ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Modi Archives » Page 4 of 5 » Dynamic Leader
October 23, 2024
Home Posts tagged Modi (Page 4)
ರಾಜಕೀಯ

ಹೈದರಾಬಾದ್: ದೇವರ ಚಿತ್ರ ತೋರಿಸಿ ಬಡವರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ; ಜನರು ಮೋದಿ ಬಗ್ಗೆ ಎಚ್ಚರದಿಂದಿರಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಕಳೆದ 22 ರಂದು ಪ್ರಧಾನಿ ಮೋದಿ ಸಮ್ಮುಖದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಕುಂಭಾಭಿಷೇಕ ನಡೆಯಿತು.

ದೇವರ ಚಿತ್ರಗಳನ್ನು ತೋರಿಸಿ ಬಡವರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ದೇಶದಲ್ಲಿ ಹಣದುಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅನೇಕ ಜನರು ನಿರುದ್ಯೋಗಿಗಳಾಗಿದ್ದಾರೆ. ಬಿಕ್ಕಟ್ಟುಗಳು ಬಂದಾಗ, ಮೋದಿ ಪಾಕಿಸ್ತಾನ, ಚೀನಾ ಮತ್ತು ದೇವರುಗಳ ಹೆಸರುಗಳನ್ನು ಬಳಸಿಕೊಂಡು ನೆಪ ಹೇಳುತ್ತಾ ಬರುತ್ತಾರೆ.

ಈ ಹಿಂದೆ ಹಲವು ಆಶ್ವಾಸನೆಗಳನ್ನು ನೀಡಿದ್ದ ಮೋದಿ ಇನ್ನೂ ಈಡೇರಿಸಿಲ್ಲ. ಹಾಗಾಗಿ ಯಾರೂ ಮೋದಿ ಬಲೆಗೆ ಬೀಳಬೇಡಿ” ಎಂದು ಎಚ್ಚರಿಸಿದರು.

ದೇಶ

“ಜಮ್ಮು ಮತ್ತು ಕಾಶ್ಮೀರ ರಾಜ್ಯವು ಕೇಂದ್ರ ಸರ್ಕಾರದ ಅಧೀನದಲ್ಲಿದ್ದಾಗ, ಮೂಲಸೌಕರ್ಯ ಯೋಜನೆಗಳಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ”

ಹಣಕಾಸು ವಿಚಾರ ಸಂಕಿರಣವೊಂದರಲ್ಲಿ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಮಣ್ಯಂ ಅವರು ಸಾರ್ವಜನಿಕವಾಗಿ ವ್ಯಕ್ತಪಡಿಸಿರುವ ಅಭಿಪ್ರಾಯಗಳ ಕುರಿತು ಅಲ್ಜಜೀರಾ (alzazeera) ಸುದ್ದಿ ಸಂಸ್ಥೆ ವರದಿಯೊಂದನ್ನು ಪ್ರಕಟಿಸಿದೆ. ಅದರಲ್ಲಿ ಕಾಣಿಸಿಕೊಂಡಿರುವ ಮುಖ್ಯ ವಿಷಯಗಳ ಕುರಿತು ವಿವರವಾಗಿ ನೋಡೋಣ.

ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಕೇಂದ್ರ ಎಂದು ಕರೆಯಲ್ಪಡುವ ಸರ್ಕಾರೇತರ ಚಿಂತಕರ ಚಾವಡಿ ಆಯೋಜಿಸಿದ್ದ ಭಾರತದ ಆರ್ಥಿಕ ಪರಿಸ್ಥಿತಿ ಕುರಿತ ವಿಚಾರ ಸಂಕಿರಣದಲ್ಲಿ, ನೀತಿ ಆಯೋಗ್ ಸಿಇಒ ಬಿವಿಆರ್ ಸುಬ್ರಮಣ್ಯಂ ಅವರು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಅದರಲ್ಲಿ “ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರಕಾರದ ಶೇ.50ರಷ್ಟು ತೆರಿಗೆ ರಾಜ್ಯ ಸರಕಾರಕ್ಕೆ ಬರಬೇಕೆಂಬ ಷರತ್ತು ಇತ್ತು” ಆದರೆ ಮೋದಿ ಪ್ರಧಾನಿಯಾದ ನಂತರ ಅವರ ಆಲೋಚನಾ ಕ್ರಮದಲ್ಲಿ ಬದಲಾವಣೆಯಾಗಿದೆ.

2014ರಲ್ಲಿ ಕೇಂದ್ರ ಸರ್ಕಾರದ ಶೇ.42ರಷ್ಟು ತೆರಿಗೆ ರಾಜ್ಯಗಳಿಗೆ ಸೇರಬೇಕು. ಆದರೆ ಅದನ್ನು ಶೇ.33ಕ್ಕೆ ಇಳಿಸುವಂತೆ ಪ್ರಧಾನಿ ಒತ್ತಾಯಿಸಿದರು. ಆದರೆ ಅಂದಿನ ನೀತಿ ಆಯೋಗದ ಅಧ್ಯಕ್ಷ ವೈ.ವಿ.ರೆಡ್ಡಿ ಇದಕ್ಕೆ ಒಪ್ಪಿರಲಿಲ್ಲ. ಇದನ್ನು ಅವರು ನಿರಾಕರಿಸಿದರು.

ನಾನು ಪ್ರಧಾನಿ ಕಾರ್ಯಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ಮೂವರ ನಡುವೆ ನಡೆದ ಸಮಾಲೋಚನೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ.

ಸರ್ಕಾರದ ಲೆಕ್ಕಪತ್ರಗಳು ಪಾರದರ್ಶಕವಾಗಿಲ್ಲದಿದ್ದರೆ ಅವುಗಳನ್ನು ಹಿಂಡನ್‌ಬರ್ಗ್‌ನಂತಹ ವರದಿಗಳ ಮೂಲಕ ಬಹಿರಂಗಪಡಿಸಬಹುದು. ಅಲ್ಲದೆ, ಜಮ್ಮು ಮತ್ತು ಕಾಶ್ಮೀರ ರಾಜ್ಯವು ಕೇಂದ್ರ ಸರ್ಕಾರದ ಅಧೀನದಲ್ಲಿದ್ದಾಗ, ಮೂಲಸೌಕರ್ಯ ಯೋಜನೆಗಳಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ” ಎಂದು ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಯೊಬ್ಬರ ಈ ಬಹಿರಂಗ ಹೇಳಿಕೆ ಹಲವು ಚರ್ಚೆಗಳನ್ನು ಮುನ್ನೆಲೆಗೆ ತಂದಿದೆ. ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಮಣ್ಯಂ ಅವರ ಈ ಮುಕ್ತ ಭಾಷಣವನ್ನು ಯೂಟ್ಯೂಬ್‌ನಿಂದ ತೆಗೆದುಹಾಕಲಾಗಿದೆ ಎಂದು ಅಲ್ಜಜೀರಾ (alzazeera) ವರದಿ ಮಾಡಿದೆ.

ಕ್ರೀಡೆ ದೇಶ

ಚೆನ್ನೈ: ವಿಶ್ವ ಕಪ್ ಕ್ರಿಕೆಟ್‌ನ ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ಲೀಗ್ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು.

ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಾಕಿಸ್ತಾನ ತಂಡವು 42.5 ಓವರ್‌ಗಳಲ್ಲಿ 191 ರನ್‌ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ತಂಡದ ಅಬ್ದುಲ್ಲಾ ಶಫೀಕ್ ಮತ್ತು ಇಮಾಮ್ ಉಲ್ ಹಕ್ ಉತ್ತಮ ಆರಂಭ ನೀಡಿದರು. ಪಂದ್ಯದ ವೇಳೆ ಅಭಿಮಾನಿಗಳು ಹಲವು ಬಾರಿ ಜಯಶ್ರೀರಾಮ್ ಘೋಷಣೆ ಕೂಗಿದರು.

ಮತ್ತು ಪಾಕಿಸ್ತಾನದ ಪ್ರಮುಖ ಆಟಗಾರ ‘ರಿಜ್ವಾನ್’ 49 ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ಮರಳಿದಾಗ ‘ಜಯಶ್ರೀರಾಮ್’ ಘೋಷಣೆಗಳು ಮೊಳಗಿದವು. ಇದನ್ನು ಹಲವರು ಟೀಕಿಸಿದ್ದಾರೆ. ಆಟವನ್ನು ಆಟವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ವೀಡಿಯೋವೊಂದನ್ನು ಹಂಚಿಕೊಂಡಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, “ಆತಿಥ್ಯಕ್ಕೆ ಹೆಸರುವಾಸಿಯಾದ ಭಾರತದಲ್ಲಿ ಪಾಕಿಸ್ತಾನಿ ಆಟಗಾರರ ವಿರುದ್ಧ ಘೋಷಣೆಗಳು ಸ್ವೀಕಾರಾರ್ಹವಲ್ಲ. ಕ್ರೀಡೆ ಎಂಬುದು ರಾಷ್ಟ್ರಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು.

ಕ್ರೀಡೆಗಳು ಯಾವಾಗಲೂ ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷ ಹರಡಲು ಕ್ರೀಡೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶ

ಗಂಗಾಜಲದ ಮೇಲೆ ಶೇ.18ರಷ್ಟು ಜಿಎಸ್‌ಟಿ ವಿಧಿಸಿರುವ ಬಿಜೆಪಿ ಸರಕಾರವನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಪ್ರವಾಸವಾಗಿ ಇಂದು ಉತ್ತರಾಖಂಡಕ್ಕೆ ತೆರಳಿದ್ದರು. ಅಲ್ಲಿ ಅವರು ಸಾಂಪ್ರದಾಯಿಕ ಬಿಳಿ ಬಟ್ಟೆಗಳನ್ನು ಧರಿಸಿ ಪವಿತ್ರ ಜೋಲಿಂಗ್‌ಕಾಂಗ್‌ ಪರ್ವತದ ಮುಂದೆ ಧ್ಯಾನ ಮಾಡಿದರು.

ಮತ್ತು ಗುಂಜಿ ಗ್ರಾಮಕ್ಕೆ ತೆರಳಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಜತೆಗೆ 4,200 ಕೋಟಿ ರೂ.ಗಳ ಕಲ್ಯಾಣ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಪ್ರಧಾನಿ ಮೋದಿ ಉತ್ತರಾಖಂಡ್ ನಲ್ಲಿದ್ದಾಗ ಗಂಗಾಜಲದ ಮೇಲೆ ಶೇ.18ರಷ್ಟು ಜಿಎಸ್‌ಟಿ ತೆರಿಗೆ ವಿಧಿಸಿರುವುದನ್ನು ಕಾಂಗ್ರೆಸ್ ಸೇರಿದಂತೆ ಪಕ್ಷಗಳು ತೀವ್ರವಾಗಿ ಖಂಡಿಸಿವೆ.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ x ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್‌ನಲ್ಲಿ, “ನೀವು ಇಂದು ಉತ್ತರಾಖಂಡದಲ್ಲಿ ಇರುವುದು ಉತ್ತಮ. ನಿಮ್ಮ ಸರ್ಕಾರ ಗಂಗಾಜಲಕ್ಕೆ 18% ಜಿಎಸ್‌ಟಿ ವಿಧಿಸಿದೆ. ಮನೆಯಿಂದ ಗಂಗಾಜಲವನ್ನು ಖರೀದಿಸುವವರಿಗೆ ಇದು ಎಂತಹ ಹೊರೆ ಎಂದು ಯೋಚಿಸಲೂ ನನಗೆ ಸಾಧ್ಯವಾಗುತ್ತಿಲ್ಲ.

ಇದು ಜನ ಸಾಮಾನ್ಯರ ಬಗ್ಗೆ ಯೋಚಿಸದ ಬಿಜೆಪಿ ಸರ್ಕಾರದ ಕಪಟತನದ ಪರಮಾವಧಿ” ಎಂದು ಟೀಕಿಸಿದ್ದಾರೆ. ಅಲ್ಲದೆ ಗಂಗಾಜಲದ ಮೇಲಿನ ಜಿಎಸ್‌ಟಿ ತೆರಿಗೆಯನ್ನು ಹಲವು ರಾಜಕೀಯ ಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿವೆ.

ರಾಜಕೀಯ

“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ! ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ!” ಎಂದು ಹೇಳಿದ್ದಾರೆ.

ದೇಶ

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಯು ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಬಿಜೆಪಿಯನ್ನು ಅಳಿಸಿಹಾಕಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, “ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯನ್ನು ಕಂಡು ಬಿಜೆಪಿ ಆತಂಕಕ್ಕೆ ಒಳಗಾಗಿದೆ. 2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯನ್ನು 2024ರಲ್ಲಿ ಕಿತ್ತೊಗೆಯಲಾಗುವುದು. ಬಿಜೆಪಿ ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ಇಡೀ ದೇಶದಿಂದಲೇ ಕಿತ್ತೊಗೆಯಲಾಗುವುದು. ಹೀಗಾಗಿ ಸಂವಿಧಾನವನ್ನು ಹಾಳುಗೆಡವಲು ಪ್ರಯತ್ನಿಸಿದವರು ಹೆದರುತ್ತಿದ್ದಾರೆ.

ಆರ್‌ಎಸ್‌ಎಸ್‌ ಹರಡಿದ ದ್ವೇಷ ಮತ್ತು ಬಿಜೆಪಿಯ ವೋಟ್ ಬ್ಯಾಂಕ್ ರಾಜಕಾರಣವೇ ಮಣಿಪುರದ ಇಂದಿನ ಪರಿಸ್ಥಿತಿಗೆ ಕಾರಣ. ಗುಪ್ತಚರ ಸಂಸ್ಥೆಗಳಿಗೆ ಇದೆಲ್ಲ ತಿಳಿಯದೇ ಇರಲು ಸಾಧ್ಯವಿಲ್ಲ. ಅಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ತಿಳಿದಿರಬೇಕು.

ಸರ್ಕಾರ ಇದನ್ನೆಲ್ಲ ಸುಮ್ಮನೆ ನೋಡುತ್ತಿರುವುದಾದರೆ, ಅವರು ಅಧಿಕಾರದಲ್ಲಿ ಮುಂದುವರಿಯಬಾರದು. ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಯ ಬಗ್ಗೆ ಮಾತನಾಡುವ ಮೊದಲು, ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿದ ಬಗ್ಗೆ ಬಿಜೆಪಿ ಮಾತನಾಡಬೇಕು” ಎಂದು ಹೇಳಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಹಾಸ್ಯ ಪ್ರಜ್ಞೆ ಎಲ್ಲರಿಗೂ ಅಗತ್ಯ; ಹಾಸ್ಯಕ್ಕೆ ಭಾವನೆಗಳನ್ನು ಪರಿವರ್ತಿಸುವ ಶಕ್ತಿ ಇದೆ. ಮಹಾತ್ಮ ಗಾಂಧೀಜಿಯವರು “ನನಗೆ ಹಾಸ್ಯ ಪ್ರಜ್ಞೆ ಇಲ್ಲದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ” ಎಂದು ಹೇಳಿದರಂತೆ.

ಆದರೆ ಪ್ರಧಾನಿ ನರೇಂದ್ರ ಮೋದಿಯವರು ಆತ್ಮಹತ್ಯೆಯನ್ನು ತಮಾಷೆ ಎಂಬ ಹೆಸರಿನಲ್ಲಿ ವ್ಯಾಖ್ಯಾನಿಸಿ, ಭಾರತದ ಯುವ ಪೀಳಿಗೆಗೆ ಅವಮಾನ ಮಾಡಿದ್ದಾರೆ. ಹಾಸ್ಯವು ಯಾರ ಹೃದಯವನ್ನೂ ನೋಯಿಸದಂತೆ ಇರಬೇಕು ಎಂಬುದು ಸಾಮಾನ್ಯ ನಿಯಮ.

ಬಿಜೆಪಿ ಪರಿವಾರವನ್ನು ಹೊಗಳುವುದು ಮತ್ತು ಇತರರನ್ನು ನಿಂದಿಸುವುದೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ರಿಪಬ್ಲಿಕ್ ಟಿವಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಒಬ್ಬ ಪ್ರೊಫೆಸರ್ ಮಗಳು, ‘ನನಗೆ ಬದುಕಲು ಇಷ್ಟವಿಲ್ಲ ಮತ್ತು ನಾನು ಕಂಗಾರಿಯಾ ಸರೋವರಕ್ಕೆ ಹಾರಿ ಸಾಯುತ್ತೇನೆ’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಳಂತೆ ಮರುದಿನ ಪ್ರಾಧ್ಯಾಪಕರು ಪತ್ರವನ್ನು ನೋಡಿ ಇಷ್ಟು ವರ್ಷ ಹೇಳಿದರೂ , ಅವಳು ಇನ್ನೂ ಕಂಗಾರಿಯಾ ಸರೋವರದ ಹೆಸರನ್ನು ತಪ್ಪಾಗಿಯೇ ಬರೆದಿದ್ದಾಳೆ’ ಎಂದು ಕೋಪಗೊಂಡರೆಂತೆ ಎಂದು ಹಾಸ್ಯ ಮಾಡಿದ್ದಾರೆ. ಈ ರೀತಿಯ ಕ್ರೂರ ಹಾಸ್ಯಕ್ಕೆ ಇದೀಗ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಕರ್ನಾಟಕದ ಕೋಲಾರದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಿರ್ದಿಷ್ಟ ವ್ಯಕ್ತಿಗಳ ಹೆಸರುಗಳು ಒಂದೇ ರೀತಿಯಲ್ಲಿ ಕೊನೆಗೊಳ್ಳುತ್ತದೆ ಎಂದು ಲೇವಡಿ ಮಾಡಿದ್ದ ಕಾರಣಕ್ಕೆ, ಅದನ್ನು ದೊಡ್ಡ ಸಮಸ್ಯೆಯನ್ನಾಗಿ ಮಾಡಿ; ಸೂರತ್‌ನಲ್ಲಿ ಪ್ರಕರಣ ದಾಖಲಿಸಿ; ತಕ್ಷಣ ತನಿಖೆ ನಡೆಸಿ; ಶಿಕ್ಷೆ ವಿಧಿಸಿ; ಅವರ ಸಂಸದ ಸ್ಥಾನವನ್ನೂ ರದ್ದುಪಡಿಸಿ, ಮನೆಯಿಂದ ಹೊರಹಾಕಲಾಯಿತು. ಅಷ್ಟರಮಟ್ಟಿಗೆ ಆಡಳಿತಗಾರರಿಗೆ ‘ಹಾಸ್ಯ ಪ್ರಜ್ಞೆ’ ಹೆಚ್ಚು.

ಭಾರತದಲ್ಲಿ ಯುವಕರ ಆತ್ಮಹತ್ಯೆ ಪ್ರಮಾಣ ಆತಂಕಕಾರಿಯಾಗಿದೆ. ಎನ್‌ಸಿಆರ್‌ಬಿ ಅಂಕಿ ಅಂಶಗಳ ಪ್ರಕಾರ, 2021ರಲ್ಲಿ 1 ಲಕ್ಷದ 64 ಸಾವಿರದ 33 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ತಿಳಿದುಬಂದಿದೆ. 1990ರ ದಶಕದಲ್ಲಿ ಆಧುನಿಕ ಉದಾರೀಕರಣ ನೀತಿಗಳ ಅನುಷ್ಠಾನದ ನಂತರ, ಭಾರತದ ಜನರ ಜೀವನೋಪಾಯಕ್ಕೆ ತೀವ್ರ ತೊಂದರೆಯಾಗಿದೆ.

ಜೀವನದಲ್ಲಿ ಅಭದ್ರತೆ ಇದ್ದಂತೆ ಕಾಣುತ್ತದೆ ಎಂದು ಹದಿಹರೆಯದವರು ತಮ್ಮ ಭಾವನೆಗಳನ್ನು ದಾಖಲಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಅನುಸರಿಸುತ್ತಿರುವ ಆರ್ಥಿಕ ನೀತಿಗಳಿಂದ ನಿರುದ್ಯೋಗ ಹೆಚ್ಚುತ್ತಿದೆ. ವರ್ಷಕ್ಕೆ 2 ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿದರು. ಈ ಬಗ್ಗೆ ಕೇಳಿದರೆ ಯುವಕರು ಪಕೋಡ ಮಾರಿ ಬದುಕಬಹುದು ಎಂದು ಸಲಹೆ ನೀಡುತ್ತಾರೆ.

ಭಾರತದಲ್ಲಿ ಯುವಕರು ಅದರಲ್ಲೂ ಯುವತಿಯರೇ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಿವಿಧ ಅಂಕಿ ಅಂಶಗಳು ತೋರಿಸುತ್ತಿರುವ ಹಿನ್ನಲೆಯಲ್ಲಿ, ಆತ್ಮಹತ್ಯೆ ಮಾಡಿಕೊಳ್ಳುವವರ ಸ್ಥಿತಿಯನ್ನು ತಮಾಷೆಯಾಗಿ ಪರಿವರ್ತಿಸುವುದು ವಿನೋದವಲ್ಲ. ಅದೊಂದು ಕ್ರೂರ ಹಾಸ್ಯ.

ರಾಜಕೀಯ

ರಜೆಯ ದಿನಗಳಲ್ಲೂ ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ!

ಪ್ರವಾಸೋದ್ಯಮ ಮತ್ತು ಆರ್ಥಿಕ ಕ್ಷೇತ್ರಗಳನ್ನು ಉತ್ತೇಜಿಸಲು ದೇಶದ ಪ್ರಮುಖ ನಗರಗಳಲ್ಲಿ ‘ವಂದೇ ಭಾರತ್’ ರೈಲುಗಳನ್ನು ನಿರ್ವಹಿಸಲಾಗುತ್ತಿದೆ. ಆದರೆ ಈ ರೈಲುಗಳು ಸಂಚರಿಸುವ ಸ್ಥಳಗಳು ವಿವಾದಗಳಿಂದ ಕೂಡಿದೆ.

ಹಸುವಿಗೆ ಡಿಕ್ಕಿ ಹೊಡೆದಿದ್ದರಿಂದ ರೈಲಿನ ಮುಂಭಾಗದ ಭಾಗಗಳು ಜಖಂಗೊಂಡಿತು. ಅದೇ ರೀತಿ, ಪ್ರಧಾನಿ ಮೋದಿ ಪ್ರತಿ ಬಾರಿ ವಂದೇ ಭಾರತ್ ರೈಲು ಧ್ವಜಾರೋಹಣ ಮಾಡುವಾಗ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ. ಭಾನುವಾರವೂ ಶಾಲಾ ಸಮವಸ್ತ್ರದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿರುವುದು ಟೀಕೆಗೆ ಗುರಿಯಾಗಿದೆ. ಅದೇ ರೀತಿ ಶಾಲೆಗೆ ರಜೆ ಇರುವ ಸೆಪ್ಟೆಂಬರ್ 8 ರಂದು ಶನಿವಾರ ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸುವಹಾಗೆ ಕಾರ್ಯಕ್ರಮ ರೋಪಿಸಿರುವುದು ವಿವಾದಕ್ಕೀಡಾಗಿದೆ. ಶಾಲಾ ಸಮವಸ್ತ್ರದಲ್ಲಿ ಕುಳಿತ ವಿದ್ಯಾರ್ಥಿಗಳನ್ನು ಆಕಸ್ಮಿಕವಾಗಿ ಗಮನಿಸಿ ಅವರೊಂದಿಗೆ ಸಂವಾದ ನಡೆಸುವಹಾಗೆ ಸ್ಕ್ರಿಪ್ಟ್ ರೆಡಿಮಾಡಲಾಗಿದೆಯಂತೆ.

ಸಾಂದರ್ಭಿಕ ಚಿತ್ರ

ಈ ಹಿನ್ನಲೆಯಲ್ಲಿ ಚೆನ್ನೈನಿಂದ ಕೊಯಮತ್ತೂರಿಗೆ ತೆರಳಬಹುದಾದ ‘ವಂದೇ ಭಾರತ್’ ರೈಲನ್ನು ಉದ್ಘಾಟಿಸಲು ಪ್ರಧಾನಿ ಮೋದಿಯವರು  ಏಪ್ರಿಲ್ 8 ರಂದು (ನಾಳೆ) ತಮಿಳುನಾಡಿಗೆ ಬರುತ್ತಿದ್ದಾರೆ. ತಮಿಳುನಾಡಿನೊಳಗೆ ಚಲಿಸುವ ಮೊದಲ ‘ವಂದೇ ಭಾರತ್’ ರೈಲು ಇದಾಗಿದೆ. ಇದು ದಕ್ಷಿಣ ಭಾರತದ ಎರಡನೇ ರೈಲು.

ಫೆಬ್ರವರಿ 15, 2019 ರಂದು ದೆಹಲಿ ಮತ್ತು ವಾರಣಾಸಿ ನಡುವೆ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲಾಯಿತು. ಪ್ರಸ್ತುತ 11 ವಂದೇ ಭಾರತ್ ರೈಲುಗಳು ಓಡುತ್ತಿವೆ. 8ರಂದು ಚೆನ್ನೈ-ಕೊಯಮತ್ತೂರು ನಡುವಿನ 12ನೇ ವಂದೇ ಭಾರತ್ ರೈಲು ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶಾದ್ಯಂತ 100ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳನ್ನು ಓಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಪ್ರತಿ ವಂದೇ ಭಾರತ್ ರೈಲಿನಲ್ಲಿ 1 ಪ್ರಥಮ ದರ್ಜೆ ಎಸಿ ಕೋಚ್, 3 ಸೆಕೆಂಡ್ ಕ್ಲಾಸ್ ಎಸಿ ಕೋಚ್‌ಗಳು ಮತ್ತು 11 ಥರ್ಡ್ ಕ್ಲಾಸ್ ಎಸಿ ಕೋಚ್‌ಗಳಿವೆ ಎಂಬುದು ಗಮನಿಸಬೇಕಾದ ಸಂಗತಿ. The PM is also set to inaugurate the Chennai-Coimbatore Vande Bharat Express and Tambaram- Sengottai Express in Tamil Nadu on April 8, 2023.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಬೆಂಗಳೂರು: ‘ಅದಾನಿ ಗ್ರೂಪ್ ಕಂಪೆನಿಗಳು ಅಕ್ರಮಗಳಲ್ಲಿ ತೊಡಗಿವೆ’ ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ ನಂತರ ಅದಾನಿ ಎಂಟರ್‌ಪ್ರೈಸಸ್ ಷೇರುಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮವನ್ನು ಬೀರುತ್ತದೆ ಎಂದು ವಿರೋಧ ಪಕ್ಷಗಳು ಹಾಗೂ ಆರ್ಥಿಕ ತಜ್ಞ್ಯರೆಲ್ಲ ಕಳವಳ ವ್ಯಕ್ತ ಪಡಿಸುತ್ತಿದ್ದಾರೆ. ವಿರೋಧಪಕ್ಷಗಳ ಒಕ್ಕೊರಳಿನ ಒತ್ತಾಯದಿಂದ ಸಂಸತ್ ನಲ್ಲಿ ಕಲಾಪಗಳು ನಡೆಯದೆ ಹಲವಾರು ಬಾರಿ ಮುಂದೂಡಲ್ಪಟ್ಟವು.

ಈ ಹಿನ್ನಲೆಯಲ್ಲಿ ಫೆಬ್ರವರಿ 8 ರಂದು ಸುಮಾರು 9 ಗಂಟೆಗಳ ಕಾಲ ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅದಾನಿಯ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೆ, ನೆಹರು ಕುಟುಂಬವನ್ನು ತರಾಟೆಗೆ ತೆಗೆದುಕೊಂಡರು. ‘ನೆಹರೂ ವಂಶಸ್ಥರೇಕೆ ಅವರ ಉಪನಾಮ ಬಳಸಲ್ಲ’ ಎಂಬುದನ್ನು ಒಂದು ವಿಷಯವಾಗಿ ಮುನ್ನಲೆಗೆ ತಂದು, ಬಿಜೆಪಿ ಸದಸ್ಯರನ್ನು ನಗೆಗಡಲಲ್ಲಿ ತೇಲಿಸಲು ಲೇವಡಿ, ಹಾಸ್ಯ ಚಟಾಕಿ ಹಾರಿಸುತ್ತಾ ಕಾಲ ಕಳೆದರು. ದೇಶವಿರುವ ಪರಿಸ್ಥಿತಿಯಲ್ಲಿ ಮೋದಿಗೆ ಹಾಷ್ಯತನ ಬೇಕೆ? ಎಂಬುದನ್ನು ಜನ  ಕೇಳುತ್ತಿದ್ದಾರೆ. ಭಾರತೀಯ ಪದ್ಧತಿಯಂತೆ – ಪ್ರಪಂಚದ ಪದ್ಧತಿಯಂತೆ ಗಂಡು ಮಕ್ಕಳ ಕುಟುಂಬದ ಹೆಸರೇ ಮುಂದುವರಿಯುತ್ತದೆ. ನೆಹರೂಗೆ ಮಗನಿರಲಿಲ್ಲ. ಇಂದಿರಾ ಒಬ್ಬಳೇ ಮಗಳು. ಆದ್ದರಿಂದ ಅವರ ಪತಿ ಫಿರೋಜ್ ಗಾಂಧಿಯ ಹೆಸರನ್ನು ಉಪನಾಮವಾಗಿ ಬಳಸುತ್ತಿದ್ದಾರೆ. ಇದು ಪ್ರಧಾನಿಗೆ ಗೊತ್ತಿಲ್ಲವೇ?

2014ರಲ್ಲಿ ಅದಾನಿ ಪುತ್ರನ ವಿವಾಹವಾಗಿತ್ತು. ಈ ಮದುವೆಗೆ ಜಗತ್ತಿನಾದ್ಯಂತ ಕ್ಲಾಸ್ ಒನ್ ಶ್ರೀಮಂತರೆಲ್ಲ ಬಂದು ಹೋದರು. ಆದರೆ, ನರೇಂದ್ರ ಮೋದಿಯವರು ಮಾತ್ರ ಮೂರು ದಿನಗಳು ಅಲ್ಲಿಯೇ ಉಳಿದು, ಅದಾನಿ ಪುತ್ರನ ವಿವಾಹದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆದರೆ, ಮೋದಿ ಅವರ ತಾಯಿ ಇತ್ತೀಚೆಗೆ ನಿಧನರಾದಾಗ, ಅವರು ಕೆಲವೇ ಗಂಟೆಗಳಲ್ಲಿ ಅವರ ಅಂತಿಮ ವಿಧಿಗಳನ್ನು ಪೂರ್ಣಗೊಳಿಸಿ ಹೊರನಡೆದರು. ಪ್ರದಾನಿ ಮೋದಿಗೆ ತಾಯಿಗಿಂತ ದೇಶ ಸೇವೆಯೇ ದೊಡ್ಡದು ಎಂಬಂತೆ ಅಂದು ಬಿಂಬಿಸಲಾಯಿತು. ಆದರೆ, ಮೋದಿಗೆ ತನ್ನ ತಾಯಿಗಿಂತ, ಈ ದೇಶದ ಸೇವೆಗಿಂತ; ಅದಾನಿ ಪುತ್ರನ ವಿವಾಹವೇ ಅಂದು ಮುಖ್ಯವಾಗಿತ್ತು ಎಂಬುದನ್ನು ಇನ್ನು ಯಾರೂ ಮರೆತಿಲ್ಲ.    

‘ಮೂವತ್ತು ವರ್ಷಗಳಿಂದ ಕುಟುಂಬದೊಂದಿಗೆ ಇರಲಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಹೇಳಿದ್ದರು. ಹಾಗಾದರೆ, ಇಷ್ಟು ವರ್ಷ ಅಮ್ಮನನ್ನು ಸಾಕುತ್ತಿದ್ದ ಅಣ್ಣನೂ ಸೇರಿದಂತೆ ಜೊತೆಯಲ್ಲಿ ಹುಟ್ಟಿದವರು ಬಂದು ಶಾಸ್ತ್ರೋಕ್ತವಾಗಿ ನಡೆದುಕೊಂಡಿರಬೇಕು ಅಲ್ಲವೇ? ಆದರೆ, ಅಂದು ನಾವು ಮೋದಿಯನ್ನು ಮಾತ್ರ ನೋಡುತ್ತಿದ್ದೆವು. ಪ್ರಧಾನಿಯ ತಾಯಿಯ ಸಾವನ್ನು ಹಾಗೂ ಪ್ರಧಾನಿಯನ್ನು ಲೈವ್ ಟೆಲಿಕಾಸ್ಟ್ ಮಾಡಿ, ತಮ್ಮ ಟಿ.ಆರ್.ಪಿ.ಯನ್ನು ಹೆಚ್ಚಿಸಿಕೊಂಡ ಮಾದ್ಯಮಗಳು, ಪ್ರಧಾನಿ ನರೇಂದ್ರ ಮೋದಿಗೆ ತಾಯಿಗಿಂತ ಈ ದೇಶ ಸೇವೆಯೇ ದೊಡ್ಡದು ಎಂಬಂತೆ ಬಿಂಬಿಸಿದವು. 

ಸಂಸತ್ತಿನಲ್ಲಿ ಮಾತನಾಡಿದ ರಾಹುಲ್ ಗಾಂಧಿಯವರು, ನೀವು (ಮೋದಿ) ಇಸ್ರೇಲ್, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕೆ ಭೇಟಿ ನೀಡಿದಾಗ ಅದಾನಿ ವ್ಯವಹಾರವನ್ನು ಪಡೆಯುತ್ತಾರೆ. ಹಾಗಾದರೆ ನಿಮ್ಮ ಮತ್ತು ಅದಾನಿ ನಡುವೆ ಏನಿದೆ? ಎಂಬುದನ್ನು ಈ ದೇಶಕ್ಕೆ ತಿಳಿಸಿಕೊಡಿ ಎಂದು ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನೆ ಮಾಡುತ್ತಾರೆ. ಸಂಸದ ರಾಹುಲ್ ಗಾಂಧಿಯ ಈ ಗುರುತರವಾದ ಪ್ರಶ್ನೆಗೆ (ಆರೋಪಕ್ಕೆ) ಮೋದಿಯವರು ತಕ್ಕ ಉತ್ತರ ನೀಡುತ್ತಾರೆ ಎಂದು ಈ ದೇಶವೇ ಎದುರು ನೋಡುತ್ತಿರುವಾಗ, ಸಂಸತ್ತಿನಲ್ಲಿ ಸುಮಾರು ಒಂಬತ್ತು ಗಂಟೆಗಳ ಕಾಲ ಭಾಷಣ ಮಾಡಿದ ಮೋದಿ, ವಿರೋಧ ಪಕ್ಷಗಳನ್ನು ಲೇವಡಿಯಿಂದ, ಹಾಸ್ಯ ಹಾಗೂ ಉಡಾಫೆಯ ಮಾತುಗಳಿಂದ ತಿವಿದು, ವಿರೋಧ ಪಕ್ಷಗಳ ಗುರುತರವಾದ ಆರೋಪಗಳನ್ನು ದಿಕ್ಕು ತಪ್ಪಿಸಿ, ಪ್ರಶ್ನೆ ಮಾಡಿದವರನ್ನೇ ಅಪರಾಧಿಯನ್ನಾಗಿಸುವ ಪ್ರಯತ್ನವನ್ನು ಮಾಡಿದರು.

‘ದೇಶಭಕ್ತಿಯೇ ಕಿಡಿಗೇಡಿಗಳ ಕೊನೆಯ ಆಶ್ರಯ ತಾಣ’ ಎಂಬ ಸ್ಯಾಮ್ಯುಯೆಲ್ ಜಾನ್ಸನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು, ಮೋದಿ ಸರ್ಕಾರ ಅಧಿಕಾರ ವರ್ಗದೊಂದಿಗೆ ಕೈಜೋಡಿಸಿ, ತನ್ನ ತಪ್ಪುಗಳನ್ನು ಯಾರೂ ಪ್ರಶ್ನಿಸದಂತೆ ಮುಚ್ಚಿಹಾಕಲು, ತನ್ನ ಅಕ್ರಮಗಳನ್ನು ಸಮರ್ಥಿಸಿಕೊಳ್ಳಲು ಮುಂದಾಗಿದೆ. ದೇಶಭಕ್ತಿ, ರಾಷ್ಟ್ರೀಯ ಭದ್ರತೆ ಹಾಗೂ ರಾಷ್ಟ್ರದ ಅಭಿವೃದ್ಧಿಯ ಸುಳ್ಳು ವಿಚಾರಗಳನ್ನು ಮುಂದಿಡುವುದು ಈಗ ಅವರಿಗೆ ವಾಡಿಕೆಯಾಗಿದೆ.

ದೇಶ

ನವದೆಹಲಿ: ಮುಂದಿನ ವರ್ಷ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆ ಎದುರಿಸಲು ಎಲ್ಲ ಪಕ್ಷಗಳು ಈಗಾಗಲೆ ಸಿದ್ದತೆಗಳನ್ನು ನಡೆಸಿಕೊಂಡು ಬರುತ್ತಿವೆ. ಸದ್ಯ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ಕೂಡ 3ನೇ ಅವಧಿಗೆ ಅಧಿಕಾರ ಹಿಡಿಯಲು ತಂತ್ರಗಳನ್ನು ರೂಪಿಸುತ್ತಿದೆ.

ಭಾರತೀಯ ಜನತಾ ಪಾರ್ಟಿ ವಿಶೇಷವಾಗಿ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿಯ ಪರವಾಗಿ ಹೆಚ್ಚುವರಿ ಕ್ಷೇತ್ರಗಳನ್ನು ಗೆಲ್ಲಲು ಮುಂದಾಗಿದೆ. ಇದಕ್ಕಾಗಿ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ಅದರ ಭಾಗವಾಗಿಯೇ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ಧಿಯನ್ನು ಹರಿಯಬಿಟ್ಟಿದ್ದಾರೆ.

ಪ್ರಧಾನಿ ಮೋದಿ ಉತ್ತರದಲ್ಲಿ ಒಂದು ಹಾಗೂ ದಕ್ಷಿಣ ರಾಜ್ಯದಲ್ಲಿ ಒಂದು ಕ್ಷೇತ್ರಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದು, ದಕ್ಷಿಣ ರಾಜ್ಯದ ತಮಿಳುನಾಡಿನಿಂದಲೇ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸುವುದಾದರೆ ರಾಮನಾಥಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಜನತಾ ಪಕ್ಷದ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಅವರನ್ನು ಕೇಳಿದಾಗ, ‘ಪ್ರಧಾನಿ ನರೇಂದ್ರ ಮೋದಿ ವಿದೇಶಿಯಲ್ಲ; ಆತ ಭಾರತೀಯ. ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ನಾಡಿನ ಜನ ಅವರ ಮೇಲೆ ಪ್ರೀತಿ, ಮಮತೆ ಹೊಂದಿದ್ದಾರೆ. ಅಷ್ಟೇ ಅಲ್ಲ ಮುಂದಿನ ಸಂಸತ್ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಇದು ನಿಜವೇ ಎಂದು ಅನೇಕರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ನಾನು ತೂತ್ತುಕುಡಿಗೆ ಹೋಗಿದ್ದೆ. ಅಲ್ಲಿನ ಅಂಗಡಿಯೊಂದರಲ್ಲಿ ಟೀ ಕುಡಿಯಲು ಹೋಗಿದ್ದಾಗ, ನನ್ನನ್ನು ನೋಡಿದ ಅಲ್ಲಿನ ಜನರು, ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸುತ್ತಾರೆಯೇ? ಎಂದು ಕೇಳಿದರು.

ಇದನ್ನು ತಿಳಿದುಕೊಳ್ಳಲು ಜನರು ತುಂಬಾ ಆಸಕ್ತಿ ಹೊಂದಿದ್ದಾರೆ. ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಿಷ್ಠಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ.

ತಮಿಳುನಾಡಿನ ಜನರು ಪ್ರಧಾನಿ ಮೋದಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದಾರೆ. ಅವರ ಚಟುವಟಿಕೆಗಳನ್ನು ಮೆಚ್ಚುತ್ತಾರೆ. ತಮಿಳುನಾಡಿನಲ್ಲೂ ಪ್ರಧಾನಿ ಮೋದಿಯ ಅಲೆ ಎದ್ದಿದೆ. ತಮಿಳುನಾಡಿನಲ್ಲೂ ಭಾರತೀಯ ಜನತಾ ಪಕ್ಷಕ್ಕೆ ಪ್ರತ್ಯೇಕ ಗುರುತು ಸಿಗಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದನ್ನು ನಾವು ಸಾಬೀತು ಮಾಡುತ್ತೇವೆ’ ಎಂದರು.