ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Nanjangud Archives » Dynamic Leader
October 23, 2024
Home Posts tagged Nanjangud
ರಾಜ್ಯ

ಡಿ.ಸಿ.ಪ್ರಕಾಶ್

ಮೈಸೂರು: ಜಿಲ್ಲೆಯ ಈ ದೇವಾಲಯದಲ್ಲಿ ಕಂಡುಬಂದಿದೆ ಅತ್ಯಂತ ಪುರಾತನ ತಮಿಳು ಶಾಸನ. ಈ ಶಾಸನವು ತಮಿಳು ಭಾಷೆಯಲ್ಲಿದ್ದು ಚೋಳರ ಕಾಲದ ಇತಿಹಾಸವನ್ನು ಮುಂದಿಡುತ್ತದೆ. ಈ ಶಾಸನವು (Inscription) ನಂಜನಗೂಡಿನ ಸಿಂಧುವಳ್ಳಿ ಗ್ರಾಮದ ಪುರಾತನ ಶಂಕರೇಶ್ವರ ಹಾಗೂ ದೇವಿರಮ್ಮ ದೇವಾಲಯದಲ್ಲಿ ಕಂಡುಬಂದಿದೆ. ಇದು ಗ್ರಾಮದ ಪುರಾತನ ಹಾಗೂ ದೇವಾಲಯದ ಹಿನ್ನೆಲೆಯನ್ನು ಹೇಳುತ್ತದೆ.

ಇಲ್ಲಿ ದೊರೆತಿರುವ ಶಾಸನದ ಬಗ್ಗೆ ಇತಿಹಾಸದ ಎಪಿಗ್ರಫಿ ಪುಸ್ತಕದಲ್ಲಿ ವಿವರಣೆ ನೀಡಲಾಗಿದೆ. ಇದರಲ್ಲಿ ಸಿಂಧುವಳ್ಳಿ ಗ್ರಾಮದ ಇತಿಹಾಸ ಏನು ಅನ್ನೋದನ್ನ ತೋರಿಸುತ್ತದೆ. ಈ ಶಾಸನವು 1106-07ರ ಚೋಳ ಮನೆತನದ ಸುಪ್ರಸಿದ್ದ ಕೊನೆಯ ರಾಜನಾದ ಒಂದನೇ ಕುಲೋತುಂಗ ಚೋಳನ ಆಳ್ವಿಕೆಯ ಕಾಲದ ಶಾಸನವಾಗಿದೆ.

ಈ ಶಾಸನವು ತಮಿಳು ಭಾಷೆಯಲ್ಲಿ ಬರೆಯಲ್ಪಟ್ಟಿದ್ದು, ಇದೊಂದು 15 ಸಾಲುಗಳನ್ನು ಹೊಂದಿರುವ ಸಾಮಾಜಿಕ ಮತ್ತು ಧಾರ್ಮಿಕ ಅಂಶಗಳನ್ನು ಒಳಗೊಂಡ ಶಾಸನವಾಗಿದೆ.

ಈ ತಮಿಳು ಶಾಸನವು ಕುಲೋತ್ತುಂಗನ ಆಳ್ವಿಕೆಯ 37ನೇ ವರ್ಷವನ್ನು ಉಲ್ಲೇಖಿಸುತ್ತದೆ. ಗಂಗೈಕೊಂಡ ಚೋಳನಾಡಿನ ಕರೆ-ನಾಡಿನ ಹಳ್ಳಿಯ ಹೆಸರು ಕಳೆದುಹೋಗಿದೆ. ಶಾಸನದಲ್ಲಿ ಉಲ್ಲೇಖಿತವಾಗಿರುವಂತಹ ದೇವಾಲಯ ಮತ್ತು ಕೆರೆ ಎರಡು ಕೂಡ ಸಿಂಧುವಳ್ಳಿ ಗ್ರಾಮದಲ್ಲಿ ಇರುವುದು ಗಮನಾರ್ಹ.

ರಾಜಕೀಯ

ಮೈಸೂರು: ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ಕೃತಜ್ಞತಾ ಸಮರ್ಪಣಾ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ನಾಡಿನ ಜನತೆಗೆ ನಾನು ಕೃತಜ್ಞ.

ಇದು ನನ್ನ ಕೊನೆಯ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ.

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ. ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಎರಚಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ” ಎಂದರು.