ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Muslim Archives » Dynamic Leader
October 23, 2024
Home Posts tagged Muslim
ರಾಜಕೀಯ

ಬೆಳಗಾವಿ: ಗೋಕಾಕ್ ಪಟ್ಟಣದಲ್ಲಿಂದು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್ ಪರ ನಿರೀಕ್ಷೆಗೂ ಮೀರಿ ಜನಬೆಂಬಲ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ಹಿಂಸಾಚಾರದ ಬಗ್ಗೆ ತುಟಿ ಬಿಚ್ಚಿದ್ದಾರ? ಕೇಂದ್ರ ಬಿಜೆಪಿ ಸರ್ಕಾರ ಏನು ಕ್ರಮ ಕೈಗೊಂಡಿದೆ? ಅಮಿತ್ ಶಾ ಗೃಹ ಸಚಿವರಾಗಿ ವಿಫಲವಾದಂತೆ ಅಲ್ವಾ? ಮಣಿಪುರ ಹಿಂಸಾಚಾರಕ್ಕೆ ಮೋದಿ ಹೊಣೆಯಲ್ಲವೇ? ಎಂದು ಪ್ರಶ್ನಿಸಿದರು.

30 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಮುಸ್ಲಿಮರ 4% ಮೀಸಲಾತಿಯನ್ನು ರದ್ದು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯ ಸುಪ್ರೀಂ ಕೋರ್ಟ್ ಗೆ ಹೋದಾಗ, 4% ಮೀಸಲಾತಿಯನ್ನು ಮುಂದುವರೆಸುವುದಾಗಿ ಅವರೇ ಮುಚ್ಚಳಿಕೆಯನ್ನು ಬರೆದುಕೊಟ್ಟಿದ್ದಾರೆ ಎಂದು ಹೇಳಿದರು.  

ಕೇವಲ ರಾಜಕಾರಣಕ್ಕಾಗಿ ಹಾಗೂ ಮತಗಳಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕ ವಿಚಾರಗಳಿಗೆ ಸಂಬಂಧಿಸಿದ ಸುಳ್ಳು ಹೇಳುತ್ತಾರೆ. ಕಾಂಗ್ರೆಸ್ ಪಕ್ಷ ಕಳೆದ ಐದು ದಶಕಗಳಿಂದ ದೇಶದಲ್ಲಿ ಅಧಿಕಾರದಲ್ಲಿತ್ತು, ಎಂದಾದರೂ ಮಹಿಳೆಯರ ತಾಳಿಗಳನ್ನು ಕಸಿದುಕೊಂಡಿದ್ದಾರಾ? ದೇಶದ ಜವಾಬ್ದಾರಿಯುತ ಪ್ರಧಾನಿಯಾಗಿ ಇಂತಹ ಹೇಳಿಕೆಗಳನ್ನು ನೀಡಲು ಕಾರಣ ಅವರ ಸಾಧನೆಶೂನ್ಯ ಆಡಳಿತ. ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ ಎಂದರೆ ನೀವೇ ಯೋಚಿಸಿ ಎಂದು ಕಿಡಿಕಾರಿದರು.

ರಾಜ್ಯ

ವಿಜಯಪುರದ ಮುಸ್ಲಿಂ ಧಾರ್ಮಿಕ ಮುಖಂಡರಾದ ಸೈಯ್ಯದ್ ತನ್ವೀರ್ ಹಾಶ್ಮಿಯವರ ವಿರುದ್ಧದ ಬಸನಗೌಡ ಪಾಟೀಲ್ ಯತ್ನಾಳ್‌  ಹೇಳಿಗೆ ಖಂಡನೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 4 ರಂದು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಒಂದು ಚಿತ್ರವೊಂದನ್ನು ಇಟ್ಟುಕೊಂಡು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು  ‘ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ’ ಎಂದು ಆರೋಪಿಸಿ ಸಂಚಲನ ಮೂಡಿಸಿದರು.

ಇದನ್ನು ಕರ್ನಾಟಕ ಮುಸ್ಲಿಂ ಯೂನಿಟಿಯ (ರಾಜ್ಯ ಸಮಿತಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಖಾಸಿಂ ಸಾಬ್. ಎ.,  ತೀವ್ರವಾಗಿ ಖಂಡಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಸುನ್ನಿ ಜಮಾತ್‌ನ ಮುಖಂಡರು, ಹಿರಿಯ ಸಮಾಜ ಸೇವಕರು ಹಾಗೂ ಜಾತ್ಯತೀತ ಮನೋಭಾವದ ಧಾರ್ಮಿಕ ಪಂಡಿತರು ಆಗಿರುವ ತನ್ವೀರ್ ಪೀರಾ ರವರ ಕುರಿತು ಯತ್ನಾಳರ ತೇಜೋವದೆ ಹೇಳಿಕೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದ್ದಾರೆ.

“ಯತ್ನಾಳ್ ಅಪಪ್ರಚಾರ ಮಾಡುತ್ತಿರುವ ತನ್ವೀರ್ ಪೀರಾ ರವರ ಫೋಟೋಗಳಲ್ಲಿ ಒಂದು ಬಾಗ್ದಾದಿನ ಪ್ರಿನ್ಸ್‌ ಶೇಖ್‌ ಖಾಲಿದ್‌ ಅವರ ಜ್ಯೋತೆಗಿನ ಫೋಟೋ ಹಾಗೂ ಮತ್ತೊಂದು ಫೋಟೋದಲ್ಲಿ ಇರುವವರು ಇರಾಕ್‌ ಸರ್ಕಾರದ ಸೆಕ್ಯುರಿಟಿ ಆಫೀಸರ್‌ ಆಗಿರುವ ಸಜ್ಜಾದೇ ನಶೀನ್‌ ಹಜ್ರತ್‌ ಗೌಸ್‌ ಆಜಂ ರವರ ಜ್ಯೋತೆಗೆ ತನ್ವೀರ್ ಪೀರಾ ರವರು ಇರುವ ಹತ್ತು ವರ್ಷಗಳ ಹಿಂದಿನ ಫೋಟೋಗಳು” ಎಂದು ಸ್ಪಷ್ಟನೆ ನೀಡಿದ್ದಾರೆ.

“ಫೋಟೋಗಳನ್ನು ತಿರುಚಿ, ಬಳಸಿ ಐಸಿಸ್ ಬೆಂಬಲಿಗರು ಮತ್ತು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವ ತನ್ವೀರ್ ಪೀರಾರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಅಪಪ್ರಚಾರದ ಹಿಂದೆ ಮುಸ್ಲಿಂ ವಿರೋಧಿ ಭಾವನೆ, ಶಾಂತಿಕದಡುವ ಉದ್ದೇಶ ಯತ್ನಾಳ್ ಹೊಂದಿದ್ದಾರೆ” ಆರೋಪಿಸಿದ್ದಾರೆ. “ಈ ಕೂಡಲೇ ಕರ್ನಾಟಕ ಸರಕಾರ ಬಿಜೆಪಿಯ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಮುಸ್ಲಿಂ ಯುನಿಟಿ ಒತ್ತಾಯಿಸುತ್ತಿದೆ” ಎಂದು ಹೇಳಿದ್ದಾರೆ.

“ಹುಬ್ಬಳ್ಳಿಯ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮ್ ಸಮುದಾಯದ ರಕ್ಷಣೆ ನಮ್ಮ ಸರಕಾರ ಜವಾಬ್ದಾರಿಯಾಗಿರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಅವರ ಅಭಿವೃದ್ಧಿಗೆ ಹತ್ತು ಸಾವಿರ ಕೋಟಿಗಳನ್ನು ಮೀಸಲು ಇರಿಸುವುದಾಗಿ ಘೋಷಣೆ ಮಾಡಿದ್ದು ಸ್ವಾಗತಾರ್ಹ. ಅಲ್ಲದೆ, ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿಯನ್ನು ಮರು ಸ್ಥಾಪಿಸಬೇಕು. ಓಬಿಸಿಯೊಳಗಿನ ಮುಸ್ಲಿಮರ ಶೇ.4ರಷ್ಟು ಇರುವ ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕೆಂದು KMU ಸರಕಾರಕ್ಕೆ ಒತ್ತಾಯಿಸುತ್ತಿದೆ” ಎಂದು ಹೇಳಿದ್ದಾರೆ.

ದೇಶ

ಕೊಯಮತ್ತೂರು: ಕೊಯಮತ್ತೂರಿನಲ್ಲಿ ಎನ್‌ಐಎ ದಾಳಿಯ ಹೆಸರಿನಲ್ಲಿ ಮುಸ್ಲಿಂ ಜನರನ್ನು ಭಯೋತ್ಪಾದಕರಂತೆ ಬಿಂಬಿಸುವುದನ್ನು ಒಪ್ಪಲಾಗದು ಎಂದು ‘ಮನಿದನೇಯ ಮಕ್ಕಳ್ ಕಚ್ಚಿ’ ಮುಖ್ಯಸ್ಥ ಜವಾಹಿರುಲ್ಲಾ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ವರ್ಷ ಕೊಯಮತ್ತೂರಿನಲ್ಲಿ ನಡೆದ ಕಾರ್ ಸ್ಫೋಟ ಘಟನೆಯನ್ನು ಮುಂದಿಟ್ಟುಕೊಂಡು ಎನ್‌ಐಎ ಅಧಿಕಾರಿಗಳು ವಿವಿಧ ಸ್ಥಳಗಳಲ್ಲಿ ಮುಸ್ಲಿಂ ಕುಟುಂಬಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯ.

ಕಾರ್ ಬಾಂಬ್ ದಾಳಿಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವುದನ್ನು ನಾವು ಬೆಂಬಲಿಸುತ್ತೇವೆ. ಆದರೆ, ಅರೇಬಿಕ್ ಅಧ್ಯಯನ ಮಾಡಿದ ಮಾಜಿ ವಿದ್ಯಾರ್ಥಿಗಳ ಕುಟುಂಬಗಳನ್ನು ಗುರಿಯಾಗಿಸಿಕೊಂಡು, ಮುಂಜಾನೆ ವೇಳೆಯಲ್ಲಿ ಅವರ ಮನೆಯ ಬಾಗಿಲು ಮುರಿದಂತೆ ಬಡಿದು, ತನಿಖೆಯ ಹೆಸರಿನಲ್ಲಿ ಕರೆದುಕೊಂಡು ಹೋಗಿ, ಮುಸ್ಲಿಂ ಬಾಂಧವರನ್ನು ಜನರಲ್ಲಿ ಭಯೋತ್ಪಾದಕರಂತೆ ಬಿಂಬಿಸುತ್ತಿರುವುದು ಖಂಡನೀಯ. ಅವರು (ಎನ್ಐಎ) ಇದನ್ನು ಬದಲಾಯಿಸಿಕೊಳ್ಳಬೇಕು” ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಜವಾಹಿರುಲ್ಲಾ, “ಅರೇಬಿಕ್ ಭಾಷೆ ವಿಶ್ವದ ಹಲವು ದೇಶಗಳಲ್ಲಿ ಮಾತನಾಡುವ ಭಾಷೆಯಾಗಿದೆ. ಅರೇಬಿಕ್ ಅಧ್ಯಯನ ಮಾಡಿದ ಮಾಜಿ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ಕುಟುಂಬಗಳನ್ನು ತನಿಖೆಯ ಹೆಸರಿನಲ್ಲಿ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಮುಸ್ಲಿಂ ಬಾಂಧವರ ಭವಿಷ್ಯವನ್ನು ಹಾಳುಮಾಡಿದ್ದಾರೆ. ಅವರ ಬಳಿಯಿದ್ದ ಲ್ಯಾಪ್‌ಟಾಪ್ ಮತ್ತು ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ನಿರ್ದಿಷ್ಟವಾಗಿ ಅವರನ್ನು ಭಯೋತ್ಪಾದಕರಂತೆ ಚಿತ್ರಿಸಿ, ಮನೆಯನ್ನು ಖಾಲಿ ಮಾಡುವಂತೆ ಹೇಳಿ ಕಿರುಕುಳ ನೀಡುತ್ತಿದ್ದಾರೆ.

ಕೊಯಮತ್ತೂರು ಭಯೋತ್ಪಾದಕರ ಶಿಬಿರ ಎಂಬ ಚಿತ್ರಣವನ್ನು ಎನ್‌ಐಎ ಸೃಷ್ಟಿಸುತ್ತಿದೆ. ಮಾಲೆಗಾಂವ್ ಸ್ಫೋಟ ನಡೆಸಿದವರು ಯಾರು? ಅಭಿನವ್ ಭಾರತ್ ಎಂಬ ಸಂಘಟನೆಯೇ ರೈಲಿನಲ್ಲಿ ಬಾಂಬ್ ಸ್ಫೋಟ ನಡೆಸಿದ್ದು ಎಂಬ ವಿಷಯವನ್ನು ನಾವೇ (ಇಸ್ಲಾಮಿಕ್ ಸಂಸ್ಥೆಗಳು) ಕಂಡುಹಿಡಿದು ಹೇಳಿದ್ದು. ಅಲ್ಪಸಂಖ್ಯಾತರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಎನ್‌ಐಎ ಮೊಕದ್ದಮೆಗಳನ್ನು ದಾಖಲಿಸಿ ಶಿಕ್ಷೆ ನೀಡುತ್ತಿದೆ” ಎಂದರು.

“ಮೊಹಮದ್ ಅಜರುದ್ದೀನ್ ಈಗಾಗಲೇ ಕ್ರಿಮಿನಲ್ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಕಾರು ಸ್ಫೋಟ ಘಟನೆಗೂ, ಅರೇಬಿಕ್ ಭಾಷೆ ಓದಿದ ವಿದ್ಯಾರ್ಥಿಗಳಿಗೂ ಸಂಬಂಧ ಕಲ್ಪಿಸಿ ಎನ್ಐಎ ಪ್ರಕರಣ ದಾಖಲಿಸಿರುವುದು ಖಂಡನೀಯ” ಎಂದು ಹೇಳಿದ್ದಾರೆ. ಪತ್ರಿಕಾ ಘೋಷ್ಠಿಯಲ್ಲಿ ತಂದೆ ಪೆರಿಯಾರ್ ದ್ರಾವಿಡರ್ ಕಳಗಂ ಅಧ್ಯಕ್ಷ ಕೋವೈ ರಾಮಕೃಷ್ಣನ್ ಉಪಸ್ಥಿತರಿದ್ದರು.

ದೇಶ

ಬಕ್ರೀದ್ ಆಚರಣೆ ವೇಳೆ ವಿದ್ಯಾರ್ಥಿಗಳು ಟೋಪಿ ಧರಿಸಿ ನೃತ್ಯ: ಶಾಲಾ ಮುಖ್ಯೋಪಾಧ್ಯಾಯರ ವಜಾ

ಕಛ್: ಬಿಜೆಪಿ ಆಡಳಿತಾರೂಢ ಗುಜರಾತ್ ರಾಜ್ಯದ ಕಛ್ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ ಬಕ್ರೀದ್ ಆಚರಿಸಲು ಸಣ್ಣ ಪ್ರಮಾಣದ ಹಬ್ಬವನ್ನು ನಡೆಸಲಾಯಿತು. ಈ ಸಮಾರಂಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳೊಂದಿಗೆ ಇತರ ವಿದ್ಯಾರ್ಥಿಗಳು ಟೋಪಿ ಧರಿಸಿ ನೃತ್ಯ ಮಾಡಿದ್ದಾರೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಉತ್ತಮ ಧಾರ್ಮಿಕ ಸೌಹಾರ್ದತೆಗೆ ಉದಾಹರಣೆ ಎಂದು ಪ್ರಶಂಸೆ ವ್ಯಕ್ತವಾಗಿತ್ತು.

ಆದರೆ ಗುಜರಾತ್‌ನಲ್ಲಿ 23 ವರ್ಷಗಳಿಂದ ಧಾರ್ಮಿಕ ದ್ವೇಷದ ಆಧಾರದ ಮೇಲೆ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ, ಇದನ್ನು ಸಹಿಸಲಾಗದೆ ಶಾಲೆಯವರು ಬಕ್ರೀದ್ ಆಚರಣೆ ಮಾಡಿ ಮುಸ್ಲಿಮೇತರ ವಿದ್ಯಾರ್ಥಿಗಳನ್ನು ‘ಟೋಪಿ’ ಧರಿಸುವಂತೆ ಮಾಡಿದ್ದು ಘೋರ ಅಪರಾಧವೆಂದು ಹೇಳಿ, ಆ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಜಿಲ್ಲಾ ಪ್ರಧಾನ ಶಿಕ್ಷಣಾಧಿಕಾರಿ ಸಂಜಯ್ ಪರ್ಮಾರ್ ಮೂಲಕ ವಜಾಗೊಳಿಸಿದ್ದಾರೆ.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ಕಛ್ ಜಿಲ್ಲಾ ಪ್ರಾಥಮಿಕ ಶಿಕ್ಷಣ ಅಧಿಕಾರಿ ಸಂಜಯ್ ಪರ್ಮಾರ್, ‘ಮುಸ್ಲಿಮರು ಧರಿಸುವ ‘ಇಸ್ಲಾಮಿಕ್ ಟೋಪಿ’ ಧರಿಸಲು ಹಿಂದೂ ವಿದ್ಯಾರ್ಥಿಗಳಿಗೆ ಹೇಳುವುದು ಕೀಳು ಮಟ್ಟದ ಕೃತ್ಯ’ ಎಂದು ಮುಂದೇನು ಹೇಳದೆ ಸುದ್ದಿಗಾರರಿಂದ ಜಾರಿಕೊಂಡರು.

ದೇಶ ರಾಜಕೀಯ

“ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ನಾಗರಿಕ ಸಂಹಿತೆ ಜಾರಿಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತಮ್ಮ ಪಕ್ಷದ ವಿರೋಧವಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ ಹೇಳಿದ್ದಾರೆ. “ಏಕರೂಪ ನಾಗರಿಕ ಸಂಹಿತೆಯನ್ನು ಈಗಾಗಲೇ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅದನ್ನು ಹೇರುವುದನ್ನು ಸಂವಿಧಾನ ಬೆಂಬಲಿಸುವುದಿಲ್ಲ. ಯುಸಿಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕಿತ್ತು.

ನಮ್ಮ ಪಕ್ಷ (ಬಿಎಸ್‌ಪಿ) ಯುಸಿಸಿ ಅನುಷ್ಠಾನಕ್ಕೆ ವಿರುದ್ಧವಾಗಿಲ್ಲ; ಆದರೆ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಪ್ರಯತ್ನಿಸುತ್ತಿರುವ ವಿಧಾನವನ್ನು ನಾವು ಬೆಂಬಲಿಸುವುದಿಲ್ಲ. ಈ ವಿಷಯವನ್ನು ರಾಜಕೀಯಗೊಳಿಸುವುದು ಮತ್ತು ದೇಶದಲ್ಲಿ ಯುಸಿಸಿಯನ್ನು ಬಲವಂತವಾಗಿ ಜಾರಿಗೊಳಿಸುವುದು ಸರಿಯಲ್ಲ.

ಪ್ರತಿಯೊಂದು ಸಂದರ್ಭದಲ್ಲೂ ಒಂದೇ ಕಾನೂನು ಎಲ್ಲಾ ಧರ್ಮದ ಜನರಿಗೆ ಅನ್ವಯಿಸಿದರೆ, ಅದು ದೇಶವನ್ನು ಬಲಪಡಿಸುತ್ತದೆ ಎಂದು ಬಹುಜನ ಸಮಾಜ ಪಕ್ಷದ ನಾಯಕರು ಒತ್ತಿ ಹೇಳಿದ್ದಾರೆ” ಎಂದು ಹೇಳಿದ್ದಾರೆ. ಜುಲೈ 3 ರಂದು ಏಕರೂಪ ನಾಗರಿಕ ಸಂಹಿತೆಯ ಸಂಸದೀಯ ಸ್ಥಾಯಿ ಸಮಿತಿಯ ಚರ್ಚೆಗೆ ಮುನ್ನ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ದೇಶ ರಾಜಕೀಯ

ಜುನಾಗಢ್: ಗುಜರಾತ್‌ನ ಜುನಾಗಢ್‌ನಲ್ಲಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ, ಅಕ್ರಮವಾಗಿ ದರ್ಗಾವನ್ನು ನಿರ್ಮಿಸಲಾಗಿದೆ ಎಂದು ಹೇಳಿಕೊಂಡಿರುವ ಮುನ್ಸಿಪಲ್ ಕಾರ್ಪೊರೇಷನ್, ಅದನ್ನು ಕೆಡವಲು ಮುಂದಾಗಿ ನೋಟಿಸ್‌ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ, ಘರ್ಷಣೆಗಳು ಭುಗಿಲೆದ್ದ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಮತ್ತು ಉಪ ಪೊಲೀಸ್ ಅಧೀಕ್ಷಕರು ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ, ಗುಜರಾತ್‌ನ ಜುನಾಗಢದಲ್ಲಿ ನಡೆದ ಹಿಂಸಾಚಾರದ ವೇಳೆ ಕಲ್ಲು ತೂರಾಟ ನಡೆಸುತ್ತಿದ್ದ ಅಪ್ರಾಪ್ತ ವಯಸ್ಕರ ಮೇಲೆ, ಏಳು ದಿನಗಳೊಳಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಸೂಚಿಸಿದೆ. ಶುಕ್ರವಾರ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಅಪ್ರಾಪ್ತ ವಯಸ್ಕರು ಭಾಗವಹಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಭಾನುವಾರ ಜುನಾಗಢ್ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದೆ.

ಪೊಲೀಸ್ ವರಿಷ್ಠಾಧಿಕಾರಿಗೆ (SP) ಬರೆದ ಪತ್ರದಲ್ಲಿ ವೀಡಿಯೊವನ್ನು ಉಲ್ಲೇಖಿಸಲಾಗಿದೆ ಮತ್ತು ಹಿಂಸಾಚಾರದ ಸಂದರ್ಭದಲ್ಲಿ ಅನೇಕ ಅಪ್ರಾಪ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ನೋಡಲಾಗಿದೆ ಎಂದು ಹೇಳಲಾಗಿದೆ. ದರ್ಗಾವನ್ನು ಧ್ವಂಸಗೊಳಿಸುವ ಸೂಚನೆಯನ್ನು ಹೊರ ಹಾಕಿದ ನಂತರ, ಕನಿಷ್ಠ 200-300 ಜನರು ದರ್ಗಾದ ಸುತ್ತಲೂ ಜಮಾಯಿಸಿದ್ದರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಿದರು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಗುಜರಾತ್ ಜುನಾಗಢ ಪ್ರದೇಶದಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ವಿಚಾರದಲ್ಲಿ ಗಲಭೆ: ಓರ್ವ ಸಾವು!

NCPCRನ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಎಸ್‌ಪಿಗೆ ಬರೆದ ಪತ್ರದಲ್ಲಿ ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಏಳು ದಿನಗಳೊಳಗೆ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಜೊತೆಗೆ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 83(2) ಮತ್ತು 75ರ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಬಾಲಾಪರಾಧಿ ಕಾಯಿದೆಯ ಸೆಕ್ಷನ್ 83(2) ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು, ಮಕ್ಕಳನ್ನು ಬಳಸಿಕೊಳ್ಳುವ ಯಾವುದೇ ವಯಸ್ಕರು ಅಥವಾ ವಯಸ್ಕ ಗುಂಪುಗಳಿಗೆ ಸುಮಾರು ಏಳು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆಯನ್ನು ವಿಧಿಸುತ್ತದೆ. ಅದೇ ಕಾಯಿದೆಯ ಸೆಕ್ಷನ್ 75ರ ಅಡಿಯಲ್ಲಿ, ಒಬ್ಬ ವ್ಯಕ್ತಿಯು ಮಗುವಿನ ಮೇಲೆ ಆಕ್ರಮಣ, ಕೈಬಿಡುವುದು, ನಿಂದನೆ ಅಥವಾ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದಕ್ಕಾಗಿ ಶಿಕ್ಷಿಸಬಹುದು.

NCPCR ಎಸ್‌ಪಿಗೆ ತನಿಖೆಯನ್ನು ಪ್ರಾರಂಭಿಸಲು ಮತ್ತು ಸೆಕ್ಷನ್‌ಗಳನ್ನು ಉಲ್ಲಂಘಿಸುವ ಯಾರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೇಳಿದೆ ಮತ್ತು ಏಳು ದಿನಗಳಲ್ಲಿ ಕ್ರಮ-ತೆಗೆದುಕೊಂಡ ವರದಿಯನ್ನು ನೀಡುವಂತೆ ಸೂಚಿಸಿದೆ.

ಕ್ರೈಂ ರಿಪೋರ್ಟ್ಸ್ ದೇಶ

ಜುನಾಗಢ: ಜೂನ್ 14ರಂದು ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ಮಜೆವಾಡಿ ದರ್ವಾಜಾ ಬಳಿಯ ಮಸೀದಿಯೊಂದಕ್ಕೆ ಜಮೀನಿನ ಮಾಲೀಕತ್ವದ ಬಗ್ಗೆ ದಾಖಲೆಗಳನ್ನು ನೀಡುವಂತೆ ನೋಟಿಸ್ ನೀಡಿತ್ತು. ನೋಟಿಸ್‌ನಿಂದ ಕ್ಷೋಭೆಗೊಳಗಾದ ಸುಮಾರು 500-600 ಜನರು ಶುಕ್ರವಾರ ರಾತ್ರಿ ಧಾರ್ಮಿಕ ಕಟ್ಟಡದ ಬಳಿ ಜಮಾಯಿಸಿ ರಸ್ತೆಗಳನ್ನು ತಡೆದರು ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ತಿಳಿಸಿದ್ದಾರೆ.

ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ಸಲುವಾಗಿ, ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ನ ಕಾರ್ಯಚರಣೆಯನ್ನು ವಿರೋಧಿಸಿ, ಸ್ಥಳೀಯರ ಗುಂಪೊಂದು ಕಲ್ಲು ತೂರಾಟ ಮತ್ತು ವಾಹನಕ್ಕೆ ಬೆಂಕಿ ಹಚ್ಚಿದ ಕಾರಣ, ಉಂಟಾದ ಗಲಭೆಯಲ್ಲಿ ಗುಜರಾತಿನ ಜುನಾಗಢ ನಗರದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮತ್ತು ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದ ಮಜೆವಾಡಿ ದರ್ವಾಜಾ ಬಳಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ನಂತರ ಅಲ್ಲಿದ್ದ 174 ಜನರನ್ನು ಸುತ್ತುವರೆದು ಗಲಭೆ ನಡೆಯದಂತೆ ಎಚ್ಚರಿಕೆಯ ಕ್ರಮವನ್ನು ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ನಾಗರಿಕನ ಸಾವಿನ ಹಿಂದಿನ ನಿಖರವಾದ ಕಾರಣ ತಿಳಿದುಬರುತ್ತದೆ. ಆದರೆ, ಗುಂಪು ಎಸೆದ ಕಲ್ಲಿನಿಂದಲೇ ಆತ ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ಸ್ಥಳದಲ್ಲಿದ್ದ ಜುನಾಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರ ಸಿಬ್ಬಂದಿಗಳು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯ ಬಳಿಕ, ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರತಿಭಟನಾಕಾರರ ರಸ್ತೆ ತಡೆಯನ್ನು ತೆರವುಗೊಳಿಸಲಾಯಿತು. ಆದರೆ, ರಾತ್ರಿ 10.15ರ ಸುಮಾರಿಗೆ ಏಕಾ ಏಕಿ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಲಾಯಿತು ಎಂದು ಪೊಲೀಸರು ಹೇಳುತ್ತಾರೆ.

ಘೋಷಣೆಗಳನ್ನು ಕೂಗುತ್ತಾ, ದರ್ಗಾಗೆ ನೋಟಿಸ್ ನೀಡಿದ್ದಕ್ಕೆ ಆಕ್ರೋಶಗೊಂಡ ಕೆಲವರು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದರು. ಅಶಿಸ್ತಿನ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಲಾಠಿ ಚಾರ್ಜ್ ಮಾಡಿದರು. ಘಟನೆಯಲ್ಲಿ ಜುನಾಗಢ ಡಿವೈಎಸ್ಪಿ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

“ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಸಾವಿನ ಬಗ್ಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಪೊಲೀಸ್ ತಂಡಗಳ ಕೂಂಬಿಂಗ್ ಕಾರ್ಯಾಚರಣೆಯಲ್ಲಿ 174 ಜನರನ್ನು ಸುತ್ತುವರೆದು ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಘರ್ಷಣೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ಹೇಳಿದ್ದಾರೆ.

ದೇಶ

ಭಾರತದ ಹಲವು ರಾಜ್ಯಗಳಲ್ಲಿ ಮುಸ್ಲಿಮರ ವಿರುದ್ಧ ದಬ್ಬಾಳಿಕೆ ನಡೆಯುತ್ತಿದೆ ಎಂದು ಅಮೆರಿಕ ವರದಿಯನ್ನು ಪ್ರಕಟಿಸಿದೆ.

ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಎಂಬ ಶೀರ್ಷಿಕೆಯಡಿ ಕಳೆದ ವರ್ಷದ ವಾರ್ಷಿಕ ವರದಿಯನ್ನು ನಿನ್ನೆ ಅಮೆರಿಕ ವಿದೇಶಾಂಗ ಸಚಿವಾಲಯವು ಈ ವರದಿಯನ್ನು ಬಿಡುಗಡೆ ಮಾಡಿತು. ವರದಿಯಲ್ಲಿ ಭಾರತದ ಕೆಲವು ರಾಜ್ಯಗಳಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ ಎಂದು ಉಲ್ಲೇಖಿಸಿದೆ.

ಅಮೆರಿಕದ ಈ ಹೇಳಿಕೆ ಸಾಕಷ್ಟು ಕೋಲಾಹಲಕ್ಕೆ ಕಾರಣವಾದ ಹಿನ್ನಲೆಯಲ್ಲಿ, ಭಾರತವು ಅದನ್ನು ಸಾರಾಸಗಟಾಗಿ ತಳ್ಳಿಹಾಕಿದೆ. ಇದಲ್ಲದೆ, ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಸಿ, ‘ಸರಿಯಾದ ಮಾಹಿತಿ ಮತ್ತು ತಿಳುವಳಿಕೆಯ ಕೊರತೆಯಿಂದಾಗಿ ಅಮೆರಿಕ ಈ ಹೇಳಿಕೆಯನ್ನು ನೀಡಿದೆ’ ಎಂದು ಕೇಂದ್ರ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 

“Religious freedom conditions in India are taking a drastic turn downward, with national and various state governments tolerating widespread harassment and violence against religious minorities. The BJP-led government enacted the Citizenship (Amendment) Act (CAA), which provides a fast track to Indian citizenship only for non-Muslim migrants from Afghanistan, Bangladesh, and Pakistan already residing in India. This potentially exposes millions of Muslims to detention, deportation and statelessness when the government completes its planned nationwide National Register of Citizens”. – USCIRF

ರಾಜಕೀಯ

ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಮತದಾರರ ಪಾತ್ರವನ್ನು ಗುರುತಿಸಿ ಸೂಕ್ತ ಸ್ಥಾನ – ಮಾನಗಳನ್ನು ನೀಡಲು ಕರ್ನಾಟಕ ಮುಸ್ಲಿಮ್ ಯುನಿಟಿ ಒತ್ತಾಯ.

ಈ ಭಾರಿ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬಹಳ ಮುತುವರ್ಜಿಯಿಂದ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಕಾಂಗ್ರೆಸ್ಸಿನೊಂದಿಗೆ ಮುಸ್ಲಿಂ ಸಮುದಾಯಕ್ಕೆ ಬಹಳಷ್ಟು ನಿರೀಕ್ಷೆಗಳಿವೆ

2ಬಿ ಮೀಸಲಾತಿ ಪರಿಹಾರ ಮುಂತಾದ ಹಲವು ಬೇಡಿಕೆಗಳು ಇವೆ. ಇದೆಲ್ಲವನ್ನೂ ಪರಿಹರಿಸುವುದು ಕಾಂಗ್ರೆಸ್ಸಿನ ಜವಾಬ್ದಾರಿಯಾಗಿದೆ. ಕರ್ನಾಟಕದಲ್ಲಿ ದಲಿತರ ನಂತರ ಎರಡನೇ ಅತಿ ದೊಡ್ಡ ಮತದಾರರನ್ನು ಹೊಂದಿರುವ ಮುಸ್ಲಿಮ್ ಸಮುದಾಯಕ್ಕೆ ಒಂದು ಪಕ್ಷವನ್ನು ಜಯಿಸಲಿಕ್ಕೂ ಅಥವಾ ಸೋಲಿಸಲಿಕ್ಕೂ ಸಾಧ್ಯವೆಂಬ ಸತ್ಯ ಈ ಚುನಾವಣೆಯಲ್ಲಿ ಸಾಬೀತಾಗಿದೆ. ಕರ್ನಾಟಕದ ಮುಸ್ಲಿಮ್ ಸಮುದಾಯವು ಇದೀಗ ರಾಜಕೀಯವಾಗಿ ಅತ್ಯಂತ ಪ್ರಬುದ್ಧವಾಗಿದೆ. ಆದ್ದರಿಂದ ಈ ಸತ್ಯವನ್ನು ಅರಿತು ಕಾಂಗ್ರೆಸ್ ಪಕ್ಷ / ಸರ್ಕಾರ ಮುಸ್ಲಿಮ್ ಸಮುದಾಯದ ಸಾಮಾಜಿಕ ನ್ಯಾಯದ ಬೇಡಿಕೆಗಳನ್ನು ಈಡೇರಿಸುವ ಯೋಜನೆಗಳನ್ನು ಮಾಡಿದರೆ ಮಾತ್ರ ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಜಯಗಳಿಸಬಹುದು. ಕಾಂಗ್ರೆಸ್ಸಿನ ನೇತಾರರು ಇದರ ಬಗ್ಗೆ ವಿಶೇಷವಾಗಿ ಚಿಂತಿಸಬೇಕಾಗಿದೆ.

ಕರ್ನಾಟಕದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಕಳೆದ ನಾಲ್ಕು ವರ್ಷದಲ್ಲಿ  ಸಾಕಷ್ಟು ನೋವು, ಅನ್ಯಾಯ, ಹಿಂಸೆ ಅನುಭವಿಸಿರುತ್ತಾರೆ. ಮಹಿಳೆಯರ ಶಿಕ್ಷಣದ ವಿಚಾರ (ಹಿಜಾಬ್) ದಲ್ಲಿ ಗೊಂದಲವನ್ನು ಸೃಷ್ಠಿ ಮಾಡಲಾಗಿತ್ತು. ದೇವಸ್ಥಾನ ಪ್ರದೇಶದಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಸಂಘಿಗಳಿಂದ ತಾಕೀತು ಮಾಡಲಾಗಿತ್ತು. ಅನಗತ್ಯವಾಗಿ ಗೋವು ಸಂರಕ್ಷಕರ ಹೆಸರಿನಲ್ಲಿ ಅನೈತಿಕ ಪೋಲಿಸ್ ಗಿರಿ ಮಾಡಲಾಗಿತ್ತು. ಲವ್‌ ಜೀಹಾದ್‌ ಹೆಸರಲ್ಲಿ ಮುಸ್ಲಿಮ್ ಯುವಕ/ಯುವತಿಯರ ಮೇಲೆ ವಿನಾ ಕಾರಣ ದೌರ್ಜನ್ಯ ಮಾಡಲಾಗುತಿತ್ತು. 4% ಮೀಸಲಾತಿಯನ್ನು ರದ್ದುಗೊಳಿಸಿ, ಲಿಂಗಾಯತರಿಗೆ ಮತ್ತು ಒಕ್ಕಲಿಗರಿಗೆ ಮರುಹಂಚಿಕೆ ಮಾಡಿ, ಮುಸ್ಲಿಮರನ್ನು ಇ ಡಬ್ಲ್ಯೂಎಸ್ ಕೋಟಾಗೆ ವರ್ಗಾವಣೆಮಾಡಿ ಗೊಂದಲವನ್ನು ಸೃಷ್ಠಿಸಿತು. ಗಣನೀಯವಾಗಿ ಅಲ್ಪಸಂಖ್ಯಾತ ವಿಧ್ಯಾರ್ಥಿ ವೇತನವನ್ನು ಕಡಿತ ಗೋಳಿಸಿ ಸುಮಾರ 6 ಲಕ್ಷಕ್ಕೂ ಹೆಚ್ಚು ಮಕ್ಕಳ ವಿಧ್ಯಾರ್ಥಿ ವೇತನದಿಂದ ವಂಚನೆ ಮಾಡಿತು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಗೂ ನಿಗಮದಿಂದ ಜಾರಿಯಲ್ಲಿದ್ದ ಯೋಜನೆಗಳನ್ನು ದ್ವೇಶದಿಂದ ರದ್ದುಗೊಳಿಸಿತು.

ಅನುದಾನ ಕಡಿತಗೊಳಿಸಿ ಮುಸ್ಲಿಂ ಸಮುದಾಯವನ್ನು ಹೆದರಿಕೆಯಲ್ಲಿಡುವ ಪ್ರಯತ್ನವನ್ನು ಸರ್ಕಾರದಿಂದಲೇ ಮಾಡಲಾಗಿತ್ತು. ಸಿ.ಎ.ಎ. ಮತ್ತು ಎನ್.ಆರ್.ಸಿ ಹೋರಾಟದಲ್ಲಿ ಮಂಗಳೂರಿನಲ್ಲಿ ಗೋಲಿಬಾರ್ ನಡೆಸಿ ಮುಗ್ದ ಮುಸ್ಲಿಮರ ಸಾವಿಗೆ ಕಾರಣವಾಯಿತು. ಮಂಗಳೂರು ಹಾಗೂ ನರಗುಂದದಲ್ಲಿ ಕೋಮುದ್ವೇಶದ ಕಾರಣ ಕೊಲೆಗಳಾದರೂ ಕನಿಷ್ಠ ಮಾನವಿಯತೆ ತೋರದಿರುವದು ಮತ್ತು ಅವರಿಗೆ ಸೂಕ್ತ ಪರಿಹಾರ ನೀಡದೆ ತಾರತಮ್ಯ ಮಾಡಿರುವದು ಮುಸ್ಲಿಮ್ ಭೇಗುದಿಗೆ ಕಾರಣವಾಗಿತ್ತು. ಇದೆಲ್ಲವನ್ನು ಸೂಕ್ಷ್ಮವಾಗಿ ನೋಡುತ್ತಿದ್ದ ಮುಸ್ಲಿಮ್ ಸಮುದಾಯಕ್ಕೆ 2023ರ ಸಾರ್ವತ್ರಿಕ ಚುನಾವಣೆ ವರವಾಗಿ ಬಂದಿತು.

ಈ ಮೇಲಿನ ಎಲ್ಲ ಬೆಳವಣಿಗೆಗಳನ್ನ ಹತ್ತಿರದಲ್ಲಿ ಕಂಡಿದ್ದ ಮುಸ್ಲಿಮರಲ್ಲಿ ಸಾಕಷ್ಟು ಜಾಗೃತಿ ಉಂಟಾಗಿತ್ತು. ಹೀಗಾಗಿ ರಾಜ್ಯದ ಮುಸ್ಲಿಮ್ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಇಡಿಯಾಗಿ ಬೆಂಬಲಿಸಿ ಶೇ.95ರಷ್ಟು ಪೂಲಿಂಗ್ ಮಾಡಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲು ಮುಸ್ಲಿಮರು ಬಹುಮುಖ್ಯ ಪಾತ್ರವನ್ನುವಹಿಸಿದರು. ಇದಕ್ಕಾಗಿ ಕರ್ನಾಟಕ ಮುಸ್ಲಿಮ್ ಯೂನಿಟಿಯು, ಸಮುದಾಯದ ಎಲ್ಲಾ ಮುಖಂಡರುಗಳಿಗೆ, ಉಲೇಮಾಗಳಿಗೆ, ಚಿಂತಕರಿಗೆ ಹಾಗೂ ರಾಜ್ಯದ ಸಮಸ್ತ ಮುಸ್ಲಿಮ್ ಮತದಾರರಿಗೆ ಅಭಿನಂದಿಸುತ್ತದೆ.

ಕರ್ನಾಟಕದಲ್ಲಿ ಮುಸ್ಲಿಂ ಮತಗಳು ವಿಭಜನೆಯಾಗದೆ ಇಂದು ಬಹುಮತದ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದಲ್ಲಿ 9  ಮುಸ್ಲಿಂ ಅಭ್ಯರ್ಥಿಗಳು ಗೆದ್ದು ಬಿಗಿದ್ದಾರೆ. ಇವರಲ್ಲಿ ಬಹುತೇಕರಿಗೆ ಸರ್ಕಾರದಲ್ಲಿ ಪ್ರಾತಿನಿಧ್ಯ ಸಿಗಬೇಕು ಎಂಬುದು ಕರ್ನಾಟಕ ಮುಸ್ಲಿಮ್ ಯೂನಿಟಿಯ ಹೊಕ್ಕೋತ್ತಾಯವಾಗಿದೆ. ಹಾಗೆಯೇ ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಗಳಲ್ಲಿ ಮುಸ್ಲಿಮರಿಗೆ ಸೂಕ್ತ ಆಧ್ಯತೆ, ಸರ್ಕಾರದ ಎಲ್ಲಾ ಪ್ರಮುಖ ನಿಗಮ / ಮಂಡಳಿಗಳಲ್ಲಿ ಸೂಕ್ತ ಆಧ್ಯತೆ ನೀಡಬೇಕು, ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ನಿಗಮ / ಮಂಡಳಿಗಳನ್ನು ಸಂಪೂರ್ಣ ಹಾಗು ಖಡ್ದಾಯವಾಗಿ ಭರ್ತಿಮಾಡ ಬೇಕು. ಅದರಲ್ಲೂ ವಿಶೇಷವಾಗಿ ರಾಜ್ಯಾದ್ಯಂತ ಚುನಾವಣಾ ಪ್ರವಾಸ ಕೈಕೊಂಡು, ಮುಸ್ಲಿಮರ ಮತಗಳನ್ನು ಕ್ರೋಢೀಕರಿಸಿದ, ಕರ್ನಾಟಕ ಮುಸ್ಲಿಮ್ ಜನನಾಯಕ, ಪ್ರಖರ ವಾಗ್ಮಿ, ಅರ್ಹ, ಅಹಿಂದ ಮುಖಂಡರೂ ಆಗಿರುವ ಶ್ರೀ.ಬಿ.ಜಡ್.ಜಮೀರ್ ಅಹ್ಮದ್ ಖಾನ್ ರವರಿಗೆ  ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿ, ಕಾಂಗ್ರೆಸ್ ಪಕ್ಷದೊಂದಿಗೆ ನಿಂತಿರುವ ಸಮುದಾಯದ ಉಪಕಾರ ಸ್ಮರಿಸಬೇಕು ಎಂದು ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಮುಸ್ಲಿಮ್ ಯುನಿಟಿ ಸಂಘಟನೆ ಒತ್ತಾಯ ಮಾಡುತ್ತಿದೆ.

ಗೆಲುವಿನ ಸಂಭ್ರಮದಲ್ಲಿ ಶೇ.95ರಷ್ಟು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವ ಮುಸ್ಲಿಮ್ ಸಮಾಜವನ್ನು ಮರೆಯಬಾರದು. ಮುಸ್ಲಿಮ್ ಸಮುದಾಯಕ್ಕೆ ನೀಡಿರುವ 2ಬಿ ಮೀಸಲಾತಿಯ ಪ್ರಕರಣವನ್ನು ತಕ್ಷಣಕ್ಕೆ ಬಗೆಹರಿಸಬೇಕು. ದಲಿತರಿಗೆ ನೀಡಿರುವ ಭರವಸೆಯನ್ನೂ ಈಡೇರಿಸಬೇಕು ಎಂದು ಕರ್ನಾಟಕ ಮುಸ್ಲಿಂ ಯೂನಿಟಿ ಒತ್ತಾಯಿಸುತ್ತಿದೆ. ಅಲ್ಲದೆ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಸಮುದಾಯದ ಒಂಬತ್ತು ಅಭ್ಯರ್ಥಿಗಳಿಗೆ ಹಾಗೂ ರಾಜ್ಯದ ಧಿಮಂತ ನಾಯಕ ಶ್ರೀ.ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಶ್ರೀ. ಡಿ.ಕೆ. ಶಿವಕುಮಾರ್ ರವರನ್ನು ಈ ಮೂಲಕ ಕೆ.ಎಮ್.ಯು ಅಭಿನಂದಿಸುತ್ತಿದೆ.

ರಾಜಕೀಯ

ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ಯನ್ನು ಆಧರಿಸಿದೆ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಬುನಾದಿಯೇ ಅತ್ಯಂತ ಅಸ್ಥಿರವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ರಾಜ್ಯ ಬಿಜೆಪಿ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ.

‘ಮುಸ್ಲಿಂಮರು ಕೇವಲ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಪರಿಗಣಿಸಿತ್ತು’ ಎಂಬ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಹೇಳಿಕೆ ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ‘ಮುಸ್ಲಿಂಮರು ಸಾಮಾಜಿಕವಾಗಿಯೂ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಹೇಳಿತ್ತು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಯನ ಆಧರಿತವಾದ ವರದಿ, ವಿಶ್ವಾಸಾರ್ಹ ಅಂಕಿ-ಅಂಶಗಳ ಸಂಗ್ರಹ ಹೀಗೆ ಯಾವುದೇ ತಯಾರಿ ಇಲ್ಲದೆ ಬಿಜೆಪಿ ಸರ್ಕಾರ ಅತ್ಯವಸರದಿಂದ ಮುಸ್ಲಿಂ ಮೀಸಲಾತಿ ರದ್ದುಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳಿರಲಿಲ್ಲ.

ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಉಳಿಸಿಕೊಂಡ ಶೇಕಡಾ 4 ರಷ್ಟು ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿಕೆ ಮಾಡಿರುವುದರಿಂದ ಮುಸ್ಲಿಂ ಮೀಸಲಾತಿ ರದ್ದತಿ ಆದೇಶ ರದ್ದಾದರೆ ಆ ಎರಡೂ ಸಮುದಾಯಗಳಿಗೆ ನೀಡಿರುವ ಹೆಚ್ಚುವರಿ ಮೀಸಲಾತಿಯೂ ರದ್ದಾಗುತ್ತದೆ.

ಒಳ ಮೀಸಲಾತಿ ಮತ್ತು ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ಪಕ್ಷದ ವಿರೋಧ ಇಲ್ಲ. ಆದರೆ ಕಲ್ಪಿತ ಸುಳ್ಳುಗಳ ಮೂಲಕ ಬಿಜೆಪಿ ಸರ್ಕಾರ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯಲು ಹೊರಟಿದೆ.

ಒಟ್ಟು ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇಕಡ 75ಕ್ಕೆ ಹೆಚ್ಚಿಸಿ ಪ್ರತಿಯೊಂದು ಜಾತಿಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವುದೊಂದೇ ಈಗಿನ ಮೀಸಲಾತಿ ವಿವಾದಕ್ಕೆ ಇರುವ ಶಾಶ್ವತ ಪರಿಹಾರ.

ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಎಲ್ಲ ಜಾತಿ ಜನರಿಗೆ ಅವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಲು ಖಂಡಿತ ಕ್ರಮಕೈಗೊಳ್ಳುತ್ತೇವೆ. ಯಾರ ಮೀಸಲಾತಿಯನ್ನೂ ರದ್ದುಗೊಳಿಸದೆ ಸರ್ವಸಮ್ಮತ ಪರಿಹಾರ ನೀಡುತ್ತೇವೆ.

ಮೀಸಲಾತಿಗೆ ಶೇಕಡಾ 50ರ ಮಿತಿ ಎನ್ನುವುದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗವೇ ಹೊರತು ಅದು ಸಾಂವಿಧಾನಿಕವಾದುದೇನಲ್ಲ. ವಿಶೇಷ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬಹುದೆಂದು ಅದೇ ಆದೇಶದಲ್ಲಿ ಹೇಳಲಾಗಿದೆ.

ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಆಯೋಗ ಮನೆಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿಯನ್ನು ಹೆಚ್ಚಿಸಿದರೆ ನ್ಯಾಯಾಲಯ ಕೂಡಾ ಮಾನ್ಯತೆ ನೀಡಲಿದೆ.

ಕೇಂದ್ರ ಬಿಜೆಪಿ ಸರ್ಕಾರ ಈಗಾಗಲೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು.