ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
News Archives » Page 2 of 11 » Dynamic Leader
October 23, 2024
Home Posts tagged News (Page 2)
ರಾಜಕೀಯ ರಾಜ್ಯ

ಬೆಂಗಳೂರು: ಅಲೆಮಾರಿ ಬುಡಕಟ್ಟುಗಳ ಮಹಾಸಭಾದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಬೇಟಿಮಾಡಿತು. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳು ಹಾಜರಿದ್ದರು.

ನಾಗರಿಕ ಸವಲತ್ತುಗಳನ್ನು ಒದಗಿಸುವ ಜೊತೆಗೆ ತಮ್ಮ ಸಮುದಾಯವನ್ನು ಮುಖ್ಯವಾನಿಹಿಗೆ ತರಲು ಅಗತ್ಯ ಆರ್ಥಿಕ ಹಾಗೂ ಸಾಮಾಜಿಕ ನೆರವು ನೀಡುವಂತೆ ನಿಯೋಗವು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿತು. ನಿಯೋಗದ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಆದಷ್ಟು ಬೇಗ ಬೇಡಿಕೆಗಳನ್ನು ನೆರವೇರಿಸಿ ಕೊಡುವುದಾಗಿ ಭರವಸ ನೀಡಿದರು ಎಂದು ತಿಳಿದು ಬಂದಿದೆ.

A delegation of the Mahasabha of Nomadic Tribes today met the Chief Minister Siddaramaiah and requested them to provide them with the necessary financial and social assistance to bring their community into the mainstream along with providing them with civic privileges. Representatives of more than 40 nomadic communities, led by CS Dwarkanath, former chairman of the Commission for Backward Classes, were present on behalf of the delegation.

ರಾಜಕೀಯ ರಾಜ್ಯ

ಬೆಂಗಳೂರು: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ.50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ.70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನಃ ಚಾಲನೆ ನೀಡಲಾಗುವುದು” ಎಂದು ಹೇಳಿದ್ದಾರೆ.

ದೇಶ ರಾಜಕೀಯ

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಚರಣ್ ಸಿಂಗ್ ಮುಂಬರುವ ಸಂಸತ್ ಚುನಾವಣೆಯಲ್ಲಿ 6ನೇ ಬಾರಿಗೆ ಸ್ಪರ್ಧಿಸುವುದಾಗಿ ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ. ಲೈಂಗಿಕ ಕಿರುಕುಳ ಆರೋಪದಲ್ಲಿ ಭಾಗಿಯಾಗಿರುವ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಚರಣ್ ಸಿಂಗ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಒಂದು ತಿಂಗಳಿಗೂ ಹೆಚ್ಚು ಸಮಯ ಕಳೆದಿದೆ. ಆದರೆ, ಆತನನ್ನು ಇನ್ನೂ ಬಂಧಿಸಿಲ್ಲ. ಆತನನ್ನು ಬಂಧಿಸಿದರೆ ಮಾತ್ರ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸುವುದಾಗಿ ಕಸ್ತಿ ಪಟುಗಳು ಹೇಳಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಪೂರ್ವ ಉತ್ತರ ಪ್ರದೇಶದ ತಮ್ಮ ಲೋಕಸಭಾ ಕ್ಷೇತ್ರ ಕೈಸರ್‌ಗಂಜ್‌ನಲ್ಲಿ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರು ಮೋದಿ ನೇತೃತ್ವದ ಬಿಜೆಪಿ ಸರ್ಕಾರದ 9 ವರ್ಷಗಳ ಸಾಧನೆಗಳನ್ನು ಪಟ್ಟಿ ಮಾಡಿ ಮಾತನಾಡಿದರು. “ದೇಶದಾದ್ಯಂತ ಗುಣಮಟ್ಟದ ರಸ್ತೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಮಿಲಿಟರಿ ಉಪಕರಣಗಳನ್ನು ಸ್ಥಳೀಯವಾಗಿ ನಿರ್ಮಿಸಲು ಪ್ರಧಾನಿ ಮೋದಿ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ. ಲೋಕಸಭೆ ಚುನಾವಣೆಯಲ್ಲಿ ಕೈಸರ್‌ಗಂಜ್ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುತ್ತೇನೆ” ಎಂದು ಹೇಳಿದರು. ಬ್ರಿಜ್ ಭೂಷಣ್ 6ನೇ ಅವಧಿಗೆ ಕೈಸರ್‌ಗಂಜ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂಬ ಸುದ್ದಿಯಿಂದ ಕುಸ್ತಿಪಟುಗಳು ಆಘಾತಕ್ಕೊಳಗಾಗಿದ್ದಾರೆ.

Will contest 2024 Lok Sabha polls from Kaiserganj: Brij Bhushan Singh

BJP MP and former WFI chief Brij Bhushan Sharan Singh held a road show and addressed a public meeting in his Lok Sabha constituency Kaiserganj in east Uttar Pradesh.

Bharatiya Janata Party (BJP) member of Parliament (MP) and former Wrestling Federation of India (WFI) chief, Brij Bhushan Sharan Singh, who is facing allegations of sexual harassment by women wrestlers, on Sunday asserted that he would contest the Lok Sabha polls from his parliamentary constituency Kaiserganj in east Uttar Pradesh again in 2024.

ದೇಶ ರಾಜಕೀಯ

ನವದೆಹಲಿ: ಭಾರತದ 100ಕ್ಕೂ ಹೆಚ್ಚು ಹಿಂದುಳಿದ ಜಿಲ್ಲೆಗಳಲ್ಲಿ ಜನರ ಜೀವನವನ್ನು ಸುಧಾರಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ವಾರಣಾಸಿಯಲ್ಲಿ ನಡೆಯುತ್ತಿರುವ ಜಿ20 ಸಚಿವರ ಸಭೆಯನ್ನು ಉದ್ದೇಶಿಸಿ ವಿಡಿಯೋ ಮೂಲಕ ಮಾತನಾಡಿದ ಪ್ರಧಾನಿ ಮೋದಿ ಈ ವಿಷಯವನ್ನು ಪ್ರಸ್ತಾಪಿಸಿದರು.

ಜಿ20 ಸಚಿವರ ಸಮಾವೇಶ ನಿನ್ನೆ (ಜೂನ್ 11) ಉತ್ತರಪ್ರದೇಶದ ವಾರಣಾಸಿಯಲ್ಲಿ ಆರಂಭವಾಗಿದೆ. ವಿದೇಶಾಂಗ ಸಚಿವ ಜೈಶಂಕರ್ ಮತ್ತು ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರು ಇದರಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು (ಜೂನ್ 12) ಜಿ20 ಸಚಿವರ ಸಭೆಯಲ್ಲಿ ಪ್ರಧಾನಿ ಮೋದಿ ವಿಡಿಯೋ ಮೂಲಕ ಮಾತನಾಡಿದರು.

“ಭಾರತದಲ್ಲಿ, ಡಿಜಿಟಲೀಕರಣವು ಕ್ರಾಂತಿಕಾರಿ ಬದಲಾವಣೆಯನ್ನು ತಂದಿದೆ. ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಲು ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣವು ಮುಖ್ಯವಾಗಿದೆ.

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ವಿಳಂಬ ಮಾಡದೆ ಇರುವುದು ನಮ್ಮ ಜವಾಬ್ದಾರಿ ಎಂದು ನಾನು ದೃಢವಾಗಿ ನಂಬುತ್ತೇನೆ. ಭಾರತದ 100ಕ್ಕೂ ಹೆಚ್ಚು ಹಿಂದುಳಿದ ಜಿಲ್ಲೆಗಳಲ್ಲಿ ಜನರ ಜೀವನವನ್ನು ಸುಧಾರಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ತಂತ್ರಜ್ಞಾನವನ್ನು ಪ್ರಜಾಪ್ರಭುತ್ವೀಕರಣ ಮಾಡುವುದು ಮುಖ್ಯವಾಗಿದೆ.

ನಮ್ಮ ಪ್ರಯತ್ನಗಳು ಸಮಗ್ರ, ನ್ಯಾಯೋಚಿತ ಮತ್ತು ಸಮರ್ಥನೀಯವಾಗಿರಬೇಕು. ಪಾಲುದಾರ ರಾಷ್ಟ್ರಗಳೊಂದಿಗೆ ತನ್ನ ಅನುಭವವನ್ನು ಹಂಚಿಕೊಳ್ಳಲು ಭಾರತ ಸಿದ್ಧವಾಗಿದೆ” ಎಂದು ಹೇಳಿದರು.

ಆಗ ಕಾಶಿಯ ಮಹತ್ವವನ್ನು ಸಭೆಗೆ ತಿಳಿಸಿದ ಪ್ರಧಾನಿ, “ಇದು ಶತಮಾನಗಳಿಂದ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿದೆ. ಗಂಗಾ ಮತ್ತು ಸಾರನಾಥಕ್ಕೆ ನೀಡಿರುವ ನಿಮ್ಮ ಭೇಟಿಯು, ನಿಮಗೆ ಅಪೇಕ್ಷಿತ ಫಲಿತಾಂಶಗಳನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದರು.

ಸಿನಿಮಾ

ವರದಿ: ಅರುಣ್ ಜಿ.,

ಈ ಹಿಂದೆ ‘ಡಿಸೆಂಬರ್ 24’ ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ನಾಗರಾಜ್ ಎಂ.ಜಿ.ಗೌಡ ಅವರು ಸದ್ದಿಲ್ಲದೆ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ಚಿತ್ರದ ಹೆಸರು ‘ಕಾನೂನು ಅಸ್ತ್ರ’ ಈ ಚಿತ್ರದ ಮುಹೂರ್ತ ಸಮಾರಂಭ ಸುಂಕದಕಟ್ಟೆಯ ನಿರ್ಮಾಪಕರ ಕಛೇರಿಯಲ್ಲಿ ನಡೆಯಿತು.

ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಅಸ್ತ್ರ ಉಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂದು ಈ ಚಿತ್ರದಲ್ಲಿ ಹೇಳಲಾಗಿದೆ. ಮದ್ಯಮವರ್ಗದ ಜನ ವಾಹನ ಸಾಲ ಪಡೆದುಕೊಂಡು, ಕಂತು ಕಟ್ಟುವುದು ಸ್ವಲ್ಪ ತಡವಾದರೂ ಅವರ ಮೇಲೆ ಸೀಜಿಂಗ್ ನವರು ನಡೆಸುವ ದೌರ್ಜನ್ಯ, ಗೃಹ ಸಾಲ ಪಡೆದವರ ಮೇಲೆ ಬ್ಯಾಂಕ್‌ಗಳು ಬೇಕಾಬಿಟ್ಟಿ ಬಡ್ಡಿ ವಿಧಿಸುವಿಕೆ, ಸಾಲ ಪಡೆಯುವಾಗ ಖಾಲಿ ಚೆಕ್ ನೀಡಿದರೆ ಆಗುವ ಪರಿಣಾಮಗಳು, ಗಂಡ ಹೆಂಡತಿ ನಡುವಿನ ಸಂಸಾರ ಕಲಹಗಳು, ಡೈವೊರ್ಸ್ ಗೆ ಕಾರಣಗಳು, ನಿರಪರಾಧಿಯ ಮೇಲೆ ಕೊಲೆ ಅಪರಾಧ ಬಂದಾಗ ಕಾನೂನು ಅಂತಹವರನ್ನು ಹೇಗೆ ಸಂರಕ್ಷಿಸುತ್ತದೆ ಎಂಬ ಹಲವಾರು ಅಂಶಗಳನ್ನು ಹೇಳುವ ಚಿತ್ರವೇ ಕಾನೂನು ಅಸ್ತ್ರ. ಬಡವ, ಶ್ರೀಮಂತ, ಗಂಡು, ಹೆಣ್ಣು, ಸಾಲದ ಸುಳಿಯಿಂದ ಪಾರಾಗುವುದಕ್ಕೆ ಕಾನೂನು ಅಸ್ತ್ರ ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು  ಪರಿಣಾಮಕಾರಿಯಾಗಿ ಹೇಳುವ ಪ್ರಯತ್ನವಿದು. ಇದೆ 15 ರಿಂದ ಆರಂಭಿಸಿ ಮಡಿಕೇರಿ, ಸಕಲೇಶಪುರ, ಚಿಕ್ಕಮಗಳೂರು ಸುತ್ತಮುತ್ತ  ಚಿತ್ರೀಕರಣ ನಡೆಸಲಾಗುವುದು.

ಪುಟ್ಟೇಗೌಡ ಎನ್. ಪ್ರೊಡಕ್ಷನ್ ಅಡಿಯಲ್ಲಿ ಪುಟ್ಟೇಗೌಡ ಎನ್. ಅವರು ಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುತ್ತಿದ್ದಾರೆ. ನಾಗರಾಜ್ ಎಂ.ಜಿ. ಗೌಡ ನಿರ್ದೇಶನ ಮಾಡುತ್ತಿದ್ದು, ವೆಂಕಿ ಯು.ಡಿ.ವಿ. ಅವರ ಸಂಕಲನ, ವಿನಯ್ ಗೌಡ ಅವರ ಛಾಯಾಗ್ರಹಣ, ಚಿತ್ರದ 5 ಹಾಡುಗಳಿಗೆ ಮಂಜು ಮಹದೇವ್ ಅವರ ಸಂಗೀತ, ಚಂದ್ರು ಬಂಡೆ ಅವರ ಸಾಹಸ, ಬಾಲು ಮಾಸ್ಟರ್ ಅವರ ಕೊರಿಯೋಗ್ರಫಿ ಇದೆ. ಅಲ್ಕದೆ ಪುಟ್ಟೇಗೌಡ. ಎನ್, ಜಗದೀಶ್. ಹೆಚ್.ಜಿ. ದೊಡ್ಡಿ, ಬಾಬು. ಬಿ.ಬಿ.ಆರ್, ಲಕ್ಷ್ಮಿನಾರಾಯಣ್, ಕವಿತ, ಸಾನ್ವಿ ಗೌಡ, ಯೋಗೇಶ್, ಮಂಜುನಾಥ್, ಶೈಲೇಶ್ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ‌.

ರಾಜಕೀಯ

ಪಾಲಕ್ಕಾಡ್: ಭಾರತದ ಶತ್ರು ಚೀನಾ ದೇಶಕ್ಕೆ ಆರ್ಥಿಕ ಅವಕಾಶವನ್ನು ಒದಗಿಸುವುದು ಕೇರಳ ಸರ್ಕಾರದ ನೀತಿಯಾಗಿದೆ. ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬ ಆರೋಪಿಸಿದ್ದಾರೆ.

ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ ಆಡಳಿತ ನಡೆಯುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರದ ಒಂಬತ್ತನೇ ವಾರ್ಷಿಕೋತ್ಸವದ ಅಂಗವಾಗಿ. ನಿನ್ನೆ ಕೇರಳದ ಪಾಲಕ್ಕಾಡ್‌ಗೆ ಬಂದಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬ ಸಭೆಯನ್ನು ಉದ್ದೇಶಿಸಿ ಮಾತನಾಡಿದರು:

“ಕೇರಳ ರಾಜ್ಯ ಸರ್ಕಾರದ ‘ಕೆ-ಪೋನ್’ ಎಂಬ ಹೈಸ್ಪೀಡ್ ಇಂಟರ್ನೆಟ್ ಸೇವಾ ಯೋಜನೆಗಾಗಿ, ಚೀನಾದಿಂದ ಕೇಬಲ್ ಖರೀದಿಸಿದ್ದಾರೆ. ನಮ್ಮ ದೇಶದಲ್ಲಿ ಸಿಗುವುದಕ್ಕಿಂತ ಐದಾರು ಪಟ್ಟು ಹೆಚ್ಚು ಬೆಲೆ ಕೊಟ್ಟು ಅದನ್ನು ಖರೀದಿಸಿದ್ದಾರೆ.

ಸ್ವಾವಲಂಬಿ ಭಾರತದ ಪರಿಕಲ್ಪನೆಯೊಂದಿಗೆ ಪ್ರಧಾನಿ ಮುನ್ನಡೆಯುತ್ತಿರುವಾಗ, ಕೇರಳ ಸರ್ಕಾರ ಚೀನಾ ದೇಶಕ್ಕೆ ಸಹಾಯ ಮಾಡುತ್ತಿದೆ.

ನರೇಂದ್ರ ಮೋದಿ ಸರ್ಕಾರ ಒಂಬತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ, ಭಾರತವು ವಿಶ್ವದ ಅಗ್ರ ಐದು ಆರ್ಥಿಕ ಶಕ್ತಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ” ಎಂದು ಹೇಳಿದರು.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಇದು ದೇಶಕ್ಕೆ ಮಾದರಿ ಮಾತ್ರವಲ್ಲ ಪ್ರಜಾಸತ್ತಾತ್ಮಕ ಕ್ರಾಂತಿಯೂ ಹೌದು. ದುಡಿಯುವ ಮಹಿಳೆಗೆ ಅದರಲ್ಲೂ ಅಸಂಘಟಿತ ಮಹಿಳಾ ಉದ್ಯೋಗಿಗಳಿಗೆ ಸಿಕ್ಕಿದ ಅಂಗೀಕಾರ; ಇದು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಜಯ; ಸರ್ಕಾರ ಮಹಿಳೆಯರಿಗೆ ನೀಡುವ ಗೌರವ; ಸರ್ಕಾರವೇ ನಿಮಗೆ ನನ್ನ ವಂದನೆಗಳು.

ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯೇ ಅತ್ಯಂತ ಮಹತ್ವವಾದದ್ದು. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಘೋಷಣೆ ಮತ್ತು ಅದಕ್ಕೆ ನೀಡಿದ ಚಾಲನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪರ ಹೊಸ ಅಲೆ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ಚಲಾಯಿಸಿದ ಕೋಟ್ಯಾಂತರ ಕಾರ್ಯಕರ್ತರು ಕೂಡ ಶಕ್ತಿ ಯೋಜನೆಯ ಫಲಾನುಭವಿಯಾಗಿ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಸರ್ಕಾರವನ್ನು ಹೊಗಳುವಂತೆ ಆಗಿದೆ.

ಲಕ್ಷಾಂತರ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಈ ಯೋಜನೆ ವರದಾನವಾಗಿ ಪರಿಣಮಿಸಿದೆ. ನಗರ ಪ್ರದೇಶಗಳಲ್ಲಿ ಮನೆ ಕೆಲಸ, ಹೌಸ್ ಕೀಪಿಂಗ್ ಮತ್ತು ಸಣ್ಣಪುಟ್ಟ ಕಾರ್ಖಾನೆಗಳಲ್ಲಿ ದಿನಗೂಲಿ ಕೆಲಸ ಮಾಡುವ ಅದೆಷ್ಟೋ ಮಹಿಳೆಯರು, ಮಾಸಿಕ ಬಸ್ ಪಾಸ್ ಮಾಡಲು ಆಗದ ಪರಿಸ್ಥಿತಿಯನ್ನು ಇಂದಿಗೂ ಎದುರಿಸುತ್ತಿದ್ದಾರೆ. ದಿನನಿತ್ಯದ ಬಸ್ ಪ್ರಯಾಣಕ್ಕೆ ಹಣವಿಲ್ಲದೇ ಒದ್ದಾಡುವ ಮಹಿಳೆಯರನ್ನು ಮತ್ತು ಶಾಲಾ ಮಕ್ಕಳನ್ನು ಸ್ಲಂ ಪ್ರದೇಶಗಳಲ್ಲಿ ಇಂದಿಗೂ ಕಾಣಬಹುದು.

ವಿರೋಧ ಪಕ್ಷದ ಬಿಜೆಪಿ ನಾಯಕರು ‘ಉಚಿತ ಬಸ್ ಪ್ರಯಾಣ ಇರಲಿ; ಮೊದಲು ಬಸ್ ಬಿಡಿ’ ಎಂದು ವ್ಯಂಗ್ಯವಾಡುತ್ತಿದ್ದಾರೆ. ‘ಚಲಾಯಿಸಲು ಬಸ್‌ಗಳೇ ಇಲ್ಲ. ಇದರಲ್ಲಿ ಉಚಿತ ಪ್ರಯಾಣ ಮಾಡುವುದು ಎಲ್ಲಿಂದ’ ಎಂಬುದು ಅವರ ವಾದವಾಗಿದೆ. ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ನೀವು, ಈ ನಾಲ್ಕು ವರ್ಷಗಳಿಂದ ಸಾರಿಗೆ ಇಲಾಖೆಯನ್ನು ಯಾವ ಮಟ್ಟಕ್ಕೆ ಇಳಿಸಿದ್ದಿರಿ ಎಂಬುದಕ್ಕೆ ನೀವೇ ಸಾಕ್ಷಿ.

ಸಾರಿಗೆ ನೌಕರರಿಗೆ ಸರಿಯಾಗಿ ಸಂಬಳ ಕೊಡದೆ; ಸಾರಿಗೆ ನೌಕರರ ಪ್ರತಿಭಟನೆಗಳನ್ನು ಹತ್ತಿಕ್ಕಿ; ಸಾರಿಗೆ ಮಹಿಳಾ ನಿರ್ವಾಹಕರನ್ನು ಬೀದಿಗಿಳಿದು ಹೋರಾಡುವಂತೆ ಮಾಡಿ, ಅವರನ್ನು ಗೋಳಾಡಿಸಿದ ನಿಮ್ಮನ್ನು ಜನ ಯಾಕೆ ತಿರಸ್ಕರಿಸಿದ್ದಾರೆ ಎಂಬುದನ್ನು ಪರಾಮರ್ಶೆ ಮಾಡಿಕೊಂಡು, ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿದರೆ, 2024ರ ಸಂಸತ್ ಚುನಾವಣೆಯಲ್ಲಿ ಅನುಕೂಲವಾಗುತ್ತದೆ.

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಕಳೆದುಕೊಂಡಿದ್ದ ವರ್ಚಸ್ಸನ್ನು ಮರಳಿ ಪಡೆಯುವುದಕ್ಕಾಗಿ ಮತ್ತು 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಬಗ್ಗುಬಡಿಯಲಿಕ್ಕಾಗಿ ಕಾಂಗ್ರೆಸ್ ಸರ್ಕಾರ ಈ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿ ಮಾಡಿಯೇ ತೀರುತ್ತದೆ. ಅದುಮಾತ್ರವಲ್ಲ, ಈ ಯಶಸ್ಸು ಕಾರ್ಯಕ್ರಮಗಳನ್ನು ಈ ವರ್ಷ ಅಂತ್ಯದಲ್ಲಿ ನಡೆಯಲಿರುವ 4 ವಿಧಾನಸಭಾ ಚುನಾವಣೆಗಳಲ್ಲೂ ಕಾರ್ಯರೂಪಕ್ಕೆ ತರಲು ಕಾಂಗ್ರೆಸ್ ಪಕ್ಷ ಮುಂದಾಗಿದೆ.

ಬಿಜೆಪಿ ರಾಷ್ಟ್ರಮಟ್ಟದಲ್ಲಿ ಬದಲಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿದೆ. ರಾಷ್ಟ್ರಮಟ್ಟದ ಬಿಜೆಪಿ ನಾಯಕರಿಗೆ 2024ರ ಚುನಾವಣೆಯಲ್ಲಿ ಪಕ್ಷವನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ತರಬೇಂಬ ಪೀಕಲಾಟ. ತಿಂಗಳು ಕಳೆದರು ಇನ್ನು ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಯಾರು ಎಂಬುದನ್ನು ಹೇಳಲು ಅವರಿಗೆ ಸಾದ್ಯವಾಗುತಿಲ್ಲ. ವರಿಷ್ಟರನ್ನು ಭೇಟಿಯಾಗಿ ಇದರ ಬಗ್ಗೆ ಚರ್ಚಿಸುವ ಧೈರ್ಯವೂ ಇಲ್ಲಿನ ನಾಯಕರಿಗೆ ಇಲ್ಲ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಸದನದಲ್ಲಿ ಎದುರಿಸುವ ಸಮರ್ಥ ನಾಯಕರ ಕೊರತೆಯೂ ಬಿಜೆಪಿಯಲ್ಲಿ ಎದ್ದು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳನ್ನು ವ್ಯಂಗ್ಯ ಮಾಡಿಕೊಂಡು ಓಡಾಡುತ್ತಿದ್ದರೆ, ಕಳೆದ ವಿಧಾನಸಭಾ ಚುನವಣೆಯ ಫಲಿತಾಂಶವೇ 2024ರ ಸಂಸತ್ ಚುನಾವಣೆಯಲ್ಲಿ ಮರುಕಳಿಸುತ್ತದೆ ಎಂಬುದು ಗ್ಯಾರಂಟಿ!

ರಾಜಕೀಯ

ಮೈಸೂರು: ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ಕೃತಜ್ಞತಾ ಸಮರ್ಪಣಾ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ನಾಡಿನ ಜನತೆಗೆ ನಾನು ಕೃತಜ್ಞ.

ಇದು ನನ್ನ ಕೊನೆಯ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ.

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ. ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಎರಚಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ” ಎಂದರು.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮೋದಿ ಆಡಳಿತವನ್ನು ಕಿತ್ತೊಗೆಯಲು ನಿರ್ಧರಿಸಿರುವ ಪಕ್ಷಗಳ ನಾಯಕರು ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಲಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪೂರ್ವ ಪ್ರಯತ್ನದಲ್ಲಿ ನಡೆಯಲಿರುವ ಸಭೆಯಾಗಿರುವುದರಿಂದ ಇದು ರಾಷ್ಟ್ರ ರಾಜಕಾರಣದಲ್ಲಿ ಭಾರೀ ನಿರೀಕ್ಷೆಯನ್ನು ಮೂಡಿಸಿದೆ.

ನಿತೀಶ್ ಕುಮಾರ್ ಅವರೇ ಪಾಟ್ನಾ ಸಭೆಯ ಹೀರೋ. ಏಕೆಂದರೆ ಒಂದಾಗಲು ಸಾದ್ಯವೇ ಇಲ್ಲವೆಂದ ಪಕ್ಷಗಳನ್ನೆಲ್ಲ ಒಟ್ಟುಗೂಡಿಸಿ, ಒಂದೇ ವೇದಿಕೆಗೆ ಕರೆತರುವುದರಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮುಂತಾದವುಗಳನ್ನು ಹೇಳಬಹುದು. ಕಳೆದ ತಿಂಗಳವರೆಗೆ ಕಾಂಗ್ರೆಸ್ ಜೊತೆ ಕೈಜೋಡಿಸುವ ಅವಕಾಶವೇ ಇಲ್ಲವೆಂದು ಹೇಳಿಕೊಂಡಿದ್ದ ಆ ಪರಿಸ್ಥಿತಿ ಈಗ ಸಂಪೂರ್ಣವಾಗಿ ಬದಲಾಗಿದೆ. ಅದಕ್ಕೆ ನಿತೀಶ್‌ಕುಮಾರ್ ಅವರ ಪ್ರಯತ್ನವೇ ಕಾರಣವಾಗಿದೆ.

ಸತತ ಎರಡು ಅವಧಿಗೆ ಅಧಿಕಾರದ ಗದ್ದುಗೆಯಲ್ಲಿ ಕುಳಿತಿರುವ ಬಿಜೆಪಿಯ್ ವಿರುದ್ಧ, ಬಹುತೇಕ ಪಕ್ಷಗಳು ಒಗ್ಗೂಡಿರುವುದು ರಾಷ್ಟ್ರ ರಾಜಕಾರಣದ ಪ್ರಮುಖ ಘಟನೆಯಾಗಿದೆ. ಅದೇ ಸಮಯದಲ್ಲಿ, ಈ ಕಾರ್ಯಕ್ರಮ ದೊಡ್ಡ ಪರಿಣಾಮ ಬೀರಬೇಕಾದರೆ, ಭಾಗವಹಿಸುವ ಪಕ್ಷಗಳ ಪ್ರಮುಖ ನಾಯಕರು ಮಾತ್ರ ಸಭೆಯಲ್ಲಿ ಭಾಗವಹಿಸಬೇಕೆಂಬುದು ಷರತ್ತಾಗಿದೆ. ಆದರೆ ಬಿಜೆಪಿಗೆ ಪರ್ಯಾಯವಾಗಿರುವ ಕಾಂಗ್ರೆಸ್ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈ ಸಭೆಯಲ್ಲಿ ಭಾಗವಹಿಸಲು ಆಸಕ್ತಿ ತೋರಿದರು. ಆದರೆ ಸಭೆಯಲ್ಲಿ ಪಕ್ಷಗಳ ನಾಯಕರು ಮಾತ್ರ ಭಾಗವಹಿಸಬೇಂಬ ನಿತೀಶ್ ಕುಮಾರ್ ಅವರ ಷರತ್ತನ್ನು ಒಪ್ಪಿಕೊಳ್ಳುವ ಮೂಲಕ ಖರ್ಗೆಯವರ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ.

ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಟಿ.ರಾಜಾ, ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಉದ್ಧವ್) ಅಧ್ಯಕ್ಷ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಕ್ತಿ ಮೋಚಾ ಅಧ್ಯಕ್ಷರೂ ಆಗಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರನ್ ಸೇರಿದಂತೆ 16 ರಿಂದ 20 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಕೆಲವು ನಾಯಕರನ್ನು ಹೊರತುಪಡಿಸಿ ಉಳಿದೆಲ್ಲ ವಿರೋಧ ಪಕ್ಷಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನಾಯಕರಾಗಲೀ ಅಥವಾ ಬೇರೆ ಪಕ್ಷಗಳ ಮುಖಂಡರೇ ಆಗಲಿ ಇಂತಹ ಪ್ರಯತ್ನ ನಡೆಸಿದ್ದರೆ, ಇಷ್ಟು ಪಕ್ಷಗಳ ಒಪ್ಪಿಗೆ ಸಿಗುತ್ತಿತ್ತೇನೋ ಎಂಬ ಅನುಮಾನ ಮೂಡುತ್ತಿದೆ. ಹಿರಿಯ ರಾಜಕಾರಣಿ ನಿತೀಶ್ ಕುಮಾರ್ ಅವರು ಎಲ್ಲಾ ಪಕ್ಷಗಳ ನಾಯಕರೊಂದಿಗೆ ನಿಕಟ ಸ್ನೇಹವನ್ನು ಹೊಂದಿರುವುದರಿಂದ ಇದು ಸಾಧ್ಯವಾಗಿದೆ.

ಸಭೆಯ ದಿನಾಂಕವನ್ನು ಮೊದಲು ಜೂನ್ 12 ಎಂದು ಘೋಷಿಸಲಾಗಿತ್ತು. ಆದರೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸಭೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡುವಂತೆ ಮನವಿ ಮಾಡಿದರು. ಜೂನ್ 23 ರಂದು ಸಭೆ ನಡೆಯಲಿದೆ ಎಂದು ನಿತೀಶ್ ಕುಮಾರ್ ಘೋಷಿಸಿದ್ದಾರೆ. ಸಭೆ ನಡೆಯುವ ಸ್ಥಳದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ನಂತರ ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದ ಶಿಮ್ಲಾವನ್ನು ಆಯ್ಕೆ ಮಾಡಬಹುದು ಎಂಬ ವರದಿಯೂ ಪ್ರಕಟವಾಗಿತು.

ಈ ಹಿನ್ನಲೆಯಲ್ಲಿ, ಪಾಟ್ನಾದಲ್ಲಿ ಸಭೆ ನಡೆಯಲಿದೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಖಚಿತಪಡಿಸಿದ್ದಾರೆ. ವಿರೋಧ ಪಕ್ಷಗಳ ಸಭೆಗೆ ಹಲವು ನಾಯಕರ ಹಾಜರಾತಿಯನ್ನು ಖಚಿತಪಡಿಸಿರುವುದಕ್ಕೆ ನಿತೀಶ್ ಕುಮಾರ್ ಅವರ ಪ್ರಯತ್ನಕ್ಕೆ ಇದು ಮೊದಲ ಯಶಸ್ಸು ಎಂದು ಪರಿಗಣಿಸಲಾಗಿದೆ.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಜಾತಿ ವಿವಾದಗಳು ಉದ್ಭವಿಸುವ ಗ್ರಾಮಗಳಲ್ಲಿ ಎರಡೂ ಸಮುದಾಯಗಳ ನಡುವೆ ಸಾಮರಸ್ಯ ಮೂಡಿಸಲು ಸಂತರುಗಳನ್ನು ಒಳಗೊಂಡ ಶಾಂತಿ ಸಮಿತಿಗಳನ್ನು ಸ್ಥಾಪಿಸುವಂತೆ, ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಮಿಳುನಾಡಿನ ‘ಹಿಂದೂ ಮುನ್ನನಿ’ ಸಂಘಟನೆಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡು, ವಿಳುಪುರಂ ಜಿಲ್ಲೆಯ, ಮೇಲ್ಪಾದಿ ಗ್ರಾಮದ ಧರ್ಮರಾಜ ದ್ರೌಪತಿ ಅಮ್ಮನ್ ದೇವಸ್ಥಾನದಲ್ಲಿ, ಪೂಜೆಯ ಹಕ್ಕಿನ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದರಿಂದ ಕಂದಾಯ ಇಲಾಖೆ ಅಧಿಕಾರಿಗಳು ದೇವಸ್ಥಾನಕ್ಕೆ ಬೀಗ ಹಾಕಿ ಹಾಕಿದ್ದಾರೆ. ಈ ವಿವಾದ ಇತ್ಯರ್ಥವಾಗುವ ಮುನ್ನ ಕರೂರು ಜಿಲ್ಲೆ, ಕಡವೂರು ಸಮೀಪದ ವೀರನಂಪಟ್ಟಿ ಗ್ರಾಮದ ಕಾಳಿಯಮ್ಮನ ದೇವಸ್ಥಾನಕ್ಕೂ ಬೀಗ ಹಾಕಲಾಗಿದೆ. ದೇವಾಲಯದ ಪೂಜೆಗೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ಸಂಘರ್ಷವಾಗಿದೆ.

ಮೇಲ್ಪಾದಿ ಗ್ರಾಮದ ಧರ್ಮರಾಜ ದ್ರೌಪತಿ ಅಮ್ಮನ್ ದೇವಸ್ಥಾನ

ದೇವಸ್ಥಾನಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಅವಕಾಶ ನೀಡದಿರುವ ಸಮಸ್ಯೆ ದೇಶಾದ್ಯಂತ ವ್ಯಾಪಕವಾಗಿ ಹರಡಿರುವ ಕಾರಣ, ಪ್ರತಿಯೊಂದು ಹಳ್ಳಿಗಳಲ್ಲಿಯೂ ಎಲ್ಲಾ ಸಮುದಾಯದ ಜನರ ಉಪಯೋಗಕಾಗಿ ‘ಸಾಮಾನ್ಯ ದೇವಾಲಯ, ಸಾಮಾನ್ಯ ಬಾವಿ, ಸಾಮಾನ್ಯ ಸ್ಮಶಾನ’ ಎಂದು ಆರ್‌ಎಸ್‌ಎಸ್ ಘೋಷಿಸಿದೆ. ಅದನ್ನು ಜನರಿಗೆ ಪ್ರಚಾರ ಮಾಡಲು, ತನ್ನ ಸ್ವಯಂಸೇವಕರಿಗೆ ಸಲಹೆಯನ್ನೂ ನೀಡಿದೆ.

ಹಿಂದೂಗಳಾದ ಎಲ್ಲರಿಗೂ ಹಿಂದೂ ದೇವಾಲಯಗಳಲ್ಲಿ ಪೂಜೆ ಮಾಡುವ ಹಕ್ಕಿದೆ. ಅದನ್ನು ಯಾರೂ ಅಲ್ಲಗಳೆಯುವಂತಿಲ್ಲ ಎಂಬುದು ಹಿಂದೂ ಮುನ್ನನಿಯ ನಿಲುವಾಗಿದೆ ಎಂದು ಹೇಳುತ್ತಾರೆ. ಕೆಲವೆಡೆ ಎರಡು ಸಮುದಾಯಗಳ ನಡುವೆ ಸಂಘರ್ಷ ಉಂಟಾದಾಗ, ಸರ್ಕಾರದ ಕ್ರಮವು ಎರಡೂ ಕಡೆ ಸಾಮರಸ್ಯವನ್ನು ತರುವಂತದ್ದಾಗಿರಬೇಕು. ಸಮಸ್ಯೆ ಮುಂದುವರಿಯಲು ಅವಕಾಶ ಮಾಡಿಕೊಡಬಾರದು.

ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ

ಮೇಲ್ಪಾದಿ ಗ್ರಾಮದ ಸಮಸ್ಯೆಯ ಬಗ್ಗೆ ಹಿಂದೂ ಮುನ್ನನಿ ಮುಖಂಡರನ್ನು ವಿಚಾರಿಸಿದ, ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಜಾತಿ ಸಮಸ್ಯೆ ಇರುವ ಗ್ರಾಮಗಳಲ್ಲಿ ‘ಸಂತರ ಶಾಂತಿ ಸಮಿತಿ’ ರಚಿಸಿ, ಎರಡು ಕಡೆಯ ನಡುವೆ ಸಮನ್ವಯ ಕಾರ್ಯದಲ್ಲಿ ತೊಡಗಬೇಕು’ ಎಂದು ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಂತೆ ಶೀಘ್ರದಲ್ಲೇ ಶಾಂತಿ ಸಮಿತಿ ರಚಿಸಲಾಗುವುದು ಎಂದು ಮುಖಂಡರೊಬ್ಬರಿಂದ ತಿಳಿದುಬಂದಿದೆ.

ಸಂತರ ಶಾಂತಿ ಸಮಿತಿಯಿಂದ ಎರಡು ಸಮುದಾಯಗಳ ನಡುವೆ ಸಾಮರಸ್ಯ ಉಂಟಾದರೆ ಒಳ್ಳೆಯದು. ಅದೇ ವೇಳೆಯಲ್ಲಿ ಸಂತರ ಶಾಂತಿ ಸಮಿತಿಯ ಹೆಸರಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆಯದಂತೆ ನೋಡಿಕೊಳ್ಳುವುದು ಕೂಡ ಆರ್‌ಎಸ್‌ಎಸ್ ಸಂಘಟನೆಯ ಕರ್ತವ್ಯವೆಂಬುದನ್ನು ಅದರ ನಾಯಕರು ಮನವರಿಕೆ ಮಾಡಿಕೊಳ್ಳಬೇಕು.

ವೀರನಂಪಟ್ಟಿ ಗ್ರಾಮದ ಕಾಳಿಯಮ್ಮನ ದೇವಸ್ಥಾನ

Dalits denied entry: Tamil Nadu government seals Melpathi’s Dharmaraja Draupadi Amman temple

The Tamil Nadu government on Wednesday, 7 June, sealed the Sri Dharmaraja Draupadi Amman temple in Melpathi village of Villupuram district where caste Hindus continue to deny entry to members of the Scheduled Caste (SC) community.

After several rounds of talks with members of the dominant Vanniyar community of the village and representatives of the SC community failed, revenue officials, on the orders of District Collector Dr C Palani, sealed the temple on Wednesday morning.