಅಭಿವೃದ್ಧಿಯಲ್ಲಿ ಕ್ರೈಸ್ತರ ಪಾಲೂ ಇದೆ. ಬಡವರ್ಗದ ಕ್ರೈಸ್ತರಿಗೆ ಈ ರೀತಿ ಅನ್ಯಾಯ ಮಾಡುವುದು ಸರಿಯಲ್ಲ.

ಆದ್ದರಿಂದ ಈ ಸರ್ಕಾರ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯನ್ನು (ಸಿಡಿಸಿ) ರದ್ದುಗೊಳಿಸಿ, ಕರ್ನಾಟಕ ಕ್ರೈಸ್ತರ ಅಭಿವೃದ್ಧಿ ಮಂಡಳಿ ಅಥವಾ ಅಭಿವೃದ್ಧಿ ನಿಗಮವನ್ನು ಮತ್ತು 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡಬೇಕೆಂದು ಜನಶಕ್ತಿ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.

ಜನಶಕ್ತಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಡೈನಾಮಿಕ್ ಲೀಡರ್ ಪತ್ರಿಕೆಯ ಸಂಪಾದಕ ಡಿ.ಸಿ.ಪ್ರಕಾಶ್ ನಮ್ಮೊಂದಿಗೆ ಮಾತನಾಡುತ್ತಾ: “ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕ್ರೈಸ್ತರ ಮೇಲೆ ತೋರಿಸಿದ ಅತಿಯಾದ ಪ್ರೀತಿ, ವಿಶ್ವಾಸ, ಅನುಕಂಪ ಹಾಗೂ ಕ್ರೈಸ್ತ ಸಂಘಟನೆಗಳು ನಿರಂತರವಾಗಿ ಮಾಡಿಬಂದ ಹೋರಾಟಕ್ಕೆ ಮಣಿದು 2010ರಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿಯನ್ನು ರಚಿಸಿ ರೂ.50 ಕೋಟಿಯನ್ನು ಅನುದಾನವಾಗಿ ಬಿಡುಗಡೆ ಮಾಡಿ, ಕ್ರೈಸ್ತರ ಏಳಿಗೆಗೆ ಮುನ್ನುಡಿ ಬರೆದರು. ಮುಂದುವರಿದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಸಂಪ್ರದಾಯವನ್ನು ಮುಂದುವರಿಸಿ ಅನುದಾನವನ್ನು ಹೆಚ್ಚು ಮಾಡುತ್ತಾ ಕ್ರೈಸ್ತರ ಬಾಳಿಗೆ ಬೆಳಕಾದರು.

ಆದರೂ ಇದು ಅತಿ ಕಡಿಮೆಯ ಅನುದಾನವಾಗಿದೆ. ಸುಮಾರು ಶೇ.4% ರಷ್ಟಿರುವ ಕ್ರೈಸ್ತ ಸಮುದಾಯಕ್ಕೆ ಇದರಿಂದ ಏನೂ ಪ್ರಯೋಜನವಾಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದ ಬಡ ಕ್ರೈಸ್ತರು ಸ್ವಾವಲಂಬಿಗಳಾಗಬೇಕಾದರೆ, ಅವರಿಗೆ ಪ್ರತ್ಯೇಕವಾದ ನಿಗಮ ಅಥವಾ ಮಂಡಳಿ ರಚನೆಯಾದರೆ ಮಾತ್ರ ಅದು ಸಾದ್ಯವಾಗುತ್ತದೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಕ್ರೈಸ್ತ ಸಮುದಾಯ ಅಭಿವೃದ್ಧಿ ಪಡೆಯಬೇಕಾದರೆ, 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಸರ್ಕಾರ ಘೋಷಣೆ ಮಾಡಬೇಕಾಗಿದೆ.

ಈ ಏರಡು ಪ್ರಮುಖವಾದ ಬೇಡಿಕೆಗಳನ್ನು ನಾವು ಇಂದು ಸರ್ಕಾರದ ಮುಂದಿಟ್ಟಿದ್ದೇವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಮೇಲ್ಕಂಡ ಎರಡು ಬೇಡಿಕೆಗಳಿಗೆ ಸ್ಪಂದಿಸಿ, ಮುಂಬರುವ 2023ರ ಬಜೆಟ್ ಅಧಿವೇಶನದಲ್ಲಿ ಇದರ ಬಗ್ಗೆ ಘೋಷನೆ ಮಾಡುತ್ತಾರೆ ಎಂದು ನಂಬಿದ್ದೇವೆ” ಎಂದು ಹೇಳಿದರು.      

ದೇಶ

ನವದೆಹಲಿ: ಉನ್ನತ ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರಿಗೆ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹಾಲಿ ವಿಐಪಿ ಹಜ್ ಕೋಟಾವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಅವರ ಪ್ರಕಾರ, ‘ಪ್ರಧಾನಿ ಮೋದಿ ಅವರು ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹಜ್‌ನಲ್ಲಿ ವಿಐಪಿ ಕೋಟಾವನ್ನು ಕೊನೆಗೊಳಿಸುವ ಮತ್ತು ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುವ ನಿರ್ಣಯವನ್ನು ಪ್ರಸ್ತಾಪಿಸಿದ್ದರು.

ಯುಪಿಎ ಆಡಳಿತದಲ್ಲಿ ಹಜ್‌ಗೆ ಸಂಬಂಧಿಸಿದಂತೆ ವಿಐಪಿ ಸಂಸ್ಕೃತಿ ಜಾರಿಗೆ ಬಂದಿತ್ತು. ಅದರ ಅಡಿಯಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಹಜ್ ಸಮಿತಿ ಮತ್ತು ಉನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ಎಲ್ಲರಿಗೂ ವಿಶೇಷ ಕೋಟಾವನ್ನು ನೀಡಲಾಯಿತು’ ಎಂದು ಅವರು ಹೇಳಿದರು.

‘ಇದನ್ನು 2012 ರಲ್ಲಿ ಪ್ರಾರಂಭಿಸಿದಾಗ, ಈ ವಿಶೇಷ ಕೋಟಾದ ಅಡಿಯಲ್ಲಿ ಸುಮಾರು 5,000 ಸೀಟುಗಳಿದ್ದವು ಮತ್ತು ಈ ವಿಶೇಷ ವರ್ಗದ ಸೀಟುಗಳನ್ನು ಸರ್ಕಾರದಲ್ಲಿ ಯಾರೋ ತಿಳಿದಿರುವವರ ಶಿಫಾರಸ್ಸಿನ ಮೇರೆಗೆ ನೀಡಲಾಗಿತ್ತು’ ಎಂದೂ ಅವರು ಹೇಳಿದರು.

‘ಮತ್ತು ಯಾವುದೇ ವಲಯದಲ್ಲಿ ಅಂತಹ ವಿಶೇಷ ವರ್ಗೀಕರಣವಿದ್ದರೆ ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸಲು ಪ್ರಧಾನಿ ಬಯಸುತ್ತಿದ್ದಾರೆ’ ಎಂದು ಇರಾನಿ ಹೇಳಿದರು.

‘ಪ್ರಧಾನಿಯವರ ನಿರ್ಧಾರಗಳನ್ನು ಪ್ರತಿಬಿಂಬಿಸುವ ಸಂಪೂರ್ಣ ಹಜ್ ನೀತಿಯನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು’ ಎಂದೂ ಅವರು ಹೇಳಿದರು.