ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
NDA Government Archives » Dynamic Leader
October 16, 2024
Home Posts tagged NDA Government
ರಾಜಕೀಯ

ಪಾಟ್ನಾ: ಕೇಂದ್ರ ಸರ್ಕಾರ ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂದು ಸಂಯುಕ್ತ ಜನತಾ ದಳ (ಜೆಡಿಯು) ನಿರ್ಣಯ ಅಂಗೀಕರಿಸಿದೆ.

ಹೊಸದಾಗಿ ಆಯ್ಕೆಯಾದ ಲೋಕಸಭೆಯಲ್ಲಿ ಸಂಯುಕ್ತ ಜನತಾದಳದಿಂದ 12 ಸಂಸದರಿದ್ದಾರೆ. ಅವರು ಬಿಜೆಪಿ ನೇತೃತ್ವದ  ಎನ್ ಡಿಎ ಸರ್ಕಾರದ ಭಾಗವಾಗಿದ್ದಾರೆ. ಇಂದು (ಜೂನ್ 29) ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಯುಕ್ತ ಜನತಾದಳದ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರ ಸಚಿವರು, ಸಂಯುಕ್ತ ಜನತಾದಳ ಮುಖಂಡರು ಸೇರಿದಂತೆ ಪಕ್ಷದ ಎಲ್ಲ ಸಂಸದರು ಉಪಸ್ಥಿತರಿದ್ದರು. ಸಭೆಯಲ್ಲಿ ಕೇಂದ್ರ ಸರ್ಕಾರ ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂಬ ನಿರ್ಣಯವನ್ನು ಅಂಗೀಕರಿಸಲಾಯಿತು. ಆಡಳಿತಾರೂಢ ಎನ್ ಡಿಎ ಸರ್ಕಾರಕ್ಕೆ ಸಂಯುಕ್ತ ಜನತಾದಳ ಬೆಂಬಲ ನೀಡುತ್ತಿರುವುದರಿಂದ ಕೇಂದ್ರ ಸರ್ಕಾರ ಬೇಡಿಕೆ ಈಡೇರಿಸುವುದೇ? ಎಂಬುದನ್ನು ಕಾದುನೋಡಬೇಕಾಗಿದೆ.

ದೇಶ

ನವದೆಹಲಿ: ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಲಾಗಿದೆ.

ಈ ಕುರಿತು ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು “ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು” ಎಂದು ಹೇಳಿದ್ದಾರೆ.

I am deeply grateful to the Hon’ble Prime Minister, Shri.Narendramodi for appointing me as the Minister of Steel and Heavy Industries in the National Democratic Alliance (NDA) government, in its third consecutive term.

ದೇಶ

“ನನ್ನಂತಹ ಬಡ ಮತ್ತು ಹಿಂದುಳಿದ ಕುಟುಂಬದಲ್ಲಿ ಹುಟ್ಟಿದ ವ್ಯಕ್ತಿ ಈ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುವುದಾದರೇ ಅದಕ್ಕೆ ಈ ಸಂವಿಧಾನವೇ ಕಾರಣ” – ನರೇಂದ್ರ ಮೋದಿ

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚುನಾವಣೆಯಲ್ಲಿ 292 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ. ತರುವಾಯ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ನಾಯಕರಾಗಿ ಪುನರಾಯ್ಕೆಯಾದ ಮೋದಿ, ತಮ್ಮನ್ನು ಬೆಂಬಲಿಸುವ ಸಂಸದರ ಪಟ್ಟಿಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಹಕ್ಕನ್ನು ಪಡೆದರು. ಅದರಂತೆ ಜೂನ್ 9 ರಂದು ಸಂಜೆ 6 ಗಂಟೆಗೆ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ.

ಏತನ್ಮಧ್ಯೆ, ಹೊಸ ಸಂಸತ್ತಿನಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಸದರು ಮತ್ತು ಪಕ್ಷದ ನಾಯಕರು ಭಾಗವಹಿಸಿದ ಸಭೆ ನಡೆಯಿತು. ಇದರಲ್ಲಿ ಭಾಗವಹಿಸಿದ ಮೋದಿ, ತಲೆಯ ಮೇಲೆ ಭಾರತೀಯ ಸಂವಿಧಾನದ ಪುಸ್ತಕವನ್ನು ಮುಟ್ಟಿ ನಮನ ಸಲ್ಲಿಸಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.

ಈ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಸಾಮಾಜಿಕ ಮಾಧ್ಯಮ ಪುಟದಲ್ಲಿ ಸಂವಿಧಾನ ಪುಸ್ತಕಕ್ಕೆ ನಮಸ್ಕರಿಸುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿ, “ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿದ ಉದಾತ್ತ ಮೌಲ್ಯಗಳನ್ನು ಎತ್ತಿಹಿಡಿಯಲು ನನ್ನ ಜೀವನದ ಪ್ರತಿ ಕ್ಷಣವನ್ನೂ ಮೀಸಲಿಡಲಾಗಿದೆ.

ನನ್ನಂತಹ ಬಡ ಮತ್ತು ಹಿಂದುಳಿದ ಕುಟುಂಬದಲ್ಲಿ ಹುಟ್ಟಿದ ವ್ಯಕ್ತಿ ಈ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುವುದಾದರೇ ಅದಕ್ಕೆ ಈ ಸಂವಿಧಾನವೇ ಕಾರಣ. ಇದು ದೇಶದ ಕೋಟ್ಯಾಂತರ ಜನರಿಗೆ ಆತ್ಮವಿಶ್ವಾಸ, ಶಕ್ತಿ ಮತ್ತು ಘನತೆಯನ್ನು ನೀಡುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಸಂಸತ್ತಿನ ಚುನಾವಣೆಗಳು ನಡೆದವು. ಈ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಪರಸ್ಪರ ಪೈಪೋಟಿ ನಡೆಸಿದ್ದವು.

ಕಳೆದ 4ರಂದು ಮತ ಎಣಿಕೆ ಕಾರ್ಯ ನಡೆಯಿತು. ಇದರಲ್ಲಿ ಬಿ.ಜೆ.ಪಿ 240 ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನು ಸಾದಿಸಿತು. ಸರ್ಕಾರ ರಚಿಸಲು ಅಗತ್ಯವಿರುವ 272 ಕ್ಕಿಂತ 32 ಸ್ಥಾನಗಳ ಕೊರತೆಯಿದ್ದರೂ ಎನ್ ಡಿಎ 292 ಸ್ಥಾನಗಳನ್ನು ಗೆದ್ದುಕೊಂಡಿತು.

ಇದರ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್ ಡಿಎ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವ ಪ್ರಕ್ರಿಯೆಗೆ ಮುಂದಾಯಿತು. ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. 17ನೇ ಲೋಕಸಭೆ ವಿಸರ್ಜನೆಯಾಗಿದೆ.

ಬಿಜೆಪಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಬ್ಬರೂ ಕೇಂದ್ರದಲ್ಲಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ, ಎನ್ ಡಿಎಗೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ನೇತೃತ್ವದ ಪಕ್ಷಗಳ ಬೆಂಬಲ ಅಗತ್ಯವಿದೆ. ಅದೇ ಸಂದರ್ಭದಲ್ಲಿ, ಅವರು ಕೂಡ ಮೈತ್ರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದರೂ ಕೆಲವು ಷರತ್ತುಗಳನ್ನು ವಿಧಿಸಿವೆ. ಇದರ ಪ್ರಕಾರ ಸಾರಿಗೆ, ಐಟಿ, ಕೃಷಿ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಜಲಸಂಪನ್ಮೂಲ ಒದಗಿಸುವಂತೆ ಚಂದ್ರಬಾಬು ನಾಯ್ಡು ಕೋರಿದ್ದಾರೆ ಎನ್ನಲಾಗಿದೆ.

ಅದೇ ರೀತಿ, ಬಿಹಾರ ಮುಖ್ಯಮಂತ್ರಿ ಮತ್ತು ಸಂಯುಕ್ತ ಜನತಾದಳದ ನಾಯಕ ನಿತೀಶ್ ಕುಮಾರ್ ಅವರು ಬಿಹಾರಕ್ಕೆ ವಿಶೇಷ ಸ್ಥಾನಮಾನ ಮತ್ತು ಕನಿಷ್ಠ ಸಾಮಾನ್ಯ ಕ್ರಿಯಾ ಯೋಜನೆ ರೂಪಿಸಲು ಷರತ್ತು ವಿಧಿಸುವ ಜೊತೆಗೆ, 3 ಕ್ಯಾಬಿನೆಟ್ ಸಚಿವರು, 2 ರಾಜ್ಯ ಸಚಿವರು ಒಟ್ಟು 5 ಕೇಂದ್ರ ಸಚಿವ ಸ್ಥಾನಗಳು ಬೇಕೆಂದು ನಿತೀಶ್ ಕುಮಾರ್ ಬಯಸಿದ್ದಾರೆ.

ಅದೇ ರೀತಿ 2 ಸಂಸದರನ್ನು ಹೊಂದಿರುವ ಜಾತ್ಯತೀತ ಜನತಾದಳ ಕೂಡ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಬಿಜೆಪಿಗೆ ಒತ್ತಡ ಹೇರುತ್ತಿದೆ. ಜೆಡಿಎಸ್ ಪಕ್ಷವು ಕೃಷಿ ಇಲಾಖೆಯನ್ನು ಕೇಳುತ್ತಿದೆ.

ಮೈತ್ರಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಕೂಡ ಷರತ್ತು ವಿಧಿಸಿದೆ ಎನ್ನಲಾಗಿದೆ. ಆ ಪಕ್ಷ ಬಿಹಾರದಲ್ಲಿ 5 ಕ್ಷೇತ್ರಗಳನ್ನು ವಶಪಡಿಸಿಕೊಂಡಿದೆ.

ಹೀಗಾಗಿ ಬಿಜೆಪಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಮುನ್ನವೇ ಸಮ್ಮಿಶ್ರ ಪಕ್ಷಗಳ ಬೆಂಬಲ ಪಡೆಯಲು ಇಂತಹ ಹಲವು ಸವಾಲುಗಳನ್ನು ಎದುರಿಸಬೇಕಾದ ಸ್ಥಿತಿಯಲ್ಲಿದೆ.