ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Mohan Bhagwat Archives » Dynamic Leader
October 23, 2024
Home Posts tagged Mohan Bhagwat
ರಾಜಕೀಯ

ಪಾಲಕ್ಕಾಡ್: ಆರ್‌ಎಸ್‌ಎಸ್‌ನ 3 ದಿನಗಳ ಸಮಾವೇಶ ನಿನ್ನೆ ಕೇರಳದಲ್ಲಿ ಆರಂಭವಾಗಿದೆ. ಇದರಲ್ಲಿ ಸಮಾಜ ಸುಧಾರಣೆ, ಬಾಂಗ್ಲಾದೇಶ ಸಮಸ್ಯೆ ಕುರಿತು ಚರ್ಚಿಸಲು ಯೋಜಿಸಲಾಗಿದೆ.

ನಿನ್ನೆ ಕೇರಳದ ಪಾಲಕ್ಕಾಡ್ (Palakkad)ನಲ್ಲಿ ಆರ್‌ಎಸ್‌ಎಸ್‌ನ (RSS) ಅಖಿಲ ಭಾರತ ಸಮನ್ವಯ ಸಭೆ ಆರಂಭವಾಗಿದೆ. ರಾಷ್ಟ್ರೀಯ ಮಟ್ಟದ ವಾರ್ಷಿಕ ಸಭೆ ಕೇರಳದಲ್ಲಿ ನಡೆಯುತ್ತಿರುವುದು ಇದೇ ಮೊದಲು. 3 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ಆರ್‌ಎಸ್‌ಎಸ್‌ನ ಸಹಬಾಗಿ ಸಂಘಟನೆಗಳಾದ 32 ಸಂಘ / ಸಂಸ್ಥೆಗಳ 320 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್ (Mohan Bhagwat) ಮತ್ತು 6 ಜಂಟಿ ಪ್ರಧಾನ ಕಾರ್ಯದರ್ಶಿಗಳೂ ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಈ ಸಭೆಯ ಆರಂಭದಲ್ಲಿ ವಯನಾಡು ಭೂಕುಸಿತದ ವಿವರಗಳು ಮತ್ತು ಆರ್‌ಎಸ್‌ಎಸ್ ಸ್ವಯಂಸೇವಕರು ಮಾಡಿದ ಸಹಾಯದ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ಶತಮಾನೋತ್ಸವ (Centenary) ಆಚರಣೆ: ಆರ್‌ಎಸ್‌ಎಸ್ ಸಂಘಟನೆಯ ಶತಮಾನೋತ್ಸವ ಸಮಾರಂಭ ಮುಂದಿನ ವರ್ಷ ಸೆಪ್ಟೆಂಬರ್ ನಲ್ಲಿ ನಡೆಯಲಿದ್ದು, ಮುಂದಿನ ಒಂದು ವರ್ಷಕ್ಕೆ ಸಮಾಜ ಸುಧಾರಣೆ ಮತ್ತು ದೇಶ ನಿರ್ಮಾಣಕ್ಕೆ ಸಂಬಂಧಿಸಿದ 5 ಪ್ರಮುಖ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.

ಶೇಖ್ ಹಸೀನಾ (Sheikh Hasina) ಅವರನ್ನು ಬಾಂಗ್ಲಾದೇಶದ ಪ್ರಧಾನಿ ಹುದ್ದೆಯಿಂದ ಹೊರಹಾಕಿದ ನಂತರ, ಆ ದೇಶದಲ್ಲಿ ವಾಸಿಸುತ್ತಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲಿನ ಹಲ್ಲೆ ಹಾಗೂ ಅಲ್ಲಿನ ದೇವಾಲಯಗಳ ಮೇಲಿನ ದಾಳಿ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ (BJP) 240 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಇದರಿಂದ ಸರಳ ಬಹುಮತ ಸಿಗಲಿಲ್ಲ. ಆದಾಗ್ಯೂ, ಸಮ್ಮಿಶ್ರ ಪಕ್ಷಗಳ ಬೆಂಬಲದೊಂದಿಗೆ ಸತತ 3ನೇ ಅವಧಿಗೆ ಸರ್ಕಾರ ರಚಿಸಿದೆ. ಕಳೆದ 2 ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿ ಕಡಿಮೆ ಸ್ಥಾನ ಗಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಸಂಘರ್ಷವೇ ಕಾರಣ ಎಂದೂ ಹೇಳಲಾಗುತ್ತಿದೆ. ಈ ಸನ್ನಿವೇಶದಲ್ಲಿ ಈ ಸಭೆ ನಡೆಯುತ್ತಿದೆ.

ದೇಶ

ಪುಣೆ, ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಅವರಿಗೆ ಕೇಂದ್ರ ಗೃಹ ಸಚಿವಾಲಯ ವಿಶೇಷ ‘ಝಡ್ ಪ್ಲಸ್’ ಭದ್ರತೆಗೆ ಆದೇಶಿಸಿದೆ.

ಮಹಾರಾಷ್ಟ್ರದಲ್ಲಿ, ಪ್ರಮುಖ ವಿರೋಧ ಪಕ್ಷವಾದ ರಾಷ್ಟ್ರೀಯವಾದಿ ಕಾಂಗ್ರೆಸ್ (ಎಸ್‌ಪಿ) ಪಕ್ಷದ ಶರದ್ ಪವಾರ್ ಅವರಿಗೆ ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವಾಲಯ ‘ಝಡ್ ಪ್ಲಸ್’ ಭದ್ರತೆಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ, ವಿವಿಧ ಭಯೋತ್ಪಾದಕ ಸಂಘಟನೆಗಳಿಂದ ಆರ್‌ಎಸ್‌ಎಸ್ ಹಿರಿಯ ನಾಯಕ ಮೋಹನ್ ಭಾಗವತ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿತ್ತು.

ಹಾಗಾಗಿ, ಮೋಹನ್ ಭಾಗವತ್‌ಗೆ ‘ಝಡ್‌ ಪ್ಲಸ್‌’ ಜೊತೆಗೆ ಎಎಸ್‌ಎಲ್ ಸುಧಾರಿತ ಭದ್ರತಾ ಸಂಪರ್ಕದೊಂದಿಗೆ ವಿಶೇಷ ಭದ್ರತಾ ವಿಭಾಗದ ಅಡಿಯಲ್ಲಿ ಭದ್ರತೆಯನ್ನು ಒದಗಿಸಲು ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಈ ರೀತಿ, ಎಎಸ್ಎಲ್ ಅನ್ನು ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾತ್ರ ನೀಡಲಾಗಿದೆ. ಇದೀಗ ಮೋಹನ್ ಭಾಗವತ್ ಅವರಿಗೂ ಅದೇ ಎಎಸ್ಎಲ್ ವಿಭಾಗದಡಿ ವಿಶೇಷ ರಕ್ಷಣೆ ನೀಡುವಂತೆ ಆದೇಶಿಸಲಾಗಿದೆ.

ಅದರಂತೆ, CRPF ಎಂದು ಕರೆಯಲ್ಪಡುವ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 55 ಸಶಸ್ತ್ರ ಸಿಬ್ಬಂದಿಗಳು, ದಿನದ 24 ಗಂಟೆಯೂ ಸರದಿ ಆಧಾರದ ಮೇಲೆ ಭದ್ರತೆ ಒದಗಿಸುತ್ತಾರೆ. ಈ ವಿಭಾಗದ ಅಡಿಯಲ್ಲಿ ಅಗತ್ಯವಿದ್ದರೆ ಹೆಚ್ಚುವರಿಯಾಗಿ ಹೆಲಿಕಾಪ್ಟರ್‌ಗಳನ್ನೂ ಬಳಸಿಕೊಳ್ಳಬಹುದು.

ದೇಶ

ರಾಂಚಿ: ‘ಕೋವಿಡ್ ಯುಗದ ನಂತರ, ಭಾರತವು ಶಾಂತಿ ಮತ್ತು ಸಂತೋಷಕ್ಕಾಗಿ ಯೋಜನೆಯನ್ನು ಹೊಂದಿದೆ ಎಂದು ಜಗತ್ತು ಅರ್ಥಮಾಡಿಕೊಂಡಿದೆ’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಜಾರ್ಖಂಡ್‌ನ ಕುಮ್ಲಾದಲ್ಲಿ ಸೇವಾ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್ ಭಾಗವತ್, ‘ಜಾಗತೀಕವಾಗಿ ಕಳೆದ 2,000 ವರ್ಷಗಳಲ್ಲಿ ಸಂತೋಷ ಮತ್ತು ಶಾಂತಿಯನ್ನು ಹುಡುಕುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಆದರೆ ಇವೆರಡೂ ಭಾರತೀಯ ಜೀವನ ವಿಧಾನದಲ್ಲಿ ಅಂತರ್ಗತವಾಗಿವೆ. ಕೋವಿಡ್ ಹರಡಿಕೆಯ ನಂತರ, ಭಾರತವು ಶಾಂತಿ ಮತ್ತು ಸಂತೋಷಕ್ಕಾಗಿ ಯೋಜನೆಯನ್ನು ಹೊಂದಿದೆ ಎಂದು ಜಗತ್ತಿಗೆ ತಿಳಿದಿದೆ.

ಸನಾತನ ಧರ್ಮವು ಅರಮನೆಯಿಂದ ಹುಟ್ಟಿಕೊಂಡಿಲ್ಲ. ಅದು ಆಶ್ರಮದಿಂದ ಮತ್ತು ಅರಣ್ಯದಿಂದ ಬಂದಿದೆ. ಮಾನವ ಕಲ್ಯಾಣದ ಬಗ್ಗೆ ಕಾಳಜಿ ಹೊಂದಿದೆ. ಕಾಲ ಬದಲಾದರೂ ನಮ್ಮ ಬಟ್ಟೆ ಬದಲಾದರೂ ಪ್ರಕೃತಿ ಬದಲಾಗುವುದಿಲ್ಲ. ಸಮಯ ಬದಲಾದಂತೆ, ನಮ್ಮ ಕೆಲಸವನ್ನು ಮುಂದುವರಿಸಲು ಮತ್ತು ಸೇವೆ ಮಾಡಲು ನಾವು ಹೊಸ ಮಾರ್ಗಗಳು ಮತ್ತು ವಿಧಾನಗಳನ್ನು ಅಳವಡಿಸಿಕೊಳ್ಳಬೇಕು.

ಕಾಡಿನಲ್ಲಿ ವಾಸಿಸುವ ಜನರು ಪ್ರಕೃತಿಯೊಂದಿಗೆ ಶಾಂತಿ ಮತ್ತು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಇದು ದೊಡ್ಡ ನಗರಗಳಲ್ಲಿ ಕಾಣುವುದಿಲ್ಲ. ನಾವು ಕಣ್ಣು ಮುಚ್ಚಿ ಗ್ರಾಮಸ್ಥರನ್ನು ನಂಬಬಹುದು. ಆದರೆ ನಗರಗಳಲ್ಲಿ ನಾವು ಯಾರೊಂದಿಗೆ ಮಾತನಾಡುತ್ತೇವೆ ಎಂಬುದರ ಬಗ್ಗೆ ಜಾಗರೂಕರಾಗಿರಬೇಕು.

ದೇಶದ ಭವಿಷ್ಯದ ಬಗ್ಗೆ ಎಂದಿಗೂ ಚಿಂತಿಸಬೇಡಿ; ದೇಶದ ಒಳಿತಿಗಾಗಿ ಅನೇಕರು ಕೆಲಸ ಮಾಡುತ್ತಿದ್ದಾರೆ. ನಾವೂ ಪ್ರಯತ್ನಿಸುತ್ತಿದ್ದೇವೆ. ಭಾರತೀಯ ಜನರು ತಮ್ಮದೇ ಆದ ಸ್ವಭಾವವನ್ನು ಹೊಂದಿದ್ದಾರೆ. ಅನೇಕರು ಯಾವುದೇ ವಸ್ತು ಅಥವಾ ಕೀರ್ತಿಯನ್ನು ಅಪೇಕ್ಷಿಸದೆ ದೇಶದ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ. ಇದು ಫಲಿತಾಂಶಗಳನ್ನು ನೀಡುತ್ತದೆ.

ನಮ್ಮಲ್ಲಿ 33 ಕೋಟಿ ದೇವಾನುದೇವತೆಗಳು ಇರುವುದರಿಂದ ವಿವಿಧ ರೀತಿಯ ಆಚರಣೆಗಳನ್ನು ಹೊಂದಿರುತ್ತೇವೆ. ನಮ್ಮ ದೇಶದಲ್ಲಿ 3,800ಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುತ್ತಾರೆ. ಆಹಾರ ಪದ್ಧತಿಯೂ ವಿಭಿನ್ನವಾಗಿದೆ. ನಾವು ಬೇರೆಯಾಗಿದ್ದರೂ ನಮ್ಮ ಮನಸ್ಸು ಒಂದೇ ಆಗಿದೆ. ಇದು ಇತರ ದೇಶಗಳಲ್ಲಿ ಕಂಡುಬರುವುದಿಲ್ಲ.

ನಾವು ಇತರರ ಅನುಕೂಲಕ್ಕಾಗಿ ಕೆಲಸ ಮಾಡಿದಾಗ, ನಾವೂ ಪ್ರಗತಿ ಹೊಂದುತ್ತೇವೆ. ಮನುಷ್ಯರು ಏಕಾಂಗಿಯಾಗಿ ಬದುಕಲು ಸಾಧ್ಯವಿಲ್ಲ. ಸಾವಿನ ಭಯವಿಲ್ಲ. ಒಬ್ಬ ವ್ಯಕ್ತಿಯು ಬೀಗ ಹಾಕಿದ ಕೋಣೆಯಲ್ಲಿ ಒಬ್ಬಂಟಿಯಾಗಿ ವಾಸಿಸಬೇಕಾದರೆ, ಅವನು ಹುಚ್ಚನಾಗುತ್ತಾನೆ. ಕೂಡಿ ಬಾಳಿದಾಗ ಮಾತ್ರ ಭಾವನೆಗಳು ಒಂದಾಗುತ್ತವೆ.

ಸಮಾಜಕ್ಕೆ ಮರಳಿ ಕೊಡುವುದು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ ಎಂದು ತಥಾಕಥಿತ ಪ್ರಗತಿಪರರು ಈಗ ನಂಬಿದ್ದಾರೆ. ಇದು ವೇದಗಳಲ್ಲಿ ಎಲ್ಲಿಯೂ ಬರೆದಿಲ್ಲ. ಆದರೆ ಇದು ಪೀಳಿಗೆಯಿಂದ ಪೀಳಿಗೆಗೆ ನಮ್ಮ ಸ್ವಭಾವದಲ್ಲಿದೆ. ಗ್ರಾಮದ ಕಾರ್ಯಕರ್ತರು ಸಮಾಜದ ಸ್ವಾಸ್ಥ್ಯಕ್ಕಾಗಿ ಅವಿರತವಾಗಿ ಶ್ರಮಿಸಬೇಕು. ಅಭಿವೃದ್ಧಿಗೆ ಅಂತ್ಯವಿದೆಯೇ? ನಾವು ನಮ್ಮ ಗುರಿಯನ್ನು ತಲುಪಿದಾಗ, ನಾವು ಇನ್ನೂ ಬಹಳ ದೂರ ಸಾಗಬೇಕಾಗಿರುವುದು ನಮಗೆ ಅರ್ಥವಾಗುತ್ತದೆ’ ಎಂದು ಮಾತನಾಡಿದ್ದಾರೆ.

ಲೇಖನ

ಡಿ.ಸಿ.ಪ್ರಕಾಶ್

ಬಿಜೆಪಿಯ ಮೇಲೆ ಅದರ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್ ಅತೃಪ್ತದಲ್ಲಿದೆ ಎಂಬ ಸುದ್ದಿ ಪ್ರಕಟವಾಗುತ್ತಲೇ ಇದೆ!

ಇತ್ತೀಚೆಗೆ ಬಿಜೆಪಿ ಮತ್ತು ಅದರ ಸಂಘಟನೆಯಾದ ಆರ್‌ಎಸ್‌ಎಸ್ ನಡುವೆ ಸಂಘರ್ಷ ನಡೆಯುತ್ತಿದೆ. ಅದರಲ್ಲೂ 2024ರ ಲೋಕಸಭೆ ಚುನಾವಣೆ ವೇಳೆಗೆ ಈ ಸಂಘರ್ಷ ಹೆಚ್ಚಿರುವುದನ್ನು ಕಾಣಬಹುದು.

ಬಿಜೆಪಿ ಅಧಿಕಾರದಲ್ಲಿರುವುದರಿಂದ ಆರ್‌ಎಸ್‌ಎಸ್ ಸಂಘಟನೆಗೆ ಮನ್ನಣೆ ನೀಡದಿರುವುದು ಆರ್‌ಎಸ್‌ಎಸ್ ನಿರ್ವಾಹಕರಿಗಾಗಿ ಸಿಟ್ಟು ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬಿಜೆಪಿಗೆ ಬೆಂಬಲವಾಗಿ ಚುನಾವಣಾ ಕೆಲಸ ಮಾಡಿಲ್ಲ ಎಂಬ ಸುದ್ದಿ ಹೊರಬಿದ್ದಿರುವಾಗಲೇ ಆರ್‌ಎಸ್‌ಎಸ್ ಸಂಘಟನೆಯ ಮುಖವಾಣಿಯಾದ ‘ಆರ್ಗನೈಸರ್’ನಲ್ಲಿ ಈ ಕುರಿತು ಲೇಖನ ಪ್ರಕಟವಾಗಿದೆ.

ಆರ್‌ಎಸ್‌ಎಸ್‌ನ ರತನ್ ಶಾರದಾ ಅವರು ಈ ಲೇಖನವನ್ನು ಬರೆದಿದ್ದಾರೆ. ‘ಮೋದಿ 3.0 – ತಪ್ಪುಗಳನ್ನು ಸರಿಪಡಿಸಲಿಕ್ಕಾಗಿ ಒಂದು ಸಂಭಾಷಣೆ’ ಎಂಬ ಶೀರ್ಷಿಕೆಯ ಲೇಖನದಲ್ಲಿ, ‘ಬಿಜೆಪಿ ನಾಯಕರು ಮತ್ತು ಆಡಳಿತಗಾರರಿಗೆ ಬೀದಿಯಲ್ಲಿ ಧ್ವನಿಸುವ ಜನರ ಕೂಗು ಕೇಳುವುದಿಲ್ಲ. ಬದಲಿಗೆ, ಪ್ರಧಾನಿ ಮೋದಿಯವರ ಜನಪ್ರಿಯತೆಯ ಬೆಳಕಿನಲ್ಲಿ ಅವರು ಬಿಸಿಲು ಕಾಯುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಅಲ್ಲದೆ, ‘ಬಿಜೆಪಿ ನಾಯಕರು ತಮ್ಮ ಬಗ್ಗೆ ಅತಿಯಾದ ಆತ್ಮವಿಶ್ವಾದಲ್ಲಿದ್ದರು. ಆದರೆ ವಾಸ್ತವ ಏನೆಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ’ ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ನೋಡಿದರೆ ಲೋಕಸಭೆ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಸಂಘಟನೆ ಬಿಜೆಪಿ ಪರ ಕೆಲಸ ಮಾಡಿಲ್ಲ ಎಂಬ ವರದಿಗಳು ನಿಜ ಎಂಬುದನ್ನು ಈ ಲೇಖನ ಅಧಿಕೃತವಾಗಿ ಬಹಿರಂಗಪಡಿಸಿದೆ.

ಲೋಕಸಭೆ ಚುನಾವಣೆ ಫಲಿತಾಂಶದ ವೇಳೆ ಆರ್‌ಎಸ್‌ಎಸ್ ನಾಯಕ ಮೋಹನ್ ಭಾಗವತ್ ಅವರು ಕೆಲವು ಹೇಳಿಕೆಗಳನ್ನು ವ್ಯಕ್ತಪಡಿಸಿದ್ದರು. ಆ ವೇಳೆ ‘ನಿಜವಾದ ಸೇವಕರು ದುರಹಂಕಾರಿಯಾಗಿರುವುದಿಲ್ಲ’ ಎಂದು ಬಿಜೆಪಿ ಸದಸ್ಯರನ್ನು ಪರೋಕ್ಷವಾಗಿ ಟೀಕಿಸಿದ್ದರು.’ಆರ್ಗನೈಸರ್’ನಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ‘ಚುನಾವಣಾ ಕೆಲಸಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಸೇವಕರನ್ನು (ಆರ್‌ಎಸ್‌ಎಸ್ ಕಾರ್ಯಕರ್ತರು) ಸಂಪರ್ಕಿಸಿಲ್ಲ’ ಎಂದು ಉಲ್ಲೇಖಿಸಲಾಗಿದೆ.

ಲೋಕಸಭೆ ಚುನಾವಣೆ ನಡೆಯುತ್ತಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಅಹಂಕಾರವನ್ನು (Ego) ಬಹಿರಂಗಪಡಿಸುವ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅಂದರೆ, ‘ತನ್ನ ಸ್ವಂತ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸುವ ಸ್ಥಿತಿಯಲ್ಲಿ ಬಿಜೆಪಿ ಇದೆ. ಅದಕ್ಕೆ ಆರ್‌ಎಸ್‌ಎಸ್ ಬೇಡ’ ಎಂದು ಅವರು ಹೇಳಿದರು.

ಅಲ್ಲದೆ, ವಾಜಪೇಯಿ ಪ್ರಧಾನಿಯಾಗಿದ್ದ ಸಮಯ ಹಾಗೂ ಮೋದಿ ಪ್ರಧಾನಿಯಾಗಿದ್ದ ಸಮಯವನ್ನು ಹೋಲಿಕೆ ಮಾಡಿ ಕೆಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ವಾಜಪೇಯಿ ಕಾಲದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಸಹಾಯ ಪಡೆಯುವ ಮಟ್ಟೆಕ್ಕೆ ಒಂದು ಸಣ್ಣ ಶಕ್ತಿಯಾಗಿತ್ತು. ಈಗ ಬಿಜೆಪಿ ಬೆಳೆದಿದೆ. ಯಾರ ಕೃಪಾಕಟಾಕ್ಷವೂ ಇಲ್ಲದೇ ಬಿಜೆಪಿ ಸ್ವಂತ ಬಲದಿಂದ ನಡೆಯುತ್ತಿದೆ’ ಎಂದು ಜೆ.ಪಿ.ನಡ್ಡಾ ಹೇಳಿದ್ದರು.

ಆದರೆ ಜೆ.ಪಿ.ನಡ್ಡಾ ಹೇಳಿದ್ದಕ್ಕೆ ವ್ಯತಿರಿಕ್ತವಾಗಿ ಲೋಕಸಭೆ ಚುನಾವಣೆ ಫಲಿತಾಂಶ ಬಂದಿದೆ. ಬಿಜೆಪಿ 370 ಮತ್ತು ಎನ್‌ಡಿಎ 400 ಸ್ಥಾನಗಳನ್ನು ಗೆಲ್ಲಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಬಿಜೆಪಿ ಗೆದ್ದಿರುವುದು 240 ಕ್ಷೇತ್ರಗಳಲ್ಲಿ ಮಾತ್ರ. ಸರ್ಕಾರ ರಚನೆಗೆ ಬೇಕಾದ 272 ಸಂಖ್ಯಾಬಲವನ್ನೂ ಬಿಜೆಪಿ ಮುಟ್ಟಲು ಸಾಧ್ಯವಾಗಲಿಲ್ಲ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಒಟ್ಟು 293 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ನಾಯಕರು ಇದನ್ನು ಅರಿಯದೆ ತೇಲಾಡುತ್ತಿದ್ದಾರೆ ಎಂದು ಆರ್‌ಎಸ್‌ಎಸ್ ಕಡೆಯವರು ಹೇಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸುತ್ತಿರುವ ರಾಜಕೀಯ ವಿಮರ್ಶಕರು, “ಬಿಜೆಪಿ ಆರ್‌ಎಸ್‌ಎಸ್ ಹಿಡಿತದಲ್ಲಿರಬೇಕು. ಅವರ ರಾಜಕೀಯ ಅಜೆಂಡಾಗಳನ್ನು ಬಿಜೆಪಿ ಆಡಳಿತಗಾರರು ಈಡೇರಿಸಬೇಕು ಎಂದು ಆರ್‌ಎಸ್‌ಎಸ್ ನಿರೀಕ್ಷಿಸುತ್ತದೆ. ಆದರೆ ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬರುವಷ್ಟು ಬೆಳೆದಿರುವಾಗ ಬಿಜೆಪಿ ನಾಯಕರು, ಆರ್‌ಎಸ್‌ಎಸ್ ಸಂಘಟನೆಯ ಮೇಲೆ ಅವಲಂಬಿತರಾಗಿರಲು ಬಯಸುತ್ತಿಲ್ಲ. ಅದುವೇ ಸಮಸ್ಯೆಗೆ ಕಾರಣ” ಎಂದು ಹೇಳುತ್ತಾರೆ.

ಮಣಿಪುರ ರಾಜ್ಯದಲ್ಲಿ ಜನಾಂಗೀಯ ಸಂಘರ್ಷಗಳಿಂದ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೂ, ಸಾವಿರಾರು ಮಂದಿ ಮನೆ ಕಳೆದುಕೊಂಡು, ಮಹಿಳೆಯರು ಅಧೋಗತಿಗೆ ಒಳಗಾಗಿದ್ದರೂ ಪ್ರಧಾನಿ ಮೋದಿ ಇದುವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ, ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಅವರು ‘ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಮೋದಿ ಸರ್ಕಾರದ ಭದ್ರತೆಯ ವೈಫಲ್ಯವೇ ಕಾರಣ’ ಎಂದು ಟೀಕಿಸಿದ್ದಾರೆ. ‘ಚುನಾವಣೆ ವಿಜಯೋತ್ಸವದ ಸಂಭ್ರಮ ಸಾಕು. ಮಣಿಪುರ ಶಾಂತಿಗಾಗಿ ಕಾಯುತ್ತಿದೆ’ ಎಂದು ಟೀಕಿಸಿದ್ದಾರೆ.

ಬೀದಿಗೆ ಬಂದ ಆರ್‌ಎಸ್‌ಎಸ್-ಬಿಜೆಪಿ ಘರ್ಷಣೆ ಇನ್ನೂ ತೀವ್ರವಾಗುತ್ತದೆಯೇ ಅಥವಾ ಕಡಿಮೆಯಾಗುತ್ತದೆಯೇ? ಕಾಲವೇ ಉತ್ತರಿಸಬೇಕು.

ವಿದೇಶ

ಬ್ಯಾಂಕಾಕ್: ಜಗತ್ತಿನಾದ್ಯಂತ ಇರುವ ಹಿಂದೂ ಸಂಘಟನೆಗಳನ್ನು ಒಗ್ಗೂಡಿಸಿ ಬಲಪಡಿಸಲು ಹಾಗೂ ಸನಾತನ ಧರ್ಮ ವಿರೋಧಿ ಹೋರಾಟಕ್ಕೆ ತಕ್ಕ ಉತ್ತರ ನೀಡುವುದು ಸೇರಿದಂತೆ ಮಹತ್ವದ ನಿರ್ಣಯಗಳನ್ನು ವಿಶ್ವ ಹಿಂದೂ ಸಮ್ಮೇಳನದಲ್ಲಿ ಅಂಗೀಕರಿಸಲಾಯಿತು.

ಆಗ್ನೇಯ ಏಷ್ಯಾದ ದೇಶವಾದ ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್‌ನಲ್ಲಿ, ‘ವಿಶ್ವ ಹಿಂದೂ ಕಾಂಗ್ರೆಸ್ 2023’ ಸಮ್ಮೇಳನವು ಇದೇ 24 ರಂದು ಪ್ರಾರಂಭವಾಗಿ ನಿನ್ನೆ ಕೊನೆಗೊಂಡಿತು. ಥೈಲ್ಯಾಂಡ್‌ ಪ್ರಧಾನಿ ಶ್ರೇತಾ ಥಾವಿಸಿನ್ ಅವರು ಉದ್ಘಾಟಿಸಿದ ಈ ಸಮ್ಮೇಳನದಲ್ಲಿ 61 ದೇಶಗಳ 2,100 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಇದರಲ್ಲಿ ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಸೇರಿದಂತೆ ಹಲವರು ಭಾಗವಹಿಸಿದ್ದರು. ಅಂತಿಮ ದಿನವಾದ ನಿನ್ನೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಇದರಲ್ಲಿ ಜಗತ್ತಿನಾದ್ಯಂತ ಇರುವ ಹಿಂದೂ ಸಂಘಟನೆಗಳನ್ನು ಕ್ರೋಢೀಕರಿಸಿ ಬಲಪಡಿಸಬೇಕು, ಸನಾತನ ಧರ್ಮದ ವಿರುದ್ಧದ ಅಭಿಪ್ರಾಯಗಳಿಗೆ ತಕ್ಕ ಉತ್ತರ ನೀಡಬೇಕು ಸೇರಿದಂತೆ ನಾನಾ ನಿರ್ಣಯಗಳನ್ನು ಅಂಗೀಕರಿಸಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ ವಿಶ್ವ ಹಿಂದೂ ಸಮ್ಮೇಳನದ ಸಂಸ್ಥಾಪಕ ಸ್ವಾಮಿ ವಿಜ್ಞಾನಾನಂದ ಅವರು ಮಾತನಾಡಿದರು.

“ಕರೋನಾ ಅವಧಿಯಲ್ಲಿ ಹಿಂದೂಗಳನ್ನು ಸಂಘಟಿಸುವುದರಲ್ಲಿ ಕುಸಿತ ಕಂಡುಬಂದಿತು; ಈಗ ಈ ಚಟುವಟಿಕೆ ಪುನಶ್ಚೇತನಗೊಂಡಿದೆ. ಕ್ರೈಸ್ತ ಸಂಘಟನೆಗಳ ವಶದಲ್ಲಿರುವ ಹಿಂದೂ ದೇವಾಲಯದ ಭೂಮಿಯನ್ನು ವಾಪಸ್ ಪಡೆಯಬೇಕು. ಅದಕ್ಕಾಗಿ ಕಾನೂನು ಕ್ರಮವನ್ನೂ ಕೈಗೊಳ್ಳಬೇಕು” ಎಂದು ಹೇಳಿದರು.

ದೇಶ

ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸನಾತನ ಧರ್ಮವನ್ನು ಎತ್ತಿ ಹಿಡಿಯುವ ಸಮಯ ಬಂದಿದೆ. ಸತತ ಆಕ್ರಮಣಗಳಿಂದ ಉತ್ತರ ಭಾರತದಲ್ಲಿ ವೈದಿಕ ಸಂಸ್ಕೃತಿಗೆ ಧಕ್ಕೆಯಾಗಿದೆ ಎಂದು ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ.

ವೇದಗಳು ಜ್ಞಾನದ ಸಂಪತ್ತನ್ನು ಒಳಗೊಂಡಿವೆ. ಧರ್ಮದ ಜ್ಞಾನವನ್ನು ಜಗತ್ತಿಗೆ ತಿಳಿಸಬೇಕು. ಸತ್ಯವೇ ಧರ್ಮದ ಆಧಾರ. ಇಂದು ಇಡೀ ಜಗತ್ತು ವೇದಗಳ ಬಗ್ಗೆ ಯೋಚಿಸುತ್ತಿದೆ.

ನಮ್ಮ ಆಧ್ಯಾತ್ಮಿಕತೆಯನ್ನು ರಕ್ಷಿಸಲು ನಾವು ಕೆಲಸ ಮಾಡಬೇಕು. ದೇಶ ಪ್ರಗತಿಯಲ್ಲಿದೆ. ಧರ್ಮದ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ದೇವಾಲಯಗಳನ್ನು ರಕ್ಷಿಸುವ ಮತ್ತು ಧಾರ್ಮಿಕ ಸಂಸ್ಥೆಗಳ ಮೂಲಕ ಧರ್ಮ ಪ್ರಚಾರ ಮಾಡುವ ಅಗತ್ಯವಿದೆ. ಎಂದು ಹೇಳಿದರು.

ರಾಜಕೀಯ

ಜೂನ್ ಮೊದಲ ವಾರದಲ್ಲಿ ನವದೆಹಲಿಯಲ್ಲಿ ಬಿಜೆಪಿಯ ರಹಸ್ಯ ಸಮಾಲೋಚನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಐವರು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರೊಂದಿಗೆ ಆರ್‌ಎಸ್‌ಎಸ್‌ನ ಇಬ್ಬರು ಪ್ರಮುಖ ನಾಯಕರೂ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಆರ್‌ಎಸ್‌ಎಸ್‌ ಸಂಘಟನೆ ಮೇಲೆ ಬಿಜೆಪಿ ನಾಯಕರಿಗೆ ಯಾವಾಗಲೂ ಹೆಚ್ಚು ಗೌರವವಿರುತ್ತದೆ. ಪಕ್ಷದ ಚುನಾವಣಾ ರಣತಂತ್ರದಲ್ಲಿ ಭಾಗಿಯಾಗುವುದು, ಕ್ಷೇತ್ರ ಪ್ರವೇಶಿಸಿ ಬಿಜೆಪಿ ಪರ ಕೆಲಸ ಮಾಡುವುದು ಮುಂತಾದ ಕಾರ್ಯದಲ್ಲಿ ಆರ್ ಎಸ್ಎಸ್‌ ಸಕ್ರಿಯವಾಗಿ ಇರುತ್ತದೆ.

ಈ ಹಿನ್ನಲೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಇಬ್ಬರೂ ಈ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ . ಈ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆಯ ಕಾರ್ಯತಂತ್ರ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣಗಳು ಮುಂತಾದ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಮತ್ತು ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಬಿಜೆಪಿ ಸರ್ಕಾರ ರಚಿಸಲು ಏನು ಮಾಡಬೇಕು ಎಂಬುದರ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ವರದಿಯಾಗಿದೆ.

ಈ ಸಭೆಯಲ್ಲಿ ಕೈಗೊಳ್ಳುವ ನಿರ್ಣಯಗಳು ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಜಾರಿಯಾಗಲಿದೆ ಎಂದೂ ಹೇಳಲಾಗುತ್ತಿದೆ.

ದೇಶ

ಚೆನ್ನೈ: “ಹಲವು ಭಿನ್ನಾಭಿಪ್ರಾಯಗಳ ನಡುವೆಯೂ ಭಾರತವು ಒಂದೇ ದೇಶವಾಗಿದೆ” ಎಂದು ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದರು.

ಚೆಂಗಲ್ಪಟ್ಟು ಜಿಲ್ಲೆಯ ಪೌಂಜೂರ್ ಸಮೀಪದ ನೀಲಮಂಗಲಂ ಗ್ರಾಮದಲ್ಲಿ, ಶಾಸ್ತ್ರಾಲಯ ಆಶ್ರಮದಲ್ಲಿ, ಭಾರತ ಮಾತಾ ದೇವಾಲಯವನ್ನು ನಿರ್ಮಿಸಲಾಗಿದೆ. 300 ಟನ್ ತೂಕದ ಒಂದೇ ಕಲ್ಲಿನಿಂದ ಮಾಡಲ್ಪಟ್ಟ, ಭಾರತ ಮಾತೆಯ 9 ಅಡಿ ಎತ್ತರದ ಪ್ರತಿಮೆಯನ್ನು ಅಖಂಡ ಭಾರತ ನಕ್ಷೆಯೊಂದಿಗೆ ಕೆತ್ತಲಾಗಿದೆ.

ಈ ದೇವಾಲಯದ ಕುಂಭಾಭಿಷೇಕ ಸಮಾರಂಭವು ನೆನ್ನೆ ನಡೆದಿತ್ತು. ಈ ಸಮಾರಂಭದಲ್ಲಿ ಆರ್‌ಎಸ್‌ಎಸ್ ರಾಷ್ಟ್ರೀಯ ಅಧ್ಯಕ್ಷ ಮೋಹನ್ ಭಾಗವತ್, ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಶಾಸ್ತ್ರಾಲಯ ಆಶ್ರಮದ ಸಂಸ್ಥಾಪಕ ಸ್ವಾಮಿ ಬ್ರಹ್ಮ ಯೋಗಾನಂದ ಮುಂತಾದವರು ಪಾಲ್ಗೊಂಡಿದ್ದರು. 100ಕ್ಕೂ ಹೆಚ್ಚು ಬಾಲಕಿಯರು ಭಾರತ ಮಾತೆಯ ವೇಷವನ್ನು ಧರಿಸಿ, ಭಾರತ ಮಾತೆಯ ಪ್ರತಿಮೆಗೆ ದೀಪಾರಾಧನೆ ಸಲ್ಲಿಸಿದರು.

ನಂತರ ಮಾತನಾಡಿದ ಮೋಹನ್ ಭಾಗವತ್, “ಭಾಷೆ, ಆಹಾರ, ಉಡುಗೆ, ಪೂಜೆಯ ವಿಧಾನ ಹೀಗೆ ನಮ್ಮಲ್ಲಿ ಹಲವು ವ್ಯತ್ಯಾಸಗಳಿದ್ದರೂ, ಭಾರತ ಯಾವಾಗಲೂ ಒಂದೇ ದೇಶವಾಗಿದೆ. ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೆ ಭಾರತದ ಈ ಭೂ ಪ್ರದೇಶವು ದೇವರಿಂದ ನಿರ್ಧರಿಸಲ್ಪಟ್ಟಿದೆ. ಭೂಪ್ರದೇಶದಿಂದ ಭಾರತವನ್ನು ಹಲವಾರು ದೇಶಗಳಾಗಿ ವಿಂಗಡಿದ್ದರೂ, ಧರ್ಮದಿಂದ ಅಖಂಡ ಭರತವಾಗಿಯೇ ಉಳಿದಿದೆ.

‘ಭಾರತವು ವಿಶ್ವಕ್ಕೆ ಮಾರ್ಗದರ್ಶಿಯಾಗಿರುತ್ತದೆ’ ಎಂದು ಮಹಾನ್ ಅರಬಿಂದೋ ಹೇಳಿದರು. ನಾವು ದೇಶದ ಮೇಲೆ ಭರವಸೆಯನ್ನು ಇಡಬೇಕು. ಆ ಭರವಸೆಯು ನಮ್ಮ ದೇಶವನ್ನು ತೊರೆದವರನ್ನು ಮರಳಿ ಬರುವಂತೆ ಮಾಡುತ್ತದೆ. ಇಲ್ಲಿನ ಮುಸ್ಲಿಮರು ವಿಭಜನೆಯ ಸಮಯದಲ್ಲಿ ಪಾಕಿಸ್ತಾನಕ್ಕೆ ಹೋಗದೆ, ಭಾರತ ನಮ್ಮ ದೇಶ ಎಂದು ಇಲ್ಲೇ ಉಳಿದುಕೊಂಡರು. ಭಾರತವು ಸತ್ಯ, ಪ್ರೀತಿ, ಪರಿಶುದ್ಧತೆ ಮತ್ತು ತಪಸ್ಸು ಎಂಬ ನಾಲ್ಕು ಸ್ತಂಭಗಳ ಮೇಲೆ ನಿಂತಿದೆ. ಅಖಂಡ ಭಾರತವು ರಚನೆಯಾಬೇಕೆ ಎಂಬುದರ ಸಂಕೇತವಾಗಿ, ಇಲ್ಲಿ ಭಾರತ ಮಾತೆಯ ಪ್ರತಿಮೆಯನ್ನು ಇರಿಸಲಾಗಿದೆ” ಎಂದು ಹೇಳಿದರು. RSS chief takes part in consecration of Bharata Mata temple in Tamilnadu.

ದೇಶ

ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಭಾಗವಹಿಸಿ ಮಾತನಾಡಿದರು. ಈ ವೇಳೆ ಮಾತನಾಡಿದ ಅವರು, ಭವಿಷ್ಯದಲ್ಲಿ ಭಾರತ ಸೂಪರ್ ಪವರ್ ಆಗಲಿದೆ ಎಂದು ನಾವು ಮಾತ್ರವಲ್ಲ ಇಡೀ ವಿಶ್ವವೇ ಹೇಳುತ್ತಿದೆ.

ಭಾರತವು ವಿಶ್ವಗುರು (ವಿಶ್ವ ನಾಯಕ) ಆಗಿ ಹೊರಹೊಮ್ಮುತ್ತಿದೆ. ಆ ಗುರಿಯನ್ನು ನಾವು ಸಾಧಿಸಬೇಕು. ನಾವು ಯಾರನ್ನೂ ಗೆಲ್ಲಲು ಅಥವಾ ಬದಲಾಯಿಸಲು ಹೋಗುವುದಿಲ್ಲ. ನಾವು ಪ್ರಾಮಾಣಿಕರಾಗಿರಬೇಕು ಎಂದು ಒತ್ತಿ ಹೇಳಿದ ಅವರು, ನಾವೆಲ್ಲರೂ ಋಷಿಮುನಿಗಳ ಮಾರ್ಗದರ್ಶನದಂತೆ ನಡೆದುಕೊಂಡು ಧರ್ಮಮಾರ್ಗದಲ್ಲಿ ನಡೆಯಬೇಕು ಎಂದರು. ನಮ್ಮ ಶಕ್ತಿ ಇತರರಿಗೆ ಸಮಸ್ಯೆಗಳನ್ನು ಸೃಷ್ಟಿಸುವುದಕ್ಕಾಗಿ ಅಥವಾ ನೋವುಂಟು ಮಾಡುವುದಕ್ಕಾಗಿ ಅಲ್ಲ. ವ್ಯತಿರಿಕ್ತವಾಗಿ, ಶಾಂತಿಯನ್ನು ಸೃಷ್ಟಿಸುವುದಕ್ಕಾಗಿ ಮತ್ತು ದುರ್ಬಲರನ್ನು ರಕ್ಷಿಸುವುದಕ್ಕಾಗಿ ಎಂದು ಅವರು ಹೇಳಿದರು.

ವಿಶ್ವದ ರಾಷ್ಟ್ರಗಳು ತಮ್ಮನ್ನು ಬಲಾಢ್ಯರೆಂದು ಸ್ಥಾಪಿಸಿಕೊಳ್ಳಲು ಯುದ್ಧದಲ್ಲಿದ್ದಾಗ, ನಾವು ಯುದ್ಧದಲ್ಲಿ ಗಾಯಗೊಂಡವರಿಗೆ ಮುಲಾಮುವನ್ನು ಹಚ್ಚಿದೆವು. ನಮ್ಮ ಋಷಿಗಳು ನಿಜವಾಗಿಯೂ ಸಮಾಜಕ್ಕೆ ಸಾಕಷ್ಟು ಸೇವೆಯನ್ನು ಸಲ್ಲಿಸಿದ್ದಾರೆ. ಸನಾತನ ಧರ್ಮವು ಹಿಂದೂ ರಾಷ್ಟ್ರ ಮತ್ತು ಹಿಂದೂ ಸಂಪ್ರದಾಯವಾಗಿದೆ. ಹಾಗಾಗಿಯೇ ಮುಂದಿನ ದಿನಗಳಲ್ಲಿ ಭಾರತ ಸೂಪರ್ ಪವರ್ ಆಗಲಿದೆ. ಆದರೆ, ಅದಕ್ಕೆ ಶಕ್ತಿಯಿಲ್ಲದೆ ಸಾಧ್ಯವಿಲ್ಲ ಎಂದರು.