ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Modi Archives » Page 2 of 5 » Dynamic Leader
October 23, 2024
Home Posts tagged Modi (Page 2)
ರಾಜಕೀಯ

ನವದೆಹಲಿ: ಕಳೆದ 4 ರಂದು ಭಾರತದ ಸಂಸತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ಯಾವುದೇ ಪಕ್ಷಕ್ಕೆ ಬಹುಮತ ಬಂದಿಲ್ಲ. ಒಟ್ಟು 543 ಸ್ಥಾನಗಳ ಪೈಕಿ 240 ಕ್ಷೇತ್ರಗಳನ್ನು ಮಾತ್ರ ವಶಪಡಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಅದೇ ಸಮಯದಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 292 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಸರ್ಕಾರ ರಚನೆಗೆ ಅಗತ್ಯವಿರುವ 272ಕ್ಕೂ ಹೆಚ್ಚು ಸದಸ್ಯರನ್ನು ಈ ತಂಡ ಪಡೆದಿರುವುದರಿಂದ ಮುಂದಿನ 5 ವರ್ಷ ಸಮ್ಮಿಶ್ರ ಸರ್ಕಾರ ಖಚಿತವಾಗಿದೆ.

3ನೇ ಅವಧಿಗೆ ಸರ್ಕಾರ ರಚಿಸಲು ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರು ಪ್ರಧಾನಿ ಮೋದಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಮತ್ತು ಅವರೆಲ್ಲರೂ ಪ್ರಧಾನಿ ಮೋದಿಯವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ನಾಯಕರನ್ನಾಗಿ ಆಯ್ಕೆ ಮಾಡಲಿದ್ದಾರೆ. ಈ ಮಧ್ಯೆ ನೂತನ ಸಚಿವ ಸಂಪುಟದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕೆಂಬ ಚರ್ಚೆ ಪಕ್ಷದ ನಾಯಕರಲ್ಲಿ ನಡೆಯುತ್ತಿದೆ.

ಈ ಒತ್ತಡದ ವಾತಾವರಣದಲ್ಲಿ ದೆಹಲಿಯ ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಬಿಜೆಪಿ ಸೇರಿದಂತೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ನೂತನ ಸಂಸದರ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಕೇಂದ್ರ ಸಚಿವರು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಮತ್ತು ಎನ್‌ಡಿಎ ಸಂಸದರು, ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದಾರೆ. ಸಭೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರನ್ನು ನೆರೆದಿದ್ದವರು ಅದ್ಧೂರಿಯಾಗಿ ಸ್ವಾಗತಿಸಿದರು.

ಮೋದಿ ಅವರನ್ನು ತಮ್ಮ ನಾಯಕನನ್ನಾಗಿ (ಪ್ರಧಾನಿ) ಆಯ್ಕೆ ಮಾಡಲಾಗುತ್ತದೆ. ಇದಾದ ನಂತರ, ಪ್ರಧಾನಿ ಮೋದಿ ಅವರು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಸೇರಿದಂತೆ ಮೈತ್ರಿಕೂಟದ ಹಿರಿಯ ನಾಯಕರೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.

ಆಗ ತನ್ನನ್ನು ಬೆಂಬಲಿಸುವ ಸಂಸದರ ಪಟ್ಟಿಯನ್ನು ಮೋದಿ ರಾಷ್ಟ್ರಪತಿಗಳಿಗೆ ನೀಡಲಿದ್ದಾರೆ. ಅದೇ ಸಂದರ್ಭದಲ್ಲಿ ಹೊಸ ಸರ್ಕಾರ ರಚಿಸುವ ಹಕ್ಕನ್ನು ಸಹ ಮಂಡಿಸಲಿದ್ದಾರೆ. ಅದನ್ನು ಅಂಗೀಕರಿಸುವ ರಾಷ್ಟ್ರಪತಿಗಳು ಹೊಸ ಸರ್ಕಾರ ರಚಿಸಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳಲಿದೆ.

ಬಿಜೆಪಿ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪಕ್ಷಗಳು ಉದ್ಘಾಟನಾ ಸಮಾರಂಭದ ಸಿದ್ಧತೆಗಳನ್ನು ಸಕ್ರಿಯವಾಗಿ ಮಾಡುತ್ತಿವೆ. ದೇಶದ ಮೊದಲ ಪ್ರಧಾನಿ ನೆಹರೂ ನಂತರ ಮೋದಿ ಅವರಿಗೆ ಸತತ 3ನೇ ಬಾರಿ ಪ್ರಧಾನಿಯಾಗುವ ಅವಕಾಶ ಸಿಕ್ಕಿದೆ ಎಂದು ಬಿಜೆಪಿ ಸಂಭ್ರಮಿಸುತ್ತಿದೆ.

ರಾಜಕೀಯ

ಡಿ.ಸಿ.ಪ್ರಕಾಶ್

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಸಂಸತ್ತಿನ ಚುನಾವಣೆಗಳು ನಡೆದವು. ಈ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಪರಸ್ಪರ ಪೈಪೋಟಿ ನಡೆಸಿದ್ದವು.

ಕಳೆದ 4ರಂದು ಮತ ಎಣಿಕೆ ಕಾರ್ಯ ನಡೆಯಿತು. ಇದರಲ್ಲಿ ಬಿ.ಜೆ.ಪಿ 240 ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನು ಸಾದಿಸಿತು. ಸರ್ಕಾರ ರಚಿಸಲು ಅಗತ್ಯವಿರುವ 272 ಕ್ಕಿಂತ 32 ಸ್ಥಾನಗಳ ಕೊರತೆಯಿದ್ದರೂ ಎನ್ ಡಿಎ 292 ಸ್ಥಾನಗಳನ್ನು ಗೆದ್ದುಕೊಂಡಿತು.

ಇದರ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್ ಡಿಎ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವ ಪ್ರಕ್ರಿಯೆಗೆ ಮುಂದಾಯಿತು. ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. 17ನೇ ಲೋಕಸಭೆ ವಿಸರ್ಜನೆಯಾಗಿದೆ.

ಬಿಜೆಪಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಬ್ಬರೂ ಕೇಂದ್ರದಲ್ಲಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ, ಎನ್ ಡಿಎಗೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ನೇತೃತ್ವದ ಪಕ್ಷಗಳ ಬೆಂಬಲ ಅಗತ್ಯವಿದೆ. ಅದೇ ಸಂದರ್ಭದಲ್ಲಿ, ಅವರು ಕೂಡ ಮೈತ್ರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದರೂ ಕೆಲವು ಷರತ್ತುಗಳನ್ನು ವಿಧಿಸಿವೆ. ಇದರ ಪ್ರಕಾರ ಸಾರಿಗೆ, ಐಟಿ, ಕೃಷಿ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಜಲಸಂಪನ್ಮೂಲ ಒದಗಿಸುವಂತೆ ಚಂದ್ರಬಾಬು ನಾಯ್ಡು ಕೋರಿದ್ದಾರೆ ಎನ್ನಲಾಗಿದೆ.

ಅದೇ ರೀತಿ, ಬಿಹಾರ ಮುಖ್ಯಮಂತ್ರಿ ಮತ್ತು ಸಂಯುಕ್ತ ಜನತಾದಳದ ನಾಯಕ ನಿತೀಶ್ ಕುಮಾರ್ ಅವರು ಬಿಹಾರಕ್ಕೆ ವಿಶೇಷ ಸ್ಥಾನಮಾನ ಮತ್ತು ಕನಿಷ್ಠ ಸಾಮಾನ್ಯ ಕ್ರಿಯಾ ಯೋಜನೆ ರೂಪಿಸಲು ಷರತ್ತು ವಿಧಿಸುವ ಜೊತೆಗೆ, 3 ಕ್ಯಾಬಿನೆಟ್ ಸಚಿವರು, 2 ರಾಜ್ಯ ಸಚಿವರು ಒಟ್ಟು 5 ಕೇಂದ್ರ ಸಚಿವ ಸ್ಥಾನಗಳು ಬೇಕೆಂದು ನಿತೀಶ್ ಕುಮಾರ್ ಬಯಸಿದ್ದಾರೆ.

ಅದೇ ರೀತಿ 2 ಸಂಸದರನ್ನು ಹೊಂದಿರುವ ಜಾತ್ಯತೀತ ಜನತಾದಳ ಕೂಡ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಬಿಜೆಪಿಗೆ ಒತ್ತಡ ಹೇರುತ್ತಿದೆ. ಜೆಡಿಎಸ್ ಪಕ್ಷವು ಕೃಷಿ ಇಲಾಖೆಯನ್ನು ಕೇಳುತ್ತಿದೆ.

ಮೈತ್ರಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಕೂಡ ಷರತ್ತು ವಿಧಿಸಿದೆ ಎನ್ನಲಾಗಿದೆ. ಆ ಪಕ್ಷ ಬಿಹಾರದಲ್ಲಿ 5 ಕ್ಷೇತ್ರಗಳನ್ನು ವಶಪಡಿಸಿಕೊಂಡಿದೆ.

ಹೀಗಾಗಿ ಬಿಜೆಪಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಮುನ್ನವೇ ಸಮ್ಮಿಶ್ರ ಪಕ್ಷಗಳ ಬೆಂಬಲ ಪಡೆಯಲು ಇಂತಹ ಹಲವು ಸವಾಲುಗಳನ್ನು ಎದುರಿಸಬೇಕಾದ ಸ್ಥಿತಿಯಲ್ಲಿದೆ.

ದೇಶ

ನಾಗರಕೋಯಿಲ್: ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಜೂನ್ 1 ರಂದು  ಪೂರ್ಣಗೊಳ್ಳಲಿದ್ದು, ಇಂದು (ಮೇ 30) ಅಂತಿಮ ಹಂತದ ಪ್ರಚಾರ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು 3 ದಿನಗಳ ಭೇಟಿಗಾಗಿ ಕನ್ಯಾಕುಮಾರಿಗೆ ಬಂದಿದ್ದಾರೆ.

ರಸ್ತೆ ಮಾರ್ಗವಾಗಿ ಸರ್ಕಾರಿ ಅತಿಥಿಗೃಹಕ್ಕೆ ತೆರಳಿದ ಮೋದಿ, ಸ್ವಲ್ಪ ಸಮಯ ಅಲ್ಲಿ ವಿಶ್ರಾಂತಿ ಪಡೆದರು. ನಂತರ ಅಲ್ಲಿಂದ ಭಗವತಿ ಅಮ್ಮನ್ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಭಗವತಿ ಅಮ್ಮನವರ ಭಾವಚಿತ್ರವನ್ನು ಸ್ಮರಣಿಕೆಯಾಗಿ ನೀಡಲಾಯಿತು.

ಅಲ್ಲಿಂದ ಕಡಲತೀರಕ್ಕೆ ಹೊರಟ ಮೋದಿಯವರು ವಿಶೇಷ ದೋಣಿಯ ಮೂಲಕ ವಿವೇಕಾನಂದ ಬೆಟ್ಟೆಕ್ಕೆ ತೆರಳಿದರು. ಕನ್ಯಾಕುಮಾರಿಗೆ ಆಗಮಿಸಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ತಮಿಳುನಾಡು ಬಿಜೆಪಿ ಸದಸ್ಯರು ಯಾರೂ ಬರಬಾದೆಂದು ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.

ಪ್ರಧಾನಿಯವರ ವೈಯಕ್ತಿಕ ಧ್ಯಾನ ಕಾರ್ಯಕ್ರಮವನ್ನು ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಬಾರದೆಂದು ಹೇಳಿದೆ. ಇದೇ ವೇಳೆ ಕೇಂದ್ರದ ಮಾಜಿ ಸಚಿವ ಪೊನ್ ರಾಧಾಕೃಷ್ಣನ್ ಅತಿಥಿ ಗೃಹಕ್ಕೆ ಬಂದಿದ್ದರು. ಪೊಲೀಸರು ಅವರಿಗೆ ಅನುಮತಿ ನಿರಾಕರಿಸಿದರು. ಇದಾದ ಬಳಿಕ ಅವರು ಅಲ್ಲಿಂದ ವಾಪಸ್ ತೆರಳಿದರು.

ರಾಜಕೀಯ

ವರದಿ: ಯೋಗಿತಾ ಲಿಮಾಯೆ, ಶ್ರುತಿ ಮೇನನ್ ಮತ್ತು ಜೇಕ್ ಗುಡ್‌ಮ್ಯಾನ್
ಬಿಬಿಸಿ ನ್ಯೂಸ್
ಕನ್ನಡಕ್ಕೆ: ಡಿ.ಸಿ.ಪ್ರಕಾಶ್

ಅಂಕುರ್ ರಾಣಾ ಅವರು ನಿರ್ವಹಿಸುವ ನೂರಾರು ವಾಟ್ಸಾಪ್ (WhatsApp) ಗುಂಪುಗಳಲ್ಲಿ ಸಂದೇಶಗಳನ್ನು ಕಳುಹಿಸಲು ತಮ್ಮ ಮೊಬೈಲ್ ಫೋನ್‌ನಲ್ಲಿ ಅತ್ಯಂತ ವೇಗವಾಗಿ ‘ಟೈಪ್’ ಮಾಡುತ್ತಾರೆ.

“ನನ್ನ ಬಳಿ 400-450 ವಾಟ್ಸಾಪ್ ಗುಂಪುಗಳಿವೆ. ಪ್ರತಿ ಗುಂಪಿನಲ್ಲಿ ಸುಮಾರು 200-300 ಜನರಿದ್ದಾರೆ. ಇದಲ್ಲದೆ, ನನ್ನ ಬಳಿ ಸುಮಾರು 5,000 ಜನರ ಸಂಪರ್ಕ ಸಂಖ್ಯೆಗಳಿವೆ. ಇವುಗಳ ಮೂಲಕ ನಾನೊಬ್ಬನೇ ದಿನಕ್ಕೆ 10-15,000 ಜನರನ್ನು ತಲುಪಬಲ್ಲೆ,” ಎಂದು ಕಳೆದ ತಿಂಗಳು ಮತದಾನ ನಡೆದ ಪಶ್ಚಿಮ ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಾಮಾಜಿಕ ಮಾಧ್ಯಮ ಸಂಯೋಜಕ ಅಂಕುರ್ ರಾಣಾ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ, ಅವರ ಸಂದೇಶಗಳು ಲಕ್ಷಾಂತರ ಮತದಾರರನ್ನು ತಲುಪುವುದನ್ನು ಖಾತ್ರಿಪಡಿಸುವ ತಂಡದಲ್ಲಿ ಅವರು ಭಾಗವಾಗಿದ್ದಾರೆ. ಉತ್ತರ ಪ್ರದೇಶವೊಂದರಲ್ಲೇ ಹತ್ತಕ್ಕೂ ಹೆಚ್ಚು ಕ್ಷೇತ್ರಗಳ ವಾಟ್ಸಾಪ್ ಗ್ರೂಪ್‌ಗಳಲ್ಲಿ ಈ ಸಂದೇಶಗಳು ಹರಿದಾಡುತ್ತವೆ.

ಈ ಕಾರ್ಯಗಳು ತುಂಬಾ ಕಷ್ಟವಾದದ್ದು. ಆದರೆ ಬಿಜೆಪಿ ಈ ಲೋಕಸಭೆ ಚುನಾವಣೆಯಲ್ಲಿ 370 ಸ್ಥಾನಗಳ ಗುರಿಯನ್ನು ಸಾಧಿಸಲು ಪ್ರಮುಖ ಮಾರ್ಗಗಳಾಗಿ ವಾಟ್ಸಾಪ್ ಸೇರಿದಂತೆ ಇತರ ಸಂದೇಶ ಮತ್ತು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಗುರುತಿಸಿಕೊಂಡಿದೆ.

ವಾಟ್ಸಾಪ್ ಅಪ್ಲಿಕೇಶನ್ ಅನ್ನು ಆಯ್ಕೆ ಮಾಡಲು ಉತ್ತಮ ಕಾರಣವೂ ಇದೆ. ಜಾಗತಿಕವಾಗಿ ವಾಟ್ಸಾಪ್ ಗೆ ಭಾರತವು ಪ್ರಮುಖ ಮಾರುಕಟ್ಟೆಯಾಗಿದೆ. ವಾಟ್ಸಾಪ್ ನಲ್ಲಿ ಗಂಟೆಗಟ್ಟಲೆ ಕಳೆಯುವ ಸುಮಾರು 50 ಕೋಟಿ ಬಳಕೆದಾರರಿದ್ದಾರೆ.

ವಾಟ್ಸಾಪ್ ನಲ್ಲಿ ಅವರು ‘ಗುಡ್ ಮಾರ್ನಿಂಗ್’ ನಿಂದ ಎಲ್ಲವನ್ನೂ ಇತರರಿಗೆ ಕಳುಹಿಸುತ್ತಾರೆ. ನಿರ್ದಿಷ್ಟವಾಗಿ, ಅವರು ವಿವಿಧ ಭಾಷೆಗಳಲ್ಲಿ ರಾಜಕೀಯ ಸಂದೇಶಗಳನ್ನು ಕಳುಹಿಸುತ್ತಾರೆ.

ಈ ಚುನಾವಣಾ ಯಂತ್ರದಲ್ಲಿ ಅಂಕುರ್ ಅವರಂತಹ ಕಾರ್ಯಕರ್ತರು, ಬಿಜೆಪಿ ಕುರಿತ ಸುದ್ದಿಗಳು ಎಲ್ಲಾ ವೇದಿಕೆಗಳಲ್ಲಿ ಭಾಗವಹಿಸುವುದನ್ನು ಖಚಿತಪಡಿಸುವ ಬೃಹತ್ ಕಾರ್ಯದಲ್ಲಿ ಸಣ್ಣ ಪಾತ್ರವನ್ನು ವಹಿಸುತ್ತಾರೆ.

ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರಗಳಿಗೆ ಸಾಮಾಜಿಕ ಮಾಧ್ಯಮ ಸಂಯೋಜಕರಾಗಿರುವ ಇತರ 10 ಜನರೊಂದಿಗೆ ಬಿಬಿಸಿ ಮಾತನಾಡಿದೆ. ಅವರೆಲ್ಲರೂ ನೂರಕ್ಕೂ ಹೆಚ್ಚು ವಾಟ್ಸಾಪ್ ಗ್ರೂಪ್‌ಗಳನ್ನು ನಿರ್ವಹಿಸುತ್ತಿದ್ದು, ಪ್ರತಿ ಗುಂಪಿನಲ್ಲಿ 200 ರಿಂದ 2,000 ಸದಸ್ಯರಿದ್ದಾರೆ ಎಂದು ಹೇಳಿದ್ದಾರೆ.

ಅಂಕುರ್ ರಾಣಾ

ಸುದ್ದಿ ಎಲ್ಲಿಂದ ಬರುತ್ತದೆ?
ಈ ಕಾರ್ಯವಿಧಾನವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ. ಮೀರತ್‌ನ ಬಿಜೆಪಿ ಕಾರ್ಯಕರ್ತರ ಪ್ರಕಾರ, “ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಪ್ರತಿದಿನ, ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಹೊಗಳುವುದರಿಂದ ಹಿಡಿದು ವಿರೋಧ ಪಕ್ಷವನ್ನು ಟೀಕಿಸುವವರೆಗೆ ಟ್ರೆಂಡಿಂಗ್ ಮಾಡಬಹುದಾದ ರಾಜಕೀಯ ಸಂದೇಶಗಳು ಮತ್ತು ಹ್ಯಾಶ್‌ಟ್ಯಾಗ್‌ಗಳನ್ನು ರಾಜ್ಯದ ಪಕ್ಷದ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ” ಎಂದು ಹೇಳುತ್ತಾರೆ.

ಅಲ್ಲಿಂದ ಅಂಕುರ್ ಸೇರಿದಂತೆ ಮೀರತ್ ಕ್ಷೇತ್ರದ 180 ಕಾರ್ಯಕರ್ತರಿಗೆ ಸುದ್ದಿ ತಲುಪುತ್ತದೆ. ಅವರು ಸಂದೇಶಗಳನ್ನು ಇನ್ನಷ್ಟು ಆಂತರಿಕ ಮಟ್ಟಕ್ಕೆ ಹರಡುತ್ತಾರೆ. ನಂತರ, ಆ ಸಂದೇಶಗಳು ಮತಗಟ್ಟೆ ಮಟ್ಟದಲ್ಲಿ ಪ್ರಚಾರವನ್ನು ನಿರ್ವಹಿಸುವವರಿಗೆ ತಲುಪುತ್ತವೆ.

ಅದರಲ್ಲೂ ಯುವಕರನ್ನು ತಲುಪುವಲ್ಲಿ ವಾಟ್ಸಾಪ್ ಪರಿಣಾಮಕಾರಿ ಎನ್ನುತ್ತಾರೆ ಅಂಕುರ್. ಸಂಭಾವನೆ ಇಲ್ಲದೆ ಬಿಜೆಪಿಗಾಗಿ ಈ ಕೆಲಸ ಮಾಡುವ ಅಂಕುರ್, ಮುಂಬೈನಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ನಡೆಸುತ್ತಿದ್ದಾರೆ. 40 ವರ್ಷ ಮೇಲ್ಪಟ್ಟವರು ಫೇಸ್ ಬುಕ್ ನಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ ಎಂದು ಅವರು ವರದಿ ಮಾಡಿದ್ದಾರೆ.

“ದಿನಕ್ಕೆ ಸರಾಸರಿ 1 ಲಕ್ಷದಿಂದ 1.5 ಲಕ್ಷದವರೆಗೆ ಹೊಸ ಜನರನ್ನು ತಲುಪುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳುತ್ತಾರೆ.

ಮತದಾರರೊಂದಿಗೆ ನೇರ ಸಂಪರ್ಕ:
ಸಾಮಾಜಿಕ ಮಾಧ್ಯಮಕ್ಕೆ ಸಂಬಂಧಿಸಿದಂತೆ, ಬಿಜೆಪಿಯ ಸಾಮಾಜಿಕ ಮಾಧ್ಯಮ ಪ್ರಚಾರವು ತನ್ನ ಪ್ರತಿಸ್ಪರ್ಧಿಗಳಿಂದ ದೂರ ಸರಿಯುತ್ತಿರುವಂತೆ ತೋರುತ್ತಿದೆ ಎಂಬುದು ತಜ್ಞರು ಅಭಿಪ್ರಾಯವಾಗಿದೆ. ಆದರೆ ವೈಯಕ್ತಿಕ ಸಂಪರ್ಕವಿಲ್ಲದೆ ಇದು ಕೆಲಸ ಮಾಡುವುದಿಲ್ಲ ಎಂದು ಕಾರ್ಯಕರ್ತರು ಹೇಳುತ್ತಾರೆ. ನಿರ್ದಿಷ್ಟವಾಗಿ, ಅವರಿಗೆ ಮೊದಲು ಜನರ ಸಂಪರ್ಕ ಸಂಖ್ಯೆಗಳು ಬೇಕು.

“ಪಕ್ಷದ ಉನ್ನತ ಕಾರ್ಯಕರ್ತನಿಂದ ಹಿಡಿದು ತಳಮಟ್ಟದ ಕಾರ್ಯಕರ್ತರವರೆಗೆ, ಅಧ್ಯಕ್ಷರು ಸೇರಿದಂತೆ ಎಲ್ಲರೂ 60 ಮತದಾರರಿಗೆ ಜವಾಬ್ದಾರರು” ಎಂದು ಮೀರತ್ ಬಳಿಯ ಮತಗಟ್ಟೆಯ ಪ್ರಚಾರ ಉಸ್ತುವಾರಿ ವಿಪಿನ್ ವಿಬಾಲಾ ಹೇಳುತ್ತಾರೆ.

“ನಮಗೆ ಒಪ್ಪಿಸಿದ 60 ಜನರೊಂದಿಗೆ ನಾವು ನಿರಂತರ ನೇರ ಸಂಪರ್ಕದಲ್ಲಿರಬೇಕು. ಬಿಜೆಪಿಗೆ ಮತ ಹಾಕುವಂತೆ ಅವರನ್ನು ಪ್ರೇರೇಪಿಸಬೇಕು. ಅವರ ಮೊಬೈಲ್ ನಂಬರ್ ಪಡೆದು ಮೆಸೇಜ್ ಗ್ರೂಪ್ ಗಳಿಗೆ ಅವರ ಹೆಸರನ್ನು ಸೇರಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ” ಎಂದು ಅವರು ಹೇಳುತ್ತಾರೆ.

ವಿಪಿನ್ ತಮ್ಮ ಅಧೀನದಲ್ಲಿರುವ ಮತದಾರರ ವಾಟ್ಸಾಪ್ ಗ್ರೂಪ್‌ಗೆ ‘ಮಾನವೀಯತೆಯೇ ಜೀವನ’ (Humanity is Life) ಎಂದು ಹೆಸರಿಟ್ಟಿದ್ದಾರೆ. ಅಂತೆಯೇ, ಗುಂಪು ಬಹಿರಂಗವಾಗಿ ರಾಜಕೀಯವಾಗದಂತೆ ನೋಡಿಕೊಳ್ಳುವುದು ಕೂಡ ಈ ಕೆಲಸದ ಭಾಗವಾಗಿದೆ. ಅಂತರ್ಜಾಲ ವಿಷಯದಲ್ಲಿ ಯಾವುದೇ ರೀತಿಯ ಸಂಭಾಷಣೆಯ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿರುವುದು ಅಸಾಧ್ಯವೆಂದು ಎಲ್ಲರಿಗೂ ತಿಳಿದಿದೆ.

ವಿಪಿನ್ ವಿಬಾಲಾ

ವಾಟ್ಸಾಪ್ ನಲ್ಲಿ ಪ್ರತ್ಯೇಕವಾಗಿ ಅಥವಾ ಗುಂಪುಗಳಲ್ಲಿ ಸಂದೇಶಗಳನ್ನು ಕಳುಹಿಸಿದಾಗ, ಏನನ್ನು ಹಂಚಿಕೊಳ್ಳಲಾಗುತ್ತಿದೆ ಮತ್ತು ಸಂದೇಶವು ಮೂಲತಃ ಎಲ್ಲಿಂದ ಬಂದಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳುವುದು ತುಂಬಾ ಕಷ್ಟವಾಗಿರುತ್ತದೆ.

ಹಂಚಿಕೊಳ್ಳುತ್ತಿರುವ ಸುಳ್ಳು ಸುದ್ದಿಗಳು:
ಕೆಲವು ಗುಂಪುಗಳಲ್ಲಿ; ಬಿಬಿಸಿ ನೋಡಿದ ಹಾಗೆ, ಹಲವು ಬಾರಿ ಹಂಚಿಕೊಂಡಿರುವ ವೈರಲ್ ಸಂದೇಶಗಳಲ್ಲಿ, ಕಾಂಗ್ರೆಸ್ ಪಕ್ಷ ಮುಸ್ಲಿಂ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ ಎಂಬ ಸುದ್ದಿಯೇ ಪ್ರಮುಖವಾಗಿದೆ.

ಹಿಂದಿಯಲ್ಲಿರುವ ಆ ಸಂದೇಶದಲ್ಲಿ, “ಕಾಂಗ್ರೆಸ್ ಈಗಾಗಲೇ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಿದೆ. ಅವರು ಅದನ್ನು ಅಧಿಕೃತವಾಗಿ ಘೋಷಿಸಲಿಲ್ಲ,” ಎಂದು ಉಲ್ಲೇಖಿಸಲಾಗಿದೆ. ಕಾಂಗ್ರೆಸ್ ಮುಸ್ಲಿಂ ಸಮುದಾಯದ ಪರವಾಗಿ ನಡೆದುಕೊಳ್ಳುತ್ತಿರುವ 18 ಮಾರ್ಗಗಳನ್ನೂ ವರದಿಯಲ್ಲಿ ಪಟ್ಟಿ ಮಾಡಲಾಗಿದೆ.

ಆ ಸಂದೇಶ ಎಲ್ಲಿಂದ ಬಂತು ಎಂಬುದನ್ನು ಪತ್ತೆಹಚ್ಚುವುದು ಕಷ್ಟ. ಆದರೆ, ಸತ್ಯವೆಂದರೆ, ಇತ್ತೀಚಿನ ವಾರಗಳಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ನಾಯಕತ್ವವು ಮಾಡಿದ ಅಭಿಪ್ರಾಯಗಳನ್ನು ಇದು ಪ್ರತಿಬಿಂಬಿಸುವಂತಿದೆ.

ವಿರೋಧ ಪಕ್ಷ ಅಧಿಕಾರಕ್ಕೆ ಬಂದರೆ ಜನರ ಆಸ್ತಿಯನ್ನು “ನುಸುಳುಕೋರರಿಗೆ” ಕೊಡಲಾಗುವುದು ಎಂದು ಮುಸ್ಲಿಮರನ್ನು ಗುರಿಯಾಗಿಸಿ ಹೇಳುವ ರೀತಿಯಲ್ಲಿ, ಪ್ರಧಾನಿ ಮೋದಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರ ಮೇಲೆ ಆರೋಪ ಹೊರಿಸಲಾಗಿತ್ತು.

ಬಿಜೆಪಿಯ ಅಧಿಕೃತ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳು ಈ ವಿಷಯವನ್ನು ಪದೇ ಪದೇ ಪುನರುಚ್ಚಿಸಿದಂತೆ ಇದ್ದವು. ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲೂ ಇದನ್ನು ಅಳವಡಿಸಲಾಗಿದೆ ಎಂದು ಬಿಜೆಪಿ ನಾಯಕರು ತಪ್ಪಾಗಿ ಹೇಳಿದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಆಸ್ತಿ ಹಂಚಿಕೆ ಅಥವಾ ಮುಸ್ಲಿಮರು ಎಂಬ ಪದವನ್ನು ಎಲ್ಲೂ ಉಲ್ಲೇಖಿಸಿಲ್ಲ.

ರಾಜಕೀಯ ಪಕ್ಷಗಳು ಅಧಿಕೃತವಾಗಿ ಹೇಳುವುದು ಸಾಮಾನ್ಯವಾಗಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಪ್ರತಿಫಲಿಸುತ್ತದೆ ಎಂದು ರಟ್ಜರ್ಸ್ ವಿಶ್ವವಿದ್ಯಾಲಯದ (Rutgers University) ಸಹಾಯಕ ಪ್ರಾಧ್ಯಾಪಕ ಕಿರಣ್ ಕರಿಮೆಲ್ಲಾ ಹೇಳುತ್ತಾರೆ. ಆದರೆ ನಂತರ ಯಾವುದು ಅಧಿಕೃತ ಮತ್ತು ಅನಧಿಕೃತ ಎಂಬುದನ್ನು ಆಯ್ಕೆ ಮಾಡುವುದು ಕಷ್ಟ ಎಂದು ಹೇಳಿದ್ದಾರೆ.

“ಇದನ್ನು ಉನ್ನತ ಮಟ್ಟದಿಂದ ನಿಯಂತ್ರಿಸಲಾಗುತ್ತದೆ. ಮೊದಲಿಗೆ ತಾಂತ್ರಿಕ ತಂಡದ (ಬಿಜೆಪಿಯ ಸಾಮಾಜಿಕ ಮಾಧ್ಯಮ ತಂಡ) ಚಟುವಟಿಕೆಗಳು. ತರುವಾಯ, ಶಾಶ್ವತ ಮತ್ತು ಸಂಯೋಜಿತ ವಿಷಯಗಳು. ಆದರೆ, ಈ ಸಂದೇಶಗಳನ್ನು ಹರಡುವಲ್ಲಿ ಸಾಮಾನ್ಯ ಜನರು ತೊಡಗಿಸಿಕೊಂಡಿರುವುದು ಹೊಸ ವಿಷಯವಾಗಿದೆ” ಎಂದು ಅವರು ಹೇಳುತ್ತಾರೆ. ಅಲ್ಲದೆ, ವಾಟ್ಸಾಪ್‌ನ ಸ್ವರೂಪವನ್ನು ಅವಲಂಬಿಸಿ, “ಯಾವುದು ಐಟಿ ತಂಡದಿಂದ ಅಭಿವೃದ್ಧಿಪಡಿಸಿದ್ದು ಮತ್ತು ಯಾವುದು ಸಾಮಾನ್ಯ ಕಾರ್ಯಕರ್ತರಿಂದ ಪ್ರಸಾರವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ” ಎಂದೂ ಅವರು ಹೇಳಿದ್ದಾರೆ.

ಅಲ್ಲದೆ, ಅಂತಹ ಸುದ್ದಿಗಳು ಒಂದು ನಿರ್ದಿಷ್ಟ (ಸಾಮಾಜಿಕ) ಮಾಧ್ಯಮದಲ್ಲಿ ಹುಟ್ಟಿಕೊಂಡು ನಂತರ ಎಲ್ಲಾ ಸಾಮಾಜಿಕ ಮಾಧ್ಯಮಗಳಿಗೆ ಹರಡುವುದರಿಂದ, ಜನರು ತಾವು ನೋಡುತ್ತಿರುವುದನ್ನು ನಿಜವೆಂದು ನಂಬಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಕೃಪೆ:ಬಿಬಿಸಿ

ದೇಶ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಕನ್ಯಾಕುಮಾರಿಯಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ.

ಮೇ 30 ರಂದು ತಮಿಳುನಾಡಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಮೇ 31 ಮತ್ತು ಜೂನ್ 1 ರಂದು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಬಂಡೆಯಲ್ಲಿ ಧ್ಯಾನ ಮಾಡಲಿದ್ದಾರೆ. ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ 2019ರ ಸಂಸತ್ ಚುನಾವಣೆಯ ಕೊನೆಯ ಹಂತದ ಮತದಾನದ ವೇಳೆ ಪ್ರಧಾನಿ ಮೋದಿ ಹಿಮಾಲಯಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅಲ್ಲಿನ ಗುಹೆಯೊಂದಕ್ಕೆ ತೆರಳಿ ಧ್ಯಾನ ಮಾಡಿದರು. ಈ ಪ್ರಯಾಣದಲ್ಲಿ ಅವರು ಕೇದಾರನಾಥ ಶಿವ ದೇವಾಲಯದಲ್ಲಿ ಪೂಜೆಯನ್ನೂ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವಪೆರುಂತಗೈ ಅವರು ತಮ್ಮ ಎಕ್ಸ್ ಪೇಜ್ ನಲ್ಲಿ “ಪ್ರಜಾಪ್ರತಿನಿಧಿ ಕಾಯ್ದೆಯಂತೆ ಚುನಾವಣಾ ನೀತಿ ನಿಯಮಗಳು ಜಾರಿಯಲ್ಲಿರುವ ಕಾರಣ ಮೋದಿಯವರ ಕನ್ಯಾಕುಮಾರಿ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು.

ಚುನಾವಣೆಗೆ ಮುನ್ನ 48 ಗಂಟೆಗಳ ವಿರಾಮದ ವೇಳೆಯಲ್ಲಿ ಇಂತಹ ಘಟನೆಯ ಮೂಲಕ ಮಾಧ್ಯಮಗಳನ್ನು ಬಳಸಿಕೊಂಡು ರಹಸ್ಯವಾಗಿ ಪ್ರಚಾರ ಮಾಡಲು ಮೋದಿ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ನಾಳೆ (ಇಂದು) ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ನೀಡಬೇಕಿದೆ. ಅಗತ್ಯವಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾರೆ.

ಕ್ರೀಡೆ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರಿನಲ್ಲಿ ನಕಲಿ ಅರ್ಜಿಗಳು ಬಂದಿವೆ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಹೇಳಿದೆ.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಅವಧಿ ಮುಂಬರುವ ಟಿ20 ವಿಶ್ವಕಪ್‌ನೊಂದಿಗೆ ಕೊನೆಗೊಳ್ಳಲಿದೆ. ಇದರ ಬೆನ್ನಲ್ಲೇ ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಅದರಂತೆ ಬಿಸಿಸಿಐ ಗೂಗಲ್ ಫಾರಂಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸುತ್ತಿತ್ತು. ಅರ್ಜಿ ಸಲ್ಲಿಸುವ ಗಡುವು ನಿನ್ನೆ (ಮೇ 27) ಕೊನೆಗೊಂಡಿದೆ.

ಈ ಹಿನ್ನೆಲೆಯಲ್ಲಿ, ಒಟ್ಟು 3000ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ ಎಂದು ಬಿಸಿಸಿಐ ಹೇಳಿಕೊಂಡಿದೆ. ಅವುಗಳಲ್ಲಿ ಹೆಚ್ಚಿನವು ನಕಲಿ ಅರ್ಜಿಗಳು ಎಂದು ವರದಿಯಾಗಿದೆ. ನಿರ್ದಿಷ್ಟವಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಸೆಹ್ವಾಗ್, ಧೋನಿ ಮತ್ತಿತರರ ಹೆಸರಿನಲ್ಲೂ ನಕಲಿಯಾಗಿ ಅರ್ಜಿ ಸಲ್ಲಿಸಲಾಗಿದೆ.

ಇದರಿಂದ ಹಲವರು ಆಘಾತಕ್ಕೊಳಗಾಗಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಗೂಗಲ್ ಫಾರಂಗಳ ಮೂಲಕ ಅರ್ಜಿಗಳು ಬಂದಿರುವುದರಿಂದ ಹೆಚ್ಚು ನಕಲಿಗಳು ಬಂದಿವೆ ಎನ್ನಲಾಗಿದೆ. ಇದರಲ್ಲಿನ ಅರ್ಹ ಅರ್ಜಿಗಳನ್ನು ಪರಿಗಣಿಸಿ, ಇವರಲ್ಲಿ ಒಬ್ಬರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ಬಿಸಿಸಿಐ ನೇಮಕ ಮಾಡಲಿದೆ ಎಂದು ಹೇಳಲಾಗುತ್ತಿದೆ.

ರಾಜಕೀಯ

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಅವಧಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸುತ್ತಿದ್ದಾರೆ.

ಇದೇ ವೇಳೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, “ನಾನು ಎಂದಿಗೂ ಹಿಂದೂ-ಮುಸ್ಲಿಂ ವಿಭಜನೆಯನ್ನು ಸೃಷ್ಟಿಸುವುದಿಲ್ಲ. ಮೋದಿ ಮಾದರಿಯಲ್ಲಿ ಹಿಂದೂ-ಮುಸ್ಲಿಂ ವಿಭಜನೆಗೆ ಅವಕಾಶವಿಲ್ಲ. ನನ್ನ ಬಾಲ್ಯದಿಂದಲೂ ನಾನು ನನ್ನ ಮುಸ್ಲಿಂ ಸ್ನೇಹಿತರೊಂದಿಗೆ ಈದ್ ಅನ್ನು ನನ್ನ ಮನೆಯ ಸಮೀಪದಲ್ಲಿ ಆಚರಿಸಿದ್ದೇನೆ.

ನಾನು ಬಾಲ್ಯದಿಂದಲೂ ಮುಸ್ಲಿಂ ಕುಟುಂಬದೊಂದಿಗೆ ವಾಸಿಸುತ್ತಿದ್ದೇನೆ. 2002 ರಿಂದ ನನ್ನ ಹೆಸರನ್ನು ಹಾಳು ಮಾಡಿದ್ದಾರೆ.

ಹಿಂದೂಗಳಲ್ಲಿ ಕೂಡ ಹೆಚ್ಚು ಮಕ್ಕಳನ್ನು ಹೊಂದಿರುವವರು ಇದ್ದಾರೆ. ಮುಸ್ಲಿಮರು ನನಗೆ ಮತ ಹಾಕುತ್ತಾರೆ. ಹಿಂದೂ-ಮುಸ್ಲಿಂ ವಿಭಜನೆಗೆ ಕಾರಣವಾದರೆ ನಾನು ಸಾರ್ವಜನಿಕ ಜೀವನಕ್ಕೆ ಅನರ್ಹ” ಎಂದು ಹೇಳಿದ್ದಾರೆ.

ರಾಜಕೀಯ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರಧಾನಿ ಮೋದಿ ಇಂದು (ಮೇ 14) ನಾಮಪತ್ರ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ 3ನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.

ಈ ಕ್ಷೇತ್ರಕ್ಕೆ ಜೂನ್ 1 ರಂದು 7ನೇ ಮತ್ತು ಅಂತಿಮ ಹಂತದ ಚುನಾವಣೆಯ ಸಮಯದಲ್ಲಿ ಮತದಾನ ನಡೆಯಲಿದೆ. ಇಂದು (ಮೇ 14) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಇಂದು ಪ್ರಧಾನಿ ಮೋದಿ ಅವರು ನಾಮಪತ್ರ ಸಲ್ಲಿಸಲು ವಾರಣಾಸಿಗೆ ಆಗಮಿಸಿದ್ದರು. ಇದಕ್ಕೂ ಮುನ್ನ ಅವರು ಗಂಗಾನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.

ರಾಜಕೀಯ

ಡಿ.ಸಿ.ಪ್ರಕಾಶ್

ಇಸ್ಲಾಂ ವಿರೋಧದ ನಂತರ ಬಿಜೆಪಿ ವರ್ಣ ಆಧಾರಿತ ರಾಜಕಾರಣವನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡಿದೆ!

ಮುಸ್ಲಿಮರು ಮತ್ತು ಅಲ್ಪಸಂಖ್ಯಾತರನ್ನು ದಮನ ಮಾಡಿ, ವಿಭಜನೆಯನ್ನು ಸೃಷ್ಟಿಸಿ ಆ ಮೂಲಕ ಬಹುಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯುವುದು ಆರ್.ಎಸ್.ಎಸ್ ಸಿದ್ಧಾಂತದ ಬಿಜೆಪಿಯ ಉದ್ದೇಶವಾಗಿದೆ. ಹೀಗಾಗಿ ಜಾತಿ ತಾರತಮ್ಯ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯದ ಬಗ್ಗೆ ಮಾತನಾಡುವುದು ಬಿಜೆಪಿಯ ಮೂಲ ರಚನೆಯಾಗಿದೆ.

ಆದರೂ ಇಂತಹ ಚಟುವಟಿಕೆಗಳು ಇಲ್ಲಿಯವರೆಗೆ ಗುಟ್ಟಾಗಿ ನಡೆಯುತ್ತಿದ್ದವು. ಆದರೆ ತನ್ನ 10 ವರ್ಷಗಳ ಆಡಳಿತದಲ್ಲಿ ಹಲವು ವೈಫಲ್ಯಗಳನ್ನು ಕಂಡ ಮೋದಿ ಸರಕಾರ, ಈ ಬಾರಿ ಖಂಡಿತವಾಗಿಯೂ ಸೋಲಲಿದೆ ಎಂದು ಅರಿವಾಗಿ, ನಿರಂತರ ದ್ವೇಷ ಅಭಿಯಾನಗಳನ್ನು ಮುನ್ನಡೆಸುತ್ತಿದೆ. ಈ ನಿಟ್ಟಿನಲ್ಲಿ, ಮೋದಿ ಈಗ ಮುಸ್ಲಿಮರನ್ನು ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಹಿರಂಗವಾಗಿ ಟೀಕಿಸುತ್ತಿದ್ದಾರೆ.

ಬಿಜೆಪಿ ನಾಯಕರು, ಮುಸ್ಲಿಮರು ಎಂದರೇ ಶತ್ರುಗಳು ಎಂಬಂತಹ ವರ್ತನೆಯನ್ನು ಬಿತ್ತುತ್ತಿದ್ದಾರೆ. ಇದರಿಂದಾಗಿ ಮುಸ್ಲಿಮರ ಅಸ್ತಿತ್ವವೇ ಪ್ರಶ್ನಾರ್ಹವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿಯವರು, ಮುಸ್ಲಿಮರ ಮೇಲೆ ದ್ವೇಷ ಸಾಧಿಸಿದರೆ ಸಾಕಾಗದು, ಜನಾಂಗೀಯ ದ್ವೇಷವನ್ನು ಬಿತ್ತಿದರೆ ಮಾತ್ರ ಮತಗಳು ಹೆಚ್ಚಾಗುತ್ತವೆ ಎಂದು ಭಾವಿಸಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮೋದಿ ಅವರು, ‘ಕಾಂಗ್ರೆಸ್ ಪಕ್ಷವು, ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬಣ್ಣದ ಕಾರಣಕ್ಕಾಗಿಯೇ ಮತ ಹಾಕಲಿಲ್ಲ’ ಎಂಬ ಹೊಸ ಸುಳ್ಳನ್ನು ಉಗುಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ, ‘ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಸೂಚಿಸಿದಂತೆಯೇ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಕೂಡ ಮತ್ತೊಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬೆಂಬಲಿಸಿದವು, ಅದಕ್ಕೂ ಬಣ್ಣಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಏಕೆ ಆಹ್ವಾನಿಸಲಿಲ್ಲ? ಅವರ ಬಣ್ಣದ ಕಾರಣದಿಂದಲೇ ಎಂಬ ಪ್ರಶ್ನೆಗಳು ಮೋದಿಯತ್ತ ಹರಿದಾಡುತ್ತಿವೆ. ಇಂತಹ ಪ್ರಕ್ರಿಯೆಗಳು ನಡೆಯುತ್ತಿದ್ದರೂ ಚುನಾವಣಾ ಆಯೋಗ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಿರುವುದು ಟೀಕೆಗೆ ಗುರಿಯಾಗಿದೆ.

ಲೇಖನ

ಡಿ.ಸಿ.ಪ್ರಕಾಶ್ ಸಂಪಾದಕರು

ಭಾರತದಾದ್ಯಂತ ಹರಡಿ ಎಲ್ಲೆಡೆ ವ್ಯಾಪಿಸಿರುವ ರೈಲು ಹಳಿಗಳಿಗೆ ಇಲ್ಲಿ ದೊಡ್ಡ ಇತಿಹಾಸವಿದೆ. ಶ್ರೀಮಂತರು, ಮಧ್ಯಮ ವರ್ಗದವರು ಮಾತ್ರವಲ್ಲದೆ ಬಡವರೂ ಸಹ ಕಡಿಮೆ ದರದಲ್ಲಿ ಭಾರತದ ಯಾವುದೇ ಭಾಗಕ್ಕೆ ಪ್ರಯಾಣಿಸಲು ರೈಲುಗಳು ಸಹಾಯ ಮಾಡುತ್ತವೆ.

ಆದರೆ, ಕಳೆದ ಕೆಲವು ವರ್ಷಗಳಿಂದ ರೈಲು ದರವನ್ನು ಹೆಚ್ಚಿಸುವುದು ಮತ್ತು ಬಡವರು ಪ್ರಯಾಣಿಸಬಹುದಾದ ಬೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಮುಂತಾದ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಇದರಿಂದ ರೈಲು ಪ್ರಯಾಣವನ್ನೇ ಅವಲಂಬಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚೆಗಷ್ಟೇ ರಾಹುಲ್ ಗಾಂಧಿ ತಮ್ಮ ಎಕ್ಸ್ ಪೇಜ್ ನಲ್ಲಿ ಸಾಮಾನ್ಯ ಬಡವರ ಪಾಲಿಗೆ ರೈಲು ಪ್ರಯಾಣ ಅಷ್ಟಕ್ಕಷ್ಟೆ ಆಗುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ಅದರಲ್ಲಿ, “ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡೇ ಭಾರತೀಯ ರೈಲ್ವೇ ತನ್ನ ನೀತಿಗಳನ್ನು ವಿನ್ಯಾಸಗೊಳಿಸುತ್ತದೆ. ಇದರಲ್ಲಿ ಬಡವರನ್ನು ನಿರ್ಲಕ್ಷಿಸಲಾಗುತ್ತಿದೆ. ರೈಲ್ವೇ ಪ್ರಯಾಣ ದರವನ್ನು ಪ್ರತಿ ವರ್ಷ ಶೇ.10ರಷ್ಟು ಹೆಚ್ಚಿಸಲಾಗುತ್ತಿದೆ. ಭಾರತೀಯ ರೈಲ್ವೇ ಡೈನಾಮಿಕ್ ದರದ ಹೆಸರಿನಲ್ಲಿ ಪ್ರಯಾಣಿಕರಿಂದ ಭಾರಿ ಮೊತ್ತವನ್ನು ಪಡೆಯುತ್ತಿದೆ. ಟಿಕೆಟ್ ರದ್ದತಿಯ ದಂಡವನ್ನೂ ಹೆಚ್ಚಿಸಲಾಗಿದೆ. ರೈಲಿನಲ್ಲಿ ಶ್ರೀಮಂತರೇ ಪ್ರಯಾಣಿಸುವ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಕೊರೋನಾ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗಿದ್ದ ಪ್ರಯಾಣ ದರದ ರಿಯಾಯಿತಿಯನ್ನೂ ಭಾರತೀಯ ರೈಲ್ವೆ ಇಲಾಖೆ ಹಿಂಪಡೆದಿದೆ. ಇದನ್ನು ತಮ್ಮ ಎಕ್ಸ್ ಪೇಜ್ ನಲ್ಲಿ ಉಲ್ಲೇಖಿಸಿರುವ ರಾಹುಲ್ ಗಾಂಧಿ, “ಕಳೆದ ಮೂರು ವರ್ಷಗಳಲ್ಲಿ ರೈಲ್ವೇ ಇಲಾಖೆಯು ಹಿರಿಯ ನಾಗರಿಕರಿಗೆ ನೀಡಲಾಗಿದ್ದ ಪ್ರಯಾಣ ದರ ರಿಯಾಯಿತಿಯನ್ನು ಕಸಿದುಕೊಳ್ಳುವ ಮೂಲಕ 3,700 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಸುಸ್ಥಿತಿಯಲ್ಲಿರುವವರಿಗೆ ಎಸಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಬಡವರ ಸಾಮಾನ್ಯ ಕೋಚ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ.

“ರೈಲ್ವೇ ಕೋಚ್‌ಗಳ ಉತ್ಪಾದನೆಯಲ್ಲಿ, ಎಸಿ ಕೋಚ್‌ಗಳನ್ನು ಸಾಮಾನ್ಯ ಕೋಚ್‌ಗಳಿಗಿಂತ ಮೂರು ಪಟ್ಟು ಹೆಚ್ಚು ಉತ್ಪಾದಿಸಲಾಗುತ್ತದೆ. ಹೀಗೆ ಕೇವಲ ರೈಲುಗಳನ್ನೇ ತಮ್ಮ ಪ್ರಯಾಣಕ್ಕೆ ಅವಲಂಬಿಸಿರುವ ಶೇ.80ರಷ್ಟು ಜನರಿಗೆ ಭಾರತೀಯ ರೈಲ್ವೇ ದ್ರೋಹ ಬಗೆಯುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತೀಯ ರೈಲ್ವೇ ಬಗ್ಗೆ ರಾಹುಲ್ ಗಾಂಧಿ ಹೇಳಿರುವ ಮಾತುಗಳು 100% ಸತ್ಯ ಎಂದು ರೈಲಿನಲ್ಲಿ ನಿತ್ಯ ಪ್ರಯಾಣಿಸುವವರು ಹೇಳುತ್ತಾರೆ. ಪ್ರಧಾನಿ ಮೋದಿ ಅವರು ಪ್ರತಿ ರೈಲು ನಿಲ್ದಾಣಕ್ಕೆ ತೆರಳಿ ‘ವಂದೇ ಭಾರತ್’ ರೈಲುಗಳನ್ನು ಉದ್ಘಾಟಿಸಿದ್ದಾರೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬುಲೆಟ್ ಟ್ರೈನ್ ಭರವಸೆ ನೀಡಿದೆ. ಆದರೆ ರೈಲು ಪ್ರಯಾಣವನ್ನೇ ಹೆಚ್ಚು ಅವಲಂಬಿಸಿರುವ ಬಡ ಜನರ ಸೌಲಭ್ಯಗಳ ಬಗ್ಗೆ ಆಡಳಿತಗಾರರಿಗೆ ಯಾವುದೇ ಕಾಳಜಿ ಇಲ್ಲ.

ಪ್ರಮುಖ ನಗರಗಳ ನಡುವೆ ಓಡುವ ‘ವಂದೇ ಭಾರತ್’ ರೈಲುಗಳನ್ನು ಭಾರತೀಯ ರೈಲ್ವೇ ಕ್ಷೇತ್ರದ ಪ್ರಗತಿಯ ಸಂಕೇತವೆಂದು ಆಡಳಿತಗಾರರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಈ ರೈಲಿನ ಬೋಗಿಗಳು ಸಂಪೂರ್ಣ ಹವಾನಿಯಂತ್ರಿತವಾಗಿದ್ದು ವಿಮಾನದಂತೆಯೇ ಐಷಾರಾಮಿ ಸೌಲಭ್ಯಗಳನ್ನು ಹೊಂದಿದೆ. ರೈಲಿನಲ್ಲಿ ಸ್ವಯಂಚಾಲಿತ ಬಾಗಿಲುಗಳು, ವೈ-ಫೈ, ಜಿಪಿಎಸ್, ಆಡಿಯೋ, ವಿಡಿಯೋ, ಆಧುನಿಕ ಶೌಚಾಲಯಗಳು, ಸ್ವಿವೆಲ್ ಆಸನಗಳು, ಟಚ್ ಸ್ಕ್ರೀನ್‌ನಂತಹ ಆಧುನಿಕ ಸೌಲಭ್ಯಗಳಿವೆ. ‘ಎಸಿ ಚೇರ್ ಕಾರ್’ ಮತ್ತು ‘ಎಕ್ಸಿಕ್ಯುಟಿವ್ ಚೇರ್ ಕಾರ್’ ಎಂಬ ಎರಡು ರೀತಿಯ ಕೋಚ್‌ಗಳನ್ನು ಹೊಂದಿರುವ ವಂದೇ ಭಾರತ್ ರೈಲು ಕೇವಲ ಶ್ರೀಮಂತರಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಬಸ್ ಪ್ರಯಾಣ ದರ ರೈಲು ದರಕ್ಕಿಂತ ಹಲವು ಪಟ್ಟು ಹೆಚ್ಚಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದ ಬಹುತೇಕರು ರೈಲು ಪ್ರಯಾಣಕ್ಕೆ ಆದ್ಯತೆ ನೀಡುತ್ತಾರೆ. ಆದರೆ ಎಲ್ಲಾ ರೈಲುಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಸಾಮಾನ್ಯ ಬೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. 2020ರಲ್ಲಿ, ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಲಾಕ್ ಡೌನ್ ಘೋಷಿಸಿದ್ದ ಸಂದರ್ಭದಲ್ಲಿ, ರೈಲ್ವೆ ಆಡಳಿತವು ಹಲವಾರು ಕ್ರಮಗಳನ್ನು ತೆಗೆದುಕೊಂಡಿತು. ಭಾರತದ ಎಲ್ಲಾ ರೈಲುಗಳಲ್ಲಿ ಕಾಯ್ದಿರಿಸಿದ ಬೋಗಿಗಳನ್ನು ಮಾತ್ರ ಓಡಿಸುವುದು ಮತ್ತು ಹಿರಿಯ ನಾಗರಿಕರಿಗೆ ಪ್ರಯಾಣ ದರದ ರಿಯಾಯಿತಿಯನ್ನು ರದ್ದುಗೊಳಿಸುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳಲಾಯಿತು.

ಆ ಸಮಯದಲ್ಲಿ, ಎಲ್ಲಾ ರೈಲು ನಿಲ್ದಾಣಗಳಲ್ಲಿ ನಿಲ್ಲಬಹುದಾದ ಅನೇಕ ‘ಲೋಕಲ್’ ಪ್ಯಾಸೆಂಜರ್ ರೈಲುಗಳನ್ನು ಎಕ್ಸ್‌ಪ್ರೆಸ್ ರೈಲುಗಳಾಗಿ ಪರಿವರ್ತಿಸಲಾಯಿತು. ಎಕ್ಸ್‌ಪ್ರೆಸ್ ರೈಲುಗಳನ್ನು ಸೂಪರ್ ಫಾಸ್ಟ್ (Super Fast) ಎಕ್ಸ್‌ಪ್ರೆಸ್ ರೈಲುಗಳಾಗಿ ಪರಿವರ್ತಿಸಲಾಯಿತು. ಅಲ್ಲದೆ, ಕೊರೋನಾ ಹೆಸರನ್ನು ಬಳಸಿಕೊಂಡು, ಭಾರತದ ಎಲ್ಲಾ ರೈಲುಗಳಲ್ಲಿ ಕಾಯ್ದಿರಿಸದ ಸಾಮಾನ್ಯ ಕೋಚ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಯಿತು. ಬದಲಾಗಿ, ಎಸಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಭಾರತೀಯ ರೈಲ್ವೇ ಬಡವರಿಗೆ ವಂಚಿಸುತ್ತಿದೆ ಎಂದು ರೈಲಿನಲ್ಲಿ ನಿತ್ಯ ಸಂಚರಿಸುವ ಜನರ ಯಾತನೆಯಾಗಿದೆ. ಇದನ್ನೇ ರಾಹುಲ್ ಗಾಂಧಿ ಎತ್ತಿ ತೋರಿಸಿದ್ದಾರೆ ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ.

2014ರಲ್ಲಿ 400 ರೂಪಾಯಿ ಇದ್ದ ಅಡುಗೆ ಅನಿಲ ಸಿಲಿಂಡರ್ ಬೆಲೆ ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ 1000 ರೂಪಾಯಿ ದಾಟಿದೆ ಎಂದು ವಿರೋಧ ಪಕ್ಷಗಳು ಹೇಳಿದಾಗ ಜನರಿಗೆ ಸುಲಭವಾಗಿ ಅರ್ಥವಾಗುತ್ತದೆ. ಅದೇ ರೀತಿ ಪ್ರೀಮಿಯಂ ಶುಲ್ಕ, ಡೈನಾಮಿಕ್ ಶುಲ್ಕ ಹೀಗೆ ಹಲವು ಹೆಸರುಗಳಲ್ಲಿ ಹಣ ಸುಲಿಗೆಯಾಗುತ್ತಿರುವಾಗ ಪ್ರಮುಖ ವಿರೋಧ ಪಕ್ಷಗಳು ಅದರ ಬಗ್ಗೆ ಮಾತನಾಡುವುದು ಅನಿವಾರ್ಯವಾಗುತ್ತದೆ. ಅಲ್ಲದೆ, ಮೆಟ್ರೋ, ವಂದೇ ಭಾರತ್ ಮತ್ತು ಬುಲೆಟ್ ರೈಲುಗಳ ಹೆಸರುಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವ ಅದೇ ಸಂದರ್ಭದಲ್ಲಿ ಬಡವರು ಬಳಸುವ ರೈಲುಗಳ ಹೊಸ ಯೋಜನೆಗಳನ್ನೂ ಸೇರಿಸಬೇಕು.

ರಾಹುಲ್ ಗಾಂಧಿ ಅವರ ಭಾಷಣ ಚುನಾವಣಾ ಅಖಾಡದಲ್ಲಿ ಸದ್ದು ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.